ಮಡಿಕೇರಿ ಫೆ.5 NEWS DESK : ಜಿಲ್ಲೆಯಲ್ಲಿ ಹಲವು ದಶಕಗಳಿಂದ ಜಮ್ಮಾಬಾಣೆ ಭೂಮಿ ಸರ್ವೆ ಮಾಡಲು ಬಾಕಿ ಇದ್ದು, ಆ ನಿಟ್ಟಿನಲ್ಲಿ ಸಾಗುವಳಿ ಮಾಡುವವರಿಗೆ ಆರ್ಟಿಸಿ(ಪಹಣಿ) ಮಾಡಿಕೊಡಲು ಮುಂದಾಗಿದ್ದು, ಆ ನಿಟ್ಟಿನಲ್ಲಿ ಅಧಿಕಾರಿಗಳು ಸರ್ವೆ ಕಾರ್ಯ ಕೈಗೊಳ್ಳಲು ಮುಂದಾಗುವಂತೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಸೂಚಿಸಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಹಲವು ಮಹತ್ವದ ವಿಷಯಗಳ ಕುರಿತು ಸುದೀರ್ಘವಾಗಿ ಸೋಮವಾರ ಪ್ರಗತಿ ಪರಿಶೀಲನೆ ನಡೆಸಿದರು. `ಜಮ್ಮಾ ಭೂಮಿ ಹಿಡುವಳಿದಾರರಿಗೆ ಆರ್ಟಿಸಿ ಇಲ್ಲದಿರುವುದರಿಂದ ಸಾಲ ಸೌಲಭ್ಯ ಹಾಗೂ ಸರ್ಕಾರದ ಸೌಲಭ್ಯ ಪಡೆಯಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕೃಷಿ ಮಾಡುವ ಕುಟುಂಬದವರಿಗೆ ಆರ್ಟಿಸಿ ಮಾಡಿಕೊಡಬೇಕಿದ್ದು, ಆ ನಿಟ್ಟಿನಲ್ಲಿ ಸರ್ವೇ ಕಾರ್ಯವನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು.’ `ಕೊಡಗು ಜಿಲ್ಲೆಯಲ್ಲಿ 25 ಸಾವಿರ ಜನರು ಜಮ್ಮಬಾಣೆ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದು, ಪಟ್ಟೆದಾರ ಕುಟುಂಬದ ಒಬ್ಬರ ಹೆಸರಿಗೆ ಮಾತ್ರ ಭೂಮಿ ಇದ್ದು, ಆ ಕುಟುಂಬದ ಇತರರಿಗೂ ಆರ್ಟಿಸಿ ಮಾಡಬೇಕಿದೆ. ಆ ನಿಟ್ಟಿನಲ್ಲಿ ಸರ್ವೇ…
ಲೇಖಕ: admin
ಸೋಮವಾರಪೇಟೆ,ಫೆ.5 : ಭಾರತೀಯ ಜನತಾ ಪಾರ್ಟಿಯ ಸೋಮವಾರಪೇಟೆ ಮಂಡಲ ವತಿಯಿಂದ ಸೋಮವಾರಪೇಟೆ ಕೊಡವ ಸಮಾಜದಲ್ಲಿ ಗ್ರಾಮ ಚಲೋ ಉದ್ಘಾಟನೆ ಹಾಗೂ ನೂತನ ಬಿಜೆಪಿ ಜಿಲ್ಲಾಧ್ಯಕ್ಷ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಿಗೆ ಅಭಿನಂದನಾ ಸಮಾರಂಭ ನಡೆಯಿತು. ಸಮಾರಂಭದಲ್ಲಿ ಮಾತನಾಡಿದ ಮಾಜಿ ಶಾಸಕ ಅಪ್ಪಚ್ಚುರಂಜನ್, ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಪಣತೊಟ್ಟಿದ್ದಾರೆ. ಜನ್ಧನ್ ಯೋಜನೆಯಡಿ ಬ್ಯಾಂಕ್ ಖಾತೆ, ಉಜ್ವಲ ಯೋಜನೆಯ ಮೂಲಕ ಪ್ರತಿ ಮನೆಗೂ ಗ್ಯಾಸ್ ಸಿಲಿಂಡರ್ ವಿತರಣೆ, ದೀನ್ದಯಾಳ್ ಯೋಜನೆಯಡಿ ಕುಗ್ರಾಮಗಳಿಗೂ ವಿದ್ಯುತ್ ಸೌಕರ್ಯ, ರೈತ ಸಮ್ಮಾನ್ ನಿಧಿಯಡಿ ಪ್ರತಿ ರೈತನ ಖಾತೆಗೆ ವಾರ್ಷಿಕ 6 ಸಾವಿರ, ರೈಲ್ವೇ, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಅನುದಾನ ಕಲ್ಪಿಸಲಾಗಿದೆ ಎಂದರು. ಹಿಂದೂ ಸಮಾಜದ ಸ್ವಾಭಿಮಾನದ ಸಂಕೇತವಾಗಿದ್ದ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಮೋದಿ ಸರ್ಕಾರ ಪಣತೊಟ್ಟು ಪೂರ್ಣಗೊಳಿಸಿದೆ. ಆ ಮೂಲಕ ಹಿಂದು ಸಮಾಜದ ಗೌರವವನ್ನು ಎತ್ತಿ ಹಿಡಿದಿದೆ. ಕೇಂದ್ರ ಸರ್ಕಾರದ ಸಾಧನೆಗಳನ್ನು ಪ್ರತಿ ಮನೆಗೆ ತಲುಪಿಸುವ ಮೂಲಕ ಮತ್ತೊಮ್ಮೆ ಲೋಕಸಭಾ ಚುನಾವಣೆಯಲ್ಲಿ…
ಬೆಂಗಳೂರು ಫೆ.5 NEWS DESK : ನಮ್ಮ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯ, ತಾರತಮ್ಯ, ಮಲತಾಯಿ ಧೋರಣೆ ವಿರೋಧಿಸಿ ರಾಜ್ಯದ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವಿರುದ್ದ ಫೆಬ್ರವರಿ 07 ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಬೆಳಿಗ್ಗೆ 11.00 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದ ಜನತೆ ನಮಗೆ ಕೊಟ್ಟ ಅವಕಾಶಕ್ಕೆ ನ್ಯಾಯ ಒದಗಿಸಬೇಕಾದುದ್ದು ನಮ್ಮ ಕರ್ತವ್ಯ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ನ್ಯಾಯ ಒದಗಿಸಿಕೊಡಲಿದೆ ಎಂದು ಇಲ್ಲಿಯವರೆಗೂ ತಾಳ್ಮೆ ಯಿಂದ ಕಾಯುತ್ತಿದ್ದೆವು. ಕಳೆದ ಸಾಲಿನ ಬಜೆಟ್ ನಲ್ಲಿ ಹೇಳಿದಂತೆ ನಡೆದುಕೊಳ್ಳುತ್ತಾರೆ ಎಂದು ಕಾದಿದ್ದೆವು. ಆದರೆ ಇದುವರೆಗೂ ಅನ್ಯಾಯ ಸರಿ ಪಡಿಸಿಲ್ಲ. ಇದರ ವಿರುದ್ಧ ಧ್ವನಿ ಎತ್ತಲೇಬೇಕಾಗಿದೆ. ಹೋರಾಟಕ್ಕೆ ಜೊತೆ ನೀಡಲು ಇಡೀ ಸರ್ಕಾರ ಪಕ್ಷ ಭೇದ ಮರೆತು ಆಹ್ವಾನ ನೀಡಿದ್ದೇವೆ. ಕನ್ನಡಿಗರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕಿದೆ. ಕೇಂದ್ರದ ಕಿವಿಯನ್ನು…
