ಲೇಖಕ: admin

ಮಡಿಕೇರಿ ಫೆ.9 NEWS DESK : ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ 14 ಗ್ರಾಮ ಪಂಚಾಯತ್‍ಗಳಲ್ಲಿ ‘ಸಮಗ್ರ ನಾಗರಿಕ ಸೇವಾ ಕೇಂದ್ರ’/ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಡಿಕೇರಿಯ ಹೊಸ್ಕೇರಿ, ಹಾಕತ್ತೂರು ಮತ್ತು ಕರಿಕೆ, ಪೊನ್ನಂಪೇಟೆಯ ನಿಟ್ಟೂರು, ಬಲ್ಯಮಂಡೂರು, ಕೆ.ಬಾಡಗ, ಬಿ.ಶೆಟ್ಟಿಗೇರಿ, ಕಿರುಗೂರು ಮತ್ತು ನಾಲ್ಕೇರಿ, ಸೋಮವಾರಪೇಟೆಯ ಬೆಟ್ಟದಳ್ಳಿ ಮತ್ತು ಗರ್ವಾಲೆ, ವಿರಾಜಪೇಟೆಯ ಕಾಕೋಟು ಪರಂಬು, ಬೆಟೋಳಿ ಮತ್ತು ಅಮ್ಮತ್ತಿ. ಆಸಕ್ತ ಪ್ರಾಂಚೈಸಿಗಳು https://kal-mys.gramaone.karnataka.gov.in/ಮೂಲಕ ಅರ್ಜಿ ಸಲ್ಲಿಸಲು ಫೆಬ್ರವರಿ, 15 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ 9148712473, ಇ-ಮೇಲ್ ಐಡಿ care@blsinternational.net ಜಿಲ್ಲಾಧಿಕಾರಿಗಳ ಕಚೇರಿ ಸಮಾಲೋಚಕರು 9611657344/ 9900385301 ನ್ನು ಸಂಪರ್ಕಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ  ತಿಳಿಸಿದ್ದಾರೆ.

Read More

ಮಡಿಕೇರಿ ಫೆ.9 NEWS DESK : ಪ್ರಸಕ್ತ (2023-24)ನೇ ಸಾಲಿನಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಕೃಷಿ ನವೋದ್ಯಮ ಯೋಜನೆಯನ್ನು ಪ್ರಸ್ತುತ ವರ್ಷದಲ್ಲಿ ಅನುಷ್ಠಾನಗೊಳಿಸಲು ಅನುಮೋದನೆ ನೀಡಲಾಗಿರುತ್ತದೆ. ಕೃಷಿ ಕ್ಷೇತ್ರದಲ್ಲಿ ಉದ್ಯಮಶೀಲತೆಯನ್ನು ಹೆಚ್ಚಿಸಲು ಹಾಗೂ ಗ್ರಾಮೀಣ ಭಾಗದ ಯುವಕರಿಗೆ ಉದ್ಯೋಗ ಸೃಜನೆಗಾಗಿ ಕೃಷಿಯಲ್ಲಿನ ನೂತನ ತಾಂತ್ರಿಕತೆಗಳು ನವೀನ ಪರಿಕಲ್ಪನೆಗಳ ವಾಣಿಜ್ಯೀಕರಣವನ್ನು ಉತ್ತೇಜಿಸುವ ಗುರಿಯೊಂದಿಗೆ ಕೃಷಿ ನವೋದ್ಯಮ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿರುತ್ತದೆ. ಯೋಜನೆಯಡಿ ಒದಗಿಸಲಾಗುವ ಸೌಲಭ್ಯಗಳ/ ಘಟಕಗಳ ವಿವರಗಳು: ಹೊಸ ಕೃಷಿ ನವೋದ್ಯಮಗಳಿಗೆ ಆರ್ಥಿಕ ನೆರವು:-ಕೃಷಿ ಕ್ಷೇತ್ರದಲ್ಲಿ ನೂತನ ಪರಿಕಲ್ಪನೆಯೊಂದಿಗೆ ಆರಂಭಿಸುವ ಹೊಸ ಕೃಷಿ ನವೋದ್ಯಮಿಗಳಿಗೆ ಅನುಮೋದಿತ ಯೋಜನಾ ವರದಿಯ ಶೇಕಡ 50 ರಷ್ಟು ಸಹಾಯಧನವನ್ನು (ಕನಿಷ್ಟ ರೂ. 5 ಲಕ್ಷದಿಂದ ಗರಿಷ್ಟ ರೂ. 20 ಲಕ್ಷ ವರೆಗೆ) ಬ್ಯಾಂಕ್ ಸಾಲದ ಮುಖಾಂತರ ನೀಡಲಾಗುವುದು. ಈಗಾಗಲೇ ಸ್ಥಾಪಿಸಲಾದ ನವೋದ್ಯಮಗಳ ವಿಸ್ತರಣೆ ಅಥವಾ ಮೇಲ್ದರ್ಜೆಗೇರಿಸಲು ಆರ್ಥಿಕ ನೆರವು:- ಕೃಷಿ ವಲಯದಲ್ಲಿ ಈಗಾಗಲೇ ಸ್ಥಾಪಿಸಲಾದ ನವೋದ್ಯಮಗಳ ವಿಸ್ತರಣೆಗಾಗಿ ಹಾಗೂ ಉನ್ನತೀಕರಣಕ್ಕಾಗಿ ಯೋಜನಾ ವರದಿಯ ಶೇಕಡಾ 50 ರಷ್ಟು ಸಹಾಯಧನವನ್ನು…

