ಲೇಖಕ: admin

ಮಡಿಕೇರಿ ಫೆ.13 NEWS DESK : ಕೊಡಗು ಗೌಡ ನಿವೃತ್ತ ನೌಕರರ ಸಂಘದ ವತಿಯಿಂದ ಮಡಿಕೇರಿಯ ಕೊಡಗು ಗೌಡ ವಿದ್ಯಾ ಸಂಘದ ಸಭಾಂಗಣದಲ್ಲಿ ಅರೆಭಾಷಿಕ ಗೌಡ ವಧು-ವರರ ಸಮಾವೇಶ ನಡೆಯಿತು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಬೆಂಗಳೂರು ಸರ್ಕಾರಿ ಕಾಲೇಜ್ ನ ನಿವೃತ್ತ ಪ್ರಾಂಶುಪಾಲ ನಂಗಾರು ಲಿಂಗರಾಜು ಅವರು ವಧು-ವರರನ್ನು ಆಯ್ಕೆ ಮಾಡುವಾಗ ಹೆಚ್ಚು ಕಠಿಣ ಕ್ರಮಗಳನ್ನು ಅನುಸರಿಸದೇ ಶೇ.70 ರಷ್ಟು ಹೊಂದಿ ಬಂದರೆ ಮಾತುಕತೆಗೆ ಮುಂದಾಗುವುದು ಸೂಕ್ತ ಎಂದು ಸಲಹೆ ನೀಡಿದರು. ಕೆಲವು ಸಂದರ್ಭಗಳಲ್ಲಿ ಎಲ್ಲಾ ನಿಯಮಗಳನ್ನು ಪಾಲಿಸಲು ಸಾಧ್ಯವಾಗುವುದಿಲ್ಲ. ಹೊಂದಾಣಿಕೆಯೇ ಜೀವನವಾಗಿದ್ದು, ಸಂಸಾರದಲ್ಲಿ ಸುಖ, ಸಂತೋಷ ಸಹಬಾಳ್ವೆಯನ್ನು ನಡೆಸಲು ಎಲ್ಲರೂ ಮುಂದಾಗಬೇಕು ಎಂದರು. ಬೆಂಗಳೂರಿನಲ್ಲಿ ನೆಲೆಸಿರುವವರಿಗೆ ಕೊಡಗಿನಲ್ಲಿ ಆಸ್ತಿಯಿದ್ದರೆ ಅದನ್ನು ಉತ್ತಮ ರೀತಿಯಲ್ಲಿ ಉಳಿಸಿಕೊಂಡು ಹೋಗಬೇಕು. ಹಿರಿಯರು ಹಾಕಿ ಕೊಟ್ಟ ಕೃಷಿ ಪದ್ಧತಿಯನ್ನು ಬಿಡಬಾರದು ಎಂದ ಲಿಂಗರಾಜು, ನಿವೃತ್ತ ನೌಕರರು ಈ ಇಳಿ ವಯಸ್ಸಿನಲ್ಲೂ ಸಾಮಾಜಿಕ ಕಳಕಳಿಯೊಂದಿಗೆ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯವೆಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ…

Read More

ಮಡಿಕೇರಿ ಫೆ.13 NEWS DESK : ರಾಜ್ಯ ಮತ್ತು ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಫೆ.16 ರಂದು ಕೊಡಗು ಜಿಲ್ಲೆಯ 4 ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಸಿ.ಸಾಬು ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್, ಕರ್ನಾಟಕ ಪ್ರಾಂತ ರೈತ ಸಂಘ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ವತಿಯಿಂದ ಕೊಡಗಿನ ಕುಶಾಲನಗರ, ವಿರಾಜಪೇಟೆ, ಪೊನ್ನಂಪೇಟೆ ಹಾಗೂ ಮಡಿಕೇರಿ ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಯಲಿದೆ ಎಂದರು. ಸಿಐಟಿಯು ಜಿಲ್ಲಾಧ್ಯಕ್ಷ ಪಿ.ಎ.ಭರತ್ ಮಾತನಾಡಿ, ಕೇಂದ್ರ ಬಜೆಟ್ ನಲ್ಲಿ ಕಾರ್ಮಿಕರು ಹಾಗೂ ರೈತರಿಗೆ ಯಾವುದೇ ಸೌಲಭ್ಯ ನೀಡಿಲ್ಲ. ಕೇಂದ್ರ ಸರ್ಕಾರ ಮತೀಯ ನೀತಿಗಳಿಗೆ ಆದ್ಯತೆ ನೀಡುತ್ತಿದೆ ಹೊರತು ಜ್ವಲಂತ ಸಮಸ್ಯೆಗಳ ನಿವಾರಣೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ಬಂಡವಾಳಶಾಹಿಗಳು ಹೆಚ್ಚು ಶ್ರೀಮಂತರಾಗುತ್ತಿದ್ದಾರೆ, ಕೇಂದ್ರ ಸರ್ಕಾರದ ನೀತಿಗಳು ಬಡವರ ದೇಶ ಮತ್ತು ಶ್ರೀಮಂತರ ದೇಶ ಎಂದು ಇಬ್ಬಾಗ ಮಾಡಿದೆ.…

