ಮಡಿಕೇರಿ ಫೆ.16 NEWS DESK : ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಅಂಗವಾಗಿ ಕೊಡಗು ಜಿಲ್ಲಾಡಳಿತವು ಕೊಡಗು ಜಿಲ್ಲೆಯ ಸಾರ್ವಜನಿಕರಿಗೆ ಮುಕ್ತ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೇ ಏರ್ಪಡಿಸಿದೆ. `ಭಾರತ ಸಂವಿಧಾನ ರಚನೆಯಲ್ಲಿ ಮಹಿಳೆಯರ ಪಾತ್ರ’ ನಮ್ಮ ಸಂವಿಧಾನ ನಮ್ಮ ಹೆಮ್ಮೆ (ಭಾರತ ಸಂವಿಧಾನದಲ್ಲಿ ಕಲ್ಪಿಸಿರುವ ಹಕ್ಕು ಮತ್ತು ಕರ್ತವ್ಯಗಳ ಹಿನ್ನಲೆಯಲ್ಲಿ); ಸ್ಪರ್ಧೇಯು ಕೊಡಗು ಜಿಲ್ಲೆಯ ಸಾರ್ವಜನಿಕರಿಗೆ ಮುಕ್ತವಾಗಿ ನಡೆಯಲಿದೆ. ಪ್ರಬಂಧ ಸ್ಪರ್ಧೇಗೆ ನೀಡಿರುವ ವಿಷಯಗಳಲ್ಲಿ ಯಾವುದಾದರು ಒಂದು ವಿಷಯವನ್ನು ಆಯ್ಕೆ ಮಾಡಿ ಸ್ಪುಟವಾದ ಕೈ ಬರಹಗಳಲ್ಲಿ `ಎ4′ ಅಳತೆಯ ಕಾಗದಗಳಲ್ಲಿ 1,500 ಪದಗಳಿಗೆ ಮೀರದಂತೆ ಬರೆದು ಕಳುಹಿಸಬೇಕು. ಚಿತ್ರಕಲಾ ಸ್ಪರ್ಧೇಗೆ ಸಂಬಂಧಿಸಿದಂತೆ ನೀಡಿರುವ ವಿಷಯಗಳ ಬಗ್ಗೆ `ಎ3′ ಅಳತೆಯ ಡ್ರಾಯಿಂಗ್ ಶಿಟ್ನಲ್ಲಿ ಚಿತ್ರ ರಚನೆ ಮಾಡಿ ಸಲ್ಲಿಸಬೇಕು. ಪ್ರಬಂಧ ಸ್ಪರ್ಧೆಯ ಪ್ರಬಂಧಗಳನ್ನು ಹಾಗೂ ಚಿತ್ರಕಲಾ ಸ್ಪರ್ಧೇಯ ಚಿತ್ರಗಳನ್ನು ಫೆ.25 ರಂದು ಸಂಜೆ 4.30 ರ ಒಳಗೆ `ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತ…
ಲೇಖಕ: admin
ಬೆಂಗಳೂರು ಫೆ.16 NEWS DESK : ವಿದ್ಯಾರ್ಥಿಗಳಿಗೆ ಟೆಲಿಸ್ಕೋಪ್, ಸೈನ್ಸ್ ಸಿಟಿ ಸ್ಥಾಪನೆ, ನೀರಿನ ಸದ್ಬಳಕೆ ಹಾಗೂ ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡುವಂತಹ ಮತ್ತು ಎಲ್ಲಾ ವರ್ಗದ ಜನರ ಆಶೋತ್ತರಗಳಿಗೆ ಧ್ವನಿಯಾಗುವಂತಹ ಕ್ರಾಂತಿಕಾರಿ ಆಯವ್ಯಯವನ್ನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ್ದಾರೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ. ಸರ್ವೋದಯ ದೃಷ್ಟಿ ಮತ್ತು ಸಮನ್ವಯ ದೃಷ್ಟಿ ಎಲ್ಲೆಡೆ ತಾಂಡವವಾಡಬೇಕು, ನಿಷ್ಪಕ್ಷಪಾತ ಮತ್ತು ನ್ಯಾಯಯತ ಸಮಾಜ ನಿರ್ಮಾಣಕ್ಕಾಗಿ ಸಂಪತ್ತಿನ ಮರುಹಂಚಿಕೆ ಮಾಡುವುದು