ಬೆಂಗಳೂರು, ಮಾರ್ಚ್ 19, 2026: ಕರ್ನಾಟಕದಲ್ಲಿ ವಾಣಿಜ್ಯ ಎಲ್ಪಿಜಿ (LPG) ಸಿಲಿಂಡರ್ಗಳ ಕೊರತೆ ತೀವ್ರಗೊಂಡಿದ್ದು, ಬೇಡಿಕೆಯ ಕೇವಲ ಶೇ. 20ರಷ್ಟು ಮಾತ್ರ ಪೂರೈಕೆಯಾಗುತ್ತಿದೆ. ವಿಧಾನ ಪರಿಷತ್ತಿನಲ್ಲಿ ಬುಧವಾರ ಈ ಆತಂಕಕಾರಿ ವಿಷಯವನ್ನು ಹಂಚಿಕೊಂಡ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ, ಕೇಂದ್ರ ಸರ್ಕಾರದಿಂದ ಪೂರೈಕೆ ಕಡಿತಗೊಂಡಿರುವುದೇ ಈ ಬಿಕ್ಕಟ್ಟಿಗೆ ಕಾರಣ ಎಂದು ತಿಳಿಸಿದ್ದಾರೆ. ವಾಣಿಜ್ಯ ಸಿಲಿಂಡರ್ ಪೂರೈಕೆ ಅಂಕಿ-ಅಂಶ: ದೈನಂದಿನ ಅಗತ್ಯ: 44,000 ಸಿಲಿಂಡರ್ಗಳು. ಪ್ರಸ್ತುತ ಪೂರೈಕೆ: ಕೇವಲ 9,000 ಸಿಲಿಂಡರ್ಗಳು (ಶೇ. 20ರಷ್ಟು ಮಾತ್ರ). ಗೃಹ ಬಳಕೆ ಸಿಲಿಂಡರ್: ಮನೆಯಲ್ಲಿ ಬಳಸುವ ಸಿಲಿಂಡರ್ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ. ದಿನಕ್ಕೆ ಬೇಕಾದ 3.52 ಲಕ್ಷ ಸಿಲಿಂಡರ್ಗಳನ್ನು ತೈಲ ಕಂಪನಿಗಳು ಪೂರೈಸುತ್ತಿವೆ. ಹೋಟೆಲ್ ಮಾಲೀಕರಿಗೆ ವಿಶೇಷ ಮನವಿ: ಸಿಲಿಂಡರ್ ಕೊರತೆಯಿಂದ ಹೋಟೆಲ್ ಉದ್ಯಮ ತತ್ತರಿಸಿದ್ದು, ಹೋಟೆಲ್ಗಳಿಗೆ ಕೇವಲ 1,000 ಸಿಲಿಂಡರ್ಗಳು ಮಾತ್ರ ಲಭ್ಯವಾಗುತ್ತಿವೆ. “ಯುದ್ಧದಂತಹ ಪರಿಸ್ಥಿತಿಯಿಂದಾಗಿ ಈ ಸಂಕಷ್ಟ ಎದುರಾಗಿದೆ. ಹೋಟೆಲ್ ಮಾಲೀಕರು ತಾತ್ಕಾಲಿಕವಾಗಿ ವಿದ್ಯುತ್ ಸ್ಟೌವ್ (Electric…
ಲೇಖಕ: admin
*ಇಂದು ದಿನಾಂಕ 19-03-2026 ಗುರುವಾರ ಅಸ್ತಮಿಸಿದ ಶುಕ್ರವಾರ ರಾತ್ರಿ ಶವ್ವಾಲ್ ತಿಂಗಳ [ಈದುಲ್ ಫಿತ್ರ್] ಪ್ರಥಮ ಚಂದ್ರ ದರ್ಶನವಾಗಿರುತ್ತದೆ ಎಂದು ಕೊಡಗು ಜಿಲ್ಲಾ ಸುನ್ನಿ ಮುಸ್ಲಿಂ ಜಮಾಅತ್ ಖಾಝಿಗಳಾದ ಶೈಖುನಾ ಸುಲ್ತಾನುಲ್ ಉಲಮಾ ಕಾಂತಪುರಂ ಎ ಪಿ ಅಬೂಬಕರ್ ಮುಸ್ಲಿಯಾರ್ ರವರು ತೀರ್ಮಾನಿಸಿರುತ್ತಾರೆ.* *ದಿನಾಂಕ 20-03-2026 ಶುಕ್ರವಾರ* *ಶವ್ವಾಲ್ – 01* ನಾಳೆ ಈದುಲ್ ಫಿತ್ರ್
