ಮಡಿಕೇರಿ ಫೆ.16 NEWS DESK : ಸದಸ್ಯರ ಮತ ಪಡೆದು ಆಡಳಿತ ಚುಕ್ಕಾಣಿ ಹಿಡಿದ ನಂತರ ತಮ್ಮ ಸಂಸ್ಥೆಗಳ ಅಭಿವೃದ್ಧಿಗೆ ಆದ್ಯತೆ ಕೊಡಬೇಕು ಎಂದು ಎನ್.ಎ.ರವಿ ಬಸಪ್ಪ ತಿಳಿಸಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನ ಸಂಯುಕ್ತಾಶ್ರಯದಲ್ಲಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಸಹಕಾರ ದವಸ ಭಂಡಾರಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳಿಗೆ ಸಹಕಾರ ಕಾಯ್ದೆ, ಕಾನೂನು ತಿದ್ದುಪಡಿ ಹಾಗೂ ಪಶುಪಾಲನೆ ಕುರಿತು ವಿಶೇಷ ಶಿಕ್ಷಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು, ಮಾತನಾಡಿದರು. ದವಸದ ರೂಪದಲ್ಲಿ ವ್ಯವಹಾರ ನಡೆಸುತ್ತಿದ್ದ ಸಂಘಗಳನ್ನು ಇಂದಿಗೂ ಉಳಿಸಿಕೊಂಡು ಬಂದಿರುವ ಪ್ರತಿನಿಧಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿ ಶುಭಾಶಯ ಕೋರಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಯೂನಿಯನ್ ಅಧ್ಯಕ್ಷ ಎ.ಕೆ.ಮನುಮುತ್ತಪ್ಪ, ಹಾಲು ಉತ್ಪಾದನೆಯಲ್ಲಿ ಭಾರತ ವಿಶ್ವದಲ್ಲೆ ಮೊದಲ ಸ್ಥಾನದಲ್ಲಿದೆ. ಕರ್ನಾಟಕವೂ ಸಹ ಅಗ್ರ ಪಾಲು ಉತ್ಪಾದಕರ ರಾಜ್ಯಗಳ ಪೈಕಿ ಇದೆ. ಆದರೆ ಕೊಡಗು ಕೇವಲ ಹಾಲಿನ ಮಾರಾಟ ಪ್ರದೇಶವಾಗಿದ್ದು ಹೈನೋದ್ಯಮ…
ಲೇಖಕ: admin
ನಾಪೋಕ್ಲು ಫೆ.16 NEWS DESK : ವಿದ್ಯುತ್ ಲೈನಿಗೆ ಮರದ ಗೊಂಬೆ ಸ್ಪರ್ಶಿಸಿ ಶಾರ್ಟ್ ಸರ್ಕಿಟ್ ಉಂಟಾಗಿ ಅಡಿಕೆ ಹಾಗೂ ಸಿಲ್ವರ್ ಗಿಡಗಳು ಭಸ್ಮವಾದ ಘಟನೆ ಚರಿಯಪರಂಬುವಿನಲ್ಲಿ ನಡೆದಿದೆ. ಚರಿಯ ಪರಂಬು ರಸ್ತೆಯಲ್ಲಿರುವ ಮೇಜರ್ ನಂದ ಅವರ ತೋಟದ ಪಕ್ಕ ಶಾರ್ಟ್ ಸರ್ಕಿಟ್ ನಿಂದಾಗಿ ಬೆಂಕಿ ಹತ್ತಿಕೊಂಡಿದ್ದು ಸುಮಾರು ಒಂದು ಎಕ್ಕರೆ ಜಾಗದಲ್ಲಿದ್ದ ಅಡಿಕೆ, ಸಿಲ್ವರ್ ಗಿಡ ನಾಶವಾಗಿದೆ. ಇದರಿಂದಾಗಿ ನಾಪೋಕ್ಲು ಪಟ್ಟಣಕ್ಕೆ ನೀರು ಸರಬರಾಜಿನ ಪಂಪು ನಿಷ್ಕ್ರಿಯಗೊಂಡಿದ್ದು ಸಮಸ್ಯೆ ಎದುರಾಗಿದೆ . ಚೆಸ್ಕಾಂ ಇಲಾಖೆಯ ಇಂಜಿನಿಯರ್ ಹರೀಶ್ ಪ್ರತಿಕ್ರಿಯಿಸಿ ಸ್ಥಳಕ್ಕೆ ಸಿಬ್ಬಂದಿಯನ್ನು ಕಳುಹಿಸಿ ಕ್ರಮ ಕೈಗೊಳ್ಳಲಾಗಿದೆ. ತೋಟದ ಮಾಲೀಕರು ಮರ ಕಡಿಯಲು ಅನುಮತಿ ನೀಡಿದರೆ ಶೀಘ್ರ ದುರಸ್ತಿ ಕಾರ್ಯ ಕೈಗೊಂಡು ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು. ವರದಿ : ದುಗ್ಗಳ ಸದಾನಂದ
