ಮಡಿಕೇರಿ ಮಾ.4 NEWS DESK : ಚೆಟ್ಟಳ್ಳಿ ಸಮೀಪದ ಕಂಡಕರೆ ಮುಸ್ಲಿಮ್ ಜಮಾಹತ್ ಕಮಿಟಿಯ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಕೆ.ಹೆಚ್.ಅಬ್ದುಲ್ ಗಫೂರ್, ಪ್ರಧಾನ ಕಾರ್ಯದರ್ಶಿಯಾಗಿ ಟಿ.ಎಂ.ಮೊಹಮ್ಮದ್ ರಫಿ ಹಾಗೂ ಕೋಶಾಧಿಕಾರಿಯಾಗಿ ಕೆ.ಬಿ.ರಜಾಕ್ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಕಂಡಕರೆ ಹಯಾತುಲ್ ಇಸ್ಲಾಮ್ ಮದರಸದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಹಳೆಯ ಸಮಿತಿಯನ್ನು ಮುಂದುವರಿಸಿ ಪುನರಾಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಅಲಿ ಹಾಜಿ, ಸಹ ಕಾರ್ಯದರ್ಶಿಯಾಗಿ ಪಿ.ಎಂ.ಅಲಿ, ಸ್ವಲಾತ್ ಕಮಿಟಿ ಸದಸ್ಯರಾಗಿ ಕೆ.ಎ.ಹುಸೈನ್, ಕಾರ್ಯದರ್ಶಿಯಾಗಿ ಟಿ.ಎಂ. ನಿಜಾಮ್ ಆಯ್ಕೆಯಾಗಿದ್ದಾರೆ. ಸದಸ್ಯರಾಗಿ ಕೆ.ಎಂ.ಯೂಸುಫ್, ಎ.ಹಂಸ, ಮನ್ಸೂರ್, ಹಾರಿಸ್, ಇಸ್ಮಾಯಿಲ್, ಮಹಮ್ಮದ್, ಸುಹೈಲ್, ಸರ್ಫುದ್ದೀನ್, ಫಾರೂಖ್, ಜಂಶೀದ್ ಹಾಗೂ ಕೆ.ಯು.ಹುಸೈನ್ ಆಯ್ಕೆಯಾಗಿದ್ದಾರೆ.
ಲೇಖಕ: admin
ಮಂಗಳೂರು ಮಾ.4 NEWS DESK : ಮೂವರು ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಯುವಕನೊಬ್ಬ ಆ್ಯಸಿಡ್ ದಾಳಿ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಸರಕಾರಿ ಕಾಲೇಜು ಆವರಣದಲ್ಲಿ ನಡೆದಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ತಯಾರಿಯಲ್ಲಿದ್ದ ಮೂವರು ವಿದ್ಯಾರ್ಥಿನಿಯರ ಮೇಲೆ ಯುವಕ ಏಕಾಏಕಿ ಆ್ಯಸಿಡ್ ಹಾಕಿದ್ದಾನೆ. ಘಟನೆಯಿಂದ ಮೂವರೂ ವಿದ್ಯಾರ್ಥಿನಿಯರು ತೀವ್ರವಾಗಿ ಗಾಯಗೊಂಡಿದ್ದು, ಕಡಬ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಓರ್ವ ವಿದ್ಯಾರ್ಥಿನಿಯನ್ನು ಟಾರ್ಗೆಟ್ ಮಾಡಿ ದಾಳಿ ನಡೆಸಿದ್ದು, ಜೊತೆಯಲ್ಲಿದ್ದ ಗೆಳೆತಿಯರಿಗೂ ಗಂಭೀರ ಗಾಯಗಳಾಗಿದೆ. ಕೇರಳ ಮೂಲದ ಆರೋಪಿ ಅಬೀನ್ ಎಂಬಾತನನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ತನಿಖೆ ಮುಂದುವರೆದಿದ್ದು, ದಾಳಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸುಂಟಿಕೊಪ್ಪ ಮಾ.4 NEWS DESK : ಜಿಲ್ಲಾ ಮಟ್ಟದ ಸರಕಾರಿ ನೌಕರರ ಪುರುಷರ ಸಿಂಗಲ್ಸ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಸುಂಟಿಕೊಪ್ಪ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ರಾಜ್ಯ ಸರ್ಕಾರಿ ನೌಕರರ 45 ವರ್ಷ ಮೇಲ್ಪಟ್ಟ ಜಿಲ್ಲಾ ಮಟ್ಟದ ಸರಕಾರಿ ನೌಕರರ ಕ್ರೀಡಾಕೂಟವು ಮಡಿಕೇರಿ ಮ್ಯಾನ್ಸ್ ಕಾಪೌಂಡ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಸಲಾಗಿದ್ದು, ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಪೈನಲ್ ಪಂದ್ಯಾವಳಿಯು ವಿ.ಜಿ.ಲೋಕೇಶ್ ಹಾಗೂ ಶಶಿ ಮಾಸ್ಟರ್ ನಡುವೆ ನಡೆದ ಪಂದ್ಯಾವಳಿಯಲ್ಲಿ ವಿ.ಜಿ.ಲೋಕೇಶ್ ವಿಜೇತರಾಗುವ ಮೂಲಕ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು. 45 ವರ್ಷ ಮೇಲ್ಪಟ್ಟ ಡಬಲ್ಸ್ ವಿಭಾಗದಲ್ಲಿ ಪಿಡಿಓ ಲೋಕೇಶ್ ಹಾಗೂ ಪಿಡಿಓ ಶ್ರೀನಿವಾಸ್ ಜೋಡಿಯು ಗಿರೀಶ್ ಉಪನ್ಯಾಸಕರು ಹಾಗೂ ಶಶಿ ಶಿಕ್ಷಕರ ವಿರುದ್ಧ ನಡೆದ ಪಂದ್ಯಾವಳಿಯಲ್ಲಿ ಪಿಡಿಓ ಲೋಕೇಶ್ ಹಾಗೂ ಪಿಡಿಓ ಶ್ರೀನಿವಾಸ್ ತಂಡವು ಜಯಗಳಿಸುವುದರೊಂದಿಗೆ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಪುರುಷರ ಮುಕ್ತ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಪಿಡಿಓ ಲೋಕೇಶ್ ಮತ್ತು ಉಪನ್ಯಾಸಕ ಸುಧಾಕರ್ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾದರು.
ಸುಂಟಿಕೊಪ್ಪ ಮಾ.4 NEWS DESK : ರಾಷ್ಟ್ರೀಯ ಪಲ್ಸ್ಪೋಲಿಯೋ ಕಾರ್ಯಕ್ರಮದ ಅಂಗವಾಗಿ ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಬಸ್ ನಿಲ್ದಾಣದ ಕೇಂದ್ರಗಳಲ್ಲಿ ಮಕ್ಕಳಿಗೆ ಪಲ್ಸ್ಪೋಲಿಯೋ ಹನಿಯನ್ನು ನೀಡಲಾಯಿತು. ಗ್ರಾ.ಪಂ.ಅಧ್ಯಕ್ಷ ಪಿ.ಆರ್.ಸುನಿಲ್ಕುಮಾರ್ ಮಗುವಿಗೆ ನೀಡುವ ಮೂಲಕ ಚಾಲನೆ ನೀಡಿದರು. ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗ್ರಾ.ಪಂ.ಅಧ್ಯಕ್ಷ ಪಿ.ಆರ್.ಸುನಿಲ್ಕುಮಾರ್ ಹಾಗೂ ವೈದ್ಯಾಧಿಕಾರಿ ಶಮ್ನ, ಆರೋಗ್ಯ ಶೂಶ್ರಷಕಿಯರು, ಆರೋಗ್ಯ ಸಹಾಯಕಿಯರು, ದಾದಿಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾ.ಪಂ.ಸದಸ್ಯರುಗಳಾದ ಪಿ.ಎಫ್.ಸಬಾಸ್ಟೀನ್, ರಫೀಕ್ಖಾನ್, ಶಾಂತಿ ಹಾಗೂ ಮತ್ತಿತರರು ಇದ್ದರು.
