ಮಡಿಕೇರಿ ಮಾ.7 NEWS DESK : ವೇತನ ಪಾವತಿಗಾಗಿ ಆಗ್ರಹಿಸಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಅತಿಥಿ ಉಪನ್ಯಾಸಕರ ಧರಣಿ ಏಳನೆಯ ದಿನವೂ ಮುಂದುವರೆಯಿತು. ನೂತನ ಕುಲಪತಿಗಳಾದ ಪ್ರೊ. ಪಿ.ಎಲ್.ಧರ್ಮ ಅವರು ಧರಣಿ ನಿರತ ಉಪನ್ಯಾಸಕರೊಂದಿಗೆ ದೂರವಾಣಿಯ ಮೂಲಕ ಮಾತನಾಡಿದರು. ಧರಣಿಯನ್ನು ಹಿಂತೆಗೆದುಕೊಳ್ಳಲು ಮನವಿ ಮಾಡಿದರು. ನಂತರ ಈ ಬಗ್ಗೆ ಚರ್ಚೆ ನಡೆಸಿದ ಉಪನ್ಯಾಸಕರು ವೇತನ ಪಾವತಿ ವ್ಯವಸ್ಥೆಯಲ್ಲಿ ಹಲವು ಗೊಂದಲಗಳು ಇರುವುದರಿಂದ, ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸುವ ಅಧಿಕಾರಿಗಳೊಂದಿಗೆ ಮುಖತ: ಮಾತುಕತೆ ನಡೆಸಿ ನಿರ್ಧಾರಕ್ಕೆ ಬರಲು ಸಾಧ್ಯ ಎನ್ನುವ ಕಾರಣದಿಂದ ಧರಣಿಯನ್ನು ಮುಂದುವರೆಸಿದರು.
ಲೇಖಕ: admin
ಮಡಿಕೇರಿ ಮಾ.7 NEWS DESK : ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ಓಲೈಕೆಯಲ್ಲಿ ತೊಡಗಿದೆ ಎಂದು ಸಂಸದ ಪ್ರತಾಪ್ ಸಿಂಹ ಅವರು ನೀಡಿರುವ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಮಾಜಿ ಅಧ್ಯಕ್ಷ ಎಂ.ಎ.ಉಸ್ಮಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತ ದೇಶದಲ್ಲಿ ಸರ್ವರಿಗೂ ಸಮಾನ ಹಕ್ಕುಗಳನ್ನು ಸಂವಿಧಾನ ನೀಡಿದೆ. ಇದರ ಆಧಾರದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರಿಗೆ ಸಿಗಬೇಕಾದ ಸೌಲಭ್ಯಗಳನ್ನು ನೀಡುತ್ತಿದ್ದಾರೆ. ಇದು ಹಕ್ಕುಗಳ ಪ್ರತಿಪಾದನೆಯೇ ಹೊರತು ಅಲ್ಪಸಂಖ್ಯಾತರ ಓಲೈಕೆಯಲ್ಲ ಎಂದು ತಿಳಿಸಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ ಅಭ್ಯುದಯ ಮತ್ತು ರಕ್ಷಣೆಗೆ ಆಡಳಿತ ವ್ಯವಸ್ಥೆ ಬದ್ಧವಾಗಿರಬೇಕೆನ್ನುವುದು ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯ ಆಶಯವಾಗಿದೆ. ಇದನ್ನು ಕಾಂಗ್ರೆಸ್ ಸರ್ಕಾರ ಪರಿಪಾಲನೆ ಮಾಡುತ್ತಿದೆಯೇ ಹೊರತು ಓಲೈಕೆ ರಾಜಕಾರಣ ಮಾಡುತ್ತಿಲ್ಲ. ವಿನಾಕಾರಣ ಸಂಸದರು ಧರ್ಮ ಆಧಾರಿತ ರಾಜಕಾರಣ ಮಾಡುತ್ತಿದ್ದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡಲು ವಿಷಯಗಳಿಲ್ಲದೆ ಭಾವನಾತ್ಮಕವಾಗಿ ಮತದಾರರನ್ನು ಸೆಳೆಯುವ…
