ಮಡಿಕೇರಿ ಫೆ.17 NEWS DESK : ಕೇಂದ್ರದ ಬಿಜೆಪಿ ಸರಕಾರ ರೈತ ದಮನಕಾರಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಹಾಗೂ ಕಿಸಾನ್ ಘಟಕ ಜಂಟಿಯಾಗಿ ಪ್ರತಿಭಟನೆ ನಡೆಸಿತು. ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಕಚೇರಿಯಿಂದ ಮೆರವಣಿಗೆ ಮೂಲಕ ಪ್ರತಿಭಟನಾಕಾರರು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಮಾನವ ಸರಪಳಿ ರಚಿಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ನಂತರ ತಹಸೀಲ್ದಾರ್ ಕಚೇರಿವರೆಗೆ ಮೆರವಣಿಗೆ ಮೂಲಕ ಸಾಗಿದ ಕಾಂಗ್ರೆಸ್ ಕಾರ್ಯಕರ್ತರು ತಹಸೀಲ್ದಾರ್ ಕಚೇರಿ ಮುಂಭಾಗ ಜಮಾಯಿಸಿ ಪ್ರತಿಭಟಿಸಿದರು. ಈ ಸಂದರ್ಭ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಕೇವಲ ಸುಳ್ಳು ಭರವಸೆಗಳ ಮೂಲಕ ದೇಶದ ಜನರನ್ನು ಮರುಳು ಮಾಡುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆ ಶೂನ್ಯ ಆರೋಪಿಸಿದರು. ಕಿಸಾನ್ ಘಟಕದ ಅಧ್ಯಕ್ಷ ವಿ.ಜೆ.ನವೀನ್, ಕೆಪಿಸಿಸಿ ಸದಸ್ಯರಾದ ಮಂಜುನಾಥ್ ಗುಂಡುರಾವ್, ನಟೇಶ್ ಗೌಡ, ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಪ್ರಮುಖರಾದ ಜೋಸೆಫ್ ವಿಕ್ಟರ್ ಸೋನ್ಸ್,…
ಲೇಖಕ: admin
ಸೋಮವಾರಪೇಟೆ ಫೆ.17 NEWS DESK : ಪಟ್ಟಣದ ಪ್ರಮುಖ ದೇವಾಲಯಗಳಲ್ಲೊಂದಾದ ಶ್ರೀ ಮುತ್ತಪ್ಪ ಸ್ವಾಮಿ ಮತ್ತು ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ರಾಜಗೋಪುರ ನಿರ್ಮಿಸಲು ನೀಲಿ ನಕಾಶೆ ಸಿದ್ಧಪಡಿಸಲಾಗಿದ್ದು, ರೂ.42.50 ಲಕ್ಷ ವೆಚ್ಚದ ಅಂದಾಜು ಪಟ್ಟಿ ತಯಾರಿಸಲಾಗಿದೆ. ಕಾಮಗಾರಿಗೆ ಮಾರ್ಚ್ 17ರಂದು ಆರಂಭವಾಗಲಿರುವ ಪ್ರಸಕ್ತ ಸಾಲಿನ ಜಾತ್ರಾಮಹೋತ್ಸವದಲ್ಲಿ ಶಾಸಕ ಮಂತರ್ ಗೌಡ ಚಾಲನೆ ನೀಡಲಿರುವರು ಎಂದು ದೇವಾಲಯ ಸಮಿತಿ ಅಧ್ಯಕ್ಷ ಎನ್.ಡಿ.ವಿನೋದ್ಕುಮಾರ್ ತಿಳಿಸಿದ್ದಾರೆ. 2023ರಲ್ಲಿ ಸಂಸದರು, ಶಾಸಕರು ಮತ್ತು ದಾನಿಗಳ ಸಹಕಾರದಿಂದ ಅನ್ನದಾನ ಮಂಟಪವನ್ನು ಲೋಕಾರ್ಪಣೆ ಮಾಡಲಾಗಿದೆ. ದೇವಾಲಯದ ಪುನರ್ ಪ್ರತಿಷ್ಠಾಪನೆಯ ಅಂಗವಾಗಿ ನಡೆಸಿದ ಬ್ರಹ್ಮ ಕಲಶೋತ್ಸವದ ನೆನಪಿಗಾಗಿ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದ ಮುಂಭಾಗದಲ್ಲಿ ರಾಜಗೋಪುರ ನಿರ್ಮಿಸಲು 2024ರಲ್ಲಿ ಆಡಳಿತ ಮಂಡಳಿ ತೀರ್ಮಾನಿಸಿದೆ. 