ಮಡಿಕೇರಿ ಫೆ.15 NEWS DESK : ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಎಫ್ಎಸ್ಟಿ, ಎಸ್ಎಸ್ಟಿ, ವಿಎಸ್ಟಿ ಸೇರಿದಂತೆ ವಿವಿಧ ತಂಡಗಳಿಗೆ ಚುನಾವಣಾ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣಾ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದ್ದಾರೆ. ನಗರದ ಜಿ.ಪಂ.ಸಭಾಂಗಣದಲ್ಲಿ ಲೋಕಸಭಾ ಚುನಾವಣೆ ಸಂಬಂಧ ಮಾದರಿ ನೀತಿ ಸಂಹಿತೆ ಪಾಲಿಸುವ ಬಗ್ಗೆ ನಡೆದ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲೋಕಸಭಾ ಚುನಾವಣೆ ಸಂಬಂಧಿಸಿದಂತೆ ವಿವಿಧ ತಂಡದ ಅಧಿಕಾರಿಗಳು ಚುನಾವಣೆಯನ್ನು ವ್ಯವಸ್ಥಿತವಾಗಿ ನಡೆಸಲು ಈಗಿನಿಂದಲೇ ಸಿದ್ಧ್ದತೆ ಮಾಡಿಕೊಳ್ಳಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ತಮ್ಮ ಕರ್ತವ್ಯ ವ್ಯಾಪ್ತಿಯಲ್ಲಿ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದರು. ಲೋಕಸಭಾ ಚುನಾವಣೆ ಘೋಷಣೆಯಾದ ಕೂಡಲೇ ಸರ್ಕಾರಿ ಕಟ್ಟಡಗಳು, ಸಾರ್ವಜನಿಕ ಸ್ಥಳಗಳು ಸೇರಿದಂತೆ ವಿವಿಧೆಡೆ ಅಳವಡಿಸಲಾಗಿರುವ ಜಾಹೀರಾತು, ಪ್ರಕಟಣೆ, ಬ್ಯಾನರ್ಗಳನ್ನು ತೆರವುಗೊಳಿಸಿ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ಚುನಾವಣಾ ಆಯೋಗದ ನಿರ್ದೇಶನವನ್ನು ಅಧಿಕಾರಿಗಳು ಪಾಲಿಸಬೇಕು. ಸಂಶಯಕ್ಕೆ ಅವಕಾಶ ಮಾಡಬಾರದು. ಮಾಹಿತಿ ತಿಳಿಯದಿದ್ದಲ್ಲಿ ಮೇಲಾಧಿಕಾರಿಗಳ…
ಲೇಖಕ: admin
ಮಡಿಕೇರಿ ಫೆ.15 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕಾಯಕ ಶರಣರ ಜಯಂತಿ, ಶ್ರೀ ಸಂತ ಸೇವಾಲಾಲ್ ಜಯಂತಿ ಹಾಗೂ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮವು ಫೆಬ್ರವರಿ, 16 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿ ಫೆ.15 NEWS DESK : ಚಾಮಿಯಾಲ ಫೈಟರ್ಸ್ ಕ್ಲಬ್ ವತಿಯಿಂದ ಇದೇ ಪ್ರಥಮ ಬಾರಿಗೆ ಕೊಡವ ಮುಸ್ಲಿಂ ಕುಟುಂಬ ತಂಡಗಳ ನಡುವೆ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗುತ್ತಿದೆ. ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ತಂಡಗಳು ಮಾ.25ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಆಯೋಜಕ ಮುನೀರ್ ಚಾಮಿಯಾಲ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಏಪ್ರಿಲ್ 16 ರಿಂದ 21ರ ವರೆಗೆ ವಿರಾಜಪೇಟೆಯ ಚಾಮಿಯಾಲ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾವಳಿ-2024 ನ್ನು ನಡೆಸಲು ನಿರ್ಧರಿಸಲಾಗಿದೆ. ವಿಜೇತ ತಂಡಕ್ಕೆ ರೂ.1 ಲಕ್ಷ ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಬಹುಮಾನ ರೂ.50 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ, ತೃತೀಯ ಆಕರ್ಷಕ ಟ್ರೋಫಿ ಮತ್ತು ನಾಲ್ಕನೇ ವಿಜೇತ ತಂಡಕ್ಕೆ ಬಹುಮಾನ ನೀಡಲಾಗುವುದು ಎಂದು ಹೇಳಿದ್ದಾರೆ. ಭಾಗವಹಿಸುವ ತಂಡಗಳು ಮಾ.25 ರೊಳಗೆ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಹಾಗೂ ಹೆಸರು ನೋಂದಾವಣೆಗಾಗಿ 7411110041, 7349064834 ನ್ನು ಸಂಪರ್ಕಿಸಬಹುದಾಗಿದೆ ಎಂದು ಮುನೀರ್ ಚಾಮಿಯಾಲ ತಿಳಿಸಿದ್ದಾರೆ.
