ಕುಶಾಲನಗರ ಫೆ.8 NEWS DESK : ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಭಾರತೀಯ ಸಂವಿಧಾನದ ಪೀಠಿಕೆ ಮತ್ತು ಸಂವಿಧಾನದ ಮಹತ್ವದ ಕುರಿತು ಜಾಗೃತಿ ಮೂಡಿಸುವ ಸಂಬಂಧ ಹಮ್ಮಿಕೊಂಡಿರುವ ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಕೂಡುಮಂಗಳೂರು ಗ್ರಾ.ಪಂ ವತಿಯಿಂದ ಕೂಡಿಗೆಯ ವೃತ್ತದ ಫಾರಂ ಗೇಟ್ ಪ್ರವೇಶ ದ್ವಾರದ ಬಳಿ ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು. ಗ್ರಾ.ಪಂ. ಅಧ್ಯಕ್ಷ ಭಾಸ್ಕರ್ ನಾಯಕ್, ರಥದಲ್ಲಿ ಡಾ ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಮಾಲೆ ಅರ್ಪಿಸುವ ಮೂಲಕ ಸಂವಿಧಾನ ಜಾಗೃತಿ ರಥವನ್ನು ಸ್ವಾಗತಿಸಿ ಬರಮಾಡಿಕೊಂಡರು. ಕಳಶ ಹೊತ್ತ ಆಶಾ ಕಾರ್ಯಕರ್ತೆಯರು ರಥಕ್ಕೆ ಪೂರ್ಣಕುಂಭ ಸ್ವಾಗತ ನೀಡಿದರು. ಸಂವಿಧಾನ ಪೀಠಿಕೆಯ ಪ್ರಸ್ತಾವನೆಯನ್ನು ಓದಿ ಅದರ ಮಹತ್ವ ಕುರಿತು ಮಾತನಾಡಿದ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಭಾಗ್ಯಮ್ಮ, ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ಹೊಂದಿರುವ ರಾಷ್ಟ್ರ ಭಾರತ. ಅನೇಕ ದೇಶಗಳ ಸಂವಿಧಾನವನ್ನು ಅಧ್ಯಯನ ನಡೆಸಿ, ದೇಶಕ್ಕೆ ಹೊಂದುವಂತೆ ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನವನ್ನು ರಚಿಸಿದ್ದಾರೆ. ಸಂವಿಧಾನವನ್ನು ಅರಿತುಕೊಳ್ಳುವುದರಿಂದ ದೇಶಕ್ಕೆ ಒಳಿತಾಗುತ್ತದೆ. ಯುವ ಪೀಳಿಗೆ…
ಲೇಖಕ: admin
ಮಡಿಕೇರಿ ಫೆ.8 NEWS DESK : ಮಡಿಕೇರಿಯಲ್ಲಿ ಫೆ.12 ರಂದು ಉದ್ಯೋಗ ಮೇಳ ನಡೆಯಲಿದೆ. ಕಲ್ಯಾಣಿ ಮೋಟಾರ್ಸ್ ನಲ್ಲಿ ಉದ್ಯೋಗಾವಕಾಶಗಳಿದ್ದು, ಆಸಕ್ತರು ಪಾಲ್ಗೊಳ್ಳಬಹುದು.
ಮಡಿಕೇರಿ ಫೆ.8 NEWS DESK : ನಂಜನಗೂಡಿನಲ್ಲಿ ನಡೆದ 26ನೇ ಶೋರಿನ್ ಕಾಯ್ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ 8 ವರ್ಷದ ಬಾಲಕರ ವಿಭಾಗದಲ್ಲಿ ಕೊಡಗಿನ ಕೆ.ಎಸ್.ಧುವಿನ್ ಅಯ್ಯಪ್ಪ ತೃತೀಯ ಸ್ಥಾನ ಪಡೆದುಕೊಂಡಿದ್ದಾನೆ. ಹಾಸನದ ನಟರಾಜ್ ಕರಾಟೆ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿರುವ ಧುವಿನ್ ಹಾಸನದ ಪೋದಾರ್ ಇಂಟರ್ ನ್ಯಾಷನಲ್ ಸ್ಕೂಲ್ನಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಧುವಿನ್ ಕೋಳುಮಾಡಂಡ ಶರಣು ಮಾಚಯ್ಯ, ಬೀನಾ ದಂಪತಿಯ ಪುತ್ರ ಹಾಗೂ ಎಳ್ತಂಡ ಸಿ.ನಾಣಯ್ಯ ಅವರ ಮೊಮ್ಮಗ.