2022ರಲ್ಲಿ ಮುತ್ತಪ್ಪಸ್ವಾಮಿ ದೇವಾಲಯದ ಮುಂಭಾಗ ರೂ.11.50ಲಕ್ಷ ವೆಚ್ಚದಲ್ಲಿ ಮುಖಮಂಟಪವನ್ನು ನಿರ್ಮಿಸಲಾಗಿದೆ. ಅಲ್ಲದೇ ತ್ರಿಶಕ್ತಿಸ್ವರೂಪಿಣಿ ಭುವನೇಶ್ವರಿ ದೇವಾಲಯದ ಮುಂಭಾಗ ರೂ.11.50 ಲಕ್ಷ ವೆಚ್ಚದಲ್ಲಿ ಮುಖಮಂಟಪದ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ದೇವಾಲಯದಲ್ಲಿ ವಿವಿಧ ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದು, ಪ್ರಸಕ್ತ…
ಮಡಿಕೇರಿ ಫೆ.17 NEWS DESK : ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಫೆಬ್ರವರಿ 22 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಕೈಗಾರಿಕಾ ಕೇಂದ್ರ ಕಚೇರಿ ಸಭಾಂಗಣದಲ್ಲಿ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ (ಪಿಎಂಇಜಿಪಿ) ಯೋಜನೆಯಡಿ ಅರಿವು ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸಾಲ ಪಡೆಯುವವರಿಗೆ ಸಂಬಂಧಿಸಿದಂತೆ ಮಾಹಿತಿ ನೀಡಲಾಗುವುದು. ಆದ್ದರಿಂದ ಆಸಕ್ತಿಯಿರುವ ನಿರುದ್ಯೋಗ ಯುವಕ ಯುವತಿಯರು ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ, ಕೊಡಗು ಜಿಲ್ಲೆಯವರನ್ನು ಕಚೇರಿ ವೇಳೆಯಲ್ಲಿ ದೂರವಾಣಿ ಸಂಖ್ಯೆ: 08272- 228746 ಸಂಪರ್ಕಿಸಬಹುದಾಗಿದೆ ಎಂದು ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಕೋರಿದ್ದಾರೆ.
ಮಡಿಕೇರಿ ಫೆ.17 : ವಿರಾಜಪೇಟೆಯ ಕಾವೇರಿ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದ 1ನೇ ಹಾಗೂ 2ನೇ ತರಗತಿಯ ವಿದ್ಯಾರ್ಥಿಗಳು ವಿರಾಜಪೇಟೆಯ ಅಂಚೆ ಕಚೇರಿಗೆ ಕ್ಷೇತ್ರ ಪ್ರವಾಸವನ್ನು ಕೈಗೊಂಡಿದ್ದರು. ಈ ಸಂದರ್ಭದಲ್ಲಿ ಅಂಚೆ ಕಚೇರಿಯ ಸಿಬ್ಬಂದಿಗಳು ಮತ್ತು ಅಂಚೆ ಮಾಸ್ಟರ್ ವಿವಿಧ ರೀತಿಯ ಸ್ಟ್ಯಾಂಪ್ ಗಳನ್ನು ಪರಿಚಯಿಸಿದರು. ಅಲ್ಲದೆ ಅಂಚೆ ಪೆಟ್ಟಿಗೆ, ಅಂಚೆಯ ವಿಲೇವಾರಿಯ ಬಗ್ಗೆ ಹಾಗೂ ಅಂಚೆ ಕಚೇರಿಯ ಕೆಲಸ ಕಾರ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಿದರು. ಇದೆಲ್ಲವನ್ನು ವಿದ್ಯಾರ್ಥಿಗಳು ತುಂಬಾ ಆಸಕ್ತಿಯಿಂದ ಕೇಳಿ, ನೋಡಿ ಅರ್ಥೈಸಿಕೊಂಡರು. ಸಹಶಿಕ್ಷಕರಾದ ನಿವ್ಯ ಪೊನ್ನಣ್ಣ, ಸುಪ್ರೀತಾ, ಶ್ರುತಿ, ಸುಕನ್ಯಾ, ಹರಿತ ಹಾಗೂ ದೈಹಿಕ ಶಿಕ್ಷಕಿ ಮೋನಿಕ ಹಾಜರಿದ್ದರು.