Read More

ಮಡಿಕೇರಿ ಫೆ.9 NEWS DESK : ಆತ್ಮನಿರ್ಭರ ಭಾರತ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣ ಉದ್ದಿಮೆಗಳ ಮಂತ್ರಾಲಯದಿಂದ ಪ್ರಧಾನಮಂತ್ರಿಯವರ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯು (ಪಿಎಂಎಫ್‍ಎಂಇ) 2020-21 ರಿಂದ ಪ್ರಾರಂಭವಾಗಿದೆ. ಈ ಯೋಜನೆಯಡಿ ಅಸಂಘಟಿತ ವಲಯದಲ್ಲಿರುವ ಸೂಕ್ಷ್ಮ, ಸಣ್ಣ ಆಹಾರ ಸಂಸ್ಕರಣ ಉದ್ದಿಮೆಗಳನ್ನು ಪ್ರೋತ್ಸಾಹಿಸಿ ಅವುಗಳ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವುದು ಮತ್ತು ಅವುಗಳನ್ನು ಸಂಘಟಿತ ವಲಯಕ್ಕೆ ತರುವುದು ಹಾಗೂ ರೈತ ಉತ್ಪಾದಕ ಸಂಸ್ಥೆಗಳು, ಸ್ವಸಹಾಯ ಸಂಘಗಳು ಹಾಗೂ ರೈತ ಉತ್ಪಾದಕ ಸಹಕಾರಿ ಸಂಘಗಳಿಗೆ ಅವುಗಳ ಸರಪಳಿಕೊಂಡಿಯೊಂದಿಗೆ ಉತ್ತೇಜನ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. 18 ವರ್ಷ ಮೇಲ್ಪಟ್ಟ ಆಸಕ್ತ ಫಲಾನುಭವಿಗಳು ಈ ಯೋಜನೆಯಡಿ ಅರ್ಜಿ ಸಲ್ಲಿಸಬಹುದು. ಈ ಯೋಜನೆಯಡಿ ಅರ್ಜಿ ಸಲ್ಲಿಸಲು ವಿದ್ಯಾರ್ಹತೆಯ ಮಿತಿ ಇರುವುದಿಲ್ಲ. ಅರ್ಹ ಯೋಜನಾ ವೆಚ್ಚದ ಶೇ.35 ರಷ್ಟು ಮೌಲ್ಯದ ಸಾಲ-ಸಂಪರ್ಕವಿರುವ ಸಹಾಯಧನ ಜೊತೆಗೆ ಹೆಚ್ಚುವರಿ ಶೇ.15 ರಷ್ಟು ರಾಜ್ಯ ಸರ್ಕಾರದಿಂದ ಸಹಾಯಧನ ಒದಗಿಸಲಾಗುವುದು (ಗರಿಷ್ಠ ಮಿತಿ 15 ಲಕ್ಷಗಳು),…