ಇಂದಿನ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರೆಂಟಿ ಯೋಜನೆಗಳನ್ನ ಚಾಚೂ ತಪ್ಪದೆ ಅನುಷ್ಠಾನಗೊಳಿಸಿ ಇಡೀ ದೇಶದಲ್ಲಿ ಮಾದರಿ ರಾಜ್ಯವಾಗಿದ್ದೇವೆ. ಬಸವಣ್ಣವರ ಆಶಯದಂತೆ ನುಡಿದಂತೆ ನಡೆದ ಸರಕಾರ ನಮ್ಮದಾಗಿದೆ. ಈ ಬಾರಿ ಬಜೆಟ್ ನಲ್ಲಿ 52 ಸಾವಿರ ಕೋಟಿ ಗ್ಯಾರೆಂಟಿ ಯೋಜನೆಗಳಿಗೆ ಅನುದಾನ ನೀಡಿದ್ದು, ಇಡೀ ದೇಶದಲ್ಲೆ ನಮ್ಮ ಸರಕಾರ ಮಾದರಿಯಾಗಿ ಹೊರಹೊಮ್ಮಿದೆ. ನಮ್ಮದು ಮುಂದಿನ 10…
ಮಡಿಕೇರಿ ಫೆ.16 NEWS DESK : ಕಾಯಕ ಶರಣರು, ಸವಿತಾ ಮಹರ್ಷಿಯವರು ಹಾಗೂ ಸಂತ ಸೇವಾಲಾಲ್ ಅವರು ಸಮಾಜದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ನಗರಸಭೆ ಅಧ್ಯಕ್ಷರಾದ ನೆರವಂಡ ಅನಿತಾ ಪೂವಯ್ಯ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ನಡೆದ ಕಾಯಕ ಶರಣರ, ಶ್ರೀ ಸಂತ ಸೇವಾಲಾಲ್ ಹಾಗೂ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತಾಡಿದರು. ಸಮಾಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸಲು ಶರಣರು ಹಾಗೂ ಪವಾಡ ಪುರುಷರು ಶ್ರಮಿಸಿದ್ದು, ಈ ಮಹನೀಯರ ವಿಚಾರಧಾರೆಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ನಗರಸಭೆ ಅಧ್ಯಕ್ಷರು ನುಡಿದರು. ಸವಿತಾ ಸಮಾಜವನ್ನು ರಾಜ್ಯದ ವಿವಿಧ ಭಾಗಗಳಲ್ಲಿ ಬೇರೆ ಬೇರೆ ಹೆಸರುಗಳಿಂದ ಕರೆಯುತ್ತಿದ್ದಾರೆ. ರಾಷ್ಟ್ರಕೂಟ, ವಿಜಯನಗರ ಚಾಲುಕ್ಯರ ಶಾಸನದಲ್ಲಿ ಸವಿತಾ ಸಮಾಜದವರ ಬಗ್ಗೆ ಉಲ್ಲೇಖವಿದೆ. ಅನೇಕ ಶಾಸನಗಳ ಮೇಲೆ ಸವಿತಾ ಸಮಾಜದ ಸಾದನಗಳಾದ ಕತ್ತಿ, ಕನ್ನಡಿ ಮತ್ತು ಕತ್ತರಿಗಳನ್ನು ಕೆತ್ತಲಾಗಿದೆ ಎಂದು ಅನಿತಾ…
ಮಡಿಕೇರಿ ಫೆ.16 NEWS DESK : ಕೊಡಗು ಜಿಲ್ಲಾ ಮಾಜಿ ಸೈನಿಕರ ಸಂಘದಿಂದ ಫೆ.25 ರಂದು ಗೋಣಿಕೊಪ್ಪಲಿನಲ್ಲಿ ಜಿಲ್ಲೆಯ ಮಾಜಿ ಸೈನಿಕರ ಮತ್ತು ವಿಧವೆಯರ ಕುಂದುಕೊರತೆಯ ಅಹವಾಲು ಆಲಿಸುವ ಸಭೆ ನಡೆಯಲಿದ್ದು, ಭೂಸೇನಾಧಿಕಾರಿ ಲೆಫ್ಟಿನೆಂಟ್ ಜನರಲ್ ಎ.ಕೆ.ಸಿಂಗ್ ಭೇಟಿ ನೀಡಲಿದ್ದಾರೆ ಎಂದು ಸಂಘದ ಅಧ್ಯಕ್ಷ ನಿವೃತ್ತ ಮೇಜರ್ ಬಿ.