ಕುಶಾಲನಗರ ಫೆ.10 NEWS DESK : ಬೈಚನಹಳ್ಳಿ ಮುತ್ತಪ್ಪ ದೇವಾಲಯದಲ್ಲಿ ತೆರೆ ಮಹೋತ್ಸವಕ್ಕೆ ಚಾಲನೆ ದೊರೆಯಿತು. ಮುತ್ತಪ್ಪ ಸೇವಾ ಟ್ರಸ್ಟ್ ವತಿಯಿಂದ ನಡೆಯುತ್ತಿರುವ ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ ದೇವಾಲಯದ ಆವರಣದಲ್ಲಿ ಗಣಪತಿ ಹೋಮ ನಂತರ ಧ್ವಜಾರೋಹಣ ನೆರವೇರಿಸಲಾಯಿತು. ಕುಶಾಲನಗರ ದೇವಾಲಯಗಳ ಒಕ್ಕೂಟದ ಪ್ರತಿನಿಧಿಗಳು ಫಲ ತಾಂಬೂಲಗಳೊಂದಿಗೆ ಆಗಮಿಸಿ ದೇವಾಲಯದಲ್ಲಿ ಸಾಮೂಹಿಕ ಪೂಜೆ ಸಲ್ಲಿಸಿದರು. ನಂತರ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು. ತೆರೆ ಮಹೋತ್ಸವ ಅಂಗವಾಗಿ ತಾಲಪೊಲಿ ಮೆರವಣಿಗೆ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಿಂದ ಹೊರಟು ಚಂಡೆ ವಾದ್ಯಗಳೊಂದಿಗೆ ಮುಖ್ಯ ರಸ್ತೆ ಮೂಲಕ ತೆರಳಿ ದೇವಾಲಯಕ್ಕೆ ಆಗಮಿಸಿತು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ತಡರಾತ್ರಿಯಲ್ಲಿ ತೆರೆ ಮಹೋತ್ಸವ ಅಂಗವಾಗಿ ವಿಶೇಷ ಕಾರ್ಯಕ್ರಮಗಳು ಜರಗಿದವು. ಈ ಸಂದರ್ಭ ಮುತ್ತಪ್ಪ ಸೇವಾ ಟ್ರಸ್ಟ್ ಅಧ್ಯಕ್ಷರಾದ ಎಂ.ಹರೇಂದ್ರನ್, ಉಪಾಧ್ಯಕ್ಷ ಆರ್.ಚಂದ್ರ, ಟಿ.ವಿ.ರಾಜೇಶ್, ಖಜಾಂಚಿ ವಿ.ಬೇಬಿ, ಕಾರ್ಯದರ್ಶಿ ಎನ್.ಎಸ್.ನರೇಶ್ ಕುಮಾರ್, ಸಹ ಕಾರ್ಯದರ್ಶಿ ಬಳಪಂಡ ಪವನ್, ಕೆ.ಯು.ರವಿ, ದೇವಾಲಯಗಳ ಒಕ್ಕೂಟ ಉಪಾಧ್ಯಕ್ಷರಾದ ವಿ.ಎನ್.ವಸಂತಕುಮಾರ್, ವಿ.ಡಿ .ಪುಂಡರಿಕಾಕ್ಷ ,…
ಲೇಖಕ: admin
ಮಡಿಕೇರಿ ಫೆ.10 NEWS DESK : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ವತಿಯಿಂದ 1962, 1965, 1971ರ ಯುದ್ಧಗಳಲ್ಲಿ ಭಾಗವಹಿಸಿದ ಜಿಲ್ಲೆಯ ಯೋಧರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಕೊಟ್ಟುಕತ್ತೀರ ಪಿ.ಸೋಮಣ್ಣ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ವಿವಿಧ ಸಂಘಟನೆಯಿಂದ ಈ ಹಿಂದೆ ಸೈನಿಕರನ್ನು ಸನ್ಮಾನಿಸುವ ಕಾರ್ಯಕ್ರಮ ನಡೆಸಲಾಗಿತ್ತು. ಆದರೆ, ಯುದ್ಧಗಳಲ್ಲಿ ಹೋರಾಡಿದ, ಭಾಗವಹಿಸಿದವರನ್ನು ಗುರುತಿಸುವ ಕಾರ್ಯ ನಡೆದಿರಲಿಲ್ಲ. ಮೊದಲ ಬಾರಿಗೆ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ವತಿಯಿಂದ 1962ರ ಇಂಡೋ ಚೈನ ಯುದ್ಧ ಹಾಗೂ 1965 ಮತ್ತು 1971ರ ಇಂಡೋ ಪಾಕ್ ಯುದ್ಧಗಳಲ್ಲಿ ಭಾಗವಹಿಸಿದ ಕೊಡಗಿನ ಮಾಜಿ ಸೈನಿಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಇದಕ್ಕೆ ಜಿಲ್ಲೆಯ ಜನತೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಕಾರ್ಯಕ್ರಮಕ್ಕೆ ಬರಲಾಗದವರಿಗೆ ಸಂಘದ ವತಿಯಿಂದ ಸೂಕ್ತ ವ್ಯವಸ್ಥೆ ಮಾಡಲಾಗುವುದು. ಇದೇ ರೀತಿ ಮುಂದಿನ ದಿನಗಳಲ್ಲಿ ಕಾರ್ಗಿಲ್, ಶಾಂತಿ ಪಡೆಯವರನ್ನು ಗುರುತಿಸಿ ಸನ್ಮಾನಿಸಲಾಗುವುದು ಎಂದು ಮಾಹಿತಿ ನೀಡಿದರು. ಸಂಘದ…
ಮಡಿಕೇರಿ ಫೆ.10 NEWS DESK : ಸ್ಥಳೀಯ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರ ಮೂಲಭೂತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆ.13 ರಂದು ತಾಲ್ಲೂಕು ಮಟ್ಟದಲ್ಲಿ, ಫೆ.14 ರಂದು ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆ ನಡೆಸುವುದಲ್ಲದೆ, ಫೆ.15 ರಂದು ‘ನಮ್ಮ ನಡೆ ಮುಖ್ಯ ಮಂತ್ರಿಗಳ ಮನೆ ಕಡೆಗೆ’ ಎನ್ನುವ ಹೋರಾಟವನ್ನು ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವುದಾಗಿ ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ ಪಟ್ಟಣ ಪಂಚಾಯ್ತಿ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಡಿ.ಈರಪ್ಪ ಶೆಟ್ಟಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪಟ್ಟಣ ಪಂಚಾಯ್ತಿ, ಪುರಸಭೆ, ನಗರಸಭೆಗಳಲ್ಲಿ ನೂರಾರು ಮಂದಿ ಹೊರಗುತ್ತಿಗೆಯಡಿ, ಚಾಲಕರುಗಳಾಗಿ, ನೀರು ಗಂಟಿಗಳಾಗಿ, ಸ್ವಚ್ಛತಾ ಸಿಬ್ಬಂದಿಗಳಾಗಿ, ಲೋಡರ್ಸ್ಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರುಗಳನ್ನು ಸರ್ಕಾರ ನೇರ ಪಾವತಿಗೆ ಒಳಪಡಿಸುವ ಮೂಲಕ ಅವರ ವೇತನ ಪಾವತಿಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ನೇರ ಪಾವತಿಯ ಪ್ರಮುಖ ಬೇಡಿಕೆ ಹಿನ್ನೆಲೆಯಲ್ಲಿ ನಡೆಯುವ ಪ್ರತಿಭಟನೆ ಸಂದರ್ಭ ರಾಜ್ಯಾದ್ಯಂತ ಹೊರ ಗುತ್ತಿಗೆ ನೌಕರರು ಸ್ವಚ್ಛತಾ ಕಾರ್ಯ ಮತ್ತು…
