ಮಡಿಕೇರಿ ಫೆ.5 NEWS DESK : ಗೋಣಿಕೊಪ್ಪಲಿನ ಎಂ.ಎಂ.ಲೇಔಟ್ ನಲ್ಲಿ ನಿರ್ಮಾಣವಾಗುತ್ತಿರುವ ಲಯನ್ಸ್ ಕ್ಲಬ್ ನ ನೂತನ ಕಟ್ಟಡ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು.
ಲೇಖಕ: admin
ಮಡಿಕೇರಿ ಫೆ.5 NEWS DESK : ಕಂದಾಯ ಇಲಾಖೆಗೆ ಅರ್ಜಿದಾರರು ವಿನಾಕಾರಣ ಅಲೆಯುವುದನ್ನು ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದ್ದಾರೆ. ಮಡಿಕೇರಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳು ಕಂದಾಯ ಇಲಾಖೆಯ ಕೆಲಸ ಕಾರ್ಯಗಳಿಗೆ ವೇಗ ನೀಡಬೇಕು ಮತ್ತು ಜನಪರವಾಗಿ ಕಾರ್ಯನಿರ್ವಹಿಸಬೇಕು. ಜನರು ತಮ್ಮ ಕೆಲಸ ಬಿಟ್ಟು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಇದೆ, ಇದು ನಿಲ್ಲಬೇಕು, ಸಮಯ ವ್ಯರ್ಥ ಆಗಬಾರದು. ಈ ಉದ್ದೇಶದಿಂದ ಕಂದಾಯ ಇಲಾಖೆಯಲ್ಲಿರುವ ಬಹಳ ವರ್ಷಗಳ ಸಮಸ್ಯೆಯನ್ನು ಅರ್ಥ ಮಾಡಿಕೊಂಡು ಪರಿಹಾರವನ್ನು ನೀಡುವ ನಿಟ್ಟಿನಲ್ಲಿ ಕಂದಾಯ ಇಲಾಖೆಯ ಕಾರ್ಯಗಳು ಚುರುಕಾಗುವಂತೆ ನೋಡಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆ ನಡೆಸಿ ಜನಪರವಾಗಿ ಕಾರ್ಯನಿರ್ವಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ತಹಶೀಲ್ದಾರ್ ನ್ಯಾಯಾಲಯದ ಪ್ರಕರಣಗಳು 3 ತಿಂಗಳಲ್ಲಿ ಪೂರ್ಣಗೊಳ್ಳಬೇಕು, ಆದರೆ ವರ್ಷಾನುಗಟ್ಟಲೆಯಿಂದ ಬಾಕಿ ಉಳಿದಿರುವ ಪ್ರಕರಣಗಳಿವೆ. ನಮ್ಮ ಸರಕಾರ ಬಂದ ಮೇಲೆ ಇದನ್ನು ಗಂಭೀರವಾಗಿ ಪರಿಗಣಿಸಿ, ಮೂರು ತಿಂಗಳೊಳಗೆ ವಿಲೇವಾರಿಯಾಗುವಂತೆ…
ಮಡಿಕೇರಿ ಫೆ.5 NEWS DESK : ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಇಂದು ಅಧಿಕಾರಿಗಳ ಸಭೆ ನಡೆಸಲು ಮಡಿಕೇರಿಗೆ ಭೇಟಿ ನೀಡಿದರು. ಜಿ.ಪಂ ಸಭಾಂಗಣಕ್ಕೆ ಆಗಮಿಸಿದ ಸಚಿವರನ್ನು ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಹಾಗೂ ಜಿಲ್ಲಾಧಿಕಾರಿ ವೆಂಕಟರಾಜ ಅವರು ಹೂಗುಚ್ಛ ನೀಡಿ ಬರ ಮಾಡಿಕೊಂಡರು. ಈ ಸಂದರ್ಭ ಕೊಡಗಿನ ಶಾಸಕರುಗಳಾದ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಉಪಸ್ಥಿತರಿದ್ದರು.
