ಲೇಖಕ: admin

ಮಡಿಕೇರಿ ಮಾ.5 NEWS DESK : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಸೇರಿದಂತೆ ವಿವಿಧ ಯೋಜನೆಯಡಿ 47 ಲಕ್ಷ ರೂ.ವೆಚ್ಚದಲ್ಲಿ ಗಾಳಿಬೀಡು ಗ್ರಾಮ ಪಂಚಾಯಿತಿಯಲ್ಲಿ ನೂತನವಾಗಿ ನಿರ್ಮಿಸಿರುವ ಕಟ್ಟಡವನ್ನು ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ಬಳಿಕ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಕೇಂದ್ರ ಸರ್ಕಾರದಿಂದ ಪ್ರತೀ ಗ್ರಾಮ ಪಂಚಾಯಿತಿಗೆ 38 ಲಕ್ಷ ರೂ.ನಷ್ಟು ನೇರವಾಗಿ ಅನುದಾನ ಬಿಡುಗಡೆಯಾಗುತ್ತಿದ್ದು, ಗ್ರಾ.ಪಂ.ಗಳು ಆರ್ಥಿಕವಾಗಿ ಸಬಲತೆ ಹೊಂದುವುದರ ಜೊತೆಗೆ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಹೇಳಿದರು. ಕೇಂದ್ರದಿಂದ 14-15ನೇ ಹಣಕಾಸು ಆಯೋಗದಿಂದ ಪಂಚಾಯತ್ ಸೇವಾ ಕೇಂದ್ರದಡಿ ಗ್ರಾ.ಪಂ.ಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಗ್ರಾಮೀಣ ರಸ್ತೆ, ಚರಂಡಿ ಮತ್ತಿತರ ಮೂಲ ಸೌಲಭ್ಯಕ್ಕೆ ಒತ್ತು ನೀಡಲಾಗಿದೆ ಎಂದರು. ಗಾಳಿಬೀಡು ಗ್ರಾ.ಪಂ.ಸೇರಿದಂತೆ ಕೊಡಗು ಜಿಲ್ಲೆಯ 60ಕ್ಕೂ ಹೆಚ್ಚು ಕಡೆಗಳಲ್ಲಿ ಮೊಬೈಲ್ ಟವರ್‍ಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಪ್ರತಾಪ್ ಸಿಂಹ ಮಾಹಿತಿ ನೀಡಿದರು.…

Read More

ಮಡಿಕೇರಿ ಮಾ.5 NEWS DESK : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ಘಟಕದ ಕೆಲವರು ಇತ್ತೀಚೆಗೆ ಸಭೆಯೊಂದನ್ನು ನಡೆಸಿ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರ ಕಾರ್ಯವೈಖರಿ ಬಗ್ಗೆ ಅಸಮಾಧಾನವಿದೆ ಎಂದು ಪ್ರತಿಬಿಂಬಿಸಿಕೊಂಡಿರುವ ಕ್ರಮ ಹಾಸ್ಯಾಸ್ಪದವಾಗಿದೆ ಜಿಲ್ಲಾ ಕಾಂಗ್ರೆಸ್ ವಕ್ತಾರ ಟಿ.ಈ.ಸುರೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪರಿಶಿಷ್ಟ ಜಾತಿ ಬಾಂಧವರು ಕಾಂಗ್ರೆಸ್ ಪಕ್ಷದ ಮೂಲ ಮತ್ತು ಸ್ವಾಭಾವಿಕ ಬಹುಸಂಖ್ಯಾತ ಮತದಾರರಾಗಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲೂ ಪ್ರಮುಖ ಪಾತ್ರ ವಹಿಸಲಿದ್ದಾರೆ. ಕೆಲವೇ ಮಂದಿಯ ತಟಸ್ಥ ನಿಲುವಿನ ತೀರ್ಮಾನಕ್ಕೆ ಪರಿಶಿಷ್ಟ ಜಾತಿಯ ಬಹುಸಂಖ್ಯಾತ ಕಾಂಗ್ರೆಸ್ಸಿಗರು ಧೃತಿಗೆಡುವುದಿಲ್ಲ. ಸರ್ಕಾರದ ನಾಮ ನಿರ್ದೇಶಿತ ಮೀಸಲಾತಿಯು ಯಾವುದೇ ಚ್ಯುತಿ ಇಲ್ಲದೆ ಪರಿಶಿಷ್ಟ ಜಾತಿಯವರಿಗೇ ಲಭಿಸುತ್ತಿದೆ. ಇದರಲ್ಲಿ ಯಾವುದೇ ಪ್ರಮಾದವಾಗುತ್ತಿಲ್ಲ ಮುಂದೆಯೂ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅವರ ನೇತೃತ್ವದಲ್ಲಿ ಎಲ್ಲಾ ಬ್ಲಾಕ್ ಅಧ್ಯಕ್ಷರ, ಕಾಂಗ್ರೆಸ್ ಮುಖಂಡರ ಹಾಗೂ ಕಾರ್ಯಕರ್ತರ ಅವಿರತ ಶ್ರಮದ ಫಲವಾಗಿ ಕೊಡಗಿನ…

