ವಿರಾಜಪೇಟೆ ಫೆ.8 : ಸ್ಮಾರ್ಟ್ ಬ್ರೈನ್ಸ್ ಅಬಾಕಸ್ ಅಕಾಡೆಮಿ ವತಿಯಿಂದ ಕುಶಾಲನಗರದ ರೈತ ಸಹಕಾರ ಭವನದಲ್ಲಿ ನಡೆದ 9ನೇ ವರ್ಷದ ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ವಿರಾಜಪೇಟೆಯ ರೋಟರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಮೇಲುಗೈ ಸಾಧಿಸಿದ್ದಾರೆ. ವಿದ್ಯಾರ್ಥಿಗಳಾದ ಲಿಶ್ಮಿತಾ, ಯಶಸ್ವಿನಿ, ಮೊಹಮ್ಮದ್ ವೈಜ್, ಚಿರಂತ್, ಯದುನಂದನ್, ವಿಸ್ಮಯ್, ಚರಣ್, ಜಿತನ್, ಅಧ್ನನ್, ಎಬಿನ್, ಲಿಖಿತ, ಶ್ರೇಷ್ಠ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿ ಪತ್ರ ಪಡೆದುಕೊಂಡರು.
ಲೇಖಕ: admin
ಮಡಿಕೇರಿ ಫೆ.8 NEWS DESK : ಸಂವಿಧಾನ ದಿನಾಚರಣೆಯ 75ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಕೊಡಗು ಜಿಲ್ಲೆಯಾದ್ಯಂತ ಫೆ.23 ರವರೆಗೆ ಹಮ್ಮಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತದ ವತಿಯಿಂದ ಕೊಡಗು ಜಿಲ್ಲೆಯ ಸಾರ್ವಜನಿಕರಿಗೆ ಮುಕ್ತ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿದೆ. ಸ್ಪರ್ಧೆಯ ವಿಷಯ `ಭಾರತ ಸಂವಿಧಾನ ರಚನೆಯಲ್ಲಿ ಮಹಿಳೆಯರ ಪಾತ್ರ.’ `ನಮ್ಮ ಸಂವಿಧಾನ ನಮ್ಮ ಹೆಮ್ಮೆ (ಭಾರತ ಸಂವಿಧಾನದಲ್ಲಿ ಕಲ್ಪಿಸಿರುವ ಹಕ್ಕು ಮತ್ತು ಕರ್ತವ್ಯಗಳ ಹಿನ್ನಲೆಯಲ್ಲಿ)’ ಸ್ಪರ್ಧೆಯು ಕೊಡಗು ಜಿಲ್ಲೆಯ ಸಾರ್ವಜನಿಕರಿಗೆ ಮುಕ್ತವಾಗಿ ನಡೆಯಲಿದೆ. ಪ್ರಬಂಧ ಸ್ಪರ್ಧೆಗೆ ನೀಡಿರುವ ವಿಷಯಗಳಲ್ಲಿ ಯಾವುದಾದರು ಒಂದು ವಿಷಯವನ್ನು ಆಯ್ಕೆ ಮಾಡಿ ಸ್ಪುಟವಾದ ಕೈಬರಹಗಳಲ್ಲಿ ಎ4 ಅಳತೆಯ ಕಾಗದಗಳಲ್ಲಿ 1500 ಪದಗಳಿಗೆ ಮೀರದಂತೆ ಬರೆದು ಕಳುಹಿಸುವುದು. ಚಿತ್ರಕಲಾ ಸ್ಪರ್ಧೆಗೆ ಸಂಬಂಧಿಸಿದಂತೆ ನೀಡಿರುವ ವಿಷಯಗಳ ಬಗ್ಗೆ ಎ3 ಅಳತೆಯ ಡ್ರಾಯಿಂಗ್ ಶೀಟ್ನಲ್ಲಿ ಚಿತ್ರ ರಚನೆ ಮಾಡಿ ಸಲ್ಲಿಸುವುದು. ಪ್ರಬಂಧ ಸ್ಪರ್ಧೆಯ ಪ್ರಬಂಧಗಳನ್ನು ಹಾಗೂ ಚಿತ್ರಕಲಾ ಸ್ಪರ್ಧೆಯ ಚಿತ್ರಗಳನ್ನು ಫೆ.25 ರಂದು…
ಮಡಿಕೇರಿ ಫೆ.8 NEWS DESK : ಕುಶಾಲನಗರ ತಾಲೂಕಿನ ಕೊಡಗರಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ 2023-24ನೇ ಸಾಲಿನ ಮಕ್ಕಳ ಗ್ರಾಮಸಭೆಯು ಗ್ರಾ.ಪಂ. ಅಧ್ಯಕ್ಷರಾದ ನಿರತ ಬೆಳ್ಳಿಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮಕ್ಕಳು ತಮಗೆ ಅವಶ್ಯವಿರುವ ಮತ್ತು ತಮಗಿರುವ ಬೇಡಿಕೆಗಳ ಬಗ್ಗೆ ಗಮನ ಸೆಳೆದರು. ಸುಂಟಿಕೊಪ್ಪ ನಾಡು ಅನುದಾನಿತ ಪ್ರೌಢಶಾಲೆಯ ವಿದ್ಯಾರ್ಥಿ ಮಾತನಾಡಿ, ತಮ್ಮ ಶಾಲೆಗೆ ಶೌಚಾಲಯದ ಅಗತ್ಯತೆಯಿದ್ದು ತುರ್ತಾಗಿ ಶೌಚಾಲಯ ನಿರ್ಮಾಣ ಮಾಡಿಕೊಡುವಂತೆ ಕೇಳಿದರು. ಈ ಬಗ್ಗೆ ಗ್ರಾ.ಪಂ. ಪಿಡಿಒ ರವೀಶ್ ಮಾತನಾಡಿ, ಸರ್ಕಾರಿ ಶಾಲೆಗಳಿಗೆ ಮಹಾತ್ಮಗಾಂಧಿ ನರೇಗಾ ಯೋಜನೆಯಡಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಅವಕಾಶವಿದೆ. ಆದರೆ ಅನುದಾನಿತ ಶಾಲೆಗಳಲ್ಲಿ ನಿರ್ಮಾಣಕ್ಕೆ ಅವಕಾಶವಿಲ್ಲ. ಈ ಬಗ್ಗೆ ತುರ್ತಾಗಿ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಇತ್ಯರ್ಥ ಪಡಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು. ಕೊಡಗರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಮಾತನಾಡಿ, ನಮ್ಮ ಶಾಲೆಯಲ್ಲಿ ಸೂಕ್ತ ನೀರಿನ ಟ್ಯಾಂಕ್ ವ್ಯವಸ್ಥೆ ಇರುವುದಿಲ್ಲ ಈ ಬಗ್ಗೆ ಗ್ರಾ.ಪಂ.ವತಿಯಿಂದ ಕ್ರಮವಹಿಸುವಂತೆ ತಿಳಿಸಿದರು. ಗ್ರಾ.ಪಂ.ಅಧ್ಯಕ್ಷರಾದ ನಿರತ ಬೆಳ್ಳಿಯಪ್ಪ…
ಮಡಿಕೇರಿ ಫೆ.8 NEWS DESK : ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯು ಫೆ.15 ರಂದು ಸಂಜೆ 4.30 ಗಂಟೆಗೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ತಿಳಿಸಿದ್ದಾರೆ.