ನಾಪೋಕ್ಲು ಫೆ.16 NEWS DESK : ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ‘”ಕಾಲತ್ ರ ಕಳಿ” ಎಂಬ ನೂತನ ಕೊಡವ ಚಲನಚಿತ್ರಕ್ಕೆ ಮುಹೂರ್ತ ಪೂಜೆ ನಡೆಯಿತು. ಪಿ ಅಂಡ್ ಜಿ ಕ್ರಿಯೇಶನ್ಸ್ ಅಡಿಯಲ್ಲಿ ಬಾಳೆಯಡ ಪ್ರತಿಷ್ ಪೂವಯ್ಯ ಹಾಗೂ ಆಚೆಯಡ ಗಗನ್ ಗಣಪತಿ ನಿರ್ದೇಶನದ ನಾಲ್ಕನೇ ಕೊಡವ ಚಲನಚಿತ್ರ ಇದಾಗಿದ್ದು, ಸೋಮೆಂಡ ಬೋಸ್ ಬೆಳ್ಳಿಯಪ್ಪ ಪ್ರೊಡಕ್ಷನ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುದ್ದಾರೆ. ದೇವಾಲಯದ ಪಾರು ಪತ್ತೆಗಾರ ಪರದಂಡ ಪ್ರಿನ್ಸ್ ತಮ್ಮಯ್ಯ ಚಿತ್ರತಂಡದ ಪರವಾಗಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿ ಯಾವುದೇ ವಿಘ್ನ ಕುಂದುಕೊರತೆಗಳಾಗದಂತೆ ಸುಸೂತ್ರವಾಗಿ ಪೂರ್ಣಗೊಳ್ಳಲಿ ಪ್ರಾರ್ಥಿಸಿದರು. ಚಲನಚಿತ್ರದ ನಿರ್ದೇಶಕರಾಗಿ ಆಚೆಯಡ ಗಗನ್ ಗಣಪತಿ ಮಾತನಾಡಿ, ಕೊಡವ ಭಾಷೆಯ ನೂತನ ಸಿನಿಮಾ ಉತ್ತಮ ಚಿತ್ರಕಥೆಯನ್ನು ಹೊಂದಿದೆ. ಈಗಿನ ಕಾಲಘಟ್ಟದಲ್ಲಿ ನಡೆಯುವ ಸಾಮಾಜಿಕ ದುಷ್ಪರಿಣಾಮಗಳ ಕುರಿತ ಸಿನಿಮಾ ಇದಾಗಿದ್ದು, ಸಾಮಾಜಿಕ ಕಳಕಳಿಯನ್ನು ಹೊಂದಿದೆ ಎಲ್ಲರೂ ವೀಕ್ಷಿಸಿ, ಪ್ರೋತ್ಸಾಹಿಸಬೇಕೆಂದು ಕರೆ ನೀಡಿದರು. ಸೋಮೆಂಡ ಬೋಸ್ ಬೆಳ್ಳಿಯಪ್ಪ ಮಾತನಾಡಿ, ಹಲವು ಕಿರು ಚಿತ್ರಗಳನ್ನು ಈಗಾಗಲೇ ನಿರ್ಮಿಸಿದ್ದು, ನೂತನ ಸಿನಿಮಾ…
ಬೆಂಗಳೂರು ಫೆ.16 NEWS DESK : ಕರ್ನಾಟಕ ಬಜೆಟ್ : *ಕಂದಾಯ* 392. ಕಂದಾಯ ಇಲಾಖೆಯ ಭೂಮಿ, ಸರ್ವೆ ಮತ್ತು ನೋಂದಣಿ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಗಣಕೀಕರಣಗೊಳಿಸಿ, ಶಿಥಿಲಾವಸ್ಥೆಯಲ್ಲಿರುವ ದಾಖಲೆಗಳನ್ನು ಶಾಶ್ವತವಾಗಿ ಉಳಿಸಿ, ನಕಲಿ ದಾಖಲೆಗಳನ್ನು ಸೃಷ್ಟಿಸಲು ಅವಕಾಶವಿರದಂತೆ ಗಣಕೀಕೃತ ದಾಖಲೆಗಳನ್ನು ನಾಗರಿಕರು, ಸ್ವತಃ ಆನ್ ಲೈನ್ ನಲ್ಲಿ ಪಡೆದುಕೊಳ್ಳಲು ಅನುವಾಗುವಂತೆ ಭೂ ಸುರಕ್ಷಾ ಯೋಜನೆಯನ್ನು ಪ್ರಾಯೋಗಿಕವಾಗಿ ಆರಂಭಿಸಲಾಗುವುದು. 