ಮಡಿಕೇರಿ ಮಾ.4 NEWS DESK : ಮಾಯಮುಡಿಯ ಕಮಟೆ ಮಹಾದೇವರ ದೇವಾಲಯದಲ್ಲಿ ಮಾ.8 ರಂದು ಶಿವರಾತ್ರಿಯ ಪ್ರಯುಕ್ತ ವಿಶೇಷ ಪೂಜೆ ನಡೆಯಲಿದೆ. ಅಂದು ರಾತ್ರಿ 7 ಗಂಟೆಗೆ ದೇವಾಲಯದಲ್ಲಿ ಮಹಾದೇವರಿಗೆ ರುದ್ರಾಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದ್ದು, ಜಾಗರಣೆ ಪ್ರಯುಕ್ತ ಭಜನೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಸಣ್ಣುವಂಡ ಬಿ.ರಮೇಶ್ ಹಾಗೂ ಕಾರ್ಯದರ್ಶಿ ಸಣ್ಣುವಂಡ ವಿನಯ್ ಅಯ್ಯಪ್ಪ ಮನವಿ ಮಾಡಿದ್ದಾರೆ.
ಲೇಖಕ: admin
ಮಡಿಕೇರಿ ಮಾ.4 NEWS DESK : ಕ್ರೀಡಾಪಟು ದಿವಂಗತ ಧರ್ಮ ಅವರ ಜ್ಞಾಪಕರ್ಥವಾಗಿ ಮಡಿಕೇರಿಯ ಗಾಂಧಿ ಮೈದಾನದಲ್ಲಿ ನಡೆದ ಲೀಗ್ ಮಾದರಿಯ ವಾಲಿಬಾಲ್ ಪಂದ್ಯದಲ್ಲಿ ಮನ್ವಿಕ್ ಫ್ರೆಂಡ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದರೆ, ಟೀಮ್ 14 ಅಶೋಕಪುರ ರನ್ನರ್ಸ್ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು. 3ನೇ ಸ್ಥಾನವನ್ನು ದ್ರೋಣ ಸ್ಪೋರ್ಟ್ಸ್ ಕ್ಲಬ್ ಪಡೆದು ಕೊಂಡರೆ, 4ನೇ ಸ್ಥಾನವನ್ನು ತುಶಾಂತ್ ಫ್ರೆಂಡ್ಸ್ ಪಡೆದುಕೊಂಡಿತು. ಒಟ್ಟು 9 ತಂಡಗಳು ಟ್ರೊಫಿಗಾಗಿ ಸೆನಸಾಡಿದ್ದವು, ಕ್ರೀಡಾಕೂಟದಲ್ಲಿ ವೈಯಕ್ತಿಕ ಬಹುಮಾನವಾಗಿ ಬೆಸ್ಟ್ ಆಲ್ ರೌಂಡರ್ ಮನ್ವಿತ್ ಫ್ರೆಂಡ್ಸ್ ತಂಡದ ಜಮೀರ್, ಬೆಸ್ಟ್ ಪಾಸಾರ್ ಆಗಿ ಟೀಮ್ 14 ತಂಡದ ಹಂಝ, ಬೆಸ್ಟ್ ಅಟ್ಯಾಕೆರ್, ಸುಬೈರ್, ಬೆಸ್ಟ್ ಡಿಫೆನ್ಸ್ ಶರೀಫ್ ಬಚ್ಚ, ಬೆಸ್ಟ್ ಬ್ಲಾಕರ್ ಸುಹಾಸ್, ಪಂದ್ಯದ ಉದಯೋನ್ಮುಖ ಆಟಗಾರ ಹಂಝ ಪಡೆದುಕೊಂಡರು. ತೀರ್ಪುಗಾರರಾಗಿ ಅಮೃತ್ ಹಾಗೂ ರಾಜೇಶ್ ಕಾರ್ಯ ನಿರ್ವಹಿಸಿದ್ದರು. ಆಯೋಜಕರಾಗಿ, ರವಿಕುಮಾರ್, ನಂದೀಶ್, ರಾಜೇಶ್, ಪಿಕ, ರಮೇಶ್, ಪಾಲ್ಗೊಂಡಿದ್ದರು. ವರದಿ : ಅಶೋಕ್