ಮಡಿಕೇರಿ ಫೆ.8 NEWS DESK : ಇತಿಹಾಸ ಪ್ರಸಿದ್ಧ ಪೇರಡ್ಕ ವಲಿಯುಲ್ಲಾಹಿ ದರ್ಗಾ ಶರೀಫ್ ಉರೂಸ್ ಸಮಾರಂಭವು ಫೆ.8 ರಿಂದ ಆರಂಭವಾಗಲಿದೆ. ಪೇರಡ್ಕ ಮುಹಿಯದ್ದೀನ್ ಜುಮ್ಮಾ ಮಸೀದಿ ಮತ್ತು ದರ್ಗಾದಲ್ಲಿ ಫೆ.8 ಜುಮಾ ನಮಾಜಿನ ಬಳಿಕ ಪೇರಡ್ಕ ಜುಮಾ ಮಸೀದಿ ಅಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ನಂತರ ತೆಕ್ಕಿಲ್ ಕುಟುಂಬಸ್ಥರ ಪರವಾಗಿ ಪ್ರಾರಂಭದಿಂದಲೂ ನೀಡುತ್ತಿರುವ ಸಿಹಿ ವಿತರಿಸಲಾಗುವುದು. ತೆಕ್ಕಿಲ್ ಮೊಹಮದ್ ಹಾಜಿ “ವೇದಿಕೆಯಲ್ಲಿ ಸಂಜೆ ನಡೆೆಯುವ ಧಾರ್ಮಿಕ ಸಮಾರಂಭವನ್ನು ಬಹು ಸಯ್ಯದ್ ಝೈನುಲ್ ಆಬಿದೀನ್ ಜಿಪ್ರಿತಂಗಳ್ ಬೆಳ್ತಂಗಡಿ ಉದ್ಘಾಟಿಸಲಿದ್ದಾರೆ. ಕೇರಳ ಅಲ್ ಹಾಜ್ ಸಿರಾಜುದ್ಧೀನ್ ದಾರಿಮಿ ಕಕ್ಕಾಡ್ ಧಾರ್ಮಿಕ ಉಪನ್ಯಾಸವನ್ನು ನೀಡಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟಿ.ಎಂ ಶಹೀದ್ ತೆಕ್ಕಿಲ್ ವಹಿಸಲಿದ್ದಾರೆ. ದುವಾವನ್ನು ಸ್ಥಳೀಯ ಖತೀಬರಾದ ರಿಯಾಝ್ ಫೈಝಿ ನೆರೆವೇರಿಸಲಿದ್ದು. ಮುಖ್ಯ ಅತಿಥಿಗಳಾಗಿ ಜಮೀಯ್ಯತ್ತುಲ್ ಮುಅಲ್ಲಿಮ್ ಸುಳ್ಯ ರೇಂಜ್ ಅಬ್ದುಲ್ ಅಧ್ಯಕ್ಷ ಖಾದರ್ ಫೈಝಿ, ಕಲ್ಲುಗುಂಡಿ ಜುಮಾ ಮಸೀದಿ ಖತೀಬರಾದ ನಈಮ್ ಫೈಝಿ, ಎಂ.ಜಿ.ಎಂ ಮಾಜಿ…
ಮಡಿಕೇರಿ ಫೆ.8 NEWS DESK : ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ವೇದಿಕೆಯ ಮೈಸೂರು ವಿಭಾಗೀಯ ಸಂಚಾಲಕರಾಗಿ ಸುಂಟಿಕೊಪ್ಪದ ಹೆಚ್.ಯು.ರಫೀಕ್ ಖಾನ್ ಹಾಗೂ ಕೊಡಗು ಜಿಲ್ಲಾಧ್ಯಕ್ಷರಾಗಿ ಸೋಮವಾರಪೇಟೆಯ ಟಿ.