393. ಆಕಾರ್ಬಂದ್ ಮತ್ತು ಆರ್.ಟಿ.ಸಿ. ಯಲ್ಲಿನ ವಿಸ್ತೀರ್ಣವನ್ನು ಹೊಂದಾಣಿಕೆ ಮಾಡುವ ಮೂಲಕ ಹಿಡುವಳಿದಾರರಿಗೆ ತ್ವರಿತ ಸೇವೆ ಒದಗಿಸಲು ಆಕಾರ್ಬಂದ್ಗಳ ಗಣಕೀಕರಣ ಕಾರ್ಯವನ್ನು ಕೈಗೊಳ್ಳಲಾಗುವುದು. 394. ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಬಹು ಮಾಲೀಕತ್ವವುಳ್ಳ ಪಹಣಿಗಳನ್ನು ಅಳತೆಗೆ ಒಳಪಡಿಸುವ ಮೂಲಕ ಪ್ರತಿ ಹಿಡುವಳಿದಾರರಿಗೆ ಪೋಡಿ ಮಾಡಿ ಪ್ರತ್ಯೇಕ ಆರ್.ಟಿ.ಸಿ.ಯನ್ನು ವಿತರಿಸುವ ಅಭಿಯಾನವನ್ನು ಪ್ರಾರಂಭಿಸಲಾಗಿತ್ತು. ಬಾಕಿ ಉಳಿದಿರುವ ಗ್ರಾಮಗಳನ್ನು ಪೋಡಿ ಅಭಿಯಾನ 2.0 ರಡಿ ಪೋಡಿ ಮುಕ್ತ ಮಾಡಲು ಆದ್ಯತೆ ಮೇರೆಗೆ ಕ್ರಮ ವಹಿಸಲಾಗುವುದು. 395. ದರಖಾಸ್ತು ಪೋಡಿ ಅಭಿಯಾನದಡಿ ರೈತರ ಜಮೀನಿನ ದುರಸ್ತಿ…
ಮಡಿಕೇರಿ ಫೆ.16 NEWS DESK : ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಇತರರ ಬದುಕಿನಲ್ಲಿ ಬದಲಾವಣೆಗೆ ಕಾರಣರಾಗಬೇಕು. ಬದುಕಲೆಂದೇ ಸಂಘಟನೆಗಳಿಗೆ ಸೇರುವ ಬದಲಿಗೆ ಸಂಘಟನೆಗಳಿಗೆ ಸೇಪ೯ಡೆಯಾದ ಬಳಿಕ ಇತರರ ಬದುಕನ್ನು ಬದಲಾಯಿಸುವ ನಿಟ್ಟಿನಲ್ಲಿ ಪ್ರಯತ್ನ ಪಡಬೇಕು ಎಂದು ರೋಟರಿ ಜಿಲ್ಲೆ 3181 ನ ಗವನ೯ರ್ ಹೆಚ್.ಆರ್.ಕೇಶವ ಕರೆ ನೀಡಿದ್ದಾರೆ. ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಗೆ ಅಧಿಕೃತ ಭೇಟಿ ನೀಡಿದ ಸಂದಭ೯ ರೋಟರಿ ಸಭಾಂಗಣದಲ್ಲಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಹೆಚ್.ಆರ್.ಕೇಶವ್, ಸಮಾಜಕ್ಕೆ ನಾನಾ ರೀತಿಯ ಸೇವೆಗಳ ಮೂಲಕ ಒಳಿತನ್ನುಂಟು ಮಾಡಬೇಕೆಂಬ ಉದ್ದೇಶ ಹೊಂದಿರುವ ರೋಟರಿಯ ಧ್ಯೇಯಗಳೇ ಹೆಚ್ಚಿನ ಸಂಖ್ಯೆಯಲ್ಲಿ ಜನರು ರೋಟರಿ ಸದಸ್ಯರಾಗಲು ಪ್ರೇರಣೆಯಾಗಿದೆ ಎಂದು ಹೇಳಿದರು. ಸಂಘಟನೆಯೇ ಜೀವನವಲ್ಲ. ಆದರೆ ಇತರರ ಜೀವನದ ಮೇಲೆ ಉತ್ತಮ ಪರಿಣಾಮ ಬೀರಲು ಸಂಘಟನೆಗಳ ಮೂಲಕ ಸಾಧ್ಯವಿದೆ. ಇದನ್ನು ರೋಟರಿ ಸಂಸ್ಥೆಯ ಸದಸ್ಯರು ನಿರೂಪಿಸಿದ್ದಾರೆ ಎಂದು ಹೇಳಿದರು. ರೋಟರಿ ಸದಸ್ಯರು ಅಂತರರಾಷ್ಟ್ರೀಯ ರೋಟರಿಗೆ ನೀಡುವ ದೇಣಿಗೆಯು ಸಾವಿರಾರು ಸಮಾಜ ಸೇವಾ ಕಾಯ೯ಗಳಿಗೆ ಸಹಕಾರಿಯಾಗುತ್ತಿದೆ. ಲಕ್ಷಾಂತರ…
