ಮಡಿಕೇರಿ ಮಾ.11 NEWS DESK : ಭಾಗಮಂಡಲದ ಜನರ ಹಲವು ವರ್ಷಗಳ ಬೇಡಿಕೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಸ್ಪಂದನೆ ನೀಡಿದ್ದು, ವಿದ್ಯುತ್ ಉಪಕೇಂದ್ರ ಸ್ಥಾಪನೆಗೆ ಟೆಂಡರ್ ಪ್ರಕ್ರಿಯೆ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಭಾಗಮಂಡಲದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಸಂದರ್ಭ ವಿದ್ಯುತ್ ಉಪಕೇಂದ್ರಕ್ಕಾಗಿ ಮೀಸಲಿಟ್ಟಿರುವ ಜಾಗವನ್ನು ಪರಿಶೀಲಿಸಿದರು. ಪದಕಲ್ಲು ಗ್ರಾಮದಲ್ಲಿ 3 ಎಕರೆ ಪ್ರದೇಶದಲ್ಲಿ 66/11 ಕೆ.ವಿ ವಿದ್ಯುತ್ ಉಪಕೇಂದ್ರ ಸ್ಥಾಪನೆಯಾಗಲಿದ್ದು, ಸ್ಥಳ ಪರಿಶೀಲಿಸಿದ ಶಾಸಕರು, ಟೆಂಡರ್ ಪ್ರಕ್ರಿಯೆಗೆ ಸೂಚನೆ ನೀಡಿದರು. ಈ ಸಂದರ್ಭ ಶಾಸಕರ ಆಪ್ತ ಸಹಾಯಕರಾದ ನಿವೃತ್ತ ಅಧಿಕಾರಿ ಮುತ್ತಣ್ಣ ಹಾಗೂ ಕುಂದಚೇರಿ ಗ್ರಾ.ಪಂ ಸದಸ್ಯ ಕೆ.ಯು.ಹಾರಿಸ್ ಪದಕಲ್ಲು ಅವರು ಯೋಜನೆ ಕುರಿತು ಮಾಹಿತಿ ನೀಡಿದರು. ಸ್ವಿಚಿಂಗ್ ಸ್ಟೇಷನ್ ಸ್ಥಾಪನೆ ಮತ್ತು ಮುಖ್ಯ ವಿದ್ಯುತ್ ಮಾರ್ಗ ಕಾಮಗಾರಿ ಆಗುವಲ್ಲಿಯವರೆಗೆ ಸೋಲಾರ್ ಘಟಕ ನಿರ್ಮಾಣಗೊಳ್ಳಲಿದೆ. ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸುತ್ತಿರುವ ಬಗ್ಗೆ ಗ್ರಾಮಸ್ಥರು ಶಾಸಕ ಪೊನ್ನಣ್ಣ ಅವರಿಗೆ…
ಲೇಖಕ: admin
ಕಡಂಗ ಮಾ.11 NEWS DESK : ಕಡಂಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಂಗಳೂರಿನ ಸೌಜನ್ಯ ಬಳಗದಿಂದ ಶಿಕ್ಷಣಕ್ಕೆ ಪೂರವಾದ ಕೊಡುಗೆ ನೀಡಲಾಯಿತು. ಸೌಜನ್ಯ ಟ್ರಸ್ಟ್ ನ ಅಧ್ಯಕ್ಷ ರಂಗರಾಜ್ ಮಾತನಾಡಿ ಸರ್ಕಾರಿ ಶಾಲೆಗಳಲ್ಲಿ ಸಿಗುತ್ತಿರುವ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಸಲಹೆ ನೀಡಿದರು. ನರಿಯಂದಡ ಗ್ರಾ.ಪಂ ಸದಸ್ಯ ಸುಬೀರ್ ಮಾತನಾಡಿ, ಶಾಲಾ ಅಭಿವೃದ್ಧಿ ಕಾರ್ಯದಲ್ಲಿ ಸಹಕರಿಸುತ್ತಿರುವ ಸೌಜನ್ಯ ಟ್ರಸ್ಟ್ ನ ಸದಸ್ಯರಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಸ್ಥಳೀಯ ದಾನಿಗಳಾದ ಉಡಿಯಂಡ ಡಿ.ಚೆಂಗಪ್ಪ ಮಾತನಾಡಿ, ವಿದ್ಯಾರ್ಥಿಗಳು ಸರ್ಕಾರಿ ಶಾಲೆಯಲ್ಲಿರುವ ಉತ್ತಮ ಸೌಲಭ್ಯವನ್ನು ಪಡೆದುಕೊಳ್ಳಿ ಎಂದರು. ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಫಾತಿಮಾ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು, ಪೋಷಕರು, ಶಾಲಾ ಶಿಕ್ಷಕರು, ಎಸ್ ಡಿ ಎಂ ಸಿ ಸದಸ್ಯರು ಹಾಜರಿದ್ದರು. ಕಾರ್ಯಕ್ರಮವನ್ನು ಕೆ.ಎಂ.ವಿಮಲಾ ನಿರೂಪಿಸಿದರು. ಶಾಲಾ ಮುಖ್ಯಶಿಕ್ಷಕರು ಪಿ.ಎಂ.ಶಾಂತಿಕುಮಾರಿ ಸ್ವಾಗತಿಸಿದರು. ಶಾಲೆಗೆ ನೀಡಿದ ಕೊಡುಗೆಗಳಬಗ್ಗೆ ಬಬಿತವಿವರಿಸಿದರು. ವತ್ಸಲಾ ವಂದಿಸಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವರದಿ : ನೌಫಲ್ ಕಡಂಗ
ಮಡಿಕೇರಿ ಮಾ.11 NEWS DESK : ಮಂಗಳೂರಿನಲ್ಲಿ ನಡೆದ ವಿಶ್ವ ಹಿಂದೂ ಪರಿಷದ್ ಪ್ರಾಂತ ಬೈಠಕ್ನಲ್ಲಿ ವಿಶ್ವ ಹಿಂದೂ ಪರಿಷದ್, ಭಜರಂಗ ದಳ, ಮಾತೃಶಕ್ತಿ ಮತ್ತು ದುರ್ಗಾವಾಹಿನಿಯ ಕೊಡಗು ಜಿಲ್ಲಾ ಘಟಕಗಳಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಕಾರ್ಯಾಧ್ಯಕ್ಷರಾಗಿ ಎಸ್.ಸುರೇಶ್, ಜಿಲ್ಲಾ ಕಾರ್ಯದರ್ಶಿಯಾಗಿ ರಮೇಶ್ ಪುದಿಯೊಕ್ಕಡ, ಕೋಶಾಧ್ಯಕ್ಷರಾಗಿ ಸಂಪತ್ ಕುಮಾರ್, ಉಪಾಧ್ಯಕ್ಷರಾಗಿ ಪರಮೇಶ್ ಕೂತಿ, ಡಿ.ನರಸಿಂಹ ಸುಂಟಿಕೊಪ್ಪ, ಸಹ ಕಾರ್ಯದರ್ಶಿಗಳಾಗಿ ಡಿ.ಸಂತೋಷ್ ಕುಶಾಲನಗರ, ಯತೀಶ್ ವಿರಾಜಪೇಟೆ, ವಕೀಲರಾದ ಹೇಮಚಂದ್ರ ಸೋಮವಾರಪೇಟೆ ಆಯ್ಕೆಯಾಗಿದ್ದಾರೆ. ಮಾತೃಶಕ್ತಿ ಜಿಲ್ಲಾ ಪ್ರಮುಖ್ ಆಗಿ ಉಮಾವತಿ, ಸಹ ಪ್ರಮುಖ್ ಆಗಿ ಪೂರ್ಣಿಮಾ ಸುರೇಶ್, ಭಜರಂಗದಳದ ಜಿಲ್ಲಾ ಸಂಯೋಜಕರಾಗಿ ಪ್ರವೀಣ್ ಸಿದ್ದಾಪುರ, ಸಹ ಸಂಯೋಜಕರಾಗಿ ಕವನ್ ಕಾರ್ಯಪ್ಪ ಗೋಣಿಕೊಪ್ಪ, ನವೀನ್ ಪೂಜಾರಿ ಮಡಿಕೇರಿ ಹಾಗೂ ಸಜಿ ಭರತ್ ಸೋಮವಾರಪೇಟೆ ನೇಮಕಗೊಂಡಿದ್ದಾರೆ. ಜಿಲ್ಲಾ ದುರ್ಗಾ ವಾಹಿನಿಯ ಸಂಯೋಜಕರಾಗಿ ಪಾರುವಂಗಡ ರಿಷ್ತ ಚಂಗಪ್ಪ ಗೋಣಿಕೊಪ್ಪ ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳಿಗೆ ಬೈಠಕ್ನಲ್ಲಿ ಜವಾಬ್ದಾರಿ ನೀಡಲಾಯಿತು.
