ಲೇಖಕ: admin

ಮಡಿಕೇರಿ ಮಾ.10 NEWS DESK : ಕರ್ನಾಟಕ ರಾಜ್ಯ ಪೊಲೀಸ್‌ ಸುವರ್ಣ ಮಹೋತ್ಸವ ಅಂಗವಾಗಿ ಮಾದಕ ದ್ರವ್ಯ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪೊಲೀಸ್‌ ಇಲಾಖೆಯು ರಾಜ್ಯಾದ್ಯಂತ  “ಕರ್ನಾಟಕ ಪೊಲೀಸ್‌ ರನ್”  ಕಾರ್ಯಕ್ರಮ ಹಮ್ಮಿಕೊಂಡಿದ್ದು , ಕೊಡಗು ಜಿಲ್ಲಾ ಪೊಲೀಸ್‌ ವತಿಯಿಂದ “ಮಾದಕ ವಸ್ತು ಸೇವನೆ, ಮಾರಾಟ ಮತ್ತು ಸಾಗಾಣಿಕೆ ತಡೆಗಟ್ಟುವ ಕುರಿತು ಜನ ಜಾಗೃತಿ” ಮೂಡಿಸುವ ಸಲುವಾಗಿ  ಈ ದಿನ ಕುಶಾಲನಗರದ ಪ್ರಮುಖ ರಸ್ತೆಗಳಲ್ಲಿ Walkathon (Walking marathon) ಕಾರ್ಯಕ್ರಮ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು, ಪತ್ರಿಕೆ, ಮಾದ್ಯಮ, ವಿವಿಧ ಸಾರ್ವಜನಿಕ ಸಂಘ ಸಂಸ್ಥೆಗಳ ಪ್ರಮುಖರು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಹಾಗೂ ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Read More

ಗೋಣಿಕೊಪ್ಪ ಮಾ.10 NEWS DESK : ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳುವ ಮೂಲಕ ಜೀವನದಲ್ಲಿ ಎದುರಾಗುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಪತ್ರಕರ್ತ ಜಗದೀಶ್ ಜೋಡುಬೀಟಿ ತಿಳಿಸಿದ್ದಾರೆ. ಹಳ್ಳಿಗಟ್ಟು ಹುದೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಸಿಐಟಿ ಕಾಲೇಜ್‍ನ, ರಾಷ್ಟ್ರೀಯ ಸ್ವಯಂ ಯೋಜನಾ ಘಟಕದ ವಾರ್ಷಿಕ ಶಿಬಿರದ ಸಮರೋಪ ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಬದುಕಿನಲ್ಲಿ ಸಮಸ್ಯೆಗಳು ಎದುರಾಗಿದೆ ಎಂದು ಆತ್ಮಹತ್ಯೆಗೆ ಶರಣಾಗುವುದು ಹೇಡಿತನದ ನಡೆಯಾಗಿದೆ. ಶಿಕ್ಷಣದ ಮೌಲ್ಯಗಳನ್ನು ಅರಿತು ಸಾಮಾಜಿಕ ಕಳಕಳಿಯೊಂದಿಗೆ, ಸಾಮಾಜಿಕ ಬಾಂಧವ್ಯ ಮತ್ತು ಮನುಜ ಪ್ರೀತಿಯೊಂದಿಗೆ ಬದುಕನ್ನು ನಡೆಸಿದಾಗ ಜೀವನ ಸಂಭ್ರಮ ಮತ್ತು ಉತ್ಸಾಹದಿಂದ ಕೂಡಿರಲು ಸಾಧ್ಯವಾಗಬಲ್ಲದು ಎಂದು ಕಿವಿಮಾತು ಹೇಳಿದರು. ಬದಲಾಗಿ ಕಾಲೇಜಿನ ಆವರಣದೊಳಗಿನ ಶಿಕ್ಷಣದ ಜತೆಗೆ ಸಮಾಜದಲ್ಲಿ ಪ್ರತ್ಯಕ್ಷವಾಗುವ ಹಲವಾರು ಘಟನೆಗಳಿಂದ  ಅನುಭವ ಪಡೆದು  ಬದುಕನ್ನು ಸಂಭ್ರಮಿಸಬಹುದಾಗಿದೆ ಎಂದರು. ಮನುಷ್ಯ ಈ ಬದುಕಿಗಾಗಿ ನೂರಾರು ರೀತಿಯ ಹೋರಾಟಗಳನ್ನ ಮತ್ತು ಸಾಹಸಗಳನ್ನು ನಡೆಸುತ್ತಾನೆ. ಇಂತಹ ಸಾಹಸಿಗರ ಯಶೋಗಾಥೆಗಳನ್ನ ತಿಳಿದುಕೊಳ್ಳುವ ಮೂಲಕ ನಮ್ಮ ಜೀವನವನ್ನು ಸೌಂದರ್ಯವಾಗಿಸಿಕೊಳ್ಳಲು ಸಾಧ್ಯವಾಗಬಲ್ಲದು. ಮನಸ್ಸಿನ…

