ಮಡಿಕೇರಿ ಮಾ.1 NEWS DESK : ಕರ್ನಾಟಕದಲ್ಲಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ ಎಲ್ಲಾ ರಂಗದಲ್ಲೂ ವಿಫಲವಾಗಿದ್ದು, ರೈತರು ಹಾಗೂ ಪರಿಶಿಷ್ಟರನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಭಾರತೀಯ ಜನತಾ ಪಾರ್ಟಿಯ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಬರಗಾಲ ಆವರಿಸಿದ್ದರೂ ಸರ್ಕಾರ ಬರಪರಿಹಾರ ಕಾರ್ಯವನ್ನು ಕೈಗೊಂಡಿಲ್ಲ. ಪರಿಶಿಷ್ಟ ಸಮುದಾಯದ ಬಗ್ಗೆ ಕೇವಲ ಮಾತಿನಲ್ಲಿ ಮಾತ್ರ ಕಾಳಜಿಯನ್ನು ತೋರಿ, ಎಲ್ಲಾ ಹಂತದಲ್ಲೂ ವಂಚಿಸುತ್ತಾ ಬಂದಿದೆ. ಪರಿಶಿಷ್ಟರಿಗಾಗಿ ಮೀಸಲಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಲಾಗಿದೆ ಎಂದು ಆರೋಪಿಸಿದರು. ಸಮಾಜ ಕಲ್ಯಾಣ ಸಚಿವರು ಕಾಂಗ್ರೆಸ್ ಪಕ್ಷದ ಹಿತವನ್ನು ಕಾಪಾಡಿಕೊಳ್ಳಲು ಮಾತ್ರ ದಲಿತ ಸಮುದಾಯವನ್ನು ಬಳಸಿಕೊಳ್ಳುತ್ತಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿ ಇಲಾಖೆಗಳ ಅನುದಾನವನ್ನು ವಿದ್ಯಾರ್ಥಿಗಳಿಗೆ ಹಾಗೂ ಅರ್ಹ ಫಲಾನುಭವಿಗಳಿಗೆ ಬಳಸದೆ ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸುವ ಮೂಲಕ ಪರಿಶಿಷ್ಟರನ್ನು ಬಲಿಪಶು ಮಾಡಲಾಗುತ್ತಿದೆ ಎಂದು ಟೀಕಿಸಿದರು. ನೂರಾರು ವರ್ಷಗಳಿಂದ ಕೊಡಗಿನ ದೇವಲಗಳು, ಐನ್ ಮನೆಗಳು ಹಾಗೂ ಮಠಗಳಲ್ಲಿ ಸಾಂಪ್ರದಾಯಿಕವಾಗಿ ವನ್ಯಜೀವಿಗಳ ಉತ್ಪನ್ನಗಳನ್ನು…
ಲೇಖಕ: admin
ಮಡಿಕೇರಿ ಮಾ.1 NEWS DESK : ಮಡಿಕೇರಿಯ ಸುಬ್ರಹ್ಮಣ್ಯ ನಗರ ಕೊಡಗು ಜಿಲ್ಲಾ ಸಾಮಾಜಿಕ ಸಾಂಸ್ಕೃತಿಕ ಮತ್ತು ಧರ್ಮದಾನಿಯ ಸಂಸ್ಥೆ ವತಿಯಿಂದ ಕೊಟ್ಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ನೋಟು ಪುಸ್ತಕ ಮತ್ತು ಶೈಕ್ಷಣಿಕ ಸಾಮಾಗ್ರಿಗಳನ್ನುಉಚಿತವಾಗಿ ನೀಡಲಾಯಿತು. ಈ ಸಂದರ್ಭ ಸಂಸ್ಥೆಯ ಅಧ್ಯಕ್ಷ ಅರೆಯಡ ರಮೇಶ್, ಉಪಾಧ್ಯಕ್ಷ ಕೇಕಡ ಕಿರಣ್ ಮುತ್ತಣ್ಣ, ಖಜಾಂಜಿ ಮುಂಡಂಡ ಸುಬ್ರಮಣಿ, ನಿರ್ದೇಶಕರಾದ ಬೊಪ್ಪಂಡ ಸರಳ ಕರುಂಬಯ್ಯ, ನಾಟೋಳಂಡ ಕಾವೇರಪ್ಪ ಹಾಗೂ ಪಾಡೆಯಂಡ ವಸಂತಿ, ಶಿಕ್ಷಕರಾದ ಬಿ.ಡಿ.ವನಮಾಲ, ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಎಂ.ಪಿ.ಮೀನಾಕ್ಷ್ಮಿ ಸ್ವಾಗತಿಸಿದರು. ಶಿಕ್ಷಕಿ ಬಿ.ಡಿ.ವನಮಾಲ ವಂದಿಸಿದರು.
