ಲೇಖಕ: admin

ಪುತ್ತೂರು ಮಾ.9 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ನಾಲ್ವರು ವಿದ್ಯಾರ್ಥಿನಿಯರು ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಮಹಿಳೆಯರ ಕ್ರಾಸ್ ಕಂಟ್ರಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ತೃತೀಯ ವರ್ಷದ ಇಲೆಕ್ಟ್ರಾನಿಕ್ಸ್ ವಿಭಾಗದ ವಿದ್ಯಾ.ಸಿ.ಎಸ್, ಕಂಪ್ಯೂಟರ್ ಸೈನ್ಸ್ ವಿಭಾಗದ ಮಂಜುಶ್ರೀ.ಎ, ದ್ವಿತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ಜೀಕ್ಷಿತಾ.ಕೆ ಹಾಗೂ ಡಾಟಾ ಸೈನ್ಸ್ ವಿಭಾಗದ ಅಶ್ವಿನಿ ಇವರು ಮಹಾರಾಷ್ಟ್ರದ ನಾಂದೇಡ್ ವಿಷ್ಣುಪುರಿಯ ರಮಾನಂದ ತೀರ್ಥ ಮರಾಠವಾಡ ವಿಶ್ವವಿದ್ಯಾನಿಲಯದಲ್ಲಿ ನಡೆಯುವ ಈ ಸ್ಪರ್ಧೆಯಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸುತ್ತಾರೆ. ಈ ಮೊದಲು ಕೋಲಾರದಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಕ್ರಾಸ್ ಕಂಟ್ರಿ ಓಟದ ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ತಿಳಿಸಿದ್ದಾರೆ.

Read More

ಮಡಿಕೇರಿ ಮಾ.9 NEWS DESK : ಮಡಿಕೇರಿ ತಾಲ್ಲೂಕಿನ ಕೆ.ಪೆರಾಜೆ, ಆಲೆಟ್ಟಿ ದೊಡ್ಡಡ್ಕ, ಕಾಪುಮಲೆ, ಕುಂದಲಪಾಡಿ ಹಾಗೂ ಕುಂಬಳಚೇರಿ ಗ್ರಾಮ ವ್ಯಾಪ್ತಿಯ ರಸ್ತೆಯನ್ನು ತಕ್ಷಣ ಅಭಿವೃದ್ಧಿ ಪಡಿಸದಿದ್ದರೆ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಕೆ.ಪೆರಾಜೆ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಪೆರಾಜೆ ಗ್ರಾಮದ ನಿವಾಸಿ ಕೆ.ಎಸ್.ವಿಜಯ ಕೃಷ್ಣ, 2020ರಲ್ಲಿ ಕೆ.ಪೆರಾಜೆ, ಆಲೆಟ್ಟಿ, ಕಾಪುಮಲೆ, ಕುಂದಲಪಾಡಿ ಹಾಗೂ ವಿಎಸ್‍ಎಸ್‍ಎನ್ ರಸ್ತೆಯನ್ನು ಸುಮಾರು 12 ಕಿ.ಮೀ ಗ್ರಾಮೀಣ ರಸ್ತೆಯಿಂದ ಜಿಲ್ಲಾ ಮುಖ್ಯ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಲು ಮಂಜೂರಾತಿ ಆಗಿದೆ. ಅದರಂತೆ 2022-23ರ ಸಾಲಿನಲ್ಲಿ ನಬಾರ್ಡ್ ಯೋಜನೆಯಡಿ ಅಂದಾಜು ಮೊತ್ತ 4 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಕಾಮಗಾರಿ ಹಮ್ಮಿಕೊಳ್ಳಬೇಕಾಗಿತ್ತು. ಟೆಂಡರ್ ಮಂಜೂರಾತಿ ಆಗಿದ್ದರೂ ಇಲ್ಲಿಯವರೆಗೆ ಕಾಮಗಾರಿ ಆರಂಭವಾಗದೆ ಇರುವುದು ಖಂಡನೀಯ ಎಂದರು. ಇದೇ ಜ.27ರಂದು ಪೆರಾಜೆಯ ಅನ್ನಪೂರ್ಣೇಶ್ವರಿ ಕಲಾಮಂದಿರದಲ್ಲಿ ನಡೆದ ಜನಸ್ಪಂದನಾ ಸಭೆಯಲ್ಲಿ ರಸ್ತೆ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರ ಗಮನ ಸೆಳೆಯಲಾಗಿತ್ತು. ಅದರಂತೆ ಜಿಲ್ಲಾಧಿಕಾರಿಗಳು ಹಸ್ತಾಂತರಗೊಂಡಿರುವ ಎಂಡಿಆರ್ ರಸ್ತೆಯ…