Read More

ಮಡಿಕೇರಿ ಮಾ.5 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಅಲ್ಪಸಂಖ್ಯಾತರ ಓಲೈಕೆ ಬಿಟ್ಟರೆ ಬೇರೆ ಯಾವುದೇ ಅಜೆಂಡಾ ಇಲ್ಲ ಎಂದು ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದೂ ಹಾಗೂ ದಲಿತ ವಿರೋಧಿ ನೀತಿಗಳನ್ನು ಅನುಸರಿಸುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಅಧೀರರನ್ನಾಗಿ ಮಾಡಿ ಗೆಲುವು ಸಾಧಿಸುವ ವ್ಯವಸ್ಥಿತ ಪ್ರಯತ್ನಗಳು ನಡೆಯುತ್ತಿದೆ. ಬಹಳ ಹಿಂದಿನಿಂದಲೂ ಕಾಂಗ್ರೆಸ್ ಹಿಂದೂಗಳನ್ನು ಟಾರ್ಗೆಟ್ ಮಾಡಿಕೊಂಡೇ ಬಂದಿದೆ ಎಂದು ಟೀಕಿಸಿದರು. 2023ರಲ್ಲಿ ವಿಧಾನಸಭೆ ಚುನಾವಣಾ ಪ್ರಚಾರದ ಸಂದರ್ಭ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಾಲಿಬಾನ್ ಆಡಳಿತವಿರುತ್ತದೆ ಎಂದು ನಾನು ಹೇಳಿದ್ದೆ. ಆ ಮಾತು ಈಗ ಸಾಬೀತಾಗಿದ್ದು, ವಿಧಾನಸೌಧದ ಆವರಣದಲ್ಲೇ ಪಾಕಿಸ್ತಾನದ ಪರ ಘೋಷಣೆ ಕೂಗಲಾಗಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲೂ ಜನ ಮೈಮರೆತರೆ ವಿಧಾನಸೌಧವನ್ನು ಗುಂಬಾಜ್ ಆಗಿ ಪರಿವರ್ತಿಸಿ ಬಿಡುತ್ತಾರೆ ಎಂದು ಆರೋಪಿಸಿದರು. ಎಫ್‍ಎಸ್‍ಎಲ್ ವರದಿ ನೀಡಲು ಎಷ್ಟು ಸಮಯ ಬೇಕು ಎಂದು…

Read More

ನಾಪೋಕ್ಲು ಮಾ.5 NEWS DESK :  ಕೋಕೇರಿ ಗ್ರಾಮದ ಅಂಬಾಡಿ ಪೈಸರಿಯಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಕೂಲಿ ಕಾರ್ಮಿಕನ ಮನೆಯೊಂದು ಧರೆಗುರುಳಿದೆ. ಚೈಯoಡಣೆ ಗ್ರಾಮ ಪಂಚಾಯಿತಿಗೆ ಒಳಪಟ್ಟ ಕೋಕೇರಿ ಗ್ರಾಮದ ಅಂಬಾಡಿ ಪೈಸಾರಿಯಲ್ಲಿ ಸುಮಾರು ಎಂಟು ವರ್ಷಗಳಿಂದ ವಾಸವಾಗಿದ್ದ ಕೂಲಿ ಕಾರ್ಮಿಕ ಲೋಕೇಶ್ – ಭವಾನಿ ದಂಪತಿಗಳು ವಾಸವಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಭವಾನಿ ಮನೆ ಕೆಲಸದಲ್ಲಿ ತೊಡಗಿಕೊಂಡಿರುವ ಸಂದರ್ಭ ಆಕಸ್ಮಿಕವಾಗಿ ಮನೆ ಸಂಪೂರ್ಣ ಮುರಿದು ಬಿದ್ದು ಚಾವಣಿಗೆ ಅಳವಡಿಸಿದ ಹಂಚುಗಳು,ಮನೆಯಲ್ಲಿದ್ದ ಪಾತ್ರೆ ಪಗಡಿ ಸಾಮಾನುಗಳು ನುಜ್ಜುಗುಜ್ಜಾಗಿ ನಷ್ಟ ಸಂಭವಿಸಿದೆ. ಈ ಸಂದರ್ಭ ಭವಾನಿ ಸಣ್ಣಪುಟ್ಟ ಗಾಯಗಳೊಂದಿಗೆ ಅದೃಷ್ಟವಸತ್ ಜೀವಪಾಯದಿಂದ ಪಾರಾಗಿದ್ದಾರೆ . ಇದೀಗ ಅಲ್ಲೇ ಸಮೀಪದ ಬಂಧುಗಳ ಮನೆಯಲ್ಲಿ ಲೋಕೇಶ್ – ಭವಾನಿ ದಂಪತಿಗಳ ಕುಟುಂಬ ಆಶ್ರಯ ಪಡೆದಿದೆ. ಈ ಬಗ್ಗೆ ಗ್ರಾಮ ಪಂಚಾಯಿತಿ ಹಾಗೂ ಕಂದಾಯ ಇಲಾಖೆ ದೂರನ್ನು ನೀಡಲಾಗಿದ್ದು, ನಾಪೋಕ್ಲು ಕಂದಾಯ ಪರಿವೀಕ್ಷಕ ರವಿಕುಮಾರ್ ಸ್ಪಂದಿಸಿ, ನಿರ್ಗತಿಕ ಕುಟುಂಬಕ್ಕೆ ಸೂಕ್ತ ಪರಿಹಾರದ ಭರವಸೆಯನ್ನು ನೀಡಿದ್ದಾರೆ. ವರದಿ : ದುಗ್ಗಳ…

Read More

ನಾಪೋಕ್ಲು ಮಾ.5 NEWS DESK : ಈಸ್ಟ್ ಕೊಳಕೇರಿ ಗ್ರಾಮದ ಬಿದ್ದಾಟoಡ ವಾಡೆ ಸಮೀಪದಲ್ಲಿರುವ ಶ್ರೀ ಮಹಾದೇವ ಕೋಟ ದೇವಾಲಯದಲ್ಲಿ ಪ್ರತೀ ವರ್ಷ ದಂತೆ ಈ ಬಾರಿಯೂ ಸಂಪ್ರದಾಯಿಕವಾಗಿ ಮಹಾಶಿವರಾತ್ರಿ ವಿಶೇಷ ಪೂಜೆಯು ಮಾ.8 ರಂದು ಜರುಗಲಿದೆ. ಬೆಳಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ರುದ್ರಾಭಿಷೇಕ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮ ಜರುಗಲಿದ್ದು, ಮಧ್ಯಾಹ್ನ 12 ಗಂಟೆಗೆ ಮಹಾ ಮಂಗಳಾರತಿ, ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ. ಆದ್ದರಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಆಡಳಿತ ಮಂಡಳಿ ಅಧ್ಯಕ್ಷ ಬಿದ್ದಾಟoಡ ಮುತ್ತಣ್ಣ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ. ವರದಿ : ದುಗ್ಗಳ ಸದಾನಂದ. 

