ಲೇಖಕ: admin

ಚೆಯ್ಯಂಡಾಣೆ ಫೆ.7 NEWS DESK : ಕೇರಳದ ಪಯ್ಯವೂರ್ ಈಶ್ವರ ದೇವಾಲಯದ ವಾರ್ಷಿಕ ಹಬ್ಬವು ಫೆ.12 ರಿಂದ ಫೆ.23ರ ವರೆಗೆ ನಡೆಯಲಿದೆ. ಈ ವಾರ್ಷಿಕ ಹಬ್ಬಕ್ಕೆ ತಕ್ಕ ಮುಖ್ಯಸ್ಥರಾದ ಬೋವ್ವೆರಿಯಂಡ ಮತ್ತು ಮುಂಡಿಯ್ಯೊಳಂಡ ಕುಟುಂಬಸ್ಥರು ಫೆ.10 ರಂದು ಬೆಳಿಗ್ಗೆ ಚೇಲವಾರ, ಕಬ್ಬೆ ಬೆಟ್ಟದ ಮೂಲಕ ಕಾಲು ನಡಿಗೆಯಲ್ಲಿ ಕೇರಳದ ಪಯ್ಯವೂರ್ ಈಶ್ವರ ದೇವಸ್ಥಾನಕ್ಕೆ ಎತ್ತು ಪೋರಾಟ ಮೂಲಕ ಅಕ್ಕಿ ತಲುಪಿಸಲಿದ್ದು, ಸೋಮವಾರ ಬೆಳಿಗ್ಗೆ ಅಕ್ಕಿಯನ್ನು ದೇವರಿಗೆ ಸಮರ್ಪಣೆ ಮಾಡಲಾಗುತ್ತದೆ. ಫೆ.21 ರಂದು ನಾಡಿನ ಭಕ್ತರು ಎತ್ತು ಪೋರಾಟದ ಮೂಲಕ ದೇವರ ಸನ್ನಿಧಾನದಲ್ಲಿ ಅಕ್ಕಿಯನ್ನು ಸಮರ್ಪಣೆ ಮಾಡಲಿದ್ದು, ಅಂದಿನಿಂದ ಎಂಟು, ಒಂಬತ್ತು ಮತ್ತು ಹತ್ತನೇ ಉತ್ಸವವೂ ನಡೆಯಲಿದೆ.  ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ತಕ್ಕ ಮುಖ್ಯಸ್ಥರು ಪ್ರಕಟಣೆಯಲ್ಲಿ ಕೋರಿದ್ದಾರೆ. ವರದಿ : ಅಶ್ರಫ್ 

Read More

ಮಡಿಕೇರಿ ಫೆ.7 NEWS DESK :  ತಾಳತ್ತಮನೆಯ ಶ್ರೀ ದುರ್ಗಾಭಗವತಿ ದೇವಾಲಯದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ನೂತನವಾಗಿ ನಿರ್ಮಾಣಗೊಂಡಿರುವ ಮಹಾಧ್ವಾರದ ಲೋಕಾರ್ಪಣೆ ಕಾರ್ಯಕ್ರಮವು ಫೆ.11 ಮತ್ತು 12 ರಂದು ನಡೆಯಲಿದೆ. ಫೆ.11 ರಂದು ಸಂಜೆ 7 ಗಂಟೆಗೆ ದೀಪಾರಾಧನೆ ಹಾಗೂ ಅನ್ನಸಂತರ್ಪಣೆ ಜರುಗಲಿದೆ. ಫೆ.12 ರಂದು ಬೆಳಿಗ್ಗೆ 10 ಗಂಟೆಗೆ ಮಹಾದ್ವಾರ ಲೋಕಾರ್ಪಣೆಗೊಳ್ಳಲಿದ್ದು, 11 ಗಂಟೆಗೆ ಗಣಪತಿ ಹೋಮ, 12.30 ಗಂಟೆಗೆ ಮಹಾಪೂಜೆ ಹಾಗೂ ಅನ್ನದಾನ ನೆರವೇರಲಿದೆ. ಸಂಜೆ 5.30 ಗಂಟೆಗೆ ರಂಗಪೂಜೆ, 7 ಗಂಟೆಗೆ ಶ್ರೀ ದೇವಿಯ ಉತ್ಸವ ಬಲಿ ನಡೆಯಲಿದೆ. ನಂತರ ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂರ್ಪಣೆ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿ ಕೋರಿದೆ.

Read More

ನವದೆಹಲಿ, ಫೆ.7 NEWS DESK : ಕೇಂದ್ರ ಸರ್ಕಾರ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯದ ವಿರುದ್ಧ ಇಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಹಮ್ಮಿಕೊಂಡಿರುವ ಹೋರಾಟ ಕರ್ನಾಟಕದ , ಕನ್ನಡಿಗರ ಹಿತ ಕಾಪಾಡುವ ಚಳವಳಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಇದು ರಾಜಕೀಯ ಚಳವಳಿ ಅಲ್ಲ ::  ಕಳೆದ ಐದಾರು ವರ್ಷಗಳಲ್ಲಿ 1,87,000 ಕೋಟಿ ರೂ.ಗಳಷ್ಟು ನ್ಯಾಯಯುತವಾಗಿ ಬರಬೇಕಾಗಿದ್ದ ಅನುದಾನವನ್ನು ರಾಜ್ಯಕ್ಕೆ ನೀಡಲಾಗಿಲ್ಲ. ಈ ಅನ್ಯಾಯದ ವಿರುದ್ಧ ಪ್ರತಿಭಟನೆಯನ್ನು ಮಾಡಲಾಗುತ್ತಿದೆ.ಜಂತರ್ ಮಂತರ್ ಐತಿಹಾಸಿಕ ಸ್ಥಳವಾಗಿದ್ದು, ಅನೇಕ ಚಳವಳಿಗೆ ಸಾಕ್ಷಿಯಾದ ಸ್ಥಳ. ಇಂತಹ ಜಾಗದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲ ಸಚಿವರು, ಶಾಸಕರು ಈ ಹೋರಾಟದಲ್ಲಿ ಭಾಗವಹಿಸಿದ್ದಾರೆ. ಇದು ರಾಜಕೀಯ ಚಳವಳಿ ಅಲ್ಲ. ಕೇಂದ್ರ ಸರ್ಕಾರದ ವಿರುದ್ಧದ ಈ ಹೋರಾಟವನ್ನು ಪಕ್ಷಾತೀತವಾಗಿ ಮಾಡಬೇಕೆಂಬ ಮನವಿಯನ್ನು ರಾಜ್ಯ ಬಿಜೆಪಿಯ ನಾಯಕರಿಗೂ ಮಾಡಲಾಗಿದೆ…

Read More

NEWS DESK *ಕೊಡಗು ಜಿಲ್ಲಾ ಬಿಜೆಪಿಗೆ ನೂತನ ಪದಾಧಿಕಾರಿಗಳ ಆಯ್ಕೆ* ಮಡಿಕೇರಿ ಫೆ.7 : ಕೊಡಗು ಜಿಲ್ಲಾ ಬಿಜೆಪಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಪ್ರಧಾನ ಕಾರ್ಯದರ್ಶಿಗಳಾಗಿ ಮಹೇಶ್ ಜೈನಿ, ವಿ.ಕೆ.ಲೋಕೇಶ್, ಚಲನ್ ಕುಮಾರ್ ಹಾಗೂ ಮಹಿಳಾ ಬಿಜೆಪಿ ಜಿಲ್ಲಾಧ್ಯಕ್ಷರನ್ನಾಗಿ ಅನಿತಾ ಪೂವಯ್ಯ ಅವರನ್ನು ನಿಯುಕ್ತಿಗೊಳಿಸಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದ್ದಾರೆ. ಜಿಲ್ಲಾ ವಕ್ತಾರರಾಗಿ ಬಿ.ಕೆ.ಅರುಣ್ ಕುಮಾರ್, ತಳೂರು ಕಿಶೋರ್ ಕುಮಾರ್, ಸುಬ್ರಮಣ್ಯ ಉಪಾಧ್ಯಾಯ, ಉಪಾಧ್ಯಕ್ಷರುಗಳಾಗಿ ಹೆಚ್.ಕೆ.ಮಾದಪ್ಪ, ಅರುಣ್ ಭೀಮಯ್ಯ, ಕಿಲನ್ ಗಣಪತಿ, ಆರ್.ಕೆ.ಚಂದ್ರು, ಭವ್ಯ ಅಪ್ಪಡೇರಂಡ, ಕಾಂಗೀರ ಸತೀಶ್ ಅಶ್ವಿನ್, ಮನು ಮಂಜುನಾಥ್, ಮನು ಕುಮಾರ್ ರೈ, ಕಾರ್ಯದರ್ಶಿಗಳಾಗಿ ಪ್ರಶಾಂತ್ ಭೀಮಯ್ಯ, ಕನ್ನಿಕೆ, ಮಲಚೀರ ಕವಿತ, ಉಮಾ ಪ್ರಭು, ಇಂದಿರಾ ರಮೇಶ್, ಅನಂತ ಕುಮಾರ್, ಜಯವರ್ಧನ, ಬೀನಾ ಬೊಳ್ಳಮ್ಮ, ಕೋಶಾಧಿಕಾರಿಯಾಗಿ ಕನ್ನಂಡ ಸಂಪತ್, ಮಾಧ್ಯಮ ಪ್ರಮುಖ್ ರಾಗಿ ದೀಪಕ್, ಸಜೀಲ್ ಕೃಷ್ಣನ್, ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಸಚಿನ್ ಪೆಮ್ಮಯ್ಯ, ಸಹ ಸಂಚಾಲಕರಾಗಿ ದರ್ಶನ್, ಸಂಪ್ರೀತ್, ಸಾಮಾಜಿಕ…