ಚೆಟ್ಟಳ್ಳಿ NEWS DESK ಮಾ.19 : ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ, ಕಾರ್ಯದರ್ಶಿಯಾಗಿ ಮಾಚಂಗಡ ಸಚಿನ್ ತಮ್ಮಯ್ಯ ಹಾಗೂ ಖಜಾಂಚಿಯಾಗಿ ಕಾಳಮಂಡ ರಾಬಿನ್ ಅಚ್ಚಮ್ಮ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷೆಯಾಗಿ ಮಾತಂಡ ಕುಶಿ ಉನ್ನತಿ, ಸಹ ಕಾರ್ಯದರ್ಶಿಯಾಗಿ ಅಳ್ಳಂಡ ಶಹನಾ ಚೋಂದಮ್ಮ, ಸಹ ಖಜಾಂಚಿಯಾಗಿ ಮಾಳೇಟಿರ ಯಶ್ಮ ಬೋಜಮ್ಮ, ನಿರ್ದೇಶಕರಾಗಿ ಪೊನ್ನೋಲತಂಡ ಶರಣು ತಮ್ಮಯ್ಯ, ಬಾಡಮಾಡ ದೇಚಮ್ಮ, ಕರ್ನಂಡ ಧನುಶ್ರೀ, ಚೈಯ್ಯಂಡ ಕೀರ್ತನ್ ಅಯ್ಯಪ್ಪ ಹಾಗೂ ಭೂಮಿಕಾ ಮಾಚಂಗಡ ನೇಮಕಗೊಂಡಿದ್ದಾರೆ. ಒತ್ತೋರ್ಮೆರ ಕೊಡವ ಕೂಟದ ಸಭೆಯಲ್ಲಿ ನೂತನ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು. ಸದಸ್ಯರಾದ ಮೊಣ್ಣoಡ ವಿನು ಕಾರ್ಯಪ್ಪ, ಮೂಕೊಂಡ ಸಂಜನಾ ದಮಯತಿ ಮತ್ತಿತರರು ಉಪಸ್ಥಿತರಿದ್ದರು.
ಹಾಸನ NEWS DESK ಮಾ.19 : ಮಾಜಿ ಪ್ರಧಾನಿ ಹಾಗೂ ಜಾತ್ಯಾತೀತ ಜನತಾದಳದ ವರಿಷ್ಠ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ (88) ಅವರು ವಯೋಸಹಜ ಕಾಯಿಲೆಯಿಂದ ಇಂದು (ಮಾ.19) ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸಹೋದರಿಯ ನಿಧನಕ್ಕೆ ಹೆಚ್.ಡಿ.ದೇವೇಗೌಡರು ಹಾಗೂ ಕುಟುಂಬದ ಸದಸ್ಯರು ಕಂಬನಿ ಮಿಡಿದಿದ್ದಾರೆ.