ಸುಂಟಿಕೊಪ್ಪ ಮಾ.4 NEWS DESK : ಪನ್ಯ ಗ್ರಾಮದ ಉದ್ಧಿಬಾಣೆ ಮಠದಲ್ಲಿ ಶ್ರದ್ಧಾಭಕ್ತಿಯಿಂದ ಧರ್ಮ ದೈವಗಳ ನೇಮೋತ್ಸವ ನಡೆಯಿತು. ಎರಡುದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳೊಂದಿಗೆ ಜರುಗಿತು. ಗಣ ಹೋಮ ಮತ್ತು ಸತ್ಯ ನಾರಾಯಣ ಪೂಜೆಯು ನಡೆದು ನೇಮ ಮತ್ತು ದೇವತಾ ಕಾರ್ಯಕ್ಕೆ ವಿಘ್ನ ಬಾರದಂತೆ ಪ್ರಾರ್ಥನೆ ಸಲ್ಲಿಸಲಾಯಿತು. ರಾತ್ರಿ ಬಂಡಾರ ತೆಗೆಯುವ ಮೂಲಕ ನೇಮೋತ್ಸವಕ್ಕೆ ಚಾಲನೆ ದೊರಕಿತು. ನಂತರ ಕಲ್ಲುರ್ಟಿ ದೈವದ ನೇಮೋತ್ಸವ ಜರುಗಿತು. ಮುಂಜಾನೆಯಿಂದ ಪಂಜುರ್ಲಿ ಮತ್ತು ಗುಳಿಗ ದೈವದ ನೇಮವು ನಡೆಯಿತು. ನಂತರ ಕಾರಣಿಕ ದೈವ ಎನಿಸಿದ ಕೊರಗಜ್ಹ ದೈವದ ನೇಮವು ನಡೆಯಿತು. ದೇವಾಲಯ ಸೇರಿದಂತೆ ಭಕ್ತರ ಹರಕೆಯ ಒಟ್ಟು 4 ಕೊರಗಜ್ಹ ದೈವದ ನೇಮವು ನಡೆಯಿತು. ಮಕ್ಕಳ ಜೋತೆ ಕುಣಿದು ಹಾಸ್ಯ ಮಾಡುತ್ತಾ ಎಲ್ಲರನ್ನು ಸಂತೃಪ್ತಿ ಪಡಿಸಿತು. ನೆರೆದಿದ್ದ ಭಕ್ತರಿಗೆ ಎರಡು ದಿನ ಅನ್ನ ಸಂತರ್ಪಣೆ ನೆರವೇರಿತು. ಸುಂಟಿಕೊಪ್ಪ, ಕುಶಾಲನಗರ, ಮಡಿಕೇರಿ, ಪನ್ಯ, ಗರಗಂದೂರು, ಮಾದಾಪುರ, ಸುಳ್ಯ, ಪುತ್ತೂರು, ಮಂಗಳೂರು, ಮೈಸೂರು ಸೇರಿದಂತೆ ಹಲವು…
ಮಡಿಕೇರಿ ಮಾ.3 NEWS DESK : ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಅಧ್ಯಕ್ಷರಾಗಿ ಜಾನ್ಸನ್ ಪಿಂಟೋ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸುಂಟಿಕೊಪ್ಪದ ಚರ್ಚ್ ನಲ್ಲಿ ನಡೆದ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಸಭೆಯಲ್ಲಿ ಪಾಲ್ಗೊಂಡಿದ್ದ ಸಮುದಾಯದ ಕೆ.ನಿಡುಗಣೆ ಗ್ರಾ.ಪಂ ಸದಸ್ಯರು ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಮುಖರಾದ ಮುಖಂಡರು ಜಾನ್ಸನ್ ಪಿಂಟೋ ಅವರನ್ನು ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದರು.