Read More

ಮಡಿಕೇರಿ ಮಾ.10 NEWS DESK : ನಿಸ್ವಾಥ೯ದ ನೆಲೆವೀಡಾಗಿ ಹೆಸರಾಗಿದ್ದ ಭಾರತದಲ್ಲಿಇತ್ತೀಚಿಗೆ   ಸ್ವಾಥ೯ಪರತೆ ಹೆಚ್ಚಾಗುತ್ತಿದ್ದು, ಈ ನಿಟ್ಟಿನಲ್ಲಿ ಸ್ವಾಥ೯ ಮನೋಭಾವನೆ ದೂರಮಾಡಿ ನಿಸ್ವಾಥ೯ವಾಗಿ ಸೇವೆ  ಮಾಡುವ ಮೂಲಕ ವಿಶ್ವಾತ್ಮ ಪದವಿಯನ್ನು ಹೊಂದುವಂತೆ  ನಾಡಿನ  ಖ್ಯಾತ  ವಿದ್ವಾಂಸ  ಶಿವಮೊಗ್ಗದ    ಜಿ.ಎಸ್. ನಟೇಶ್ ಹೇಳಿದರು. ಮಡಿಕೇರಿ ಬಳಿಯ ಕಗ್ಗೋಡ್ಲು ಗ್ರಾಮದ  ಕೂಗ್೯ ಅಂಬರ ರೆಸಾಟ್೯ನಲ್ಲಿ ಆಯೋಜಿತ ಲಯನ್ಸ್ ಸಂಸ್ಥೆಯ ವಲಯ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ ನಟೇಶ್, ಸೇವೆ ಮಾಡುವವರಲ್ಲಿ ನಗುವಿನ ಮನೋಭಾವ ಮುಖ್ಯವಾಗಿರಬೇಕು. ಸಂತೋಷದ ಭಾವನೆಯಿಂದ ಸೇವೆಗೆ ಮುಂದಾಗಬೇಕು. ಗಂಟು ಮುಖ ಹೊತ್ತು ಸೇವೆ ಮಾಡಲು ಮುಂದಾದರೆ ಯಾರೂ ಮೆಚ್ಚಲಾರರು. ಸೇವೆ ಮಾಡುವವರು ಮನಸ್ಸಿನಾಳದಿಂದ ಸಮಧಾನಚಿತ್ತರಾಗಿ ಇತರರಿಗೆ ಉಪಕಾರ ಮಾಡಲು ಮುಂದಾಗಬೇಕೆಂದು ಅಭಿಪ್ರಾಯಪಟ್ಟರು.  ಲಯನ್ಸ್ ನಂಥ ಸೇವಾ ಸಂಸ್ಥೆಗಳು ಜೀವನದಲ್ಲಿ ಸೇವಾ ಮನೋಭಾವನೆ ಹೆಚ್ಚಿಸಲು ನೆರವಾಗುತ್ತದೆ ಎಂದೂ ಅವರು ಹೇಳಿದರು. ಪ್ರಕೖತ್ತಿಯನ್ನು ಮಾನವ ಸೂರೆ ಮಾಡುತ್ತಿದ್ದಾನೆ. ದೇವರಿಗೆ ಪ್ರಿಯವಾಗಿದೆ ಎಂದು ಪ್ರಕೖತ್ತಿಯಲ್ಲಿ ನಳನಳಿಸುವ ಪುಪ್ಪಗಳನ್ನು ಬೇಕಾಬಿಟ್ಟಿ ಹಾಳು ಮಾಡಿ, ಗಿಡಗಳು ಭಣಗುಟ್ಟುವಂತೆ…

