ಮಡಿಕೇರಿ ಮಾ.10 NEWS DESK : ಕೆದಕಲ್ ನ ಶ್ರೀ ಭದ್ರಕಾಳೇಶ್ವರಿ ದೇವಾಲಯದ ವಾರ್ಷಿಕೋತ್ಸವ ಮಾ.12 ರಂದು ನಡೆಯಲಿದೆ. ಅಂದು ಬೆಳಗ್ಗೆ 10 ಗಂಟೆಗೆ ಗಣಪತಿ ಹೋಮ, 11 ಗಂಟೆಗೆ ಕುಂಭಾಭಿಷೇಕ, ಕಳಶ ಪೂಜೆ, ಮಧ್ಯಾಹ್ನ 12 ಗಂಟೆಗೆ ಮಹಾ ಮಂಗಳಾರತಿ, ಪ್ರಸಾದ ವಿತರಣೆ ಹಾಗೂ 1 ಗಂಟೆಯಿಂದ ಅನ್ನ ಸಂತರ್ಪಣೆಯಾಗಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ವಾರ್ಷಿಕೋತ್ಸವದಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿ ಮನವಿ ಮಾಡಿದೆ.
ಲೇಖಕ: admin
ಮಡಿಕೇರಿ ಮಾ.10 NEWS DESK : ಜೂನಿಯರ್ ಛೇಂಬರ್ ಆಫ್ ಇಂಟರ್ ನ್ಯಾಷನಲ್ ( ಜೆಸಿಐ ), ಇಂಡಿಯಾದ ಸುಂಟಿಕೊಪ್ಪ ಜೆಸಿಐ ವತಿಯಿಂದ ಸೋಮವಾರಪೇಟೆ ಪೊಲೀಸ್ ಉಪ ವಿಭಾಗದ ಸಹಕಾರದೊಂದಿಗೆ ಭಾನುವಾರ ಉತ್ತರ ಕೊಡಗಿನ ಕೂಡಿಗೆಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಪೊಲೀಸ್ ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಮತ್ತು ಸಮಯ ಪಾಲನೆ ಕುರಿತು ತರಬೇತಿ ಕಾರ್ಯಾಗಾರ ಏರ್ಪಡಿಸಲಾಗಿತ್ತು. ತರಬೇತಿ ಕಾರ್ಯಾಗಾರ ಉದ್ಘಾಟಿಸಿದ ಸೋಮವಾರಪೇಟೆ ಪೊಲೀಸ್ ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕ ( ಡಿವೈಎಸ್ಪಿ) ಆರ್.ವಿ.ಗಂಗಾಧರಪ್ಪ ಮಾತನಾಡಿ, ಸಮಾಜದಲ್ಲಿ ಪೊಲೀಸರು ಕಾನೂನು ಪರಿಪಾಲನೆ ಮಾಡುವ ಮೂಲಕ ಸಮಾಜದಲ್ಲಿ ಶಾಂತಿ, ನೆಮ್ಮದಿ ಕಾಪಾಡಿ ಇಲಾಖೆಯ ಕೀರ್ತಿಯನ್ನು ಹೆಚ್ಚಿಸಬೇಕು ಎಂದರು. ಪ್ರತಿನಿತ್ಯ ಸಾಕಷ್ಟು ಒತ್ತಡ ಹಾಗೂ ಮನಸ್ಸಿನ ದುಗುಡಗಳಲ್ಲಿ ಕಾರ್ಯನಿರ್ವಹಿಸುವ ಪೊಲೀಸ್ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಒತ್ತಡ ನಿರ್ವಹಣೆ ಮೂಲಕ ಒತ್ತಡದಿಂದ ಹೊರಬಂದು ಮನಸ್ಸಿಗೆ ನೆಮ್ಮದಿ ಪಡೆಯುವ ಮೂಲಕ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಬೇಕು ಎಂದರು. ಸದಾ ಜಂಜಾಟ ಮತ್ತು ಒತ್ತಡದ ನಡುವೆ ಕೆಲಸ…