ಚೆಟ್ಟಳ್ಳಿ NEWS DESK ಮಾ.19 : ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ, ಕಾರ್ಯದರ್ಶಿಯಾಗಿ ಮಾಚಂಗಡ ಸಚಿನ್ ತಮ್ಮಯ್ಯ ಹಾಗೂ ಖಜಾಂಚಿಯಾಗಿ ಕಾಳಮಂಡ ರಾಬಿನ್ ಅಚ್ಚಮ್ಮ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷೆಯಾಗಿ ಮಾತಂಡ ಕುಶಿ ಉನ್ನತಿ, ಸಹ ಕಾರ್ಯದರ್ಶಿಯಾಗಿ ಅಳ್ಳಂಡ ಶಹನಾ ಚೋಂದಮ್ಮ, ಸಹ ಖಜಾಂಚಿಯಾಗಿ ಮಾಳೇಟಿರ ಯಶ್ಮ ಬೋಜಮ್ಮ, ನಿರ್ದೇಶಕರಾಗಿ ಪೊನ್ನೋಲತಂಡ ಶರಣು ತಮ್ಮಯ್ಯ, ಬಾಡಮಾಡ ದೇಚಮ್ಮ, ಕರ್ನಂಡ ಧನುಶ್ರೀ, ಚೈಯ್ಯಂಡ ಕೀರ್ತನ್ ಅಯ್ಯಪ್ಪ ಹಾಗೂ ಭೂಮಿಕಾ ಮಾಚಂಗಡ ನೇಮಕಗೊಂಡಿದ್ದಾರೆ. ಒತ್ತೋರ್ಮೆರ ಕೊಡವ ಕೂಟದ ಸಭೆಯಲ್ಲಿ ನೂತನ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು. ಸದಸ್ಯರಾದ ಮೊಣ್ಣoಡ ವಿನು ಕಾರ್ಯಪ್ಪ, ಮೂಕೊಂಡ ಸಂಜನಾ ದಮಯತಿ ಮತ್ತಿತರರು ಉಪಸ್ಥಿತರಿದ್ದರು.
ಮಡಿಕೇರಿ NEWS DESK ಮಾ.19 : ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸುಂಟಿಕೊಪ್ಪ ಸಮೀಪದ ಕೆಂಚೆಟ್ಟಿಯಲ್ಲಿ ನಡೆದಿದೆ. ಮಾದಾಪುರ ಜಂಬೂರು ನಿವಾಸಿ ಅನಿಲ್(36) ಮೃತ ದುರ್ದೈವಿಯಾಗಿದ್ದು, ಬೈಕ್ ನಲ್ಲಿದ್ದ ಹರೀಶ್ ಎಂಬುವವರು ತೀವ್ರವಾಗಿ ಗಾಯಗೊಂಡಿದ್ದಾರೆ. ಸುಂಟಿಕೊಪ್ಪದಿಂದ ಮಾದಾಪುರದೆಡೆಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಡಿಕೇರಿ NEWS DESK ಮಾ.19 : ರಾಷ್ಟ್ರೀಯ ಹೆದ್ದಾರಿ-275 ಕಿ.ಮೀ.71.600 ರಿಂದ ಕಿ.ಮೀ.130.21 ರವರೆಗೆ ಸಂಪಾಜೆಯಿಂದ ಕುಶಾಲನಗರ ಕಾವೇರಿ ನದಿ ಸೇತುವೆ ವರೆವಿಗೂ ಈಗಾಗಲೇ ತೆರವುಗೊಳಿಸಲಾಗಿದ್ದ ಅನಧಿಕೃತ ಜಾಹಿರಾತು ಫಲಕಗಳನ್ನು ಮತ್ತು ವ್ಯಾಪಾರಿಗಳು ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯ ಒಳಗೆ ಪುನರ್ ಸ್ಥಾಪಿಸಿಕೊಂಡು ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ. ಗ್ರಾಹಕರ ವಾಹನಗಳು ಪುಟ್ಪಾತಿನಲ್ಲಿ ನಿಂತು ರಸ್ತೆ ಅಪಘಾತಗಳು ಸಂಭವಿಸುತ್ತಿವೆ ಮತ್ತು ವಾಹನಗಳ ಸರಾಗ ಚಲನೆಗೆ ತೊಂದರೆಯಾಗುತ್ತಿದೆ. ಆದ್ದರಿಂದ ವ್ಯಾಪಾರಿಗಳು ತಮ್ಮ ವ್ಯಾಪಾರ ವಹಿವಾಟುಗಳನ್ನು ಮತ್ತು ಅನಧಿಕೃತ ಜಾಹಿರಾತು ಫಲಕಗಳನ್ನು ರಾಷ್ಟ್ರೀಯ ಹೆದ್ದಾರಿಯ ಫರಿದಿಯಿಂದ ಮಾರ್ಚ್ 23 ರೊಳಗೆ ತಾವೇ ತೆರವುಗೊಳಿಸಬೇಕು. ಇಲ್ಲದಿದ್ದಲ್ಲಿ ರಾಷ್ಟ್ರೀಯ ಹೆದ್ದಾರಿ ವತಿಯಿಂದ ಮಾರ್ಚ್ 24 ರಿಂದ ಅನಧಿಕೃತ ಬೋರ್ಡ್ ಮತ್ತು ಮಳಿಗೆಗಳ ತೆರವು ಕಾರ್ಯಾಚರಣೆ ಕೈಗೊಳ್ಳಲಾಗುವುದು ಮತ್ತು ತೆರವು ಕಾರ್ಯಾಚರಣೆಯಲ್ಲಿ ವ್ಯಾಪಾರಿಗಳಿಗೆ ನಷ್ಟವಾದಲ್ಲಿ ಇಲಾಖೆಯು ಜವಾಬ್ದಾರವಲ್ಲ ಎಂದು ರಾಷ್ಟ್ರೀಯ ಹೆದ್ದಾರಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಿರೀಶ್ ಅವರು ತಿಳಿಸಿದ್ದಾರೆ.
ಡಾ. ಹರ್ಷ ಪ್ರಿಯಂವದ IPS ಅವರು ಮೈಸೂರು ನಗರದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ನೂತನ ಡಿಸಿಪಿಯಾಗಿ ಅಧಿಕಾರ ವಹಿಸಿಕೊಂಡರು. ಕೇಂದ್ರಸ್ಥಾನ, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಶ್ರೀ ಸುಂದರ್ ರಾಜ್ ಕೆ.ಎಸ್. ಅವರು ಅಧಿಕಾರ ಹಸ್ತಾಂತರಿಸಿದರು.
ಗೋಣಿಕೊಪ್ಪ ಮಾ.18 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ಮೂರನೇ ಆವೃತ್ತಿಯ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಏ.10 ರಿಂದ 15 ದಿನಗಳವರೆಗೆ ಟಿ20 ಮಾದರಿಯಲ್ಲಿ ಗೋಣಿಕೊಪ್ಪ ಕಾವೇರಿ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ. 10 ತಂಡಗಳು ಪೈಪೋಟಿ ನಡೆಸಲಿದ್ದು, ಸುಮಾರು 160 ಆಟಗಾರರು ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧ್ಯಕ್ಷ ಪೊರುಕೊಂಡ ಸುನಿಲ್ ತಿಳಿಸಿದ್ದಾರೆ. ಸುದ್ದಿಗೋಷ್ಠೀಯಲ್ಲಿ ಮಾತನಾಡಿದ ಅವರು, ಕೊಡವ ಜನಾಂಗದ ಯುವ ಸಮೂಹದಲ್ಲಿ ಲೆದರ್ ಬಾಲ್ ಆಟಗಾರರನ್ನು ದೇಶಿಯ ತಂಡ ಪ್ರತಿನಿಧಿಸುವಂತಾಗಬೇಕು ಎಂಬ ಕನಸ್ಸಿನೊಂದಿಗೆ ಪಂದ್ಯಾವಳಿಯನ್ನು ಆಯೋಜಿಸುತ್ತಿದ್ದು, ವೃತ್ತಿಪರ ಕ್ರಿಕೆಟ್ಗೆ ಆದ್ಯತೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. ವಿಜೇತ ತಂಡಕ್ಕೆ 2 ಲಕ್ಷ ನಗದು, ರನ್ನರ್ ಅಪ್ ತಂಡಕ್ಕೆ 1 ಲಕ್ಷ, 3 ನೇ ತಂಡಕ್ಕೆ 50 ಸಾವಿರ ನಗದು ಬಹುಮಾನ ನೀಡಲಾಗುತ್ತದೆ. ಪ್ರತೀ ಪಂದ್ಯದಲ್ಲಿ ಪಂದ್ಯ ಶ್ರೇಷ್ಠ, ಸರಣಿ ಶ್ರೇಷ್ಠ, ಬೆಸ್ಟ್ ಬೌಲರ್, ಬೆಸ್ಟ್ ಬ್ಯಾಟರ್, ಫೀಲ್ಡರ್, ಬೆಸ್ಟ್ ಕ್ಯಾಚ್, ಬೆಸ್ಟ್ ಕೀಪರ್, ಹ್ಯಾಟ್ರಿಕ್ಸ್, ಎವ್ಮೆರ್ಜಿಂಗ್…
ಸುಂಟಿಕೊಪ್ಪ ಮಾ.18 NEWS DESK : ಹಬ್ಬದ ದಿನದಂದು ಶಾಂತಿ, ಸಾಮರಸ್ಯ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಕುಶಾಲನಗರ ವೃತ್ತ ನಿರೀಕ್ಷಕರಾದ ದಿನೇಶ್ಕುಮಾರ್ ಕರೆ ನೀಡಿದರು. ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಆಯೋಜಿಸಲಾಗಿದ್ದ ರಂಜಾನ್, ರಾಮನವಮಿ, ಯುಗಾದಿ ಪ್ರಯುಕ್ತ ಆಯೋಜಿಸಲಾಗಿದ್ದ ಶಾಂತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸುಂಟಿಕೊಪ್ಪ ಪಟ್ಟಣವು ಶಾಂತಿ ಸೌಹರ್ಧತೆಯನ್ನು ಹಿಂದಿನಿಂದಿಲ್ಲೂ ಕಾಯ್ದುಕೊಂಡು ಬಂದಿದೆ. ಈ ಸೌಹಾರ್ದತೆ ತೆಯನ್ನು ಮುಂದೆಯೂ ಗಟ್ಟಿಯಾಗಿ ನೆಲೆಯೂರಬೇಕಾದರೆ ವಿವಿಧ ಧರ್ಮಗಳ ಮುಖಂಡರು ಮುಂದಾಳತ್ವ ತೆಗದುಕೊಳ್ಳುವ ಮೂಲಕ ಇಂದಿನ ಯುವ ಪೀಳಿಗೆಯು ಮಾರ್ಗದರ್ಶನ ನೀಡಬೇಕೆಂದು ಅವರು ಕಿವಿಮಾತು ಹೇಳಿದರು. ಹಬ್ಬಗಳನ್ನು ಆಚರಿಸುವ ಸಂದರ್ಭ ಇತರರಿಗೆ ಭಾವನೆಗಳನ್ನು ಗೌರವಿಸುವಂತಿರಬೇಕು. ಅವರ ಭಾವನೆಗಳಿಗೆ ಘಾಸಿ ಉಂಟಾಗದಂತೆ ಆಚರಿಸಬೇಕು ಆಗಿದ್ದಾಗ ಮಾತ್ರ ನಮ್ಮ ಹಬ್ಬ ಆಚರಣೆ ಸಂಸ್ಕøತಿಗೆ ಮಹತ್ವತೆ ಕೂಡಿ ಬರಲಿದೆ. ಅನ್ಯನೋತೆಯು ಹೆಚ್ಚಾಗಲಿದೆ ಶಾಂತಿ ಸೌಹರ್ಧತೆಯು ಕಂಡುಕೊಳ್ಳಬಹುದಾಗಿದೆ ಎಂದು ಅವರು ಹೇಳಿದರು. ಸುಂಟಿಕೊಪ್ಪ ಠಾಣಾಧಿಕಾರಿ ಮೋಹನ್ರಾಜ್, ಅಪರಾಧ ವಿಭಾಗ ಠಾಣಾಧಿಕಾರಿ ಗೋಪಾಲ್ ಶಾಂತಿ ಸೌಹಾರ್ದ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಭೆಯಲ್ಲಿ ವಿವಿಧ…