ಮಡಿಕೇರಿ ಮಾ.4 NEWS DESK : ನಾಪೋಕ್ಲುವಿನ ಚೆರಿಯಪಂಬುವಿನಲ್ಲಿ ನಿರಾಶ್ರಿತರು ನಿರ್ಮಿಸಿಕೊಂಡಿದ್ದ ಗುಡಿಸಲುಗಳನ್ನು ಕಂದಾಯ ಇಲಾಖೆ ತೆರವು ಮಾಡುವ ಮೂಲಕ ಬಡವರಿಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಸಿಐಟಿಯು ನೇತೃತ್ವದಲ್ಲಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಿತು. ನಗರದ ತಹಶೀಲ್ದಾರರ ಕಚೇರಿ ಎದುರು ಸಿಐಟಿಯು ಪ್ರಮುಖರು ಹಾಗೂ ನಿರಾಶ್ರಿತರು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ತಕ್ಷಣ ನಿರಾಶ್ರಿತರಿಗೆ ನಿವೇಶನ ನೀಡಬೇಕು ಮತ್ತು ಬಡವರ ಗುಡಿಸಲು ನಾಶ ಮಾಡಿ ನಷ್ಟ ಉಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಸಿಐಟಿಯು ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಮಾತನಾಡಿ, ನಾಪೋಕ್ಲುವಿನ ಚೆರಿಯಪರಂಬುವಿನಲ್ಲಿ ಕಳೆದ ಕೆಲವು ವರ್ಷಗಳಿಂದ ಸುಮಾರು 15 ಕುಟುಂಬಗಳು ಗುಡಿಸಲು ಕಟ್ಟಿಕೊಂಡು ಜೀವನ ಸಾಗಿಸುತ್ತಿದ್ದರು. ನಿವಾಸಿಗಳಿಗೆ ಯಾವುದೇ ಮುನ್ನೆಚ್ಚರಿಕೆ ಅಥವಾ ನೋಟಿಸ್ ನೀಡದೆ ನಾಪೋಕ್ಲುವಿನ ಕಂದಾಯ ಅಧಿಕಾರಿಗಳು ಏಕಾಏಕಿ ಗುಡಿಸಲನ್ನು ಕಿತ್ತು ಹಾಕಿದ್ದಾರೆ. ಇದರಿಂದ ಮನೆಯಲ್ಲಿದ್ದ ಸಾಮಾಗ್ರಿಗಳಿಗೂ ಹಾನಿಯಾಗಿದೆ ಎಂದು ಆರೋಪಿಸಿದರು. ಕೊಡಗಿನಲ್ಲೇ ಹುಟ್ಟಿ ಬೆಳೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ,…
ಮಡಿಕೇರಿ ಮಾ.4 NEWS DESK : ಭಯೋತ್ಪಾದಕ ಕೃತ್ಯಗಳನ್ನು ಖಂಡಿಸಿ ಮಾ.6 ರಂದು ಕೊಡಗು ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿ ವತಿಯಿಂದ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಬೆಳಿಗ್ಗೆ 10.30 ಗಂಟೆಗೆ ಪ್ರತಿಭಟನೆ ನಡೆಯಲಿದೆ.
ಮಡಿಕೇರಿ ಮಾ.4 NEWS DESK : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಬಾಳೆಲೆ ಮತ್ತು ಬಾಳೆಲೆ ಗ್ರಾಮ ಪಂಚಾಯಿತಿ ಸಯೋಗದಲ್ಲಿ ಬಾಳೆಲೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಐದು ವರ್ಷದ ಒಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ನೀಡುವ ಕಾರ್ಯಕ್ರಮ ನಡೆಯಿತು. ಬಾಳೆಲೆ ಗ್ರಾ.