ಈ.ಸುರೇಶ್ ಆಯ್ಕೆಯಾಗಿದ್ದಾರೆ. ವೇದಿಕೆಯ ರಾಜ್ಯಾಧ್ಯಕ್ಷ ಸುರೇಶ್ ಕಂಠಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಮತ್ತು ಕೊಡಗು ಜಿಲ್ಲೆಯನ್ನೊಳಗೊಂಡ ಮೈಸೂರು ವಿಭಾಗೀಯ ಕ್ಷೇತ್ರದಲ್ಲಿ ಹೆಚ್.ಯು.ರಫೀಕ್ ಖಾನ್ ಕಾರ್ಯನಿರ್ವಹಿಸಲಿದ್ದಾರೆ.
ಮಡಿಕೇರಿ ಫೆ.8 NEWS DESK : ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ಮತ್ತು ಹೊಸ ಸಂಸತ್ ನಲ್ಲಿ ಪ್ರತ್ಯೇಕ ಕೊಡವ ಪ್ರಾತಿನಿಧ್ಯ ನೀಡಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಫೆ.9 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು, ಅತ್ಯಂತ ಸೂಕ್ಷ್ಮ ಆದಿಮ ಸಂಜಾತ ಕೊಡವ ಬುಡಕಟ್ಟು ಜನಾಂಗಕ್ಕೆ ಸಂವಿಧಾನದ ಅನುಚ್ಛೇದ 244 ಆರ್/ಡಬ್ಲ್ಯೂ 6ನೇ ಮತ್ತು 8ನೇ ಶೆಡ್ಯೂಲ್ ಅಡಿಯಲ್ಲಿ ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ನೀಡಬೇಕು ಹಾಗೂ ಸಿಕ್ಕಿಂ ರಾಜ್ಯದ ಬೌದ್ಧ ಸನ್ಯಾಸಿ ಸಮುದಾಯದ ಸಂಘ ಕ್ಷೇತ್ರದ ಮಾದರಿಯಲ್ಲಿ ಹೊಸ ಸಂಸತ್ ನಲ್ಲಿ ಪ್ರತ್ಯೇಕ ಕೊಡವ ಪ್ರಾತಿನಿಧ್ಯ ಕಲ್ಪಿಸಬೇಕೆನ್ನುವ ಬೇಡಿಕೆಯ ಮನವಿ ಪತ್ರವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಮಡಿಕೇರಿಯ ಜಿಲ್ಲಾಧಿಕಾರಿಗಳ ಕಚೇರಿ ಎದುರಿನಲ್ಲಿ ಬೆಳಗ್ಗೆ 10.30 ಗಂಟೆಗೆ ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸಿ ಹಕ್ಕೊತ್ತಾಯ ಮಂಡಿಸಲಾಗುವುದು ಎಂದು ಹೇಳಿದ್ದಾರೆ.
