ಪೊನ್ನಂಪೇಟೆ ಫೆ.4 NEWS DESK : 2023-24ನೇ ಸಾಲಿನ ಮಾಯಾಮುಡಿ ಗ್ರಾಮ ಪಂಚಾಯಿತಿ ಗ್ರಾಮ ಸಭೆ ಅಧ್ಯಕ್ಷ ಎ.ಎಸ್.ಟಾಟು ಮೊಣ್ಣಪ್ಪ ಅವರ ಅಧ್ಯಕ್ಷತೆಯಲ್ಲಿ ಫೆ.19 ರಂದು ನಡೆಯಲಿದೆ. ಪೊನ್ನಂಪೇಟೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರೀತಿ ಚಿಕ್ಕಮಾದಯ್ಯ ಅವರು ನೋಡಲ್ ಅಧಿಕಾರಿಯಾಗಿ ಉಪಸ್ಥಿತರಿರುವರು. ಮಾಯಮುಡಿಯ ಕಂಗಳತ್ತುನಾಡು ಮಹಿಳಾ ಸಮಾಜದ ಸಭಾಂಗಣದಲ್ಲಿ ಸಭೆ ನಡೆಯಲಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಫೆ.3 NEWS DESK : `ಸ್ಪರ್ಶ್ ಕುಷ್ಠರೋಗ ಜಾಗೃತಿ ಆಂದೋಲನಾ ಕಾರ್ಯಕ್ರಮ’ ಅನುಷ್ಠಾನದ ಬಗ್ಗೆ ಸಭೆಯು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಿ.ಧನರಾಜು ಅವರ ಉಪಸ್ಥಿತಿಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಿತ್ತಿಪತ್ರಗಳು, ಕರಪತ್ರಗಳು ಹಾಗೂ ಬ್ಯಾನರ್ ಬಿಡುಗಡೆಗೊಳಿಸಿದರು. ಕರಪತ್ರ ಬಿಡುಗಡೆ ಮಾಡಿದ ನಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್ ಎಂ.ಕೆ ಅವರು ಮಾತನಾಡಿ ಕುಷ್ಠರೋಗದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ಸಲುವಾಗಿ ಕಾರ್ಯಕ್ರಮ ನಡೆಸಲಾಯಿತು. ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಕುಷ್ಠರೋಗದ ಬಗ್ಗೆ ಹೆಚ್ಚಿನ ಅರಿವು ಮೂಡಿಸುವುದು ಅಗತ್ಯ ಎಂದು ತಿಳಿಸಿದರು. ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ ಅಧಿಕಾರಿ ಡಾ.ಎನ್.ಆನಂದ್ ಅವರು ಮಾತನಾಡಿ ಜನವರಿ 30 ರಿಂದ ಫೆಬ್ರವರಿ 13 ರವರೆಗೆ ಜಿಲ್ಲಾದ್ಯಂತ “ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ” ಕಾರ್ಯಕ್ರಮ ನಡೆಯಲಿದೆ. ಪ್ರತಿ ಗ್ರಾಮಗಳಲ್ಲಿ ಹಾಗೂ ನಗರ ಪ್ರದೇಶಗಳಲ್ಲಿ ಈ ಬಗ್ಗೆ ಅರಿವು ಮೂಡಿಸಲಾಗುತ್ತಿದೆ, ಹಾಗೂ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ…
ಮಡಿಕೇರಿ ಫೆ.3 NEWS DESK : ಕೊಡಗು ಜಿಲ್ಲೆಯ 5 ತಾಲ್ಲೂಕನ್ನು ಬರಪೀಡಿತ ಪ್ರದೇಶವೆಂದು ಪ್ರಕಟಿಸಿರುವ ಹಿನ್ನೆಲೆ, ಬೆಳೆ ನಷ್ಟವಾಗಿರುವ ಕೃಷಿಕರಿಗೆ ಫ್ರೂಟ್ಸ್ ಆಪ್ ನಡಿ ನೋಂದಣಿ ಆಗಿರುವ ರೈತರಿಗೆ ಸರ್ಕಾರದ ಬೆಳೆ ನಷ್ಟ ಪರಿಹಾರವನ್ನು ನೇರವಾಗಿ ಪಾವತಿ ಮಾಡಿದ್ದು, ಈ ಸಂಬಂಧ ತೊಂದರೆ ಇದ್ದಲ್ಲಿ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತದಿಂದ ಆರಂಭಿಸಲಾಗಿರುವ ಸಹಾಯವಾಣಿ ಕೇಂದ್ರಕ್ಕೆ ಮಾಹಿತಿ ನೀಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಸಹಾಯವಾಣಿ ಕೇಂದ್ರ ಸಂಖ್ಯೆ 