ಮಡಿಕೇರಿ ಜ.7 NEWS DESK : ಕೇರಳದ ಬೈತೂರಿನ ಉತ್ಸವಕ್ಕೆ ಕೊಡಗಿನ ಭಕ್ತ ಜನರನ್ನು ಆಹ್ವಾನಿಸಲು ಬೈತೂರು ದೇವಾಲಯದಿಂದ ಕೋಮರತಚ್ಚನ್ ಕೊಡಗು ಜಿಲ್ಲೆಗೆ ಆಗಮಿಸಿದ್ದಾರೆ. ಜ.7 ರಂದು ಮಡಿಕೇರಿಯ ಶ್ರೀ ಓಂಕಾರೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಇದೇ ಸಂದರ್ಭ ಜಿಲ್ಲಾಧಿಕಾರಿಗಳನ್ನು ಕೂಡ ಭೇಟಿಯಾದರು. ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಚುಮ್ಮಿ ದೇವಯ್ಯ ಮತ್ತಿತರರು ಉಪಸ್ಥಿತರಿದ್ದರು. ಜ.9 ರವರೆಗೆ ಕೊಡಗಿನ ವಿವಿಧ ದೇವಾಲಯಗಳು ಹಾಗೂ ಐನ್ ಮನೆಗೆ ಭೇಟಿ ನೀಡಲಿದ್ದಾರೆ.
ಲೇಖಕ: admin
ಮಡಿಕೇರಿ ಜ.7 NEWS DESK : ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಪ್ರತಿ ಆಸ್ತಿಯ ಇ-ಖಾತಾ, ಬಿ-ಖಾತಾ ಸೃಜಿಸುವುದು ಸರ್ಕಾರ ಕಡ್ಡಾಯಗೊಳಿಸಿದಂತೆ ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಬರುವ ಪ್ರತಿ ಆಸ್ತಿಯ ಮಾಲೀಕರುಗಳು ಆಸ್ತಿಯ ಮಾಲೀಕತ್ವದ ದಾಖಲೆಗಳನ್ನು ನಗರಸಭೆಗೆ ಸಲ್ಲಿಸಿ ಇ-ಖಾತಾ ಪಡೆದುಕೊಳ್ಳಲು ಪತ್ರಿಕಾ ಪ್ರಕಟಣೆ, ಆಟೋ ಪ್ರಚಾರ, ನಗರದ ಪ್ರಮುಖ ಸ್ಥಳಗಳಲ್ಲಿ ಇ-ಖಾತಾ, ಬಿ-ಖಾತಾ ಪಡೆಯುವ ಬಗ್ಗೆ ಮತ್ತು ಇ-ಖಾತಾ, ಬಿ-ಖಾತಾ ಪಡೆಯಲು ಸಲ್ಲಿಸಬೇಕಾದ ದಾಖಲೆಗಳ ವಿವರ ಇರುವ ಪ್ಲೇಕ್ಸ್ಗಳ ಅಳವಡಿಕೆ ಮತ್ತು ಸ್ಥಳೀಯ ಚಾನೆಲ್ಗಳಲ್ಲಿ ಸುದ್ದಿಯಾಗಿ ಪ್ರಚಾರ ಹಾಗೂ ನಗರಸಭೆ ಸಿಬ್ಬಂದಿಗಳು ಪ್ರತಿ ವಾರ್ಡ್, ಪ್ರತಿ ಮನೆಗೆ ಖುದ್ದಾಗಿ ಭೇಟಿ ನೀಡಿ ಇ-ಖಾತಾ ಮಾಡಿಸಿಕೊಳ್ಳದೆ ಇರುವವರಿಗೆ ದಾಖಲೆ ನೀಡಿ ಇ-ಖಾತಾ ಪಡೆಯಲು ತಿಳಿಸಿ ದಾಖಲೆ ನೀಡಿದವರಿಗೆ ಇ-ಖಾತಾ ಸೃಜಿಸಿ ನೀಡುವ ಕೆಲಸವನ್ನು ನಗರಸಭೆಯಿಂದ ಕೈಗೊಂಡಿದ್ದಾರೆ. ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬರುವ ಆಸ್ತಿಗಳಲ್ಲಿ ಇನ್ನೂ ಕೂಡ 3036 ಆಸ್ತಿಯ ಮಾಲೀಕರುಗಳು ಇ-ಖಾತಾ, ಬಿ-ಖಾತಾ ಪಡೆಯಲು ಅವಶ್ಯವಿರುವ ದಾಖಲೆಗಳನ್ನು ಆಸ್ತಿತೆರಿಗೆ…
ಮಡಿಕೇರಿ ಜ.7 NEWS DESK : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್ (ಕೆಸಿಟಿಯು), ಕರ್ನಾಟಕ ತಾಂತ್ರಿಕ ಸಲಹಾ ಸೇವಾ ಸಂಸ್ಥೆ (ಟೆಕ್ಸಾಕ್), ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಕೇಂದ್ರ ಸರ್ಕಾರ ರೂಪಿಸಿರುವ ರೈಸಿಂಗ್ ಅಂಡ್ ಎಕ್ಸಲರೇಟಿಂಗ್ ಎಂಎಸ್ಎಂಇ ಫರ್ಫಾರ್ಮೆನ್ಸ್ (ರ್ಯಾಂಪ್) ರಡಿ ಜೀರೋ ಡಿಪೆಕ್ಟ್ ಅಂಡ್ ಜೀರೋ ಇಪೆಕ್ಟ್ ಮತ್ತು ಎಲ್ಇಎಎನ್ ಯೋಜನೆ ಕುರಿತು ಕುಶಾಲನಗರದ ಪಾಳ್ಯಂ ಎಮರಾಲ್ಡ್ ಸಭಾಂಗಣದಲ್ಲಿ ಎಂಎಸ್ಎಂಇ ಉದ್ದಿಮೆದಾರರಿಗೆ ಒಂದು ದಿನದ ಅರಿವು ಕಾರ್ಯಾಗಾರ ನಡೆಯಿತು. ಕಾರ್ಯಾಗಾರವನ್ನು ಕುಶಾಲನಗರ ಕೂಡ್ಲೂರು ಕೈಗಾರಿಕಾ ಪ್ರದೇಶದ ಉದ್ದಿಮೆದಾರರ ಸಂಘದ ಅಧ್ಯಕ್ಷರಾದ ಪ್ರವೀಣ್ ಎ.ಎನ್.ಅವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಡಿಕೇರಿ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಾದ ಬಿ.ಆರ್. ನಾಗೇಂದ್ರಪ್ರಸಾದ್ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಬೆಂಗಳೂರು ಟೆಕ್ಸಾಕ್ ಮುಖ್ಯ ಸಲಹೆಗಾರರು ಹಾಗೂ ಸಿಇಒ ಸಿದ್ದರಾಜು ಅವರು ರ್ಯಾಂಪ್ ಯೋಜನೆಯ ಬಗ್ಗೆ ಪ್ರಸ್ತಾವಿಕ ಭಾಷಣವನ್ನು ಮಾಡಿದರು. ಸಭೆಯಲ್ಲಿ ಮುಖ್ಯ ಅಥಿತಿಗಳಾಗಿ ಜಿಲ್ಲಾ ಕೈಗಾರಿಕಾ…
ಮೈಸೂರು ಜ.7 NEWS DESK : ಸಾರ್ವಜನಿಕರ ಸಮಸ್ಯೆಗಳು/ಅಹವಾಲುಗಳನ್ನು ಸ್ವೀಕರಿಸುವುದು ಮಾತ್ರವಲ್ಲ, ಅದಕ್ಕೆ ಪರಿಹಾರ ಕೊಡುವುದಕ್ಕೆ ಕೂಡ ನಾನು ಆದ್ಯತೆ ನೀಡುತ್ತೇನೆ. ಈಗಾಗಲೇ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಗನಹಳ್ಳಿ ಗ್ರಾಮದ ಲಕ್ಷ್ಮಿದೇವಿ ಆವರಣದಲ್ಲಿ, ಬೆಲವತ್ತ ಗ್ರಾಮದ ಸಮುದಾಯ ಭವನದಲ್ಲಿ, ಆಲನಹಳ್ಳಿಯ ಬಸವೇಶ್ವರ ದೇವಸ್ಥಾನ ಆವರಣದಲ್ಲಿ ಜನ ಸಂಪರ್ಕ ಸಭೆ ನಡೆಸಿದ ನಂತರ ಸಂಸದರು ಮಾಹಿತಿ ನೀಡಿದ್ದಾರೆ. “ಜನ ಸಂಪರ್ಕ ಸಭೆಗಳು ಮೂಲಕ ಜನರೊಂದಿಗೆ ನಂಟು ಬೆಳೆಯಲು ಅವರ ಸಮಸ್ಯೆಗಳನ್ನು ಖುದ್ದಾಗಿ ತಿಳಿಯಲು ಅನುಕೂಲವಾಗಲಿದೆ ಎಂದರು. ಪ್ರತಿ ಪಂಚಾಯತ್ಗೆ ಭೇಟಿ ನೀಡಿ ಜನರ ಸಮಸ್ಯೆಯನ್ನು ಅರ್ಥಮಾಡಿಕೊಳ್ಳುವುದಲ್ಲದೆ ಅವುಗಳನ್ನು ತ್ವರಿತವಾಗಿ ಪರಿಹರಿಸಲು ಆದ್ಯತೆ ನೀಡುತ್ತೇವೆ. ರೈಲ್ವೆ, ರಸ್ತೆ ಮತ್ತು ಶಾಲಾ ಅಭಿವೃದ್ಧಿ ಮತ್ತು ಕೆಎಸ್ಆರ್ಟಿಸಿ ಬಸ್ ಸಮಸ್ಯೆಗಳ ಬಗ್ಗೆ ನನಗೆ ಹಲವಾರು ಅಹವಾಲುಗಳು ಸಲ್ಲಿಕೆಯಾಗಿದೆ. ಅದೆಲ್ಲವನ್ನು ಬಗೆಹರಿಸಲು ಮುಂದಾಗುತ್ತೇನೆ, ಕೆಲವೊಂದು ಸಮಸ್ಯೆಗಳಿಗೆ ಸ್ಥಳದಲ್ಲೇ…