ಮಡಿಕೇರಿ ಫೆ.8 NEWS DESK : ಕಳೆದ 6 ತಿಂಗಳಿಂದ ಇಡೀ ದೇಶದಾದ್ಯಂತ ಬರೀ ರಾಮ ಮಂತ್ರದ ಕಂಪು ಇಡೀ ದೇಶದಾದ್ಯಂತ ಪಸರಿಸಿತು. ಜನವರಿ ತಿಂಗಳು ಅಂತು ಇಡೀ ದೇಶ ರಾಮಮಯಾ ಕೇಸರಿಮಯವಾಗಿತ್ತು. ಅಂದರೆ ಉತ್ಪ್ರೇಕ್ಷೆ ಆಗದು. ಸಾಮಾಜಿಕ ಜಾಲ ತಾಣದಲ್ಲಿ, ದೃಶ್ಯ ಮಾಧ್ಯಮ ಪತ್ರಿಕೆಗಳಲ್ಲಿ ಗಾಳಿ, ಬೆಳಕು, ನೀರು ಕೂಡ ರಾಮಮಯಾವಾಗಿತ್ತು. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನೆ ಮಾಡಿದ್ದೂ ವಿಶೇಷವಾಗಿತ್ತು. ಅದಕ್ಕಾಗಿ ಅವರು ಕಠಿಣ ವ್ರತ ಕೂಡ ಕೈ ಗೊಂಡಿದ್ದರು. ಅಲ್ಪ ಸ್ವಲ್ಪ ರಾಜಕೀಯ ಕೆಸರಾಟ ಬಿಟ್ಟರೇ ಕಾರ್ಯಕ್ರಮ ಅಭೂತಪೂರ್ವ ಯಶಸ್ವಿಯಾಯಿತು. ಭಾರತದಲ್ಲಿ ಹೊಸ ಇತಿಹಾಸ ನಿರ್ಮಾಣವಾಯಿತು. ಅದುವೇ ದಶಕಗಳ ಕಾಲ ಹಿಂದೂಗಳು ಹೋರಾಟ ನಡೆಸಿ ಕನಸು ಕಂಡಿದ್ದ ರಾಮಮಂದಿರದ ಅವರ ಕನಸು ಸಾಕಾರಗೊಂಡ ದಿನ. 1990ರ ಆಸುಪಾಸಿನಿಂದ ಶ್ರೀ ರಾಮಚಂದ್ರನನ್ನು ಭಾರತೀಯ ರಾಜಕೀಯ ಚದುರಂಗದಾಟದ ರಂಗದಲ್ಲಿ ಮುನ್ನಲೆ ತರಲಾಯಿತು. ಆಗ ತಾನೇ ರಾಜಕೀಯ ಚದುರಂಗದಾಟದಲ್ಲಿ ಮೆಲ್ಲನೇ ಕಾಲು ಇಡುತಿದ್ದ ಭಾರತೀಯ ಜನತಾ…
ಮಡಿಕೇರಿ ಫೆ.8 NEWS DESK : ಕಾಡಾನೆ ದಾಳಿಗೆ ವೃದ್ಧೆಯೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಕುಶಾಲನಗರ ತಾಲ್ಲೂಕಿನ ಚಿನ್ನೇನಹಳ್ಳಿಯಲ್ಲಿ ನಡೆದಿದೆ. ಚಿನ್ನೇನಹಳ್ಳಿಯ ನಿವಾಸಿ ವೆಂಕಟಮ್ಮ ಆನೆದಾಳಿಗೆ ಒಳಗಾದ ವೃದ್ಧೆ. ಮುಂಜಾನೆ ಬಹಿರ್ದೆಸೆಗೆ ತೆರಳಿದ ಸಂದರ್ಭ ಕಾಡಾನೆ ದಾಳಿ ನಡೆಸಿದ ಪರಿಣಾಮ ವೃದ್ಧೆಯ ಕಾಲು ಮುರಿತಗೊಂಡಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಡಿಕೇರಿ ಫೆ.8 NEWS DESK : ಗೋಣಿಕೊಪ್ಪಲು ಕಾಫಿ ಮಂಡಳಿ ವಿಸ್ತರಣಾ ವಿಭಾಗದ ವತಿಯಿಂದ ನಿಟ್ಟೂರು ಗ್ರಾಮ ಪಂಚಾಯಿತಿ, ನಿಟ್ಟೂರು ಕಾರ್ಮಾಡು ಇಗ್ಗುತ್ತಪ್ಪ ಸಂಘದ ಸಹಕಾರದೊಂದಿಗೆ ನಿಟ್ಟೂರು ಗ್ರಾ.