ಲೇಖಕ: admin

ದಾದರ್ (ಹೆಬ್ಬಾಲೆ) NEWS DESK : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮಹಾಪರಿನಿರ್ವಾಣ ದಿನದ ಅಂಗವಾಗಿ ಮುಂಬೈನ ದಾದರ್ ನ ಚೈತ್ಯ ಭೂಮಿಗೆ ದೇಶ ವಿವಿಧೆಡೆಯಿಂದ ಜನ ಸಾಗರವೇ ಹರಿದು ಬಂದಿತು.  ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುಣ್ಯತಿಥಿಯನ್ನು ಮಹಾಪರಿನಿರ್ವಾಣ ದಿವಸ್ ಎಂದು ಆಚರಿಸಲಾಗುತ್ತದೆ. ಅವರಿಗೆ ಗೌರವ ಸಲ್ಲಿಸಲು ಲಕ್ಷಾಂತರ ಜನರು ಪ್ರತಿ ವರ್ಷ ದಾದರ್ ನಲ್ಲಿ ಸೇರುತ್ತಾರೆ. ಮತ್ತು ಅನೇಕರು ದಾದರ್‌ನ ಚೈತ್ಯ ಭೂಮಿಗೆ “ಜೈ ಭೀಮ್” ಜೈ ಭೀಮ್ ಎಂದು ಕೂಗುತ್ತಾ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುತ್ತಾರೆ. ಶ್ವೇತ ವರ್ಣದ ವಸ್ತ್ರ ಹಾಗೂ ನೀಲಿ ಬಣ್ಣ ಟವಲ್ ಅನ್ನು ಧರಿಸಿಕೊಂಡು ಆಗಮಿಸಿದ್ದ ಅಭಿಮಾನಿಗಳು ಅಂಬೇಡ್ಕರ್ ಅಮರ್ ಹೇ,ಜೈ ಜೈ ಭೀಮ್, ಬಾಬಾ ಸಹೇಬ್ ಕೀ ಜೈ ಎಂಬಿತ್ಯಾದಿ ಘೋಷಣೆಗಳನ್ನು ಕೂಗುತ್ತಾ ಹತ್ತಾರು ಕಿಲೋಮೀಟರ್ ಉದ್ದದ ಸರದಿ ಸಾಲಿನಲ್ಲಿ ಬಂದು ಅಂಬೇಡ್ಕರ್ ಸಮಾಧಿ ವೀಕ್ಷಣೆ ಮಾಡಿ ಗೌರವ ಸಲ್ಲಿಸಿದರು. ಮಹಾಪರಿನಿರ್ವಾಣ ದಿವಸ್ ಅವರ ಅಸಾಧಾರಣ ಕೊಡುಗೆಗಳನ್ನು ಗೌರವಿಸುವ ಮತ್ತು ನ್ಯಾಯಯುತ ಮತ್ತು…