Read More

ಮಡಿಕೇರಿ ಮಾ.9 NEWS DESK : ನಾಪೋಕ್ಲುವಿನ ಚೆರಿಯಪಂಬುವಿನಲ್ಲಿ ನಿರಾಶ್ರಿತರು ನಿರ್ಮಿಸಿಕೊಂಡಿದ್ದ ಗುಡಿಸಲುಗಳನ್ನು ಕಂದಾಯ ಇಲಾಖೆ ತೆರವು ಮಾಡುವ ಮೂಲಕ ಬಡವರಿಗೆ ಅನ್ಯಾಯ ಮಾಡಿದ್ದು, ತಕ್ಷಣವೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ನಿರಾಶ್ರಿತರಿಗೆ ಆಗಿರುವ ನಷ್ಟವನ್ನು ಭರಿಸಬೇಕು ಎಂದು ಸಿಐಟಿಯು ಸಂಘಟನೆಯ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿರಾಶ್ರಿತರಿಗೆ ಬದಲೀ ವ್ಯವಸ್ಥೆ ಕಲ್ಪಿಸಿಕೊಡಬೇಕಾದ ಅಧಿಕಾರಿಗಳು, ಮಾನವೀಯತೆ ಮರೆತು ಗುಡಿಸಲುಗಳನ್ನು ನಾಶಪಡಿಸಿದ್ದಾರೆ. ಗುಡಿಸಲು ಕಳೆದುಕೊಂಡ ನಿರಾಶ್ರಿತರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ನಿರ್ಲಕ್ಷ್ಯ ವಹಿಸಿರುವುದರಿಂದ ಮಾ.11 ರಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದರು. ನಾಪೋಕ್ಲುವಿನ  ಚೆರಿಯಪರಂಬುವಿನಲ್ಲಿ ಕಳೆದ ಕೆಲವು ವರ್ಷಗಳಿಂದ ಸುಮಾರು 18 ಕುಟುಂಬಗಳು ಗುಡಿಸಲು ಕಟ್ಟಿಕೊಂಡು ಜೀವನ ಸಾಗಿಸುತ್ತಿದ್ದರು. ನಿವಾಸಿಗಳಿಗೆ ಯಾವುದೇ ಮುನ್ನೆಚ್ಚರಿಕೆ ಅಥವಾ ನೋಟಿಸ್ ನೀಡದೆ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ನಾಪೋಕ್ಲುವಿನ ಕಂದಾಯ ಅಧಿಕಾರಿಗಳು ಏಕಾಏಕಿ ಗುಡಿಸಲನ್ನು ಕಿತ್ತು ಹಾಕಿದ್ದಾರೆ. ಇದರಿಂದ ಮನೆಯಲ್ಲಿದ್ದ ಸಾಮಾಗ್ರಿಗಳಿಗೂ ಹಾನಿಯಾಗಿದೆ ಎಂದು ಆರೋಪಿಸಿದರು.…