ಮಡಿಕೇರಿ ಮಾ.10 NEWS DESK : ಇಂದಿನ ಮಕ್ಕಳಿಗೆ ವಚನಗಳನ್ನು ಕಡ್ಡಾಯವಾಗಿ ಕಲಿಸುವ ಮೂಲಕ ಉತ್ತಮ ವ್ಯಕ್ತಿಗಳಾಗಿ ರೂಪಿಸಲು ತಾಯಂದಿರ ಪಾತ್ರ ಬಹು ಮುಖ್ಯ ಎಂದು ಹೆಬ್ಬಾಲೆ ಪ್ರೌಢ ಶಾಲೆ ಕನ್ನಡ ಉಪನ್ಯಾಸಕರೂ ಆದ ಸಾಹಿತಿ ಮೆ.ನಾ.ವೆಂಕಟನಾಯಕ್ ಕರೆ ಕೊಟ್ಟರು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಗಿರಗೂರಿನ ಗಿರಿಜೇಶ್ವರ ದೇವಾಲಯದ ಆವರಣದಲ್ಲಿ ಸುತ್ತೂರು ವೀರಸಿಂಹಾಸನ ಮಹಾ ಸಂಸ್ಥಾನದಿಂದ ಕೊಡ ಮಾಡಿದ “ಶರಣ ಸಾಹಿತ್ಯ ಪ್ರಸಾರ ” ದತ್ತಿ ಕಾರ್ಯಕ್ರಮದಲ್ಲಿ ಪ್ರವಚನ ನೀಡಿದ ಅವರು, ಎಳೆಯ ಮಕ್ಕಳಿಗೆ ತಾಯಂದಿರು ಹಾಲುಣಿಸುವಾಗಲೇ ವಚನಗಳ ಅರಿವನ್ನು ಮೂಡಿಸುವ ಮೂಲಕ ವಚನಗಳು ನಿತ್ಯದ ಬದುಕಿನ ಪ್ರಾರ್ಥನಾ ಗೀತೆಗಳಾಗಿಸಿದಲ್ಲಿ ಹನ್ನೆರಡನೇ ಶತಮಾನದ ಕಲ್ಯಾಣ ರಾಜ್ಯವನ್ನು ಕಾಣಲು ಸಾಧ್ಯವಾಗುತ್ತದೆ. ಮಹಿಳೆಯರು, ಮಕ್ಕಳು ಹಾಗೂ ಇಂದಿನ ತರುಣರು ಮೊಬೈಲ್ ಹಾಗೂ ಟಿವಿ ಸೀರಿಯಲ್ ವ್ಯಾಮೋಹ ಬಿಟ್ಟು ವಚನ ಸಾಹಿತ್ಯವನ್ನು ಓದುವುದನ್ನು ರೂಢಿಸಿಕೊಳ್ಳಲು ವೆಂಕಟನಾಯಕ್ ಕರೆಕೊಟ್ಟರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಅಖಿಲ ಭಾರತ ವೀರಶೈವ ಮಹಾಸಭಾದ ಕೊಡಗು ಜಿಲ್ಲಾ ಅಧ್ಯಕ್ಷ ಹೆಚ್.ವಿ.ಶಿವಪ್ಪ ಮಾತನಾಡಿ,…
ಮಡಿಕೇರಿ ಮಾ.9 NEWS DESK : ತಾಯಿ ಚಾಮುಂಡಿ ನನ್ನ ಕೈಬಿಡಲ್ಲ, ಕೊಡಗು ಮತ್ತು ಮೈಸೂರು ಜನರ ಆಶೀರ್ವಾದ ನನ್ನ ಮೇಲಿದೆ. ಅಭಿವೃದ್ಧಿ ಕಾರ್ಯದಲ್ಲಿ ನನ್ನ ಮ್ಯಾಚ್ ಮಾಡೋಕೆ ಯಾರಿಗೂ ಸಾಧ್ಯವಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ಈ ಬಾರಿ ಕೊಡಗು- ಮೈಸೂರು ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಸಿಗಲ್ಲ ಎನ್ನುವ ಊಹಾಪೋಹಗಳ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ ಸ್ಪಷ್ಟೀಕರಣ ನೀಡಿದ ಅವರು, ಒಬ್ಬ ಸಂಸದನ ಭವಿಷ್ಯ ನಿರ್ಧಾರ ಮಾಡೋರು ಜನ, ಜನ ಸಂತೋಷವಾಗಿದ್ದಾರೆ, ಆಶೀರ್ವಾದ ಮಾಡ್ತಾರೆ ಅಂದ್ರೆ, ಮೇಲಿನ ನಾಯಕರುಗಳು ಕೂಡ ನನಗೆ ಆಶೀರ್ವಾದ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಒಬ್ಬ ಸಂಸದನಾಗಿ ನಾನು ಯಾವ ಅಭಿವೃದ್ಧಿ ಕಾರ್ಯ ಮಾಡಿಲ್ಲ ಹೇಳಿಬಿಡಿ, ಅಭಿವೃದ್ಧಿ ಮತ್ತು ಹಿಂದುತ್ವದ ವಿಚಾರದಲ್ಲಿ ನನಗೆ ಮ್ಯಾಚ್ ಮಾಡೋರು ಯಾರಿದ್ದಾರೆ ಎಂದು ಪ್ರಶ್ನಿಸಿದರು. ನನ್ನ ಕ್ಷೇತ್ರಕ್ಕೆ 11 ರೈಲು ತಂದಿದ್ದೇನೆ, ಸಧ್ಯದಲ್ಲೇ 12 ನೇ ರೈಲು ತರುತ್ತಿದ್ದೇನೆ, ಮೈಸೂರಿಗೆ ರಿಂಗ್ ರೋಡ್ ತರಲಿದ್ದೇನೆ, ಮೆಟ್ರೋ ರೈಲು ನನ್ನ ಮುಂದಿನ…
ಮಡಿಕೇರಿ ಮಾ.9 NEWS DESK : ಜಿಂಕೆ ಡಿಕ್ಕಿಯಾದ ಪರಿಣಾಮ ಆಟೋರಿಕ್ಷಾ ಪಲ್ಟಿಯಾಗಿ 8 ತಿಂಗಳ ಮಗು ಮೃತಪಟ್ಟ ಘಟನೆ ಶ್ರೀಮಂಗಲ ಬೀರುಗ ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದ ಕೆಲಸಕ್ಕಾಗಿ ಜಾರ್ಖಂಡ್ ಮೂಲದ ಕೂಲಿ ಕಾರ್ಮಿಕರು ಶ್ರೀಮಂಗಲಕ್ಕೆ ಬಂದು ಅಲ್ಲಿಂದ ಆಟೋರಿಕ್ಷಾದಲ್ಲಿ ಬೀರುಗ ಗ್ರಾಮಕ್ಕೆ ತೆರಳುತ್ತಿದ್ದರು. ಮಾರ್ಗ ಮಧ್ಯೆ ಏಕಾಏಕಿ ಜಿಂಕೆಯೊಂದು ಅಡ್ಡ ಬಂದು ಆಟೋರಿಕ್ಷಾಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಆಟೋ ಪಲ್ಟಿಯಾಗಿದ್ದು, ತಾಯಿಯ ಮಡಿಲಿನಲ್ಲಿದ್ದ 8 ತಿಂಗಳ ಅನುರಾಗ್ ರಾಜ್ ಎಂಬ ಪುಟ್ಟ ಮಗು ರಿಕ್ಷಾದಡಿ ಸಿಲುಕಿ ಪ್ರಾಣ ಬಿಟ್ಟಿದೆ. ಈ ಘಟನೆ ಕುರಿತು ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಜಿಂಕೆ ಡಿಕ್ಕಿಯಾಗಿ ಆಟೋ ಮಗುಚಿ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಮಂಗಲ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಅರಣ್ಯ ಇಲಾಖೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಆಟೋ ಮಗುಚಿ ಬಿದ್ದು ಮಗು ಸಾವನ್ನಪ್ಪಲು ಜಿಂಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಮಗುವನ್ನು ಕಳೆದುಕೊಂಡ ಬಡ ಕೂಲಿ…
ಮಡಿಕೇರಿ ಮಾ.9 NEWS DESK : ಕಾಡಾನೆಗಳ ಹಿಂಡಿನಿಂದ ಬೇರ್ಪಟ್ಟ ಆನೆಯೊಂದು ಬೆಳ್ಳಂಬೆಳಗ್ಗೆ ಮಂಜು ಮುಸುಕಿದ ವಾತಾವರಣದಲ್ಲಿ ನಡುರಸ್ತೆಯಲ್ಲಿ ಸಂಚರಿಸುವ ಮೂಲಕ ಜನರಲ್ಲಿ ಆತಂಕವನ್ನು ಮೂಡಿಸಿದ ಘಟನೆ ಪೊನ್ನಂಪೇಟೆಯಲ್ಲಿ ನಡೆದಿದೆ. ಶನಿವಾರ ಬೆಳಗ್ಗೆ ಸುಮಾರು 7 ಗಂಟೆ ಸಮಯದಲ್ಲಿ ಮಂಜು ಮುಸುಕಿದ ವಾತಾವರಣದಲ್ಲಿ ಗದ್ದೆಯೊಂದರ ಮೂಲಕ ಕಾಡಾನೆ ಪಟ್ಟಣ ಪ್ರವೇಶ ಮಾಡಿತು. ಪೊನ್ನಂಪೇಟೆ ನ್ಯಾಯಾಲಯದ ಸಮೀಪ ಪ್ರತ್ಯಕ್ಷವಾದ ಗಜರಾಜ ರಾಜಾರೋಷವಾಗಿ ರಸ್ತೆಯಲ್ಲಿ ಹೆಜ್ಜೆ ಹಾಕಿತು. ಆಗಷ್ಟೇ ಅಂಗಡಿಗಳನ್ನು ತೆರೆಯುತ್ತಿದ್ದ ವರ್ತಕರು, ರಸ್ತೆಯಲ್ಲಿ ಬರುತ್ತಿದ್ದ ವಾಹನ ಚಾಲಕರು ಹಾಗೂ ಸ್ಥಳೀಯರು ರಸ್ತೆಯಲ್ಲಿ ಪ್ರತ್ಯಕ್ಷವಾದ ಕಾಡಾನೆಯನ್ನು ಕಂಡು ಆತಂಕಗೊಂಡರು, ಕೆಲವರು ಸ್ಥಳದಿಂದ ಕಾಲ್ಕಿತ್ತರು. ಆದರೆ ಇದ್ಯಾವುದನ್ನೂ ಗಣನೆಗೆ ತೆಗೆದುಕೊಳ್ಳದ ಆನೆ ತನ್ನಿಷ್ಟದಂತೆ ರಸ್ತೆಯಲ್ಲಿ ಹೆಜ್ಜೆ ಹಾಕುತ್ತಾ ಕುಂದಾ ರಸ್ತೆ ಮಾರ್ಗವಾಗಿ ಮುತ್ತಪ್ಪ ದೇವಸ್ಥಾನದ ಹಿಂಬದಿಯ ತೋಟಕ್ಕಾಗಿ ತೆರಳಿತು. ನಂತರ ಬೆಂಕಿ ರೋಗ ಪರೀಕ್ಷಾ ಕೇಂದ್ರದ ಗದ್ದೆಗಾಗಿ ತೆರಳಿ, ಪೊನ್ನಂಪೇಟೆ-ಕುಟ್ಟ ಮುಖ್ಯ ರಸ್ತೆಯಿಂದ ಕೆಲವರ ಮನೆಯ ಅಂಗಳದವರೆಗೂ ರಾಜಾರೋಷವಾಗಿ ಸಂಚರಿಸುವ ಮೂಲಕ ಆತಂಕ ಸೃಷ್ಟಿಸಿತು. ಕಾಡಾನೆ…
ಪುತ್ತೂರು ಮಾ.9 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ನಾಲ್ವರು ವಿದ್ಯಾರ್ಥಿನಿಯರು ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಮಹಿಳೆಯರ ಕ್ರಾಸ್ ಕಂಟ್ರಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ತೃತೀಯ ವರ್ಷದ ಇಲೆಕ್ಟ್ರಾನಿಕ್ಸ್ ವಿಭಾಗದ ವಿದ್ಯಾ.ಸಿ.ಎಸ್, ಕಂಪ್ಯೂಟರ್ ಸೈನ್ಸ್ ವಿಭಾಗದ ಮಂಜುಶ್ರೀ.ಎ, ದ್ವಿತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ಜೀಕ್ಷಿತಾ.ಕೆ ಹಾಗೂ ಡಾಟಾ ಸೈನ್ಸ್ ವಿಭಾಗದ ಅಶ್ವಿನಿ ಇವರು ಮಹಾರಾಷ್ಟ್ರದ ನಾಂದೇಡ್ ವಿಷ್ಣುಪುರಿಯ ರಮಾನಂದ ತೀರ್ಥ ಮರಾಠವಾಡ ವಿಶ್ವವಿದ್ಯಾನಿಲಯದಲ್ಲಿ ನಡೆಯುವ ಈ ಸ್ಪರ್ಧೆಯಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸುತ್ತಾರೆ. ಈ ಮೊದಲು ಕೋಲಾರದಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಕ್ರಾಸ್ ಕಂಟ್ರಿ ಓಟದ ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ಪ್ರಸನ್ನ.ಕೆ ತಿಳಿಸಿದ್ದಾರೆ.