ನಾಪೋಕ್ಲು ಫೆ.5 : ತುಳುನಾಡಿನ ಯಕ್ಷಗಾನ ಕಲೆಯನ್ನು ನಾಡಿನಾದ್ಯಂತ ಪ್ರಚುರಪಡಿಸುವ ಸದುದ್ದೇಶದಿಂದ ಮೂರ್ನಾಡಿನ “ಆಪ್ತಮಿತ್ರ ಬಳಗದ” ವ್ಯಾಟ್ಪ್ ಗ್ರೂಪ್ ವತಿಂಯಿದ ಮೂರ್ನಾಡಿನ ಪಾಂಡಾಣೆ ಮೈದಾನದಲ್ಲಿ ನಡೆಸಿದ ಉಚಿತ ಯಕ್ಷಗಾನ ಬಯಲಾಟ ಯಕ್ಷೋತ್ಸವ ಗಮನ ಸೆಳೆಯಿತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ `ಗಜಮೇಳ” ಎಂದೇ ಪ್ರಖ್ಯಾತಿ ಪಡೆದ ಹನುಮಗಿರಿಯ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಖ್ಯಾತ ಕಲಾವಿದರು `ಇಂದ್ರಪ್ರಸ’ ಎಂಬ ಯಕ್ಷ ಪ್ರಸಂಗವನ್ನು ನಡೆಸಿಕೊಟ್ಟರು. ನಾಪೋಕ್ಲು, ಮೂರ್ನಾಡು ಸೇರಿದಂತೆ ವಿವಿಧ ಭಾಗಗಗಳಿಂದ ಬಂದಿದ್ದ ಸಾವಿರಾರು ಪ್ರೇಕ್ಷಕರಿಗೆ ಸಂಜೆ ಲಘು ಉಪಾಹಾರ ಮತ್ತು ರಾತ್ರಿ ವೇಳೆ ಊಟದ ವ್ಯವಸ್ಥೆಯನ್ನೂ ಮಾಡಲಾಗಿತ್ತು. ನುರಿತ ಕಲಾವಿದರ ವೇಷ-ಭೂಷಣಗಳು, ಭಾಗವತಿಕೆ, ನೃತ್ಯ, ತಾಳ- ಮೇಳ ಹಾಗೂ ಮಾತುಗಾರಿಕೆಗೆ ಮಾರು ಹೋದ ಜನರು, ಚಪ್ಪಾಳೆ, ವಿಷಲ್ಗಳ ಸರಿಮಳೆಯೊಂದಿಗೆ ಕಲಾವಿದರಿಗೆ ಹಾಗೂ ಮೇಳಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಬಳಗದ ಪರವಾಗಿ ವಿಘ್ನೇಶ್ ಭಟ್ ಎಲ್ಲರನ್ನು ಸ್ವಾಗತಿಸಿ ವಂದಿಸಿದರು. ಆಪ್ತಮಿತ್ರ ಬಳಗ ಎಂಬ ವಾಟ್ಸಪ್ ಗ್ರೂಪ್ ವಿವಿಧ ಸಮಾಜ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಐದು…
ನಾಪೋಕ್ಲು ಫೆ.5 : ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ರೈತರ ತೋಟಗಳಲ್ಲಿ ಕೊಕ್ಕೋ ಪ್ರೂನಿಂಗ್ (ಸವರುವಿಕೆ) ಮತ್ತು ತೋಟದ ನಿರ್ವಹಣೆ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು. ಕಾರ್ಯಾಗಾರದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಡಿ.ಬಿ.