08272-221077, ಮಡಿಕೇರಿ ತಾಲ್ಲೂಕು ಕಚೇರಿ 08272-228396, ಕುಶಾಲನಗರ ತಾಲ್ಲೂಕು ಕಚೇರಿ 08276-200198, ಸೋಮವಾರಪೇಟೆ ತಾಲ್ಲೂಕು ಕಚೇರಿ 08276-282045, ವಿರಾಜಪೇಟೆ ತಾಲ್ಲೂಕು ಕಚೇರಿ 08274-257328 ಹಾಗೂ ಪೊನ್ನಂಪೇಟೆ ತಾಲ್ಲೂಕು ಕಚೇರಿ 08274-249700 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಮಡಿಕೇರಿ ಫೆ.3 NEWS DESK : ಮುಂದಿನ ದಿನಗಳಲ್ಲಿ ನಗರ, ಪಟ್ಟಣ, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಸಮಸ್ಯೆ ಬರದಂತೆ ಅಗತ್ಯ ಮುನ್ನೆಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅವರು, ಕುಡಿಯುವ ಪೂರೈಕೆ, ಜಾನುವಾರುಗಳಿಗೆ ಮೇವು ಒದಗಿಸುವಲ್ಲಿ ವ್ಯತ್ಯಯ ಉಂಟಾಗಬಾರದು. ತಹಶೀಲ್ದಾರರು ಮತ್ತು ತಾ.ಪಂ.ಇಒ ಜೊತೆ ಒಟ್ಟುಗೂಡಿ ಸಮನ್ವಯತೆ ಸಾಧಿಸಿ ಕುಡಿಯುವ ನೀರು ಪೂರೈಕೆಗೆ ಮುಂದಾಗಬೇಕು. ಜಲಮೂಲ, ತೆರೆದ ಬಾವಿ, ಬೋರ್ವೆಲ್ ಹೀಗೆ ಕುಡಿಯುವ ನೀರಿನ ಸಂಪನ್ಮೂಲವನ್ನು ಸರಿಯಾಗಿ ಬಳಸಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು. ಜಾನುವಾರುಗಳಿಗೆ ಮೇವು ಪೂರೈಕೆ ಸಂಬಂಧಿಸಿದಂತೆ ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜು ದೊಡ್ಡಮನಿ ಅವರು ಮಾಹಿತಿ ನೀಡಿದರು. ಹಾಗೆಯೇ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇಇ ಸುರೇಶ್ ಕುಮಾರ್ ಅವರು ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆ ಸಂಬಂಧಿಸಿದಂತೆ ಮಾಹಿತಿ ನೀಡಿದರು. ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಸೋಮಸುಂದರ,…
ಸೋಮವಾರಪೇಟೆ ಫೆ.3 NEWS DESK : ನಿರಂತರ ಕಲಿಕೆಯಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಬಹುದು ಎಂದು ಶಾಸಕ ಡಾ.ಮಂತರ್ ಗೌಡ ಅಭಿಪ್ರಾಯಿಸಿದರು. ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು, ಮಾತನಾಡಿದರು. ಪ್ರತಿಯೊಬ್ಬರಲ್ಲೂ ನಾನಾ ತರಹದ ಪ್ರತಿಭೆಯಿರುತ್ತದೆ. ತಮ್ಮ ಪ್ರತಿಭೆಯನ್ನು ತೋರಿಸಲು ವಿವಿಧ ವಿಭಾಗಗಳಲ್ಲಿ ನಡೆಯುವ ಸ್ಪರ್ಧಾ ಕಾರ್ಯಕ್ರಮಗಳನ್ನು ಉಪಯೋಗಿಸಿಕೊಳ್ಳಬೇಕು. ವಿದ್ಯಾರ್ಥಿಗಳು ತಮ್ಮಲ್ಲೇ ಕೀಳರಿಮೆ ಬೆಳೆಸಿಕೊಂಡರೆ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಲು ಕಷ್ಟವಾಗುತ್ತದೆ ಎಂದು ಕಿವಿಮಾತು ಹೇಳಿದರು. ವಿದ್ಯಾರ್ಥಿ ಜೀವನದಲ್ಲಿ ಧೂಮಪಾನ, ಡ್ರಗ್ಸ್ ಸೇವನೆಯಂತಹ ದುಶ್ಚಟಗಳಿಗೆ ವಿದ್ಯಾರ್ಥಿಗಳು ಬಲಿಯಾಗಬಾರದು. ಪೋಷಕರು ನಿಮ್ಮ ಮೇಲೆ ಕನಸು ಕಟ್ಟಿಕೊಂಡಿರುತ್ತಾರೆ. ಅವರ ಕನಸು ನನಸ್ಸು ಮಾಡುವ ಕರ್ತವ್ಯ ವಿದ್ಯಾರ್ಥಿಗಳದ್ದು ಎಂದು ಹೇಳಿದರು. ಪೋಷಕರು ಮತ್ತು ಶಿಕ್ಷಕರು ಸಮಾನವಾಗಿ ವಿದ್ಯಾರ್ಥಿಗಳ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಬುದ್ದಿಹೇಳುವುದರಿಂದ ಎಷ್ಟೋ ಮಕ್ಕಳನ್ನು ಸರಿ ದಾರಿಗೆ ತರಬಹುದು. ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಭವನ ನಿರ್ಮಾಣದ ಕಾಮಗಾರಿ ನೆನೆಗುದಿಗೆ ಬಿದ್ದಿದ್ದು, ಮುಂದುವರಿದ ಕಾಮಗಾರಿಗೆ ಅನುದಾನಕ್ಕಾಗಿ…
ಬೆಂಗಳೂರು ಫೆ.3 NEWS DESK : ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರತಿನಿಧಿ ಶ್ರೀನಿವಾಸಾಚಾರ್ಯ ದಿನೇಶ್ ಕುಮಾರ್ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ಮುಖ್ಯ ನ್ಯಾಯಮೂರ್ತಿಗಳಿಗೆ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ಕೆ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ದಾವಣಗೆರೆ ಫೆ.3 NEWS DESK : ಮೌಢ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ದಾವಣಗೆರೆಯಲ್ಲಿ 38 ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪತ್ರಕರ್ತರಿಗೆ ರಾಜಕೀಯ ಬೇಕಾಗಿಲ್ಲ. ವಸ್ತುನಿಷ್ಠವಾಗಿ ಇರಬೇಕು. ನಾಡಿನ ಬಡವರು ಮತ್ತು ಮಧ್ಯಮ ವರ್ಗದವರ ಆರ್ಥಿಕ ಶಕ್ತಿ ಹೆಚ್ಚಿಸುವ ಗ್ಯಾರಂಟಿ ಯೋಜನೆಗಳನ್ನು ಪತ್ರಕರ್ತರು ಬಿಟ್ಟಿ ಗ್ಯಾರಂಟಿ ಎಂದು ಕರೆಯಬಾರದು. ಪಕ್ಷಾತೀತವಾಗಿ, ಜಾತ್ಯತೀತವಾಗಿ, ಧರ್ಮಾತೀತವಾಗಿ ಇರುವ ಈ ಯೋಜನೆಯನ್ನು ಬಿಟ್ಟಿ ಗ್ಯಾರಂಟಿ ಎಂದು ಕರೆಯದೆ, ನೀವೇ ಪರಿಶೀಲಿಸಿ ಬರೆಯಿರಿ. ಏನನ್ನಾದರೂ ಪ್ರಕಟಿಸುವ ಮೊದಲು ಪರಿಶೀಲನೆ ನಡೆಸಿ ಎಂದು ಸಲಹೆ ನೀಡಿದರು. ಪಟ್ಟಭದ್ರರನ್ನು ಗುರುತಿಸಿ ಮಟ್ಟ ಹಾಕುವ ನಿಷ್ಠುರತೆಯನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು. ಗಂಡ-ಹೆಂಡತಿ ಜಗಳವನ್ನು ಇಡೀ ದಿನ ತೋರಿಸುವುದಕ್ಕಿಂತ, ಸಮಾಜದ ಬೆಳೆವಣಿಗೆಗೆ ಅಡ್ಡಿ ಆಗಿರುವ ಪಟ್ಟ ಭದ್ರರನ್ನು ಗುರುತಿಸಿ ಬರೆಯಿರಿ. ಇದರಿಂದ ಸಮಾಜಮುಖಿ ಪತ್ರಕೋದ್ಯಮ ಸಾಧ್ಯ ಎಂದರು. ಹಣವಂತರು, ಅತೀ ಶ್ರೀಮಂತರ ಕೈಯಲ್ಲಿ…
ಮಡಿಕೇರಿ ಫೆ.3 NEWS DESK : ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆದ ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳ ಮತ್ತು ಮಾಹಿತಿ ಹಕ್ಕು ಘಟಕದ ಪದಾಧಿಕಾರಿಗಳ ಸಭೆಯಲ್ಲಿ ಮಂತ್ರಿಯವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ಶಾಸಕ ಎ.ಎಸ್.ಪೊನ್ನಣ್ಣ ಭಾಗವಹಿಸಿದರು.