Read More

ವಿರಾಜಪೇಟೆ ಫೆ.9 NEWS DESK : ವಿರಾಜಪೇಟೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕಲ್ತೋಡು ಕ್ಲಸ್ಟರ್‍ನ ಸಮೂಹ ಸಂಪನ್ಮೂಲ ವ್ಯಕ್ತಿ ವಿ.ಟಿ. ವೆಂಕಟೇಶ್ ಅವರಿಗೆ ಸುವರ್ಣ ಸಂಭ್ರಮ ಕನ್ನಡಿಗ ಪ್ರಶಸ್ತಿ ಲಭಿಸಿದೆ. ವಿ.ಟಿ. ವೆಂಕಟೇಶ್ ಅವರು ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಯನ್ನು ಪರಿಗಣಿಸಿ ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ರಾಜ್ಯ ಮಟ್ಟದ ನೃತ್ಯೋತ್ಸವ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಗಣ್ಯರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

Read More

ವಿರಾಜಪೇಟೆ ಫೆ.9 : ವಿರಾಜಪೇಟೆಯ ಸೆಸ್ಕ್ ಉಪವಿಭಾಗದಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡಿರುವ ಕಿರಿಯ ಅಭಿಯಂತರ ರಮೇಶ್ ಅವರಿಗೆ ವಿರಾಜಪೇಟೆ ವಿದ್ಯುತ್ ಗುತ್ತಿಗೆದಾರರ ಸಂಘದ ವತಿಯಿಂದ ಸನ್ಮಾನಿಸಿ ಆತ್ಮೀಯವಾಗಿ ಬೀಳ್ಕೊಡಲಾಯಿತು. ಈ ಸಂದರ್ಭ ವಿದ್ಯುತ್ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಸೇರಿದಂತೆ ಕಾರ್ಯಪಾಲಕ ಅಭಿಯಂತರ ಸುರೇಶ್, ಸಹಾಯಕ ಅಭಿಯಂತರ ಶಿವನಗೌಡ ಪಾಟೀಲ್ ಇದ್ದರು.