Read More

ಮಡಿಕೇರಿ ಫೆ.13 NEWS DESK : ಸರ್ಕಾರದ ಅಧೀನಕ್ಕೆ ಒಳಪಟ್ಟಿರುವ ಖಾಸಗಿ ದೇವಾಲಯಗಳನ್ನು ಖಾಸಗಿಯವರಿಗೇ ಬಿಟ್ಟು ಕೊಡಬೇಕು ಮತ್ತು ಮುಂದಿನ ದಿನಗಳಲ್ಲಿ ಯಾವುದೇ ಮಠ, ಮಂದಿರಗಳನ್ನು ಸರ್ಕಾರ ವಶಪಡಿಸಿಕೊಳ್ಳಬಾರದು ಎಂದು ಹ್ಯೂಮನ್ ರೈಟ್ಸ್ ಇಂಟರ್ ನ್ಯಾಷನಲ್ ಫೆಡರೇಶನ್ ನ ರಾಜ್ಯ ಘಟಕದ ಅಧ್ಯಕ್ಷ ಹರೀಶ್ ಜಿ.ಆಚಾರ್ಯ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಸ್ವಯಂ ನಿರ್ಣಯದ ಮೂಲಕ ದೇವಾಲಯಗಳನ್ನು ಬಿಟ್ಟುಕೊಡಬೇಕು, ತಪ್ಪಿದಲ್ಲಿ ಕಾನೂನು ಹೋರಾಟ ನಡೆಸಲು ಮುಂದಾಗುವುದಾಗಿ ತಿಳಿಸಿದರು. ಈ ಕುರಿತು ಅಭಿಪ್ರಾಯ ಸಂಗ್ರಹಿಸಲು ಇದೇ ಫೆ.16ರಂದು ಸಂಜೆ 4 ಗಂಟೆಗೆ ನಗರದ ಹೊಟೇಲ್ ರಾಜ್ ದರ್ಶನ್ ಸಭಾಂಗಣದಲ್ಲಿ ಸಾರ್ವಜನಿಕರ ಸಭೆ ಕರೆಯಲಾಗಿದೆ. ವಕೀಲರು, ಮಾಜಿ ಸೈನಿಕರು, ಅಧಿಕಾರಿಗಳು, ಎಲ್ಲಾ ಸಂಘ, ಸಂಸ್ಥೆಗಳ ಪ್ರಮುಖರು, ದೇವಾಲಯದ ಅರ್ಚಕರು, ಸಿಬ್ಬಂದಿಗಳು, ಕಾರ್ಮಿಕರು, ಭಕ್ತರು ಸಭೆಗೆ ಹಾಜರಾಗಿ ಅಭಿಪ್ರಾಯಗಳನ್ನು ಮಂಡಿಸಬಹುದಾಗಿದೆ ಎಂದರು. ಪ್ರಸ್ತುತ ಮುಜರಾಯಿ ಇಲಾಖೆಯ ಅಧೀನದಲ್ಲಿರುವ ಎಲ್ಲಾ ದೇವಾಲಯಗಳು ನಮ್ಮ ಪೂರ್ವಜರ ಶ್ರಮದಿಂದ ಸ್ಥಾಪಿಸಲಾಗಿದೆ. ಸರ್ಕಾರ ದೇವಾಲಯಗಳನ್ನು ನಿರ್ಮಾಣ ಮಾಡಿಲ್ಲ. ಆದಾಯ…