ಮಡಿಕೇರಿ ಫೆ.3 NEWS DESK : ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಫೆ.5 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಚಿವರು ಬೆಳಿಗ್ಗೆ 11 ಗಂಟೆಗೆ ಜಿ.ಪಂ ಸಭಾಂಗಣದಲ್ಲಿ ಕೊಡಗು ಜಿಲ್ಲೆಯ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದು, ಮಧ್ಯಾಹ್ನ 3 ಗಂಟೆಗೆ ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ರವಿ ಎಂ.ತಿರ್ಲಾಪೂರ ತಿಳಿಸಿದ್ದಾರೆ.
ಮಡಿಕೇರಿ ಫೆ.3 NEWS DESK : ರಾಜ್ಯದ ಎಲ್ಲೆಡೆ ಮಾದಿಗ ಸಮಾಜವನ್ನು ಸಂಘಟಿಸಿ, ಆರ್ಥಿಕವಾಗಿ, ಸಾಮಾಜಿಕವಾಗಿ ಸದೃಢಗೊಳಿಸಿ, ಸಮಾಜದಲ್ಲಿ ಮುಂಚೂಣಿಗೆ ತರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ “ಮಾದಿಗ ಮುನ್ನಡೆ” ಮಾದಿಗರ ಆತ್ಮಗೌರವ ಸಮಾವೇಶವನ್ನು ಕೈಗೊಳ್ಳಲಾಗಿದ್ದು, ಕೊಡಗಿನಲ್ಲಿ ಫೆ.4 ರಂದು ನಡೆಯಲಿದೆ. ಅಂದು ಬೆಳಿಗ್ಗೆ 11 ಗಂಟೆಗೆ ಮಡಿಕೇರಿಯ ರೋಟರಿ ಹಾಲ್ ಸಭಾಂಗಣದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮಿಜಿ ಹಾಗೂ ಕಗ್ಗುಂಡಿ ಶ್ರೀಗುರು ಹರಳಯ್ಯ ಗುರುಮಠದ ಶ್ರೀ ರುದ್ರಪ್ಪ ಸ್ವಾಮಿಗಳ ದಿವ್ಯ ಸಾನಿಧ್ಯ ವಹಿಸಲಿದ್ದು, ಕೋಟೆ ಎಂ.ಶಿವಣ್ಣ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಜಿ.ಶ್ರೀನಿವಾಸ್ ವಹಿಸಿಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಗದೀಶ್ ಬೆಟ್ಟಹಳ್ಳಿ, ನಾಗೇಂದ್ರ ಹರಕಲವಾಡಿ, ಹೆಚ್.ಕೆ.ಭಾಗ್ಯ, ಬಿ.ಎನ್.ಗಂಗಾಧರಪ್ಪ, ಹೂಡಿ ಮಂಜುನಾಥ್, ಡಾ.ಲಕ್ಷ್ಮೀಕಾಂತ್ ತುಮಕೂರು, ಪಿಳ್ಳಾ ಮುನಿಶಾಮಪ್ಪ, ವಿ.ಕೇಶವ, ಸತ್ಯೇಂದ್ರ ಕುಮಾರ್, ಶ್ರೀನಿವಾಸ್ ಪಾಲ್ಗೊಳ್ಳಲಿದ್ದಾರೆ.






