ಮಡಿಕೇರಿ ಮಾ.9 NEWS DESK : ಮಹಾಶಿವರಾತ್ರಿ ಅಂಗವಾಗಿ ಚೆಟ್ಟಳ್ಳಿಯ ಈರಳೆ ವಳಮುಡಿ ಗ್ರಾಮದಲ್ಲಿರುವ ಪಂಚಮುಖಿ ವಾಯುಪುತ್ರ ಮೂರ್ತಿ, ಚೆಟ್ಟಳ್ಳಿ ಸಹಕಾರ ಸಂಘದ ಮುಖ್ಯ ಕಚೇರಿ ಮುಂದಿರುವ ಪಶುಪತಿನಾಥ, ಕಾವೇರಿ ಮಾತೆ, ಶ್ರೀ ಕೃಷ್ಣ, ಗೋಮಾತೆ ಹಾಗೂ ಶ್ರೀ ನರೇಂದ್ರ ಮೋದಿ ಸಹಕಾರ ಭವನದಲ್ಲಿರುವ ಶ್ರೀ ವಿನಾಯಕ, ವೀರಾಂಜನೇಯ ಹಾಗೂ ಮಹಾವಿಷ್ಣುವಿನ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಚೆಟ್ಟಳ್ಳಿ ಸಹಕಾರ ಸಂಘದ ಅಧ್ಯಕ್ಷ ಹಾಗೂ ಜನಪರ ಹೋರಾಟ ಸಮಿತಿಯ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ಅವರ ನೇತೃತ್ವದಲ್ಲಿ ಚೆಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಶ್ರೀ ವೀರಾಂಜನೇಯ ಯುವಕ ಸಂಘ, ಶ್ರೀ ಗೌರಿಗಣೇಶೋತ್ಸವ ಸಮಿತಿ, ಕೂಡ್ಲೂರು ಶ್ರೀ ವಿನಾಯಕ ದೇವಾಲಯ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ನಾಲ್ಕನೇ ವರ್ಷದ ಮಹಾಶಿವರಾತ್ರಿಯನ್ನು ವಿವಿಧ ಪೂಜಾ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು. ಅಲಂಕಾರದೊಂದಿಗೆ ದೀಪಾರಾಧನೆ ಹಾಗೂ ವಿಶೇಷಪೂಜೆ ಸಲ್ಲಿಸಲಾಯಿತು. ನಂತರ ಮಹಾ ಮಂಗಳಾರತಿ ಪ್ರಸಾದ ವಿತರಣೆ ನೆರವೇರಿತು. ಮಕ್ಕಳು ಅಣತೆ ಬೆಳಗಿದರು. ನಂತರ ಸಹಕಾರ…
ಲೇಖಕ: admin
ಮಡಿಕೇರಿ ಮಾ.9 NEWS DESK : ವಿರಾಜಪೇಟೆಯ ಬಾಳುಗೊಡು ಗ್ರಾಮದ ಕೊಡಗು ಹೆಗ್ಗಡೆ ಸಮಾಜದ ನಿವೇಶನದಲ್ಲಿನ ಸಭಾಂಗಣದ ಮುಂಭಾಗದಲ್ಲಿ ಸಾಂಪ್ರದಾಯಿಕ ಶೈಲಿಯ ನೂತನ ಸಾಂಸ್ಕೃತಿಕ ಭವನ ನಿರ್ಮಾಣ ಮಾಡಲು ಕೊಡಗು ಹೆಗ್ಗಡೆ ಸಮಾಜದ ಆಡಳಿತ ಮಂಡಳಿಯ ಪದಾಧಿಕಾರಿಗಳು ಸಮಾಜದ ಅಧ್ಯಕ್ಷ ಪಡಿಞರಂಡ ಅಯ್ಯಪ್ಪ ಅವರ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ನಡೆಸಿದರು. ಸಮಾಜದ ಉಪಾಧ್ಯಕ್ಷ ಕೊರಕುಟ್ಟೀರ ಸರಾ ಚಂಗಪ್ಪ ಮಾತನಾಡಿ, ಸಾಂಸ್ಕೃತಿಕ ಭವನ ನಿರ್ಮಾಣ ಮಾಡುವುದರಿಂದ ವರ್ಷದ ಎಲ್ಲಾ ರುತುಗಳಲ್ಲಿ ಜಾನಪದ ಕಲೆಗಳನ್ನು ಅಭ್ಯಾಸ ಮಾಡಲು ಮತ್ತು ಸಮಾರಂಭಗಳು ನಡೆದಾಗ ಕಲಾ ತಂಡಗಳಿಂದ ಜಾನಪದ ಕಲೆಗಳ ಪ್ರದರ್ಶನಕ್ಕೂ ಮತ್ತು ವಸ್ತು ಪ್ರದರ್ಶನಕ್ಕೂ ಸಾಕಷ್ಟು ಸ್ಥಳಾವಕಾಶ ಲಭ್ಯವಾಗಲಿದೆಯೆಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸಮುದಾಯ ಭವನ ನಿರ್ಮಾಣಕ್ಕೆ ಅಂದಾಜು 28 ಲಕ್ಷ ರುಪಾಯಿಗಳ ನೀಲಿ ನಕಾಶೆ ತಯಾರಿಸಲಾಗಿದ್ದು, ಆರ್ಥಿಕ ನೆರವಿಗಾಗಿ ಶಾಸಕರ ಮೂಲಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸುವ ಪ್ರಯತ್ನ ಮಾಡುವುದರೊಂದಿಗೆ ಸಮಾಜದ ನಿಧಿಯಲ್ಲಿ ಇರುವ ಹಣವನ್ನು ಬಳಸಿಕೊಂಡು ಅಗತ್ಯ ಬಿದ್ದಲ್ಲಿ ದಾನಿಗಳ ನೆರವನ್ನು ಸಹ…
ಮಡಿಕೇರಿ ಮಾ.9 NEWS DESK : ಮೇಕೇರಿಯ ಶ್ರೀ ಗೌರಿಶಂಕರ ದೇವಾಲಯದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ ನೆರವೇರಿತು. ಮುಂಜಾನೆಯಿಂದಲೇ ಗಣಪತಿ ಹೋಮ, ಈಶ್ವರನಿಗೆ ರುದ್ರಾಭಿಷೇಕ, ಮಹಾ ಮೃತ್ಯುಂಜಯ ಹೋಮ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆಯಿತು. ಗ್ರಾಮದ 8 ದಿಕ್ಕುಗಳಿಂದ ಈಶ್ವರ ಆರಾಧನೆಯ ವಿಶೇಷ ಸೇವೆಯಾಗಿ ಹೊರೆ ಕಾಣಿಕೆ ಮೆರವಣಿಗೆ ಆಕರ್ಷಣಿಯವಾಗಿ ನಡೆಯಿತು. ದೇವಾಲಯದ ಅರ್ಚಕರಾದ ಕೃಷ್ಣ ಭಟ್ ಮತ್ತು ಮಡಿಕೇರಿಯ ರಾಧಾಕೃಷ್ಣ ಭಟ್ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನೆರವೇರಿತು. ಮಹಿಳೆಯರು ಬರಿಗಾಲಿನಲ್ಲಿ ಹೊರೆಕಾಣಿಕೆಯ ಬುಟ್ಟಿಯನ್ನು ತಲೆಯ ಮೇಲೆ ಹೊತ್ತು ಅಕ್ಕಿ, ದೀಪದ ಎಣ್ಣೆ, ಅಡುಣೆ ಎಣ್ಣೆ, ವಿವಿಧ ಬಗೆಯ ತರಕಾರಿ, ಹೂವು, ಹಣ್ಣುಗಳು ಸೇರಿದಂತೆ ವಿವಿಧ ಸಾಮಾಗ್ರಿಗಳನ್ನು ಈಶ್ವರನಿಗೆ ಅರ್ಪಿಸಿದರು. ಚಂಡೆಮೇಳದೊಂದಿಗೆ ನಡೆದ ಮೆರವಣಿಗೆಯಲ್ಲಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಮಧ್ಯಾಹ್ನ ಮಹಾಪೂಜೆಯ ನಂತರ ನೆರೆದಿದ್ದ ಭಕ್ತರಿಗೆ ಅನ್ನದಾನ ನಡೆಯಿತು. ಶಿವರಾತ್ರಿ ಜಾಗರಣೆಯ ಅಂಗವಾಗಿ ಸ್ಥಳೀಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ ಪೌರಾಣಿಕ ಯಕ್ಷಗಾನ…
ಮಡಿಕೇರಿ ಮಾ.9 NEWS DESK : ವಿರಾಜಪೇಟೆಯ ಗೌರಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಜಿಲ್ಲಾಧಿಕಾರಿ ವೆಂಕಟರಾಜಾ, ನಗರದ ಎಲ್ಲಾ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಹಾಗೂ ನಾಗರಿಕರು ಹಾಜರಿದ್ದರು.