ಬೆಂಗಳೂರು ಮಾ.7 NEWS DESK : ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕನೆಂದು ಘೋಷಿಸಿದ ಚಾರಿತ್ರಿಕ ನಿರ್ಣಯಕ್ಕಾಗಿ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದ ಸಮಾರಂಭದಲ್ಲಿ 160 ಮಂದಿ ಶರಣ ಸ್ವಾಮೀಜಿಗಳು, ಗುರುಗಳು ಹಾಗೂ ವೀರಶೈವ – ಲಿಂಗಾಯತ ಮಠಾಧೀಶರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು. ವಿಶ್ವ ಬಸವ ಧರ್ಮ ಟ್ರಸ್ಟ್, ಅನುಭವ ಮಂಟಪ – ಬಸವಕಲ್ಯಾಣ, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಹಾಗೂ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಆಯೋಜಿಸಿದ್ದ ಈ ಸಮಾರಂಭದಲ್ಲಿ ಹುಬ್ಬಳ್ಳಿಯ ಮೂರುಸಾವಿರ ಮಠದ ಶ್ರೀ ಜಗದ್ಗುರು ಗುರುಸಿದ್ದರಾಜಯೋಗೀಂದ್ರ ಮಹಾಸ್ವಾಮೀಜಿ, ಜಗದ್ಗುರು ಬಸವಜಯಮೃತ್ಯುಂಜಯ ಮಹಾಸ್ವಾಮಿಗಳು, ಜಗದ್ಗುರು ಡಾ.ಮಾತೆ ಗಂಗಾದೇವಿ, ಜಗದ್ಗುರು ಸಿದ್ದರಾಮೇಶ್ವರ ಮಹಾಸ್ವಾಮಿಗಳು, ಷ.ಬ್ರ.ರಾಜೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಬಸವಕಲ್ಯಾಣ ಅನುಭವ ಮಂಟಪದ ವಿಶ್ವ ಬಸವ ಧರ್ಮ ಟ್ರಸ್ಟ್ನ ಅಧ್ಯಕ್ಷರಾದ ಶ್ರೀ ನಾಡೋಜ ಡಾ|| ಬಸವಲಿಂಗ ಪಟ್ಟದೇವರು ಮತ್ತು 150ಕ್ಕೂ ಹೆಚ್ಚು ಶರಣಗುರುಗಳು, ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ನಡೆದ ಸಮಾರಂಭದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರು ಹಾಗೂ ಶಾಸಕರಾದ…
ಮಡಿಕೇರಿ ಮಾ.7 NEWS DESK : ಭಾರತೀಯ ಜನತಾ ಪಾರ್ಟಿಯ ಸೋಮವಾರಪೇಟೆ ರೈತ ಮೋರ್ಚಾದ ಅಧ್ಯಕ್ಷರಾಗಿ ಮಚ್ಚಂಡ ಪ್ರಕಾಶ್ ಆಯ್ಕೆಯಾಗಿದ್ದಾರೆ. ಪಕ್ಷದ ಮುಂದಿನ ಸಂಘಟನಾತ್ಮಕ ಚಟುವಟಿಕೆಗಳನ್ನು ಮುಂದುವರೆಸುವ ದೃಷ್ಟಿಯಿಂದ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರ ಅನುಮೋದನೆ ಮೇರೆಗೆ ಪ್ರಕಾಶ್ ಅವರನ್ನು ನೇಮಕ ಮಾಡಲಾಗಿದೆ ಎಂದು ಬಿಜೆಪಿಯ ಸೋಮವಾರಪೇಟೆ ಮಂಡಲದ ಅಧ್ಯಕ್ಷ ಗೌತಮ್ ಗೌಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾಪೋಕ್ಲು ಮಾ.7 NEWS DESK : ಕಕ್ಕಬ್ಬೆಯ ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ಭಕ್ತಜನ ಸಂಘದ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಕಾಂಡಂಡ ಜೋಯಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು. ದೇವಾಲಯದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು. ಸಂಘದ ಮಾಜಿ ಅಧ್ಯಕ್ಷ ಕಲ್ಯಾಟಂಡ ಮುತ್ತಪ್ಪ ಮಾತನಾಡಿ, ವರ್ಷಕ್ಕೊಮ್ಮೆ ನಡೆಯುವ ಮಹಾಸಭೆಗೆ ಸದಸ್ಯರು ಎಲ್ಲರೂ ಹಾಜರಾಗಬೇಕು. ಅಭಿವೃದ್ಧಿಗೆ ಪೂರಕವಾದ ಸಲಹೆ ಸೂಚನೆಗಳನ್ನು ನೀಡಬೇಕು ಎಂದರು. ಸಂಘದ ನಿರ್ದೇಶಕ ಕಲಿಯಂಡ ಹ್ಯಾರಿಮಂದಣ್ಣ ಮಾತನಾಡಿ, ಭಕ್ತರ ಹಣದಲ್ಲಿ ಭಕ್ತ ಜನ ಸಂಘ ದೇವಾಲಯದ ಅಭಿವೃದ್ಧಿ ಕಾರ್ಯ ಮಾಡಿದ್ದು, ಮುಜರಾಯಿ ಇಲಾಖೆಯೊಂದಿಗೆ ಭಕ್ತ ಜನ ಸಂಘ ಸೇರಿಕೊಂಡು ದೇವಾಲಯದ ಅಭಿವೃದ್ಧಿ ಆಗಬೇಕು ಎಂದರು. ಸದಸ್ಯ ಜಿ.ರಾಜೇಂದ್ರ ಮಾತನಾಡಿ, ಹಿಂದಿನ ವಾರ್ಷಿಕ ಮಹಾಸಭೆಯಲ್ಲಿ ದೇವಾಲಯವನ್ನು ಮುಜರಾಯಿ ಇಲಾಖೆಗೆ ಮರಳಿ ಪಡೆಯಲು ಶಾಸಕರು ಮುಖ್ಯಮಂತ್ರಿಗಳೊಂದಿಗೆ ವ್ಯವಹರಿಸಲು ನಿರ್ಣಯ ಕೈಗೊಳ್ಳಲಾಗಿತ್ತು. ಈ ಬಗ್ಗೆ ಏನು ಬೆಳವಣಿಗೆಗಳಾಗಿವೆ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಅಧ್ಯಕ್ಷರು ಮುಂದಿನ ದಿನಗಳಲ್ಲಿ ಎಲ್ಲಾ ತಕ್ಕ ಮುಖ್ಯಸ್ಥರ ಸಭೆ…
ಮಡಿಕೇರಿ ಮಾ.7 NEWS DESK : ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾದ ಮಡಿಕೇರಿ ಘಟಕದಿಂದ ವತಿಯಿಂದ ಮಾ.17 ರಂದು ಪ್ರಕೃತಿ ಅಧ್ಯಯನ ಮತ್ತು ಚಾರಣ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ಸದಸ್ಯರು ಹಾಗೂ ಸಾರ್ವಜನಿಕರು ಮಾ.14 ರ ಒಳಗೆ ಈ ಸಂಖ್ಯೆಗಳನ್ನು 9449699869 (ಅಯ್ಯಣ್ಣ), 9448896556 (ರಾಜಶೇಖರ್) ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಮಾ.7 NEWS DESK : ನದಿ ಮತ್ತು ನದಿ ಮೂಲಗಳಿಂದ ಪಂಪ್ ಸೆಟ್ ಬಳಸಿ ನೀರು ತೆಗೆಯುವುದನ್ನು ಕೊಡಗು ಜಿಲ್ಲಾಡಳಿತ ನಿಷೇಧಿಸಿದ್ದು, ಕಾಫಿ ಬೆಳೆಗಾರರು ಹಾಗೂ ಕಾರ್ಮಿಕರ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಗಳು ತಮ್ಮ ಆದೇಶವನ್ನು ಪುನರ್ ಪರಿಶೀಲಿಸಬೇಕೆಂದು ಭಾರತೀಯ ಜನತಾ ಪಾರ್ಟಿಯ ವಿರಾಜಪೇಟೆ ಮಂಡಲ ಮನವಿ ಮಾಡಿದೆ. ಗೋಣಿಕೊಪ್ಪದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿರಾಜಪೇಟೆ ಮಂಡಲದ ಅಧ್ಯಕ್ಷ ಮಾಚಿಮಂಡ ಸುವಿನ್ ಗಣಪತಿ, ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ, ಪ್ರಧಾನ ಕಾರ್ಯದರ್ಶಿಗಳಾದ ಮುದ್ಯಡ ಮಂಜು ಗಣಪತಿ ಹಾಗೂ ಕುಟ್ಟಂಡ ಅಜಿತ್, ಕೊಡಗಿನಲ್ಲಿ ಕಾಫಿ ಬೆಳೆಯನ್ನೇ ನಂಬಿಕೊಂಡು ಹೆಚ್ಚಿನ ಸಂಖ್ಯೆಯ ಬೆಳೆಗಾರರು ಹಾಗೂ 2ಲಕ್ಷಕ್ಕೂ ಅಧಿಕ ಕಾರ್ಮಿಕರು ಜೀವನ ಸಾಗಿಸುತ್ತಿದ್ದಾರೆ. ವರ್ಷಕ್ಕೆ ಒಂದು ಬಾರಿ ಕಾಫಿ ತೋಟಕ್ಕೆ ನೀರು ಹಾಕುವ ಸಮಯ ಇದಾಗಿದೆ. ಆದರೆ ಇದೀಗ ಜಿಲ್ಲಾಡಳಿತ ದಿಢೀರ್ ಆಗಿ ನದಿಮೂಲಗಳಿಂದ ನೀರು ತೆಗೆಯದಂತೆ ಆದೇಶ ಹೊರಡಿಸಿದ್ದು, ಬೆಳೆಗಾರರ ಆತಂಕಕ್ಕೆ ಕಾರಣವಾಗಿದೆ ಎಂದು ಗಮನ ಸೆಳೆದರು. ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶದಿಂದ ಬೆಳೆಗಾರರು ಪಂಪ್ ಸೆಟ್ ಬಳಸಿ…
ಸೋಮವಾರಪೇಟೆ ಮಾ.7 NEWS DESK : ಸರ್ಕಾರಿ ಶಾಲೆಯಲ್ಲಿ ಕಲಿಯುವ ಮಕ್ಕಳು ಕೀಳರಿಮೆಯಿಂದ ಹೊರಬರಬೇಕು. ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲೂ ಸಿಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಝೀವಲ್ಖಾನ್ ಹೇಳಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿ ವತಿಯಿಂದ ಚನ್ನಬಸಪ್ಪ ಸಭಾಂಗಣದಲ್ಲಿ ನಡೆದ ‘ಮಕ್ಕಳ ಸಾಹಿತ್ಯ ಸಂಭ್ರಮ’ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸದೊಂದಿಗೆ ಉನ್ನತ ಶಿಕ್ಷಣ ಪಡೆದ ಶೇ.80ರಷ್ಟು ಮಂದಿ ಸರ್ಕಾರಿ ಕೆಲಸದಲ್ಲಿದ್ದಾರೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿ ಹೆಚ್ಚಿನ ಹಣವನ್ನು ಖರ್ಚುಮಾಡುತ್ತಿದೆ. ಮಕ್ಕಳ ಇಂತಹ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು. ಮಕ್ಕಳ ಸಾಹಿತ್ಯ ಸಂಭ್ರಮದ ಉದ್ದೇಶ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹ ನೀಡಬೇಕು ಹಾಗೂ ಮಕ್ಕಳನ್ನು ಗ್ರಂಥಾಲಯದ ಕಡೆಗೆ ಸೆಳೆಯಬೇಕು. ಓದುವುದರ ಮೂಲಕ ಮಕ್ಕಳು ಜ್ಞಾನ ಸಂಪಾದಿಸಿಕೊಳ್ಳಬೇಕು. ಮಕ್ಕಳು ಸಾಮಾಜಿಕವಾಗಿ ಬೆಳೆಯಬೇಕು. ಹೊಸತನದೊಂದಿಗೆ ಬೆಳೆಯಬೇಕು ಎಂದು ಹೇಳಿದರು. ಪ್ರತಿಮಕ್ಕಳಲ್ಲೂ…
ಸೋಮವಾರಪೇಟೆ ಮಾ.7 NEWS DESK : 4.80 ಕೋಟಿ ರೂ ವೆಚ್ಚದ ಹಾನಗಲ್ಲು ಗ್ರಾಮದ ದುದ್ದುಗಲ್ಲು ಶ್ರೀ ಮಲ್ಲಿಕಾರ್ಜುನ ದೇವಾಲಯದ ಅಭಿವೃದ್ಧಿ ಕಾಮಗಾರಿಗೆ ಆದಿಚುಂಚನಗಿರಿ ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಮತ್ತು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಭೂಮಿ ಪೂಜೆ ನೆರವೇರಿಸಿದರು. ದೇವಾಲಯದ ನೀಲನಕ್ಷೆಯಂತೆ ದುದ್ದುಗಲ್ಲು ಹೊಳೆಯಿಂದ ದೇವಾಲಯದವರೆಗೆ ಮೆಟ್ಟಿಲು ಹಾಗೂ ರಸ್ತೆ ನಿರ್ಮಾಣ ಆಗಬೇಕಿರುವ ಹಿನ್ನೆಲೆ, ರಾಜ್ಯ ಜಲಸಂಪನ್ಮೂಲ ಇಲಾಖಾ ಸಚಿವ ಡಿ.