ಪಂ ಅಧ್ಯಕ್ಷರಾದ ಮುಕ್ಕಾಟಿರ ಜಾನಕಿ ಕಾವೇರಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿ ಭಾರತವು ಪೋಲಿಯೋ ಮುಕ್ತ ದೇಶವಾಗಿದ್ದು, ಮತ್ತೆ ಪೋಲಿಯೊ ರೋಗ ದೇಶದಲ್ಲಿ ಮರಕಳಿಸದಂತೆ ಪೋಷಕರು ಹಾಗೂ ಆರೋಗ್ಯ ಇಲಾಖೆ ಎಚ್ಚೆತ್ತುಕೊಳ್ಳಬೇಕು ಎಂದರು. ಬಾಳೆಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ಅಧಿಕಾರಿ ವಿಶ್ವನಾಥ್, ಮಗುವಿಗೆ ಪೋಲಿಯೋ ಹನಿ ಹಾಕಿ, ಮಾತನಾಡಿ ಐದು ವರ್ಷದ ಒಳಗಿನ ಎಲ್ಲಾ ಮಕ್ಕಳಿಗೂ ತಂದೆ ತಾಯಂದಿರು ಎರಡು ಹನಿ ಪೋಲಿಯೊ ಲಸಿಕೆ ಹಾಕಿಸಿಕೊಂಡು ಮಗುವಿನ ಸಂಪೂರ್ಣ ರಕ್ಷಣೆಯನ್ನು ಖಚಿತ ಪಡಿಸಿಕೊಳ್ಳ ಬಹುದೆಂದು ಅಭಿಪ್ರಾಯ ವ್ಯಕ್ತಪಡಿಸಿದರು. ಗ್ರಾ.ಪಂ ಸದಸ್ಯರಾದ ಫೊಡಮಾಡ ಸುಖೇಶ್ ಭೀಮಯ್ಯ, ಅಡ್ಡೇಂಗಡ…
ಮಡಿಕೇರಿ ಮಾ.4 NEWS DESK : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಅತಿಥಿ ಉಪನ್ಯಾಸಕರು ಬಾಕಿ ವೇತನ ಪಾವತಿಸುವಂತೆ ಒತ್ತಾಯಿಸಿ ಕಳೆದ ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಆಡಳಿತ ವ್ಯವಸ್ಥೆಯಿಂದ ಯಾವುದೇ ಸ್ಪಂದನೆ ದೊರೆಯದ ಕಾರಣ ಕಾಲೇಜು ಮುಂಭಾಗ ಮೌನ ಧರಣಿಯನ್ನು ಮುಂದುರೆಸಿದ್ದಾರೆ. ತರಗತಿಯನ್ನು ಬಹಿಷ್ಕರಿಸಿ ಧರಣಿ ಕುಳಿತಿರುವ ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆಗಳನ್ನು ಬಾಯಿಯ ಮೇಲಿನ ಮಾಸ್ಕ್ ಗೆ ಲಗತ್ತಿಸಿ ಗಮನ ಸೆಳೆಯುತ್ತಿದ್ದಾರೆ. ಕಾರ್ಯಪ್ಪ ಕಾಲೇಜ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ 43 ಉಪನ್ಯಾಸಕರಿಗೆ ಕಳೆದ 5 ತಿಂಗಳಿನಿಂದ ವೇತನ ಪಾವತಿಯಾಗಿಲ್ಲ, ಜೀವನ ಸಾಗಿಸುವುದು ಕಷ್ಟಕರವಾಗಿದೆ ಎನ್ನುವುದು ಪ್ರತಿಭಟನಾಕಾರರ ಅಸಮಾಧಾನವಾಗಿದೆ. ಕೋವಿಡ್ ಸಂದರ್ಭದ ಮೂರು ತಿಂಗಳ ವೇತನ ಸೇರಿ ಒಟ್ಟು ಎಂಟು ತಿಂಗಳ ವೇತನವನ್ನು ತಕ್ಷಣ ನೀಡಬೇಕೆಂದು ಆಗ್ರಹಿಸಿದ ಪ್ರತಿಭಟನಾಕಾರರು, ಬೇಡಿಕೆ ಈಡೇರುವಲ್ಲಿಯವರೆಗೆ ತರಗತಿ ಬಹಿಷ್ಕರಿಸಿ ಪ್ರತಿಭಟನೆ ಮುಂದುವರೆಸುವುದಾಗಿ ಎಚ್ಚರಿಕೆ ನೀಡಿದರು. ಇಂದು ಸ್ಥಳಕ್ಕೆ ನ್ಯಾಕ್ ಸಮಿತಿಯ ಸದಸ್ಯರೂ, ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯರು ಹಾಗೂ ಫೀಲ್ಡ್ ಮಾರ್ಷಲ್…