ಮಡಿಕೇರಿ ಮಾ.11 NEWS DESK: ಕೊಡಗು ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿ ಎಂ.ಖಲೀಲ್ ಹಾಗೂ ಬಿ.ಹೆಚ್.ಮುಸ್ತಫ ತಿತಿಮತಿ ಆಯ್ಕೆಯಾಗಿದ್ದಾರೆ. ಇಂದು ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯ ದೃಷ್ಟಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರ ಅನುಮೋದನೆ ಮೇರೆಗೆ ಇವರಿಬ್ಬರನ್ನು ಪ್ರಧಾನ ಕಾರ್ಯದರ್ಶಿಗಳನ್ನಾಗಿ ಆಯ್ಕೆ ಮಾಡಿರುವುದಾಗಿ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಆರ್.ಜೋಸ್ ಮಟ್ಟಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಮಾ.11 NEWS DESK : ಅಭಿವೃದ್ಧಿ ಕಾರ್ಯಗಳ ಮೂಲಕ ವಿರಾಜಪೇಟೆ ವಿಧಾನಸಭಾ ಕ್ಷೇತ್ರವನ್ನು ಮುಂದಿನ 4 ವರ್ಷಗಳಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಮಾದರಿ ಕ್ಷೇತ್ರವನ್ನಾಗಿಸಲು ಸಂಕಲ್ಪ ತೊಟ್ಟಿದ್ದೇನೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ. ಕ್ಷೇತ್ರದ ನಾಪೋಕ್ಲು ಬ್ಲಾಕ್ ವ್ಯಾಪ್ತಿಯ ಪಾರಾಣೆ, ಬೆಟ್ಟಗೇರಿ, ಬೇಂಗೂರು ಚೇರಂಬಾಣೆ, ಚೆಟ್ಟಿಮಾನಿ ಕುಂದಚೇರಿ, ಭಾಗಮಂಡಲ, ಅಯ್ಯಂಗೇರಿ, ಎಮ್ಮೆಮಾಡ್ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಲ್ಲಿ ಒಟ್ಟು 9 ಕೋಟಿ 26 ಲಕ್ಷ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ದೊಡ್ಡ ದೊಡ್ಡ ಫ್ಲೈ ಓವರ್ ಅಥವಾ ದೊಡ್ಡ ಸೇತುವೆ ನಿರ್ಮಿಸಿದರೆ ಅದು ಮಾತ್ರ ಅಭಿವೃದ್ದಿ ಎಂದೆನಿಸುವುದಿಲ್ಲ. ಗ್ರಾಮೀಣ ಭಾಗದ ಜನರ ಮೂಲಭೂತ ಸೌಕರ್ಯಗಳನ್ನು ಸರಿಪಡಿಸಿದರೆ ಅದು ಕ್ಷೇತ್ರದ ಸಂಪೂರ್ಣ ಅಭಿವೃದ್ಧಿ ಎಂದು ಪರಿಗಣಿಸಲಾಗುತ್ತದೆ ಎಂದು ತಿಳಿಸಿದರು. ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮಾತನಾಡಿ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್…
ವಿರಾಜಪೇಟೆ ಮಾ.11 NEWS DESK : ಶಿವರಾತ್ರಿ ಹಬ್ಬದ ಪ್ರಯುಕ್ತ ಕನ್ನಡ ಸಿರಿ ಸ್ನೇಹ ಬಳಗ ಹಾಗೂ ಕುಶಾಲನಗರದ ತೊರೆನೂರು ಶನೀಶ್ವರ ದೇವಾಲಯದ ವತಿಯಿಂದ ಆಯೋಜಿಸಿದ್ದ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ವಿರಾಜಪೇಟೆಯ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ.
ನಾಪೋಕ್ಲು ಮಾ.11 NEWS DESK : 2022-23ನೇ ಸಾಲಿನಲ್ಲಿ ಕೈಗೊಂಡ ಸಾಕ್ಷರತಾ ಕಾರ್ಯಕ್ರಮದಡಿಯಲ್ಲಿ ಪರೀಕ್ಷೆ ಬರೆದ ಸಾಕ್ಷರರು ಎಂದು ಗುರುತಿಸಲಾದ ಮಡಿಕೇರಿ ತಾಲ್ಲೂಕು ಮಟ್ಟದ ನವ ಸಾಕ್ಷರರಿಗೆ ಸಾಕ್ಷರತಾ ಪ್ರಮಾಣ ಪತ್ರ ವಿತರಿಸಲಾಯಿತು. ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾ.ಪಂ ಅಧ್ಯಕ್ಷೆ ವನಜಾಕ್ಷಿ ನವಸಾಕ್ಷರರಿಗೆ ಪ್ರಮಾಣ ಪತ್ರ ನೀಡಿ ಗೌರವಿಸಿದರು. ಕಾರ್ಯಕ್ರಮದ ನೋಡಲ್ ಅಧಿಕಾರಿ ಬಿಆರ್ ಪಿ ಮಂಜುಳಾ ಚಿತ್ರಾಪುರ, ಶಾಲೆಯ ಮುಖ್ಯ ಶಿಕ್ಷಕಿ ಚಂದ್ರಕಲಾ, ಮೇಕೇರಿ ಕ್ಲಸ್ಟರ್ ನ ಸಿಆರ್ ಪಿ ಕಲ್ಪನಾ, ಆಶಾಕಾರ್ಯಕರ್ತೆಯರು, ಭೋಧಕರು ಹಾಜರಿದ್ದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಮಾ.11 NEWS DESK : ಹೊದ್ದೂರು ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಭಗವತಿ ದೇವಾಲಯದಲ್ಲಿ ಬ್ರಹ್ಮ ಕಳಶೋತ್ಸವದ ಅಂಗವಾಗಿ ಶ್ರದ್ಧಾಭಕ್ತಿಯಿಂದ ನಾಗಪ್ರತಿಷ್ಠೆ ಜರುಗಿತು. ಸುಮಾರು 1.5 ಕೋಟಿ ರೂ ವೆಚ್ಚದಲ್ಲಿ ದೇವಾಲಯ ಪುನರ್ ನಿರ್ಮಾಣಗೊಂಡಿದ್ದು, ಮಾ7.ರಂದು ಕುತ್ತಿ ಪೂಜೆಯೊಂದಿಗೆ ಕಳಶೋತ್ಸವ ಆರಂಭಗೊಂಡಿತು.ಮಾ.8 ರಂದು ತಂತ್ರಿಯವರು ಆಗಮಿಸಿ, ವಾಸ್ತು ಕಳಶ ಪೂಜೆ, ವಾಸ್ತು ಬಲಿ ನೆರವೇರಿಸಿದರು. ಅಂಕುರ ಆರೋಹಣ, ವಿಗ್ರಹ ಪರಿಗ್ರಹ ದೀಪಾ ಆರಾಧನೆ ನಡೆಯಿತು. ಬ್ರಹ್ಮ ಶ್ರೀ ಕೆ.ಯು ಪದ್ಮನಾಭ ತಂತ್ರಿಗಳ ಹಾಗೂ ದೇವಸ್ಥಾನದ ತಕ್ಕ ಮುಖ್ಯಸ್ಥರು, ಆಡಳಿತ ಮಂಡಳಿ , ಭಕ್ತರ ಸಮ್ಮುಖದಲ್ಲಿ ನಾಗಪ್ರತಿಷ್ಠೆ ಜರುಗಿತು. ಸಂಜೆ ದೀಪಾರಾಧನೆ, ಅಂಕುರ ಪೂಜೆ, ತ್ರಿಕಾಲ ಪೂಜೆ ನಡೆಯಿತು. ಇಂದು ಮುಂಜಾನೆ ಗಣಪತಿ ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು. ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಚೌರಿರ ಕೆ.ಮೇದಪ್ಪ, ದೇವತಕ್ಕ ನೆರವಂಡ ಸಂಜಯ್ ಪೂಣಚ್ಚ, ಸಮಿತಿ ಸದಸ್ಯ ನಿವೃತ್ತ ಶಿಕ್ಷಕ ಚೌರಿರ ಉದಯ ಸೇರಿದ0ತೆ ಸಮಿತಿಯ ನಿರ್ದೇಶಕ ಸದಸ್ಯರು, ಊರಿನ ಭಕ್ತರು…
ಮಡಿಕೇರಿ ಮಾ.11 NEWS DESK : ಮತ್ತಿಗೋಡು ಆನೆ ಶಿಬಿರವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿ, ಶುಭ ಕೋರಿದರು.
ಮಡಿಕೇರಿ ಮಾ.11 NEWS DESK : ಮೈಸೂರು- ಬೆಂಗಳೂರು ಎಕ್ಸ್ ಪ್ರೆಸ್ ಹೈವೆಯಲ್ಲಿ 1200 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಫುಡ್ ಪಾರ್ಕ್, ಸ್ಕೈ ವಾಕ್ ಹಾಗೂ ಮೈಸೂರು – ನಂಜನಗೂಡು ನಡುವಿನ ಹೆದ್ದಾರಿಯ 6 ಪಥ ಮೇಲ್ದರ್ಜೆ ಕಾಮಗಾರಿಗೆ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರು ಶಂಕುಸ್ಥಾಪನೆ ನೆರವೇರಿಸಿ ಮೈಸೂರು- ಹುಣಸೂರು ರಸ್ತೆ, ತಿ. ನರಸೀಪುರ ರಸ್ತೆಯನ್ನು ಉದ್ಘಾಟಿಸಿದರು. ಮೈಸೂರಿನ ‘ರಾಯಲ್ ಇನ್’ ಹೋಟೆಲ್ ಬಳಿ ಕೆಆರ್ ಎಸ್ ರಸ್ತೆ ಮತ್ತು ರಸ್ತೆ ಹಳಿ ದಾಟಲು ಫ್ಲೈ ಓವರ್ ನಿರ್ಮಾಣಕ್ಕೆ LC-5 ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ರೂ 62.30 ಕೋಟಿ ಬಿಡುಗಡೆ. ಮೈಸೂರು ವಿವಿ ಕ್ರಾಫರ್ಡ್ ಬಳಿ ರೈಲ್ವೆ ಅಂಡರ್ ಪಾಸ್ ನಿರ್ಮಾಣಕ್ಕೆ ಐಅ-1 ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ರೂ.45.35 ಕೋಟಿ ಬಿಡುಗಡೆ. ಹುಣಸೂರು ಬೈಪಾಸ್ ಅನ್ನು 4 ಲೇನ್ ಮಾಡಲು ಹಾಗೂ ಲಕ್ಷ್ಮಣತೀರ್ಥ ನದಿಗೆ ಕಟ್ಟಲಾಗಿರುವ ಸೇತುವೆ ಶಿಥಿಲಗೊಂಡಿರುವುದರಿಂದ ಹೊಸ ಸೇತುವೆ ನಿರ್ಮಾಣ ಮಾಡಲು ರೂ 86…