ಸಿದ್ದಾಪುರ ಫೆ.17 : ಭಾವೈಕ್ಯತೆಯ ಧಾರ್ಮಿಕ ಕೇಂದ್ರ ಎಂದೇ ಇತಿಹಾಸ ಪ್ರಸಿದ್ಧಿಯಾಗಿರುವ ಪಾಲಿಬೆಟ್ಥ ಆರ್ಕಾಡ್ ಪಟ್ಟಾಣ್ ಬಾಬ ಶಾಹ್ ವಲಿಯವರ ಉರೂಸ್ ಸಮಾರೋಪ ಸಮಾರಂಭದ ಸರ್ವಧರ್ಮ ಸಮ್ಮೇಳನ ದರ್ಗಾ ಆವರಣದಲ್ಲಿ ನಡೆಯಿತು. ಕನ್ನಡ ಮಠದ ಮಠಾಧಿಕಾರಿ ಚನ್ನಬಸವ ದೇಶಿಕೇಂದ್ರ ಸ್ವಾಮಿಜಿ ಮಾತನಾಡಿ, ಸರ್ವಧರ್ಮದ ಸಮನ್ವಯ ಕೇಂದ್ರಗಳಿಂದ ಶಾಂತಿ ಸಹ ಬಾಳ್ವೆ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗಲಿದ್ದು, ಇಂತಹ ಸರ್ವಧರ್ಮ ಸಮ್ಮೇಳನಗಳ ಮೂಲಕ ಭಾವೈಕ್ಯತೆಯೊಂದಿಗೆ ಒಗ್ಗೂಡಿ ಆಚರಣೆಗಳು ಮಾಡಿದ್ದಲ್ಲಿ ಸಹೋದರತ್ವ ನಿರ್ಮಾಣವಾಗಲು ಸಾಧ್ಯವಾಗಲಿದೆ ಎಂದರು. ನಾವು ನಡೆಯುವ ದಾರಿಗಳು ಬೇರೆ ಇರಬಹುದು ಆದರೆ ತಲುಪುವ ಗುರಿ ಮಾತ್ರ ಭಗವಂತನ ಸನ್ನಿಧಿಗೆ. ಶರಣರ ಹಿತವಚನಗಳನ್ನ ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕೆಂದು ಹೇಳಿದ ಅವರು ಪ್ರತಿಯೊಬ್ಬರು ಧಾರ್ಮಿಕ ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕೆಂದರು. ಪಾಲಿಬೆಟ್ಟ ಸಿ.ಎಸ್.ಐ ಚರ್ಚ್ ನ ರೇ ಫಾ. ಶಶಿಕುಮಾರ್ ಮಾತನಾಡಿ, ದೇವರು ಮಾನವನ ರೂಪದಲ್ಲಿ ಬದುಕಲು ಅವಕಾಶ ಕಲ್ಪಿಸಿದೆ ನಾವೆಲ್ಲರೂ ಶಾಂತಿ ಸಹ ಬಾಳ್ವೆಯಾ ಸಹೋದರತ್ವದೊಂದಿಗೆ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗಲಿದ್ದು, ಎಲ್ಲಾ ಧರ್ಮಗಳ ಬೋಧನೆಯನ್ನು…
ಮಡಿಕೇರಿ ಫೆ.17 NEWS DESK : ಮಡಿಕೇರಿ ನಗರದ ಕೃಷ್ಣ ವೈನ್ಸ್ ಮಾಲೀಕರಾದ ಕೆ.ರಮೇಶ ಅವರ ಪುತ್ರ ಕೆ.ಆರ್.ತೇಜಸ್ (37) ಶುಕ್ರವಾರ ರಾತ್ರಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರ ಅಂತ್ಯಕ್ರಿಯೆ ಫೆ.17 ರಂದು ಮಡಿಕೇರಿಯಲ್ಲಿ ನಡೆಯಲಿದೆ. ಮೃತರು ತಂದೆ, ತಾಯಿ, ಸಹೋದರ, ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ನ ಮಾಜಿ ಅಧ್ಯಕ್ಷ ಎಂ.ಧನಂಜಯ್ ಸಂತಾಪ ಸೂಚಿಸಿದ್ದಾರೆ.
