ಲೇಖಕ: admin

ವಿರಾಜಪೇಟೆ ಫೆ.12 NEWS DESK : ಕರ್ನಾಟಕ ಸ್ಪೋರ್ಟ್ಸ್ ಡ್ಯಾನ್ಸ್ ಅಸೋಸಿಯೇಷನ್ ಹಾಗೂ ಇಂಟರ್ ನ್ಯಾಷನಲ್ ಸ್ಪೋರ್ಟ್ಸ್ ಡ್ಯಾನ್ಸ್ ಫೆಡರೇಷನ್ ವತಿಯಿಂದ ಜಮ್ಮು ಕಾಶ್ಮೀರದ ಅಭಿನವ ಸಭಾಂಗಣದಲ್ಲಿ ನಡೆದ ಶಾಸ್ತ್ರೀಯ ನೃತ್ಯ ಹಾಗೂ ಜಾನಪದ ನೃತ್ಯ ವಿಭಾಗದಲ್ಲಿ ಹೆಗ್ಗಳ ಗ್ರಾಮದ ಇಶಾನಿ ಪಿ.ಎ. 3 ಚಿನ್ನದ ಪದಕ ಪಡೆದು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಮುಂದೆ ಭೂತಾನ್‌ನಲ್ಲಿ ನಡೆಯುವ ಅಂತರಾಷ್ಟ್ರೀಯ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಈಕೆ ಎಸ್.ಎಂ.ಎಸ್.ಶಾಲೆಯ 2 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಪಡ್ಡಂಬೈಲ್ ಅನಿಲ್ ಮತ್ತು ತೀರ್ಥ ದಂಪತಿಯ ಪುತ್ರಿ. ವಿರಾಜಪೇಟೆಯ ನಾಟ್ಯಂಜಲಿ ನೃತ್ಯ ಹಾಗೂ ಸಂಗೀತ ಸಂಸ್ಥೆಯ ಗುರುಗಳಾದ ವಿದುಷಿ ಹೇಮಾವತಿ ಕಾಂತ್‌ರಾಜ್ ಹಾಗೂ ಕಾವ್ಯಶ್ರೀ ಅವರ ಶಿಷ್ಯೆ.

Read More

ವಿರಾಜಪೇಟೆ ಫೆ.12 NEWS DESK : ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯ ವತಿಯಿಂದ ನಡೆದ ರಾಜ್ಯ ಮಟ್ಟದ ನೃತ್ಯೋತ್ಸವ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಬಿಟ್ಟಂಗಾಲದ ಸಾನ್ವಿ ಎಂ.ಎಸ್. ಅವರಿಗೆ ಸುವರ್ಣ ಶ್ರೀ ಕನ್ನಡ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ನೃತ್ಯ ಕ್ಷೇತ್ರದಲ್ಲಿನ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಸಾನ್ವಿ ಅವರು ವಿರಾಜಪೇಟೆಯ ತ್ರಿವೇಣಿ ಶಾಲೆಯಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇವರು ಬಿಟ್ಟಂಗಾಲ ಗ್ರಾಮದಲ್ಲಿನ ಶಿಕ್ಷಕಿ ಸೌಮ್ಯ ಅವರ ಪುತ್ರಿ. ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯಲ್ಲಿ ವಿದುಷಿ ಪ್ರೇಮಾಂಜಲಿ ಅವರ ಬಳಿ ನೃತ್ಯ ಅಭ್ಯಾಸ ಮಾಡುತ್ತಿದ್ದಾರೆ.

Read More

ವಿರಾಜಪೇಟೆ ಫೆ.12 NEWS DESK : ಜಮ್ಮುವಿನಲ್ಲಿ ನಡೆದ ರಾಷ್ಟ್ರ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ವಿರಾಜಪೇಟೆಯ ಬಾಚಮಂಡ ಕೆ. ವಿಮರ್ಶ 1 ಚಿನ್ನ, 2 ಕಂಚಿನ ಪದಕ ಗಳಿಸಿ ಅಂತರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿಮರ್ಶ ಅವರು ಭೂತಾನ್‌ನಲ್ಲಿ ನಡೆಯಲಿರುವ ಅಂತರ ರಾಷ್ಟ್ರೀಯ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಇವರು ವಿರಾಜಪೇಟೆಯ ನಿಸರ್ಗ ಲೇಔಟ್ ನಿವಾಸಿ ಬಾಚಮಂಡ ಕಿಶೋರ್ ಹಾಗೂ ವಕೀಲರಾದ ಅನುಪಮ ಕಿಶೋರ್ ಅವರ ಪುತ್ರಿ. ಇವರು ವಿರಾಜಪೇಟೆಯ ಸಂತ ಅನ್ನಮ್ಮ ಶಾಲೆಯಲ್ಲಿ 7 ತರಗತಿಯಲ್ಲಿ ಓದುತ್ತಿದ್ದಾರೆ. ವಿರಾಜಪೇಟೆಯ ಟೀಂ ಇಂಟೋಪೀಸ್ ನೃತ್ಯ ಶಾಲೆಯಲ್ಲಿ ನೃತ್ಯಾಭ್ಯಾಸ ಮಾಡುತ್ತಿದ್ದು ತರಬೇತುದಾರರಾದ ವಿಷ್ಣುಇವರಿಗೆ ನೃತ್ಯ ತರಬೇತಿ ನೀಡುತ್ತಿದ್ದಾರೆ.