ನಾಪೋಕ್ಲು ಮಾ.4 NEWS DESK : ನಾಪೋಕ್ಲು – ಮೂರ್ನಾಡು ಮುಖ್ಯರಸ್ತೆಯ ಸಮೀಪದಲ್ಲೇ ಇರುವ ಹೊದ್ದೂರು ಗ್ರಾಮದ ಶ್ರೀ ಭಗವತಿ ದೇವಾಲಯ ನೂತನವಾಗಿ ನಿರ್ಮಾಣಗೊಂಡು ಅತ್ಯಾಕರ್ಷಕವಾಗಿ ಕಂಗೊಳಿಸುತ್ತಿದ್ದು, ಪುನರ್ ಪ್ರತಿಷ್ಠಾಪನೆ ಬ್ರಹ್ಮ ಕಳಶೋತ್ಸವದ ಅಂಗವಾಗಿ ಅಂತಿಮ ಹಂತದ ಕೆಲಸ ಕಾರ್ಯಗಳು ಭರದಿಂದ ಸಾಗುತ್ತಿವೆ. ಸುಮಾರು 1.5 ಕೋಟಿ ರೂ.ವೆಚ್ಚದಲ್ಲಿ ದೇವಾಲಯ ಪುನರ್ ನಿರ್ಮಾಣಗೊಂಡಿದ್ದು, ಇತಿಹಾಸದ ಪ್ರಕಾರ ಸಾವಿರಾರು ವರ್ಷಗಳ ಹಿಂದೆ ಋಷಿಮುನಿಗಳು ತಪಸ್ಸು ಮಾಡಿದ ದೈವಿಕ ತಾಣ ಇದು ಎಂದು ನಂಬಲಾಗಿದೆ. ಮಹಾಕಾಳಿ, ಮಹಾಲಕ್ಷ್ಮಿ, ಮಹಾಸರಸ್ವತಿ ನೆಲೆ ನಿಂತ ತಾಣ ಇದಾಗಿದೆ. ದೇವಾಲಯವನ್ನು ಕಾರ್ಕಳದಿಂದ ತರಲಾದ ಕಲ್ಲಿನಿಂದಲೇ ಅತ್ಯಂತ ಆಧುನಿಕ ತಂತ್ರಜ್ಞಾನವನ್ನು ಬಳಸಿ ಆಕರ್ಷಕ ಕುಸುರಿ ಕೆಲಸದೊಂದಿಗೆ ಸಂಪೂರ್ಣವಾಗಿ ನಿರ್ಮಿಸಲಾಗಿರುವುದು ವಿಶೇಷ. ದೇವ ಮಹಿಮೆ ಜನರ ಮೇಲೆ ಬಂದ ಊರು ಕೊಡವ ಭಾಷೆಯ ಪೊದ್ದು ನಂತರ ಹೊದ್ದೂರು ಎಂದಾಯಿತು ಎಂದು ಹೇಳಲಾಗುತ್ತಿದೆ. ಮರಕಡ ಶ್ರೀ ಗುರ ಪರಾಶಕ್ತಿ ಮಠದ ಪರಮಪೂಜ್ಯ ನರೇಂದ್ರನಾಥ ಯೋಗೇಶ್ವರ ಮಹಾಸ್ವಾಮಿಯವರ ಪೂರ್ಣ ಅನುಗ್ರಹದೊಂದಿಗೆ ನಿತಿನ್ ನರೇಂದ್ರನಾಥ ಯೋಗೇಶ್ವರ…
ನಾಪೋಕ್ಲು ಮಾ.4 NEWS DESK : ಅಯ್ಯಂಗೇರಿ ಗ್ರಾಮದ ಚಿನ್ನತಪ್ಪ ಉತ್ಸವಕ್ಕೆ ಚಾಲನೆ ದೊರೆಯಿತು. ಪ್ರತಿವರ್ಷದಂತೆ ಈ ಬಾರಿಯೂ ಮೂರು ದಿನಗಳ ಕಾಲ ಉತ್ಸವ ಗ್ರಾಮದ ಜನರ ಸಮ್ಮುಖದಲ್ಲಿ ನಡೆಯಲಿದೆ. ಕೃಷ್ಣನ ಕೊಳಲನ್ನು ಭಕ್ತಿಪೂರ್ವಕವಾಗಿ ಹೊರತೆಗೆದು ನುಡಿಸಲಾಯಿತು. ಭಕ್ತಾದಿಗಳು ದೇವಾಲಯಕ್ಕೆ ಆಗಮಿಸಿ ಕೊಳಲು ನಾದ ಆಲಿಸಿದರು. ಇಂದು ಪಟ್ಟಣಿ ಹಬ್ಬ ನಡೆಯಲಿದ್ದು, ದೇವಾಲಯಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಎಣ್ಣೆ, ಹರಕೆ ಸಲ್ಲಿಸುತ್ತಾರೆ. ನಾಳಿಯಂಡ ಮಾಣಿಯಿಂದ ಎತ್ತುಪೋರಾಟ ಹೊರಟು ಮಂದ್ ನಲ್ಲಿ ಎತ್ತುಪೋರಾಟ, ಶ್ವೇತವಸ್ತ್ರಧರಿಸಿದ ಮಹಿಳೆಯರ ಚೆಂಬುಚೆರ್ಕ್ , ತೆಂಗಿನಕಾಯಿಗೆ ಗುಂಡುಹೊಡೆಯುವುದು ಅನ್ನಸಂತರ್ಪಣೆ ಹಾಗೂ ಹರಕೆ ಸಲ್ಲಿಸುವುದು ಚಿನ್ನತಪ್ಪ ಹಬ್ಬದ ವಿಶೇಷವಾಗಿವೆ. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಮಾ.4 NEWS DESK : ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗ್ರಾಮ ಪಂಚಾಯಿತಿ ಅದ್ಯಕ್ಷೆ ವನಜಾಕ್ಷಿ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಮೂಲಕ ಉದ್ಘಾಟಿಸಿದರು. 0-5 ವರ್ಷದ ಪ್ರತಿಯೊಬ್ಬ ಮಗು ಪೋಲಿಯೋ ಲಸಿಕೆ ಹಾಕಿಸಿಕೊಳ್ಳುವಂತೆ ತಿಳಿಸಿದರು. ಆರೋಗ್ಯ ಇಲಾಖೆ ಮಧುಸೂಧನ್, ಆರೋಗ್ಯ, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು. ನಾಪೋಕ್ಲು ಪಂಚಾಯಿತಿ ಹಳೆ ತಾಲೂಕು ಅಂಗನವಾಡಿ ಕೇಂದ್ರ ದಲ್ಲಿ 0-5 ವರ್ಷದ ಮಕ್ಕಳಿಗೆ ಪಂಚಾಯಿತಿ ಸದಸ್ಯರ ಅರುಣ್ ಬೇಬ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು. ನಂತರ ಪೋಲಿಯೋ ಲಸಿಕೆ ಬಗ್ಗೆ ಮಾಹಿತಿ, ಮಹತ್ವ ಬಗ್ಗೆ ತಿಳಿಸಿದರು . ಅಂಗನವಾಡಿ , ಆಶಾ ಕಾರ್ಯಕರ್ತೆಯರು , ಸ್ತ್ರೀ ಶಕ್ತಿ ಸದಸ್ಯರು , ಪೋಷಕರು ಮಕ್ಕಳೊಂದಿಗೆ ಹಾಜರಿದ್ದರು. ನಾಪೋಕ್ಲು ವ್ಯಾಪ್ತಿಯ ಕಲ್ಲುಮೊಟ್ಟೆ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮದಲ್ಲಿ ಪಂಚಾಯಿತಿ ಸದಸ್ಯ ಪ್ರತೀಪ ಆಗಮಿಸಿ ಪೋಲಿಯೋ ಲಸಿಕೆ ಬಗ್ಗೆ ತಿಳಿಸಿದರು. ಸ್ತ್ರೀ ಶಕ್ತಿ ಅಧ್ಯಕ್ಷೆ ಜಯಮ್ಮ ಮಕ್ಕಳಿಗೆ ಪೋಲಿಯೋ…
ಪಿರಿಯಾಪಟ್ಟಣ ಮಾ.4 NEWS DESK : ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಬೆಟ್ಟದಪುರ ಶಕ್ತಿ ಕೇಂದ್ರದ ವತಿಯಿಂದ ಬೆಟ್ಟದಪುರದಲ್ಲಿ ಭಾರತ ಅಕ್ಕಿ ವಿತರಿಸಲಾಯಿತು. ಸಂಸದ ಪ್ರತಾಪ್ ಸಿಂಹ ಅವರ 10 ವರ್ಷಗಳ ಅಭಿವೃದ್ಧಿ ಕಾರ್ಯಗಳ ಕೈಪಿಡಿಯನ್ನು ವಿತರಿಸಲಾಯಿತು. ಈ ಸಂದರ್ಭ ತಾಲ್ಲೂಕು ಅಧ್ಯಕ್ಷ ರಾಜೇಂದ್ರ, ಮಾಜಿ ಅಧ್ಯಕ್ಷ ರಾಜೇಗೌಡ, ,ಮಹಾ ಶಕ್ತಿಕೇಂದ್ರದ ಅಧ್ಯಕ್ಷ ಮೈಲಾರಿ, ಪ್ರಧಾನ ಕಾರ್ಯದರ್ಶಿ ಅರುಣ್ ರಾಜ್ ಅರಸ್, ಲೋಕಪಾಲಯ್ಯ, ನಿತ್ಯಾನಂದ, ಶಿವಶಂಕರ, ಸತೀಶ್, ಮಲ್ಲೇಶ್, ಮಹದೇವ, ಅಶೋಕ್ , ಕಿರಂಗೂರು ಮೋಹನ್, ಮನು ರಾಜು ಉಪಸ್ಥಿತರಿದ್ದರು.