Read More

ನಾಪೋಕ್ಲು ಫೆ.13 : ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳು ಫೆಬ್ರವರಿ 16 ರಂದು ರಾಜ್ಯ ಬಜೆಟ್ ಮಂಡಿಸಲಿದ್ದು, ಈ ಸಂದರ್ಭದಲ್ಲಿ ಕೊಡಗಿನ ಜನತೆಗೆ ಪೂರಕವಾಗುವ ಯೋಜನೆಗಳನ್ನು ಘೋಷಿಸಬೇಕೆಂದು ಭಾರತೀಯ ಕಾಫಿ ಮಂಡಳಿ ಮಾಜಿ ಉಪಾಧ್ಯಕ್ಷ ಹಾಗೂ ಕೊಡಗು ಬೆಳೆಗಾರರ ಒಕ್ಕೂಟದ ಉಪಾಧ್ಯಕ್ಷ ಡಾ. ಸಣ್ಣುವಂಡ ಕಾವೇರಪ್ಪ ಮನವಿ ಮಾಡಿದ್ದಾರೆ. ಕೊಡಗು ಜಿಲ್ಲೆ, ಪುಟ್ಟ ಜಿಲ್ಲೆಯಾಗಿದ್ದು, ವರ್ಷದ ಹಲವು ತಿಂಗಳು ಮಳೆಯಿಂದ ಕೂಡಿರುತ್ತದೆ .ಈ ಸಂದರ್ಭದಲ್ಲಿ ಗ್ರಾಮೀಣ ರಸ್ತೆಗಳು ಹದಗೆಡುತ್ತಿವೆ .ಗ್ರಾಮೀಣ ರಸ್ತೆಗಳ ಅಭಿವೃದ್ಧಿಗಾಗಿ 100 ಕೋಟಿ ರೂ.ಗಳ ಮೀಸಲಿಡಬೇಕು ಎಂದು ಅವರು ಒತ್ತಾಯಿಸಿದರು. ರಾಜ್ಯದ ವಿವಿಧ ಭಾಗಗಳ ರೈತರಿಗೆ 10 ಹೆಚ್.ಪಿ ವರೆಗೆ ಉಚಿತ ವಿದ್ಯುತ್ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಆದರೆ ಕೊಡಗಿನ ಜನತೆಗೆ ಈ ಸೌಲಭ್ಯ ನೀಡುತ್ತಿಲ್ಲ. ಕಾಫಿ ಬೆಳೆಗಾರರಿಗೂ 10 ಹೆಚ್ ಪಿ ವರೆಗೆ ಉಚಿತ ವಿದ್ಯುತ್ ಒದಗಿಸಲು ಕ್ರಮ ಕೈಗೊಳ್ಳಬೇಕು, ಕಾಫಿ ಬೆಳೆಗಾರರಿಗೆ ಸೋಲಾರ್ ಸಬ್ಸಿಡಿ ಸ್ಕೀಮ್ ಅನ್ನು ಸಿಗುವಂತೆ ಮಾಡಬೇಕು. ಪ್ರಸ್ತುತ ದಿನಗಳಲ್ಲಿ ಜಿಲ್ಲೆಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದ್ದು,…

Read More

ಮಡಿಕೇರಿ ಫೆ.13 NEWS DESK : ವಿರಾಜಪೇಟೆಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿ.ಎ ಪದವಿ ವಿದ್ಯಾರ್ಥಿ ಪಿ.ಎಸ್.ಕಾರ್ತಿಕ್  ಬೆಂಗಳೂರಿನಲ್ಲಿ ಫೆ.11 ರಿಂದ 18ರ ವರೆಗೆ ನಡೆಯುವ ನ್ಯಾಷನಲ್ ಬಾಕ್ಸಿಂಗ್ ಓಪನ್ ಟ್ಯಾಲೆಂಟ್‌ ಹಂಟ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಸಿ.ದಯಾನಂದ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ ಫೆ.13 NEWS DESK :  ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕು ಮೈದಾನದಲ್ಲಿ ನಡೆದ ರಾಜ್ಯ ಮಟ್ಟದ ಎಸ್.ಎಸ್.ಎಫ್ ಸಾಹಿತ್ಯೋತ್ಸವದಲ್ಲಿ ವಿರಾಜಪೇಟೆಯ ಅನ್ವಾರುಲ್ ಹುದಾ ವಿದ್ಯಾರ್ಥಿ ಸಯ್ಯಿದ್ ಜುನೈದ್ ತಂಙಲ್ ಸೀನಿಯರ್ ವಿಭಾಗದ ಇಂಗ್ಲಿಷ್ ಭಾಷಣದಲ್ಲಿ ಪ್ರಥಮ ಸ್ಥಾನಗಳಿಸಿ ರಾಷ್ಟ್ರಮಟ್ಟದ ಸಾಹಿತ್ಯೋತ್ಸವಕ್ಕೆ ಆಯ್ಕೆಯಾಗಿದ್ದಾರೆ. ಫೆ.16 ರಿಂದ 18ವರೆಗೆ ಆಂಧ್ರಪ್ರದೇಶದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸಾಹಿತ್ಯೋತ್ಸವದಲ್ಲಿ ಜುನೈದ್ ತಂಙಲ್ ಭಾಗವಹಿಸಲಿದ್ದಾರೆ.