Read More

ವಿರಾಜಪೇಟೆ ಫೆ.21 NEWS DESK : ನೃತ್ಯ ಶಿಕ್ಷಕಿ ಪಿ.ಎನ್. ಚೈತ್ರ ಅವರಿಗೆ ಸುವರ್ಣ ಶ್ರೀ ಕನ್ನಡ ಪ್ರಶಸ್ತಿ ಲಭಿಸಿದೆ. ಪಿ.ಎನ್. ಚೈತ್ರ ಅವರ ನೃತ್ಯ ಕ್ಷೇತ್ರದಲ್ಲಿನ ಸಾಧನೆಯನ್ನು ಪರಿಗಣಿಸಿ ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ರಾಜ್ಯ ಮಟ್ಟದ ನೃತ್ಯೋತ್ಸವ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಗಣ್ಯರು ಪ್ರಶಸ್ತಿ ನೀಡಿ ಗೌರವಿಸಿದರು. ಇವರು ಹೆಗ್ಗಳ ಗ್ರಾಮದ ಪಿ.ಎ. ನಾಣು, ಪಿ.ಎನ್. ಪ್ರೇಮಾ ಅವರ ಪುತ್ರಿ. ವಿರಾಜಪೇಟೆಯ ವಿನಾಯಕ ಶಾಲೆಯಲ್ಲಿ ನೃತ್ಯ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Read More

ವಿರಾಜಪೇಟೆ ಫೆ.12 NEWS DESK : ಕರ್ನಾಟಕ ಸ್ಪೋಟ್ರ್ಸ್ ಡ್ಯಾನ್ಸ್ ಅಸೋಸಿಯೇಷನ್ ಹಾಗೂ ಇಂಟರ್ ನ್ಯಾಷನಲ್ ಸ್ಪೋಟ್ರ್ಸ್ ಡ್ಯಾನ್ಸ್ ಫೆಡರೇಷನ್ ವತಿಯಿಂದ ಜಮ್ಮು ಕಾಶ್ಮೀರದ ಅಭಿನವ ಸಭಾಂಗಣದಲ್ಲಿ ನಡೆದ ನೃತ್ಯ ಸ್ಪರ್ಧೆಯಲ್ಲಿ ಕೈಕೇರಿ ಗ್ರಾಮದ ಅಚ್ಚಪಂಡ ಶ್ರೇಯಾ ಬೋಜಮ್ಮ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಶಾಸ್ತ್ರೀಯ ನೃತ್ಯ ಹಾಗೂ ಜಾನಪದ ನೃತ್ಯ ವಿಭಾಗದಲ್ಲಿ ಭಾಗವಹಿಸಿ ಗೋಣಿಕೊಪ್ಪಲು ಕೈಕೇರಿ ಗ್ರಾಮದ ಅಚ್ಚಪಂಡ ಶ್ರೇಯಾ ಬೋಜಮ್ಮ 3 ಚಿನ್ನದ ಪದಕ ಪಡೆದು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಈಕೆ ಎಸ್.ಎಂ.ಎಸ್.ಶಾಲೆಯ 2ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಅಚ್ಚಪಂಡ ಸುಬ್ರಮಣಿ ಹಾಗೂ ರೇಷ್ಮ ದಂಪತಿಯ ಪುತ್ರಿಯಾಗಿರುವ ಶ್ರೇಯಾ ಬೋಜಮ್ಮ 1 ವರ್ಷದಿಂದ ವಿರಾಜಪೇಟೆಯ ನಾಟ್ಯಾಂಜಲಿ ನೃತ್ಯ ಹಾಗೂ ಸಂಗೀತ ಸಂಸ್ಥೆಯ ಗುರುಗಳಾದ ವಿದುಷಿ ಹೇಮಾವತಿ ಕಾಂತ್‍ರಾಜ್ ಹಾಗೂ ಕಾವ್ಯಶ್ರೀ ಅವರ ಶಿಷ್ಯೆ.

