ಮಡಿಕೇರಿ ಮಾ.2 NEWS DESK : ವಿರಾಜಪೇಟೆ ತಾಲೂಕಿನ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ಬಿಟ್ಟಂಗಾಲ ಪಂಚಾಯಿತಿಯ ಪೋದಕೇರಿ ಮಹಾದೇವರ ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು. ಬೇಟೊಳಿ ಪಂಚಾಯಿತಿಯ ಗುಂಡಿಗೆರೆ ಮಸೀದಿಗೆ ತೆರಳುವ ನೂತನ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಗೋಣಿಕೊಪ್ಪದ ಶ್ರೀ ಗಣೇಶ್ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿ ಶುಭ ಕೋರಿದರು. ಇದೇ ಸಂದರ್ಭ ಬೇಟೊಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ಚಿಣ್ಣರ ಜೊತೆ ಸಮಯ ಕಳೆದು ಶಾಲೆಯ ಅಡಳಿತ ವೈಖರಿಯನ್ನ ಶ್ಲಾಘೀಸಿದರು.
ಲೇಖಕ: admin
ಮಡಿಕೇರಿ ಮಾ.2 NEWS DESK : 2022-23ನೇ ಸಾಲಿನ 10ನೇ ತರಗತಿ ಕನ್ನಡ ಮಾಧ್ಯಮ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ಜಿಲ್ಲೆಯ ವಿದ್ಯಾರ್ಥಿನಿ ಹೆಚ್.ಆಶಿಫಾ ಗೆ ದಿವಂಗತ ಬಿ.ಎಸ್.ಬೀರಪ್ಪ ದತ್ತಿ ಪ್ರಶಸ್ತಿ ಪ್ರದಾನ, ಮಹಿಳೆ ಮತ್ತು ಶಿಕ್ಷಣ ಉಪನ್ಯಾಸ ಕಾರ್ಯಕ್ರಮ ಹಾಗೂ ದತ್ತಿ ದಾನಿ ಹೆಚ್.ಬಿ.ಜಯಮ್ಮರಿಗೆ ಸನ್ಮಾನ ಕಾರ್ಯಕ್ರಮ ಮಾ.5 ರಂದು ನಡೆಯಲಿದೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸೋಮವಾರಪೇಟೆ ತಾಲ್ಲೂಕು ಕಸಾಪ, ಶನಿವಾರಸಂತೆ ಹೋಬಳಿ ಕಸಾಪ ಮತ್ತು ಶನಿವಾರಸಂತೆ ಶ್ರೀವಿಘ್ನೇಶ್ವರ ಬಾಲಕಿಯರ ಪ್ರೌಢಶಾಲೆಯ ಸಂಯುಕ್ತಾಶ್ರಯದಲ್ಲಿ ಶನಿವಾರಸಂತೆಯ ಶ್ರೀವಿಘ್ನೇಶ್ವರ ಕಲ್ಯಾಣ ಮಂಟಪದಲ್ಲಿ ಮಧ್ಯಾಹ್ನ 2 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಶನಿವಾರಸಂತೆ ವಿಘ್ನೇಶ್ವರ ಪ್ರೌಢಶಾಲೆಯ ಪ್ರಾಂಶುಪಾಲ ಟಿ.ಪಿ.ಶಿವಪ್ರಸಾದ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಉಪಾಧ್ಯಕ್ಷ ಕೆ.ಇ.ಕೃಷ್ಣರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ.ಕೇಶವಕಾಮತ್ ಗೌರವ ಉಪಸ್ಥಿತರಿರಲಿದ್ದಾರೆ. ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಪ್ರಾಸ್ತವಿಕ ನುಡಿಗಳನ್ನಾಡಲಿದ್ದು, ಶನಿವಾರಸಂತೆ ವಿಘ್ನೇಶ್ವರ ಪ್ರೌಢಶಾಲೆಯ ಅಧ್ಯಾಪಕ ಕೆ.ಪಿ.ಜಯಕುಮಾರ್ ಮುಖ್ಯ ಭಾಷಣ ಮಾಡಲಿದ್ದಾರೆ. ಕಸಾಪ ಗೌರವ ಕಾರ್ಯದರ್ಶಿಗಳಾದ…
ಮಡಿಕೇರಿ ಮಾ.2 : ಅಲ್ ಅಮೀನ್ ಕೊಡಗು ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಮಾ.3ರಂದು ಸುಂಟಿಕೊಪ್ಪದ ಎಸ್ ಎಸ್ ಇಂಟರ್ ನ್ಯಾಷನಲ್ ಕನ್ವೆನ್ಷನ್ ಹಾಲ್ ನಲ್ಲಿ 10 ಜೋಡಿ ಮುಸ್ಲಿಂ ಬಡ ಕನ್ಯೆಯರ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದೆ. ಸಂಸ್ಥೆಯ ಮಹಾಪೋಷಕ, ಮಾಜಿ ಶಾಸಕ ಕೆ.ಎಂ.ಇಬ್ರಾಹಿಂ ಮಾಸ್ಟರ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಾಹ್ನ 11ಗಂಟೆಗೆ ನಡೆಯಲಿರುವ ಸಮಾರಂಭವನ್ನು ಸೈಯದ್ ಕೆ .ಎಸ್. ಮುಕ್ತಾರ್ ತಂಙಳ್ ಕುಂಬೋಲ್ ಅವರು ಉದ್ಘಾಟಿಸಲಿದ್ದಾರೆ. ಜಿಲ್ಲೆಯ ಉಪ ಖಾಝಿ ಎಂ.ಎಂ. ಅಬ್ದುಲ್ಲ ಫೈಝಿ, ಸುಂಟಿಕೊಪ್ಪದ ಸುನ್ನಿ ಮುಸ್ಲಿಂ ಜಮಾಅತ್ ನ ಮುದರ್ರಿಸ್ ಉಸ್ಮಾನ್ ಫೈಝಿ, ಪೆರುಂಬಾಡಿಯ ಸಂಸುಲ್ ಉಲಮಾ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಬಶೀರ್ ಹಾಜಿ, ಕುಶಾಲನಗರದ ದಾರುಲ್ ಉಲೂಂ ಮದರಸ ಸಂಸ್ಥೆಯ ಪ್ರಾಂಶುಪಾಲ ತಮ್ಲೀಕ್ ದಾರಿಮಿ, ಸುಂಟಿಕೊಪ್ಪದ ಎಸ್ ಎಸ್ ಹಾಲ್ ಮಾಲೀಕ ಎಂ.ಎಂ.ಸಾಹಿರ್, ಗದ್ದೆ ಹಳ್ಳ ಮಸೀದಿಯ ಧರ್ಮಗುರು ಉಸಾಮಾ ಸಖಾಫಿ, ಕೊಡಗರಹಳ್ಳಿಯ ಬಾಪು ಹಾಜಿ ಮುಂತಾದವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಅಲ್ ಅಮೀನ್…
ಬಾಳೆಲೆ ಮಾ.2 NEWS DESK : ಗೋಣಿಕೊಪ್ಪಲು ಕಾಫಿ ಮಂಡಳಿ ಹಾಗೂ ಲಕ್ಷ್ಮಣತೀರ್ಥ ಸಂಘದ ಸಂಯುಕ್ತಾಶ್ರಯದಲ್ಲಿ ಸಂಚಾರಿ ಮಣ್ಣು ಪರೀಕ್ಷಾ ಅಭಿಯಾನ ನಡೆಯಿತು. ಕೊಟ್ಟಗೇರಿ ಸಮುದಾಯಭವನದಲ್ಲಿ ನಡೆದ ಅಭಿಯಾನದಲ್ಲಿ ಬೆಳೆಗಾರರಿಗೆ ಸ್ಥಳದಲ್ಲೇ ಸುಣ್ಣದ ಪ್ರಮಾಣದ ಶಿಫಾರಸಿನ ಫಲಿತಾಂಶ ನೀಡಲಾಯಿತು. ಮಣ್ಣು ಪರೀಕ್ಷಾ ವಿಜ್ಞಾನಿ ಪ್ರಪುಲಾ ಕುಮಾರಿ ಮಣ್ಣು ಪರೀಕ್ಷೆಯ ಮಹತ್ವ ಹಾಗೂ ಗೊಬ್ಬರದ ನಿರ್ವಹಣೆ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಕಾಫಿ ಮಂಡಳಿಯ ಕಿರಿಯ ಸಂಪರ್ಕ ಅಧಿಕಾರಿ ಮುಖಾರಿಬ್ ಮಾತನಾಡಿ, ಕಾಫಿ ಬೆಳೆಗಾರರಿಗೆ ಕಾಫಿ ಕಾಪತು ಮಾಡುವ ಬಗ್ಗೆ, ಕಾಫಿ ಗಿಡಗಳಿಗೆ ಬೇಕಾದ ನೀರಿನ ಪ್ರಮಾಣದ ಬಗ್ಗೆ, ಸುಣ್ಣದ ಮತ್ತು ಗೊಬ್ಬರದ ಪ್ರಮಾಣದ ಬಗ್ಗೆ ಮಾಹಿತಿ ನೀಡಿದರು. ಲಕ್ಷ್ಮಣ ತೀರ್ಥ ಸಂಘದ ಅಧ್ಯಕ್ಷ ಮಚ್ಚಮಾಡ ಅಯ್ಯಪ್ಪ, ಕಾರ್ಯದರ್ಶಿ ಮಾಚಂಗಡ ಸುಬ್ರಮಣಿ, ಗ್ರಾ.ಪಂ ಮಾಜಿ ಅಧ್ಯಕ್ಷ ಅರಮಣಮಾಡ ಸತೀಶ್ ದೇವಯ್ಯ, ಸೇರಿದಂತೆ ಲಕ್ಷ್ಮಣತೀರ್ಥ ಸಂಘದ ಸದಸ್ಯರು ಮತ್ತು ಕಾಫಿಬೆಳೆಗಾರರು ಹಾಜರಿದ್ದರು.
ಬೆಂಗಳೂರು ಮಾ.2 NEWS DESK : ಬೆಂಗಳೂರಿನ ಕೆ.ಆರ್.ಪುರಂನಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಇಂದು ಹಮ್ಮಿಕೊಂಡಿದ್ದ ಪ್ರಧಾನಮಂತ್ರಿ ಆವಾಸ್ ಯೋಜನೆ ಸರ್ವರಿಗೂ ಸೂರು ಯೋಜನೆಯಡಿ ನೀಡಲಾಗುವ ಮನೆಗಳ ಹಂಚಿಕೆ ಹಾಗೂ ಹಕ್ಕುಪತ್ರಗಳ ವಿತರಣಾ ಸಮಾರಂಭವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಅನ್ನ, ಆರೋಗ್ಯ , ಆಶ್ರಯ, ಅಕ್ಷರ ಇದೇ ನಮ್ಮ ಸರ್ಕಾರದ ಮೂಲಮಂತ್ರವಾಗಿದ್ದು, ಬಡವರ ಕಲ್ಯಾಣವೇ ನಮ್ಮ ಆದ್ಯತೆ. ಪ್ರಧಾನಮಂತ್ರಿ ಆವಾಸ್ ಯೋಜನೆ “ಸರ್ವರಿಗೂ ಸೂರು” ಯೋಜನೆಯಡಿ ರಾಜ್ಯದಾದ್ಯಂತ ನಿರ್ಮಾಣಗೊಳ್ಳುತ್ತಿರುವ 18,0253 ಮನೆಗಳ ಪೈಕಿ ಪೂರ್ಣಗೊಂಡಿರುವ 36,789 ಮನೆಗಳನ್ನು ಇಂದು ಲೋಕಾರ್ಪಣೆ ಮಾಡಿದ್ದೇವೆ. ಅಲ್ಲದೆ ಕೊಳಗೇರಿ ವ್ಯಾಪ್ತಿಯಲ್ಲಿ ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಮೂಲ ಸೌಕರ್ಯ ಒದಗಿಸಲು ಒತ್ತು ನೀಡಲಾಗಿದೆ. ಬಡ ವರ್ಗದ ಜನರಿಗೆ ನಮ್ಮ ಗ್ಯಾರಂಟಿಗಳು ನೆರವಾಗಿದ್ದು, ಅವರ ಏಳಿಗೆಗಾಗಿ ಹಲವು ಕಾರ್ಯಕ್ರಮ ರೂಪಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಡಿಕೆಸಿ ಹೇಳಿದರು.