ಮಡಿಕೇರಿ ಫೆ.15 : ಕೊಡವ ಭಾಷೆಯನ್ನು ಸಂವಿಧಾನದ 8 ನೇ ಶೆಡ್ಯೂಲ್ಗೆ ಸೇರಿಸಬೇಕು ಎಂದು ಒತ್ತಾಯಿಸಿ ವಿಶ್ವ ರಾಷ್ಟ್ರ ಸಂಸ್ಥೆಯ ಅಂತರರಾಷ್ಟ್ರೀಯ ಮಾತೃಭಾಷಾ ದಿನವಾದ ಫೆ.21 ರಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೆಳಗ್ಗೆ 10.30 ಗಂಟೆಗೆ ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಗುವುದು ಹೇಳಿದ್ದಾರೆ. ಯುನೇಸ್ಕೋದ 2024 ರ ಘೋಷವಾಕ್ಯದಂತೆ ಅಂತರ ಜನಾಂಗದ ತಿಳುವಳಿಕೆಗೆ ವಿಶ್ವದಾದ್ಯಂತ ಎಲ್ಲಾ ಮಾತೃಭಾಷೆಗಳನ್ನು ಶಿಕ್ಷಣ ಸಂಸ್ಥೆಗಳಲ್ಲಿ ಪ್ರಚುರ ಪಡಿಸುವುದು ಈ ಬಾರಿಯ ಮಹತ್ವವಾಗಿದೆ. ಕೊಡವ ಭಾಷೆ, ಪ್ರಕೃತಿಯ ಆರಾಧಕರಾಗಿರುವ ಆದಿಮ ಸಂಜಾತ ಕೊಡವರ ಮಾತೃಭಾಷೆಯಾಗಿದ್ದು, ಜೀವನದ ಆತ್ಮವಾಗಿದೆ. ಜನ್ಮ ನೀಡಿದ ತಾಯಿ, ಮಾತೃಭಾಷೆ ಕೊಡವ, ಮಾತೃಭೂಮಿ ಕೊಡವ ಲ್ಯಾಂಡ್, ಮಾತೆ ಕಾವೇರಿ ಮತ್ತು ಪ್ರಕೃತಿ ಮಾತೆಯಿಂದ ಕೊಡವ ಜನಜೀವನವನ್ನು ಬೇರ್ಪಡಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.…
ನಾಪೋಕ್ಲು ಫೆ.15 NEWS DESK : ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಆಟೋ ಚಾಲಕರ ಹಾಗೂ ಮಾಲೀಕರ ಸಭೆ ನಡೆಯಿತು. ಸಭೆಯಲ್ಲಿ ಡಿ ವೈ ಎಸ್ ಪಿ ಮಹೇಶ್ ಕುಮಾರ್ ಮಾತನಾಡಿ, ವಾಹನ ಚಾಲಕರು ಸೂಕ್ತ ದಾಖಲಾತಿಗಳನ್ನು ಇರಿಸಿಕೊಳ್ಳತಕ್ಕದ್ದು, ದಾಖಲಾತಿ ಇಲ್ಲದೆ ವಾಹನ ಚಾಲನೆ ಮಾಡಿದಲ್ಲಿ ಪೊಲೀಸರು ವಾಹನಗಳನ್ನು ವಶಪಡಿಸಿಕೊಳ್ಳಲಿದ್ದಾರೆ ಎಂದು ಎಚ್ಚರಿಸಿದರು. ಪ್ರತಿಯೊಬ್ಬ ಚಾಲಕರು ಸಮವಸ್ತ್ರ ಧರಿಸಿ ಜೊತೆಗೆ ಸೂಕ್ತ ದಾಖಲೆಗಳನ್ನು ಹೊಂದಿರತಕ್ಕದ್ದು, ಇದಕ್ಕೆ ಒಂದು ವಾರಗಳ ಕಾಲಾವಕಾಶ ನೀಡಲಾಗಿದ್ದು ಅಷ್ಟರೊಳಗೆ ದಾಖಲಾತಿಗಳನ್ನು ಸರಿಪಡಿಸಿಕೊಳ್ಳಬೇಕು. ತಪ್ಪಿದಲ್ಲಿ ಕಟ್ಟು ನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು. ಪಟ್ಟಣದ ಅಂಗಡಿ ಮಾಲೀಕರು ತಮ್ಮ ವಾಹನಗಳನ್ನು ಅಂಗಡಿಗಳ ಮುಂದೆ ನಿಲ್ಲಿಸುವುದರಿಂದ ಪಾರ್ಕಿಂಗ್ ಸಮಸ್ಯೆ ಎದುರಾಗುತ್ತಿದೆ. ಅಂಗಡಿಗಳ ಮಾಲೀಕರು ತಮ್ಮ ವಾಹನಗಳನ್ನು ಅಂಗಡಿಗಳ ಮುಂದೆ ನಿಲ್ಲಿಸಿ ಸಮಸ್ಯೆ ತಂದೊಡಬಾರದು ಎಂದರು. ಈ ಸಂದರ್ಭ ಆಟೋ ಚಾಲಕರು ಆಟೋ ನಿಲುಗಡೆಗಾಗಿ ಮುಖ್ಯರಸ್ತೆಯಲ್ಲಿ ಸ್ಥಳಾವಕಾಶ ಕಲ್ಪಿಸುವಂತೆ ಕೋರಿದರು. ಈಗಾಗಲೇ ಬೇತು ರಸ್ತೆಯಲ್ಲಿ ಆಟೋ ನಿಲ್ದಾಣಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಮುಖ್ಯ ರಸ್ತೆಯಲ್ಲಿ…
ಮಡಿಕೇರಿ ಫೆ.15 NEWS DESK : ವನ್ಯ ಜೀವಿಗಳಿಂದ ತಯಾರಿಸಿದ ವಸ್ತುಗಳ ಬಳಕೆಗೆ ಇರುವ ನಿಷೇಧದ ಬಗ್ಗೆ ಕೊಡಗಿನ ಜನತೆಗೆ ಆತಂಕ ಬೇಡ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದ್ದಾರೆ. ವಿಧಾನಸಭೆಯ ಮೊಗಶಾಲೆಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಪೊನ್ನಣ್ಣ, ಅರಣ್ಯ ಇಲಾಖೆಯು ಇಂತಹ ವಸ್ತುಗಳನ್ನು ಹಿಂದುರಿಗಸಲು ದಿನ ನಿಗದಿ ಪಡಿಸಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿರುವುದನ್ನು ಗಮನಿಸಿದ್ದು, ಇದರಿಂದ ಕೊಡಗಿನ ಜನತೆಗೆ ತೊಂದರೆಯಾಗಲಿದೆ. ಕೊಡಗಿನಲ್ಲಿ ಪಾರಂಪರಿಕವಾಗಿ ಮತ್ತು ಸಾಂಪ್ರಾದಾಯಿಕವಾಗಿ ಐನ್ ಮನೆಗಳಲ್ಲಿ, ದೇವಸ್ಥಾನಗಳಲ್ಲಿ ಹಾಗೂ ಪೀಚೆ ಕತ್ತಿ ಮುಂತಾದ ಆಭರಣಗಳಲ್ಲಿ ತಲತಲಾಂತರದಿಂದ ವನ್ಯ ಜೀವಿಯ ಉತ್ಪನ್ನಗಳನ್ನು ಬಳಕೆ ಮಾಡಲಾಗಿದ್ದು, ಇವುಗಳ ರಕ್ಷಣೆಯ ಜವಾಬ್ದಾರಿ ತಮ್ಮ ಮೇಲಿದೆ. ಈ ವಿಚಾರವನ್ನು ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿವರ ಗಮನಕ್ಕೆ ತರಲಾಗಿದೆ. ಸರ್ಕಾರದ ಮಟ್ಟದಲ್ಲಿ ಪರಿಹಾರ ಸಿಗದೇ ಇದ್ದಲ್ಲಿ ನ್ಯಾಯಾಂಗ ವ್ಯವಸ್ಥೆಯಲ್ಲಿ ಪರಿಹಾರ ಒದಗಿಸಲು ತಾವು ಬದ್ದರಿದ್ದು ಯಾರು ಕೂಡ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಎ.ಎಸ್.ಪೊನ್ನಣ್ಣ ಭರವಸೆ…
ಮಡಿಕೇರಿ ಫೆ.15 NEWS DESK : ಜ್ಞಾನ ವ್ಯಾಪಿ ಮಸೀದಿ ಅತಿಕ್ರಮಣವಾಗಿದೆ ಎಂದು ಆರೋಪಿಸಿ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಡಿಕೇರಿ ಮುಸ್ಲಿಂ ಜಮಾತ್ ಗಳ ಒಕ್ಕೂಟ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದ ಒಕ್ಕೂಟದ ಪದಾಧಿಕಾರಿಗಳು ಘೋಷಣೆಗಳನ್ನು ಕೂಗಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬರಹಗಾರರು ಹಾಗೂ ಚಿಂತಕರಾದ ಶಿವ ಸುಂದರ್ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಧರ್ಮದ ಹೆಸರಿನಲ್ಲಿ ರಾಜಕೀಯ ನಡೆಯುತ್ತಿದೆ. ಪ್ರತಿ ದೇವಾಲಯ ಇತಿಹಾಸ ತೆಗೆದು ನೋಡಿದರೆ 80 ದೇವಾಲಯಗಳು ಮಾತ್ರ ಹಾಳಾಗಿರಬಹುದು. ಪುರಾತನ ಕಾಲದ ದೇವಾಲಯಗಳನ್ನು ಅಗೆದರೆ ಜೈನ ಬಸದಿ, ಬೌದ್ಧ ಮಂದಿರಗಳು ಸಿಗುತ್ತವೆ. ಒಂದು ದೇವಾಲಯ, ಮಸೀದಿಯನ್ನು ಬೀಳಿಸುವುದು ಅಧರ್ಮ. ತ್ಯಾಗ ಬಲಿದಾನಕ್ಕೆ ಕರೆ ಕೊಟ್ಟವರ ಮಕ್ಕಳ್ಯಾರೂ ರಕ್ತ ಹರಿಸಿಲ್ಲ. ಬಡ ಹಿಂದೂಗಳನ್ನು ಜೈಲಿಗೆ ತಳ್ಳಿ ತಮಾಷೆ ನೋಡುತ್ತಿದ್ದಾರೆ. ಅವರ ಮಕ್ಕಳು ವಿದೇಶಗಳಲ್ಲಿ ಧರ್ಮವನ್ನೇ ಮರೆತು ಆರಾಮಾಗಿದ್ದಾರೆ. ಇದು ಕೇವಲ ಜನರನ್ನು ಒಡೆದು ಆಳುವ…