ನಾಗೇಶ್ ಕುಂದಲ್ಪಾ ವಹಿಸಿ “ಅಡಿಕೆ ಹಳದಿ ರೋಗದಿಂದ ಸಮಸ್ಯೆಗೊಳಗಾದ ನಾವುಗಳು ಪ್ರಮುಖ ಪರ್ಯಾಯ ಬೆಳೆಯಾದ ಕೊಕ್ಕೋವನ್ನು ಕ್ರಮಬದ್ಧವಾಗಿ ಬೆಳೆಸಿ ಅಧಿಕ ಇಳುವರಿ ಪಡೆಯುವಲ್ಲಿ ಈ ಕಾರ್ಯಕ್ರಮ ಸಹಕಾರಿಯಾಗಲಿದೆ” ಎಂದು ಹೇಳಿದರು. ಕ್ಯಾoಪ್ಕೋ ಸಂಸ್ಥೆಯ ಸಿಬ್ಬಂದಿ ಕೆ.ಚಂದ್ರಶೇಖರ್ ವಿಷಯದ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ಪಿ.ಎಂ.ಅಶೋಕ, ಗ್ರಾ.ಪಂ ಅಧ್ಯಕ್ಷರಾದ ಚಂದ್ರಕಲಾ ಬಳ್ಳಡ್ಕ, ಉಪಾಧ್ಯಕ್ಷ ನಂಜಪ್ಪ ನಿಡ್ಯಮಲೆ, ಸಂಘದ ನಿರ್ದೇಶಕರುಗಳಾದ ದೀನರಾಜ ದೊಡ್ಡಡ್ಕ, ಧನಂಜಯ ಕೋಡಿ, ಜಯರಾಮ ನಿಡ್ಯಮಲೆ ಬಿ, ಪಿ.ಟಿ.ಜಯರಾಮ, ಶೇಷಪ್ಪ ನಾಯ್ಕ ನಿಡ್ಯಮಲೆ, ಕಿರಣ ಬಂಗಾರಕೋಡಿ, ಹೊನ್ನಪ್ಪ ಅಮಚೂರು, ಸೀತಾರಾಮ ಕದಿಕಡ್ಕ, ಪುಷ್ಪಾವತಿ ವ್ಯಾಪಾರೆ, ಕೆ.ಎಂ.ಪ್ರದೀಪ, ಪ್ರಮೀಳಾ ಎನ್ ಬಂಗಾರಕೋಡಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಗ್ರಾಮ ಪಂಚಾಯತ್ ಸದಸ್ಯರುಗಳಾದ ಸುಭಾಷ್ಚಂದ್ರ…
ಮಡಿಕೇರಿ ಫೆ.5 : ಮೂರ್ನಾಡು ವಿದ್ಯಾಸಂಸ್ಥೆಯ ಪದವಿ ಪೂರ್ವ ಕಾಲೇಜಿನಲ್ಲಿ 1998 ರಿಂದ 2000 ಶೈಕ್ಷಣಿಕ ವರ್ಷದಲ್ಲಿ ಕಲಾವಿಭಾಗದಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳು, ವಿದ್ಯಾಸಂಸ್ಥೆಯ ಮೈದಾನದಲ್ಲಿ ನೂತನವಾಗಿ ನಿರ್ಮಿಸಿರುವ ಶೌಚಾಲಯಗಳನ್ನು ಆಡಳಿತ ಮಂಡಳಿಗೆ ಹಸ್ತಾಂತರಿಸುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಾಚೆಟ್ಟಿರ ಶ್ರೀಮಾದಪ್ಪ, ಉಪಾಧ್ಯಕ್ಷರಾದ ಪುದಿಯೋಕ್ಕಡ ಸುಬ್ರಮಣಿ, ಖಜಾಂಚಿ ಬಡುವಂಡ ಶ್ರೀಸುಬ್ರಮಣಿ ಅವರು ಸೇರಿದಂತೆ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು ಹಾಗೂ ಹಳೆಯ ವಿದ್ಯಾರ್ಥಿ ಮತ್ತು ಪ್ರಸಕ್ತ ಕಾಂತೂರು-ಮೂರ್ನಾಡು ಗ್ರಾ.ಪಂ ಅಧ್ಯಕ್ಷರಾಗಿರುವ ಕುಶಾಲಪ್ಪ ಸೇರಿದಂತೆ ಹಳೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಹಳೆಯ ವಿದ್ಯಾರ್ಥಿ ಸತೀಶ್ ಮಾತನಾಡಿ ಈ ವಿದ್ಯಾಸಂಸ್ಥೆಯಲ್ಲಿ ಓದಿದ ಹೆಮ್ಮೆ ನಮಗಿದೆ. ಸ್ವಚ್ಚ ಭಾರತ ಕಲ್ಪನೆಯಡಿ ಈಶೌಚಾಲಯ ನಿರ್ಮಿಸಲಾಗಿದೆ. ಭವಿಷ್ಯದ ದಿನಗಳಲ್ಲಿ ಇನ್ನಷ್ಟು ಕೊಡುಗೆಗಳನ್ನು ನೀಡುವ ಶಕ್ತಿ ನಮಗೆ ಲಭ್ಯವಾಗಲಿ ಎಂದು ನುಡಿದರು. ವಿದ್ಯಾಸಂಸ್ಥೆಯ ಅಧ್ಯಕ್ಷರು ಮಾತನಾಡಿ ಹಳೆಯ ವಿದ್ಯಾರ್ಥಿಗಳು ಒಂದು ಸಣ್ಣ ಆರಂಭವನ್ನು ಮಾಡಿದ್ದೀರಿ. ವಿದ್ಯಾಸಂಸ್ಥೆಯ ಮೇಲಿನ ಅಭಿಮಾನ ಮೆಚ್ಚುವಂತದ್ದು. ಮುಂದೆ ಇನ್ನಷ್ಟು ಕೊಡುಗೆಗಳು ಬಂದು ವಿದ್ಯಾಸಂಸ್ಥೆಯ ಸರ್ವತೋಮುಖ…
ಮಡಿಕೇರಿ ಫೆ.4 NEWS DESK : ನಿಷೇಧಿತ ಮಾದಕ ವಸ್ತು ಹ್ಯಾಶಿಷ್ ಆಯಿಲ್(ಗಾಂಜಾದಿAದ ತೆಗೆಯುವ ಎಣ್ಣೆ) ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳಿಗೆ ಮಡಿಕೇರಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ತಲಾ 1 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ನಿವಾಸಿಗಳಾದ ಅಹಮದ್ ಕಬೀರ್(37), ಅಬ್ದುಲ್ ಖಾದರ್(37) ಹಾಗೂ ಮೊಹಮ್ಮದ್ ಮುಜಮಿಲ್(37) ಎಂಬುವವರೇ ಶಿಕ್ಷೆಗೆ ಒಳಗಾದವರು. ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2022ರ ಅಕ್ಟೋಬರ್ 29ರಂದು ಭಾಗಮಂಡಲ-ಮಡಿಕೇರಿ ಜಂಕ್ಷನ್ನಲ್ಲಿರುವ ಐ.ಬಿ ರಸ್ತೆಯಲ್ಲಿ ಕೆ.ಎಲ್.33-ಎಫ್.6825 ಮಾರುತಿ ಸೆಲೇರಿಯೋ ಕಾರಿನಲ್ಲಿ ಮೂವರು ನಿಷೇಧಿತ ಮಾದಕ ವಸ್ತುವನ್ನು ಮಾರಾಟ ಮಾಡುವ ಸಲುವಾಗಿ ಸಾಗಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಹಿನ್ನೆಲೆ ಭಾಗಮಂಡಲ ಠಾಣಾಧಿಕಾರಿ ಪ್ರಿಯಾಂಕ, ಎಎಸ್ಐ ಬೆಳ್ಳಿಯಪ್ಪ ಎಂ.ಸಿ, ಮಹದೇವ ಸ್ವಾಮಿ ಹಾಗೂ ಸಿಬ್ಬಂದಿಗಳು ದಾಳಿ ಮಾಡಿ ಕಾರನ್ನು ಪರಿಶೀಲನೆ ನಡೆಸಿದ ಸಂದರ್ಭ ಕಾರಿನಲ್ಲಿ 1 ಕೆ.ಜಿ. 160 ಗ್ರಾಂ ಹ್ಯಾಶಿಷ್…