ಮಡಿಕೇರಿ ಫೆ.5 NEWS DESK : ಜಿಲ್ಲಾ ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ಆಯೋಜಿತ 2ನೇ ವರ್ಷದ ವಿಪ್ರ ಕ್ರೀಡಾಕೂಟದ ಅಂಗವಾಗಿ ಬ್ರಾಹ್ಮಣ ಸಮಾಜದ ಬಾಂಧವರಿಗೆ ಬ್ಯಾಡ್ಮಿಂಟನ್ ಹಾಗೂ ಟೇಬಲ್ ಟೆನ್ನಿಸ್ ಪಂದ್ಯಾವಳಿಗಳು ನಗರದ ಜನರಲ್ ತಿಮ್ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದವು. ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ್ದ ಸಮಾಜದ ಬಾಂಧವರು ಕ್ರೀಡಾಕೂಟದಲ್ಲಿ ಪಾಲ್ಗೊಂಡರು. ಕ್ರೀಡಾಕೂಟ ಉದ್ದೇಶಿಸಿ ಮಾತನಾಡಿದ ನಿಧಿಯ ಅಧ್ಯಕ್ಷೆ ಗೀತಾ ಗಿರೀಶ್, ಕ್ರೀಡಾಕೂಟ ಆಯೋಜನೆ ಮೂಲಕ ಸಮಾಜದವರು ಒಂದು ವೇದಿಕೆಯಡಿಯಲ್ಲಿ ಸೇರುವುದರಿಂದ ಸಮಾಜದ ಸಂಘಟನೆಗೆ ಸಹಕಾರಿಯಾಗುತ್ತದೆ. ಕಳೆದ ಬಾರಿ ಕ್ರೀಡಾಕೂಟದ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿದ್ದು, ಉತ್ತಮ ಪ್ರತಿಕ್ರಿಯೆ ದೊರಕಿತ್ತು. ಈ ಬಾರಿ ಹೊಸ ಪ್ರಯೋಗ ಮೂಲಕ ಬ್ಯಾಡ್ಮಿಂಟನ್ ಹಾಗೂ ಟಿ.ಟಿ ಪಂದ್ಯಾವಳಿ ಆಯೋಜನೆಗೊಂಡಿದ್ದು, ಇದಕ್ಕೂ ಉತ್ತಮ ಪ್ರತಿಕ್ರಿಯೆ ದೊರಕಿದೆ. ಮುಂದಿನ ಬಾರಿ ಇನ್ನೂ ಹೆಚ್ಚಿನ ಕ್ರೀಡೆಗಳನ್ನು ಕ್ರೀಡಾಕೂಟದ ಅಂಗವಾಗಿ ಆಯೋಜನೆಗೊಳಿಸುವ ಚಿಂತನೆ ಇದೆ ಎಂದರು. ದಿನನಿತ್ಯದ ಒತ್ತಡದ ಜೀವನದಿಂದ ಹೊರಬರಲು ಕ್ರೀಡೆ ಸಹಕಾರಿಯಾಗಿದ್ದು, ಕ್ರೀಡಾಕೂಟದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಈ…
ಮಡಿಕೇರಿ ಫೆ.5 NEWS DESK : ಕಂದಾಯ ಕಚೇರಿಗಳಲ್ಲಿ ಅರ್ಜಿಗಳ ವಿಲೇವಾರಿ ಮತ್ತು ಪ್ರಕರಣಗಳನ್ನು ಇತ್ಯರ್ಥ ಪಡಿಸುವ ಕಾರ್ಯ ವಿಳಂಬವಾಗುತ್ತಿದ್ದು, ಸಮಸ್ಯೆ ಜಟಿಲವಾಗುತ್ತಿದೆ. ಜನಸಾಮಾನ್ಯರು ಕಂದಾಯ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿಯನ್ನು ತಪ್ಪಿಸಲು ಅಧಿಕಾರಿಗಳು ಅಗತ್ಯ ಸಹಕಾರ ನೀಡಿ ಜನಪರವಾಗಿ ಕಾರ್ಯನಿರ್ವಹಿಸಬೇಕು. ಕರ್ನಾಟಕ ರಾಜ್ಯ ಸರ್ಕಾರ ಇಂದಿನಿಂದ ಎಲ್ಲಾ ಸರ್ವೇ, ತಾಲ್ಲೂಕು ಕಚೇರಿ ಮತ್ತು ಸಬ್ ರಿಜಿಸ್ಟಾçರ್ ಕಚೇರಿಗಳ ದಾಖಲೆಗಳನ್ನು ಡಿಜಿಟಲೀಕರಣಕ್ಕೆ ಒಳಪಡಿಸಿದೆ ಎಂದು ರಾಜ್ಯ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ. ಮಡಿಕೇರಿಯ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಕಂದಾಯ ಇಲಾಖಾ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಂದಾಯ ಇಲಾಖೆಯಲ್ಲಿ ಅಗತ್ಯ ಕೆಲಸ ಕಾರ್ಯಗಳು ನಿಗದಿತ ವೇಳೆಯಲ್ಲಿ ನಡೆಯದೆ ಉಂಟಾಗುತ್ತಿರುವ ಸಮಸ್ಯೆಗಳ ಬಗೆಹರಿಕೆಗೆ ರಾಜ್ಯ ಸರ್ಕಾರ ಕಳೆದ ಎಂಟು ತಿಂಗಳ ಅವಧಿಯಲ್ಲಿ ಸಾಕಷ್ಟು ಪ್ರಯತ್ನಗಳನ್ನು ಮಾಡಿದೆ. ಇದರ ಪರಿಣಾಮ ಅರ್ಜಿಗಳ ವಿಲೇವಾರಿ ಮತ್ತು ಪ್ರಕರಣಗಳ ಇತ್ಯರ್ಥ ಪ್ರಸ್ತುತ ಚುರುಕುಗೊಂಡಿದೆ ಎಂದರು. ಜನರ ಕೆಲಸ ಕಾರ್ಯಗಳನ್ನು ಮಾಡಿಕೊಡುವ ಮನಸ್ಥಿತಿಯನ್ನು…
ಕುಂದಾಪುರ, ಇದು ಜಿಲ್ಲಾ ಕೇಂದ್ರವಾದ ಉಡುಪಿಯಿಂದ 36 ಕಿಲೋ ಮೀಟರ್ ದೂರದಲ್ಲಿ ಇರುವ ತಾಲ್ಲೂಕು ಪಟ್ಟಣವಾಗಿದೆ. ಪಶ್ಚಿಮ ದಿಕ್ಕಿನಲ್ಲಿರುವ ಸಮುದ್ರ ತೀರವು ಕುಂದಾಪುರ ತಾಲ್ಲೂಕಿನ ಪ್ರಮುಖ ಆಕರ್ಷಣೆಗಳಲ್ಲೊಂದು. ಈ ತಾಲ್ಲೂಕಿನ ಗಂಗೊಳ್ಳಿಯಲ್ಲಿರುವ ಸೇತುವೆಯು ಉಡುಪಿ ಜಿಲ್ಲೆಯಲ್ಲೇಅತೀ ದೊಡ್ಡದು ಎಂಬ ಖ್ಯಾತಿ ಪಡೆದಿದೆ. ಬಡಗುತಿಟ್ಟು ಯಕ್ಷಗಾನ ಕಲೆಯನ್ನು ಬೆಳೆಸುವಲ್ಲಿ ಕುಂದಾಪುರದ ಪಾತ್ರ ಬಹಳ ಪ್ರಮುಖ. ಕುಂದಾಪುರದ ಮತ್ತೊಂದು ವಿಶೇಷವೆಂದರೆ, ಇದೊಂದು ಪರ್ಯಾಯ ದ್ವೀಪದ ರೂಪದಲ್ಲಿ- ಉತ್ತರ, ಪಶ್ಚಿಮ ಮತ್ತು ಪೂರ್ವ ದಿಕ್ಕಿನಲ್ಲಿ ನೀರಿದೆ- (ಸಮುದ್ರ, ಗಂಗೊಳ್ಳಿ ಹೊಳೆ ಮತ್ತು ಹಾಲಾಡಿ ಹೊಳೆ ಹಾಗೂ ಕೋಣಿ ಹಿನ್ನೀರು ಪ್ರದೇಶ) ಮತ್ತು ದಕ್ಷಿಣದಲ್ಲಿ ಮಾತ್ರ ನೆಲವಿರುವ ಪ್ರದೇಶವಾಗಿರುತ್ತದೆ. ಇಂತಹ ಒಂದು ವೈಚಿತ್ರ್ಯದ ಪ್ರಚಾರವಾಗಿಲ್ಲ ಮತ್ತು ಈ ನೀರಿನ ಇರವನ್ನು ಪ್ರವಾಸೋದ್ಯಮಕ್ಕೂ ಬಳಸುವ ಪ್ರಯತ್ನ ಹೆಚ್ಚಾಗಿ ನಡೆದಿಲ್ಲ. ಕುಂದಾಪುರ ಸಂತೆಯು ಸುತ್ತಲಿನ ನೂರಾರು ಹಳ್ಳಿಗಳ ವ್ಯಾಪಾರಕ್ಕೆ ಮತ್ತು ‘ಕೃಷಿ ಉತ್ಪನ್ನ ಮಾರಲು’ ಅನುಕೂಲ ಮಾಡಿಕೊಡುತ್ತಿದೆ. ಪ್ರೇಕ್ಷಣೀಯ ಸ್ಥಳಗಳು :: ಬೈಂದೂರು ಕುಂದಾಪುರದಿಂದ ಸುಮಾರು 32 ಕಿ. ಮೀ…
ಮಡಿಕೇರಿ ಫೆ.5 NEWS DESK : ದಕ್ಷಿಣ ಭಾರತದ ರಾಜ್ಯಗಳಿಗೆ ಬಜೆಟ್ ನಲ್ಲಿ ಅಗತ್ಯ ಅನುದಾನ ಮೀಸಲಿಡದೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದೆ, ರಾಜ್ಯಗಳ ಶಕ್ತಿಯನ್ನು ಕುಂದಿಸುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ, ರಾಜ್ಯಗಳ ಶಕ್ತಿ ಕುಂದಿದರೆ ರಾಷ್ಟ್ರದ ಶಕ್ತಿ ಕುಂದುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರದ ಶಕ್ತಿ ವೃದ್ಧಿಗೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಅಗತ್ಯ ನೆರವು ನೀಡುವ ಅಗತ್ಯವಿದೆ ಎಂದರು. ಕರ್ನಾಟಕ ರಾಜ್ಯ ಆದಾಯ ಗಳಿಕೆಯಲ್ಲಿ ಮೊದಲ ಸ್ಥಾನದಲ್ಲಿದೆ, ತೆರಿಗೆ ಪಾವತಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಆದರೂ ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ಸೇರಬೇಕಾದ ಆರ್ಥಿಕ ಪಾಲನ್ನು ನೀಡುತ್ತಿಲ್ಲವೆಂದು ಆರೋಪಿಸಿದರು. 2017 ರ ಬಜೆಟ್ ನಲ್ಲಿ 52 ಸಾವಿರ ಕೋಟಿ ರೂ.ಗಳನ್ನು ರಾಜ್ಯಕ್ಕೆ ನೀಡಿದ್ದ ಕೇಂದ್ರ ಸರ್ಕಾರ ಈ ಬಾರಿಯೂ ಅಷ್ಟೇ ಮೊತ್ತವನ್ನು ನೀಡಿದೆ. ಆದರೆ ಬಜೆಟ್ ನ ಗಾತ್ರ ಎರಡು ಪಟ್ಟು ಹೆಚ್ಚಾಗಿದೆ, ಗಾತ್ರ ಹೆಚ್ಚಾದಂತೆ ನಮ್ಮ…
ಮಡಿಕೇರಿ ಜ.5 NEWS DESK : ಗೋಣಿಕೊಪ್ಪ ನಾಟ್ಯ ಮಯೂರಿ ನೃತ್ಯ ಸಂಸ್ಥೆಯಿಂದ ಕೊಡಗಿನ ಸಮಾಜ ಸೇವಕ ಕರವೇ ಪ್ರಾನ್ಸಿಸ್ ಡಿಸೋಜ ಅವರಿಗೆ ಸುವರ್ಣ ಸಂಭ್ರಮ ಕನ್ನಡಿಗ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ವಿದುಷಿ ಪ್ರೇಮಾಂಜಲಿ ಹಾಗೂ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು.
ಬೆಂಗಳೂರು ಫೆ.5 NEWS DESK : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಆರ್ ಟಿಸಿ) ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ “100 ಹೊಸ ವಿನ್ಯಾಸದ ಕರ್ನಾಟಕ ಸಾರಿಗೆ ಬಸ್ಸು( ಅಶ್ವಮೇಧ – ಪಾಯಿಂಟ್ ಟು ಪಾಯಿಂಟ್ ಎಕ್ಸ್ಪ್ರೆಸ್)ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಬಣ್ಣ ಬಣ್ಣದ ಬಗೆ ಬಗೆಯ ಹೂವುಗಳಿಂದ ಸಿಂಗಾರಗೊಂಡಿರುವ ಅಶ್ವಮೇಧ – ಪಾಯಿಂಟ್ ಟು ಪಾಯಿಂಟ್ ಎಕ್ಸ್ಪ್ರೆಸ್ ಬಸ್ಗಳಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ವಿಧಾನಸೌಧದ ಮುಂಭಾಗ ಚಾಲನೆ ನೀಡಿದರು. ಈ ವೇಳೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸಹ ಹಾಜರಿದ್ದರು.