ಕೆ. ಶಿವಕುಮಾರ್ ಅವರ ಗಮನ ಸೆಳೆದ ಹಿನ್ನೆಲೆ ಕಾಮಗಾರಿಗೆ 4.80 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಇದರಲ್ಲಿ ಕಾಂಕ್ರಿಟ್ ರಸ್ತೆ, ಸೋಪಾನಂ ಕಟ್ಟೆ, ತಡೆಗೋಡೆ, ಫೆನ್ಸಿಂಗ್, ಇಂಟರ್ ಲಾಕ್, ವಾಹನ ನಿಲುಗಡೆಗೆ ಸ್ಥಳಾವಕಾಶ ಸೇರಿದಂತೆ ಇನ್ನಿತರ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಶಾಸಕ ಮಂಥರ್ ಗೌಡ ಹೇಳಿದರು. ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶ್ರೀ ಶಂಭುನಾಥ ಸ್ವಾಮೀಜಿ ಅವರು, ಶಾಶ್ವತವಾಗುವಂತಹ ಕ್ಷೇತ್ರವನ್ನಾಗಿ ಮಲ್ಲಿಕಾರ್ಜುನ ಸ್ವಾಮಿ ದೇವಾಲಯವನ್ನು ನಿರ್ಮಿಸಲಾಗುವುದು. ಇದರೊಂದಿಗೆ ಮಠವನ್ನೂ ನಿರ್ಮಿಸಿ, ದಾಸೋಹ,…
ಮಡಿಕೇರಿ ಮಾ.7 NEWS DESK : ಮಡಿಕೇರಿ ನಗರಸಭೆಯ ಉಸ್ತುವಾರಿಯಲ್ಲಿ ನಡೆದ ನೂತನ ಜನರಲ್ ತಿಮ್ಮಯ್ಯ ವೃತ್ತದ ಕಾಮಗಾರಿ ಪೂರ್ಣಗೊಂಡಿದೆ. ಆಕರ್ಷಕ ವೃತ್ತ ಮತ್ತು ದೇಶದ ಹೆಮ್ಮೆಯ ವೀರಪುತ್ರ ಜನರಲ್ ತಿಮ್ಮಯ್ಯ ಅವರ ಪ್ರತಿಮೆಯ ಅನಾವರಣ ಕಾರ್ಯಕ್ರಮದಲ್ಲಿ ಸಂಘ, ಸಂಸ್ಥೆಗಳು, ಸಾರ್ವಜನಿಕರು, ಜನಪ್ರತಿನಿಧಿಗಳು, ಯೋಧರು, ಮಾಜಿ ಯೋಧರು ಸೇರಿದಂತೆ ಸರ್ವರು ಪಾಲ್ಗೊಳ್ಳುವಂತೆ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಮನವಿ ಮಾಡಿದ್ದಾರೆ. ವೃತ್ತದ ಅಂತಿಮ ಹಂತದ ಸಿದ್ಧತೆಯನ್ನು ಪರಿಶೀಲಿಸಿ ಮಾತನಾಡಿದ ಅವರು ಮಾ.8 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಫೀ.ಮಾ.ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿ ಜನರಲ್ ತಿಮ್ಮಯ್ಯ ಅವರ ಪ್ರತಿಮೆಯನ್ನು ಅದ್ದೂರಿಯಾಗಿ ಬರ ಮಾಡಿಕೊಳ್ಳಲಾಗುವುದು. ನಂತರ ಭವ್ಯ ಮೆರವಣಿಗೆಯಲ್ಲಿ ನೂತನ ವೃತ್ತಕ್ಕೆ ತಂದು ಅನಾವರಣಗೊಳಿಸಲಾಗುವುದು ಎಂದು ತಿಳಿಸಿದರು. ವೃತ್ತದ ಅಭಿವೃದ್ಧಿಗಾಗಿ ಸುಮಾರು 17.14 ಲಕ್ಷ ರೂ.ಗಳನ್ನು ಖರ್ಚು ಮಾಡಲಾಗಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ 4 ಲಕ್ಷ ರೂ.ಗಳನ್ನು ನೀಡಿದೆ. ಕೆಆರ್ಐಡಿಎಲ್ ಕಾಮಗಾರಿಯನ್ನು ನಿಭಾಯಿಸಿದೆ. ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿ ರಾಜ್…