ಕಡಂಗ ಮಾ.1 NEWS DESK : ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡಲು ಎಲ್ಲರೂ ಪಣ ತೊಡಬೇಕು ಎಂದು ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ನರಿಯಂದಡ ಗ್ರಾ.ಪಂ ವ್ಯಾಪ್ತಿಯ ಪೊದವಾಡ ಗ್ರಾಮದಲ್ಲಿ 8ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸ್ವಚ್ಛ ಸಂಕಿರ್ಣ ಘಟಕ ಸ್ಥಾಪನೆಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಘನತ್ಯಾಜ್ಯ ನಿವಾರಣೆ ಎಂಬುವುದು ಪಂಚಾಯಿತಿಗಳ ಮುಂದೆ ಇರುವ ಬಹಳ ದೊಡ್ಡ ಜವಾಬ್ದಾರಿಯಾಗಿದೆ. ಜಿಲ್ಲೆಗೆ ಅಪಾಯಕಾರಿ ಆದಂತಹ ಪರಿಸ್ಥಿತಿ ಉದ್ಭವಕ್ಕೆ ಘನತ್ಯಾಜ್ಯ ನಿವಾರಣೆಯಲ್ಲಿ ಆಡಳಿತ ವೈಫಲ್ಯವೇ ಮುಖ್ಯ ಕಾರಣ. ಅದನ್ನು ನಿವಾರಿಸಲು ರಸ್ತೆ ಬದಿಗಳಲ್ಲಿರುವ ತ್ಯಾಜ್ಯಗಳನ್ನು ಸ್ವಚ್ಛಗೊಳಿಸಿ ಉತ್ತಮ ಪರಿಸರ ನಿರ್ಮಾಣಮಾಡಿ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಬೇಕಾಗಿದೆ ಎಂದರು. ಇದೇ ಸಂದರ್ಭ ಕಾಮಗಾರಿಯನ್ನು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು. ಪೂಜಾ ಕೈಂಕರ್ಯಗಳನ್ನು ಅರ್ಚಕರಾದ ಕೀರ್ತಿಸ್ ನೆರವೇರಿಸಿದರು. ಈ ಸಂದರ್ಭ ಕಾಂಗ್ರೆಸ್ ಜಿಲ್ಲಾಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ನರಿಯಂದಡ ಗ್ರಾ.ಪಂ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ, ಉಪಾಧ್ಯಕ್ಷ…
ಮಡಿಕೇರಿ ಮಾ.1 NEWS DESK : ಸುಂಟಿಕೊಪ್ಪದ ಎಸ್ಎಂಎಸ್ ಶಿಕ್ಷಣ ಸಂಸ್ಥೆಯಲ್ಲಿ ಶರಫಿ ಪದವಿ ಪಡೆದು ಉನ್ನತ ವಿದ್ಯಾಭ್ಯಾಸಕ್ಕೆ ತೆರಳುತ್ತಿರುವ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಸಯ್ಯದ್ ಮುಹಮ್ಮದ್ ಅಲಿ ಶಿಹಾಬ್ ತಂಗಳ್ ಶಿಕ್ಷಣ ಸಂಸ್ಥೆಯಲ್ಲಿ 6 ವರ್ಷಗಳ ಕಾಲ ಧಾರ್ಮಿಕ ಹಾಗೂ ಲೌಕಿಕ ಶಿಕ್ಷಣವನ್ನು ಪೂರ್ಣಗೊಳಿಸಿ ಶರಫಿ ಪದವಿಯನ್ನು ಪಡೆದು ಉನ್ನತ ಶಿಕ್ಷಣಕ್ಕಾಗಿ ದಕ್ಷಿಣ ಏಷ್ಯದ ಪ್ರಖ್ಯಾತ ಶಿಕ್ಷಣ ಸಂಸ್ಥೆಯಾದ ಜಾಮಿಯಾ ನುರಿಯ ಅರಬಿಕ್ ಕಾಲೇಜ್ ಗೆ ತೆರಳುತ್ತಿರುವ ವಿದ್ಯಾರ್ಥಿಗಳನ್ನು ಎಸ್ಎಂಎಸ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಪೋಷಕರು ಸಂಭ್ರಮದಿಂದ ಅದ್ದೂರಿಯಾಗಿ ಬೀಳ್ಕೊಟ್ಟರು. ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಸಂಸ್ಥೆಯ ಕಾರ್ಯದರ್ಶಿ ಸಿ.ಎಂ.ಅಬ್ದುಲ್ ಹಮೀದ್ ಮೌಲವಿ ಕೊಡಗು ಜಿಲ್ಲೆಯ ಮುಸ್ಲಿಂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮತ್ತು ಸುಧಾರಣೆಯನ್ನು ಗುರಿಯಾಗಿಸಿ 2016ರಲ್ಲಿ ಈ ಶಿಕ್ಷಣ ಸಂಸ್ಥೆಯನ್ನು ಆರಂಭಿಸಲಾಯಿತು. ಆರ್ಥಿಕ ಸಮಸ್ಯೆಯಿಂದ ಶಿಕ್ಷಣದಿಂದ ವಂಚಿತರಾಗುತ್ತಿರುವ ಬಡ ಮಕ್ಕಳಿಗೆ ಉತ್ತಮ ಹಾಗೂ ಉನ್ನತ ಶಿಕ್ಷಣವನ್ನು ಸಂಪೂರ್ಣವಾಗಿ ಉಚಿತವಾಗಿ ನೀಡುವ ಮೂಲಕ ಸಂಸ್ಥೆ ಶ್ರೇಷ್ಠವಾದ ಕೊಡುಗೆಯನ್ನು…
ಮಡಿಕೇರಿ ಮಾ.1 NEWS DESK : ಸಕಾಲದಲ್ಲಿ ವೇತನ ಪಾವತಿಸುವಂತೆ ಒತ್ತಾಯಿಸಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರು. ತರಗತಿ ಬಹಿಷ್ಕರಿಸಿ ಕಾಲೇಜ್ ನ ಎದುರು ಮೌನ ಪ್ರತಿಭಟನೆ ನಡೆಸಿದ ಉಪನ್ಯಾಸಕರು, ವೇತನ ಪಾವತಿಸುವವರೆಗೆ ತರಗತಿಗೆ ತೆರಳುವುದಿಲ್ಲ ಎಂದು ಪಟ್ಟು ಹಿಡಿದರು. ಅತಿಥಿ ಉಪನ್ಯಾಸಕ ಡಾ.ಸೋಮಣ್ಣ ಮಾತನಾಡಿ, ಮಂಗಳೂರು ವಿಶ್ವವಿದ್ಯಾನಿಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಯಪ್ಪ ಕಾಲೇಜ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ 43 ಉಪನ್ಯಾಸಕರಿಗೆ ಕಳೆದ 5 ತಿಂಗಳಿನಿಂದ ವೇತನ ಪಾವತಿಯಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಕೋವಿಡ್ ಸಂದರ್ಭದಲ್ಲಿ ಮೂರು ತಿಂಗಳ ವೇತನ ಖಡಿತಗೊಳಿಸಲಾಗಿದೆ. ಆ ವೇತನ ಸೇರಿ ಒಟ್ಟು ಎಂಟು ತಿಂಗಳ ವೇತನವನ್ನು ತಕ್ಷಣ ನೀಡಬೇಕೆಂದು ಆಗ್ರಹಿಸಿದ ಅವರು, ಅಲ್ಲಿಯವರೆಗೆ ತರಗತಿ ಬಹಿಷ್ಕರಿಸಿ ಪ್ರತಿಭಟನೆ ಮುಂದುವರೆಸುವುದಾಗಿ ಎಚ್ಚರಿಕೆ ನೀಡಿದರು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ನಡೆಸಿ ಮೌಲ್ಯಮಾಪನ ಕೂಡ ಮಾಡಲಾಗಿದೆ. ಪರೀಕ್ಷಾ ಮೇಲ್ವಿಚರಣಾ ಕಾರ್ಯವನ್ನು ಸುಸೂತ್ರವಾಗಿ ನಡೆಸಲಾಗಿದೆ. ಪ್ರತಿ ತಿಂಗಳು ಸರಿಯಾದ ಸಮಯದಲ್ಲಿ ವೇತನ ಪಾವತಿ ಮಾಡುವಂತೆ ಮಂಗಳೂರು…
ಮಡಿಕೇರಿ ಮಾ.1 NEWS DESK : ಭಾರತೀಯ ಜನತಾ ಪಾರ್ಟಿಯ ವಿರಾಜಪೇಟೆ ಮಂಡಲದ ವಕ್ತಾರರನ್ನಾಗಿ ಕಿರುಗೂರಿನ ಚೆಪ್ಪುಡಿರ ರಾಕೇಶ್ ದೇವಯ್ಯ ಅವರನ್ನು ಆಯ್ಕೆ ಮಾಡಿರುವುದಾಗಿ ಮಂಡಲದ ಅಧ್ಯಕ್ಷ ಮಾಚಿಮಂಡ ಸುವಿನ್ ಗಣಪತಿ ತಿಳಿಸಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರ ಅನುಮೋದನೆಯೊಂದಿಗೆ ರಾಕೇಶ್ ದೇವಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ವಿರಾಜಪೇಟೆಯಲ್ಲಿ ಪಕ್ಷದ ಬಲವನ್ನು ಮತ್ತಷ್ಟು ಹೆಚ್ಚಿಸಲು ಸಂಘಟನಾತ್ಮಕ ಚಟುವಟಿಕೆಯನ್ನು ಮತ್ತಷ್ಟು ಚುರುಕುಗೊಳಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ಮಡಿಕೇರಿ ಮಾ.1 NEWS DESK : ಮಡಿಕೇರಿ ನಗರ ಬಿಜೆಪಿಯ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾಗಿ ಮನು ರೈ, ವಿಘ್ನೇಶ್ ಸಿ.ಯು, ಉಪಾಧ್ಯಕ್ಷರುಗಳಾಗಿ ಸುಜು ಅಚ್ಚಯ್ಯ, ಸಂದೀಪ್, ಅನುರಾಗ ಹಾಗೂ ಕಿರಣ್ ಕುಮಾರ್ ಆಯ್ಕೆಯಾಗಿದ್ದಾರೆ ಎಂದು ಯುವ ಮೋರ್ಚಾದ ನಗರಾಧ್ಯಕ್ಷ ಪಾಂಡಿರ ಪೂಣಚ್ಚ ತಿಳಿಸಿದ್ದಾರೆ. ಬಿಜೆಪಿ ನಗರಾಧ್ಯಕ್ಷ ಉಮೇಶ್ ಸುಬ್ರಮಣಿ ಹಾಗೂ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಮಹೇಶ್ ತಿಮ್ಮಯ್ಯ ಅವರುಗಳ ಅನುಮೋದನೆಯೊಂದಿಗೆ ಪ್ರಧಾನ ಕಾರ್ಯದರ್ಶಿ ಮತ್ತು ಉಪಾಧ್ಯಕ್ಷರÀನ್ನು ನೇಮಕ ಮಾಡಲಾಗಿದೆ. ನಗರದಲ್ಲಿ ಯುವ ಮೋರ್ಚಾವನ್ನು ಮತ್ತಷ್ಟು ಬಲಗೊಳಿಸಲು ಪಕ್ಷ ಸಂಘಟನೆಯನ್ನು ಚುರುಕುಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಮಡಿಕೇರಿ ಮಾ.1 NEWS DESK : ದೇವರಕೊಲ್ಲಿ ಶ್ರೀ ಚಾಮುಂಡೇಶ್ವರಿ ದೇವಾಲಯ ಹಾಗೂ ಬಾಲ ಸಂಸ್ಕಾರ ಶಿಕ್ಷಣ ಸಮಿತಿಯ ಸಂಯುಕ್ತಾಶ್ರಯದಲ್ಲಿ ಬಾಲ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ದೇವರಕೊಲ್ಲಿಯ ಶ್ರೀ ಚಾಮುಂಡೇಶ್ವರಿ ದೇವಾಲಯದ ಸಭಾಂಗಣದಲ್ಲಿ ನಿವೃತ್ತ ಅಧ್ಯಾಪಕ ಎಂ.ಎಸ್.ಶಿವರಾವ್ ಅವರ ನೇತೃತ್ವದಲ್ಲಿ ಕಳೆದ 12 ವಾರಗಳ ಕಾಲ ಪ್ರತಿ ಭಾನುವಾರ ಶಿಬಿರವನ್ನು ನಡೆಸಲಾಯಿತು. ದೇವರಕೊಲ್ಲಿ, ಮದೆ, 2ನೇ ಮೊಣ್ಣಂಗೇರಿ, ಜೋಡುಪಾಲ, ಕೊಯನಾಡು ಭಾಗದ 60 ಕ್ಕೂ ಹೆಚ್ಚು ಮಕ್ಕಳಿಗೆ ಹಿಂದೂ ಧರ್ಮದ ಸಂಸ್ಕಾರ, ಆಚಾರ ವಿಚಾರ, ಶ್ಲೋಕ, ಯೋಗ ಮತ್ತು ದೇಶಭಕ್ತಿ ಗೀತೆಯನ್ನು ಹೇಳಿ ಕೊಡಲಾಯಿತು. ಬುದ್ದಿಯನ್ನು ಚುರುಕುಗೊಳಿಸುವ ಆಟಗಳ ಬಗ್ಗೆ ಶಿಬಿರದ ಗುರುಗಳಾದ 2ನೇ ಮೊಣ್ಣಂಗೇರಿ ಗ್ರಾಮದ ಧನಂಜಯ ಅಗೋಳಿಕಜೆ, ಎ.ಎ.ವಿಠಲ ಹಾಗೂ ಕೆ.ವಿ.ಗೀತಾ ತರಬೇತಿ ನೀಡಿದರು. ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಕೊಡಗು ಸೇವಾ ಭಾರತಿಯ ಪ್ರಮುಖ ಡಿ.ಹೆಚ್.ತಿಮ್ಮಪ್ಪ, ಶಾಲಾ ಶಿಕ್ಷಣದೊಂದಿಗೆ ಸಂಸ್ಕಾರ ಮೈಗೂಡಿಸಿಕೊಂಡರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಎಲ್ಲಾ ಗ್ರಾಮಗಳಲ್ಲಿಯೂ…