Read More

ಕುಶಾಲನಗರ ಡಿ.8 NEWS DESK : ಕೊಡಗು ಜಿಲ್ಲೆಯ ಅರೆಸೇನಾಪಡೆ ನಿವೃತ್ತ ಯೋಧರ ಒಕ್ಕೂಟದ ವತಿಯಿಂದ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡರನ್ನು ಕುಶಾಲನಗರದ ಪುರಸಭೆಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಕಳೆದ 13 ವರ್ಷಗಳಿಂದ ಮಡಿಕೇರಿಯ ಮಹದೇವಪೇಟೆಯಲ್ಲಿ ಖಾಸಗಿ ಕಟ್ಟಡದಲ್ಲಿ ವರ್ಷಕ್ಕೆ 50 ಸಾವಿರ ಬಾಡಿಗೆಯಲ್ಲಿ ಕಚೇರಿ ಕಾರ್ಯ ನಿರ್ವಹಿಸುತ್ತಿದೆ. ಜಿಲ್ಲೆಯಲ್ಲಿ ಅರೆಸೇನಾಪಡೆಗೆ ಸೇರಿದ ಹಾಲಿ ಮತ್ತು ಮಾಜಿ 4000 ಯೋಧರಿದ್ದೇವೆ. ನಮ್ಮಲ್ಲಿ ವಯಸ್ಸಾದ ನಿವೃತ್ತ ಯೋಧರು ಹೆಚ್ಚಿನ ಸಂಖ್ಯೆಯಲ್ಲಿದ್ದು ಕೆಲವರು ವಯೋಸಹವಾಗಿ ಸಾವನ್ನಪ್ಪುತ್ತಿದ್ದಾರೆ.  ಅವರಿಗೆ ಮರಣ ನಿಧಿ ಕೊಡಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕುಶಾಲನಗರದ ಮುಳ್ಳುಸೋಗೆಯ ಸರ್ವೆ ನಂಬರ್ 11/01 ರಲ್ಲಿ ಇರುವ 60 ಸೆಂಟು ಜಾಗವನ್ನು ಅರೆಸೇನಾಪಡೆ ಯೋಧರ ಒಕ್ಕೂಟಕ್ಕೆ ನೀಡುವ ಮೂಲಕ ಭವನ ಕಟ್ಟಿಕೊಳ್ಳಲು ಸರ್ಕಾರದಿಂದ ಜಾಗ ಹಾಗೂ ಸೂಕ್ತ ಅನುದಾನ ಒದಗಿಸಿಕೊಡಬೇಕು.  ಹಾಗಾದಲ್ಲಿ ವರ್ಷಕ್ಕೊಮ್ಮೆ ಪಾವತಿಸುವ ಬಾಡಿಗೆ ಹಣ ಉಳಿತಾಯವಾದರೆ, ಮಾಜಿ ಯೋಧರ ಕುಟುಂಬಗಳಿಗೆ ನೆರವು ನೀಡಲು ಅನುವಾಗಲಿದೆ ಎಂದು ಮನವಿ ಪತ್ರದ ಮೂಲಕ ಶಾಸಕರಲ್ಲಿ…

Read More

ಕುಶಾಲನಗರ ಡಿ.8 NEWS DESK : ಅತ್ತೂರು ಜ್ಞಾನಗಂಗಾ ವಸತಿ ಶಾಲೆಯಲ್ಲಿ ಎರಡು ದಿನಗಳ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವಾರ್ಷಿಕ ಶಿಬಿರ ನಡೆಯಿತು. ಕೊಡಗು ಜಿಲ್ಲಾ ಹಾಗೂ ಕುಶಾಲನಗರ ತಾಲ್ಲೂಕು ಸಮಿತಿಗಳ ವತಿಯಿಂದ ನಡೆದ ಶಿಬಿರವನ್ನು ಸ್ಕೌಟ್ಸ್ ಜಿಲ್ಲಾ ಆಯುಕ್ತರಾದ ಜಿಮ್ಮಿ ಸಿಕ್ವೇರಾ ಧ್ವಜಾರೋಹಣ ನೆರವೇರಿಸಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಗಳ ಕಾರ್ಯಚಟುವಟಿಕೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಈ ಸಂದರ್ಭ ಜ್ಞಾನಗಂಗಾ ಶಾಲೆಯ ಕಾರ್ಯದರ್ಶಿ ಬಿ.ಎಸ್.ನಿಂಗಪ್ಪ, ಪ್ರಾಂಶುಪಾಲೆ ಸತ್ಯ ಸುಲೋಚನಾ, ಸ್ಕೌಟ್ಸ್ ತರಬೇತುದಾರ ಕೆ.ಯು.ರಂಜಿತ್, ಜಿಲ್ಲಾ ಸಂಘಟನಾ ಆಯುಕ್ತೆ ಯು.ಸಿ.ದಮಯಂತಿ, ಸಿ.ಎಂ. ಸುಲೋಚನಾ, ಕೆ.ಬಿ.ಗಣೇಶ್, ಎಂ.ಎಸ್.ಗಣೇಶ್, ಡಿ.ವಿ.ಗಣೇಶ್ ಇದ್ದರು.