ಎ.ಕಾರ್ಯಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋಣಿಕೊಪ್ಪಲಿನ ಕಾವೇರಿ ಕಾಲೇಜಿನಲ್ಲಿ ಸಭೆ ನಡೆಯಲಿದ್ದು, ಜಿಲ್ಲೆಯ ಮಾಜಿ ಸೈನಿಕರ ಮತ್ತು ವಿಧವೆಯರ ಕುಂದುಕೊರತೆಯ ಅಹವಾಲನ್ನು ಭೂಸೇನಾಧಿಕಾರಿ ಲೆಫ್ಟಿನೆಂಟ್ ಜನರಲ್ ಎ.ಕೆ ಸಿಂಗ್ ಆಗಮಿಸಲಿದ್ದು, ಕೊಡಗಿನ ಎಲ್ಲಾ ಮಾಜಿ ಸೈನಿಕರು, ವಿಧವೆಯರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಿ ತಮ್ಮ ಅಹವಾಲನ್ನು ನೀಡಿ ಕುಂದುಕೊರತೆಗಳನ್ನು ಬಗೆಹರಿಸಿಕೊಳ್ಳಲು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಪೆನ್ಷನ್ಗೆ ಸಂಬಂಧಿಸಿದಂತೆ ಇರುವ ಸಮಸ್ಯೆಗಳು, ಇಸಿಹೆಚ್ಸಿ ಸೇರಿದಂತೆ ತಮ್ಮ ಸಮಸ್ಯೆಗಳನ್ನು ಹೇಳಲು ಅವಕಾಶವಿದೆ. ಇದರೊಂದಿಗೆ ಕಾನ್ಸರ್ ಜಾಗೃತಿ ಕಾರ್ಯಕ್ರಮ, ಕಣ್ಣು ಹಾಗೂ ದಂತ ಪರೀಕ್ಷೆ ಸೇರಿದಂತೆ ವಿವಿಧ ರೀತಿಯ ಆರೋಗ್ಯ ತಪಾಸಣಾ ಕಾರ್ಯಕ್ರಮ ನಡೆಯಲಿದೆ ಎಂದರು.…
ಮಡಿಕೇರಿ ಫೆ.16 NEWS DESK : ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿನ ಮೂಲ ಸೌಲಭ್ಯಗಳಿಗಾಗಿ ಹೆಚ್ಚಿನ ಅನುದಾನ ಮೀಸಲಿಡುವುದು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಸಿ.ಇ.ಟಿ ಹಾಗೂ ನೀಟ್ ತರಬೇತಿ ನೀಡುವ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುವುದಾಗಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ಸಂಘಟನೆಯ ಕೊಡಗು ಜಿಲ್ಲಾ ಸಂಚಾಲಕ ಸುಭಾಷ್ ತಿಳಿಸಿದ್ದಾರೆ. ಆದರೆ ಪ್ರತಿ ವರ್ಷ ಬಜೆಟ್ ನ ಶೇ.30 ನ್ನು ಶಿಕ್ಷಣಕ್ಕೆ ನೀಡಬೇಕೆಂಬ ಜನಸಾಮಾನ್ಯರ, ವಿದ್ಯಾರ್ಥಿಗಳ ಒಕ್ಕೊರಲಿನ ಬೇಡಿಕೆಯನ್ನು ಕಡೆಗಣಿಸಿ ಶೇ.11.9 ಮಾತ್ರವೇ ನೀಡಿರುವುದು ನಿರಾಶಾದಾಯಕ ಬೆಳವಣಿಗೆ ಎಂದು ಟೀಕಿಸಿದ್ದಾರೆ. ಸರ್ಕಾರಿ ಶಾಲಾ, ಕಾಲೇಜುಗಳನ್ನು ಅಭಿವೃದ್ಧಿ ಪಡಿಸಬೇಕೆಂಬ ಮಾತು ಬಜೆಟ್ ನಲ್ಲಿ ಕೇಳಿ ಬಂದರೂ ಶುಲ್ಕ ಏರಿಕೆಯ ಮೇಲೆ ನಿರ್ಬಂಧ ಹೇರುವುದರ ಕುರಿತು ಯಾವ ಉಲ್ಲೇಖವೂ ಇಲ್ಲ. ಎನ್.ಇ.ಪಿ ಶಿಫಾರಸ್ಸಿನಂತೆ ರಾಜ್ಯದ ಹಲವು ಕಾಲೇಜುಗಳನ್ನು ಸ್ವಹಣಕಾಸು ಸಂಸ್ಥೆಗಳನ್ನಾಗಿ ಮಾಡಿ ಅವುಗಳಲ್ಲಿನ ಶುಲ್ಕ ಕಳೆದ 2 ವರ್ಷಗಳಲ್ಲಿ 10ಪಟ್ಟು ಹೆಚ್ಚಿಸಿರುವುದರ ಕುರಿತಾಗಿ ಸರ್ಕಾರದ ಗಮನಕ್ಕೆ ತಂದಿದ್ದರೂ ಈ ಕುರಿತು ಕ್ರಮ ಕೈಗೊಳ್ಳುವ ಭರವಸೆ…