ಮಡಿಕೇರಿ ಫೆ.10 NEWS DESK : ‘ಬ್ರೈನೋಬ್ರೈನ್ ಇಂಟರ್ ನ್ಯಾಷನಲ್ ದುಬೈ’ ವತಿಯಿಂದ ಇತ್ತೀಚೆಗೆ ಆಯೋಜಿಸಲಾಗಿದ್ದ ‘11ನೇ ಅಂತರ ರಾಷ್ಟ್ರೀಯ ಆನ್ಲೈನ್ ಬ್ರೈನೋಬ್ರೈನ್ ಸ್ಪರ್ಧೆ-2024’ರಲ್ಲಿ ಮಡಿಕೇರಿಯ ಬ್ರೈನೋಬ್ರೈನ್ ಕೇಂದ್ರದ ವಿದ್ಯಾರ್ಥಿಗಳು ಕೇವಲ 4 ನಿಮಿಷಗಳಲ್ಲಿ ವಿವಿಧ ರೀತಿಯ ಲೆಕ್ಕಗಳನ್ನು ಅತಿ ಚುರುಕಾಗಿ ಮಾಡುವ ಮೂಲಕ ಅತ್ಯುತ್ತಮ ಸಾಧನೆ ಮೆರೆದು 29 ಚಾಂಪಿಯನ್ ಟ್ರೋಫಿ, 29 ಚಿನ್ನದ ಪದಕ ಮತ್ತು 12 ಬೆಳ್ಳಿಯ ಪದಕ ತಮ್ಮದಾಗಿಸಿಕೊಂಡಿದ್ದಾರೆ. 81 ರಾಷ್ಟ್ರಗಳ ಒಟ್ಟು 21,422 ಮಕ್ಕಳು ವಿವಿಧ ರಾಷ್ಟ್ರದ ಬ್ರೈನೋಬ್ರೈನ್ ಕೇಂದ್ರಗಳಿಂದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಕೊಡಗು ಜಿಲ್ಲೆಯ ಮಡಿಕೇರಿಯ ಬ್ರೈನೋಬ್ರೈನ್ ಕೇಂದ್ರದಿಂದ ಒಟ್ಟು 70 ಮಂದಿ ಮಕ್ಕಳು ತರಬೇತುದಾರರಾದ ಮಾಪಂಗಡ ಕವಿತಾ ಕರುಂಬಯ್ಯ ಅವರ ನೇತೃತ್ವದಲ್ಲಿ ವಿವಿಧ ವಿಭಾಗಗಳಲ್ಲಿ ಸ್ಪರ್ಧಿಸಿದರು. ಆನ್ಲೈನ್ ಸ್ಪರ್ಧೆಯಲ್ಲಿ 4 ನಿಮಿಷಗಳ ನಿಗಧಿತ ಸಮಯ ಮಾತ್ರವಿದ್ದು, ಮಡಿಕೇರಿ ಗುಡ್ಡಗಾಡು ಪ್ರದೇಶವಾದ್ದರಿಂದ ಇಂಟರ್ನೆಟ್ ಕನೆಕ್ಷನ್ ಹಾಗೂ ನೆಟ್ವರ್ಕ್ ಸಮಸ್ಯೆ ಇದ್ದರು ಸಹ ಸವಾಲಾಗಿ ಸ್ವೀಕರಿಸಿ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ತೋರಿ ಭಾಗವಹಿಸಿದ ಎಲ್ಲಾ…
ಮಡಿಕೇರಿ ಫೆ.10 NEWS DESK : ವೀರಲೋಕ ಪ್ರಕಾಶನ ಆಯೋಜಿಸಿರುವ ಪುಸ್ತಕ ಸಂತೆ ಆರಂಭಗೊಂಡಿದೆ. ಬೆಂಗಳೂರು ನಗರದ ಎಚ್.ಎಸ್.ಆರ್ ಬಡಾವಣೆಯ ಸ್ವಾಭಿಮಾನ ಉದ್ಯಾನವನದಲ್ಲಿ ಎರಡು ದಿನಗಳ ಕಾಲ ನಡೆಯುವ ಈ ಪುಸ್ತಕ ಸಂತೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಜ್ಞಾನಾರ್ಜನೆಗೆ ಪುಸ್ತಕಗಳ ಓದು ಬಹಳ ಅಗತ್ಯ. ಉಳಿದೆಲ್ಲಾ ಜ್ಞಾನ ಮೂಲಗಳಿಗಿಂತ ಪುಸ್ತಕ ಓದಿನ ಮೂಲದ ಜ್ಞಾನಾರ್ಜನೆ ಬಹಳ ಪರಿಣಾಮಕಾರಿ ಎಂದು ಹೇಳಿದರು. ಪುಸ್ತಕ ಮತ್ತು ಪತ್ರಿಕೆಗಳನ್ನು ಕೊಂಡು ಓದುವ ಅಭಿರುಚಿ ಮತ್ತು ಕಾಳಜಿಯನ್ನು ಬೆಳೆಸಿಕೊಳ್ಳಿ ಎಂದು ನೆರೆದಿದ್ದ ಓದುಗರಿಗೆ ಕರೆ ನೀಡಿದರು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ರಾಮಲಿಂಗಾರೆಡ್ಡಿ, ಚಲನಚಿತ್ರ ನಿರ್ದೇಶಕ ಹಾಗೂ ಲೇಖಕ ಬರಗೂರು ರಾಮಚಂದ್ರಪ್ಪ ಮಾಜಿ ಸಂಸದ ಉಗ್ರಪ್ಪ ಮತ್ತು ವಿಶ್ವವಾಣಿ ಸಂಪಾದಕ ವಿಶ್ವೇಶ್ವರ ಭಟ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು. ಉದ್ಘಾಟನೆ ಸಮಾರಂಭದಲ್ಲಿ ಕೊಡಗಿನ ಸಾಹಿತಿ ಭಾರಧ್ವಾಜ ಕೆ.ಆನಂದ ತೀರ್ಥ ಅವರ ವೀರಲೋಕ ಪ್ರಕಾಶನ ಪ್ರಕಟಿಸಿರುವ ಕಂದಕ ಹಾಗೂ ಕ್ರಮಣ ಕಾದಂಬರಿಯ ಪರಿಷ್ಕೃತ ಆವೃತ್ತಿಯನ್ನು ಮುಖ್ಯಮಂತ್ರಿ…
ವಿರಾಜಪೇಟೆ ಫೆ.10 NEWS DESK : ಜಿಲ್ಲೆಯ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ನಾಲ್ವರು ಶಿಕ್ಷಕರಿಗೆ ಸುವರ್ಣ ಸಂಭ್ರಮ ಕನ್ನಡಿಗ ಪ್ರಶಸ್ತಿ ಲಭಿಸಿದೆ. ವಿರಾಜಪೇಟೆ ನಾಟ್ಯ ಮಯೂರಿ ನೃತ್ಯ ಶಾಲೆ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರ ಆವರಣದಲ್ಲಿರುವ ನಯನ ಸಭಾಂಗಣ ಕನ್ನಡ ಭವನದಲ್ಲಿ ನಡೆದ ರಾಜ್ಯ ಮಟ್ಟದ ನೃತ್ಯೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ 2023-34 ನೇ ಸಾಲಿನಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ವಿವಿಧ ಸಾಧನೆಗೈದ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಗೀತಾಂಜಲಿ, ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ವಿ.ಟಿ.ವೆಂಕಟೇಶ್, ವಿರಾಜಪೇಟೆ ಮತ್ತು ಕತ್ತೋಡು ಕ್ಲಸ್ಟರ್ ಗಣಿತ ಶಿಕ್ಷಕ ಪಿ.ಆರ್.ಅಯ್ಯಪ್ಪ, ವಿರಾಜಪೇಟೆ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಟಿ.ಕೆ.ವಾಮನ ಅವರುಗಳನ್ನು ನಾಟ್ಯ ಮಯೂರಿ ನೃತ್ಯ ಶಾಲೆಯ ಪ್ರಮುಖರಾದ ವಿದುಷೀ ಶ್ರೀಮತಿ ಪ್ರೇಮಾಂಜಲಿ ಮತ್ತು ಇತರ ಗಣ್ಯರು ಪ್ರಶಸ್ತಿ ನೀಡಿ ಗೌರವಿಸಿದರು. ವರದಿ : ಕಿಶೋರ್ ಕುಮಾರ್ ಶೆಟ್ಟಿ
ಬೆಂಗಳೂರು ಫೆ 10 NEWS DESK : ರೈತರು ನೀಡಿದ ಹಕ್ಕೊತ್ತಾಗಳನ್ನು ಗಂಭೀರವಾಗಿ ಪರಿಗಣಿಸಿ, ಕೇಂದ್ರದ ಬಿಜೆಪಿ ಸರ್ಕಾರ ಜಾರಿ ಮಾಡಿರುವ ರೈತ ವಿರೋಧಿ “ಭೂ ಸುಧಾರಣಾ ಕಾಯ್ದೆ 2020″ಕ್ಕೆ ತಿದ್ದುಪಡಿ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕರ್ನಾಟಕ ರಾಜ್ಯ ರೈತ ಸಂಘ ಫ್ರೀಡಂಪಾರ್ಕ್ ನಲ್ಲಿ ರೈತ ನಾಯಕ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅವರ 88ನೇ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ರೈತ ಸಮಾವೇಷವನ್ನು ಉದ್ಘಾಟಿಸಿದ ಬಳಿಕ ರೈತ ಪರ ಬಜೆಟ್ ರೂಪಿಸಲು ರೈಸ ಸಂಘ ನೀಡಿದ ಹಕ್ಕೊತ್ತಾಯಗಳನ್ನು ಸ್ವೀಕರಿಸಿ ಮಾತನಾಡಿದರು. ನಂಜುಂಡಸ್ವಾಮಿಯವರು ಸಂಘಟಿಸಿದ ಸ್ಟಡಿ ಸರ್ಕಲ್ ಮೂಲಕ ಹಲವು ವಿಚಾರಗಳ ಒಳನೋಟ ದೊರೆಯಿತು. ಸಮಾಜವಾದಿ ಆರ್ಥಿಕತೆ, ಸಮಾಜವಾದಿ ರಾಜಕಾರಣದ ಬಗ್ಗೆ ಸ್ಪಷ್ಟತೆ ಸಿಕ್ಕಿತು. ಈ ಸ್ಟಡಿ ಸರ್ಕಲ್ ಗೆ ಬಹಳ ಮಂದಿ ಉಪನ್ಯಾಸಕರು, ಪ್ರೊಫೆಸರ್ ಗಳು, ಸಾಹಿತಿಗಳು ಬರುತ್ತಿದ್ದರು. ಇವರೆಲ್ಲರ ಮಸರ್ಗದರ್ಶನ ನನಗೆ ಅನುಕೂಲವಾಯಿತು ಎಂದರು. ನಂಜುಂಡಸ್ವಾಮಿಯವರು ಕಡೆಯವರೆಗೂ ರೈತರ ಪರವಾಗಿ ಕ್ರಿಯಾಶೀಲವಾಗಿದ್ದರು. ಸಮಾಜವಾದಿ ಆಶಯಗಳ ಪರವಾಗಿದ್ದ ಇವರು ಬೆಳೆಸಿದ…
ಮಡಿಕೇರಿ ಫೆ.10 NEWS DESK : ಕಲಿಕೆ ಎನ್ನುವುದು ನಿರಂತರವಾದದ್ದು, ಇದಕ್ಕೆ ಅಂತ್ಯವಿಲ್ಲ. ಸಾಧನೆಗೆ ಅಸಾಧ್ಯವಾದದ್ದು ಯಾವುದೂ ಇಲ್ಲ, ಛಲ ಇದ್ದರೆ ಏನನ್ನು ಬೇಕಾದರೂ ಸಾಧಿಸಬಹುದು ಎಂದು ಸಾಹಿತಿ ಪಂದ್ಯಂಡ ರೇಣುಕಾ ಸೋಮಯ್ಯ ಅಭಿಪ್ರಾಯಪಟ್ಟಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಕೊಡವ ಮಕ್ಕಡ ಕೂಟದ 83ನೇ ಪುಸ್ತಕ ಹಾಗೂ ಪಂದ್ಯಂಡ ರೇಣುಕಾ ಸೋಮಯ್ಯ ಅವರ “ಒಮ್ಮ ತೆಳ್ಚಿ ಬುಡಿ” 2ನೇ ಕೊಡವ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಮನುಷ್ಯ ಹುಟ್ಟಿನಿಂದ ಸಾಯುವವರೆಗೂ ಕುಲಿಯುತ್ತ ಇರುತ್ತಾನೆ. ಯಾರಲ್ಲಿ ಕಲಿಯುವ ಪ್ರಯತ್ನ, ಶ್ರಮ ಇರುತ್ತದೆಯೋ ಅವರು ಸಾಧನೆಯ ಹಾದಿ ಹಿಡಿಯುತ್ತಾರೆ. ಗುರಿ ಸಾಧಿಸಲು ಮುಖ್ಯವಾಗಿ ಬೇಕಾಗಿರುವುದು ಆತ್ಮವಿಶ್ವಾಸ ಎಂದು ಸಲಹೆ ನೀಡಿದರು. ಸಾಹಿತ್ಯ ಲೋಕದ ಅನೇಕ ಪ್ರಕಾರಗಳಲ್ಲಿ ಹಾಸ್ಯವೂ ಒಂದು. ಇಂದಿನ ಆಧುನಿಕ ಸಮಾಜದಲ್ಲಿ ಒತ್ತಡದ ಕಾರ್ಯನಿರ್ವಹಣೆ ಮತ್ತು ಜಂಜಾಟದ ಬದುಕಿನಿಂದ ಮುಕ್ತಿ ದೊರೆಯಲಿ ಎಂಬ ಕಾರಣಕ್ಕೆ ದಿನನಿತ್ಯ ಸಾಮಾಜಿಕ ಜಾಲತಾಣಗಳಲ್ಲಿ ಬರುವ ಕೆಲವು ವಿಚಾರಗಳನ್ನು ಸಂಗ್ರಹಿಸಿ ನನ್ನದೇ ಆದ ರೀತಿಯಲ್ಲಿ…