ಮಡಿಕೇರಿ ಫೆ.4 NEWS DESK : ಪ್ರವಾಸಕ್ಕೆಂದು ಬಂದಿದ್ದ ಯುವಕನೊಬ್ಬ ನೀರುಪಾಲಾದ ಘಟನೆ ಚೆಯ್ಯಂಡಾಣೆ ಸಮೀಪದ ಚೇಲಾವರ ಫಾಲ್ಸ್ ನಲ್ಲಿ ಭಾನುವಾರ ನಡೆದಿದೆ. ಮೃತನನ್ನು ಕೇರಳದ ಮಟ್ಟನ್ನೂರು ನಿವಾಸಿ, ಮಹಮ್ಮದ್ ಅಶ್ರಫ್ ಎಂಬುವವರ ಪುತ್ರ ರಾಶೀದ್ (25) ಎಂದು ಗುರುತಿಸಲಾಗಿದೆ. ತನ್ನ ಮೂವರು ಸ್ನೇಹಿತರೊಂದಿಗೆ ಕೊಡಗಿನ ಪ್ರವಾಸಿತಾಣಗಳ ವೀಕ್ಷಣೆಗೆ ಬಂದಿದ್ದ ರಾಶೀದ್, ಚೇಲಾವರ ಜಲಪಾತದಲ್ಲಿ ಸ್ನಾನಕ್ಕೆಂದು ಇಳಿದಾಗ ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವುದಾಗಿ ಹೇಳಲಾಗಿದೆ. ಜಲಪಾತದಿಂದ ಮೃತದೇಹವನ್ನು ಮೇಲೆತ್ತುವಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಯಶಸ್ವಿಯಾಗಿದ್ದು, ನಾಪೋಕ್ಲು ಪೊಲೀಸ್ ಠಾಣೆಯ ಅಪರಾಧ ವಿಭಾಗದ ಠಾಣಾಧಿಕಾರಿ ಶ್ರೀಧರ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆಗೆ ಸಂಬಂಧಿಸಿದಂತೆ ನಾಪೋಕ್ಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಡಿಕೇರಿ ಫೆ.4 NEWS DESK : ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ (ಎಸ್ ಎಸ್ ಎಫ್) ಆಶ್ರಯದಲ್ಲಿ ಇತ್ತೀಚೆಗೆ ನೆಲ್ಲಿಹುದಿಕೇರಿಯಲ್ಲಿ ನಡೆದ ಜಿಲ್ಲಾಮಟ್ಟದ ಸಾಹಿತ್ಯೋತ್ಸವದಲ್ಲಿ ಪಾಲಿಬೆಟ್ಟ ಮುಹಿಮ್ಮಾತುದ್ದೀನ್ ಅರಬಿ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಆದಿಲ್ ಬಿ.ಎ. ರಸ ಪ್ರಶ್ನೆ ವಿಭಾಗದಲ್ಲಿ ವಿಜೇತನಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಪಾಲಿಬೆಟ್ಟದ ಲೂರ್ಡ್ಸ್ ಶಾಲೆಯ 7ನೇ ತರಗತಿ ವಿದ್ಯಾರ್ಥಿಯಾಗಿರುವ ಆದಿಲ್, ಈ ತಿಂಗಳ ತಾ. 9 ರಿಂದ 11ರವರೆಗೆ ಉತ್ತರ ಕರ್ನಾಟಕದ ಭಟ್ಕಳದಲ್ಲಿ ನಡೆಯಲಿರುವ ರಾಜ್ಯಮಟ್ಟದ ಸಾಹಿತ್ಯೋತ್ಸವ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದಾನೆ. ಪ್ರತಿಭಾವಂತವಿದ್ಯಾರ್ಥಿಯಾಗಿರುವ ಆದಿಲ್ ಪಾಲಿಬೆಟ್ಟದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಯು.ಕೆ. ಅಶ್ರಫ್ ಹಾಗೂ ಅತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸಲೀನಾ ದಂಪತಿಗಳ ಪುತ್ರ.