ಮಡಿಕೇರಿ ಫೆ.15 NEWS DESK : ಭಾರತೀಯ ಜನತಾ ಪಾರ್ಟಿಯ ಕೊಡಗು ಜಿಲ್ಲಾ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳನ್ನಾಗಿ ವಿರಾಜಪೇಟೆಯ ಕಾವಾಡಿ ಗ್ರಾಮದ ಪ್ರಸಾದ್ ಚಂಗಪ್ಪ ಹಾಗೂ ಮಡಿಕೇರಿಯ ಇಬ್ಬನಿವಳವಾಡಿ ಗ್ರಾಮದ ವಿನೋದ್ ಪಿ.ಎಂ ಅವರನ್ನು ಆಯ್ಕೆ ಮಾಡಿರುವುದಾಗಿ ಮೋರ್ಚಾದ ನೂತನ ಜಿಲ್ಲಾಧ್ಯಕ್ಷ ಮಹೇಶ್ ತಿಮ್ಮಯ್ಯ ತಿಳಿಸಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷರ ಅನುಮೋದನೆ ಮೇರೆಗೆ ಪಕ್ಷ ಸಂಘಟನೆಯ ದೃಷ್ಟಿಯಿಂದ ಇವರಿಬ್ಬರನ್ನು ಪ್ರಧಾನ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿದೆ. ಜಿಲ್ಲೆಯಲ್ಲಿ ಯುವ ಸಮೂಹ ಬಿಜೆಪಿ ಪರವಾಗಿದ್ದು, ಮತ್ತಷ್ಟು ಯುವಬಲವನ್ನು ಹೆಚ್ಚಿಸಿ ಪಕ್ಷವನ್ನು ಬಲಿಷ್ಠಗೊಳಿಸಲಾಗುವುದು ಎಂದು ಮಹೇಶ್ ತಿಮ್ಮಯ್ಯ ಹೇಳಿದ್ದಾರೆ.
ನಾಪೋಕ್ಲು ಫೆ.15 NEWS DESK : ಮೂರ್ನಾಡಿನ ನಕ್ಷತ್ರ ಆಟೋ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಫೆ.18 ರಂದು ಮೂರ್ನಾಡುವಿನಲ್ಲಿ ಆಟೋ ಮಾಲೀಕರ ಹಾಗೂ ಚಾಲಕರ ಕುಟುಂಬಗಳ ಸಮ್ಮಿಲನ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಮೂರ್ನಾಡು ಪಾಂಡಾಣೆ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನ ನಕ್ಷತ್ರ ಆಟೋ ಮಾಲೀಕರ ಹಾಗೂ ಚಾಲಕರ ಸಂಘದ ಅಧ್ಯಕ್ಷ ಬಿ.ಡಿ ಉಮೇಶ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕಾಂತೂರು ಗ್ರಾ.ಪಂ ಅಧ್ಯಕ್ಷ ಬಿ.ಎಸ್.ಕುಶನ್ ರೈ, ತ್ರಿನೇತ್ರ ವಾಹನ ಮಾಲೀಕರ ಮತ್ತು ಚಾಲಕರ ಸಂಘದ ಅಧ್ಯಕ್ಷ ಕರವಂಡ ಸಜನ್ ಗಣಪತಿ , ಫ್ರೆಂಡ್ಸ್ ವಾಹನ ಮಾಲೀಕ ಮತ್ತು ಚಾಲಕರ ಸಂಘದ ಅಧ್ಯಕ್ಷ ರಿಯಾಜ್, ನಾಪೋಕ್ಲೂವಿನ ಆಟೋ ಮಾಲೀಕರ ಮತ್ತು ಚಾಲಕರ ಸಂಘದ ಅಧ್ಯಕ್ಷ ರಾಜೀವ್, ಅಮ್ಮತಿಯ ಆಟೋ ಮಾಲೀಕರ ಹಾಗೂ ಚಾಲಕರ ಸಂಘದ ಅಧ್ಯಕ್ಷ ಅಭಿಜಿತ್ , ಮೂರ್ನಾಡು ಪೋಲಿಸ್ ಉಪಟಾಲಯ ಪಿ.ಟಿ.ಶ್ರೀನಿವಾಸ್, ಮೂರ್ನಾಡು ಪೊಲೀಸ್ ಉಪಠಾಣೆ ಸಿಬ್ಬಂದಿ ರಾಜೇಂದ್ರ , ಕಾಂತೂರು ಗ್ರಾ.ಪಂ ಸದಸ್ಯ…
ಮಡಿಕೇರಿ ಫೆ.15 NEWS DESK : ಚೆಟ್ಟಳ್ಳಿ ಸಮೀಪದ ಕಂಡಕರೆ ಎಸ್ಕೆಎಸ್ಎಸ್ಎಫ್ 2024-26 ನೇ ಸಾಲಿನ ನೂತನ ಅಧ್ಯಕ್ಷರಾಗಿ ಸಿ.ಕೆ.ಸಂಶುದ್ದೀನ್,ಪ್ರಧಾನ ಕಾರ್ಯದರ್ಶಿಯಾಗಿ ಹಾರಿಸ್ ಬಾಖವಿ ಹಾಗೂ ಕೋಶಾಧಿಕಾರಿಯಾಗಿ ವಿ.ಪಿ.ಹಂಸ ಅವಿರೋಧ ಆಯ್ಕೆಯಾಗಿದ್ದಾರೆ. ಎಸ್.ಕೆ.ಎಸ್.ಎಸ್.ಎಫ್ ನಿಕಟಪೂರ್ವ ಅಧ್ಯಕ್ಷ ಕೆ.ಎಂ.ಮೊಹಮ್ಮದ್ ಅವರ ಅಧ್ಯಕ್ಷತೆಯಲ್ಲಿ ಕಂಡಕರೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಎಸ್.ಕೆ.ಎಸ್.ಎಸ್.ಎಫ್ ಜಿಲ್ಲಾ ಪ್ರತನಿಧಿ ಆರಿಫ್ ಫೈಝಿ ನೇತೃತ್ವದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಕಾರ್ಯಾಧ್ಯಕ್ಷರಾಗಿ ಸಿ.ಎ.ಮೊಹಮ್ಮದ್ ಸಹಾದತ್, ಉಪಾಧ್ಯಕ್ಷರಾಗಿ ಸಿದ್ದೀಖ್ ಅಜ್ಹರಿ, ವಿ.ಪಿ.ಮುಸ್ತಫಾ ಮೌಲವಿ, ಸಹ ಕಾರ್ಯದರ್ಶಿಗಳಾಗಿ ಕೆ.ಎಂ.ಝೈನುದ್ದೀನ್ ಫೈಜಿ, ಉಸ್ತಾದ್ ರಹ್ಮಾನ್ ಶಾಫಿ ಆಯ್ಕೆಯಾಗಿದ್ದಾರೆ. ಸದಸ್ಯರಾಗಿ ಕೆ.ಎಂ.ಮೊಹಮ್ಮದ್, ಪಿ.ಎಂ.ಉಸೈನ್ ಅಜ್ಹರಿ, ಕೆ.ಎ.ಹುಸೇನ್, ಪಿ.ಕೆ.ಯೂಸುಫ್ , ಹಸನ್ ಕುಟ್ಟಿ, ಕೆ.ಎಂ.ಅಶ್ರಫ್ ಆಯ್ಕೆಯಾಗಿದ್ದಾರೆ. ಕೌನ್ಸಿಲರ್ ಗಳಾಗಿ ಯೂಸುಫ್ ಪಿ.ಕೆ, ಪಿ.ಎಂ.ಹುಸೈನ್ ಅಝ್ಹರಿ, ಪಿ.ಎ.ಯೂಸುಫ್ ಆಯ್ಕೆಯಾಗಿದ್ದಾರೆ.