ಮಡಿಕೇರಿ ಫೆ.8 NEWS DESK : ಎಲ್ಲಾ ವಿಧದಲ್ಲೂ ಆಡಳಿತ ವೈಫಲ್ಯವನ್ನು ಕಂಡಿರುವ ಮಡಿಕೇರಿ ನಗರಸಭೆ ಮಹಿಳೆಯರ ಬಗ್ಗೆ ಕನಿಷ್ಠ ಕಾಳಜಿಯನ್ನು ಕೂಡ ಹೊಂದಿಲ್ಲ ಎಂದು ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆರೋಪಿಸಿದ್ದಾರೆ. ಮೂರ್ನಾಡು ರಸ್ತೆಯಲ್ಲಿರುವ ಸಾರ್ವಜನಿಕ ಶೌಚಾಲಯದ ಅವ್ಯವಸ್ಥೆಗಳನ್ನು ಪರಿಶೀಲಿಸಿದ ಅವರು ಮಹಿಳಾ ಪ್ರಯಾಣಿಕರಿಗೆ ಆಗುತ್ತಿರುವ ತೊಂದರೆಯ ಬಗ್ಗೆ ಬೇಸರ ವ್ಯಕ್ತಪಡಿಸಿದರು. ನಗರದ ಜನರಲ್ ತಿಮ್ಮಯ್ಯ ವೃತ್ತ ವ್ಯಾಪ್ತಿಯಿಂದ ಮೈಸೂರು, ಮಂಗಳೂರು, ವಿರಾಜಪೇಟೆ ಮತ್ತು ಭಾಗಮಂಡಲಕ್ಕೆ ಪ್ರತಿದಿನ ಸಾವಿರಾರು ಪ್ರಯಾಣಿಕರು ಸಂಚರಿಸುತ್ತಾರೆ. ಮೈಸೂರು ರಸ್ತೆ, ಮೂರ್ನಾಡು ರಸ್ತೆ ಮತ್ತು ಮಂಗಳೂರು ರಸ್ತೆಯಲ್ಲಿರುವ ಬಸ್ ತಂಗುದಾಣದಲ್ಲಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಬಸ್ ಗಾಗಿ ಕಾದು ನಿಂತಿರುತ್ತಾರೆ. ಆದರೆ ಈ ಪ್ರಯಾಣಿಕರಿಗಾಗಿ ನಗರಸಭೆ ಕನಿಷ್ಠ ಶೌಚಾಲಯದ ವ್ಯವಸ್ಥೆಯನ್ನು ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಶೌಚಾಲಯದ ಕೊರತೆಯಿಂದ ಮಹಿಳೆಯರು ಹೆಚ್ಚು ತೊಂದರೆ ಮತ್ತು ಮುಜುಗರ ಅನುಭವಿಸುತ್ತಿದ್ದಾರೆ. ತಿಮ್ಮಯ್ಯ ವೃತ್ತದ ರಸ್ತೆಗಳಲ್ಲಿ ದಿನದಿಂದ ದಿನಕ್ಕೆ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆ.…
ಸೋಮವಾರಪೇಟೆ ಫೆ.8 NEWS DESK : ಶಾಂತಳ್ಳಿ ಪ್ರಥಮಿಕ ಆರೋಗ್ಯ ಕೇಂದ್ರದಲ್ಲಿ 13 ವರ್ಷಗಳಿಂದ “ಡಿ ಗ್ರೂಪ್ ನೌಕರರಾಗಿ” ಕಾರ್ಯನಿರ್ವಹಿಸುತ್ತಿರುವ ಚಂದ್ರಮ್ಮ ಅವರ ಉತ್ತಮ ಸೇವೆಯನ್ನು ಗುರುತಿಸಿ ಜೆಸಿಐ ಭಾರತದ ಕಾರ್ಯಕ್ರಮದಡಿಯಲ್ಲಿ ಜೆ ಸಿ ಐ ಸೋಮವಾರಪೇಟೆ ಪುಷ್ಪಗಿರಿ ಘಟಕದ ವತಿಯಿಂದ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಸೋಮವಾರಪೇಟೆ ತಜ್ಞ ವೈದ್ಯರಾದ ಡಾ. ಕಿರಣ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ ಶಾಂತಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಂದ್ರಮ್ಮ ಅವರಿಗೆ ಸನ್ಮಾನ ಮಾಡಿರುವುದು ತುಂಬಾ ಸಂತೋಷವಾಗಿದೆ ಎಂದರು. ಗ್ರಾಮೀಣ ಮಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದ ಡಿ ಗ್ರೂಪ್ ನೌಕರರನ್ನು ಗುರುತಿಸಿ ಸನ್ಮಾನ ಮಾಡುತ್ತಿರುವ ಜೆಸಿ ಸಂಸ್ಥೆಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಹೀಗೆ ಗುರುತಿಸಿ ಸನ್ಮಾನ ಮಾಡುವುದರಿಂದ ಅವರಿಗೆ ಹೆಚ್ಚು ಕೆಲಸ ಮಾಡುವ ಹುಮ್ಮಸ್ಸು ಬರುತ್ತದೆ ಹಾಗೂ ಇತರೆ ಸಿಬ್ಬಂದಿ ವರ್ಗದವರಿಗೂ ಮಾದರಿಯಾಗಿರುತ್ತಾರೆ. ಎಲ್ಲರೂ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾರೆ. ಆದರೂ ಕೇವಲ ನಕರಾತ್ಮಕ ವಿಷಯಗಳಷ್ಟೇ ಜನರಿಗೆ ಕಾಣುತ್ತದೆ. ಪ್ರಾಮಾಣಿಕವಾಗಿ ಕೆಲಸ…