ಪಂ ವ್ಯಾಪ್ತಿಯ ಕಾಫಿ ಬೆಳೆಗಾರರಿಗೆ ಫೆ.13 ರಂದು ಮಣ್ಣು ಪರೀಕ್ಷೆ ಅಭಿಯಾನ ಮತ್ತು ಕಾಫಿ ಬೆಳೆಯ ಬಗ್ಗೆ ತಾಂತ್ರಿಕ ಮಾಹಿತಿ ನೀಡುವ ಕಾರ್ಯಾಗಾರ ನಡೆಯಲಿದೆ. ಅಂದು ಬೆಳಗ್ಗೆ 9.45ಗಂಟೆಗೆ ನಿಟ್ಟೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ನಿಟ್ಪೂರು ಗ್ರಾ.ಪಂ ವ್ಯಾಪ್ತಿಯ ಕಾಫಿ ಬೆಳೆಗಾರರು ತಮ್ಮ ತೋಟದ ಮಣ್ಣಿನ ಮಾದರಿಯನ್ನು ಕಾಫಿ ಮಂಡಳಿ ಶಿಫಾರಸು ಮಾಡಿದ ಮಾದರಿಯಲ್ಲಿ ಮಣ್ಣಿನ ಮಾದರಿ ಸಂಗ್ರಹಣೆಯನ್ನು ತಂದು ಫಲಿತಾಂಶವನ್ನು ಪಡೆದುಕೊಳ್ಳಲು ಗೋಣಿಕೊಪ್ಪಲು ಕಾಫಿ ಮಂಡಳಿ ಸಂಪರ್ಕ ಅಧಿಕಾರಿ ಡಿ.ಎಸ್.ಮುಖಾರಿಬ್ ಹಾಗೂ ನಿಟ್ಟೂರು ಗ್ರಾ.ಪಂ ಅಧ್ಯಕ್ಷರು ಕೋರಿದ್ದಾರೆ. ಬೆಳೆಗಾರರು ಮಣ್ಣಿನ ಪರೀಕ್ಷೆ ಮಾಡಿಸಿಕೊಳ್ಳಲು ಬೆಳಿಗ್ಗೆ 9.45ಗಂಟೆಗೆ ಹಾಜರಿದ್ದು, ಮಣ್ಣಿನ ರಸಸಾರ ಪರೀಕ್ಷೆಗೆ ರೂ.25, ಸಾರಜನಕ, ರಂಜಕ, ಪೊಟ್ಯಾಶ್ ಪರೀಕ್ಷೆಗೆ ರೂ.150 ಬೆಲೆ ನಿಗಧಿಪಡಿಸಲಾಗಿದ್ದು, ನುರಿತ ತಜ್ಞರಿಂದ ಕಾಫಿ ಬೇಸಾಯದ ಬಗ್ಗೆ…
ಮಡಿಕೇರಿ ಫೆ.8 NEWS DESK : ಮಡಿಕೇರಿಯ ರಾಜರಾಜೇಶ್ವರಿ ನಗರ ನಿವಾಸಿ ಧರ್ಮಪ್ಪ ಅವರ ಪತ್ನಿ ಯಶೋಧ ಇಂದು ಮುಂಜಾನೆ ನಿಧನರಾಗಿದ್ದಾರೆ. ಇವರ ಅಂತ್ಯಕ್ರಿಯೆಯನ್ನು ವೀರಶೈವ ಸಮುದಾಯದ ರುದ್ರಭೂಮಿಯಲ್ಲಿ ಸಂಜೆ 4 ಗಂಟೆಗೆ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮೃತರು ಪುತ್ರರಾದ ಸತೀಶ್ ಕುಮಾರ್, ಭರತ್ ಕುಮಾರ್ ಸೇರಿದಂತೆ ಬಂಧುಮಿತ್ರರನ್ನು ಅಗಲಿದ್ದಾರೆ.