ಮಡಿಕೇರಿ ಮಾ.9 NEWS DESK : ಸೋಮವಾರಪೇಟೆ ತಾಲ್ಲೂಕಿನ ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಂಚಮ್ಮನ ಬಾಣೆಯಲ್ಲಿ 10 ಲಕ್ಷ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ್ ಹಾಗೂ ಕಾಂಗ್ರೆಸ್ ಮುಖಂಡರುಗಳು, ಕಾರ್ಯಕರ್ತರು, ಸ್ಥಳೀಯರು ಹಾಜರಿದ್ದರು.
ಸುಂಟಿಕೊಪ್ಪ ಮಾ.9 NEWS DESK : ಕಂಬಿಬಾಣೆ ಶ್ರೀ ರಾಮ ಮತ್ತು ಶ್ರೀ ಚಾಮುಂಡೇಶ್ವರಿ ದೇವಾಲಯದ ವತಿಯಿಂದ ಶಿವರಾತ್ರಿ ಹಬ್ಬದ ಪ್ರಯುಕ್ತ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಿತು. ದೇವಾಲಯದ ಪ್ರಧಾನ ಅರ್ಚಕ ಪ್ರಭಾಕರ್ ಕುದ್ದಣ್ಣಯ್ಯ ಅವರ ನೇತೃತ್ವದಲ್ಲಿ ದೇವರಿಗೆ ವಿಶೇಷ ಪೂಜೆ, ಅಲಂಕಾರ ಪೂಜೆ, ಹೂವಿನ ಪೂಜೆ, ನೈವೇದ್ಯ ಪೂಜೆ ನಡೆದು ನಂತರ ನೆರದಿದ್ದ ನೂರಾರು ಭಕ್ತರ ಸಮ್ಮುಖದಲ್ಲಿ ಸತ್ಯನಾರಾಯಣ ಪೂಜೆ ನಡೆಯಿತು. ಮಹಾಪೂಜೆ, ಮಹಾಮಂಗಳಾರತಿ ನಂತರ ನೆರೆದದ್ದ ಭಕ್ತಾಧಿಗಳಿಗೆ ತೀರ್ಥಪ್ರಸಾದ ಅನ್ನಸಂತರ್ಪಣೆ ನಡೆಯಿತು. ದೇವಾಲಯ ಸಮಿತಿ ಅಧ್ಯಕ್ಷ ಡಾ.ಶಶಿಕಾಂತ್ ರೈ, ಕಾರ್ಯದರ್ಶಿ ಗಣೇಶ್, ಖಜಾಂಚಿ ಅಜಿತ್ ಹಾಗೂ ಸಮಿತಿಯ ಪದಾಧಿಕಾರಿಗಳಾದ ಜಯಂತ್, ರವಿ, ಸುಬ್ರಯ, ಚಿದಾನಂದ, ಗಂಗಾಧರ, ಮಂಜುನಾಥ್ ರೈ ಸೇರಿದಂತೆ ಇತರರು ಹಾಜರಿದ್ದರು. ಸುಂಟಿಕೊಪ್ಪ, ಕೊಡಗರಹಳ್ಳಿ, ಪನ್ಯ, ಉಪ್ಪುತೋಡು, ಕಂಬಿಬಾಣೆ, ಕುಶಾಲನಗರದಿಂದ ಭಕ್ತರು ಆಗಮಿಸಿ ಸಾಮೂಹಿಕ ಸತ್ಯನಾರಾಯಣ ಪೂಜೆಯಲ್ಲಿ ಭಾಗಿಯಾಗಿದ್ದರು. ಸಮೀಪದ ಕೊಡಗರಹಳ್ಳಿ, ಶ್ರೀ ಬೈತೂರಪ್ಪ ಪೂವ್ವದಿ, ಬಸವೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ, ಆರಾಧನೆ ನಡೆಯಿತು. ನಂತರ ಮಹಾಮಂಗಳಾರತಿ,…
ಸುಂಟಿಕೊಪ್ಪ ಮಾ.9 NEWS DESK : ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ಮತ್ತು ಸುಂಟಿಕೊಪ್ಪ ಕೊಡವ ಕೂಟದ ಲೋಪಮುದ್ರೆ ಪೊಮ್ಮಕ್ಕಡ ಸಂಘದ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸುಂಟಿಕೊಪ್ಪ ಕೊಡವ ಸಮಾಜದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಪದ್ಮಶ್ರೀ ಪುರಸ್ಕøತರಾದ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ, ಹಿರಿಯ ಜಾನಪದ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ಅಧ್ಯಕ್ಷ ಬಾಚರಣಿಯಂಡ ರಾಣು ಅಪ್ಪಣ್ಣ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸುಂಟಿಕೊಪ್ಪ ಸಮಾಜದ ಅಧ್ಯಕ್ಷರಾದ ಕೇಂದ್ರಿಮಾಡ ಡಾಲಿ ಕರುಂಬಯ್ಯ ಮತ್ತು ಲೋಪಮುದ್ರ ಪೊಮ್ಮಕ್ಕಡ ಸಂಘದ ಮಾಜಿ ಅಧ್ಯಕ್ಷರಾದ ಬೊಳಂದಡ ಸರೋಜಿನಿ ದೇವಯ್ಯ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ಕುರಿತು ವಿಚಾರ ಮಂಡನೆ, ಉಮ್ಮತಾಟ್, ಹಾಸ್ಯಮಂಜರಿ, ವಾಲತ್ತಾಟ್ ಪೈಪೋಟಿ ಸೇರಿದಂತೆ ವಿವಿಧ ಮನೋರಂಜನ ಕಾರ್ಯಕ್ರಮಗಳು ನಡೆದವು. ಕಾರ್ಯಕ್ರಮದಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹೊರತಂದ ಪುಸ್ತಕಗಳು ಮಾರಾಟ ನಡೆಯಿತು.…
ನಾಪೋಕ್ಲು ಮಾ.9 NEWS DESK : ನದಿ ಮತ್ತು ನದಿ ಮೂಲಗಳಿಂದ ಪಂಪ್ ಸೆಟ್ ಬಳಸಿ ನೀರು ತೆಗೆಯುವುದನ್ನು ಕೊಡಗು ಜಿಲ್ಲಾಡಳಿತ ನಿಷೇಧಿಸಿದ್ದು. ಕಾಫಿ ಬೆಳೆಗಾರ ಹಿತ ದೃಷ್ಟಿಯಿಂದ ಜಿಲ್ಲಾಧಿಕಾರಿಗಳು ತಮ್ಮ ಆದೇಶವನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಬಿಜೆಪಿ ಕೃಷಿ ಮೋರ್ಚಾ ಮತ್ತು ಕಾಫಿ ಬೆಳೆಗಾರರು ನಾಪೋಕ್ಲು ಉಪತಾಹಸಿಲ್ದಾರ್ ಸುನಿಲ್ ಕುಮಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಮನವಿ ಸಲ್ಲಿಸಿದರು. ಈ ಸಂದರ್ಭ ಜಿಲ್ಲಾ ಕೃಷಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿವಚಾಳಿಯಂಡ ಜಗದೀಶ್ ಮಾತನಾಡಿ , ಕೊಡಗಿನಲ್ಲಿ ಕಾಫಿ ಬೆಳೆಯನ್ನು ನಂಬಿಕೊಂಡು ಹೆಚ್ಚಿನ ಸಂಖ್ಯೆಯ ಬೆಳೆಗಾರರು ಹಾಗೂ ಕಾರ್ಮಿಕರು ಜೀವನ ಸಾಗಿಸುತ್ತಿದ್ದಾರೆ. ವರ್ಷಕ್ಕೆ ಒಂದು ಬಾರಿ ಕಾಫಿ ತೋಟಕ್ಕೆ ನೀರು ಹಾಯಿಸುವ ಸಮಯ ಇದಾಗಿದೆ. ಆದರೆ ಇದೀಗ ಜಿಲ್ಲಾಡಳಿತ ಏಕಾಏಕಿ ನದಿ ಮೂಲಗಳಿಂದ ನೀರು ತೆಗೆಯದಂತೆ ಆದೇಶ ಹೊರಡಿಸಿದ್ದು ಬೆಳೆಗಾರರ ಆತಂಕಕ್ಕೆ ಕಾರಣವಾಗಿದೆ ಎಂದರು. ಕಾಫಿ ಬೆಳೆಗಾರರ ಒಕ್ಕೂಟದ ಹೋಬಳಿ ಅಧ್ಯಕ್ಷ ಕುಡ್ಯೋಳಂಡ ರಮೇಶ್ ಮುದ್ದಯ್ಯ ಮಾತನಾಡಿ, ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶದಿಂದ ಬೆಳೆಗಾರರು ಕಂಗಾಲಾಗಿದ್ದಾರೆ.…