ಚೆಯ್ಯಂಡಾಣೆ ಫೆ.8 NEWS DESK : ವಿರಾಜಪೇಟೆಯ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯದಲ್ಲಿ ಲೈಂಗಿಕ ದೌರ್ಜನ್ಯ, ಪೋಕ್ಸೋ ಕಾಯಿದೆ, ಮಹಿಳಾ ಶೋಷಣೆ, ಮಾದಕ ದ್ರವ್ಯದ ಕುರಿತು ಅರಿವು ಕಾರ್ಯಕ್ರಮ ನಡೆಯಿತು. ವಿರಾಜಪೇಟೆ ನಗರ ಪೋಲೀಸ್ ಠಾಣೆಯ ನಿರೀಕ್ಷಕ ಗಣಪತಿ ಹಾಗೂ ಮಹಿಳಾ ಪೊಲೀಸ್ ನಿರೀಕ್ಷರಾದ ಗೀತಾ ಮಾತನಾಡಿ, 18 ವರ್ಷದೊಳಗಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳು, ಕಿರುಕುಳ, ಅತ್ಯಾಚಾರಗಳಂತಹ ದುರ್ಘಟನೆಗಳು ನಡೆಯುತ್ತಿವೆ. ಇವುಗಳನ್ನು ತಡೆಗಟ್ಟಲು, ಮಕ್ಕಳಿಗೆ ರಕ್ಷಣೆ, ಭದ್ರತೆ ಹಾಗೂ ನ್ಯಾಯ ಒದಗಿಸುವುದರ ಜತೆಗೆ ಅವರ ಆಸಕ್ತಿ ಮತ್ತು ಹಿತ ಕಾಪಾಡುವ ಉದ್ದೇಶದಿಂದ ‘ಪೋಕ್ಸೋ ಕಾಯಿದೆ-2012’ಯನ್ನು ಭಾರತ ಸರ್ಕಾರ ಜಾರಿಗೆ ತಂದಿದೆ ಎಂದರು. ಸೈಬರ್ ಅಪರಾಧಗಳ ಬಗ್ಗೆ, ಬಾಲ್ಯ ವಿವಾಹ ನಿಷೇದ ಕಾಯ್ದೆಯ ಬಗ್ಗೆ ಮತ್ತು 18 ವರ್ಷದೊಳಗಿನ ಮಕ್ಕಳು ಯಾವುದೇ ವಾಹನಗಳನ್ನು ಚಾಲನೆ ಮಾಡಬಾರದೆಂದು, ಅಂತಹವರು ವಾಹನಗಳನ್ನು ಚಾಲನೆ ಮಾಡಿದ್ದಲ್ಲಿ ಕಾನೂನಿನಲ್ಲಿರುವ ಕ್ರಮಗಳ ಬಗ್ಗೆ ಅರಿವು ಮೂಡಿಸಿದರು. ಈ ಸಂದರ್ಭ ಬಾಲಕಿಯರ ನಿಲಯದ ಕರಾಟೆ…
ಬೆಂಗಳೂರು ಫೆ.8 NEWS DESK : ವಿಧಾನಸೌಧದಲ್ಲಿ ನಡೆದ 2ನೇ ಹಂತದ ‘ಜನಸ್ಪಂದನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸ್ಥಳದಲ್ಲೇ ಮೂವರ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಒಟ್ಟು 10 ಲಕ್ಷ ರೂ.ಪರಿಹಾರ ಘೋಷಿಸಿದರು. 1. ರಾಮನಗರ ಜಿಲ್ಲೆಯ ವಿಜಯಕುಮಾರ್ ಬಿನ್ ನರಸಿಂಹಮೂರ್ತಿ ಎಂಬುವವರಿಗೆ ಕಿಡ್ನಿ ಕಸಿ ಚಿಕಿತ್ಸೆಗಾಗಿ 4 ಲಕ್ಷ ರೂ.ಗಳ ಧನಸಹಾಯವನ್ನು ಮುಖ್ಯಮಂತ್ರಿಗಳು ಮಂಜೂರು ಮಾಡಿದರು. 2. ವಿಜಯಪುರ ಜಿಲ್ಲೆ ಸಿಂದಗಿ ತಾಲ್ಲೂಕಿನ ಬಸನಗೌಡ ಬಿರಾದಾರ್ ಬೋನ್ ಮ್ಯಾರೋ ಕಸಿಗಾಗಿ 4 ಲಕ್ಷ ರೂ.ಗಳ ಧನಸಹಾಯವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮಂಜೂರು ಮಾಡಿದರು. 3. ತುಮಕೂರು ಜಿಲ್ಲೆಯ 8 ವರ್ಷದ ಶಾಂಭವಿ ಎಂಬ ಮಗುವಿಗೆ ಶ್ರವಣ ಸಾಧನಕ್ಕಾಗಿ 50 ಸಾವಿರ ರೂ.ಗಳನ್ನು ಮಂಜೂರು ಮಾಡಿದರು.