ಸೋಮವಾರಪೇಟೆ ಫೆ.16 NEWS DESK: ವಿದ್ಯುತ್ ತಂತಿ ತುಂಡಾಗಿ ಬಿದ್ದು ಬೆಂಕಿ ಹೊತ್ತಿಕೊಂಡ ಪರಿಣಾಮ ಒಂದೂವರೆ ಎಕರೆಯಷ್ಟು ಕಾಫಿ ತೋಟ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಸೋಮವಾರಪೇಟೆಯ ಬಿಳಿಗೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕೃಷಿಕ ಬಿ.ಬಿ.ಕರುಂಬಯ್ಯ ಎಂಬವರು ಕೃಷಿ ಮಾಡಿದ 8 ವರ್ಷದ ಅರೇಬಿಕಾ ಕಾಫಿ ಗಿಡ, ಒಂದು ಸಾವಿರ ಕಾಳುಮೆಣಸು ಬಳ್ಳಿಗಳು, 500 ರಷ್ಟು ಕಿತ್ತಳೆ ಮರಗಳು, 150 ಬಾಳೆಗಿಡಗಳು ಸಂಪೂರ್ಣ ಸುಟ್ಟುಹೋಗಿದ್ದು, 15 ಲಕ್ಷ ರೂ.ನಷ್ಟು ಹಾನಿಯಾಗಿದೆ. ಕೂಡಲೇ ಪರಿಹಾರ ನೀಡಬೇಕೆಂದು ತಹಸೀಲ್ದಾರ್ ಮತ್ತು ಸೆಸ್ಕ್ ಇಲಾಖೆಗೆ ತೋಟದ ಮಾಲೀಕ ದೂರು ನೀಡಿದ್ದಾರೆ. ಘಟನಾ ಸ್ಥಳಕ್ಕೆ ಸೆಸ್ಕ್ ನ ಇ.ಇ. ಅಮಿತ್, ಎಇಇ ಮಂಜುನಾಥ್, ರವಿ, ಜೆಇ ಕುಮಾರ್ ಅವರುಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪ್ರತಿವರ್ಷ ಟ್ರಾನ್ಸ್ಫಾರಂ ನಲ್ಲಿ ತಂತಿಗಳು ಸ್ಪರ್ಶಗೊಂಡು ಬೆಂಕಿ ಹತ್ತಿಕೊಂಡು ಅಲ್ಪಸ್ವಲ್ಪ ಹಾನಿಯಾಗುತ್ತಿದ್ದು, ಟ್ರಾನ್ಸ್ ಫಾರ್ಮರ್ ಸರಿಪಡಿಸುವಂತೆ ಸೆಸ್ಕ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಕ್ರಮಕೈಗೊಂಡಿರುವುದಿಲ್ಲ. ಅವರ ನಿರ್ಲಕ್ಷ್ಯದಿಂದ ದೊಡ್ಡಮಟ್ಟದ ಹಾನಿಯಾಗಿದೆ ಎಂದು ಕೃಷಿಕ ಕರುಂಬಯ್ಯ…
ಮಡಿಕೇರಿ ಫೆ.16 NEWS DESK : ಇತ್ತೀಚೆಗೆ ಸುಂಟಿಕೊಪ್ಪದಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಸುಂಟಿಕೊಪ್ಪ ಪೊಲೀಸರು ಯಶಸ್ವಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಚಿಕ್ಕಮಂಡೂರು ಗ್ರಾಮದ ನಿವಾಸಿ ಮೊಹಮ್ಮದ್ ಅಶ್ರಫ್ (43) ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಈತನ ಬಳಿಯಿಂದ ರೂ.15 ಸಾವಿರ ನಗದು, ವಾಚ್ ಮತ್ತು ಬಟ್ಟೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದೇ ಫೆ.28 ರಂದು ಸುಂಟಿಕೊಪ್ಪದ ನಿವಾಸಿ ಕೆ.ಎಂ.ಹಸೈನಾರ್ ಅವರ ಟಿನೇಜ್ ಕಲೆಕ್ಷನ್ಸ್ ಬಟ್ಟೆ ಅಂಗಡಿಯ ಬೀಗವನ್ನು ಮುರಿದು ಕ್ಯಾಶ್ ಟೇಬಲ್ನಲ್ಲಿದ್ದ ರೂ.1ಲಕ್ಷ ನಗದು, ವಾಚ್ ಮತ್ತು ಬಟ್ಟೆಗಳನ್ನು ಕಳ್ಳತನ ಮಾಡಲಾಗಿತ್ತು. ಅಲ್ಲದೆ ಸುರೇಶ್.ಹೆಚ್.ಕೆ ಅವರ ಎ.ಆರ್ ಕನ್ಸಲ್ಟಿಂಗ್ ಅಂಗಡಿಯ ಎದುರು ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನೂ ಕದ್ದೊಯ್ಯಲಾಗಿತ್ತು. ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡ ಪೊಲೀಸರು ವಿಶೇಷ ತಂಡ ರಚಿಸಿ ಚೋರರ ಪತ್ತೆಗಾಗಿ ಕ್ರಮ ಕೈಗೊಂಡಿದ್ದರು. ಸೋಮವಾರಪೇಟೆ ಉಪವಿಭಾಗದ ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ವೃತ್ತದ ಸಿಪಿಐ ರಾಜೇಶ್.ಕೆ, ಸುಂಟಿಕೊಪ್ಪ ಠಾಣೆಯ ಪಿಎಸ್ಐಗಳಾದ ಶ್ರೀಧರ್.ಎಂ.ಸಿ, ನಾಗರಾಜು ಹಾಗೂ ಸಿಬ್ಬಂದಿಗಳು…
