ಮಡಿಕೇರಿ ಮೇ 5 NEWS DESK : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪತ್ರಿಕಾ ಪ್ರವಾಸದ ಉಪಯೋಗಕ್ಕಾಗಿ ಹೊಸದಾಗಿ ಕೊಡಗು ಜಿಲ್ಲೆಗೆ ಒದಗಿಸಲಾಗಿರುವ ಮಿನಿ ಬಸ್ಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ನಗರದ ಜಿ.ಪಂ.ಭವನದ ಆವರಣದಲ್ಲಿ ಮಂಗಳವಾರ ಹಸಿರು ನಿಶಾನೆ ತೋರಿದರು. ಜಿಲ್ಲೆಯ ಪತ್ರಕರ್ತರು, ಶಾಸಕದ್ವಯರು ಹಾಗೂ ಸರ್ಕಾರ ಹೀಗೆ ಎಲ್ಲರ ಪ್ರಯತ್ನದಿಂದ ಜಿಲ್ಲೆಗೆ 32 ಆಸನದ ಮಿನಿ ಬಸ್ ಹಂಚಿಕೆ ಮಾಡಿದೆ ಎಂದು ಸಚಿವರು ತಿಳಿಸಿದರು. ಶಾಸಕರಾದ ಡಾ.ಮಂತರ್ ಗೌಡ ಅವರು ಮಿನಿ ಬಸ್ನ್ನು ಸ್ವತ: ಚಾಲನೆ ಮಾಡಿ ಉದ್ಘಾಟಿಸಿದರು. ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಪ್ರಾದೇಶಿಕ ಸಾರಿಗೆ ಅಧಿಕಾರಿ…
ಲೇಖಕ: admin
ಮಡಿಕೇರಿ ಮೇ 5 NEWS DESK : ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆ ಇದ್ದು, ರಸ್ತೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ತಾಕೀತು ಮಾಡಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೊಡಗು ಜಿಲ್ಲೆಯಾದ್ಯಂತ ಲೋಕೋಪಯೋಗಿ, ಪಂಚಾಯತ್ ರಾಜ್ ವ್ಯಾಪ್ತಿಯ ರಸ್ತೆಗಳ ಗುಂಡಿ ಮುಚ್ಚುವುದು ಸೇರಿದಂತೆ ಅಗತ್ಯ ಕಾಮಗಾರಿ ಕೈಗೊಳ್ಳಬೇಕು ಎಂದು ಸಚಿವರು ನಿರ್ದೇಶನ ನೀಡಿದರು. ಈ ಕುರಿತು ಮಾತನಾಡಿದ ಶಾಸಕರಾದ ಡಾ.ಮಂತರ್ಗೌಡ ಅವರು ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಜೊತೆಗೆ ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಸೂಚಿಸಿದರು. ಐಗೂರು ಸೇತುವೆ ಶೀಘ್ರ ನಿರ್ಮಾಣ ಮಾಡಬೇಕು. ಗಾಳಿಬೀಡು ರಸ್ತೆ ಸರಿಪಡಿಸಬೇಕು. ಹಾಗೆಯೇ ಮುಟ್ಲು, ಹಮ್ಮಿಯಾಲ, ದೇವಸ್ತೂರು, ಹಂಚಿನಾಡು ಮತ್ತಿತರ ರಸ್ತೆಯನ್ನು ನಿರ್ವಹಿಸುವಂತೆ…
ಮಡಿಕೇರಿ ಮೇ 5 NEWS DESK : ಪ್ರಾಮಾಣಿಕ ರೀತಿಯಲ್ಲಿ ತಮ್ಮ ಶ್ರೀಮಂತ ಮತ್ತು ವಿಶಿಷ್ಟವಾದ ಮೂಲ ಸಂಸ್ಕೃತಿಯನ್ನು ಸಂರಕ್ಷಿಸಿಕೊಂಡು ಹೋಗುವ ಮೂಲಕ ಕೊಡವ ಸಮುದಾಯವರು ಮಾದರಿಯಾಗಿದ್ದಾರೆ. ಈ ಮೂಲಕ . ಪ್ರಪಂಚದಲ್ಲಿಯೇ ಕೊಡವರು ತನ್ನತವನ್ನು ಮೆರೆಯುತ್ತಿದ್ದಾರೆ ಎಂದು ಹಾವೇರಿ ಕ್ಷೇತ್ರದ ಸಂಸದ , ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶ್ಲಾಘಿಸಿದ್ದಾರೆ. ಕೊಡವರ ಪ್ರಾಮಾಣಿಕತೆ ಇಂದಿನ ಸಮಾಜದ ಅತ್ಯಗತ್ಯವಾಗಿದ್ದು, ಜಗತ್ತು ಕೂಡ ಪ್ರಾಮಾಣಿಕ ಜನರನ್ನೇ ಇಂದಿನ ದಿನಗಳಲ್ಲಿ ಹೆಚ್ಚು ಬಯಸುತ್ತಿದೆ ಎಂದೂ ಅವರು ಹೇಳಿದರು. ಮಾದಾಪುರ ಕೊಡವ ಸಮಾಜದ ನೂತನ ಭವನ ಲೋಕಾಪ೯ಣೆ ಮಾಡಿ ಅವರು ಮಾತನಾಡಿದರು. ಎಲ್ಲರೂ ಆಧುನೀಕತೆಯತ್ತ ನಾಗಾಲೋಟದಲ್ಲಿ ಸಾಗುತ್ತಿರುವಾಗ ಕೊಡವರು ಮಾತ್ರ ತಮ್ಮ ಹಳೇ ಸಂಸ್ಕೃತಿಯ ಬುನಾದಿಯೊಂದಿಗೆ ಆಧುನೀಕತೆಯನ್ನೂ ಅಳವಡಿಸಿಕೊಂಡು ಪ್ರಬಲ ಮತ್ತು ಶ್ರೀಮಂತ ಸಂಸ್ಕೃತಿಯನ್ನು ಹೊಂದಿದ ಜನಾಂಗವಾಗಿದ್ದಾರೆ ಎಂದು ಶ್ಲಾಘಿಸಿದ ಬಸವರಾಜ ಬೊಮ್ಮಾಯಿ ಕೊಡವರ ಈ ಜೀವನ ಕ್ರಮ ಎಲ್ಲಾ ಸಮುದಾಯಕ್ಕೂ ಮಾದರಿಯಾಗಿದೆ ಎಂದರು. ತೀವ್ರ ರೀತಿಯಲ್ಲಿ ಬೆಳೆಯುತ್ತಾ ಸಾಗಿರುವ ನಮ್ಮ ನಾಗರೀಕತೆಯಲ್ಲಿ ಯಾವಾಗ ನಾವು…
ಮಡಿಕೇರಿ ಮೇ 5 NEWS DESK : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಡಿಕೇರಿಯ ಇಕ್ಷಾ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಯಿತು. ಇಕ್ಷಾ ಆಸ್ಪತ್ರೆಯಲ್ಲಿ ನೇತ್ರ ತಜ್ಞ ಡಾ. ಅಜ್ಜಿನಿಕಂಡ ಚಿಣ್ಣಪ್ಪ ನೇತೃತ್ವದ ವೈದ್ಯಕೀಯ ತಂಡದವರು ಪತ್ರಕರ್ತರ ಕಣ್ಣಿನ ತಪಾಸಣೆ ನಡೆಸಿದರು. 25ಕ್ಕೂ ಹೆಚ್ಚು ಪತ್ರಕರ್ತರು ಶಿಬಿರದ ಪ್ರಯೋಜನ ಪಡೆದುಕೊಂಡರು. ಈ ಸಂದರ್ಭ ಮಾತನಾಡಿದ ಡಾ. ಚಿಣ್ಣಪ್ಪ, ಪ್ರತಿಯೊಬ್ಬರು ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಬೇಕು. ನಿಯಮಿತವಾಗಿ ತಪಾಸಣೆ ಮಾಡಿಸಿಕೊಳ್ಳಬೇಕು. ಮೊಬೈಲ್ ಹಾಗೂ ಗಣಕಯಂತ್ರ ಬಳಕೆಯಿಂದ ದೃಷ್ಟಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು, ಎಚ್ಚರಿಕೆ ಅತ್ಯವಶ್ಯಕ ಎಂದು ಸಲಹೆ ನೀಡಿದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕಿ ಬಿ.ಆರ್. ಸವಿತಾ ರೈ, ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಜೆ. ರಾಕೇಶ್, ಉಪಾಧ್ಯಕ್ಷ ನವೀನ್ ಸುವರ್ಣ, ಕುಶಾಲನಗರ ತಾಲೂಕು ಘಟಕ ಅಧ್ಯಕ್ಷ ಎಂ.ಎನ್.…