Read More

ಮಡಿಕೇರಿ ಮಾ.5 NEWS DESK : ನೆಸ್ಲೆ ಇಂಡಿಯಾ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಹಾಕಿ ಕೂರ್ಗ್ ಅಸೋಸಿಯೇಷನ್ ವತಿಯಿಂದ ಮಾ.15 ರಿಂದ 17 ರವರೆಗೆ ‘ನೆಸ್‍ಕಫೆ ಕೊಡಗು ಹಾಕಿ ಕಪ್’ ಪಂದ್ಯಾವಳಿಯು ಕಾಕೋಟುಪರಂಬುವಿನಲ್ಲಿ ನಡೆಯಲಿದೆ ಎಂದು ಹಾಕಿ ಕೂರ್ಗ್ ಸಂಸ್ಥೆಯ ಅಧ್ಯಕ್ಷ ಲವಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಕೋಟುಪರಂಬು ಹಾಕಿ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿಯಲ್ಲಿ ಜಿಲ್ಲಾ ಹಾಕಿ ಲೀಗ್ ಮೂಲಕ ಆಯ್ಕೆಯಾದ 8 ತಂಡಗಳು ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿದೆ ಎಂದು ಮಾಹಿತಿ ನೀಡಿದರು. ಬೋಟಿಯತ್ನಾಡ್ ಕುಂಡ, ಈಶ್ವರ್ ಯೂತ್ ಕ್ಲಬ್ ಬೇಗೂರು, ಕೋಣನಕಟ್ಟೆ XI, ಮಲ್ಮಾ ಕಕ್ಕಬೆ, ಎಂಆರ್‍ಎಫ್ ಮೂರ್ನಾಡ್, ಬ್ಲೇಜ್ ಮೂರ್ನಾಡ್, ಅಶ್ವಿನಿಸ್ ಸ್ಪೋಟ್ರ್ಸ್ ಫೌಂಡೇಶನ್/ಕೆಎಎಲ್‍ಎಸ್, ಬೇರಿಲಿನಾಡ್ ಕಣಂಗಾಲ ತಂಡಗಳು ಪಾಲ್ಗೊಳ್ಳಲಿದ್ದಾರೆ. ಪ್ರತಿತಂಡವು ಐದು ಅತಿಥಿ ಆಟಗಾರರನ್ನು ಒಳಗೊಂಡಿದ್ದು, ವಿಜೇತ ತಂಡಕ್ಕೆ ಆಕರ್ಷಕ ಟ್ರೋಫಿ ಹಾಗೂ ನಗದು ಬಹುಮಾನ ನೀಡಲಾಗುವುದು ಎಂದು ತಿಳಿಸಿದರು. ಮಾ.15ರ ಬೆಳಗೆ 10 ಗಂಟೆಗೆ ಪಂದ್ಯಾವಳಿ ಆರಂಭವಾಗಲಿದ್ದು, ನೆಸ್ಲೆ ಇಂಡಿಯಾ…

Read More

ಮಡಿಕೇರಿ ಮಾ.5 NEWS DESK :  ಕೊಡಗು ವಿಶ್ವವಿದ್ಯಾಲಯದ ಘಟಕ ಮತ್ತು ಸಂಯೋಜಿತ ಮಹಾವಿದ್ಯಾಲಯಗಳಲ್ಲಿ 2023-24ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಬಿಎ, ಬಿಕಾಂ, ಬಿಬಿಎ, ಬಿಸಿಎ ಮತ್ತು ಬಿಎಸ್ಸಿ ಪ್ರಥಮ ವರ್ಷದ ಸ್ನಾತಕ ವಿದ್ಯಾರ್ಥಿಗಳ ಪ್ರಥಮ ಸೆಮಿಸ್ಟರ್ ಪರೀಕ್ಷಾ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಗಿದಿದ್ದು, ಮೊದಲ ಹಂತದಲ್ಲಿ ಬಿಕಾಂ, ಬಿಬಿಎ, ಬಿಸಿಎ ಮತ್ತು ಬಿಎಸ್ಸಿ ಪದವಿಗಳ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಎರಡನೇ ಹಂತದಲ್ಲಿ ಬಿಎ ಪದವಿಯ ಫಲಿತಾಂಶವನ್ನು ಸಹ ಅತೀ ಶೀಘ್ರವಾಗಿ ಪ್ರಕಟಿಸಲಾಗುತ್ತದೆ. ಕೊಡಗು ವಿಶ್ವವಿದ್ಯಾಲಯದ ಪ್ರಥಮ ವರ್ಷದ ಸ್ನಾತಕ ವಿದ್ಯಾರ್ಥಿಗಳ ಪ್ರಥಮ ಸೆಮಿಸ್ಟರ್ ಪರೀಕ್ಷೆಗಳು ಜ.25 ರಿಂದ ಆರಂಭಗೊಂಡು ಬಿಎ ಪದವಿಯ ಕೊನೆಯ ಪರೀಕ್ಷೆಯು ಮಾ.4  ರಂದು ಪೂರ್ಣಗೊಂಡಿದೆ. ಘಟಕ ಮಹಾವಿದ್ಯಾಲಯವಾಗಿರುವ ಮಡಿಕೇರಿಯ ಎಫ್‌ಎಂಕೆಎಂಸಿ ಕಾಲೇಜಿನಲ್ಲಿ ವ್ಯವಸ್ಥಿತವಾಗಿ ಮೌಲ್ಯಮಾಪನ ಕೇಂದ್ರವನ್ನು ಸಿದ್ಧಪಡಿಸಿಕೊಂಡು, ಜಿಲ್ಲೆಯ ವಿವಿಧ ಸ್ನಾತಕ ಪದವಿ ಕಾಲೇಜುಗಳ ವಿಷಯವಾರು ಮೌಲ್ಯಮಾಪಕರು ಬಹುಉತ್ಸಾಹದಿಂದ ಸಕ್ರಿಯವಾಗಿ ಭಾಗವಹಿಸಿ ಮೌಲ್ಯಮಾಪನ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಪ್ರಥಮ ವರ್ಷದ ಸ್ನಾತಕ ವಿದ್ಯಾರ್ಥಿಗಳ ಪ್ರಥಮ ಸೆಮಿಸ್ಟರ್ ಪರೀಕ್ಷೆಗಳಿಗೆ…