ನಾಪೋಕ್ಲು ಫೆ.16 NEWS DESK : ಹೊದ್ದೂರು ಗ್ರಾಮ ಪಂಚಾಯಿತಿಯ ವಾಟೆಕಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯುಷ್ಮಾನ್ ಇಲಾಖೆ ವತಿಯಿಂದ ಯೋಗ ತರಬೇತಿ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಯೋಗ ಗುರು ಕೌಶಿಕ್ , ವಿದ್ಯಾರ್ಥಿಗಳಿಗೆ ಯೋಗ ತರಬೇತಿಯನ್ನು ನೀಡಿ ಯೋಗದ ಮಹತ್ವ, ಉಪಯೋಗಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಕಾರ್ಯಕ್ರಮದಲ್ಲಿ ಆಡಳಿತ ವೈದ್ಯಾಧಿಕಾರಿಗಳು, ಪದಾಧಿಕಾರಿಗಳು, ಮಡಿಕೇರಿಯ ಜಿಲ್ಲಾ ಸರಕಾರಿ ಆಯುರ್ವೇದ ಆಸ್ಪತ್ರೆ, ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ಹಾಜರಿದ್ದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಫೆ.16 NEWS DESK : ಶ್ರೀ ಮಜಗದ್ಗುರು ಶಂಕರಾಚಾರ್ಯ ಮಹಾ ಸಂಸ್ಥಾನ, ಶ್ರೀ ಸಂಸ್ಥಾನ ಗೋಕರ್ಣ, ಶ್ರೀರಾಮಚಂದ್ರಪುರ ಮಠ, ಮುಳ್ಳೇರಿಯಾ ಮಂಡಲ ಅಂತರ್ಗತ ಕೊಡಗು, ಸುಳ್ಯ, ಗುತ್ತಿಗಾರು ಹಾಗೂ ಈಶ್ವರ ಮಂಗಲ ವಲಯಗಳ ಸಂಯುಕ್ತ ಆಶ್ರಯದಲ್ಲಿ ಜೇಡ್ಲದಲ್ಲಿನ ಗೋಪಾಲಕೃಷ್ಣ ದೇವಕಿ ಪಶು ಸಂಗೋಪನ ಕೇಂದ್ರದಲ್ಲಿ ಎರಡನೇ ವರ್ಷದ ಗೋ ಅಪ್ಪುಗೆ ಕಾರ್ಯಕ್ರಮ ನಡೆಯಿತು. ಗೋವುಗಳನ್ನು ಅಪ್ಪಿಕೊಳ್ಳುವ ಮೂಲಕ ವಿದ್ಯಾಥಿ೯ಗಳು ಹಸುವಿನ ಮಮತೆಯ ಮಹತ್ವ ಅರಿತರು. ಸಂಪಾಜೆ ಗ್ರಾ.ಪಂ ಅಧ್ಯಕ್ಷೆ ರಮಾದೇವಿ ಬಾಲಚಂದ್ರ ಕಳಗಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಕಣ್ಮರೆಯಾಗುತ್ತಿರುವ ಹಸು ಸಾಕಾಣಿಕೆ ಹಾಗೂ ಗೋಪ್ರೇಮ ಇನ್ನು ಮುಂದೆ ಹೊಸ ಪೀಳಿಗೆಯಲ್ಲಿ ಮತ್ತೊಮ್ಮೆ ಕಾಣಿಸುವಂತಾಗಬೇಕು. ಆ ಮೂಲಕ ಜನರು ಮತ್ತೊಮ್ಮೆ ನೈಸರ್ಗಿಕ ಕೃಷಿ ಚಟುವಟಿಕೆ ಹಾಗೂ ಇನ್ನಿತರ ದೇಶೀಯ ಸ್ವಾವಲಂಬನೆ ಕಡೆಗೆ ಚಿತ್ತಹರಿಸುವಂತಾಗಬೇಕೆಂದು ಆಶಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜೇಡ್ಲ ಗೋಶಾಲೆಯ ಅಧ್ಯಕ್ಷ ಡಾ.ರಾಜಾರಾಮ್ ಮಾತನಾಡಿ, ಪಾಶ್ಚಾತ್ಯ ದೇಶದಲ್ಲಿ ಈಗ ಗೋ ಅಪ್ಪುಗೆ ಹಲವು ಕಾಯಿಲೆಗಳಿಗೆ ಮದ್ದೆಂದು ಕಂಡುಹಿಡಿದು ಇದನ್ನೇ ಹೆಚ್ಚಾಗಿ…