ಪುತ್ತೂರು ಫೆ.8 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪುರುಷರ ಹಾಕಿ ತಂಡವು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಮಂಗಳೂರು ವಿಭಾಗದ ಅಂತರ್ ಕಾಲೇಜು ಪಂದ್ಯಾಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ನಿಟ್ಟೆಯ NMAMIT ಯಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಈ ವಿಜಯದೊಂದಿಗೆ ತಂಡವು ಫೆಬ್ರವರಿ 23 ಮತ್ತು 24 ರಂದು CIT ಪೊನ್ನಂಪೇಟೆಯಲ್ಲಿ ನಡೆಯುವ ರಾಜ್ಯಮಟ್ಟದ ಅಂತರ್ ಕಾಲೇಜು ಸ್ಪರ್ಧೆಯಲ್ಲಿ ಭಾಗವಹಿಸುವುದಕ್ಕೆ ಅರ್ಹತೆಯನ್ನು ಗಳಿಸಿಕೊಂಡಿದೆ. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೆಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಈ ತಂಡಕ್ಕೆ ತರಬೇತಿ ಹಾಗೂ ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ಪ್ರಸನ್ನ.ಕೆ ತಿಳಿಸಿದ್ದಾರೆ.
ಬೆಂಗಳೂರು ಫೆ.8 NEWS DESK : ಬೆಂಗಳೂರಿನ ಮಹಾಬೋಧಿ ಲುಂಬಿನಿ ಬುದ್ಧ ವಿಹಾರ ಸಂಸ್ಥೆಯವರು 2024-25ನೇ ಆಯವ್ಯಯದಲ್ಲಿ ಬೌದ್ಧ ಸಮುದಾಯದ ಅಭಿವೃದ್ಧಿಗಾಗಿ 100 ಕೋಟಿ ರೂ.ಗಳ ಅನುದಾನವನ್ನು ನೀಡಿ, ಬೌದ್ಧ ಜನಾಂಗಕ್ಕೆ ಪ್ರತ್ಯೇಕ ನಿಗಮ ಮಂಡಳಿಯನ್ನು ರಚಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು. ಮುಖ್ಯಮಂತ್ರಿಗಳ ಜನಸ್ಪಂದನಾ ಕಾರ್ಯಕ್ರಮದಲ್ಲಿ ಮನವಿಯನ್ನು ಸ್ವೀಕರಿಸಿದ ಮುಖ್ಯಮಂತ್ರಿಗಳು ಪರಿಶೀಲಿಸುವುದಾಗಿ ಭರವಸೆ ನೀಡಿದರು. ಬೆಂಗಳೂರಿನ ಮಹಾಭೋದಿ ಸಂಶೋಧನಾ ಕೇಂದ್ರ ಬೌದ್ಧ ಜನಾಂಗದ ಆಧ್ಯಾತ್ಮಿಕ ಗ್ರಂಥಾಲಯದ ನವೀಕರಣಕ್ಕಾಗಿ 20 ಲಕ್ಷ ರೂ.ಗಳ ಅನುದಾನ ಕೋರಿ ಸಲ್ಲಿಸಿದ ಮನವಿಯನ್ನು ಸ್ವೀಕರಿಸಿದ ಮುಖ್ಯಮಂತ್ರಿಗಳು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.