ಮಡಿಕೇರಿ ಮೇ 5 NEWS DESK : ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪೊನ್ನಂಪೇಟೆಯಲ್ಲಿ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಪಟ್ಟಣದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ ಕಾರ್ಯಕರ್ತರು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ಪರ ಘೋಷಣೆಗಳನ್ನು ಕೂಗಿದರು. ಮುಂದಿನ ದಿನಗಳಲ್ಲಿ ದೇಶದ ಎಲ್ಲಾ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನೆಲ್ಲಿರ ಚಲನ್ ಕುಮಾರ್, ತಾಲ್ಲೂಕು ಕಾರ್ಯದರ್ಶಿ ಕೋಟೇರ ಕಿಶನ್ ಉತ್ತಪ್ಪ, ವಿರಾಜಪೇಟೆ ಮಂಡಲ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ, ಪ್ರಧಾನ ಕಾರ್ಯದರ್ಶಿ ಆಲೇಮಾಡ ಸುದೀಪ್, ಪ್ರಮುಖರಾದ ಚಿರಿಯಪಂಡ ರಾಜಾ ನಂಜಪ್ಪ, ಚಿಂಡಮಾಡ ರಕ್ಷಿತ್, ಮೂಕಳೇರ ಲಕ್ಷ್ಮಣ್, ಮೂಕಳೇರ ರಮೇಶ್, ಅಡ್ಡಂಡ ಪ್ರಕಾಶ್, ಎಸ್ಸಿ ಮೋರ್ಚಾದ ರಮೇಶ್, ಮಧು, ಕೊಟ್ಟಂಗಡ ಸಜನ್ ಪೂವಣ್ಣ, ರೇಖಾ ಶ್ರೀಧರ್, ಗಾಂಡಂಗಡ ಕೌಶಿಕ್ ದೇವಯ್ಯ, ಕೋಳೇರ ರಾಜ ಹಾಗೂ ಕಾರ್ಯಕರ್ತರು…
ಮಡಿಕೇರಿ ಮೇ 5 NEWS DESK : ಮಡಿಕೇರಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಮೂಲಕ 5.50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಅನ್ನು 19ನೇ ಕರ್ನಾಟಕ ಬೆಟಾಲಿಯನ್ ಎನ್ಸಿಸಿ ಕಮಾಂಡಿಂಗ್ ಆಫೀಸರ್ ಕರ್ನಲ್ ರೆಜಿತ್ ಮುಕುಂದನ್ ಮತ್ತು ಕೊಡಗು ವಿ.ವಿ ಉಪ ಕುಲಪತಿ ಫ್ರೋ.ಅಶೋಕ್ ಸಂಗಪ್ಪ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಕರ್ನಲ್ ರೆಜಿತ್ ಮುಕುಂದನ್ ಮಡಿಕೇರಿ ಮುತ್ತ ಮುತ್ತಲಿನ ಪ್ರದೇಶದಲ್ಲಿ ಎನ್ಸಿಸಿ ಕೆಡೆಟ್ಗಳಿಗೆ ಫೈರಿಂಗ್ ರೇಂಜ್ ಇಲ್ಲದಾಗಿತ್ತು. 19ನೇ ಕರ್ನಾಟಕ ಎನ್ಸಿಸಿ ಬೆಟಾಲಿಯನ್ಗೆ ಈ ರೈಫಲ್ ಫೈರಿಂಗ್ ರೇಂಜ್ ಅಮೂಲ್ಯವಾಗಿದ್ದು, ಕೆಡೆಟ್ಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು. ಫೈರಿಂಗ್ ರೇಂಜ್ನ ಅಗತ್ಯತೆಯನ್ನು ಮನಗಂಡು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘ ಕಾಲೇಜು ಮೈದಾನದ ಪಕ್ಕದಲ್ಲೇ ಎನ್ಸಿಸಿಗೆ ಕೊಡುಗೆಯಾಗಿ ನೀಡಿರುವುದಕ್ಕೆ ಕರ್ನಲ್ ರೆಜಿತ್ ಮುಕುಂದನ್ ಶ್ಲಾಘನೆ ವ್ಯಕ್ತಪಡಿಸಿದರು. :: ದೇಶ ಸೇವೆಗೆ…