Read More

ಮಡಿಕೇರಿ ಮಾ.10 NEWS DESK : ರೋಟರಿ ಮಡಿಕೇರಿ ವುಡ್ಸ್ ವತಿಯಿಂದ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ ಅರ್ಥಪೂರ್ಣವಾಗಿ ನಡೆಯಿತು. ಕ್ಲಬ್ ನ ಮಹಿಳಾ ಸದಸ್ಯರಾದ ರೊ.ಪ್ರಮಿಳಾ ಶೆಟ್ಟಿ, ರೊ.ಲೀಲಾವತಿ, ರೊ.ಗೀತಾ ಸೂರ್ಯ, ರೊ.ಶಿಲ್ಪಾ ಸತೀಶ್, ರೊ.ಪದ್ಮಾ ಗಿರಿ ಹಾಗೂ ರೊ.ವಿಶಾಲಾಕ್ಷಿ ಅವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ರೋಟರಿ ಮಡಿಕೇರಿ ವುಡ್ಸ್ ಅಧ್ಯಕ್ಷ ರೊ.ವಸಂತ್ ಕುಮಾರ್ ಮಾತನಾಡಿ ನಾವೆಲ್ಲರೂ ಮಹಿಳೆಯರಿಗೆ ಸಮಾನ ಅವಕಾಶಗಳನ್ನು ನೀಡಬೇಕು. ಕೌಟುಂಬಿಕ, ಸಾಮಾಜಿಕ, ಶೈಕ್ಷಣಿಕ, ವೈದ್ಯಕೀಯ, ರಾಜಕೀಯ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರು ತಮ್ಮನ್ನು ತೊಡಗಿಸಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಲು ಪ್ರೇರೇಪಿಸುವಂತೆ ಕರೆ ನೀಡಿದರು. ಮಹಿಳಾ ಸದಸ್ಯರನ್ನು ಸನ್ಮಾನಿಸಲು ನಮಗೆ ಹೆಮ್ಮೆಯಾಗುತ್ತದೆ. ಕ್ಲಬ್ ಗೆ ಮಹಿಳೆಯರು ಅಪಾರ ಕೊಡುಗೆ ನೀಡಿದ್ದು, ಅವರು ಕ್ಲಬ್ ನ ಶಕ್ತಿಯೂ ಹೌದು ಎಂದರು. ರೊ.ಪದ್ಮಗಿರಿ ಮಾತನಾಡಿ, ಪುರುಷ ಪ್ರಧಾನವಾಗಿರುವ ಇಂದಿನ ಸಮಾಜದಲ್ಲಿ ಮಹಿಳೆಯರಿಗೂ ಸಮಾನ ಅವಕಾಶ, ಹಕ್ಕುಗಳನ್ನು ನೀಡಿ ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸಬೇಕು. ವರದಕ್ಷಿಣೆ, ಲೈಂಗಿಕ ಕಿರುಕುಳದಂತಹ ಸಾಮಾಜಿಕ ಪಿಡುಗನ್ನು ಹೋಗಲಾಡಿಸುವಲ್ಲಿ…