ಮಡಿಕೇರಿ ಮಾ.9 NEWS DESK : ಮಡಿಕೇರಿ ತಾಲ್ಲೂಕಿನ ಕೆ.ಪೆರಾಜೆ, ಆಲೆಟ್ಟಿ ದೊಡ್ಡಡ್ಕ, ಕಾಪುಮಲೆ, ಕುಂದಲಪಾಡಿ ಹಾಗೂ ಕುಂಬಳಚೇರಿ ಗ್ರಾಮ ವ್ಯಾಪ್ತಿಯ ರಸ್ತೆಯನ್ನು ತಕ್ಷಣ ಅಭಿವೃದ್ಧಿ ಪಡಿಸದಿದ್ದರೆ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಕೆ.ಪೆರಾಜೆ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಪೆರಾಜೆ ಗ್ರಾಮದ ನಿವಾಸಿ ಕೆ.ಎಸ್.ವಿಜಯ ಕೃಷ್ಣ, 2020ರಲ್ಲಿ ಕೆ.ಪೆರಾಜೆ, ಆಲೆಟ್ಟಿ, ಕಾಪುಮಲೆ, ಕುಂದಲಪಾಡಿ ಹಾಗೂ ವಿಎಸ್ಎಸ್ಎನ್ ರಸ್ತೆಯನ್ನು ಸುಮಾರು 12 ಕಿ.ಮೀ ಗ್ರಾಮೀಣ ರಸ್ತೆಯಿಂದ ಜಿಲ್ಲಾ ಮುಖ್ಯ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಲು ಮಂಜೂರಾತಿ ಆಗಿದೆ. ಅದರಂತೆ 2022-23ರ ಸಾಲಿನಲ್ಲಿ ನಬಾರ್ಡ್ ಯೋಜನೆಯಡಿ ಅಂದಾಜು ಮೊತ್ತ 4 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಕಾಮಗಾರಿ ಹಮ್ಮಿಕೊಳ್ಳಬೇಕಾಗಿತ್ತು. ಟೆಂಡರ್ ಮಂಜೂರಾತಿ ಆಗಿದ್ದರೂ ಇಲ್ಲಿಯವರೆಗೆ ಕಾಮಗಾರಿ ಆರಂಭವಾಗದೆ ಇರುವುದು ಖಂಡನೀಯ ಎಂದರು. ಇದೇ ಜ.27ರಂದು ಪೆರಾಜೆಯ ಅನ್ನಪೂರ್ಣೇಶ್ವರಿ ಕಲಾಮಂದಿರದಲ್ಲಿ ನಡೆದ ಜನಸ್ಪಂದನಾ ಸಭೆಯಲ್ಲಿ ರಸ್ತೆ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರ ಗಮನ ಸೆಳೆಯಲಾಗಿತ್ತು. ಅದರಂತೆ ಜಿಲ್ಲಾಧಿಕಾರಿಗಳು ಹಸ್ತಾಂತರಗೊಂಡಿರುವ ಎಂಡಿಆರ್ ರಸ್ತೆಯ…
ಮಡಿಕೇರಿ ಮಾ.9 NEWS DESK : ನಾಪೋಕ್ಲುವಿನ ಚೆರಿಯಪಂಬುವಿನಲ್ಲಿ ನಿರಾಶ್ರಿತರು ನಿರ್ಮಿಸಿಕೊಂಡಿದ್ದ ಗುಡಿಸಲುಗಳನ್ನು ಕಂದಾಯ ಇಲಾಖೆ ತೆರವು ಮಾಡುವ ಮೂಲಕ ಬಡವರಿಗೆ ಅನ್ಯಾಯ ಮಾಡಿದ್ದು, ತಕ್ಷಣವೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ನಿರಾಶ್ರಿತರಿಗೆ ಆಗಿರುವ ನಷ್ಟವನ್ನು ಭರಿಸಬೇಕು ಎಂದು ಸಿಐಟಿಯು ಸಂಘಟನೆಯ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿರಾಶ್ರಿತರಿಗೆ ಬದಲೀ ವ್ಯವಸ್ಥೆ ಕಲ್ಪಿಸಿಕೊಡಬೇಕಾದ ಅಧಿಕಾರಿಗಳು, ಮಾನವೀಯತೆ ಮರೆತು ಗುಡಿಸಲುಗಳನ್ನು ನಾಶಪಡಿಸಿದ್ದಾರೆ. ಗುಡಿಸಲು ಕಳೆದುಕೊಂಡ ನಿರಾಶ್ರಿತರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ನಿರ್ಲಕ್ಷ್ಯ ವಹಿಸಿರುವುದರಿಂದ ಮಾ.11 ರಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದರು. ನಾಪೋಕ್ಲುವಿನ ಚೆರಿಯಪರಂಬುವಿನಲ್ಲಿ ಕಳೆದ ಕೆಲವು ವರ್ಷಗಳಿಂದ ಸುಮಾರು 18 ಕುಟುಂಬಗಳು ಗುಡಿಸಲು ಕಟ್ಟಿಕೊಂಡು ಜೀವನ ಸಾಗಿಸುತ್ತಿದ್ದರು. ನಿವಾಸಿಗಳಿಗೆ ಯಾವುದೇ ಮುನ್ನೆಚ್ಚರಿಕೆ ಅಥವಾ ನೋಟಿಸ್ ನೀಡದೆ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ನಾಪೋಕ್ಲುವಿನ ಕಂದಾಯ ಅಧಿಕಾರಿಗಳು ಏಕಾಏಕಿ ಗುಡಿಸಲನ್ನು ಕಿತ್ತು ಹಾಕಿದ್ದಾರೆ. ಇದರಿಂದ ಮನೆಯಲ್ಲಿದ್ದ ಸಾಮಾಗ್ರಿಗಳಿಗೂ ಹಾನಿಯಾಗಿದೆ ಎಂದು ಆರೋಪಿಸಿದರು.…
ಮಡಿಕೇರಿ ಮಾ.9 NEWS DESK : ಈಜಲು ಹೋಗಿದ್ದ ಯುವಕನೊಬ್ಬ ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಗುಡ್ಡೆಹೊಸೂರು ಸಮೀಪದ ನಂಜರಾಯಪಟ್ಟಣದಲ್ಲಿ ನಡೆದಿದೆ. ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಡಕರೆ ಗ್ರಾಮದ ನಿವಾಸಿ ಶಂಭು ಹಾಗೂ ಮೀನಾ ದಂಪತಿ ಪುತ್ರ ಶರತ್(24) ಮೃತ ದುರ್ದೈವಿ. ಶರತ್ ಶನಿವಾರ ತನ್ನ ನಾಲ್ವರು ಸ್ನೇಹಿತರ ಜೊತೆ ನಂಜರಾಯಪಟ್ಟಣದ ದಾಸವಾಳ ಎಂಬಲ್ಲಿ ಈಜಲು ಕಾವೇರಿ ನದಿಗೆ ಇಳಿದಿದ್ದಾನೆ. ಈ ವೇಳೆ ಆಳ ಪ್ರದೇಶದಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






