ಲೇಖಕ: admin

ಸೋಮವಾರಪೇಟೆ ಫೆ.7 : ಮಡಿಕೇರಿ ವನ್ಯಜೀವಿ ವಿಭಾಗ ಹಾಗೂ ಪುಷ್ಪಗಿರಿ ವನ್ಯಜೀವಿ ವಲಯದ ವತಿಯಿಂದ ಕಾಡ್ಗಿಚ್ಚಿನಿಂದ ಅರಣ್ಯ ರಕ್ಷಣೆ ಬಗ್ಗೆ ಜನ ಜಾಗೃತಿ ಬೀದಿ ನಾಟಕವನ್ನು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಪ್ರದರ್ಶಿಸಲಾಯಿತು. ಕಾಲೇಜಿನ ಉಪಪ್ರಾಂಶುಪಾಲರಾದ ಬಸವರಾಜಪ್ಪ ಜಾಗೃತಿ ನಾಟಕಕ್ಕೆ ಚಾಲನೆ ನೀಡಿದರು. ಉಪ ವಲಯ ಅರಣ್ಯಾಧಿಕಾರಿ ಪಿ.ಟಿ.ಶಶಿ ಮಾತನಾಡಿ, ಅರಣ್ಯ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಅರಣ್ಯದಲ್ಲಿ ಸಾವಿರಾರು ಪ್ರಾಣಿ, ಪಕ್ಷಿ, ಜೀವಸಂಕುಲಗಳಿರುತ್ತವೆ. ಒಮ್ಮೆ ಬೆಂಕಿ ಬಿದ್ದರೆ, ಎಲ್ಲವೂ ಸತ್ತು ಹೋಗುತ್ತವೆ. ಬೆಂಕಿಯಿಂದ ಅರಣ್ಯ ರಕ್ಷಿಸುವ ಪ್ರತಿಜ್ಞೆ ಮಾಡಬೇಕು. ಅಲ್ಲದೆ ವಿದ್ಯಾರ್ಥಿಗಳು ಮನೆ ಹಾಗು ನೆರೆಹೊರೆಯವರಿಗೆ ಜಾಗೃತಿ ಮೂಡಿಸಬೇಕು ಎಂದರು. ಕಾಡ್ಗಿಚ್ಚಿನಿಂದ ಪರಿಸರಕ್ಕೆ ಆಗುವ ದುಷ್ಪರಿಣಾಮ , ಪ್ರಕೃತಿ ಅಸಮತೋಲನದ ಬಗ್ಗೆ ಮತ್ತು ಕಾಡ್ಗಿಚ್ಚಿನಿಂದ ಅರಣ್ಯ ರಕ್ಷಣೆ ಹಾಗು ಸಾರ್ವಜನಿಕ ಆಸ್ತಿ ರಕ್ಷಣೆಗೆ ತೆಗೆದು ಕೊಳ್ಳುವ ಮುಂಜಾಗ್ರತಾ ಕ್ರಮಗಳನ್ನು ವಿವರಿಸಿದರು.

Read More

ಮಡಿಕೇರಿ ಫೆ.7 :  ನವದೆಹಲಿಯ ಜಂತರ್ ಮಂತರ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹಮ್ಮಿಕೊಂಡಿದ್ದ “ಚಲೋ ದಿಲ್ಲಿ ” ನ್ಯಾಯಕ್ಕಾಗಿ ಧರಣಿ ಸತ್ಯಾಗ್ರಹದಲ್ಲಿ  ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಪಾಲ್ಗೊಂಡಿದ್ದರು.