Read More

ಮಡಿಕೇರಿ ಫೆ.7 NEWS DESK : ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸಹಯೋಗದೊಂದಿಗೆ ಕೊಡಗು ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ‘ಸ್ವಯಂ ಪ್ರೇರಿತ ರಕ್ತದಾನ ಶಿಬಿರ’ ನಡೆಯಿತು. ಜಿಲ್ಲಾ ಪೊಲೀಸ್ ಸಭಾಂಗಣದಲ್ಲಿ  ನಡೆದ ಶಿಬಿರವನ್ನು  ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ರಕ್ತದಾನ ಜೀವನ್ಮರಣ ಹೋರಾಟದಲ್ಲಿರುವವರಿಗೆ ಬದುಕು ನೀಡುವ ಶ್ರೇಷ್ಠ ಕಾರ್ಯ ಎಂದರು. ಶಿಬಿರದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರಾಜ್, ಜಿಲ್ಲಾ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ಕೆ.ಸಿ.ಕರುಂಬಯ್ಯ, ಯೂತ್ ರೆಡ್ ಕ್ರಾಸ್ ನ ಕಾಯ೯ಕ್ರಮ ಅಧಿಕಾರಿ ಡಾ.ಎಂ.ಎಂ.ಪ್ರಕಾಶ್,ಧಾನ ಕಾಯ೯ದಶಿ೯ ಎಚ್.ಆರ್.ಮುರಳೀಧರ್ ಸೇರಿದಂತೆ ಮತ್ತಿತರರು ಹಾಜರಿದ್ದರು. ಶಿಬಿರದಲ್ಲಿ 53 ಮಂದಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರು ರಕ್ತದಾನ ಮಾಡಿದರು.  ರಕ್ತದಾನ ಮಾಡಿದ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ ವಿತರಿಸಲಾಯಿತು.