ಮಡಿಕೇರಿ ಮೇ 5 NEWS DESK : ಮಡಿಕೇರಿ ನಗರದ ಹೊರವಲಯದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ಬೆಳಿಗ್ಗೆ ಧ್ವಜಾರೋಹಣ, ಗಣಪತಿ ಹೋಮ, ದೇವಿಗೆ ಅಭಿಷೇಕ, ಹೂವಿನ ಅಲಂಕಾರ ನಂತರ ತೀರ್ಥಸ್ನಾನ, ಕಳಸ ಪೂಜೆ ನಡೆಯಿತು. ದೇವಿಯ ರಥೋತ್ಸವ ದೇವಸ್ಥಾನದ ಆವರಣದ ಸುತ್ತಲೂ ಸಾಗಿತು. ತುಲಾಭಾರ, ತಲೆಮುಡಿ ತೆಗೆಯುವುದು, ತೀರ್ಥಸ್ನಾನ, ಉರುಳು ಸೇವೆ, ಕುಂಕುಮ ಅರ್ಚನೆ ಮತ್ತು ಮಂಗಳಾರತಿಯ ನಂತರ ಭಕ್ತರಿಗೆ ಅನ್ನಸಂತರ್ಪಣೆಯಾಯಿತು. ಸಾವಿರಾರು ಭಕ್ತರು ತಾಯಿಯ ದರ್ಶನಕ್ಕೆ ಸಾಕ್ಷಿಯಾದರು. ಸಂಜೆ ದೇವಸ್ಥಾನದ ಆವರಣದಲ್ಲಿ ಭಕ್ತಿ ಪ್ರಧಾನ ಸಾಂಸ್ಕøತಿಕ ಕಾರ್ಯಕ್ರಮಗಳು ಹಾಗೂ ದೀಪಾಲಂಕಾರ ನಡೆಯಿತು. ಪ್ರತಿವರ್ಷದಂತೆ ಈ ವರ್ಷವೂ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಲಾಯಿತು. ರಾತ್ರಿ ಅನ್ನದಾನ ಸೇವೆ, ದೇವಿಯ ದರ್ಶನ ಹಾಗೂ ಪೂಜಾ ಕಾರ್ಯಕ್ರಮ ಶ್ರದ್ಧಾಭಕ್ತಿಯೊಂದಿಗೆ ನಡೆಯುವುದರೊಂದಿಗೆ ವಾರ್ಷಿಕೋತ್ಸವ ಸಂಪನ್ನಗೊಂಡಿತು.
ಮಡಿಕೇರಿ ಮೇ 4 NEWS DESK : ವಿದ್ಯುತ್ ವಿತರಣಾ 66/11 ಕೆ.ವಿ ಉಪಕೇಂದ್ರ ಪೊನ್ನಂಪೇಟೆಯಿಂದ ಹೊರಹೊಮ್ಮುವ ದೇವನೂರು, ಬಾಳೆಲೆ ಹಾಗೂ ನಲ್ಲೂರು ಫೀಡರ್ನಲ್ಲಿ ಮೇ, 05 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತುರ್ತು ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ದೇವನೂರು, ರಾಜಾಪುರ, ಕಿಸ್ತೂರು, ಬಾಳೆಲೆ, ಮಲ್ಲೂರು, ನಿಟ್ಟೂರು, ಕಾರ್ಮಾಡು, ಸುಳುಗೋಡು, ಪೊನ್ನಪ್ಪಸಂತೆ, ಕಿರಗೂರು, ಮತ್ತೂರು, ಕೊಟ್ಟಗೇರಿ, ಕೋಣನಕಟ್ಟೆ, ನಲ್ಲೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಮಡಿಕೇರಿ ಮೇ 4 NEWS DESK : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮನೆಯಂಗಳದಲ್ಲಿ ಮನದುಂಬಿ ಕಾರ್ಯಕ್ರಮದಡಿ ಹಿರಿಯ ಪತ್ರಕರ್ತರ, ಬ್ರಹ್ಮಗಿರಿ ಕೊಡವ ವಾರಪತ್ರಿಕೆ ಸಂಪಾದಕ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಉಳ್ಳಿಯಡ ಎಂ.ಪೂವಯ್ಯ ಅವರನ್ನು ಸನ್ಮಾನಿಸಿಲಾಯಿತು. ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ ನೇತೃತ್ವದಲ್ಲಿ ಆಡಳಿತ ಮಂಡಳಿಯವರು ಹಾಗೂ ಸದಸ್ಯರು ಪೂವಯ್ಯ ಅವರನ್ನು ಸನ್ಮಾನಿಸಿ, ಗೌರವಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಪೂವಯ್ಯ ಅವರು, ಕೊನೆಯ ಉಸಿರು ಇರುವವರೆಗೂ ಪತ್ರಿಕೋದ್ಯಮ ಬಿಡುವ ಪ್ರಶ್ನೆಯೇ ಇಲ್ಲ. ಪತ್ರಕರ್ತನಾಗಿ ಕೆಲಸ ಮಾಡುತ್ತಿರುವುದು ತೃಪ್ತಿ ತಂದಿದೆ. ದಿನಕ್ಕೆ 12 ರಿಂದ 16 ಗಂಟೆಗಳ ಕಾಲ ಪತ್ರಿಕೆಯ ಕೆಲಸದಲ್ಲಿ ತೊಡಗಿಸಿಕೊಂಡಿದ್ದು. ಬ್ರಹ್ಮಗಿರಿ ಪತ್ರಿಕೆ 47 ವರ್ಷ ಪೂರೈಸಿದೆ ಎಂದು ಮಾಹಿತಿಯಿತ್ತರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡಿದ ಈ ಗೌರವ ಅವಿಸ್ಮರಣೀಯವಾಗಿರುತ್ತದೆ. ನನ್ನ ಜೀವನವನ್ನು ಪತ್ರಿಕೆಗಾಗಿ ಮುಡಿಪಾಗಿಟ್ಟಿದ್ದೇನೆ ಎಂದು ತಿಳಿಸಿದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ…
ನಾಪೋಕ್ಲು ಮೇ 4 NEWS DESK : ಮಹಿಳೆಯರು ಸ್ವಾವಲಂಬಿಗಳಾಗಲು ಸಂತೆಮೇಳದಂತಹ ಕಾರ್ಯಕ್ರಮಗಳು ಪ್ರಯೋಜನಕಾರಿ ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಹೇಳಿದರು. ಸ್ಥಳೀಯ ಮಹಿಳಾ ಸಮಾಜದಲ್ಲಿ ಸಂಜೀವಿನಿ ಒಕ್ಕೂಟ ಮತ್ತು ಗ್ರಾಮ ಪಂಚಾಯತಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ಸಂತೆ ಮೇಳ ಕಾರ್ಯಕ್ರಮವನ್ನು ಹಾಗೂ ವಾರ್ಷಿಕ ಸಭೆಯನ್ನು ಉದ್ಘಾಟಿಸಿ, ಅವರು ಮಾತನಾಡಿದರು. ಮಹಿಳೆಯರು ಸಂಘ ಸಂಸ್ಥೆಗಳೊಂದಿಗೆ ತಮ್ಮನ್ನು ತೊಡಗಿಸಿಕೊಂಡು ಸದೃಢರಾಗರಬೇಕೆಂದು ಹಿತನುಡಿಗಳನ್ನು ನಾಡಿ ಒಕ್ಕೂಟದ ಅಧ್ಯಕ್ಷರು, ಸಂಘದ ಸದಸ್ಯರು ಯಾವ ರೀತಿ ಕಾರ್ಯ ನಿರ್ವಹಿಸಬೇಕು ಹಾಗೂ ಕಸ ವಿಲೇವಾರಿಯ ಬಗೆಯು ಚರ್ಚೆಯನ್ನು ನಡೆಸಿದರು. ಸಂಜೀವಿನಿ ಒಕ್ಕೂಟದ ಮುಖ್ಯ ಲೆಕ್ಕ ಪತ್ರ ನಿರ್ವಹಾಕಿ ಯಮುನ ವರ್ಷಕ ವರದಿ ಮಂಡನೆಯನ್ನು ಮಾಡಿದರು. ಕಾರ್ಯಕ್ರಮವದಲ್ಲಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಸುಲೋಚನಾ, ಪಂಚಾಯಿತಿ ಮಾಜಿ ಸದಸ್ಯ ಕಟ್ಟಿ, ಸಂಜೀವಿನಿ ಒಕ್ಕೂಟದ ಮೇಲ್ವಿಚಾರಕ ಕೃತಿಕಾರ ಪ್ರಸ್ತುತ ಸಾಲಿನಲ್ಲಿ ಆಯ್ಕೆಯಾದಂತಹ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶರೀಫ ಹಾಗೂ ಕಾರ್ಯದರ್ಶಿ ಮಂಜುಳಾ, ಸ್ಥಳೀಯ ಸಂಪನ್ಮೂಲ ವ್ಯಕ್ತಿ ರೋಜಾ, ಕೃಷಿ…