Read More

ಮಡಿಕೇರಿ ಮಾ.10 NEWS DESK : ಕೆದಕಲ್ ನ ಶ್ರೀ ಭದ್ರಕಾಳೇಶ್ವರಿ ದೇವಾಲಯದ ವಾರ್ಷಿಕೋತ್ಸವ ಮಾ.12 ರಂದು ನಡೆಯಲಿದೆ. ಅಂದು ಬೆಳಗ್ಗೆ 10 ಗಂಟೆಗೆ ಗಣಪತಿ ಹೋಮ, 11 ಗಂಟೆಗೆ ಕುಂಭಾಭಿಷೇಕ, ಕಳಶ ಪೂಜೆ, ಮಧ್ಯಾಹ್ನ 12 ಗಂಟೆಗೆ ಮಹಾ ಮಂಗಳಾರತಿ, ಪ್ರಸಾದ ವಿತರಣೆ ಹಾಗೂ 1 ಗಂಟೆಯಿಂದ ಅನ್ನ ಸಂತರ್ಪಣೆಯಾಗಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ವಾರ್ಷಿಕೋತ್ಸವದಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿ ಮನವಿ ಮಾಡಿದೆ.

Read More

ಮಡಿಕೇರಿ ಮಾ.10 NEWS DESK : ಜೂನಿಯರ್ ಛೇಂಬರ್ ಆಫ್ ಇಂಟರ್ ನ್ಯಾಷನಲ್ ( ಜೆಸಿಐ ), ಇಂಡಿಯಾದ ಸುಂಟಿಕೊಪ್ಪ ಜೆಸಿಐ ವತಿಯಿಂದ ಸೋಮವಾರಪೇಟೆ ಪೊಲೀಸ್ ಉಪ ವಿಭಾಗದ ಸಹಕಾರದೊಂದಿಗೆ ಭಾನುವಾರ ಉತ್ತರ ಕೊಡಗಿನ ಕೂಡಿಗೆಯ ಜಿಲ್ಲಾ ‌ಕೃಷಿ ತರಬೇತಿ ಕೇಂದ್ರದಲ್ಲಿ ಪೊಲೀಸ್ ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಮತ್ತು ಸಮಯ ಪಾಲನೆ ಕುರಿತು ತರಬೇತಿ ಕಾರ್ಯಾಗಾರ ಏರ್ಪಡಿಸಲಾಗಿತ್ತು. ತರಬೇತಿ ಕಾರ್ಯಾಗಾರ ಉದ್ಘಾಟಿಸಿದ ಸೋಮವಾರಪೇಟೆ ಪೊಲೀಸ್ ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕ ( ಡಿವೈಎಸ್ಪಿ) ಆರ್.ವಿ.ಗಂಗಾಧರಪ್ಪ ಮಾತನಾಡಿ,  ಸಮಾಜದಲ್ಲಿ  ಪೊಲೀಸರು ಕಾನೂನು ಪರಿಪಾಲನೆ ಮಾಡುವ ಮೂಲಕ ಸಮಾಜದಲ್ಲಿ ಶಾಂತಿ, ನೆಮ್ಮದಿ ಕಾಪಾಡಿ ಇಲಾಖೆಯ ಕೀರ್ತಿಯನ್ನು ಹೆಚ್ಚಿಸಬೇಕು ಎಂದರು. ಪ್ರತಿನಿತ್ಯ ಸಾಕಷ್ಟು ಒತ್ತಡ ಹಾಗೂ ಮನಸ್ಸಿನ ದುಗುಡಗಳಲ್ಲಿ  ಕಾರ್ಯನಿರ್ವಹಿಸುವ ಪೊಲೀಸ್ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಒತ್ತಡ ನಿರ್ವಹಣೆ ಮೂಲಕ ಒತ್ತಡದಿಂದ ಹೊರಬಂದು ಮನಸ್ಸಿಗೆ ನೆಮ್ಮದಿ ಪಡೆಯುವ ಮೂಲಕ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಬೇಕು ಎಂದರು. ಸದಾ ಜಂಜಾಟ ಮತ್ತು ಒತ್ತಡದ ನಡುವೆ ಕೆಲಸ…