Read More

ಮಡಿಕೇರಿ, ಫೆ.9 : ನಗರಸಭೆಯಲ್ಲಿ ನಾಲ್ಕು ವರ್ಷಗಳಿಂದ ದುಡಿಯುತ್ತಿದ್ದು, ಅನಾರೋಗ್ಯದಿಂದ ಕಾಲು ಕಳೆದುಕೊಂಡ ಹೋಬಳೇಶ್ (ಹೋಬ್ಳಿ) ಅವರಿಗೆ ಮಡಿಕೇರಿ ರೋಟರಿ ವುಡ್ಸ್ ವತಿಯಿಂದ ಕೃತಕ ಕಾಲು ಒದಗಿಸಲಾಯಿತು. ಅಧ್ಯಕ್ಷ ವಸಂತ್ ಕುಮಾರ್ ಹಾಗೂ ‘ಶಕ್ತಿ’ ಪ್ರಧಾನ ಸಂಪಾದಕ ಜಿ. ರಾಜೇಂದ್ರ ಕೃತಕ ಕಾಲನ್ನು ಹಸ್ತಾಂತರಿಸಿದರು. ಶ್ರಮಜೀವಿ ಹೋಬಳೇಶ್ ಅವರಿಗೆ ಐದು ತಿಂಗಳ ಹಿಂದೆ ಪಾದದ ಬಳಿ ನೋವು ಆರಂಭಗೊಂಡು, ತೊಡೆಯಿಂದ ಕೆಳಗೆ ಒಂದು ಕಾಲು ಕತ್ತರಿಸಬೇಕಾಗಿ ಬಂದಿತ್ತು. ಈ ಸಂದರ್ಭ ಮಾತನಾಡಿದ ಜಿ.ರಾಜೇಂದ್ರ, ಮಲ್ಲಿಕಾರ್ಜುನ ನಗರದ ಶ್ರೀ ರಾಮ ದೇಗುಲದ ಜಾಗವನ್ನು ಹೋಬಳೇಶ್ ಅವರ ಕುಟುಂಬ ಒದಗಿಸಿದ್ದು, ಕಾಲು ಕಳೆದುಕೊಂಡ ಅವರಿಗೆ ಕೃತಕ ಕಾಲು ನೀಡಲು ಸಾಧ್ಯವೇ ಎಂದು ರೋಟರಿ ಸಂಸ್ಥೆಯನ್ನು ಕೇಳಿದುದಾಗಿ ಹೇಳಿದರು. ರೋಟರಿ ವುಡ್ಸ್ ಸೇವೆ ಒದಗಿಸಲು ಸದಾ ಸಿದ್ಧವಿದ್ದು, ಸದ್ಯದಲ್ಲೇ ಮತ್ತೊಬ್ಬರಿಗೆ ಗಾಲಿ ಕುರ್ಚಿ ನೀಡಲಿರುವುದಾಗಿ ವಸಂತ್‍ಕುಮಾರ್ ಹೇಳಿದರು. ರೋಟರಿ ವುಡ್ಸ್ ಸಲಹೆಗಾರ ಬಿ.ಜೆ. ಅನಂತಶಯನ, ಸದಸ್ಯರುಗಳಾದ ರಾಜೇಶ್ ಚೌಧುರಿ, ಝಹೀರ್ ಅಹ್ಮದ್, ಧನಂಜಯ ಶಾಸ್ತ್ರಿ, ಪ್ರವೀಣ್,…

Read More

ಮಡಿಕೇರಿ ಫೆ.8 NEWS DESK : ಒಣಗಿಸಲು ಇಟ್ಟಿದ್ದ ಕಾಫಿಯನ್ನು ಕಳ್ಳತನ ಮಾಡಿದ ಆರೋಪದಡಿ ಮೂವರನ್ನು ಹಾಗೂ ಖರೀದಿ ಮಾಡಿದ ಆರೋಪದಡಿ ವರ್ತಕರೊಬ್ಬರನ್ನು ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಳ್ಳತನದ ಆರೋಪದಡಿ ಕಗ್ಗೋಡ್ಲು ಗ್ರಾಮದ ನಿವಾಸಿಗಳಾದ ಜಯ.ಎಂ.ಸಿ (45) ಶರತ್ ಹೆಚ್.ಜಿ (31), ಸಾಜು.ಪಿ.ಜೆ (44) ಹಾಗೂ ಕಳ್ಳತನ ಮಾಡಿದ್ದ ಕಾಫಿಯನ್ನು ಯಾವುದೇ ರಶೀದಿ ಇಲ್ಲದೆ ಖರೀದಿ ಮಾಡಿದ ಆರೋಪದಡಿ ಮಡಿಕೇರಿಯ ವರ್ತಕ ಅಬ್ದುಲ್ ಅಜೀಜ್ (49) ವರ್ಷ ಎಂಬುವವರನ್ನು ದಸ್ತಗಿರಿ ಮಾಡಲಾಗಿದೆ. ಕಳ್ಳತನ ಮಾಡಿದ್ದ 150 ಕೆ.ಜಿ ಕಾಫಿ ಚೀಲಗಳನ್ನು ವಶಪಡಿಸಿಕೊಂಡು ಕ್ರಮ ಕೈಗೊಳ್ಳಲಾಗಿದೆ. ತಲೆ ಮರೆಸಿಕೊಂಡಿರುವ ಕಗ್ಗೋಡ್ಲು ಗ್ರಾಮದ ಕಿಶೋರ್ ಕುಮಾರ್ ಕೆ.ಎಂ ಹಾಗೂ ಮನು ರೈ ಎಂಬುವವರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಗ್ಗೋಡ್ಲು ಗ್ರಾಮದ ನಿವಾಸಿ ಚಿದಾನಂದ.ವೈ.ಎ ಎಂಬುವವರು ತೋಟದ ಕಣದಲ್ಲಿ ಒಣಗಿಸಲು ಇಟ್ಟಿದ್ದ ಸುಮಾರು 2500 ಕೆಜಿ ಹಸಿ ಕಾಫಿಯಲ್ಲಿ ಅಂದಾಜು 350…

Read More

ಮಡಿಕೇರಿ ಫೆ.8 NEWS DESK : ಸುಂಟಿಕೊಪ್ಪ ಪಟ್ಟಣ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುಂಟಿಕೊಪ್ಪದ ಗದ್ದೆಹಳ್ಳ ನಿವಾಸಿ ವಿಜಯ.ಜೆ (28) ಹಾಗೂ ಪಿರಿಯಾಪಟ್ಟಣ ತಾಲ್ಲೂಕು ಕೊಪ್ಪ ಗ್ರಾಮದ ನಿವಾಸಿ ಶ್ರೀಧರ (34) ಎಂಬುವವರನ್ನು 1 ಕೆಜಿ 450ಗ್ರಾಂ ಗಾಂಜಾ ಸಹಿತ ವಶಕ್ಕೆ ಪಡೆಯಲಾಗಿದೆ. ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್‌ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ವೃತ್ತದ ಸಿಪಿಐ ರಾಜೇಶ್.ಕೆ, ಸುಂಟಿಕೊಪ್ಪ ಪೊಲೀಸ್ ಠಾಣೆಯ ಪಿಎಸ್‌ಐ ಶ್ರೀಧರ್.ಎಂ.ಸಿ ಹಾಗೂ ಸಿಬ್ಬಂದಿಗಳ ವಿಶೇಷ ತಂಡ ಸುಂಟಿಕೊಪ್ಪದ ಎಮ್ಮೆಗುಂಡಿ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ನಡೆಯಿತು. ಪೊಲೀಸ್ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ. ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳು ಕಂಡು ಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ. ಅಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗ ಪಡಿಸುವುದಿಲ್ಲವೆಂದು…

Read More

ವಿರಾಜಪೇಟೆ ಫೆ.8 NEWS DESK : ವಿರಾಜಪೇಟೆಯ ಸೆಸ್ಕ್ ಉಪವಿಭಾಗದಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡಿರುವ ಸಹಾಯಕ ಅಭಿಯಂತರ ಶಿವನ ಗೌಡ ಪಾಟೀಲ್ ಅವರಿಗೆ ವಿರಾಜಪೇಟೆ ವಿದ್ಯುತ್ ಗುತ್ತಿಗೆದಾರರ ಸಂಘದ ವತಿಯಿಂದ ಸನ್ಮಾನಿಸಿ ಆತ್ಮೀಯವಾಗಿ ಬೀಳ್ಕೊಡಲಾಯಿತು. ಈ ಸಂದರ್ಭ ವಿದ್ಯುತ್ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಸೇರಿದಂತೆ ಕಾರ್ಯಪಾಲಕ ಅಭಿಯಂತರ ಸುರೇಶ್, ಕಿರಿಯ ಅಭಿಯಂತರ ರಮೇಶ್ ಹಾಜರಿದ್ದರು.

Read More

ವಿರಾಜಪೇಟೆ ಫೆ.8 : ವಿರಾಜಪೇಟೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಕೆ.ಸಿ.ಗೀತಾಂಜಲಿ ಅವರಿಗೆ ಸುವರ್ಣ ಸಂಭ್ರಮ ಕನ್ನಡಿಗ ಪ್ರಶಸ್ತಿ ಲಭಿಸಿದೆ. ಕೆ.ಸಿ.ಗೀತಾಂಜಲಿ ಅವರ ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಯನ್ನು ಪರಿಗಣಿಸಿ ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ರಾಜ್ಯ ಮಟ್ಟದ ನೃತ್ಯೋತ್ಸವ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಗಣ್ಯರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

Read More