Read More

ಕಾರ್ಕಳ ಡಿ.8 NEWS DESK : ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಾರ್ಷಿಕೋತ್ಸವ ಆವಿರ್ಭವವು “ಸಿಂದೂರ ಸಂಭ್ರಮ” ಪರಿಕಲ್ಪನೆಯಲ್ಲಿ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಾ. ಜಿ.ರಾಮಕೃಷ್ಣ ಆಚಾರ್, ಸ್ಥಾಪಕರು, ಎಸ್. ಕೆ.ಎಫ್ ಎಲಿಕ್ಸರ್ ಇಂಡಿಯಾ ಮತ್ತು ಸಂಜೀವಿನಿ ಗೋಧಾಮ ಮುನಿಯಾಲು ಅವರು ಮಾತನಾಡಿ’ ಕಾಲೇಜುಗಳು ಬರಿಯ ಪಠ್ಯದ ಅಭ್ಯಾಸ ನೀಡುವ ಸ್ಥಳವಲ್ಲ. ವಿದ್ಯಾರ್ಥಿಗಳ ಸಾಮಥ್ರ್ಯವನ್ನೆತ್ತಿ ಹಿಡಿಯುವ ವೇದಿಕೆಗಳಾಗಬೇಕು. ಅಂತಹ ವೇದಿಕೆಗಳನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಿ ಕೊಡುತ್ತಿರುವ ಕ್ರಿಯೇಟಿವ್ ಕಾಲೇಜಿನ ಬಗ್ಗೆ ಶ್ಲಾಘನೆಯನ್ನು ವ್ಯಕ್ತಪಡಿಸಿದರು. ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿ.ಸುನಿಲ್ ಕುಮಾರ್, ವಿಶ್ರಾಂತ ಪ್ರಾಚಾರ್ಯರಾದ ಕೆ.ಗುಣಪಾಲ್ ಕಡಂಬ, ಖ್ಯಾತ ನಟ ಶನಿಲ್ ಗೌತಮ್ ಇವರು ತಮ್ಮ ಮಾತುಗಳಲ್ಲಿ ಪ್ರತಿಭೆಗಳನ್ನು ಗುರುತಿಸಿ ಬೆಳೆಸುವಂತಹ ಕಾರ್ಯಕ್ರಮಗಳನ್ನು ಕಾಲೇಜು ಕೈಗೊಂಡಿರುವ ಬಗ್ಗೆ ಶ್ಲಾಘಿಸಿದರು. ಕ್ರಿಯೇಟಿವ್ ಯಕ್ಷಾರಾಧನಮ್ ಹವ್ಯಾಸಿ ಕಲಾವಿದರಿಂದ ‘ಶ್ರೀರಾಮಾನುಗ್ರಹ ಸಿಂದೂರ ವಿಜಯ’ ಯಕ್ಷಗಾನ ಪ್ರದರ್ಶನ ನಡೆಯಿತು.  ದಿ. ಎಚ್.ಎಸ್ ವೆಂಕಟೇಶಮೂರ್ತಿಯವರ  ಸವಿ ನೆನಪಿನ ಕುರಿತ ‘ಭಾವ ನಮನ’ ಭಾವಗೀತೆಗಳ ಗಾಯನ ಕಾರ್ಯಕ್ರಮ ನಡೆಯಿತು. ಅಂತಾರಾಷ್ಟ್ರೀಯ…

Read More

ಮಡಿಕೇರಿ ಡಿ.8 NEWS DESK : ಹೆರವನಾಡು ಗ್ರಾಮದ ಕೆಟೋಳಿ ಮೋಹನರಾಜ್ ಎಂಬವರ ಮನೆಯ ಅಂಗಳದಲ್ಲಿದ್ದ  6 ಅಡಿ ಉದ್ದದ  ನಾಗರ ಹಾವನ್ನು ಉರಗ ಪ್ರೇಮಿ ಪಿಯೂಷ್ ಪೆರೇರ ರಕ್ಷಿಸಿ ಅರಣ್ಯಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರೆ.

Read More

ನಾಪೋಕ್ಲು  ಡಿ.8 NEWS DESK : `ಇಗ್ಗುತ್ತಪ್ಪ ದೇವಡ ಪುತ್ತರಿ ನಮ್ಮೆ ಪೊಯಿಲೆ ಪೊಯಿಲೆ’ ಘೋಷಣೆಯೊಂದಿಗೆ ಸಮೀಪದ ಬಿದ್ದಾಟಂಡ ವಾಡೆಯ ಐತಿಹಾಸಿಕ ನೂರಂಬಡ ನಾಡ್ಮಂದ್ನಲ್ಲಿ ಭಾನುವಾರ ಹುತ್ತರಿ ಹಬ್ಬದ ಪ್ರಯುಕ್ತ ಸಾಂಪ್ರದಾಯಿಕ ಹುತ್ತರಿ ಕೋಲಾಟದ ಕಾರ್ಯಕ್ರಮ ನಡೆಯಿತು. ಬೇತು ಗ್ರಾಮದ ಇತಿಹಾಸ ಪ್ರಸಿದ್ದ ಮಕ್ಕಿ ಶ್ರೀ ಶಾಸ್ತಾವು ದೇವಾಲಯದಿಂದ ಊರಿನ ಮುಖ್ಯಸ್ಥರು ದೇವರ ಕೋಲು, ವಸ್ತ್ರ ಹಾಗೂ ಬೆಳ್ಳಿಯ ಕಡತಲೆ (ಖಡ್ಗ) ದೊಂದಿಗೆ ಸಾಂಪ್ರದಾಯಿಕ ಕಾಪಳ ಕಳಿ ಕೊಂಬು ಕೊಟ್ಟು ವಾಲಗ, ದುಡಿಕೊಟ್ಟ್ ಪಾಟ್ನೊಂದಿಗೆ ಬೇತು ಗ್ರಾಮದ “ಕುರುಂಬರಾಟ್” ಎಂಬಲ್ಲಿ ವಿಶ್ರಾಂತಿ ಪಡೆದು ಬಳಿಕ ಬಿದ್ದಾಟಂಡ ವಾಡೆಗೆ ಗ್ರಾಮಸ್ಥರು ಮೆರವಣಿಗೆಯಲ್ಲಿ ಆಗಮಿಸಿದ್ದರು. ಈ ಸಂದರ್ಭ ನೂರಂಬಡ ಮಂದ್ನಲ್ಲಿ ಬಿದ್ದಾಟಂಡ ಕುಟುಂಬದ ತಕ್ಕಮುಖ್ಯಸ್ಥರು ಸಾಂಪ್ರದಾಯಿಕ ಉಡುಪು ಬಿಳಿ ಕುಪ್ಪಸ ಧರಿಸಿ ಶ್ರೀ ಮಹದೇವರ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಸಂಪ್ರದಾಯದ0ತೆ ದೇವರ ತಿರುವಭರಣ ಕೋಲನ್ನು ಬರಮಾಡಿಕೊಂಡರು. ಅದರಂತೆ ನಾಪೋಕ್ಲು  ಗ್ರಾಮದವರು ದುಡಿಕೊಟ್ಟ್ ಪಾಟ್‍ಆಗಿ ವಾಡೆಗೆ ಆಗಮಿಸಿದ್ದರು. ಹಾಗೇನೆ ಕೊಳಕೇರಿಯ ಗ್ರಾಮಸ್ಥರು ಬರುತ್ತಿದ್ದಂತೆ ಅವರನ್ನು…