Read More

ಮಡಿಕೇರಿ ಫೆ.13 NEWS DESK : ಸಿವಿಲ್‌ ಪೊಲೀಸ್‌ ಕಾನ್ಸ್‌ಸ್ಟೇಬಲ್‌  (ಪುರುಷ & ಮಹಿಳಾ), (ತೃತೀಯ ಲಿಂಗ ಪುರುಷ & ತೃತೀಯಲಿಂಗ ಮಹಿಳಾ) ಹಾಗೂ ಸೇವಾನಿರತ & ಬ್ಯಾಕ್‌ಲಾಗ್ ಸೇರಿದಂತೆ ಒಟ್ಟು 1137‌ ಹುದ್ದೆಗಳಿಗೆ ಲಿಖಿತ ಪರೀಕ್ಷೆ.

Read More

ಮಡಿಕೇರಿ ಫೆ.13 NEWS DESK : ನಿಟ್ಟೂರು ಗ್ರಾಮ ಪಂಚಾಯಿತಿ, ಪವಿ ‌ಸ್ವಯಂ ಸೇವಾ ಟ್ರಸ್ಟ್ , ಶಿವಶಕ್ತಿ ಸ್ವಸಹಾಯ ಸಂಘ ಕಾರ್ಮಾಡು, ನಿಟ್ಪೂರು ಗ್ರಾಮದ ಸಂಜೀವಿನಿ ಸ್ವಸಹಾಯ ಸಂಘಗಳ ಒಕ್ಕೂಟದ ಸಹಯೋಗದಲ್ಲಿ  ನಿಟ್ಟೂರು ಗ್ರಾ.ಪಂ ವ್ಯಾಪ್ತಿಯ ವಿವಿಧ ಭಾಗಗಳಲ್ಲಿ ಸ್ವಚ್ಚತಾ ಅಭಿಯಾನ ನಡೆಯಿತು. ನಿಟ್ಟೂರು ಮುಖ್ಯ ರಸ್ತೆ ಸೇರಿದಂತೆ ವಿವಿಧ ರಸ್ತೆಗಳ ಬದಿಯಲ್ಲಿ ಎಸೆಯಲಾಗಿರುವ ಪ್ಲಾ‌ಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ  ಸಾರ್ವಜನಿಕರಿಗೆ ಕಸ ಎಸೆಯದಂತೆ ಮತ್ತು ಪ್ಲಾಸ್ಟಿಕ್ ಕೈ ಚೀಲಗಳನ್ನು ಬಳಸದಂತೆ ಅರಿವು ಮೂಡಿಸುವ ಕಾರ್ಯ ನಡೆಯಿತು. ಪವಿ ಸ್ವಯಂ ಸೇವಾ ಸಂಸ್ಥೆಯ ಸಂಚಾಲಕಿ ಅಳಮೇಂಗಡ ಮಾಳವಿಕಾ ಮಾತನಾಡಿ, ಕಸವನ್ನು ಕಂಡಕಂಡಲ್ಲಿ ಎಸಯದೆ ನಿಗದಿತ ಸ್ಥಳದಲ್ಲಿ ಹಾಕುವ ಹವ್ಯಾಸವನ್ನು ಮಕ್ಕಳಿಗೆ ಮನೆಗಳಲ್ಲಯೇ ಕಲಿಸುವ ಕೆಲಸ ಅರಂಭವಾಗಿ ಶಾಲೆಗಳಲ್ಲಿ ಈ ಕಾರ್ಯದ ಮುಂದುವರಿದ ಭಾಗವನ್ನು ಕಲಿಸುವ ಕೆಲಸ ನಡೆಯಬೇಕು ಮತ್ತು ಈ ರೀತಿಯ ಸ್ವಚ್ಚತಾ ಅಭಿಯಾನಗಳು ನಡೆಯುವಾಗ ಗ್ರಾಮದ ಪ್ರತಿ ಮನೆಯಿಂದ ಕನಿಷ್ಠ ಒಬ್ಬರಾದರು ಭಾಗವಹಿಸಿ ಸ್ವಚ್ಚ ಭಾರತ್ ಅಭಿಯಾನದ ಪರಿಕಲ್ಪನೆಯನ್ನು ತಮ್ಮ ತಮ್ಮ ಮನೆಗಳಿಗೆ…