Read More

ಮಡಿಕೇರಿ ಮಾ.9 NEWS DESK : ಈಜಲು ಹೋಗಿದ್ದ ಯುವಕನೊಬ್ಬ ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಗುಡ್ಡೆಹೊಸೂರು ಸಮೀಪದ ನಂಜರಾಯಪಟ್ಟಣದಲ್ಲಿ ನಡೆದಿದೆ. ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಡಕರೆ ಗ್ರಾಮದ ನಿವಾಸಿ ಶಂಭು ಹಾಗೂ ಮೀನಾ ದಂಪತಿ ಪುತ್ರ ಶರತ್(24) ಮೃತ ದುರ್ದೈವಿ. ಶರತ್ ಶನಿವಾರ ತನ್ನ ನಾಲ್ವರು ಸ್ನೇಹಿತರ ಜೊತೆ ನಂಜರಾಯಪಟ್ಟಣದ ದಾಸವಾಳ ಎಂಬಲ್ಲಿ ಈಜಲು ಕಾವೇರಿ ನದಿಗೆ ಇಳಿದಿದ್ದಾನೆ. ಈ ವೇಳೆ ಆಳ ಪ್ರದೇಶದಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಡಿಕೇರಿ ಮಾ.9  NEWS DESK : ಸ್ವಸ್ತಿಕ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ನಿರ್ಮಾಣ ಮತ್ತು ನಿರ್ದೇಶನ ದ ಕನ್ನಡ ಚಲನಚಿತ್ರ “ಕಂದೀಲು” (The Ray of hope) ಬೆಂಗಳೂರಿನ ಒರಿಯನ್ ಮಾಲ್ ನಲ್ಲಿ ನಡೆದ 15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕನ್ನಡ ಸಿನಿಮಾ ಸ್ಪರ್ಧಾತ್ಮಕ ವಿಭಾಗದಲ್ಲಿ ಆಯ್ಕೆಗೊಂಡು 12 ಸಿನಿಮಾಗಳಲ್ಲಿ ಸ್ಥಾನ ಪಡೆದುಕೊಂಡು ಅಂತಿಮ ಘಟ್ಟದಲ್ಲಿ “2ನೇ ಅತ್ಯುತ್ತಮ ಚಿತ್ರ ಪ್ರಶಸ್ತಿ” ಯನ್ನು ತನ್ನ ಮುಡಿಗೇರಿಸಿಕೊಂಡಿದೆ. ಬೆಂಗಳೂರಿನ ವಿಧಾನಸೌಧ ದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಅದ್ದೂರಿ ಸಮಾರೋಪ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕನ್ನಡದ ಖ್ಯಾತ ನಟ, ಚಲನಚಿತ್ರೋತ್ಸವದ ರಾಯಭಾರಿ ಡಾಲಿ ಧನಂಜಯ ಹಾಗೂ ಕನ್ನಡ ಚಲನಚಿತ್ರ ಅಕಾಡೆಮಿಯ ನೂತನ ಅಧ್ಯಕ್ಷ ಖ್ಯಾತ ಸಂಗೀತ ನಿರ್ದೇಶಕ ಸಾಧು ಕೋಕಿಲ ಮತ್ತು ಹಿರಿಯ ನಟಿ ಹಾಗೂ ಮಾಜಿ ಸಚಿವೆ ಉಮಾಶ್ರೀ ಅವರಿಂದ “ಕಂದೀಲು” ಚಿತ್ರದ ನಿರ್ದೇಶಕಿ ಹಾಗೂ ನಿರ್ಮಾಪಕಿ ಕೊಟ್ಟುಕತ್ತಿರ ಯಶೋಧ ಪ್ರಕಾಶ್ ಪತಿ ಪ್ರಕಾಶ್ ಕಾರ್ಯಪ್ಪ…

Read More

ಕುಶಾಲನಗರ ಮಾ.9 NEWS DESK :  ಗ್ರಾಮೀಣರ ಕೃಷಿ ಬದುಕು ಗ್ರಾಮ ಜೀವನ, ಆಹಾರ ಪದ್ಧತಿಗಳೆಲ್ಲವೂ ಜಾನಪದ ಸಂಸ್ಕೃತಿಯ ಭಾಗ ಎಂದು ನಿವೃತ್ತ ಜಂಟಿ ಕೃಷಿ ನಿರ್ದೇಶಕ ಟಿ.ಡಿ.ಗಣೇಶ್ ಹೇಳಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಹೆಬ್ಬಾಲೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು, ಹೆಬ್ಬಾಲೆ, ತೊರೆನೂರು ಮತ್ತು ಶಿರಂಗಾಲ ಗ್ರಾಮ ಪಂಚಾಯಿತಿ ವತಿಯಿಂದ ಸುವರ್ಣ ಕರ್ನಾಟಕ -50 ರ ಸಂಭ್ರಮ ಆಚರಣೆ ಅಂಗವಾಗಿ ಹೆಬ್ಬಾಲೆ ಗ್ರಾಮಸಿರಿ ಆಚರಣಾ ಸಮಿತಿ ಸಹಯೋಗದೊಂದಿಗೆ ಹೆಬ್ಬಾಲೆ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಏರ್ಪಡಿಸಿದ್ದ ಜಾನಪದ ಗ್ರಾಮಸಿರಿ ಕಾರ್ಯಕ್ರಮದ ಅಂಗವಾಗಿ ವಿವಿಧ ‌ಕ್ಷೇತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಜಿಲ್ಲೆಯಲ್ಲಿಯೇ ಹೆಚ್ಚು ಕೃಷಿ ಕುಟುಂಬಗಳು ನೆಲೆಸಿರುವ ಹೆಬ್ಬಾಲೆಯಲ್ಲಿ ಇಂತಹ ಗ್ರಾಮೀಣ ಗ್ರಾಮಸಿರಿ ಉತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿರುವವರನ್ನು ಸ್ಥಳೀಯವಾಗಿ ಗುರುತಿಸಿ ಸನ್ಮಾನಿಸಿ ಗೌರವಿಸುತ್ತಿರುವುದನ್ನು ಗಣೇಶ್ ಶ್ಲಾಘಿಸಿದರು. ಇದೇ…