ಪುತ್ತೂರು ಮಾ.2 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪುರುಷರ ವಾಲಿಬಾಲ್ ತಂಡವು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ರಾಜ್ಯಮಟ್ಟದ ಅಂತರ್ಕಾಲೇಜು ವಾಲಿಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಉಜಿರೆಯ ಎಸ್ಡಿಎಂಐಟಿ ಯಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಕಾಲೇಜಿನ ತಂಡವು ಉತ್ತಮ ಸಾಧನೆಯೊಂದಿಗೆ ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಿದೆ. ವಾಲಿಬಾಲ್ ಸ್ಪರ್ಧೆಯಲ್ಲಿ ಕಾಲೇಜು ಪ್ರಥಮ ಬಾರಿಗೆ ರಾಜ್ಯಮಟ್ಟದ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. ವಿಶ್ವವಿದ್ಯಾನಿಲಯ ಮಟ್ಟದ 8 ವಿಭಾಗಗಳ ಒಟ್ಟು 16 ತಂಡಗಳು ಈ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದವು. ಈ ಮೊದಲು ಉಜಿರೆಯ ಎಸ್ಡಿಎಂಐಟಿ ಯಲ್ಲಿ ನಡೆದ ಮಂಗಳೂರು ವಿಭಾಗ ಮಟ್ಟದ ಸ್ಪರ್ಧೆಯಲ್ಲಿಯೂ ಕಾಲೇಜಿನ ತಂಡವು ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಿತ್ತು. ಇದರಲ್ಲಿ ಮಂಗಳೂರು ವಿಭಾಗದ ಒಟ್ಟು 18 ತಂಡಗಳು ಭಾಗವಹಿಸಿದ್ದವು. ಕಾಲೇಜಿನ ಪ್ರಥಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿ ಅಖಿಲೇಶ್ ವಿಭಾಗ ಹಾಗೂ ರಾಜ್ಯಮಟ್ಟದ ಸ್ಪರ್ಧೆಗಳೆರಡರಲ್ಲೂ ಉತ್ತಮ ಆಲ್ರೌಂಡರ್ ಪ್ರಶಸ್ತಿಯನ್ನು ಮುಡಿಗೇರಿಕೊಂಡಿದ್ದಾರೆ. ಚಿಂತನ್, ಅಜಯ್ನಾತ್ ಶೆಟ್ಟಿ, ಭುವನ್, ಚೇತಕ್,…
ವಿರಾಜಪೇಟೆ ಮಾ.2 NEWS DESK : ವಿರಾಜಪೇಟೆ ಚಿಕ್ಕಪೇಟೆಯಲ್ಲಿರುವ ಜಯಪ್ರಕಾಶ್ ನಾರಾಯಣ ಸ್ಮಾರಕ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ 30 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಬಿ.ಎಸ್.ಲಾಲ್ ಕುಮಾರ್ ಅವರಿಗೆ ಶಾಲಾ ಆಡಳಿತ ಮಂಡಳಿ ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು. ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಪ್ರಮುಖರು ಹಾಗೂ ಶಿಕ್ಷಕರು ಫಲ, ತಂಬೂಲ ನೀಡಿ ಸನ್ಮಾನಿಸಿ ಬೀಳ್ಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಜಯಪ್ರಕಾಶ್ ನಾರಾಯಣ ಪ್ರೌಢಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ತ್ರಿಶು ಗಣಪತಿ ಲಾಲ್ ಕುಮಾರ್ ಅವರು ಮುಖ್ಯ ಶಿಕ್ಷಕರಾಗಿ ವಿದ್ಯಾರ್ಥಿಗಳನ್ನು ಉತ್ತಮ ಪ್ರೀತಿ, ವಾತ್ಸಲ್ಯದಿಂದ ಕಾಣುತ್ತ ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಭಾಗವಹಿಸುವಂತೆ ಮಕ್ಕಳನ್ನು ಪ್ರೋತ್ಸಾಹಿಸುತ್ತಿದ್ದರು ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಪ್ರಕಾಶ್ ಮಾತನಾಡಿ, ಲಾಲ್ ಕುಮಾರ್ ಅವರ ಸೇವೆ ವಿದ್ಯಾರ್ಥಿಗಳಿಗೆ ಅವಶ್ಯವಾಗಿದ್ದು, ಈ ಅನುದಾನಿತ ಶಾಲೆಗೆ 2021-22 ರಲ್ಲಿ ಇವರ ಅವಧಿಯಲ್ಲಿ ಸ್ವಚ್ಚ ವಿದ್ಯಾಲಯ ಎಂಬ ಪುರಸ್ಕಾರ ದೊರಕಿದ್ದು ಶ್ಲಾಘಿಸಿಯ ಎಂದರು. ಸನ್ಮಾನ ಸ್ವಿಕರಿಸಿದ ಲಾಲ್ಕುಮಾರ್ ಮಾತನಾಡಿ ಶಿಕ್ಷಕ ವೃತ್ತಿಯಲ್ಲಿ ಸಾಗಿಬಂದ…
ವಿರಾಜಪೇಟೆ ಮಾ.2 NEWS DESK : ವನದೇವರುಗಳ ಆರಾಧನೆ ಮತ್ತು ಕುಲ ಕುಟುಂಬಗಳ ಆರಾಧನಾ ಪದ್ಧತಿಗಳು ನೂರಾರು ವರ್ಷಗಳಿಂದ ನಡೆದುಕೊಂಡು ಬರುತ್ತಿದೆ. ನಿಟ್ಟಿನಲ್ಲಿ ಮೂರೀರ ಕುಟುಂಬದ ವಾರ್ಷಿಕ ತೆರೆ ಮಹೋತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು. ವಿರಾಜಪೇಟೆ ತಾಲ್ಲೂಕಿನ ಬಿಟ್ಟಂಗಾಲ ಗ್ರಾ.ಪಂ ವ್ಯಾಪ್ತಿಯ ಬಾಳುಗೋಡು ಗ್ರಾಮದಲ್ಲಿ ನೆಲೆಸಿರುವ ಮೂರೀರ ಕುಟುಂಬದ ಅಧೀನದಲ್ಲಿರುವ ಮಂದ್ರಮೂರ್ತಿ, ವಿಷ್ಣು ಮೂರ್ತಿ ಮತ್ತು ಕಾಳೇಘಾಟು ದೇವಿಯ ದೇಗುಲದಲ್ಲಿ ಎರಡು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ನಡೆಯಿತು. ದೇಗುಲ ಆವರಣದಲ್ಲಿ ನಡೆಯುವ ಉತ್ಸವವನ್ನು ಕೇರಳ ರಾಜ್ಯದ ಕಾಳೇಘಾಟ್ ಸ್ಥಳದ ಪ್ರಸಿದ್ಧ ತಂತ್ರಿಗಳಾದ ಸಂದೀಪ್ ತಂತ್ರಿಗಳಿಂದ ಗಣಪತಿ ಹೋಮ ಮತ್ತು ದೈವಿಕ ವಿಧಾನಗಳನ್ನು ನಡೆಸಲಾಯಿತು. ಬಳಿಕ ದೇವಿ ಮತ್ತು ಶಾಸ್ತವು, ಮಂದ್ ಅಜ್ಜಪ್ಪ ದೇವರಿಗೆ ವಿಶೇಷ ಅಲಂಕಾರ ಪೂಜೆ, ಮಹಾಪೂಜೆ ಸಲ್ಲಿಸಲಾಯಿತು. ಪ್ರಥಮ ದಿನದಂದು ಕಾರಣ ತೆರೆ, ಮಾ.ತೆರೆ, ನುಚ್ಚುಟ್ಟೆ ತೆರೆಗಳು ಮುಂಜಾನೆ ಯ ವರೆಗೂ ನಡೆದು ಮರು ದಿನ ಚೌಂಡಿ ತೆರೆ,ಕುಳಿಯ ತೆರೆ, ತೌಡು ತೆರೆ, ಶಾಸ್ತಾವು ತೆರೆ…