ಮಡಿಕೇರಿ ಜ.6 NEWS DESK : ನಾಗರಿಕ ಸುರಕ್ಷೆ ಮತ್ತು ಸಂಭಾವ್ಯ ಉಗ್ರ ಕೃತ್ಯಗಳನ್ನು ಪತ್ತೆ ಹಚ್ಚುವ ಮತ್ತು ತಡೆಗಟ್ಟುವ ನಿಟ್ಟಿನಲ್ಲಿ ಇಂದು ಮಡಿಕೇರಿಯ ಬಸ್ ನಿಲ್ದಾಣ, ನ್ಯಾಯಾಲಯ ಮತ್ತು ಇತರ ಕಚೇರಿಗಳಲ್ಲಿ ಜಿಲ್ಲಾ ಪೊಲೀಸ್ ಘಟಕದ ಸ್ಫೋಟಕ ಪತ್ತೆ ದಳದಿಂದ ಸ್ಫೋಟಕ ಪತ್ತೆ ಕಾರ್ಯವನ್ನು ನಡೆಸಲಾಯಿತು.
ಮಡಿಕೇರಿ ಜ.7 NEWS DESK : ಗಡಿಗ್ರಾಮ ಕರಿಕೆ ಭಾಗದ ಪಡಿತರ ಚೀಟಿದಾರರಿಗೆ ಅಕ್ಕಿ ವಿತರಿಸುವ ಕೇಂದ್ರವನ್ನು ಮೂರಕ್ಕೆ ಬದಲಾಗಿ ಒಂದಕ್ಕೆ ಸೀಮಿತಗೊಳಿಸಿರುವ ಕ್ರಮವನ್ನು ಗ್ರಾಮಸ್ಥರು ತೀವ್ರವಾಗಿ ವಿರೋಧಿಸಿದ್ದಾರೆ. ಮಾಜಿ ಮಂಡಲ ಪ್ರಧಾನ ಕೋಡಿ ಕೆ.ಪೊನ್ನಪ್ಪ ಹಾಗೂ ಸಾಮಾಜಿಕ ಕಾರ್ಯಕರ್ತ, ಕರಿಕೆ ಹಲ್ಪ್ ಲೈನ್ ಸೆಂಟರ್ ನ ಸ್ಥಾಪಕ ಶಿವಗಿರಿ ರಾಜೇಶ್ ಅವರು ಜಿಲ್ಲಾಧಿಕಾರಿಗಳಿಗೆ ಇಂದು ಮನವಿ ಪತ್ರ ಸಲ್ಲಿಸಿ ಒಂದು ಕೇಂದ್ರದಿಂದ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದರು. ಕರಿಕೆ ಗ್ರಾಮದಲ್ಲಿ ಸುಮಾರು 42 ವರ್ಷಗಳಿಂದಲೂ ಕರಿಕೆ ಸೊಸೈಟಿಯ ಅಕ್ಕಿಯನ್ನು ಗ್ರಾಮದ ಒಂದನೇ ಚೆತ್ತುಕಾಯ, ಎರಡನೇ ಎಳ್ಳುಕೊಚ್ಚಿ ಮತ್ತು ಮೂರನೇ ತೋಟಂ ಎಂಬಲ್ಲಿ ಆಯಾ ಭಾಗದ ಬಡವರಿಗೆ ವಿತರಣೆ ಮಾಡಲಾಗುತ್ತಿತ್ತು. ಪಡಿತರ ಚೀಟಿದಾರದಿಂದ ಒಂದೂ ರೂ. ವಸೂಲಿ ಮಾಡಲಾಗುತ್ತಿತ್ತು. ಅಲ್ಲದೆ ಖಾಲಿ ಗೋಣಿಚೀಲ ಮಾರಾಟ ಮಾಡಿಯೂ ಹಣ ಸಂಗ್ರಹಿಸಲಾಗುತ್ತಿತ್ತು. ಈ ನಿಯಮಬಾಹಿರ ಕ್ರಮದ ವಿರುದ್ಧ ಗ್ರಾಮಸ್ಥರು ಧ್ವನಿ ಎತ್ತಿದ ಕಾರಣಕ್ಕಾಗಿ ಅಥವಾ ಪ್ರತೀಕಾರವಾಗಿ ಎರಡು ಕೇಂದ್ರಗಳನ್ನು ಮುಚ್ಚಿ ಇದೀಗ ಒಂದು ಕೇಂದ್ರದಲ್ಲಿ…
ಮಡಿಕೇರಿ ಜ.7 NEWS DESK : ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರಿ ಸಂಘ ಆಶ್ರಯದಲ್ಲಿ ಇದೇ ಮೊದಲ ಬಾರಿಗೆ ಪತ್ರಕರ್ತರ ಟರ್ಫ್ ಕ್ರಿಕೆಟ್ ಪಂದ್ಯಾವಳಿ ಮಾ.29 ರಂದು ಸಿದ್ದಾಪುರದಲ್ಲಿ ನಡೆಯಲಿದೆ. ಕುಶಾಲನಗರ ತಾಲ್ಲೂಕಿನ ಹೊಸಕೋಟೆಯ ಕೂರ್ಗ್ ಆರೆಂಜ್ ಬ್ಲಾಸಮ್ ಸ್ಪಾ ಮತ್ತು ರೆಸಾರ್ಟ್ ನಲ್ಲಿ ಆಟಗಾರರ ಬಿಡ್ಡಿಂಗ್ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರಿ ಸಂಘದ ಸದಸ್ಯರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ವಿನೂತನವಾಗಿ ಟರ್ಫ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಎಂಟು ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಲಿದೆ ಎಂದು ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರು ಹೇಳಿದರು. ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ,ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರಿ ಸಂಘ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ನಿರ್ದೇಶಕಿ ಸವಿತಾ ರೈ, ಮೊದಲ ಬಾರಿಗೆ ಐಪಿಎಲ್ ಮಾದರಿಯಲ್ಲಿ ಪತ್ರಕರ್ತರ ಕ್ರಿಕೆಟ್…
ಮಡಿಕೇರಿ ಜ.7 NEWS DESK : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕೊಡಗು ಜಿಲ್ಲಾ ಘಟಕದ ವತಿಯಿಂದ ಜ.9 ರಿಂದ 11ರ ವರೆಗೆ ನಗರದಲ್ಲಿ ಜಿಲ್ಲಾ ಮಟ್ಟದ ಸರಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಎಂ.ಸಿ.ಅರುಣ್ ಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕೊಡಗು ಶಾಖೆ ಸಂಯುಕ್ತಾಶ್ರಯದಲ್ಲಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ಪಂದ್ಯಾವಳಿ ನಡೆಯಲಿದೆ ಎಂದರು. ಕಾರ್ಯಕ್ರಮವನ್ನು ಜ.9 ರಂದು ಬೆಳಗ್ಗೆ 11 ಗಂಟೆಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ವಹಿಸಲಿದ್ದಾರೆ ಎಂದು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ…
ಮಡಿಕೇರಿ ಜ.7 NEWS DESK : ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕ, ಕೊಡಗು ಜಿಲ್ಲೆಯ ಶನಿವಾರಸಂತೆಯ ಅರುಣ್ ಪ್ರಸಾದ್ ಎಂ.ಎಸ್ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯ ಪಿಹೆಚ್ಡಿ ಪದವಿ ನೀಡಿದೆ. ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿದ ‘Novelist as a Teacher: Canadian Jewish Fictional World of Mordecai Richler’ ಎಂಬ ಪ್ರೌಢಪ್ರಬಂಧಕ್ಕೆ ಇಂಗ್ಲೀಷ್ ವಿಷಯದಲ್ಲಿ ಪಿಹೆಚ್ಡಿ ಪದವಿಯನ್ನು ನೀಡಲಾಗಿದೆ. ಮೈಸೂರು ವಿಶ್ವವಿದ್ಯಾನಿಲಯದ ಹಿರಿಯ ಪ್ರಾಧ್ಯಾಪಕ ಪ್ರೊ.ವಿಜಯ್ ಶೇಷಾದ್ರಿ ಅವರ ಮಾರ್ಗದರ್ಶನದಲ್ಲಿ ಅರುಣ್ ಪ್ರಸಾದ್ ಎಂ.ಎಸ್ ಪ್ರೌಢಪ್ರಬಂಧವನ್ನು ಮಂಡಿಸಿದ್ದರು. ಅರುಣ್ ಪ್ರಸಾದ್ ಎಂ.ಎಸ್ ಅವರು ಕೊಡಗು ಜಿಲ್ಲಾ ದಲಿತ ಸಂಘರ್ಷ ಸಮಿತಿಯ ಹಿರಿಯ ಹೋರಾಟಗಾರ, ನಿವೃತ್ತ ಮುಖ್ಯ ಶಿಕ್ಷಕ ದಿ.ಶಿವಶಂಕರ್ ಎಂ.ಜಿ ಹಾಗೂ ನಿವೃತ್ತ ಮುಖ್ಯ ಶಿಕ್ಷಕಿ ನಂಜಮ್ಮ ಕೆ.ಎಂ ದಂಪತಿಯ ಹಿರಿಯ ಪುತ್ರ.
ಸೋಮವಾರಪೇಟೆ ಜ.7 NEWS DESK : ಪರ್ವತಾರೋಹಿ ಡಾ. ಬಿ.ಎಂ.ಲತಾ ಅವರನ್ನು ಅಕ್ಕನ ಬಳಗದ ವತಿಯಿಂದ ಸನ್ಮಾನಿಸಲಾಯಿತು. ಸೋಮವಾರಪೇಟೆ ತಾಲೂಕಿನ ಆಲೂರುಸಿದ್ದಾಪುರ ಸಮೀಪದ ತಪೋಕ್ಷೇತ್ರ ಮನೆಹಳ್ಳಿ ಮಠದಲ್ಲಿ ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ ಸೋಮವಾರಪೇಟೆ ಅಕ್ಕನಬಳಗದ ಪದಾಧಿಕಾರಿಗಳು ಲತಾ ಅವರನ್ನು ಶಾಲುಹೂದಿಸಿ ಸನ್ಮಾನಿಸಿ, ಗೌರವಿಸಿದರು. ಮೂಲತಃ ಬಡುಬನ ಹಳ್ಳಿ ಗ್ರಾಮದವರಾದ ಲತಾ ಬೆಂಗಳೂರಿನಲ್ಲಿ ಸ್ತ್ರೀರೋಗ ತಜ್ಞರಾಗಿದ್ದಾರೆ. 57 ವರ್ಷದ ಪ್ರಾಯದ ಇವರು ಇತ್ತೀಚೆಗೆ ಎವರೆಸ್ಟ್ ಬೆಸ್ಕ್ಯಾಂಪ್ ಮೂಲಕ ಪರ್ವತವೇರಿ 18,514ಅಡಿ ಎತ್ತರದ ಕಾಲಾಪತ್ತರ್ ಎಂಬ ಸ್ಥಳ ಕ್ರಮಿಸಿ ಸಾಹಸಮೆರೆದಿದ್ದರು. ವೃತ್ತಿಯಲ್ಲಿ ವೈದ್ಯರಾದರೂ ಮೆರಥಾನ್ ಓಟ ಇನ್ನಿತರೆ ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ಇವರು, ಈಗಾಗಲೇ 86 ದೇಶಗಳಿಗೆ ಭೇಟಿ ಕೊಟ್ಟು ಅಲ್ಲಿನ ಜನಜೀವನ ಹಾಗೂ ಸಂಸ್ಕೃತಿಯ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಸನ್ಮಾನ ಸಂದರ್ಭ ಮನೆಹಳ್ಳಿ ಮಠದ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ, ವೀರಶೈವ ಲಿಂಗಾಯತ ಸಂಘಟನಾವೇದಿಕೆಯ ರಾಷ್ಟ್ರೀಯ ಕಾರ್ಯದರ್ಶಿ ಎಸ್.ಮಹೇಶ್, ಅಕ್ಕನ ಬಳಗದ ಅಧ್ಯಕ್ಷೆ ಗೀತಾರಾಜು, ಕಾರ್ಯದರ್ಶಿ ಮಾಯಾ ಗಿರೀಶ್, ಉಪಾಧ್ಯಕ್ಷೆ ಸರಿತ ಮಲ್ಲಿಕಾರ್ಜುನ,…