ಮಡಿಕೇರಿ ಫೆ.16 NEWS DESK : ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿ ಹುದ್ದೆಯ ನೇಮಕಾತಿಯಲ್ಲಿ ಬಿ.ಎಸ್ಸಿ ಅರಣ್ಯ ಶಾಸ್ತ್ರ ಪದವಿಯನ್ನೆ ಕನಿಷ್ಠ ವಿದ್ಯಾರ್ಹತೆಯನ್ನಾಗಿ ಮಾಡುವಂತೆ ಕರ್ನಾಟಕ ಅರಣ್ಯ ಪದವೀಧರರು ಮತ್ತು ವಿದ್ಯಾರ್ಥಿಗಳ ಸಂಘ ಒತ್ತಾಯಿಸಿದೆ. ಕಳೆದ ಏಳು ದಿನಗಳಿಂದ ತರಗತಿ ಬಹಿಷ್ಕರಿಸಿರುವ ಪೊನ್ನಂಪೇಟೆ ಮಹಾವಿದ್ಯಾಲಯದ ವಿದ್ಯಾರ್ಥಿಗಳು, ನಗರದ ಹಳೆಯ ಖಾಸಗಿ ಬಸ್ನಿಲ್ದಾಣದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಮೆರವಣಿಗೆ ಮೂಲಕ ಸಾಗಿ ಬೇಡಿಕೆಗಳ ಈಡೇರಿಗೆ ಆಗ್ರಹಿಸಿದರು. ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ ಮಾನವ ಸರಪಳಿ ರಚಿಸಿ, ಅಸಮಾಧಾನ ವ್ಯಕ್ತಪಡಿಸಿದರಲ್ಲದೇ, ಬೀದಿ ನಾಟಕದ ಮೂಲಕ ಅರಣ್ಯ ಶಿಕ್ಷಣದ ಮಹತ್ವ ಸಾರಿದರು. ಟಿ.ಎಮ್.ವಿಜಯ ಭಾಸ್ಕರ್ ಅವರು ಸಲ್ಲಿಸಿರುವ 6ನೇಯ ಆಡಳಿತ ಸುಧಾರಣೆ ವರದಿಯ ಅಧ್ಯಾಯ 4ರ ಅಧಿಸೂಚನೆ ಸಂಖ್ಯೆ 81ನ್ನು ಕೈಬಿಡುವಂತೆ ಒತ್ತಾಯಿಸಿದರು, ಅಣುಕು ಪ್ರದರ್ಶನದ ಮೂಲಕ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ವೃತ್ತಿಪರ (ಅರಣ್ಯಶಾಸ್ತ್ರ) ಪದವೀಧರರ ಸಾಮಥ್ರ್ಯ ಮತ್ತು ಅಗತ್ಯವನ್ನು ಅರಿತುಕೊಂಡ ಕರ್ನಾಟಕ ಸರ್ಕಾರವು 2003ರಲ್ಲಿ ಸಹಾಯಕ…
ಮಡಿಕೇರಿ ಫೆ.16 NEWS DESK : ಕರ್ನಾಟಕದ ಇತಿಹಾಸದಲ್ಲೇ ಇದೊಂದು ನಿರಾಶಾದಾಯಕ ಬಜೆಟ್ ಆಗಿದೆ, ಕೊಡಗಿನಲ್ಲಿ ಇಬ್ಬರು ಕಾಂಗ್ರೆಸ್ ಶಾಸಕರಿದ್ದರೂ ವಿಶೇಷ ಅನುದಾನ ಅಥವಾ ಯೋಜನೆಗಳನ್ನು ಘೋಷಿಸದೇ ಇರುವುದು ನಿರಾಶೆಗೆ ಕಾರಣವಾಗಿದೆ ಎಂದು ಕೊಡಗು ಜಿಲ್ಲಾ ಬಿಜೆಪಿಯ ಸಾಮಾಜಿಕ ಜಾಲತಾಣದ ಜಿಲ್ಲಾ ಸಂಚಾಲಕ ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಜನರ ಕಿವಿಗೆ ಹೂ ಇಡುವ ಬಜೆಟ್ ಮಮಡಿಸಲಾಗಿದೆ ಎಂದು ಟೀಕಿಸಿದ್ದಾರೆ. ಕೊಡಗು ಜಿಲ್ಲೆ ಮತ್ತು ಕರ್ನಾಟಕ ರಾಜ್ಯದ ಅಭಿವೃದ್ಧಿಗೆ ಮುಖ್ಯಮಂತ್ರಿಗಳು ಯಾವುದೇ ಕೊಡುಗೆ ನೀಡಿಲ್ಲ. ಕ್ರೀಡಾ ಪ್ರತಿಭೆಗಳ ಜಿಲ್ಲೆಯಾಗಿರುವ ಕೊಡಗಿನ ಕ್ರೀಡಾಕ್ಷೇತ್ರಕ್ಕೆ ಅನುದಾನ ಘೋಷಿಸುವ ನಿರೀಕ್ಷೆ ಇತ್ತಾದರೂ ಇದು ಹುಸಿಯಾಗಿದೆ. ವನ್ಯಜೀವಿ ಹಾಗೂ ಮಾನವ ಸಂಘರ್ಷ ತಡೆಗೆ ಯಾವುದೇ ಪರಿಹಾರ ಯೋಜನೆ ಘೋಷಿಸಿಲ್ಲ. ಗ್ಯಾರಂಟಿ ಯೋಜನೆಯ ಭರವಸೆಗಳನ್ನು ಈಡೇರಿಸಲು ಸುಮಾರು 60 ಸಾವಿರ ಕೋಟಿಗಿಂತ ಅಧಿಕ ಹಣ ಬೇಕು. ಪರಿಸ್ಥಿತಿ ಹೀಗಿರುವಾಗ ಅಭಿವೃದ್ಧಿ ಕಾರ್ಯಗಳಿಗೆ ಹಣ ಹೊಂದಿಸಲು ಹೇಗೆ ಸಾಧ್ಯ…
ಮಡಿಕೇರಿ ಫೆ.16 NEWS DESK : ದಕ್ಷಿಣ ಕೊಡಗಿನ ಮಾಯಮುಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ಹೊರಗಿನವರಿಂದ ಕಸದ ಸಮಸ್ಯೆ ಸೃಷ್ಟಿಯಾಗಿದೆ. ಬೇರೆ ಊರುಗಳಿಂದ ತಂದ ರಾಶಿ ರಾಶಿ ಕಸವನ್ನು ರಸ್ತೆ ಬದಿಯಲ್ಲಿ ಸುರಿದು ಹೋಗುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಗ್ರಾ.ಪಂ ರೂ.10 ಸಾವಿರ ದಂಡ ವಿಧಿಸುವ ಎಚ್ಚರಿಕೆ ನೀಡಿದೆ. ಕಸ ಸುರಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಗ್ರಾ.ಪಂ ಅಧ್ಯಕ್ಷ ಆಪಟ್ಟೀರ ಎಸ್.ಟಾಟು ಮೊಣ್ಣಪ್ಪ ಅವರು ಮಾಯಮುಡಿ ಇಲ್ಲಿಯವರೆಗೆ ಸ್ವಚ್ಛ ಗ್ರಾಮವಾಗಿತ್ತು. ಆದರೆ ಇತ್ತೀಚೆಗೆ ಬೇರೆ ಊರುಗಳಿಂದ ಕಸದ ರಾಶಿಯನ್ನು ತಂದು ಇಲ್ಲಿ ಸುರಿಯುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮಾಯಮುಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಾಸಿಸುವ ಜನರಿಗೆ ಸ್ವಚ್ಛತೆಯ ಬಗ್ಗೆ ಅರಿವಿದೆ. ಬೇರೆ ಊರಿನಿಂದ ಕಸವನ್ನು ತಂದು ಎಲ್ಲೆಂದರಲ್ಲಿ ಹಾಕುತ್ತಿರುವ ಕಿಡಿಗೇಡಿಗಳು ಅಶುಚಿತ್ವದ ವಾತಾವರಣವನ್ನು ಸೃಷ್ಟಿಸುತ್ತಿದ್ದಾರೆ. ಇದನ್ನು ಗ್ರಾ.ಪಂ ಗಂಭೀರವಾಗಿ ಪರಿಗಣಿಸಿದ್ದು, ಯಾರೇ ಕಸ ಹಾಕಿದರೂ ರೂ.10 ಸಾವಿರ ದಂಡ ವಿಧಿಸಲಾಗುವುದು ಮತ್ತು ಕಸ ಹಾಕುವವರ ಮೇಲೆ ನಿಗಾ ವಹಿಸಲು…