ಮಡಿಕೇರಿ ಮಾ.1 NEWS DESK : ಮರುನಿರ್ಮಾಣ ಗೊಂಡ ಕುಟ್ಟ, ಮಡಿಕೇರಿ ರಸ್ತೆಯನ್ನು ಪೊನ್ನಂಪೇಟೆಯ ಮುಗುಟಗೇರಿಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರ ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಈ ಸಂಧರ್ಭ ಮಾತನಾಡಿದ ಎ.ಎಸ್ .ಪೊನ್ನಣ್ಣ, 1 ಕೋಟಿ 75 ಲಕ್ಷ ರೂಗಳಲ್ಲಿ ಕಾಮಗಾರಿ ನಡೆದಿದ್ದು, ಉತ್ತಮ ಗುಣಮಟ್ಟದ ಕಾಮಗಾರಿ ನಡೆದಿದೆ.ಈ ನಿಟ್ಟಿನಲ್ಲಿ ಕಾಮಗಾರಿಯ ಬಗ್ಗೆ ನಿಗಾವಹಿಸಿದ ಗ್ರಾಮಸ್ಥರು ಅಭಿನಂದನಾರ್ಹರು ಎಂದು ತಿಳಿಸಿದರು. ಕ್ಷೇತ್ರದ ಸಂಪೂರ್ಣ ರಸ್ತೆಗಳನ್ನು ಅಭಿವೃದ್ಧಿ ಪಡಿಸಲು ತಾವು ಪಣತೊಟ್ಟಿದ್ದು, ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಪ್ರಮುಖರಾದ ಅಜ್ಜಿಕುಟ್ಟಿರ ನರೇನ್ ಕಾರ್ಯಪ್ಪ, ಅಂಕಿತ್ ಪೊನ್ನಪ್ಪ ಸೇರಿದಂತೆ ಪಕ್ಷದ ಪ್ರಮುಖರು,ಸ್ಥಳೀಯ ನಾಗರೀಕರು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ನಾಪೋಕ್ಲು ಮಾ.1 NEWS DESK : ಭಾರತ ಸರ್ಕಾರದ ಕಾಫಿ ಮಂಡಳಿ ಮತ್ತು ಬೆಟ್ಟಗೇರಿಯ ವ್ಯವಸಾಯ ಸಹಕಾರಿ ಬ್ಯಾಂಕಿನ ಜಂಟಿ ಆಶ್ರಯದಲ್ಲಿ ಸಂಚಾರಿ ಮಣ್ಣು ಪರೀಕ್ಷಾ ಅಭಿಯಾನ ನಡೆಯಿತು. ಬ್ಯಾಂಕಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತೀಯ ಕಾಫಿ ಮಂಡಳಿಯ ನಿರ್ದೇಶಕ ತಳೂರು ಕಿಶೋರ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು. ಕೆವಿಕೆ ವಿಜ್ಞಾನಿಗಳು ಕಾಫಿ ತೋಟ, ಕಾಳುಮೆಣಸಿನ ಕೃಷಿಗಳಿಗೆ ಹಾಕುವ ರಸಗೊಬ್ಬರ, ಕೀಟನಾಶಕಗಳ ಬಗ್ಗೆ ರೈತರಿಗೆ ಸಮಗ್ರ ಮಾಹಿತಿಯನ್ನು ನೀಡಿ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದಲ್ಲಿ ಕಾಫಿ ಮಂಡಳಿ ಉಪನಿರ್ದೇಶಕ ಚಂದ್ರಶೇಖರ್, ಬೆಟ್ಟಗೇರಿ ವಿಎಸ್ಎಸ್ಎನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಶೀಲಾ ರೈ, ನಿವೃತ ಶಿಕ್ಷಕ ಕೆದಂಬಾಡಿ ಪುಟ್ಟಯ್ಯ, ಹಾಗೂ ಕಾಫಿ ಬೆಳೆಗಾರರು ಹಾಜರಿದ್ದರು. ವರದಿ : ದುಗ್ಗಳ ಸದಾನಂದ.