Read More

ಬೆಂಗಳೂರು NEWS DESK ಡಿ.7 : ಬೆಂಗಳೂರಿನ ಪ್ರತಿಷ್ಠಿತ ಕಾನೂನು ಸಂಸ್ಥೆಯಾದ ಎ.ಕೆ.ಎಸ್ ಲೀಗಲ್ ಹಾಗೂ ರೇ ಸಂಸ್ಥೆಯು ಜಂಟಿಯಾಗಿ ಆಯೋಜಿಸಿದ, “ಕಾನೂನು ಸಂಸ್ಥೆಗಳ ನಡುವಿನ ಫುಟ್ಬಾಲ್ ಪಂದ್ಯಾಟ” ಬೆಂಗಳೂರಿನಲ್ಲಿ ನಡೆಯಿತು. ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಜಸ್ಟಿಸ್ ಅರವಿಂದ್ ಕುಮಾರ್ ಪಂದ್ಯಾಟವನ್ನು ಉದ್ಘಾಟಿಸಿದರು. ಸುಮಾರು 40ಕ್ಕೂ ಅಧಿಕ ಕಾನೂನು ಸಂಸ್ಥೆಗಳು ಈ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದವು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಮಾತನಾಡಿ ಪಂದ್ಯಾಟವು ವಕೀಲರಿಗೆ ಹಬ್ಬದ ವಾತಾವರಣ ನಿರ್ಮಿಸಿದ್ದು, ಹಳೆ ಸ್ನೇಹಿತರ ಸಮ್ಮಿಲನ ಹಾಗೂ ಹೊಸಬರ ಪರಿಚಯಕ್ಕೆ ವೇದಿಕೆಯಾಗಿದೆ ಎಂದರು. ಪತ್ನಿ ಕಾಂಚನ್ ಪೊನ್ನಣ್ಣ ಮತ್ತಿತರರು ಉಪಸ್ಥಿತರಿದ್ದರು.

Read More

ಮಡಿಕೇರಿ NEWS DESK ಡಿ.7 : ಜಿಲ್ಲಾಡಳಿತ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯು ಭಾನುವಾರ ಜರುಗಿತು. ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಆವರಣದಲ್ಲಿನ ಯುದ್ಧ ಸ್ಮಾರಕಕ್ಕೆ ಮೇಜರ್ ಜನರಲ್ ಕಾಳೆಂಗಡ ಸಿ. ಕಾರ್ಯಪ್ಪ (ನಿವೃತ್ತ), ಏರ್ ಮಾರ್ಷಲ್ ನಂದಾ ಕಾರ್ಯಪ್ಪ(ನಿ), ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್, ಗ್ರೂಪ್ ಕ್ಯಾಪ್ಟನ್ ಮನು ಭೀಮಯ್ಯ(ನಿ), ಏರ್ ಕಮಾಂಡರ್ ದೇವಯ್ಯ(ನಿ), ಲೆ.ಕರ್ನಲ್ ಕಾವೇರಪ್ಪ(ನಿ), ಕರ್ನಲ್ ನಾಚಪ್ಪ (ನಿ),  ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಬಿ.ಆರ್.ಶೆಟ್ಟಿ, ಜಿಲ್ಲಾ ಖಜಾನಾಧಿಕಾರಿ ರಘುನಾಥ್, ನಿವೃತ್ತ ಸೈನಾಧಿಕಾರಿಗಳು, ಎನ್‍ಸಿಸಿ ವಿದ್ಯಾರ್ಥಿಗಳು ಇತರರು ಯುದ್ಧ ಸ್ಮಾರಕಕ್ಕೆ  ಪುಷ್ಪ ಗುಚ್ಛವಿರಿಸಿ, ಗೌರವಪ ನಮನ ಸಲ್ಲಿಸಿದರು. ಕರ್ತವ್ಯ ಪಾಲನೆ ಸಂದರ್ಭದಲ್ಲಿ ವೀರ ಮರಣವನ್ನಪ್ಪಿದ ಯೋಧರ ಸ್ಮರಣಾರ್ಥ ಎರಡು ನಿಮಿಷಗಳ ಕಾಲ ಮೌನಾಚರಿಸಲಾಯಿತು. ಪೊಲೀಸ್ ತಂಡದವರು ಮೂರು ಸುತ್ತು ಕುಶಾಲತೋಪು ಹಾರಿಸಿ ಗೌರವ ವಂದನೆ ಸಲ್ಲಿಸಿದರು. ಮೇ‌.ಜ.…