Read More

ಬೆಂಗಳೂರು ಫೆ.13 NEWS DESK : ಆಸ್ಟ್ರೇಲಿಯಾ ಓಪನ್ ಟೆನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ರೋಹನ್ ಬೋಪಣ್ಣ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಭಿನಂದಿಸಿ 50 ಲಕ್ಷ ರೂ.ಗಳ ಬಹುಮಾನ ಘೋಷಿಸಿದರು. ಈ ಸಂದರ್ಭ ಸಚಿವರಾದ ಪ್ರಿಯಾಂಕ್ ಖರ್ಗೆ, ಶಿವರಾಜ ತಂಗಡಗಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಗೂ ರೋಹನ್ ಬೋಪಣ್ಣ ಅವರ ಕುಟುಂಬದವರು ಹಾಜರಿದ್ದರು.

Read More

ನಾಪೋಕ್ಲು ಫೆ.13 NEWS DESK : ಯಾವ ಧರ್ಮವೂ ಹಿಂಸೆಯನ್ನು ಬೋಧಿಸುವುದಿಲ್ಲ ಸಕಲ ಜೀವಾತ್ಮಗಳಿಗೆ ಒಳಿತಾಗಬೇಕು ಎಂಬುದು ಎಲ್ಲಾ ಧರ್ಮಗಳ ಮೂಲ. ಸಮಾಜದಲ್ಲಿ ಎಲ್ಲರೂ ಒಳ್ಳೆಯವರಾಗಿ ಉತ್ತಮ ಪ್ರಪಂಚವನ್ನು ಕಟ್ಟಬೇಕು ಎಂದು ಅರಮೆರಿ ಕಳ೦ಚೇರಿ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು. ಇತಿಹಾಸ ಪ್ರಸಿದ್ಧ ಚೆರಿಯಪರಂಬು ದರ್ಗಾದಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಅಬ್ದುಲ್ ರಾಹ್ಮಾನ್ ವಲಿಯುಲ್ಲಾಹಿ ಅವರ ಉರೂಸ್ ಸಮಾರಂಭದ ಪ್ರಯುಕ್ತ ಆಯೋಜಿಸಲಾಗಿದ್ದ ಸರ್ವಧರ್ಮ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಜೀವನವನ್ನು ಸಂತೋಷದಿಂದ ಅನುಭವಿಸುವುದು ಹೇಗೆ, ಆ ಸಂತೋಷದಲ್ಲಿ ನನ್ನೊಳಗೆ ನಾನು ಹುಡುಕಿಕೊಳ್ಳುವುದು ಹೇಗೆ ಎಂಬುದನ್ನು ನಮಗೆ ಎಲ್ಲಾ ಧರ್ಮಗಳು ಹೇಳಿಕೊಡಬೇಕು. ತನ್ನ ವೈಯುಕ್ತಿಕ ದ್ವೇಷಕ್ಕಾಗಿ ಅಪೇಕ್ಷೆಗಾಗಿ ಇಡೀ ಸಮಾಜ ಸಮುದಾಯವನ್ನು ಪಡೆಯುವ ಕೆಲಸವನ್ನು ಯಾರು ಮಾಡಬಾರದು, ದ್ವೇಷಗಳನ್ನು ಬೆಳೆಸಬಾರದು, ಸದಾ ಒಳ್ಳೆಯ ಆಲೋಚನೆ ಹಾಗೂ ಒಳ್ಳೆಯ ಚಿಂತನೆಯನ್ನು ಮಾಡಬೇಕು. ನೋಡುವ ನೋಟ ಆಡುವ ಭಾಷೆ ಕೇಳುವ ಕಿವಿ ಎಲ್ಲವೂ ಸರಿಯಾಗಿರಬೇಕು ಎಂದರು. ನಾವು ಉತ್ತಮ ಮೌಲ್ಯ…

Read More