Read More

ಸೋಮವಾರಪೇಟೆ ಫೆ.7 NEWS DESK : ಕೊಡಗು ಜಿಲ್ಲಾ ಆರೋಗ್ಯ ಮತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ವೈದ್ಯಕೀಯ ವಿಜ್ಞಾನಗಳ ಮಹಾ ವಿದ್ಯಾಲಯ ಮತ್ತು ಬೋಧಕ ಆಸ್ಪತ್ರೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭವ ಅಭಿಯಾನ ಅಡಿಯಲ್ಲಿ ಆರೋಗ್ಯ ಶಿಬಿರ ಮತ್ತು ವಿಶ್ವ ಕ್ಯಾನ್ಸರ್ ದಿನಾಚರಣೆ ನಡೆಯಿತು. ಶಿಬಿರಕ್ಕೆ ಕೊಡಗು ಜಿಲ್ಲಾ ಆರೋಗ್ಯಾಧಿಕಾರಿ ಸತೀಶ್ ಕುಮಾರ್ ಚಾಲನೆ ನೀಡಿದರು. ನಂತರ ಮಾತನಾಡಿ, ಆಯುಷ್ಮಾನ್ ಭವ: ಅಭಿಯಾನದ ಆರೋಗ್ಯ ಶಿಬಿರ ಯೋಜನೆಯಡಿಯಲ್ಲಿ ಸಾರ್ವಜನಿಕರ ಆರೋಗ್ಯ ತಪಾಸಣೆ ಪ್ರತಿ ತಿಂಗಳು ನಡೆಸಲಾಗುತ್ತಿದ್ದು, ಸಾಕಷ್ಟು ಜನರು ಇದರ ಪ್ರಯೋಜನ ಪಡೆಯುತ್ತಿದ್ದಾರೆ ಎಂದರು. ಜನರಲ್ಲಿ ಇಂದಿಗೂ ಕ್ಯಾನ್ಸರ್ ಕಾಯಿಲೆ ಬಗ್ಗೆ ಸರಿಯಾದ ಅರಿವು ಇಲ್ಲದಿರುವುದರಿಂದ ಹೆಚ್ಚಿನ ಜನರು ಸಾವನ್ನಪ್ಪುತ್ತಿದ್ದಾರೆ. ತಮ್ಮ ಜೀವವನ್ನು ತಾವೇ ಕಳೆದುಕೊಳ್ಳುತ್ತಿದ್ದಾರೆ. ಸರ್ಕಾರಿ ಕಾರ್ಯಕ್ರಮ ನಮಗೆ ನಾವೇ ಮಾಡಿಕೊಳ್ಳುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಕ್ಯಾನ್ಸರ್ ಕಾಯಿಲೆ ಮೊದಲ ಮತ್ತು ಎರಡನೇ ಹಂತದಲಿದ್ದ ಸಂದರ್ಭ ಸರಿಯಾದ ಚಿಕಿತ್ಸೆ ಪಡೆದಲ್ಲಿ ಯಾವುದೇ…

Read More

ಸುಂಟಿಕೊಪ್ಪ ಫೆ.7 NEWS DESK :  ಪೊಲೀಸ್ ಇಲಾಖೆಯಿಂದ ಸರಕಾರಿ ಪ್ರೌಢ ಶಾಲಾ ಮಕ್ಕಳಿಗೆ ಸುಂಟಿಕೊಪ್ಪ ಜೆಸಿಐ ಸಂಸ್ಥೆ ವತಿಯಿಂದ ಕಾನೂನು ಮಾಹಿತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕುಶಾಲನಗರ ಡಿವೈಎಸ್ಪಿ ಗಂಗಾದರಪ್ಪ ಅವರು ಮಾತನಾಡಿ, ಮಕ್ಕಳು ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಅರಿತುಕೊಂಡು ಪಾಲಿಸುವುದು ಮುಖ್ಯವೆಂದರು. ಪ್ರತಿಯೊಬ್ಬರೂ ರಸ್ತೆ ಸಂಚಾರ ನಿಯಮಗಳನ್ನು ಅಪಘಾತಗಳನ್ನು ತಡೆಗಟ್ಟಲು ಸಾಧ್ಯವೆಂದರು. ರಸ್ತೆ ಸಂಚಾರ ನಿಯಮವನ್ನು ಉಲ್ಲಂಘಿಸಿದ್ದಾಗ ಅಪಘಾತಗಳು ಸಂಭವಿಸುತ್ತದೆ. ರಸ್ತೆ ಅಪಘಾತದಲ್ಲಿ ಅಧಿಕ ಮಂದಿ ಮೃತಪಟ್ಟಿದ್ದಾರೆ. ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಸಾರಿಗೆ ಮತ್ತು ಪೊಲೀಸ್ ಇಲಾಖೆ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ವಾಹನ ಸಂಚಾರ ಮಾಡುವಾಗ ಹೆಚ್ಚಿನ ಜಾಗೃತೆ ವಹಿಸಬೇಕು. ಮಕ್ಕಳು ಮನೆಯಿಂದ ಶಾಲೆಗೆ ಮತ್ತು ಶಾಲೆಯಿಂದ ಮನೆಗೆ ತೆರಳುವ ಸಂದರ್ಭ ರಸ್ತೆ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಸಲಹೆ ನೀಡಿದರು. ದ್ವಿಚಕ್ರ ವಾಹನ ಚಾಲಕರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ವಾಹನಗಳನ್ನು ಚಾಲನೆ ಮಾಡುವ ವೇಳೆ ಮೊಬೈಲ್‍ನಲ್ಲಿ ಮಾತನಾಡಬಾರದು. ಕಾರುಚಾಲಕರು ಸೀಟು ಬೆಲ್ಟ್ ಧರಿಸಬೇಕು.…