ನಾಪೋಕ್ಲು ಮಾ.9 NEWS DESK : ಬೊಟ್ಟೊಳ೦ಡ ಕುಟುಂಬಸ್ಥರು ಆಯೋಜಿಸಿರುವ ಕೊಡವ ಕುಟುಂಬಗಳ ನಡುವಿನ ಹಗ್ಗ ಜಗ್ಗಾಟ ಸ್ಪರ್ಧೆಯು ಏ.18 ರಿಂದ 21ರವರೆಗೆ ಜೂನಿಯರ್ ಕಾಲೇಜ್ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕ್ರೀಡಾ ಸಮಿತಿಯ ಅಧ್ಯಕ್ಷ ಬೊಟ್ಟೋಳಂಡ ಗಣೇಶ್ ಹೇಳಿದರು. ಶ್ರೀ ಭಗವತಿ ದೇವಾಲಯದ ಸಭಾಂಗಣದಲ್ಲಿ ಆಯೋಜಿಸಿದ ಕ್ರೀಡಾ ಸಮಿತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಗಣೇಶ್, ಸಾರ್ವಜನಿಕರಿಗೆ ಮತ್ತು ಮಹಿಳೆಯರಿಗೆ ಪ್ರತ್ಯೇಕವಾದ ಸ್ಪರ್ಧೆಗಳಿದ್ದು, ಇದೀಗಾಗಲೇ ಹಲವು ಕುಟುಂಬಗಳು ನೊಂದಾವಣಿ ಮಾಡಿಕೊಂಡಿದೆ. ಬಾಕಿ ಉಳಿದ ಕುಟುಂಬಗಳು ಮಾ.15 ರ ಹೆಸರು ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಿದರು. ಈ ಸಂದರ್ಭ ಸ್ಪರ್ಧಾ ಕಾರ್ಯಕ್ರಮದ ಬಗ್ಗೆ ಚರ್ಚಿಸಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು. ಸಭೆಯಲ್ಲಿ ಸಂಚಾಲಕ ಮಿಟ್ಟು ಪೂಣಚ್ಚ, ಸದಸ್ಯರಾದ ರವಿ ಕರಂಬಯ್ಯ ,ಮದನ್, ಮೊಣ್ಣಪ್ಪ, ರಂಜಿ, ಆರ್ಯನ್, ಸುಜು ಹಾಗೂ ಕುಟುಂಬಸ್ಥರು ಹಾಜರಿದ್ದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಮಾ.9 NEWS DESK : ಮೂರ್ನಾಡು ಪ್ರಥಮ ದರ್ಜೆ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು. ಭಾರತದ ಸಂವಿಧಾನದಲ್ಲಿ ಮತದಾನ ಪ್ರಕ್ರಿಯೆ ಎಂಬುದು ಎಷ್ಟು ಮುಖ್ಯ ಎಂಬುದನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಡಲಾಯಿತು. ಪ್ರತಿಯೊಬ್ಬರು ಮತದಾನವನ್ನು ಕಡ್ಡಾಯವಾಗಿ ಮಾಡಬೇಕು. ಜಾತಿ, ಪಕ್ಷ, ಭೇದವನ್ನು ಮರೆತು ಉತ್ತಮ ವ್ಯಕ್ತಿಗಳನ್ನು ಬೆಂಬಲಿಸಬೇಕು ಎಂದು ತಿಳಿಸಲಾಯಿತು. ಮತದಾನ ಜಾಗೃತಿ ಕುರಿತಾಗಿ ದ್ವಿತೀಯ ಬಿಕಾಂ ವಿದ್ಯಾರ್ಥಿಗಳಾದ ಕುಮಾರಿ ದೇಚಮ್ಮ ಹಾಗೂ ಅರ್ಜುನ್ ಮಾತನಾಡಿದರು. ಅಲ್ಲದೆ ಪ್ರಾಂಶುಪಾಲರಾದ ಡಾ. ರೇಖ ಚಿಣ್ಣಪ್ಪ ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಿದರು. ಹಾಗೂ ಎಲ್ಲಾ ವಿದ್ಯಾರ್ಥಿಗಳಿಂದ ಹಾಗೂ ಉಪನ್ಯಾಸಕರಿಂದ ” I ಗಿಔಖಿಇ” ಫಲಕಕ್ಕೆ ಸಹಿ ಸಂಗ್ರಹಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು ವಿದ್ಯಾರ್ಥಿಗಳು ಹಾಜರಿದ್ದರು. ವರದಿ : ದುಗ್ಗಳ ಸದಾನಂದ.