Read More

ಮಡಿಕೇರಿ NEWS DESK ಡಿ.7 : ಸರ್ವರಲ್ಲೂ ಹಿತವನ್ನು ಬಯಸುವ ವಿಪ್ರ ಸಮಾಜವು ತನ್ನ ಪಾರಂಪರಿಕವಾದ ಪೂಜಾ ಕಾರ್ಯಗಳಿಗಷ್ಟೆ ಸೀಮಿತವಾಗದೆ ಸಮಾಜದ ಎಲ್ಲಾ ಕ್ಷೇತ್ರಗಳಲ್ಲು ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಹಿರಿಯ ಪತ್ರಕರ್ತ ಬಿ.ಜಿ.ಅನಂತಶಯನ ಕರೆ ನೀಡಿದ್ದಾರೆ. ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ವತಿಯಿಂದ ತಾಲ್ಲೂಕು ಸಂಘಗಳ ಸಹಯೋಗದೊಂದಿಗೆ ನಗರದ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ವಿಪ್ರ ಬಾಂಧವರಿಗಾಗಿ ನಡೆದ ‘ವಿಪ್ರ ಕ್ರೀಡೋತ್ಸವ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರ್ವರಲ್ಲೂ ಒಳಿತನ್ನು ಬಯಸುವ ಬ್ರಾಹ್ಮಣ ಸಮೂಹದ ಸರ್ವರೂ ಒಂದಾಗಿ, ಸಂಘಟಿತರಾಗುವ ಅವಶ್ಯಕತೆ ಇದೆ. ಇದಕ್ಕೆ ಸಮಾಜದ ಎಲ್ಲರ ಸಹಕಾರ ಅತ್ಯವಶ್ಯವೆಂದು ಅಭಿಪ್ರಾಯಿಸಿದ ಅವರು, ಈ ನಿಟ್ಟಿನಲ್ಲಿ ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ಸದಸ್ಯತ್ವವನ್ನು ಸಮಾಜದ ಪ್ರತಿಯೊಬ್ಬರು ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಕೊಡಗು ಜಿಲ್ಲಾ ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ಅಧ್ಯಕ್ಷರಾದ ರಾಮಚಂದ್ರ ಮೂಗೂರು ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲಾ ವ್ಯಾಪ್ತಿಯಲ್ಲಿರುವ ಬ್ರಾಹ್ಮಣ ಸಮಾಜ ಬಾಂಧವರನ್ನು ಒಂದಾಗಿ ಬೆಸೆಯುವ ಮತ್ತು ಯುವ ಸಮೂಹದಲ್ಲಿನ ಕ್ರೀಡಾ ಪ್ರತಿಭೆಯನ್ನು ಗುರುತಿಸಿ ಉತ್ತೇಜಿಸುವ ನಿಟ್ಟಿನಲ್ಲಿ…

Read More

ಮಡಿಕೇರಿ NEWS DESK ಡಿ.7 : ಕೊಡಗಿನ ಸುಗ್ಗಿ ಹಬ್ಬ ಪುತ್ತರಿಯ ಹಿನ್ನೆಲೆಯಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದೇವಟ್ ಪರಂಬುವಿನ ಕೊಡವರ ನರಮೇಧದ ಸ್ಮಾರಕ ಸ್ಥಳದಲ್ಲಿ ಪುಷ್ಪ ನಮನ ಸಲ್ಲಿಸಿತು. ಪುತ್ತರಿ ದಿನ ಕೊಯ್ಲು ಮಾಡಿದ ಕದಿರನ್ನು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಪಟ್ಟಮಾಡ ಕುಶ, ಮಂದಪಂಡ ಮನೋಜ್ ಹಾಗೂ ನಂದೇಟಿರ ಮೋಹನ್ ಸುಬ್ಬಯ್ಯ ಅವರುಗಳು ಸ್ಮಾರಕಗಳಿಗೆ ಕಟ್ಟಿ ಪುಷ್ಪ ನಮನ ಸಲ್ಲಿಸಿದರು. ನಂತರ ಮಾತನಾಡಿದ ಎನ್.ಯು.ನಾಚಪ್ಪ ಅವರು ಹಿರಿಯರಿಗೆ ಗೌರವ ಅರ್ಪಿಸಿ ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವ ಸಮುದಾಯದ ಪರವಾದ ಸಿಎನ್‌ಸಿಯ ಹೋರಾಟಕ್ಕೆ ಬೆಂಬಲ ಕೋರಲಾಯಿತು ಎಂದರು.

Read More