ನಾಪೋಕ್ಲು ಫೆ.13 : ಹೊದ್ದೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹೊದವಾಡ ಗ್ರಾಮದ ನೂತನ ಗ್ರಂಥಾಲಯವನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಿದರು. ಈ ಸಂದರ್ಭ ಪಂಚಾಯತ್ ಅಧ್ಯಕ್ಷ ಹಂಸ ಉಪಾಧ್ಯಕ್ಷ ಅನುರಾಧ ಸದಸ್ಯರಾದ ಸರಸು, ಹಮೀದ್ ಕಬಡಕೇರಿ , ಪಿಡಿಒ ಅಬ್ದುಲ್ಲ, ಗ್ರಾಮಸ್ಥರಾದ, ಆಮೂ ಹಾಜಿ, ಅಬೂಬಕ್ಕರ್, ಶಾಫಿ ಹಾಗೂ ಗ್ರಾಮ ಗ್ರಂಥಾಲಯದ ಸ್ಥಳೀಯ ಮೇಲ್ವಿಚಾರಣಾ ಸಮಿತಿ ಸದಸ್ಯರು ಇತರರು ಹಾಜರಿದ್ದರು. ವರದಿ : ದುಗ್ಗಳ ಸದಾನಂದ.
ಲೇಖಕ: admin
ನಾಪೋಕ್ಲು ಫೆ.13 : ಹೊದ್ದೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಂಬಳದಾಳು ಗ್ರಾಮದ ನೂತನ ಗ್ರಂಥಾಲಯವನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ಈ ಸಂದರ್ಭ ಪಂಚಾಯತ್ ಅಧ್ಯಕ್ಷ ಹಂಸ, ಉಪಾಧ್ಯಕ್ಷ ಅನುರಾಧ ಸದಸ್ಯರಾದ ಕಡ್ಲೆರ ಟೈನಿ, ಪಾರ್ವತಿ, ಹಮೀದ್ ಕಬಡಕೇರಿ, ಸರಸು, ಪಿಡಿಒ ಅಬ್ದುಲ್ಲ, ತೆಕ್ಕಡ ಸುನಂದ, ಕುಲ್ಲಚನ ದಿನೇಶ ಕುಂಬಳದಾಳು ನವಚೇತನ ಯುವಕ ಸಂಘ ಅಧ್ಯಕ್ಷ ಮುಕ್ಕಾಟೀರ ಅಯ್ಯಪ್ಪ, ಕಾರ್ಯದರ್ಶಿ ಕರ್ಣಯನ ಸೋಹನ್ , ಪ್ರಮುಖರಾದ ನಾಗೇಶ್ , ಕೆ.ಆರ್.ಪೂಣಚ್ಚ, ಭೀಮರಾಜ್ , ದಿನೇಶ್ ಹಾಗೂ ಗ್ರಾಮ ಗ್ರಂಥಾಲಯದ ಸ್ಥಳೀಯ ಮೇಲ್ವಿಚಾರಣಾ ಸಮಿತಿ ಸದಸ್ಯರು, ನವಚೇತನ ಯುವಕ ಸಂಘ ಪದಾಧಿಕಾರಿಗಳು ಗ್ರಾಮಸ್ಥರು ಹಾಜರಿದ್ದರು. ಪಂಚಾಯಿತಿಯಿಂದ ಪ್ರಾರಂಭಿಸಿ ಗ್ರಾಮಸ್ಥರಿಂದ ನಿರ್ವಹಣೆ ಮಾಡಲ್ಪಡುವ ಗ್ರಾಮ ಗ್ರಂಥಾಲಯ ಎಂಬ ಹೊಸ ಯೋಜನೆ ರೂಪಿಸಿ ಅನುಷ್ಠಾನಗೊಳಿಸಿದ ರಾಜ್ಯದ ಮೊದಲ ಗ್ರಾಮ ಪಂಚಾಯತಿ ಎಂಬ ಕೀರ್ತಿಗೆ ಹೊದ್ದೂರು ಗ್ರಾಮ ಪಂಚಾಯತಿ ಪಾತ್ರವಾಗಿದೆ. ವರದಿ : ದುಗ್ಗಳ ಸದಾನಂದ.