ಮಡಿಕೇರಿ ಫೆ.4 NEWS DESK : ಮಾನವ ಕಲ್ಯಾಣಕ್ಕಾಗಿ ಅನೇಕ ಕಾರ್ಯಗಳನ್ನು ಕೈಗೊಳ್ಳುತ್ತಿರುವ, “ಲಜ್ಞಾ ಇಮಾಇಲ್ಲಾ” ಎಂಬ ಹೆಸರಿನಿಂದ ಕರೆಯಲ್ಪಡುವ ಅಹ್ಮದಿಯಾ ಮುಸ್ಲಿಮ್ ಸಂಘಟನೆಯ ಮಹಿಳಾ ವಿಭಾಗದ ವತಿಯಿಂದ ಮಡಿಕೇರಿಯ ಅಬ್ದುಲ್ ಕಲಾಂ ಲೇಔಟ್ ನಲ್ಲಿರುವ ವಿಕಾಸ್ ಜನ ಸೇವಾ ಟ್ರಸ್ಟ್ ಆಶ್ರಮದ ಹಿರಿಯ ನಾಗರಿಕರಿಗೆ ದಂತಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿತ್ತು. “ಲಜ್ನಾ ಇಮಾಇಲ್ಲಾ’ ಅಧ್ಯಕ್ಷರಾದ ರೂಮಾನ್ ರಿಜ್ವಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಶಿಬಿರದ ನೇತೃತ್ವವನ್ನು ಸರಕಾರಿ ಆಸ್ಪತ್ರೆಯ ದಂತ ವ್ಯೆದ್ಯ ಡಾ.ಅಫ್ರೀನ್ ಹಾಗೂ ಡಾ.ಮೆಲ್ವಿನ್ ವಹಿಸಿದ್ದರು. ಸುಮಾರು 35 ಮಂದಿಗೆ ದಂತ ಚಿಕಿತ್ಸೆ ಮಾಡಲಾಯಿತು, ಅಲ್ಲದೆ ದಂತದ ಆರೋಗ್ಯಕ್ಕೆ ಬೇಕಾದ ವಸ್ತುಗಳು ಮತ್ತು ಔಷಧಿಯನ್ನು ವಿತರಿಸಲಾಯಿತು. ಆಶ್ರಮಕ್ಕೆ ಅಗತ್ಯವಾಗಿದ್ದ ಟೇಬಲ್ ಗಳು ಹಾಗೂ ಫ್ಯಾನ್ ಗಳನ್ನು ಇದೇ ಸಂದರ್ಭ ವಿತರಿಸಲಾಯಿತು. ಲಜ್ನಾ ಇಮಾಇಲ್ಲಾಹ್ ವಿಭಾಗದ ಮಹಿಳಾ ಸದಸ್ಯರು, ಅಹ್ಮದಿಯಾ ಮುಸ್ಲಿಮ್ ಜಮಾಅತ್ ನ ಹಲವು ಸದಸ್ಯರು, ಆಶ್ರಮದ ಮುಖ್ಯಸ್ಥ ಮಂಜುನಾಥ್ ಹಾಗೂ ಸಿಬ್ಬಂದಿಗಳು ಶಿಬಿರದ ಯಶಸ್ಸಿಗಾಗಿ ಕೈಜೋಡಿಸಿದರು.