Read More

ಪುತ್ತೂರು ಮಾ.5 NEWS DESK :  ಕಾರ್ಪೋರೇಟ್ ಸಂಸ್ಥೆಗಳು ಬಯಸುವ ತಂತ್ರಜ್ಞಾನಗಳು ಪಠ್ಯಕ್ರಮದ ಮೂಲಕ ತಮ್ಮನ್ನು ತಲಪಲು ಒಂದೆರಡು ವರ್ಷಗಳು ಬೇಕಾಗುತ್ತದೆ. ಆ ಸಮಯದಲ್ಲಿ ಮತ್ತಷ್ಟು ಬೆಳವಣಿಗೆಗಳು ನಡೆದು ಹೋಗುತ್ತದೆ. ಈ ಅಂತರವನ್ನು ಕಡಿಮೆ ಮಾಡಲು ವಿದ್ಯಾರ್ಥಿಗಳು ಪೂರಕ ವಿಷಯಗಳನ್ನು ಕಲಿಯುವುದು ಅತೀ ಅಗತ್ಯ ಎಂದು ಪುತ್ತೂರಿನ ವೆಬ್ ಪೀಪಲ್ ಸಂಸ್ಥೆಯ ಸಹ ಸಂಸ್ಥಾಪಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಶ್ರೀನಿವಾಸ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಸಿಎ ವಿಭಾಗದ ಆಶ್ರಯದಲ್ಲಿ ನಡೆದ ರಾಷ್ಟ್ರ ಮಟ್ಟದ ತಂತ್ರಜ್ಞಾನ ಮೇಳ ಆಂತರ್ಯ-2024ರ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಇಂಟರ್ನೆಟ್, ವೃತ್ತಪತ್ರಿಕೆಗಳು, ಆನ್ ಲೈನ್ ಕೋರ್ಸುಗಳು, ವಿಚಾರಸಂಕಿರಣಗಳು, ಕಾರ್ಯಾಗಾರಗಳು ಮುಂತಾದವುಗಳಿಂದ ನಾವು ಹೊಸ ಹೊಸ ವಿಷಯಗಳನ್ನು ಕಲಿತುಕೊಳ್ಳಬಹುದು. ಕಲಿಯುವುದನ್ನು ಸರಿಯಾಗಿ ಕಲಿತು ಪರಿಣತರಾದರೆ ಅದು ಜೀವನದ ಔನ್ನತ್ಯಕ್ಕೆ ದಾರಿಯಾಗುತ್ತದೆ ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್ ಮಾತನಾಡಿ ವಿದ್ಯಾರ್ಥಿಗಳ…