Read More

 ಮಡಿಕೇರಿ ಫೆ.12 :  ಸಂಸದ ಪ್ರತಾಪ್ ಸಿಂಹ  10 ವರ್ಷಗಳಲ್ಲಿ  ತಂದಿರುವ ಹಾಗೂ ಕಾರ್ಯಗತ ಮಾಡಿರುವ ಪ್ರಮುಖ ಯೋಜನೆಗಳ “ರಿಪೋರ್ಟ್ ಕಾರ್ಡ್” ಅನ್ನು  ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಾಜ್ಯಾಧ್ಯಕ್ಷ  ಬಿ.ವೈ ವಿಜಯೇಂದ್ರ ಬಿಡುಗಡೆಗೊಳಿಸಿದರು. ಈ ಸಂದರ್ಭ  ಸಂದರ್ಭದಲ್ಲಿ  ಆರ್. ಅಶೋಕ್ ಮತ್ತು  ನಗರಾಧ್ಯಕ್ಷ  ಎಲ್.ನಾಗೇಂದ್ರ ಉಪಸ್ಥಿತರಿದ್ದರು.

Read More

ಮಡಿಕೇರಿ ಫೆ.12 NEWS DESK : ಸೋಮವಾರಪೇಟೆ ತಾಲ್ಲೂಕು ಅಭಿವೃದ್ಧಿ ಹೋರಾಟ ಸಮಿತಿ ಸಭೆ ಖಾಸಗಿ ಸಭಾಗಂಣದಲ್ಲಿ ಸಮಿತಿಯ ಅಧ್ಯಕ್ಷ ಅರುಣ್ ಕೊತ್ನಳ್ಳಿ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲೆಯಲ್ಲಿ ಸೋಮವಾರಪೇಟೆ ಅಭಿವೃದ್ಧಿಯಿಂದ ಹಿಂದೆ ಉಳಿದಿದೆ. ಇಲ್ಲಿ ಯಾವುದೇ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳು ಹಾದು ಹೋಗಿಲ್ಲದಿರುವುದು ಎಲ್ಲ ರೀತಿಯ ವಾಣಿಜ್ಯೋದ್ಯಮ ಬೆಳವಣಿಗೆಗೆ ತೊಡಕಾಗಿದೆ. ಕೂಡಲೇ ಬೆಂಗಳೂರಿನಿಂದ ಜಾಲ್ಸೂರಿಗೆ ಹಾದು ಹೋಗಲಿರುವ ರಾಜ್ಯ ಹೆದ್ದಾರಿ ಕಾಮಗಾರಿ ಮುಂದುವರೆಸುವಂತೆ ಸಭೆಯಲ್ಲಿ ಪಾಲ್ಗೊಂಡಿದ್ದ ಶಾಸಕ ಡಾ. ಮಂತರ್ ಗೌಡ ಅವರಲ್ಲಿ ಅಧ್ಯಕ್ಷರು ಮನವಿ ಮಾಡಿದರು. ತಾಲ್ಲೂಕಿನಲ್ಲಿ ಕಾಡುಪ್ರಾಣಿಗಳು ಮತ್ತು ಮಾನವ ಸಂಘರ್ಷ ದಿನದಿಂದ ಹೆಚ್ಚಾಗುತ್ತಿದ್ದು, ಕೊನೆಗಾಣಬೇಕು. ತಾಲ್ಲೂಕಿನ ಜನರ ಅನುಕೂಲಕ್ಕಾಗಿ ಸಾರಿಗೆ ಉಪಕೇಂದ್ರವನ್ನು ಪ್ರಾರಂಭಿಸಬೇಕು. ಶನಿವಾರಸಂತೆಯಲ್ಲಿ ಜನರಲ್ ಕಾರ್ಯಪ್ಪ ಹುಟ್ಟಿದ ಮನೆಯನ್ನು ಮ್ಯೂಸಿಯಂ ಮಾಡಬೇಕು. ತಾಲ್ಲೂಕಿನಲ್ಲಿ ಕಾಫಿ ಮ್ಯೂಸಿಯಂ ಮತ್ತು ರೀಸರ್ಚ್ ಕೇಂದ್ರ ಪ್ರಾರಂಭಕ್ಕೆ ಮುಂದಾಗಬೇಕು ಮನವಿ ಮಾಡಿದರು. ತಾಲ್ಲೂಕಿನ ಕೆಲ ಸರ್ಕಾರಿ ಕಚೇರಿಗಳಲ್ಲಿ ಇಂದಿಗೂ ಜನರ ಶೋಷಣೆ ನಡೆಯುತ್ತಿದ್ದು, ಅದನ್ನು ತಪ್ಪಿಸಬೇಕಿದೆ. ತಾಲ್ಲೂಕು ಕೇಂದ್ರದಿಂದ ದೂರದ…