ವಿರಾಜಪೇಟೆ ಫೆ.13 NEWS DESK : ವಿರಾಜಪೇಟೆಯ ಆರ್ಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿರಾಜಪೇಟೆ ಮತ್ತು ಕಲ್ತೋಡು ಕ್ಲಸ್ಟರ್ ಮಟ್ಟದ ನಲಿಕಲಿ ಸಮಾಲೋಚನಾ ಸಭೆಯಲ್ಲಿ ರಾಜ್ಯ ಮಟ್ಟದ ‘ಸುವರ್ಣ ಸಂಭ್ರಮ ಕನ್ನಡಿಗ” ಪ್ರಶಸ್ತಿ ಪಡೆದ ಸಿ.ಆರ್.ಪಿ ವೆಂಕಟೇಶ್ ವಿ.ಟಿ. ಅವರನ್ನು ಶಾಲಾ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರುಗಳು, ವಿದ್ಯಾರ್ಥಿಗಳು ಇದ್ದರು.
ಮಡಿಕೇರಿ ಫೆ.12 NEWS DESK : ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಅವರು ಇಂದು ಕರೆದಿದ್ದ ನಗರಸಭೆಯ ವಿಶೇಷ ಸಭೆಗೆ ಸರ್ವ ಸದಸ್ಯರು ಗೈರು ಹಾಜರಾಗುವ ಮೂಲಕ ಆಡಳಿತ ವೈಖರಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ ಪ್ರಸಂಗ ನಡೆದಿದೆ. ಆಡಳಿತ ಪಕ್ಷ ಬಿಜೆಪಿಯ 16 ಸದಸ್ಯರಲ್ಲಿ 13 ಸದಸ್ಯರು ಗೈರು ಹಾಜರಾಗುವುದರೊಂದಿಗೆ ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದ್ದಾರೆ. ಸಭೆ ಇಂದು ಮಧ್ಯಾಹ್ನ 3.30 ಗಂಟೆಗೆ ನಿಗಧಿಯಾಗಿತ್ತು, ಆದರೆ ಯಾವ ಸದಸ್ಯರು ಕೂಡ ಸಭಾಂಗಣಕ್ಕೆ ಆಗಮಿಸಿರಲಿಲ್ಲ. ಈ ಕುರಿತು ಕೆಲವು ಬಿಜೆಪಿ ಸದಸ್ಯರನ್ನು ಪ್ರಶ್ನಿಸಿದಾಗ ಪೌರಾಯುಕ್ತರನ್ನು ವರ್ಗಾವಣೆ ಮಾಡಬೇಕೆಂದು ಹಿಂದಿನ ಸಭೆಗಳಲ್ಲಿ ನಿರ್ಣಯವಾಗಿದೆ, ಆದರೆ ವರ್ಗಾವಣೆಯ ಬಗ್ಗೆ ಕಾಳಜಿ ತೋರುತ್ತಿಲ್ಲ. ಅದೇ ಪೌರಾಯುಕ್ತರನ್ನು ಕೂರಿಸಿಕೊಂಡು ಸಭೆ ನಡೆಸುವುದು ಎಷ್ಟು ಸರಿ, ಅಲ್ಲದೆ ಇತ್ತೀಚೆಗೆ ನಡೆದ ಜಿಲ್ಲಾ ಬಿಜೆಪಿಯ ನೂತನ ಪದಾಧಿಕಾರಿಗಳ ಆಯ್ಕೆಯ ವಿಚಾರದಲ್ಲೂ ನಮಗೆ ಅಸಮಾಧಾನವಿದೆ. ಆದ್ದರಿಂದ ಉಪಾಧ್ಯಕ್ಷರಾದಿಯಾಗಿ ನಾವೆಲ್ಲರು ಸಭೆಯನ್ನು ಬಹಿಷ್ಕರಿಸಿದ್ದೇವೆ ಎನ್ನುವ ಪ್ರತಿಕ್ರಿಯೆ ಕೇಳಿ ಬಂತು. ::: ಪೌರಾಯುಕ್ತರ ವರ್ಗಾವಣೆಯಾಗಲಿ…