ಪುತ್ತೂರು ಫೆ.16 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾಗಿ ಡಾ.ನಿಶ್ಚಯ್ ಕುಮಾರ್ ಹೆಗ್ಡೆ ಪದ ಸ್ವೀಕಾರ ಮಾಡಿದ್ದಾರೆ. ಹದಿನೆಂಟು ವರ್ಷಗಳ ಅಧ್ಯಾಪನದ ಅನುಭವವನ್ನು ಹೊಂದಿರುವ ಇವರು ಕಂಪ್ಯೂಟರ್ ವಿಭಾಗದ ನೂತನ ತಂತ್ರಜ್ಞಾನಗಳ ಬಗ್ಗೆ ಅಪಾರ ತಿಳುವಳಿಕೆಯನ್ನು ಹೊಂದಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ಪದಾಧಿಕಾರಿಗಳು, ಪ್ರಾಂಶುಪಾಲರು, ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಪದಸ್ವೀಕಾರ ಕಾರ್ಯಕ್ರಮದಲ್ಲಿ ಹಾಜರಿದ್ದು ಶುಭ ಹಾರೈಸಿದರು.
ವಿರಾಜಪೇಟೆ ಫೆ.16 NEWS DESK : ವಿರಾಜಪೇಟೆಯ ಆರ್ಜಿ ಗ್ರಾಮದ ಕಲ್ಲುಬಾಣೆಯ ಕಲ್ಲುಬಾಯ್ಸ್ ಯುವಕ ಸಂಘದ ವತಿಯಿಂದ ಬಗರ್ ಹುಕುಂ ಅಕ್ರಮ ಸಕ್ರಮ ಸಮಿತಿಯ ನೂತನ ತಾಲೂಕು ಅಧ್ಯಕ್ಷ ಆರ್.ಕೆ.ಅಬ್ದುಲ್ ಸಲಾಂ ಅವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿದ್ದ ಅತಿಥಿ ಗಣ್ಯರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭ ಪುರಸಭೆ ಸದಸ್ಯ ಮಹಮ್ಮದ್ ರಾಫಿ ಮಾತನಾಡಿ, ಜವಬ್ದಾರಿ ಸ್ಥಾನ ಸಿಕ್ಕಿರುವುದು ತುಂಬಾ ಸಂತೋಷದ ವಿಷಯ ಮತ್ತು ಕಲ್ಲುಬಾಯ್ಸ್ ತಂಡದ ವತಿಯಿಂದ ತಾವು ಹುಟ್ಟಿದ ಪ್ರದೇಶದಲ್ಲಿ ಸನ್ಮಾನ ಮಾಡಿ ಪ್ರೋತ್ಸಾಹ ನೀಡುತ್ತಿರುವುದು ಹೆಮ್ಮೆಯ ವಿಚಾರ ಎಂದರು. ಒಬ್ಬ ನಾಯಕನಿಗೆ ಏನೇ ಪದವಿ ಬಂದರೂ ತಮ್ಮ ಹುಟ್ಟೂರಿನಲ್ಲಿ ಸಿಗುವ ಗೌರವ, ಸನ್ಮಾನಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಸಲಾಂ ಅವರ ಪಕ್ಷ ನಿಷ್ಠೆ, ಪ್ರಾಮಾಣಿಕತೆ, ಅವರ ಬದ್ಧತೆ ಇಂದು ಅವರಿಗೆ ಅಧ್ಯಕ್ಷ ಸ್ಥಾನ ಪಡೆದುಕೊಳ್ಳಲು ಸಾಧ್ಯವಾಗಿದೆ. ಕಡು ಬಡವರು ಸರಕಾರಿ ಜಾಗದಲ್ಲಿ ಅನೇಕ ವರ್ಷಗಳಿಂದ ವಾಸಿಸುತ್ತಿದಾರೆ. ಆದರೆ ಅವರಿಗೆ ಇಂದಿಗೂ ಅದನ್ನು ತಮ್ಮ ಹೆಸರಿಗೆ ಮಾಡಿಕೊಳ್ಳಲು ಸಾದ್ಯವಾಗಿಲ್ಲ. ಈ ಸಮಿತಿ…