ಮಡಿಕೇರಿ ಮಾ.3 NEWS DESK : ಕಾಂಗ್ರೆಸ್ ಪಕ್ಷ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರನ್ನು ಎಂದಿಗೂ ಕಡೆಗಣಿಸಿಲ್ಲ, ಆರಂಭದ ಹಂತದಲ್ಲಿ ಶಾಸಕರುಗಳಿಗೆ ನಿಗಮ ಮಂಡಳಿಗಳಲ್ಲಿ ಸ್ಥಾನಮಾನ ದೊರೆತ್ತಿದ್ದು, ಮುಂದಿನ ದಿನಗಳಲ್ಲಿ ಕಾರ್ಯಕರ್ತರಿಗೂ ಸೂಕ್ತ ಸ್ಥಾನ ಸಿಗಲಿದೆ ಎಂದು ಕೆಪಿಸಿಸಿ ಸದಸ್ಯ ಕೆ.ಎ.ಯಾಕುಬ್ ಬಜೆಗುಂಡಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬಹುಮತ ಹೊಂದಿರುವ ಕಾಂಗ್ರೆಸ್ ಸರ್ಕಾರ ಸರ್ವ ಕಾರ್ಯಕರ್ತರಿಗೂ ಸಮಾನ ಗೌರವ ಮತ್ತು ಸ್ಥಾನಮಾನ ನೀಡಲಿದೆ. ಇದರಲ್ಲಿ ಯಾವುದೇ ಗೊಂದಲ ಬೇಡ, ಯಾರೂ ಊಹಾಪೋಹಗಳಿಗೆ ಕಿವಿಗೊಡಬಾರದು. ಸಧ್ಯದಲ್ಲೇ ಲೋಕಸಭಾ ಚುನಾವಣೆ ಬರಲಿದ್ದು, ಪ್ರತಿಯೊಬ್ಬ ಕಾರ್ಯಕರ್ತ ಮೈಸೂರು- ಕೊಡಗು ಕ್ಷೇತ್ರವನ್ನು ಗೆಲ್ಲುವ ಪಣ ತೊಡಬೇಕು ಎಂದು ಕರೆ ನೀಡಿದ್ದಾರೆ. ನಿಗಮ ಮಂಡಳಿಗಳು ಮತ್ತು ಸ್ಥಳೀಯ ಸಂಸ್ಥೆಗಳ ಎಲ್ಲಾ ಸ್ಥಾನಗಳಿಗೆ ಪದಾಧಿಕಾರಿಗಳ ನೇಮಕವಾಗಿಲ್ಲ. ಸುಮಾರು 70 ಸ್ಥಾನಗಳಿಗೆ ಮಾತ್ರ ಆಯ್ಕೆಯಾಗಿದ್ದು, ಇನ್ನೂ 40 ಸ್ಥಾನಗಳಿಗೆ ನೇಮಕವಾಗಬೇಕಾಗಿದೆ. ಮುಂದೆ ನಡೆಯುವ ಆಯ್ಕೆ ಪ್ರಕ್ರಿಯೆ ಸಂದರ್ಭ ಕೊಡಗಿಗೆ ಪ್ರಾತಿನಿಧ್ಯ ದೊರೆಯಲಿದೆ. ಅದರಲ್ಲೂ ಅಲ್ಪಸಂಖ್ಯಾತರಿಗೆ ಒಂದು ಸ್ಥಾನ ಸಿಗುವುದು ಖಚಿತವಾಗಿದೆ…
ಮಡಿಕೇರಿ ಮಾ.3 NEWS DESK : ಭಾಗಮಂಡಲ ಗ್ರಾ.ಪಂ ವ್ಯಾಪ್ತಿಯ ಅರಣ್ಯ ಭಾಗದಲ್ಲಿ ಅತಿಕ್ರಮಣ ಪ್ರವೇಶವಾಗಿದೆ ಎಂದು ಆರೋಪಿಸಿ ಕುಡಿಯುವ ನೀರು ಸರಬರಾಜಿನ ಸಾಮಾಗ್ರಿಗಳನ್ನು ಅರಣ್ಯ ಇಲಾಖೆ ವಶಪಡಿಸಿಕೊಂಡ ಪ್ರಕರಣವನ್ನು ಇತ್ಯರ್ಥ ಪಡಿಸಿ ಗ್ರಾಮಸ್ಥರಿಗೆ ನ್ಯಾಯ ಒದಗಿಸಿಕೊಟ್ಟ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಕ್ರಮ ಸ್ವಾಗತಾರ್ಹವಾಗಿದ್ದು, ಗ್ರಾಮಸ್ಥರ ಪರವಾಗಿ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಕಾಂಗ್ರೆಸ್ ಸೇವಾ ಕಚೇರಿಯ ಭಾಗಮಂಡಲ ಹೋಬಳಿ ಅಧ್ಯಕ್ಷ ಕೆ.ಸಿ.ವೆಂಕಟೇಶ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಪರಿಹಾರೋಪಾಯಗಳನ್ನು ಸೂಚಿಸುವ ಶಾಸಕ ಪೊನ್ನಣ್ಣ ಅವರ ಕಾರ್ಯವೈಖರಿ ಬಗ್ಗೆ ಗ್ರಾಮಸ್ಥರಿಗೆ ತೃಪ್ತಿ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಭಾಗಮಂಡಲ ಗ್ರಾ.