Read More

ಮಡಿಕೇರಿ ಮಾ.10 NEWS DESK : ಇಂದಿನ ಮಕ್ಕಳಿಗೆ ವಚನಗಳನ್ನು ಕಡ್ಡಾಯವಾಗಿ  ಕಲಿಸುವ ಮೂಲಕ ಉತ್ತಮ ವ್ಯಕ್ತಿಗಳಾಗಿ ರೂಪಿಸಲು ತಾಯಂದಿರ ಪಾತ್ರ ಬಹು ಮುಖ್ಯ ಎಂದು  ಹೆಬ್ಬಾಲೆ ಪ್ರೌಢ ಶಾಲೆ ಕನ್ನಡ ಉಪನ್ಯಾಸಕರೂ ಆದ ಸಾಹಿತಿ  ಮೆ.ನಾ.ವೆಂಕಟನಾಯಕ್ ಕರೆ ಕೊಟ್ಟರು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಗಿರಗೂರಿನ ಗಿರಿಜೇಶ್ವರ ದೇವಾಲಯದ ಆವರಣದಲ್ಲಿ  ಸುತ್ತೂರು  ವೀರಸಿಂಹಾಸನ ಮಹಾ ಸಂಸ್ಥಾನದಿಂದ  ಕೊಡ ಮಾಡಿದ “ಶರಣ ಸಾಹಿತ್ಯ  ಪ್ರಸಾರ ” ದತ್ತಿ ಕಾರ್ಯಕ್ರಮದಲ್ಲಿ ಪ್ರವಚನ ನೀಡಿದ ಅವರು,  ಎಳೆಯ ಮಕ್ಕಳಿಗೆ ತಾಯಂದಿರು ಹಾಲುಣಿಸುವಾಗಲೇ ವಚನಗಳ ಅರಿವನ್ನು ಮೂಡಿಸುವ ಮೂಲಕ ವಚನಗಳು ನಿತ್ಯದ ಬದುಕಿನ ಪ್ರಾರ್ಥನಾ ಗೀತೆಗಳಾಗಿಸಿದಲ್ಲಿ    ಹನ್ನೆರಡನೇ ಶತಮಾನದ ಕಲ್ಯಾಣ ರಾಜ್ಯವನ್ನು ಕಾಣಲು ಸಾಧ್ಯವಾಗುತ್ತದೆ. ಮಹಿಳೆಯರು, ಮಕ್ಕಳು ಹಾಗೂ ಇಂದಿನ ತರುಣರು ಮೊಬೈಲ್ ಹಾಗೂ ಟಿವಿ ಸೀರಿಯಲ್  ವ್ಯಾಮೋಹ ಬಿಟ್ಟು ವಚನ ಸಾಹಿತ್ಯವನ್ನು ಓದುವುದನ್ನು ರೂಢಿಸಿಕೊಳ್ಳಲು ವೆಂಕಟನಾಯಕ್ ಕರೆಕೊಟ್ಟರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಅಖಿಲ ಭಾರತ ವೀರಶೈವ ಮಹಾಸಭಾದ  ಕೊಡಗು ಜಿಲ್ಲಾ ಅಧ್ಯಕ್ಷ ಹೆಚ್.ವಿ.ಶಿವಪ್ಪ ಮಾತನಾಡಿ,…