Read More

ಮಡಿಕೇರಿ ಮಾ.9 NEWS DESK : ಮಡಿಕೇರಿ ಕುಮಾರೀಸ್ ಲೈಟ್‍ಹೌಸ್‍ ನಲ್ಲಿ  ಮಹಾ ಶಿವರಾತ್ರಿಯ ಪ್ರಯುಕ್ತ ಶಿವ ದ್ವಜರೋಹಣ ಹಾಗೂ 88 ನೇ ತ್ರಿಮೂರ್ತಿ ಶಿವ ಜಯಂತಿ ಪ್ರಯುಕ್ತ 88 ಜ್ಯೋತಿ ಬೆಳಗಿಸುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಜ್ಯೋತಿ ಬೆಳೆಗಿಸುವ ಮೂಲಕ ಉದ್ಘಾಟಿಸಲಾಯಿತು. ಸಂಜೆ ಶಿವ ಭಕ್ತಿ ಗೀತೆಗಳ ಭಜನಾ ಕಾರ್ಯಕ್ರಮ ನಡೆಯಿತು. ನೆರೆದಿದ್ದ ಎಲ್ಲರು ವಿಶೇಷ ಜ್ಯೋತಿರ್ಲಿಂಗ ದರ್ಶನ ಪಡೆದರು. ಶಿವರಾತ್ರಿಯ ಪ್ರಯುಕ್ತ ಮಾ.11ರಿಂದ 20ರ ವರೆಗೆಬೆಳಿಗ್ಗೆ ಮತ್ತು ಸಂಜೆ 6.30 ರಿಂದ 7.30ರ ವರೆಗೆ ರಾಜಯೋಗ ಧ್ಯಾನದ  ಉಚಿತ ತರಬೇತಿ ನಡೆಯಲಿದ್ದು, ಆಸಕ್ತರು ಶಿಬಿರವನ್ನು ಸದುಪಯೋಗಿಸಿಕೊಳ್ಳಬಹುದು.

Read More

ಕುಶಾಲನಗರ ಮಾ.9 NEWS DESK : ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಕುಶಾಲನಗರದ ಜಂಪ್ ಸ್ಮಾಶ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಆಯುಧಿ ಶಿವರಾತ್ರಿ ಕಪ್ ಅನ್ನು ತನ್ನದಾಗಿಸಿಕೊಂಡಿತು. ರಾತ್ರಿ ನಡೆದ ಪಂದ್ಯಾವಳಿಯಲ್ಲಿ ಆರು ತಂಡಗಳ ಮೂಲಕ ಸುಮಾರು 70 ಆಟಗಾರರು ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದರು. ಟೀಮ್ ರಾಕರ್ಸ್, ಎಇ, ಆಯುಧಿ ಹಾಗೂ ಜಂಪ್ ಸ್ಮಾಶ್ ನಾಲ್ಕು ತಂಡಗಳು ಸೆಮಿ ಪೈನಲ್ ತಲುಪಿದರೆ, ನೈಟ್ ರೈಡರ್ಸ್ ಹಾಗೂ ಗೋಲ್ಡನ್ ರಾಕರ್ಸ್ ತಂಡಗಳು ನೀರಸ ಪ್ರದರ್ಶನದೊಂದಿಗೆ ಹೊರಗುಳಿದವು. ಬಳಿಕ ನಾಲ್ಕು ತಂಡಗಳ ನಡುವೆ ಹಣಾಹಣಿ ಏರ್ಪಟ್ಟು ಜಂಪ್ ಸ್ಮಾಶ್ ಹಾಗೂ ಆಯುಧಿ ತಂಡಗಳು ಫೈನಲ್ ತಲುಪಿದವು. ಅಂತಿಮವಾಗಿ ಆಯುಧಿ ಉತ್ತಮ ಪ್ರದರ್ಶನ ತೋರುವ ಮೂಲಕ ಮೊದಲ ಬಹುಮಾನ 30 ಸಾವಿರ ರೂ ಹಾಗೂ ಆಕರ್ಷಕ ಟ್ರೋಫಿ ತನ್ನದಾಗಿಸಿಕೊಂಡಿತು. ಜಂಪ್ ಸ್ಮಾಶ್ ತಂಡ ದ್ವಿತೀಯ ಬಹುಮಾನ ರೂ.20 ಸಾವಿರ ಹಾಗೂ ಆಕರ್ಷಕ ಟ್ರೋಫಿ ಪಡೆದರೆ, ಟೀಮ್ ಎಇ ಮೂರನೇ ಬಹುಮಾನ ರೂ 10 ಸಾವಿರ…