ಪಂ ವತಿಯಿಂದ ಕುಡಿಯುವ ನೀರಿನ ಟ್ಯಾಂಕ್ ನಿರ್ಮಿಸಿದ್ದು, ದೇವರ ಕಾಡು ಅರಣ್ಯ ಪ್ರದೇಶಕ್ಕೆ ಅತಿಕ್ರಮಣ ಪ್ರವೇಶ ಮಾಡಿದ್ದಾರೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ನೀರಿನ ಪಂಪ್, ಮೋಟಾರ್ ಹಾಗೂ ಪೈಪ್’ಗಳನ್ನು ವಶಪಡಿಸಿಕೊಂಡಿತ್ತು. ಜೊತೆಗೆ ಅರಣ್ಯ ಇಲಾಖೆಯ ಅನುಮತಿ ಪಡೆಯದೆ…
ಮಡಿಕೇರಿ ಮಾ.3 NEWS DESK : ಶನಿವಾರ ಕೆಲಸಕ್ಕೆಂದು ತೆರಳಿದ ವ್ಯಕ್ತಿಯೊಬ್ಬರು ಮನೆಗೆ ಮರಳದೆ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಮಡಿಕೇರಿ ಹೊರ ವಲಯದ ಗಾಳಿಬೀಡು ಗ್ರಾಮದ ನಿಶಾನಿ ಬೆಟ್ಟದಲ್ಲಿ ನಡೆದಿದೆ. ಗಾಳಿಬೀಡು ಗ್ರಾಮದ ನಿವಾಸಿ ಅಪ್ಪಚ್ಚ(60) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಪ್ರವಾಸಿಗರು ಟ್ರಕ್ಕಿಂಗ್ ಗಾಗಿ ನಿಶಾನಿ ಬೆಟ್ಟಕ್ಕೆ ಹೋಗುತ್ತಿದ್ದ ಸಂದರ್ಭ ಶವ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದರು. ಕಾಡಾನೆ ದಾಳಿಯಿಂದ ಅಪ್ಪಚ್ಚ ಅವರು ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಶವ ದೊರೆತ ಪ್ರದೇಶದಲ್ಲಿ ಆನೆ ಸಂಚರಿಸಿರುವ ಕುರುಹು ಪತ್ತೆಯಾಗಿದೆ. ಅಪ್ಪಚ್ಚ ಅವರು ಶನಿವಾರ ಬೆಳಗ್ಗೆ ಕೆಲಸಕ್ಕೆಂದು ಹೋಗಿದ್ದವರು ಮನೆಗೆ ಮರಳಿರಲಿಲ್ಲ. ಮನೆಯವರು ರಾತ್ರಿಯವರೆಗೂ ಎಷ್ಟೇ ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಆದರೆ ಇಂದು ಮುಂಜಾನೆ ಅಪ್ಪಚ್ಚ ಅವರ ಮೃತದೇಹ ಪ್ರವಾಸಿಗರಿಗೆ ಗೋಚರಿಸಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಡಿಕೇರಿ ಮಾ.3 NEWS DESK : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಟ್ರಾನ್ಸ್ ಫಾರ್ಮರಿಗೆ ಡಿಕ್ಕಿಯಾಗಿ ಮಗುಚಿಕೊಂಡ ಘಟನೆ ಪೊನ್ನಂಪೇಟೆಯ ಕಾನೂರಿಗೆ ತೆರಳುವ ಮುಗುಟಗೇರಿ ಮುಖ್ಯ ರಸ್ತೆಯಲ್ಲಿ ನಡೆದಿದೆ. ಅದೇ ರಸ್ತೆಯಲ್ಲಿ ತೆರಳುತ್ತಿದ್ದವರೊಬ್ಬರು ಚೆಸ್ಕಾಂ ಗೆ ಕರೆ ಮಾಡಿ ವಿದ್ಯುತ್ ಸ್ಥಗಿತಗೊಳಿಸಿ ಅವಘಡಕ್ಕೀಡಾದ ಕಾರಿನ ಚಾಲಕನನ್ನು ರಕ್ಷಿಸಿದರು. ಕಾರು ಮತ್ತು ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾರೆ.