Read More

ಮಡಿಕೇರಿ ಫೆ.12 NEWS DESK : ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಗರದ ಪೊಲೀಸ್ ಕವಾಯತ್ ಮೈದಾನದಲ್ಲಿ ನಡೆದ ಸೌಹಾರ್ದ ಕ್ರಿಕೆಟ್ ಪಂದ್ಯದಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ತಂಡ ಚಾಂಪಿಯನ್ ತಂಡವಾಗಿ ಹೊರಹೊಮ್ಮಿತು. 8 ಓವರ್‍ನ ಮೂರು ಪಂದ್ಯಗಳಲ್ಲಿ 2-1 ಪಂದ್ಯಗಳಿಂದ ಕೊಡಗು ಜಿಲ್ಲಾ ಪೊಲೀಸ್ ತಂಡವನ್ನು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ತಂಡ ಮಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತು. ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಪತ್ರಕರ್ತರ ತಂಡ ಕ್ಷೇತ್ರ ರಕ್ಷಣೆಗೆ ಮುಂದಾಯಿತು. ನಿಗದಿತ 8 ಓವರ್‍ನಲ್ಲಿ ಕೊಡಗು ಜಿಲ್ಲಾ ಪೊಲೀಸ್ ತಂಡ 4 ವಿಕೆಟ್ ಕಳೆದುಕೊಂಡು 73 ರನ್ ಕಲೆಹಾಕಿತು. ತಂಡ ಪರ ಮನೋಹರ್ 25, ನಾಗೇಶ್ 31 ರನ್ ದಾಖಲಿಸಿದರು. ಗುರಿ ಬೆನ್ನಟ್ಟಿದ ಪತ್ರಕರ್ತರ ತಂಡ 3 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು. ತಂಡದ ಪರ ಜಯಪ್ರಕಾಶ್ 19, ಹೇಮಂತ್ 35 ರನ್ ಕಲೆ ಹಾಕಿದರು. 2ನೇ ಪಂದ್ಯದಲ್ಲಿ ಟಾಸ್ ಸೋತ ಕೊಡಗು ಜಿಲ್ಲಾ…

Read More

ಮಡಿಕೇರಿ ಫೆ.10 NEWS DESK : ಕಾವೇರಿ ಶಾಲೆಯ ನರ್ಸರಿ, ಎಲ್ ಕೆ ಜಿ ಹಾಗೂ ಯು ಕೆ ಜಿ ವಿದ್ಯಾರ್ಥಿಗಳು ವಿರಾಜಪೇಟೆಯ ಕೂರ್ಗ್ ಅವಿನ್ಯೂ ಮಳಿಗೆಗೆ ಕ್ಷೇತ್ರ ಪ್ರವಾಸವನ್ನು ಕೈಗೊಂಡಿದರು.. ಅಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಸಂಯೋಜಿಕಿ ಅಮೃತ ಅರ್ಜುನ್ ಹಾಗೂ ಸಹ ಶಿಕ್ಷಕಿ ನಿವ್ಯಪೊನ್ನಣ್ಣ ವಿವಿಧ ರೀತಿಯ ತರಕಾರಿಗಳು ಹಾಗೂ ಹಣ್ಣುಗಳ ಹೆಸರುಗಳನ್ನು ಪರಿಚಯ ಮಾಡಿಕೊಟ್ಟರು. ನಂತರ ದಿನಸಿ ಪದಾರ್ಥಗಳನ್ನು ಕೊಳ್ಳುವ ಮತ್ತು ಮಾರುವ ಕ್ರಮವನ್ನು ಮಕ್ಕಳಿಗೆ ಅಚ್ಚು ಕಟ್ಟಾಗಿ ಹೇಳಿಕೊಟ್ಟರು. ಈ ಸಂದರ್ಭ ಕಾವೇರಿ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ಎಸ್, ಸುದೇಶ್, ಸಂಯೋಜಿಕಿಯರಾದ ಅಮೃತ ಅರ್ಜುನ್, ನಿವ್ಯಪೊನ್ನಣ್ಣ, ವೀಣಾ, ಪವಿತ, ಸುರಯ್ಯ, ತುಳಸಿ ಹಾಗೂ ದೈಹಿಕ ಶಿಕ್ಷಕಿ ಲಾವಣ್ಯ ಹಾಜರಿದ್ದರು.

Read More

ಮಡಿಕೇರಿ ಫೆ.10 NEWS DESK : ಪ್ರೊ ವಿ.ಬಿ.ಕೌಟಿನೋ ಅವರ ಸ್ಮರಣಾರ್ಥ ಬೆಂಗಳೂರು ವಿಶ್ವವಿದ್ಯಾಲಯದ ಕಾನೂನು ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘ ವತಿಯಿಂದ  ಸೆಮಿನಾರ್ ಹಾಲ್ ಉದ್ಘಾಟನೆಯ ಸಮಾರಂಭದಲ್ಲಿ  ಮುಖಮಂತ್ರಿಗಳ ಕಾನೂನು ಸಲಹೆಗಾರ ಹಾಗೂ  ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.

Read More