ಮಡಿಕೇರಿ ಫೆ.16 NEWS DESK : ಯುವತಿಯೊಬ್ಬಳನ್ನು ಅತ್ಯಾಚಾರ ಮಾಡಿದ ಆರೋಪದಡಿ ಅರಣ್ಯ ಇಲಾಖೆಯ ಚಾಲಕನೊಬ್ಬನನ್ನು ಕುಟ್ಟ ಪೊಲೀಸರು ಬಂಧಿಸಿದ್ದಾರೆ. ಕೆ.ಬಾಡಗ ಗ್ರಾಮದ ನಾಣಚ್ಚಿ ನಿವಾಸಿ ಶ್ರೀಕಾಂತ್ (31) ಬಂಧಿತ ಆರೋಪಿಯಾಗಿದ್ದಾನೆ. ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಬಾಡಗ ಗ್ರಾಮದ ತೋಟದ ಲೈನುಮನೆಯಲ್ಲಿ ವಾಸವಿರುವ ಪಂಜರಿ ಎರವರ ದಂಪತಿಯ 17 ವರ್ಷದ ಪುತ್ರಿ ಇದೇ ಫೆ.12 ರಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಳು. ಫೆ.2 ರಂದು ಶ್ರೀಕಾಂತ್ ಯುವತಿಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ ಪರಿಣಾಮ ಆಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನುವ ಆರೋಪದಡಿ ಕುಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಘಟನೆ ಸ್ಥಳಕ್ಕೆ ಕುಟ್ಟ ಪೊಲೀಸ್ ಠಾಣೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಕೃತ್ಯಕ್ಕೆ ಸಂಬಂಧಿಸಿದ ಮಾಹಿತಿ ಮತ್ತು ಸಾಕ್ಷ್ಯಾಧಾರಗಳನ್ನು ಕಲೆಹಾಕಿ ಆರೋಪಿಯನ್ನು ಪತ್ತೆ ಹಚ್ಚಲು ವಿಶೇಷ ತಂಡ ರಚಿಸಿದರು. ವಿರಾಜಪೇಟೆ ಉಪವಿಭಾಗದ ಡಿವೈಎಸ್ಪಿ ಆರ್.ಮೋಹನ್ ಕುಮಾರ್, ಕುಟ್ಟ ಪೊಲೀಸ್ ಠಾಣೆಯ ಪಿಎಸ್ಐ ಇರ್ಶಾದ್.ಸಿ ಹಾಗೂ ಸಿಬ್ಬಂದಿಗಳ…
ಮಡಿಕೇರಿ ಫೆ.16 NEWS DESK : ಭಾರತೀಯ ಜನತಾ ಪಾರ್ಟಿಯ ಕೊಡಗು ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾಗಿ ಸಿದ್ದಾಪುರದ ಇಂಜಿಲಗೆರೆ ಗ್ರಾಮದ ವಿನೋದ್ ಪೂಜಾರಿ ಹಾಗೂ ಶನಿವಾರಸಂತೆಯ ಎಸ್.ಎನ್.ರಘು ಅವರನ್ನು ಆಯ್ಕೆ ಮಾಡಿರುವುದಾಗಿ ಹಿಂದುಳಿದ ವರ್ಗಗಳ ಮೋರ್ಚಾದ ನೂತನ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ ಅವರು ತಿಳಿಸಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷರ ಅನುಮೋದನೆಯ ಮೇರೆಗೆ ಪಕ್ಷ ಸಂಘಟನೆಯ ದೃಷ್ಟಿಯಿಂದ ಇವರಿಬ್ಬರನ್ನು ಪ್ರಧಾನ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿದೆ. ಜಿಲ್ಲೆಯಲ್ಲಿ ಹಿಂದುಳಿದ ವರ್ಗ ಬಿಜೆಪಿ ಪರವಾಗಿದ್ದು, ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸಲಾಗುವುದೆಂದು ಅಪ್ರು ರವೀಂದ್ರ ಹೇಳಿದ್ದಾರೆ.