Read More

ಮಡಿಕೇರಿ ಫೆ.6 NEWS DESK : ಕುಶಾಲನಗರದ ದ್ವಿಚಕ್ರ ವಾಹನದ ಶೋರೂಂ ನಲ್ಲಿ ನಡೆದ ಕಲಹದಲ್ಲಿ ಕತ್ತರಿಯಿಂದ ಇರಿತಕ್ಕೊಳಗಾಗದ ಯುವಕನೊಬ್ಬ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಮಡಿಕೇರಿ ನಗರದ ಗಣಪತಿ ಬೀದಿ ನಿವಾಸಿ ಸಾಜಿದ್ (22) ಮೃತಪಟ್ಟ ಯುವಕನಾಗಿದ್ದಾನೆ. ಕತ್ತರಿಯಿಂದ ಹಲ್ಲೆ ನಡೆಸಿದ ಆರೋಪದಡಿ ಶೋರೂಂ ಮಾಲೀಕ ಶ್ರೀನಿಧಿ ಹಾಗೂ ಬೆಂಬಲ ನೀಡಿದ ಆರೋಪದಡಿ ಆತನ ಸ್ನೇಹಿತ ಅಲೀಂ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ದ್ವಿಚಕ್ರ ವಾಹನದ ಸರ್ವಿಸ್ ಗೆಂದು ಫೆ.5 ರಂದು ತನ್ನ ಇಬ್ಬರು ಸ್ನೇಹಿತರೊಂದಿಗೆ ಸಾಜಿದ್ ಕುಶಾಲನಗರದ ಶೋರೂಂ ಗೆ ತೆರಳಿದ್ದಾಗ ಘಟನೆ ನಡೆದಿದೆ. ಶೋರೂಂ ಮಾಲೀಕ ಶ್ರೀನಿಧಿಯ ಕುರ್ಚಿಯಲ್ಲಿ ಸಾಜಿದ್ ಕುಳಿತ್ತಿದ್ದ ಎನ್ನುವ ಕಾರಣಕ್ಕೆ ಏರ್ಪಟ್ಟ ಕಲಹ ತಾರಕಕ್ಕೇರಿದೆ. ಈ ಸಂದರ್ಭ ಶ್ರೀನಿಧಿ ಕತ್ತರಿಯಿಂದ ಸಾಜಿದ್ ಗೆ ಇರಿದಿದ್ದಾನೆ ಎಂದು ಆರೋಪಿಸಲಾಗಿದೆ. ಗಾಯಗೊಂಡ ಸಾಜಿದ್ ನನ್ನು ಕುಶಾಲನಗರ ಆಸ್ಪತ್ರೆಯಿಂದ ಮೈಸೂರು ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ತಕ್ಷಣ ಕಾರ್ಯಪ್ರವೃತ್ತರಾದ ಕುಶಾಲನಗರ ಪೊಲೀಸರು…