ಬೆಂಗಳೂರು, ಫೆ 16 NEWS DESK : ಹಲವು ದಿನಗಳ ಬೇಡಿಕೆಯಂತೆ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಇನ್ನಷ್ಟು ದಕ್ಷತೆ ತರುವ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿರುವುದಕ್ಕೆ ವೈದ್ಯಕೀಯ ಶಿಕ್ಷಣ ಜೀವನೋಪಾಯ ಹಾಗೂ ಕೌಶಲ್ಯಾಭಿವೃಧಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅಭಿನಂದನೆ ಸಲ್ಲಿಸಿದ್ದಾರೆ. ಕೊಡಗು ವೈದ್ಯಕೀಯ ಸಂಸ್ಥೆಯಲ್ಲಿ ಅಪಾಯಕಾರಿ ಸಾಂಕ್ರಾಮಿಕ ರೋಗ, ಸೋಂಕುಗಳನ್ನು ಪತ್ತೆ ಹಚ್ಚಲು ವೈರಲ್ ರಿಸರ್ಚ್ ಮತ್ತು ಡಯಾಗ್ನಸ್ಟಿಕ್ ಲ್ಯಾಬರೋಟರಿ ನಿರ್ಮಾಣ, ಚಿತ್ರದುರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಅಗತ್ಯವಿರುವ ಹೊಸ ವೈದ್ಯಕೀಯ ಕಟ್ಟಡ, ವಿದ್ಯಾರ್ಥಿ ವಸತಿ ನಿಲಯ, ಸಿಬ್ಬಂದಿ, ವಸತಿ ಗೃಹ ನಿರ್ಮಾಣ ಕಾರ್ಯ ಪೂರ್ಣಗೊಳಿಸುತ್ತೇವೆ ಎಂದು ಹೇಳಿದ್ದಾರೆ. ವೈದ್ಯಕೀಯ ಶಿಕ್ಷಣ ಕ್ಷೇತ್ರವು ಸರ್ಕಾರಿ ವಲಯವೆಂದು ವ್ಯಾಪಕ ಬೆಳವಣಿಗೆ ಹೊಂದಿದ್ದು, ಇಲಾಖೆ ಕಾರ್ಯ ನಿರ್ವಹಣೆಯಲ್ಲಿ ಇನ್ನಷ್ಟು ದಕ್ಷತೆ ತರುವ ಕಾರಣಕ್ಕಾಗಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಿಸಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದಿದ್ದಾರೆ. ಪ್ರಸಕ್ತ ಸಾಲಿನ ಬಜೆಟ್ನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು…
ನಾಪೋಕ್ಲು ಫೆ.16 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕೊಡಗು ಜಿಲ್ಲಾ ಘಟಕದ ವತಿಯಿಂದ ಕೊಡಗು ಜಿಲ್ಲೆಯ ಪಾನಮುಕ್ತ ನವಜೀವನ ಸಮಿತಿ ಸದಸ್ಯರಿಗೆ ತರಬೇತಿ ಕಾರ್ಯಾಗಾರ ನಡೆಯಿತು. ನಗರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ನಡೆಯದ ಕಾರ್ಯಕ್ರಮವನ್ನು ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಉದ್ಘಾಟಿಸಿ, ನಮ್ಮ ಜೀವನದಲ್ಲಿ ಸೇವಾ ಮನೋಭಾವನೆಯನ್ನು ರೂಡಿಸಿಕೊಂಡರೆ ನಮ್ಮ ಜನ್ಮ ಸಾರ್ಥಕವಾಗಲೂ ಸಾಧ್ಯ. ಜೊತೆಗೆ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಪಾನಮುಕ್ತರನ್ನು ನಿರಂತರವಾಗಿ ಅನುಪಾಲನೆ ಮಾಡುವುದು ಒಂದು ಪುಣ್ಯದ ಕೆಲಸ ಎಂದರು. ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ಮಾತನಾಡಿ, ಮಗುವನ್ನು ತಾಯಿಯು ಕೈಹಿಡಿದು ಪೋಷಿಸಿದಂತೆ ನವ ಜೀವನ ಸಮಿತಿ ಸದಸ್ಯರನ್ನು ಪೋಷಣೆ ಮಾಡಿದಾಗ ಜನಜಾಗೃತಿ ಕಾರ್ಯಕ್ರಮ ಯಶಸ್ವಿಯಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಕೊಡಗು ಜಿಲ್ಲೆಯಲ್ಲಿ ಒಟ್ಟು ಇದುವರೆಗೆ 55 ಮದ್ಯವರ್ಜನ ಶಿಬಿರಗಳನ್ನ ಅತ್ಯುತ್ತಮವಾಗಿ ಆಯೋಜಿಸಲಾಗಿದೆ. ಶಿಬಿರಗಳಲ್ಲಿ…
ಬೆಂಗಳೂರು ಫೆ.16 NEWS DESK *ಅಲ್ಪಸಂಖ್ಯಾತರ ಕಲ್ಯಾಣ* 184. ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡುವ ಮೂಲಕ ಅವರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು; • 50 ಸಂಖ್ಯಾಬಲವುಳ್ಳ 50 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು. • 100 ಸಂಖ್ಯಾಬಲವುಳ್ಳ 100 ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲಾಗುವುದು. • 100 ಹೊಸ ಮೌಲಾನಾ ಆಜಾದ್ ಶಾಲೆಗಳನ್ನು ತೆರೆಯಲಾಗುವುದು. • ಸ್ವಂತ ಕಟ್ಟಡವನ್ನು ಹೊಂದಿರುವ 25 ಶಾಲೆಗಳಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಪ್ರಾರಂಭಿಸಲಾಗುವುದು. 185. ಸರ್ಕಾರಿ/ಖಾಸಗಿ ಕಾಲೇಜುಗಳಲ್ಲಿ ಬಿ.ಎಸ್ಸಿ. ನರ್ಸಿಂಗ್/ ಜಿ.ಎನ್.ಎಂ ನರ್ಸಿಂಗ್ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಶುಲ್ಕ ಭರಿಸುವ ಯೋಜನೆಯನ್ನು ಪುನಃ ಪ್ರಾರಂಭ ಮಾಡಲಾಗುವುದು. 186. ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಉದ್ಯಮಶೀಲರು ಸ್ಥಾಪಿಸುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಹೊಸ ಘಟಕಗಳನ್ನು ಸ್ಥಾಪಿಸಲು ಹಾಗೂ ಅಸ್ತಿತ್ವದಲ್ಲಿರುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಘಟಕಗಳ ಉನ್ನತೀಕರಣಕ್ಕೆ KSFC ಮೂಲಕ ಪಡೆಯುವ 10…