ಮಡಿಕೇರಿ ಮಾ.2 NEWS DESK : ಸಕಾಲದಲ್ಲಿ ವೇತನ ಪಾವತಿಸುವಂತೆ ಒತ್ತಾಯಿಸಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಅತಿಥಿ ಉಪನ್ಯಾಸಕರ ಪ್ರತಿಭಟನೆ ಮೂರನೇ ದಿನವೂ ಮುಂದುವರೆದಿದೆ. ಕಾಲೇಜಿನ ಅತಿಥಿ ಉಪನ್ಯಾಸಕರ ಬೇಡಿಕೆಗೆ ಯಾವುದೇ ಸಕಾರಾತ್ಮಕ ಸ್ಪಂದನೆ ದೊರಕದ ಹಿನ್ನೆಲೆಯಲ್ಲಿ ಮೂರನೇ ದಿನಕ್ಕೆ ಮುಂದುವರಿದ್ದು, ವೇತನ ಪಾವತಿಸುವವರೆಗೆ ತರಗತಿಗೆ ತೆರಳುವುದಿಲ್ಲ ಎಂದು ಹೇಳಿದರು.
ಮೈಸೂರು, ಮಾ.7 NEWS DESK : ಸ್ಫೋಟಕ ಇಟ್ಟು ಹೋಗಿದ್ದ ಆರೋಪಿಯ ಪತ್ತೆ ಹಚ್ಚುವ ಕಾರ್ಯ ಚುರುಕಾಗಿ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ನಿವಾಸದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಸ್ಫೋಟವಾಗಿರುವುದು ನಿಜ. ಆರೋಪಿ ಮಾಸ್ಕ್ ಮತ್ತು ಟೋಪಿ ಧರಿಸಿ ಬಸ್ಸಿನಲ್ಲಿ ಬಂದು ತಿಂಡಿ ತಿಂದು ನಂತರ ಸ್ಫೋಟಕವುಳ್ಳ ಬ್ಯಾಗ್ ಇಟ್ಟು ತೆರಳಿದ್ದಾನೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಪಮುಖ್ಯಮಂತ್ರಿ , ಗೃಹ ಸಚಿವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇಂದು ನಾನೂ ಕೂಡ ಸ್ಥಳಕ್ಕೆ ತೆರಳಲಿದ್ದೇನೆ ಎಂದರು. ಮಂಗಳೂರು ಕುಕ್ಕರ್ ಬಾಂಬ್ ಹಾಗೂ ಈ ಸ್ಫೋಟಕ್ಕೂ ಸಾಮ್ಯತೆ ಇರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ತನಿಖೆ ನಡೆಯುತ್ತಿದೆ ಎಂದರು. ಅಲ್ಪಸಂಖ್ಯಾತರ ತುಷ್ಟೀಕರಣದಿಂದಾಗಿ ಈ ರೀತಿಯ ಘಟನೆಗಳು ನಡೆಯುತ್ತಿವೆ ಎಂದು ಬಿಜೆಪಿ ನಾಯಕರು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ರಾಜಕೀಯವಾದ ಹೇಳಿಕೆ ನೀಡಿದ್ದಾರೆ. ಅವರ ಕಾಲದಲ್ಲಿಯೂ ಬಾಂಬ್ ಸ್ಪೋಟವಾಗಿದೆ. ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟವಾದಾಗ ಏನು ಮಾಡಿದ್ದರು? ಆಗಲೂ ತುಷ್ಟೀಕರಣದಿಂದಾಗಿ ಆಗಿತ್ತೇ…