Read More

ಪುತ್ತೂರು ಮಾ.5 NEWS DESK : ನಮ್ಮ ಪ್ರತಿಯೊಂದು ದೈನಂದಿನ ವ್ಯವಹಾರಗಳಲ್ಲಿ ನಾವು ವಿಜ್ಞಾನ ಮತ್ತು ತಂತ್ರಜ್ಞಾನಗಳನ್ನು ಬಳಕೆ ಮಾಡುತ್ತೇವೆ. ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ತಂತ್ರಜ್ಞಾನಗಳನ್ನು ನಾವು ಅರಿತುಕೊಂಡರೆ ಜೀವನ ಸುಗಮವಾಗುತ್ತದೆ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೂಲ ವಿಜ್ಞಾನ ವಿಭಾಗ ಹಾಗೂ ಐಎಸ್‌ಟಿಇ ವಿದ್ಯಾರ್ಥಿ ವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಸಂದರ್ಭದಲ್ಲಿ ವಿಕಸಿತ ಭಾರತಕ್ಕಾಗಿ ಸ್ಥಳೀಯ ತಂತ್ರಜ್ಞಾನಗಳು ಎನ್ನುವ ವಿಷಯಾಧಾರಿತ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತಾಡಿದರು. ವಿದ್ಯಾರ್ಥಿಗಳು ಸ್ಥಳೀಯ ಸಾರ್ವಜನಿಕರ, ರೈತರ ಸಮಸ್ಯೆಗಳ ಬಗ್ಗೆ ತಿಳಿದುಕೊಂಡು ಅದಕ್ಕೆ ಪೂರಕವಾದ ಪರಿಹಾರಗಳನ್ನು ಕಂಡುಹುಡುಕುವ ನಿಟ್ಟಿನಲ್ಲಿ ಆಸಕ್ತಿ ವಹಿಸಬೇಕು ತನ್ಮೂಲಕ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು. ಸಮಾರAಭದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ಮಾತನಾಡಿ ಪಠ್ಯಕ್ರಮಕ್ಕೆ ಪೂರಕವಾಗಿ ಅನೇಕ ವಿಷಯಗಳು ಜಾಲತಾಣಗಳಲ್ಲಿ…

Read More

ಮಡಿಕೇರಿ ಮಾ.5 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದೊಂದಿಗೆ 2023-24ನೇ ಸಾಲಿನ ಮಿಶನ್ ಶಕ್ತಿ ಯೋಜನೆಯಯಡಿ “ಬೇಟಿ ಬಚಾವೊ-ಬೇಟಿ ಪಡಾವೊ” ಜಿಲ್ಲಾ ಮಟ್ಟದ ಕಾರ್ಯಕ್ರಮದ ಅಂಗವಾಗಿ ಕುಶಾಲನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ “ಹೆಣ್ಣುಮಕ್ಕಳ ಹಕ್ಕುಗಳ ಕುರಿತು ತರಬೇತಿ ಕಾರ್ಯಾಗಾರ” ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿದೇರ್ಶಕ ನಟರಾಜ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರಸ್ತುತ ದಿನಗಳಲ್ಲಿ ಲೈಂಗಿಕ ದೌರ್ಜನ್ಯ ಹೆಚ್ಚಾಗುತ್ತಿದ್ದು, ಈ ಕುರಿತು ಮಕ್ಕಳಿಗೆ ಸುರಕ್ಷತೆಯ ಬಗ್ಗೆ ಅರಿವು ಮೂಡಿಸಬೇಕಾಗಿದೆ. ಆದ್ದರಿಂದ ಮಕ್ಕಳು ಹೆಚ್ಚು ಓದಿನ ಕಡೆ ಆಸಕ್ತಿ ವಹಿಸಬೇಕು ಮತ್ತು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು. ಒಂದು ಮಗುವು ತಾಯಿಯ ಗರ್ಭದಲ್ಲಿರುವಾಗಲೇ ಮಗು ಹಕ್ಕುಗಳನ್ನು ಪಡೆಯಲು ಅರ್ಹವಾಗಿರುತ್ತದೆ. ಲಿಂಗ ಪತ್ತೆ ಕಾನೂನು ಪ್ರಕಾರ ಅಪರಾಧ. ಮಗುವಿಗೆ ಹೃದಯ ಬಡಿತ ಶುರುವಾದ ಸಮಯದಿಂದಲೇ…

Read More