Read More

ಪುತ್ತೂರು ಫೆ.7 : ನಮ್ಮ ಬದುಕು ಅರ್ಥಪೂರ್ಣವಾಗಿರುವಂತೆ ಮತ್ತು ಚೈತನ್ಯಭರಿತವಾಗಿರುವಂತೆ ಮಾಡೊಕೊಳ್ಳಬೇಕಾದರೆ ಉತ್ತಮ ಅಭ್ಯಾಸಗಳನ್ನು ವಿದ್ಯಾರ್ಥಿ ದೆಸೆಯಿಂದಲೇ ಬೆಳೆಸಿಕೊಳ್ಳಬೇಕು. ಅವುಗಳ ಜೊತೆಗೆ ಆರೋಗ್ಯಕರ ಹವ್ಯಾಸಗಳನ್ನೂ ಬೆಳೆಸಿಕೊಂಡರೆ ಜೀವನ ಸಮೃದ್ಧವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್.ಪಿ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಸ್ನಾತಕೋತ್ತರ ಎಂಬಿಎ ಮತ್ತು ಎಂಸಿಎ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ಶ್ರೀರಾಮ ಸಭಾ ಭವನದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸಾಂಪ್ರದಾಯಿಕವಾಗಿ ದೀಪ ಪ್ರಜ್ವಲನೆಯನ್ನು ಮಾಡಿ ಮಾತಾಡಿದರು. ವಿದ್ಯಾರ್ಥಿ ದೆಸೆಯಿಂದಲೇ ಪ್ರತಿಯೊಬ್ಬರೂ ಜೀವನ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು. ಶಿಕ್ಷಣ ಕೇವಲ ವೃತ್ತಿಗೆ ಅಥವಾ ಹಣಗಳಿಕೆಯ ರಹದಾರಿಯಾಗಬಾರದು. ಎಲ್ಲರೂ ತಾನು ಸಮಾಜದಿಂದ ಗಳಿಸಿದ ಕೆಲವಂಶವನ್ನಾದರೂ ಸಮಾಜಕ್ಕೆ ನೀಡಿ ರಾಷ್ಟ್ರಪ್ರೇಮವನ್ನು ಮೆರೆಯಬೇಕು ಎಂದರು. ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ಮಾತನಾಡಿ ವಿದ್ಯಾರ್ಥಿಗಳ ಜ್ಞಾನದಾಹವನ್ನು ತಣಿಸುವುದಕ್ಕೆ ಬೇಕಾದ ಎಲ್ಲ ಸೌಲಭ್ಯಗಳೂ…

Read More

ಸುಂಟಿಕೊಪ್ಪ ಫೆ.7 NEWS DESK : ನಾಕೂರು-ಕಾನ್‍ಬೈಲ್ ಫ್ರೆಂಡ್ಸ್ ಯೂತ್ ಕ್ಲಬ್‍ನ 24ನೇ ವಾರ್ಷಿಕೋತ್ಸವದ ಅಂಗವಾಗಿ ಫೆ.25 ರಂದು ಗ್ರಾಮೀಣ ಕ್ರೀಡಾಕೂಟ ಹಾಗೂ ಡ್ಯಾನ್ಸ್‍ಮೇಳ ಕಾರ್ಯಕ್ರಮ ನಡೆಯಲಿದೆ ಎಂದು ಫ್ರೆಂಡ್ಸ್ ಯೂತ್ ಕ್ಲಬ್‍ನ ಅಧ್ಯಕ್ಷ ವಸಂತ ತಿಳಿಸಿದ್ದಾರೆ. ಕಾನ್‍ಬೈಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಜಿಲ್ಲಾ ಮಟ್ಟದ ಮುಕ್ತ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಪ್ರಥಮಸ್ಥಾನ ಪಡೆದ ತಂಡಕ್ಕೆ ರೂ.20,000 ನಗದು ಹಾಗೂ ಆಕರ್ಷಕ ಟ್ರೋಪಿ, ದ್ವಿತೀಯ ಸ್ಥಾನ ರೂ 15,000 ನಗದು ಹಾಗೂ ಆಕರ್ಷಕ ಟ್ರೋಫಿ, ತೃತೀಯ ಸ್ಥಾನ ಪಡೆದ ತಂಡಕ್ಕೆ ರೂ 10,000 ನಗದು ನೀಡಲಾಗುವುದೆಂದು ಅವರು ಹೇಳಿದರು. ಸ್ಥಳೀಯ ಪುರುಷರಿಗೆ ಕಬ್ಬಡ್ಡಿ ಪಂದ್ಯಾವಳಿ, ಮುಕ್ತ ರಸ್ತೆ ಓಟ, ಮಹಿಳೆಯರಿಗೆ ಥ್ರೋಬಾಲ್, ಸ್ಥಳಿಯ ಮಹಿಳೆಯರಿಗೆ ಮತ್ತು ಪುರುಷರಿಗೆ ಹಗ್ಗ ಜಗ್ಗಾಟ, ಹಾಗೂ 5 ವರ್ಷದೊಳಗಿನ ಮಕ್ಕಳಿಗೆ ವಿವಿಧ ಗ್ರಾಮೀಣ ಕ್ರೀಡಾಕೂಟ ಹಾಗೂ ಡ್ಯಾನ್ಸ್ ಮೇಳ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಡ್ಯಾನ್ಸ್ ಮೇಳದಲ್ಲಿ ಭಾಗವಹಿಸುವವರು ಫೆ.20ರೊಳಗೆ ಹೆಸರು ನೊಂದಾಯಿಸಿಕೊಳ್ಳಬೇಕು. ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ…