Read More

ಮಡಿಕೇರಿ ಮಾ.9 NEWS DESK : ತಾಯಿ ಚಾಮುಂಡಿ ನನ್ನ ಕೈಬಿಡಲ್ಲ, ಕೊಡಗು ಮತ್ತು ಮೈಸೂರು ಜನರ ಆಶೀರ್ವಾದ ನನ್ನ ಮೇಲಿದೆ. ಅಭಿವೃದ್ಧಿ ಕಾರ್ಯದಲ್ಲಿ ನನ್ನ ಮ್ಯಾಚ್ ಮಾಡೋಕೆ ಯಾರಿಗೂ ಸಾಧ್ಯವಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ಈ ಬಾರಿ ಕೊಡಗು- ಮೈಸೂರು ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಸಿಗಲ್ಲ ಎನ್ನುವ ಊಹಾಪೋಹಗಳ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ ಸ್ಪಷ್ಟೀಕರಣ ನೀಡಿದ ಅವರು, ಒಬ್ಬ ಸಂಸದನ ಭವಿಷ್ಯ ನಿರ್ಧಾರ ಮಾಡೋರು ಜನ, ಜನ ಸಂತೋಷವಾಗಿದ್ದಾರೆ, ಆಶೀರ್ವಾದ ಮಾಡ್ತಾರೆ ಅಂದ್ರೆ, ಮೇಲಿನ ನಾಯಕರುಗಳು ಕೂಡ ನನಗೆ ಆಶೀರ್ವಾದ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಒಬ್ಬ ಸಂಸದನಾಗಿ ನಾನು ಯಾವ ಅಭಿವೃದ್ಧಿ ಕಾರ್ಯ ಮಾಡಿಲ್ಲ ಹೇಳಿಬಿಡಿ, ಅಭಿವೃದ್ಧಿ ಮತ್ತು ಹಿಂದುತ್ವದ ವಿಚಾರದಲ್ಲಿ ನನಗೆ ಮ್ಯಾಚ್ ಮಾಡೋರು ಯಾರಿದ್ದಾರೆ ಎಂದು ಪ್ರಶ್ನಿಸಿದರು. ನನ್ನ ಕ್ಷೇತ್ರಕ್ಕೆ 11 ರೈಲು ತಂದಿದ್ದೇನೆ, ಸಧ್ಯದಲ್ಲೇ 12 ನೇ ರೈಲು ತರುತ್ತಿದ್ದೇನೆ, ಮೈಸೂರಿಗೆ ರಿಂಗ್ ರೋಡ್ ತರಲಿದ್ದೇನೆ, ಮೆಟ್ರೋ ರೈಲು ನನ್ನ ಮುಂದಿನ…

Read More

ಮಡಿಕೇರಿ ಮಾ.9 NEWS DESK : ಜಿಂಕೆ ಡಿಕ್ಕಿಯಾದ ಪರಿಣಾಮ ಆಟೋರಿಕ್ಷಾ ಪಲ್ಟಿಯಾಗಿ 8 ತಿಂಗಳ ಮಗು ಮೃತಪಟ್ಟ ಘಟನೆ ಶ್ರೀಮಂಗಲ ಬೀರುಗ ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದ ಕೆಲಸಕ್ಕಾಗಿ ಜಾರ್ಖಂಡ್ ಮೂಲದ ಕೂಲಿ ಕಾರ್ಮಿಕರು ಶ್ರೀಮಂಗಲಕ್ಕೆ ಬಂದು ಅಲ್ಲಿಂದ ಆಟೋರಿಕ್ಷಾದಲ್ಲಿ ಬೀರುಗ ಗ್ರಾಮಕ್ಕೆ ತೆರಳುತ್ತಿದ್ದರು. ಮಾರ್ಗ ಮಧ್ಯೆ ಏಕಾಏಕಿ ಜಿಂಕೆಯೊಂದು ಅಡ್ಡ ಬಂದು ಆಟೋರಿಕ್ಷಾಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಆಟೋ ಪಲ್ಟಿಯಾಗಿದ್ದು, ತಾಯಿಯ ಮಡಿಲಿನಲ್ಲಿದ್ದ 8 ತಿಂಗಳ ಅನುರಾಗ್ ರಾಜ್ ಎಂಬ ಪುಟ್ಟ ಮಗು ರಿಕ್ಷಾದಡಿ ಸಿಲುಕಿ ಪ್ರಾಣ ಬಿಟ್ಟಿದೆ. ಈ ಘಟನೆ ಕುರಿತು ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಜಿಂಕೆ ಡಿಕ್ಕಿಯಾಗಿ ಆಟೋ ಮಗುಚಿ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಮಂಗಲ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಅರಣ್ಯ ಇಲಾಖೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಆಟೋ ಮಗುಚಿ ಬಿದ್ದು ಮಗು ಸಾವನ್ನಪ್ಪಲು ಜಿಂಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಮಗುವನ್ನು ಕಳೆದುಕೊಂಡ ಬಡ ಕೂಲಿ…