Read More

ಮಡಿಕೇರಿ ಫೆ.6 NEWS DESK : ಗೋಣಿಕೋಪ್ಪಲಿನ ಕಾವೇರಿ ಕಾಲೇಜಿನಲ್ಲಿ ಫೆ.25 ರಂದು ಬೆಳಗ್ಗೆ 8 ಗಂಟೆಯಿಂದ ಮುಖ್ಯಾಲಯ ಕರ್ನಾಟಕ ಮತ್ತು ಕೇರಳ ಸಬ್ ಏರಿಯಾ ಬೆಂಗಳೂರು ಇವರ ವತಿಯಿಂದ ಮಾಜಿ ಸ್ಯೆನಿಕರ ರ‍್ಯಾಲಿ ನಡೆಯಲಿದೆ. ಕೊಡಗು ಜಿಲ್ಲೆಯ ಎಲ್ಲಾ ಮಾಜಿ ಸ್ಯೆನಿಕರು ಮತ್ತು ಅವರ ಅವಲಂಬಿತರು ಕುಂದುಕೊರತೆಗಳು ಹಾಗೂ ಇತರೆ ಪಿಂಚಣಿ ಸಂಬಂಧಿತ ಸಮಸ್ಯೆಗಳ ಪರಿಹಾರಕ್ಕಾಗಿ ತಮ್ಮ ಮೂಲ ಸೇನಾ ದಾಖಲಾತಿಗಳೂಂದಿಗೆ ಆಧಾರ್ ಕಾರ್ಡ್, ಪಿಂಚಣಿ ಪಡೆಯುತ್ತಿರುವ ಬ್ಯಾಂಕ್ ಖಾತೆಯ ಪಾಸ್ ಪುಸ್ತಕ, ಪಾನ್ ಕಾರ್ಡ ಹಾಗೂ ಬ್ಯಾಂಕ್ ಖಾತೆ, ಸ್ಪರ್ಶ್, ಮತ್ತು ಆಧಾರ್‍ಗೆ ನೋಂದಣಿಯಾದ ಮೊಬ್ಯೆಲ್ ಸಂಖ್ಯೆ ಹಾಗೂ ಎಲ್ಲಾ ದಾಖಲಾತಿಗಳ ನೆರಳಚ್ಚು ಪ್ರತಿಗಳೊಂದಿಗೆ ಫೆ.16 ರೊಳಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಮುಖ್ಯ ರಸ್ತೆ, ಮಡಿಕೇರಿ ಇವರಲ್ಲಿ ತಮ್ಮ ತಮ್ಮ ಕುಂದುಕೂರತೆಗಳನ್ನು ನೋಂದಾಯಿಸಿಕೊಳ್ಳಬೇಕು. ತಮ್ಮ ಎಲ್ಲಾ ದಾಖಲಾತಿಗಳನ್ನು ರ್ಯಾಲಿಯ ದಿನದಂದು ತರುವುದು. ಕೊಡಗು ಜಿಲ್ಲೆಯ ಎಲ್ಲಾ ಮಾಜಿ ಸ್ಯೆನಿಕರು ಮತ್ತು ಅವರ ಅವಲಂಬಿತರು ಇದರ ಸದುಪಯೂಗ…

Read More

ಮಡಿಕೇರಿ ಫೆ.6 NEWS DESK : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆ ಮಡಿಕೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಡಿಕೇರಿ, ತಾಲ್ಲೂಕು ಆರೋಗ್ಯಧಿಕಾರಿಗಳ ಕಚೇರಿ ಸೋಮವಾರಪೇಟೆ, ಸಾರ್ವಜನಿಕ ಆಸ್ಪತ್ರೆ ಸಂಯುಕ್ತ ಆಶ್ರಯದಲ್ಲಿ ಸೋಮವಾರಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಈ ಶಿಬಿರದಲ್ಲಿ ಸಾಮಾನ್ಯ ವೈದ್ಯಶಾಸ್ತ್ರ, ಶಸ್ತ್ರ ಚಿಕಿತ್ಸೆ, ನೇತ್ರ ವಿಭಾಗ, ಪ್ರಸೂತಿ ಮತ್ತು ಸ್ತ್ರೀ ರೋಗ, ಮಕ್ಕಳ, ಚರ್ಮ ರೋಗ, ಕಿವಿ ಮೂಗು ಗಂಟಲು, ಮೂಳೆ ಮತ್ತು ಕೀಲು, ಸಮುದಾಯ ವ್ಯೆದ್ಯಕೀಯ, ದಂತ, ಮಾನಸಿಕ ರೋಗ, ಅಸಾಂಕ್ರಾಮಿಕ ರೋಗಗಳ ನುರಿತ ತಜ್ಞ ವ್ಯೆದ್ಯರು ವೈದ್ಯಕೀಯ ಸೇವೆಯನ್ನು ನೀಡಲಾಯಿತು. ಈ ಶಿಬಿರದಲ್ಲಿ ಸುಮಾರು 300 ಕ್ಕಿಂತ ಹೆಚ್ಚು ಹೊರ ರೋಗಿಗಳ ವ್ಯೆದ್ಯರ ಭೇಟಿ, 6 ಯುಡಿಐಡಿ ಕಾರ್ಡ್ ಗಳು, 100 ಕ್ಕಿಂತ ಹೆಚ್ಚಿನ ಜನರು ಅಸಾಂಕ್ರಾಮಿಕ ರೋಗಗಳ ಪರೀಕ್ಷೆಯನ್ನು ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಕಲ್ಪಿಸಿಕೊಡಲಾಯಿತು ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ವ್ಯೆದ್ಯಕೀಯ ಕಾಲೇಜು ಮಡಿಕೇರಿಗೆ…

Read More