Read More

ಮಡಿಕೇರಿ ಫೆ.7 NEWS DESK :  ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಮಾ.9 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ್ ಅದಾಲತ್’ ನಡೆಯಲಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳು: ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು(ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು ಇತ್ಯಾದಿ), ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು(ಆರ್‍ಇಆರ್‍ಎ), ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು. ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು: ರಾಜಿಯಾಗಬಲ್ಲ ಅಪರಾಧಿತ ಪ್ರಕರಣಗಳು,…

Read More

ಮಡಿಕೇರಿ ಫೆ.7 NEWS DESK : ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕುವ ಕಾರ್ಯಕ್ರಮವು ಮಾ.3 ರಂದು ನಡೆಯಲಿದ್ದು, ವಿವಿಧ ಇಲಾಖೆಗಳು ಹಾಗೂ ಸಂಘ ಸಂಸ್ಥೆಗಳು ಅಗತ್ಯ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪಲ್ಸ್ ಪೋಲಿಯೋ ಸಿದ್ಧತೆ ಬಗ್ಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಲ್ಸ್ ಪೋಲಿಯೋ ಕಾರ್ಯಕ್ರಮ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜೊತೆ ಪಂಚಾಯತ್ ರಾಜ್, ಸಾರ್ವಜನಿಕ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪ್ರಾದೇಶಿಕ ಸಾರಿಗೆ ಇಲಾಖೆಗಳು ಅಗತ್ಯ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಶಾಲೆಗಳು, ಬಸ್ ನಿಲ್ದಾಣಗಳಲ್ಲಿ ಹಾಗೂ ಜನ ದಟ್ಟಣೆ ಪ್ರದೇಶಗಳಲ್ಲಿ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಲು ಸಹಕಾರ ನೀಡಬೇಕು. ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಅಗತ್ಯ ವಾಹನ ನಿಯೋಜಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಪಲ್ಸ್ ಪೋಲಿಯೋ ಕಾರ್ಯಕ್ರಮ ದಿನದಂದು…