Read More

ಮಡಿಕೇರಿ ಮಾ.9 NEWS DESK : ಕಾಡಾನೆಗಳ ಹಿಂಡಿನಿಂದ ಬೇರ್ಪಟ್ಟ ಆನೆಯೊಂದು ಬೆಳ್ಳಂಬೆಳಗ್ಗೆ ಮಂಜು ಮುಸುಕಿದ ವಾತಾವರಣದಲ್ಲಿ ನಡುರಸ್ತೆಯಲ್ಲಿ ಸಂಚರಿಸುವ ಮೂಲಕ ಜನರಲ್ಲಿ ಆತಂಕವನ್ನು ಮೂಡಿಸಿದ ಘಟನೆ ಪೊನ್ನಂಪೇಟೆಯಲ್ಲಿ ನಡೆದಿದೆ. ಶನಿವಾರ ಬೆಳಗ್ಗೆ ಸುಮಾರು 7 ಗಂಟೆ ಸಮಯದಲ್ಲಿ ಮಂಜು ಮುಸುಕಿದ ವಾತಾವರಣದಲ್ಲಿ ಗದ್ದೆಯೊಂದರ ಮೂಲಕ ಕಾಡಾನೆ ಪಟ್ಟಣ ಪ್ರವೇಶ ಮಾಡಿತು. ಪೊನ್ನಂಪೇಟೆ ನ್ಯಾಯಾಲಯದ ಸಮೀಪ ಪ್ರತ್ಯಕ್ಷವಾದ ಗಜರಾಜ ರಾಜಾರೋಷವಾಗಿ ರಸ್ತೆಯಲ್ಲಿ ಹೆಜ್ಜೆ ಹಾಕಿತು. ಆಗಷ್ಟೇ ಅಂಗಡಿಗಳನ್ನು ತೆರೆಯುತ್ತಿದ್ದ ವರ್ತಕರು, ರಸ್ತೆಯಲ್ಲಿ ಬರುತ್ತಿದ್ದ ವಾಹನ ಚಾಲಕರು ಹಾಗೂ ಸ್ಥಳೀಯರು ರಸ್ತೆಯಲ್ಲಿ ಪ್ರತ್ಯಕ್ಷವಾದ ಕಾಡಾನೆಯನ್ನು ಕಂಡು ಆತಂಕಗೊಂಡರು, ಕೆಲವರು ಸ್ಥಳದಿಂದ ಕಾಲ್ಕಿತ್ತರು. ಆದರೆ ಇದ್ಯಾವುದನ್ನೂ ಗಣನೆಗೆ ತೆಗೆದುಕೊಳ್ಳದ ಆನೆ ತನ್ನಿಷ್ಟದಂತೆ ರಸ್ತೆಯಲ್ಲಿ ಹೆಜ್ಜೆ ಹಾಕುತ್ತಾ ಕುಂದಾ ರಸ್ತೆ ಮಾರ್ಗವಾಗಿ ಮುತ್ತಪ್ಪ ದೇವಸ್ಥಾನದ ಹಿಂಬದಿಯ ತೋಟಕ್ಕಾಗಿ ತೆರಳಿತು. ನಂತರ ಬೆಂಕಿ ರೋಗ ಪರೀಕ್ಷಾ ಕೇಂದ್ರದ ಗದ್ದೆಗಾಗಿ ತೆರಳಿ, ಪೊನ್ನಂಪೇಟೆ-ಕುಟ್ಟ ಮುಖ್ಯ ರಸ್ತೆಯಿಂದ ಕೆಲವರ ಮನೆಯ ಅಂಗಳದವರೆಗೂ ರಾಜಾರೋಷವಾಗಿ ಸಂಚರಿಸುವ ಮೂಲಕ ಆತಂಕ ಸೃಷ್ಟಿಸಿತು. ಕಾಡಾನೆ…

Read More