ಮಡಿಕೇರಿ ಫೆ.12 NEWS DESK : ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕುಗಳಲ್ಲಿ ಸಂವಿಧಾನ ದಿನಾಚರಣೆಯ ಪ್ರಯುಕ್ತ ಭಾರತೀಯ ಸಂವಿಧಾನದ ಬಗ್ಗೆ ಸರ್ವರಲ್ಲೂ ಅರಿವು ಹಾಗೂ ಜಾಗೃತಿ ಮೂಡಿಸುವ ಸಂಬಂಧ ರಾಜ್ಯ ಸರ್ಕಾರದ ಮಹತ್ವಪೂರ್ಣ ಕಾರ್ಯಕ್ರಮವಾದ “ಸಂವಿಧಾನ ಜಾಗೃತಿ ಜಾಥ” ಸ್ತಬ್ಧಚಿತ್ರ ಮೆರವಣಿಗೆಯೊಂದಿಗೆ ಫೆ.10 ರಿಂದ ಫೆಬ್ರವರಿ, 18 ರವರೆಗೆ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ ಪುರಸಭೆ ವ್ಯಾಪ್ತಿಯಲ್ಲಿ ಸಂಚರಿಸುತ್ತಿದ್ದು, ಜಾಥ ಸಾಗುವ ಮಾರ್ಗ ಹಾಗೂ ವೇಳಾಪಟ್ಟಿಯನ್ನು ಆಯಾಯ ಗ್ರಾಮ ಪಂಚಾಯಿತಿಗಳಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕರು, ಚುನಾಯಿತ ಪ್ರತಿನಿಧಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಸ್ಥಳೀಯ ಸರ್ಕಾರಿ/ ಸರ್ಕಾರೇತರ ಅಧಿಕಾರಿ/ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ವಿರಾಜಪೇಟೆ/ ಪೊನ್ನಂಪೇಟೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಮಡಿಕೇರಿ ಫೆ.12 NEWS DESK : ಪರಿಶಿಷ್ಟ ಜಾತಿಯ ಪತ್ರಕರ್ತರಿಗೆ ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಉದ್ಯಮ ಸ್ಥಾಪನೆಗೆ ಸಹಾಯಧನ ಯೋಜನೆಯಡಿ ಪರಿಶಿಷ್ಟ ಜಾತಿಯ ಯಾವುದೇ ಪದವಿ ಪಡೆದು ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ 10 ವರ್ಷಗಳ ಸೇವಾನುಭವ ಹೊಂದಿರುವ ಹಾಗೂ ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪ್ರಮುಖ ಮಾಧ್ಯಮ ಮುದ್ರಣ ಅಥವಾ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಹೆಸರು ನಮೂದಿಸಿರುವ ಪತ್ರಕರ್ತರು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ. ಈ ಸಂಬಂಧ ಪ್ರಾಯೋಗಿಕವಾಗಿ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ರಾಜ್ಯದ ಇತರೆ ಮಹಾನಗರ ಪಾಲಿಕೆಗಳಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಜಿಲ್ಲೆಯ ಅರ್ಹ ಪತ್ರಕರ್ತರು ಇಲಾಖೆಯ ವೆಬ್ಸೈಟ್ www.sw.kar.nic.in ನಲ್ಲಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ಇವರಿಗೆ ಫೆಬ್ರವರಿ, 26 ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಇಲಾಖೆಯ ದೂ.ಸಂ. 08272-225531 ನ್ನು ಸಂಪರ್ಕಿಸಬಹುದು ಎಂದು…
ಮಡಿಕೇರಿ ಫೆ.12 NEWS DESK : ತಪ್ಪು ಮಾಡಿದಾಗ ಪಶ್ಚಾತ್ತಾಪ ಪಟ್ಟು ಸರಿ ದಾರಿಯಲ್ಲಿ ನಡೆಯುವುದು ಸಹಜ ಅಥವಾ ಶಿಕ್ಷೆಗೆ ಗುರಿಯಾಗುವುದು ಅನಿವಾರ್ಯ. ಆದರೆ ಇಲ್ಲೊಬ್ಬ ಬಾವುಕ ಜೀವಿ ಅಪಘಾತ ಆಕಸ್ಮಿಕವಾಗಿ ನಡೆದರೂ ತಮ್ಮಿಂದಾಗಿ ಯುವಕ ಜೀವನ್ಮರಣ ಸ್ಥಿತಿಯಲ್ಲಿದ್ದಾನೆ ಎಂದು ನೊಂದು ಸಾವಿಗೆ ಶರಣಾದ ಘಟನೆ ಮಡಿಕೇರಿ ತಾಲ್ಲೂಕಿನ ಹೆರವನಾಡು ಗ್ರಾಮದ ಅಪ್ಪಂಗಳದಲ್ಲಿ ನಡೆದಿದೆ. ಮಡಿಕೇರಿ ನಗರದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯ ಚೈನ್ ಗೇಟ್ ಬಳಿ ಇತ್ತೀಚೆಗೆ ಅಪಘಾತವೊಂದು ನಡೆದಿತ್ತು. ಹಾಲೇರಿಯ ಕಾಂಡನಕೊಲ್ಲಿಯ ಅಯ್ಯಕುಟ್ಟೀರ ಜಯಗಣಪತಿ ಅವರ ಪುತ್ರ, ಫೀ.ಮಾ.ಕಾರ್ಯಪ್ಪ ಕಾಲೇಜ್ ನ ವಿದ್ಯಾರ್ಥಿ ಗಗನ್ ಸುಬ್ಬಯ್ಯ (24) ಮಡಿಕೇರಿಯಿಂದ ಮನೆಗೆ ಮರಳುತ್ತಿದ್ದರು. ಹೆರವನಾಡು ಗ್ರಾಮದ ಅಪ್ಪಂಗಳದ ಹೆಚ್.ಡಿ.ತಮ್ಮಯ್ಯ (57) ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಮತ್ತೊಂದು ಒಳ ರಸ್ತೆಯಿಂದ ಚೈನ್ ಗೇಟ್ ಬಳಿಯ ಮೈಸೂರು ರಸ್ತೆಗೆ ಪ್ರವೇಶಿಸಿದ್ದಾರೆ. ಈ ಸಂದರ್ಭ ಧನಲ್ ಬೈಕ್ ಗೆ ತಮ್ಮಯ್ಯ ಅವರ ದ್ವಿಚಕ್ರ ವಾಹನ ಡಿಕ್ಕಿಯಾಗಿದೆ. ಧನಲ್ ನೆಲಕ್ಕುರುಳುತ್ತಿದ್ದಂತೆ ಲಾರಿಯೊಂದು ಹರಿದಿದೆ,…
ಮಡಿಕೇರಿ ಫೆ.12 NEWS DESK : ಮೂರ್ನಾಡು 33/11ಕೆವಿ ಎಂಯುಎಸ್ಎಸ್ ವಿದ್ಯುತ್ ಉಪಕೇಂದ್ರದಲ್ಲಿ ಸಿಟಿ ಬದಲಾವಣೆ ಕಾರ್ಯ ನಿರ್ವಹಿಸಬೇಕಿರುವ ಹಿನ್ನೆಲೆ ಫೆ.13 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಪಾರಾಣೆ, ನಾಪೋಕ್ಲು, ಹೊದ್ದೂರು, ಮರಗೋಡು, ಮೂರ್ನಾಡು, ಹಾಕತ್ತೂರು, ಕಾಂತೂರು, ಹೊದವಾಡ, ಚೆಯ್ಯಂಡಾಣೆ, ಕಕ್ಕಬೆ, ನೆಲಜಿ, ಪಾಲೂರು, ಯವಕಪಾಡಿ, ಬೇತು ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಮಡಿಕೇರಿ ಫೆ.12 NEWS DESK : ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಕೇವಲ 8 ತಿಂಗಳುಗಳಷ್ಟೇ ಆಗಿದೆ, ಜಿಲ್ಲೆಯ ಇಬ್ಬರು ಶಾಸಕರ ಅವಧಿಯೂ ಇಷ್ಟೇ ಆಗಿದೆ. ಇದನ್ನು ಅರಿಯದ ಬಿಜೆಪಿ ಮಂದಿ ಕಮಲದ ಗುರುತಿನ ಶಾಲನ್ನು ಹಾಕಿಕೊಂಡು ಶಾಸಕರ ಕಚೇರಿಗೆ ತೆರಳಿ ಅಭಿವೃದ್ಧಿ ಕುರಿತು 15 ಪ್ರಶ್ನೆಗಳ ಪತ್ರ ನೀಡಿರುವುದು ಹಾಸ್ಯಾಸ್ಪದ ಎಂದು ವಿಧಾನಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 25 ವರ್ಷಗಳಿಂದ ಕೊಡಗಿನಲ್ಲಿ ಆಡಳಿತದಲ್ಲಿದ್ದ ಬಿಜೆಪಿ ಶಾಸಕರುಗಳ ಕೊಡುಗೆ ಏನು ಎನ್ನುವುದನ್ನು ಮೊದಲು ಸಾಬೀತು ಪಡಿಸಲಿ ಎಂದು ಒತ್ತಾಯಿಸಿದರು. ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಇಲ್ಲದ ಸಂದರ್ಭ ಅವರ ಗೃಹ ಕಚೇರಿಗೆ ಬಿಜೆಪಿಯ ಮಂದಿ ತೆರಳಿ 15 ಪ್ರಶ್ನೆಗಳ ಪತ್ರ ನೀಡಿರುವುದು ಖಂಡನೀಯ. ಜಿಲ್ಲೆಯ ಇಬ್ಬರು ಕಾಂಗ್ರೆಸ್ ಶಾಸಕರು ಕಳೆದ 8 ತಿಂಗಳಿನಿಂದ ಸಾರ್ವಜನಿಕರ ಕಷ್ಟಕ್ಕೆ ಸ್ಪಂದಿಸುತ್ತಾ ಬರುತ್ತಿದ್ದಾರೆ. ಯಾವುದೇ ಅಭಿವೃದ್ಧಿ ಕಾರ್ಯಗಳಿಗೂ ಸಾಕಷ್ಟು ಸಮಯದ…
ವಿರಾಜಪೇಟೆ ಫೆ.12 NEWS DESK : ಜಮ್ಮುವಿನಲ್ಲಿ ನಡೆದ ರಾಷ್ಟ್ರ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ವಿರಾಜಪೇಟೆಯ ಮದನ್ ಹಾಗೂ ಚಿತ್ರಾಕ್ಷ 21 ವರ್ಷ ಮೇಲ್ಪಟ್ಟ ವಿಭಾಗದ ಜೋಡಿ ನತ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿ ಭೂತಾನ್ನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ನೃತ್ಯ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರು ವಿರಾಜಪೇಟೆಯ ಟೀಂ ಇಂಟೋಪೀಸ್ ನೃತ್ಯ ಶಾಲೆಯ ತರಬೇತುದಾರರಾದ ವಿಷ್ಣು ಅವರೊಂದಿಗೆ ತರಬೇತಿ ಪಡೆಯುತ್ತಿದ್ದಾರೆ.