ನಾಪೋಕ್ಲು ಫೆ.10 : ಚೆರಿಯ ಪರಂಬುವಿನಲ್ಲಿ ಅಂತಿಮ ವಿಶ್ರಾಂತಿ ಪಡೆಯುತ್ತಿರುವ ಪವಾಡ ಪುರುಷರ ಹೆಸರಿನಲ್ಲಿ ಪ್ರತಿ ವರ್ಷ ಆಚರಿಸಿಕೊಂಡು ಬರುತ್ತಿರುವ ಚೆರಿಯಪರ೦ಬು ಉರೂಸ್ ಸಮಾರಂಭಕ್ಕೆ ಚಾಲನೆ ದೊರೆಯಿತು. ಜುಮ ನಮಾಜ್ ಬಳಿಕ ದರ್ಗಾ ತೆರಳಿದ ಕೊಡಗಿನ ಖಾಝಿ ಅಬ್ದುಲ್ಲಾ ಫೈಝಿ ನೂತನವಾಗಿ ದರ್ಗಾ ಆವರಣದಲ್ಲಿ ಅಳವಡಿಸಲಾದ ಇಂಟರ್ಲಾಕ್ ಅನ್ನು ಲೋಕಾರ್ಪಣೆಗೊಳಿಸಿದರು. ಬಳಿಕ ವಿಶೇಷ ಪ್ರಾರ್ಥನೆ ಸಲ್ಲಿಸಿ, ರಿಫಾಹಿಯ ದಫ್ ಸಮಿತಿಯ ದಫ್ ಪ್ರದರ್ಶನದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಮಾಯತ್ ಆಡಳಿತ ಮಂಡಳಿ ಅಧ್ಯಕ್ಷ ಪರವಂಡ ಜುಬೇರ್ ಧ್ವಜಾರೋಹಣ ನೆರವೇರಿಸಿದರು. ಜಮಾಯತ್ ಕಾರ್ಯದರ್ಶಿ ಪರವ0ಡ ಸಿರಾಜ್ ಮಾತನಾಡಿ, ಭಕ್ತಾದಿಗಳು ಅಧಿಕ ಸಂಖ್ಯಾತ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ಸಿಗೊಳಿಸಬೇಕಾಗಿ ಕೋರಿಕೊಂಡರು. ಇಂದು ಸಂಜೆ 7 ಗಂಟೆಗೆ ಸರ್ವಧರ್ಮ ಸಮ್ಮೇಳನ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ಎ.ಎಸ್.ಪೊನ್ನಣ್ಣ, ಡಾ. ಮಂತರ್ ಗೌಡ, ಅರೆಮೇರಿ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ನಾಪೋಕ್ಲು ಸೆಂಟ್ ಮೇರಿ ಚರ್ಚ್ ಫಾದರ್ ಜ್ಞಾನ ಪ್ರಕಾಶ್ ಸೇರಿದಂತೆ ವಿವಿಧ ಧಾರ್ಮಿಕ…
ಮಡಿಕೇರಿ ಫೆ.10 NEWS DESK : ಬಸ್ ಡಿಕ್ಕಿಯಾಗಿ ಹಾನಿಗೊಳಗಾಗಿದ್ದ ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ವೃತ್ತದ ಅಭಿವೃದ್ಧಿ ಕಾರ್ಯ ಭರದಿಂದ ಸಾಗಿದೆ. ಘಟನೆ ನಡೆದು ಆರು ತಿಂಗಳು ಕಳೆದರೂ ಕಾಮಗಾರಿ ಚುರುಕು ಪಡೆಯದ ಕಾರಣ ಸಾರ್ವಜನಿಕ ವಲಯದಲ್ಲಿ ಟೀಕೆಗಳು ಕೇಳಿ ಬಂದಿತ್ತು. ಇದರಿಂದ ಎಚ್ಚೆತ್ತುಕೊಂಡ ನಗರಸಭೆ ಜನರಲ್ ತಿಮ್ಮಯ್ಯ ವೃತ್ತದ ಅಭಿವೃದ್ಧಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಗುತ್ತಿಗೆದಾರರಿಗೆ ಸೂಚನೆ ನೀಡಿತ್ತು. ಇದೀಗ ಕಾಮಗಾರಿ ಅಂತಿಮ ಹಂತಕ್ಕೆ ಬಂದಿದ್ದು, ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ ಅವರು ಇಂದು ಗುಣಮಟ್ಟ ಪರಿಶಿಲಿಸಿದರು. ಈ ಸಂದರ್ಭ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಮತ್ತಿತರರು ಹಾಜರಿದ್ದರು.