Read More

ಮಡಿಕೇರಿ ಮಾ.9 NEWS DESK : ಸೋಮವಾರಪೇಟೆ ತಾಲ್ಲೂಕಿನ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ ನೀಡಿದರು. ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಡವಾರೆಯಿಂದ ಯಡವನಾಡು ರಸ್ತೆ ಕಾಮಗಾರಿ, ಹರದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸತೋಟ ಶಾಲಾ ಮುಂಬಾಗದ ರಸ್ತೆ, ಮಾದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೂತನ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿ ಶಾಸಕರು, ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಕ್ಷೇತ್ರ ವ್ಯಾಪ್ತಿಯಲ್ಲಿ ಈಗಾಗಲೇ ಹಲವಾರು ರಸ್ತೆಗಳ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ. ನಿಗದಿತ ಸಮಯದಲ್ಲಿ ಗುಣಮಟ್ಟದ ಕಾಮಗಾರಿಯನ್ನು  ನಡೆಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸ್ಥಳೀಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಸಾರ್ವಜನಿಕರು ಹಾಜರಿದ್ದರು.

Read More

ನಾಪೋಕ್ಲು ಮಾ.9 NEWS DESK : ಮಹಾಶಿವರಾತ್ರಿ ಪ್ರಯುಕ್ತ ನಾಪೋಕ್ಲುವಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯಿತು. ಸಮೀಪದ ಪೇರೂರು ಗ್ರಾಮದ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಶಿವರಾತ್ರಿ ದಿನ ವಾರ್ಷಿಕೋತ್ಸವ ನಡೆಯಿತು. ಉತ್ಸವದ ಅಂಗವಾಗಿ ವಿಶೇಷ ಪೂಜೆ, ರುದ್ರಾಭಿಷೇಕ ಮತ್ತು ಮಹಾಪೂಜೆ ಜರುಗಿತು. ಮಧ್ಯಾಹ್ನ ಭಕ್ತರಿಂದ ತುಲಾಭಾರ ಸೇವೆಗಳನ್ನು ನಡೆಸಲಾಯಿತು. ಪೂಜೆಯ ಬಳಿಕ ಭಕ್ತರಿಗೆ ತೀರ್ಥ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಮಧ್ಯಾಹ್ನ ಉತ್ಸವದ ಅಂಗವಾಗಿ ವಿಶೇಷವಾಗಿ ದೇವಾಲಯದ ಆವರಣದಲ್ಲಿ ಗ್ರಾಮಸ್ಥರಿಂದ ಬೊಳಕಾಟ್ ಪ್ರದರ್ಶನ ನಡೆಯಿತು. ಇಗ್ಗುತ್ತಪ್ಪ ದೇವರ ಉತ್ಸವ ಜರುಗಿತು. ಅಪಾರ ಸಂಖ್ಯೆಯಲ್ಲಿ ಸೇರಿದ್ದ ಭಕ್ತರು ಉತ್ಸವದಲ್ಲಿ ಪಾಲ್ಗೊಂಡು ದೇವರ ನೃತ್ಯಬಲಿ ವೀಕ್ಷಿಸಿದರು. ದೇವಾಲಯದ ಅರ್ಚಕ ಗಿರೀಶ್ ನೇತೃತ್ವದಲ್ಲಿ ತಂತ್ರಿಗಳಾಗಿ ಗೋಪಾಲಕೃಷ್ಣ ಕೆದಿಲಾಯ ರುದ್ರಾಭಿಷೇಕ ಸೇರಿದಂತೆ ಇನ್ನಿತರ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿಕೊಟ್ಟರು. ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಮಚ್ಚುರ ರವೀಂದ್ರ ಮಾತನಾಡಿ, ದೇವಸ್ಥಾನದಲ್ಲಿ ಪ್ರತಿವರ್ಷ ಶಿವರಾತ್ರಿಯಂದು ವಾರ್ಷಿಕೋತ್ಸವವನ್ನು ಆಚರಿಸಲಾಗುತ್ತದೆ. ಬೆಳಿಗ್ಗೆ ಆರು ಗಂಟೆಯಿಂದ ಆರಂಭಗೊಂಡು ದಿನಪೂರ್ತಿ ಕಾರ್ಯಕ್ರಮ…

Read More