Read More

ವಿರಾಜಪೇಟೆ ಫೆ.7 NEWS DESK: ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ವಿದ್ಯಾರ್ಥಿನಿ ಭರತನಾಟ್ಯ ನೃತ್ಯ ಕಲಾವಿದೆ ಬಿ.ಎನ್.ಲಾವಣ್ಯ ಗೆ ಸುವರ್ಣ ಶ್ರೀ ಕನ್ನಡ ಪ್ರಶಸ್ತಿ ಲಭಿಸಿದೆ. ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ನೃತ್ಯೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗಣ್ಯರು ಬಿ.ಎನ್.ಲಾವಣ್ಯ ಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಲಾವಣ್ಯ ವಿರಾಜಪೇಟೆಯ ಪ್ರೇಮಾಂಜಲಿ ಆಚಾರ್ಯರ ಶಿಷ್ಯೆ ಹಾಗೂ ಬೇಟೋಳಿ ರಾಮನಗರದ ಬಿ.ಜಿ.ನಟರಾಜ್ ಹಾಗೂ ಸುನಂದ ದಂಪತಿಗಳ ಪುತ್ರಿಯಾಗಿದ್ದು, ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ದ್ವಿತೀಯ ಬಿಬಿಎ ವ್ಯಾಸಂಗ ಮಾಡುತ್ತಿದ್ದಾಳೆ.

Read More

ವಿರಾಜಪೇಟೆ  ಫೆ.7 :  ಬೇಟೋಳಿ ರಾಮನಗರದ ನಾಟಿ ವೈದ್ಯ ನಟರಾಜ್ ಬೋರ್ಕರ್ ಅವರಿಗೆ ಸುವರ್ಣ ಸಂಭ್ರಮ ಕನ್ನಡಿಗ ಪ್ರಶಸ್ತಿ ಲಭಿಸಿದೆ. ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ರಾಜ್ಯ ಮಟ್ಟದ ನೃತ್ಯೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ನಟರಾಜ್ ಬೋರ್ಕರ್ ಅವರ ನಾಟಿ ವೈದ್ಯ ಸೇವೆಯನ್ನು ಪರಿಗಣಿಸಿ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ನಟರಾಜ್ ಬೋರ್ಕರ್ ರವರು ತನ್ನ ತಂದೆಯ ಕಾಲಘಟ್ಟದಿಂದಲೂ ನಾಟಿ ವೈದ್ಯರಾಗಿ ಸೇವೆ ನೀಡುತ್ತಾ ಬಂದಿದ್ದು, ಸುಮಾರು 20 ವರ್ಷಗಳಿಂದ ಬಡವರಿಗೆ ಉಚಿತ ಸೇವೆಯನ್ನು ಸಲ್ಲಿಸುತ್ತಿದ್ದಾರೆ.

Read More

ವಿರಾಜಪೇಟೆ ಫೆ.7 NEWS DESK : ಬಾಳುಗೋಡು ಏಕಲವ್ಯ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ ನಡೆಯಿತು. ವಿರಾಜಪೇಟೆಯ ಸಂತ ಅನ್ನಮ್ಮ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಬೆನ್ನಿ ಜೋಸೆಫ್ ಮಾತನಾಡಿ, ವಿಜ್ಞಾನವು ಪ್ರಸ್ತುತದಲ್ಲಿ ಮಹತ್ವದ ವಸ್ತು ವಿಷಯವಾಗಿದೆ. ಇದು ಮಕ್ಕಳಿಗೆ ಜ್ಞಾನವನ್ನು ಒದಗಿಸುವುದರ ಜೊತೆಗೆ ಅವರ ಬೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದರು. ರಾಷ್ಟ್ರವು ಮುಂದುವರೆಯಲು ವಿಜ್ಞಾನದ ಬೆಳವಣಿಗೆಯಿಂದ ಮಾತ್ರ ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಅವರು, ಇಂತಹ ವಿಜ್ಞಾನ ಮಾದರಿ ವಸ್ತು ಪ್ರದರ್ಶನ ಆಯೋಜಿಸುದರಿಂದ ಮಕ್ಕಳಲ್ಲಿ ಹೊಸ ಆವಿಸ್ಕಾರ, ಆಲೋಚನೆ ಮೂಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಡಾ.ದಿಲನ್, ವಿಜ್ಞಾನದ ಬಳಕೆಯು ಹೆಚ್ಚಿದಂತೆ ರಾಷ್ಟ್ರದ ತಂತ್ರಜ್ಞಾನ ಪ್ರಗತಿ ಶೀಘ್ರವಾಗಿ ಆಗುತ್ತದೆ. ಮಾತ್ರವಲ್ಲದೆ ರಾಷ್ಟ್ರದ ಪ್ರಗತಿಗೆ ಪೂರಕವಾಗಿದೆ ಎಂದರು. ಈ ಸಂದರ್ಭ ಆಯೋಜಕ ಉಪನ್ಯಾಸಕರಾದ ರೇಷ್ಮಾ, ಬಿ.ಬಿ.ಸಚಿನ್ ಹಾಗೂ ಭರತ್ ಕುಮಾರ್, ಹರ್ಷಹಾಗೂ ಇತರ ಉಪನ್ಯಾಸಕರು, ಶಿಕ್ಷಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿ ಅಖಿತ ಹಾಗೂ ಸಂಗೀತ…

Read More

ಮಡಿಕೇರಿ ಫೆ.7 NEWS DESK : ಬೆಂಗಳೂರಿನ ಜಾಗೃತಿ ಟ್ರಸ್ಟ್ ಹಾಗೂ ಸಿಸ್ಕೋ ಸಂಸ್ಥೆಯ 35 ಸ್ವಯಂಸೇವಕ ಸದಸ್ಯರನ್ನು ಒಳಗೊಂಡ ದಾನಿಗಳ ತಂಡ ಅಮತ್ತಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆಗೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ ಮೂವತ್ತು ಸಾವಿರ ಮೌಲ್ಯದ ಕ್ರೀಡೋಪಕರಣಗಳು, ಧ್ವನಿವರ್ಧಕ, ಹಾಗೂ ಲೇಖನ ಸಾಮಾಗ್ರಿಗಳನ್ನು ವಿತರಿಸಿದರು. ಅಲ್ಲದೆ ಶಾಲೆಯ ಸುತ್ತಮುತ್ತಲಿನ ಕಾಡನ್ನು ಸ್ವಚ್ಛ ಮಾಡಿಸಿ, ಹಣ್ಣಿನ ಗಿಡಗಳನ್ನು ನೆಟ್ಟರು. ಪ್ರತಿ ತರಗತಿಯ ವಿದ್ಯಾರ್ಥಿಗಳಿಗೆ ಆಟೋಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಿದರು. ಈ ಸಂದರ್ಭ ಸಿಸ್ಕೋ ಸಂಸ್ಥೆಯ ಮಚ್ಚಾರಂಡ ಅಯ್ಯಪ್ಪ, ಸಂಪತ್ ಬಾನಂಡ, ಕುಟ್ಟಂದಿ ಪವನ್ ಮತ್ತು ಪ್ರಶಾಂತ್ , ಜಾಗೃತಿ ಟ್ರಸ್ಟ್ ನ ಆಡಳಿತ ಅಧಿಕಾರಿ ಆರ್.ಕಣ್ಣನ್, ಖಜಾಂಚಿ ಕೊಂಡಿಂಜಮ್ಮಂಡ ಶರಣು, ಜಾಗೃತಿ ಟ್ರಸ್ಟ್ ನ ಸಂಸ್ಥಾಪಕರು ಮತ್ತು ವ್ಯವಸ್ಥಾಪಕರಾದ ರೇಣು ಅಪ್ಪಚ್ಚು ಹಾಗೂ ಶಾಲೆಯ ಮುಖ್ಯ ಶಿಕ್ಷಕಿ ಹೆಚ್.ಎಸ್.ಸೋಮಕ್ಕ, ನಿವೃತ್ತ ಮುಖ್ಯ ಶಿಕ್ಷಕಿ ಮಚ್ಚಾ ರಂಡ ಗಂಗಮ್ಮ , ಶಿಕ್ಷಕ ವೃಂದ ,…

Read More