ಮಡಿಕೇರಿ ಫೆ.3 NEWS DESK : ಅಪಘಾತ ಸೇರಿದಂತೆ ವಿವಿಧ ಕಾರಣಗಳಿಂದ ‘ಬೆನ್ನು ಹುರಿ’ ಹಾನಿಯಿಂದ ಉಂಟಾಗುವ ವಿಕಲತೆಯಿಂದ ಬಳಲುತ್ತಿರುವರಿಗೆ ತಾವೇ ತಮ್ಮ ಕೆಲಸಗಳನ್ನು ಮಾಡಿಕೊಳ್ಳುವುದಕ್ಕೆ ಪ್ರೇರಣೆಯನ್ನು ನೀಡುವ ನಿಟ್ಟಿನಲ್ಲಿ ಫೆ.7 ರಿಂದ 9 ರವರೆಗೆ ನಗರದ ಅಶ್ವಿನಿ ಆಸ್ಪತ್ರೆಯಲ್ಲಿ ‘ಪುನಶ್ಚೇತನ ಶಿಬಿರ’ವನ್ನು ಆಯೋಜಿಸಲಾಗಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಕ್ಷಿಣ ಕನ್ನಡದ ಬೆಳ್ತಂಗಡಿಯ ಸೇವಾಭಾರತಿ ಸಂಸ್ಥೆಯ ಸಂಸ್ಥಾಪಕರು ಹಾಗೂ ಹಾಲಿ ಖಜಾಂಚಿಗಳಾದ ವಿನಾಯಕ ರಾವ್ ಸ್ವತಃ ಬೆನ್ನುಹುರಿಗೆ ಅಪಘಾತದಿಂದ ಉಂಟಾದ ಹಾನಿಯಿಂದ ಪುನಶ್ಚೇತನಗೊಂಡಿರುವ ವಿನಾಯಕ ರಾವ್ ಮಡಿಕೇರಿಯ ವಿಕಾಸ ಜನಸೇವಾ ಟ್ರಸ್ಟ್ನ ಸಹಕಾರದೊಂದಿಗೆ ಶಿಬಿರವನ್ನು ಆಯೋಜಿಸಲಾಗಿದೆ ಎಂದರು. ಸೇವಾಭಾರತಿ ಸಂಸ್ಥೆ 2004 ರಲ್ಲಿ ಆರೋಗ್ಯ, ಮಹಿಳಾ ಸಬಲೀಕರಣ ಮತ್ತು ದಿವ್ಯಾಂಗರ ಕ್ಷೇತ್ರದಲ್ಲಿ ಸೇವಾ ಕಾರ್ಯಗಳನ್ನು ನಡೆಸಿಕೊಂಡು ಬಂದಿದ್ದರು, 2018 ರ ಬಳಿಕ ಅಪಘಾತದಿಂದ ಬೆನ್ನುಹುರಿಗೆ ಪೆಟ್ಟಾಗಿ ಶಾಶ್ವತ ಅಂಗ ವಿಕಲತೆಯ ಸಂಕಷ್ಟಕ್ಕೆ ಒಳಗಾದವರಿಗೆ ಪುನಶ್ಚೇತನವನನ್ನು ನೀಡುವ ಕೆಲಸವನ್ನು ಮಾಡುತ್ತಾ ಬರುತ್ತಿದೆ. ಸೇವಾಭಾರತಿ ಪ್ರಸ್ತುತ ಏಳು ಜಿಲ್ಲೆಗಳಲ್ಲಿ ತನ್ನ ಸೇವಾ ಕಾರ್ಯವನ್ನು ವಿಸ್ತರಿಸಿದೆ.…
ಲೇಖಕ: admin
ಬೆಂಗಳೂರು, ಫೆ.3 NEWS DESK : ನಗರೋತ್ಥಾನ ಯೋಜನೆಯಡಿ ಕಾಮಗಾರಿಯ ಬಿಲ್ ಪಾಸು ಮಾಡಲು ಅಧಿಕಾರಿಗಳು ಸತಾಯಿಸುತ್ತಿರುವ ಬಗ್ಗೆ ದೂರು ನೀಡಿದರೆ ತನಿಖೆ ಕೈಗೊಂಡು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಗರೋತ್ಥಾನ ಯೋಜನೆಯಡಿ ಕಾಮಗಾರಿಯ ಬಿಲ್ ಪಾಸು ಮಾಡಲು ಅಧಿಕಾರಿಗಳು ಸತಾಯಿಸುತ್ತಿರುವ ಬಗ್ಗೆ 10 ಜಿಲ್ಲೆಗಳ ಗುತ್ತಿಗೆದಾರರು ಆರೋಪಿಸಿರುವ ಬಗ್ಗೆ ಅವರು ಮೇಲಿನಂತೆ ಪ್ರತಿಕ್ರಿಯೆ ನೀಡಿದರು. ಎಲ್ಲರ ಅಭಿಪ್ರಾಯ ಪಡೆದು ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗುವುದು ಲೋಕಸಭಾ ಚುನಾವಣೆಗೆ ಅಭ್ಯರ್ಥಿ ಗಳ ಪಟ್ಟಿ ಆದಷ್ಟು ಶೀಘ್ರದಲ್ಲಿಯೇ ಸಿದ್ಧವಾಗಲಿದೆ ಎಂದರು. ಸಮೀಕ್ಷೆ ನಡೆಯುತ್ತಿದೆ ಎಂದರು. ಪಟ್ಟಿಯನ್ನು ಅಂತಿಮ ಲೋಕಸಭಾ ಚುನಾವಣೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮಗನಿಗೆ ಟಿಕೆಟ್ ಕೊಡಿವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ಕೂಡ ಒಬ್ಬ ಟಿಕೆಟ್ ಆಕಾಂಕ್ಷಿಯಾಗಿ ಕೇಳುತ್ತಾರೆ. ಕಾಂಗ್ರೆಸ್ ನಲ್ಲಿ ಟಿಕೆಟ್ ಕೇಳುವವರೇ ಸಂಖ್ಯೆ ಜಾಸ್ತಿಯಿರುತ್ತದೆ. ಸ್ಥಳೀಯ ನಾಯಕರು, ಬ್ಲಾಕ್ ಸಮಿತಿ ಅಧ್ಯಕ್ಷ ರು, ಶಾಸಕರು, ಸಂಸದರ ಅಭಿಪ್ರಾಯ ಪಡೆದು ಪಟ್ಟಿಯನ್ನು…
ಮಡಿಕೇರಿ ಫೆ.3 NEWS DESK : ಆಮ್ ಆದ್ಮಿ ಪಾರ್ಟಿಯ ನಡೆ ಹಳ್ಳಿಯ ಕಡೆ ಅಭಿಯಾನದಡಿ ಪಕ್ಷದ ಕೊಡಗು ಜಿಲ್ಲಾ ಘಟಕ ಕುಶಾಲನಗರ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿತು. ಕಲುಷಿತಗೊಳ್ಳುತ್ತಿರುವ ಕಾವೇರಿ ನದಿ, ಅಶುಚಿತ್ವದ ವಾತಾವರಣ, ಕುಡಿಯುವ ನೀರಿನ ಕೊರತೆ ಸೇರಿದಂತೆ ಮೂಲಭೂತ ಸಮಸ್ಯೆಗಳ ವಿರುದ್ಧ ಹೋರಾಟ ರೂಪಿಸುವುದಾಗಿ ಪಕ್ಷದ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ಅವರು ಇದೇ ಸಂದರ್ಭ ಎಚ್ಚರಿಕೆ ನೀಡಿದ್ದಾರೆ. ಕುಶಾಲನಗರ ತಾಲ್ಲೂಕಿನ ವಾಲ್ನೂರು, ತ್ಯಾಗತ್ತೂರು, ನಂಜರಾಯಪಟ್ಟಣ, ಗುಡ್ಡೆಹೊಸೂರು, ಶಿರಾಂಗಾಲ, ಹೆಬ್ಬಾಲೆ, ತೊರೆನೂರು, ಕೂಡ ಮಂಗಳೂರು, ಕೂಡಿಗೆ, ಸುಂಟಿಕೊಪ್ಪ, ಕೆದಕಲ್ಲು, ನೆಲ್ಲಿಹುದಿಕೇರಿ, ಕೊಡಗರಹಳ್ಳಿ ಮತ್ತು ಚೆಟ್ಟಳ್ಳಿ ಗ್ರಾಮಗಳಿಗೆ ಆಪ್ ನಿಯೋಗ ಭೇಟಿ ನೀಡಿ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ಪಡೆಯಿತು. ಸರ್ಕಾರಿ ಶಾಲೆ ಹಾಗೂ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಕಟ್ಟಡದ ಸ್ಥಿತಿಗತಿ, ವಿದ್ಯಾರ್ಥಿಗಳ ಸಂಖ್ಯೆ, ಶಿಕ್ಷಕರ ಕೊರತೆ, ಶೌಚಾಲಯ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳ ಕುರಿತು ಸ್ಥಳೀಯರೊಂದಿಗೆ ಚರ್ಚಿಸಿತು. ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ ಯುಜಿಡಿ ಕಾಮಗಾರಿ…
ಮಡಿಕೇರಿ ಫೆ.3 NEWS DESK : ಕೊಡಗು ಗೌಡ ನಿವೃತ್ತ ನೌಕರರ ಸಂಘದ ವತಿಯಿಂದ ಅರೆಭಾಷಿಕ ಗೌಡ ಜನಾಂಗ ಬಾಂಧವರ ವಧು-ವರರ ಸಮಾವೇಶ ಫೆ.11 ರಂದು ನಡೆಯಲಿದೆ. ಅಂದು ಬೆಳಗ್ಗೆ 9.30 ಗಂಟೆಗೆ ಮಡಿಕೇರಿಯ ಕೊಡಗು ಗೌಡ ವಿದ್ಯಾ ಸಂಘದ ಸಭಾಂಗಣದಲ್ಲಿ ಸಮಾವೇಶ ನಡೆಯಲಿದ್ದು, ಆಸಕ್ತರು ತಮ್ಮ ಭಾವಚಿತ್ರ ಮತ್ತು ಇತರ ಎಲ್ಲಾ ಮಾಹಿತಿಗಳೊಂದಿಗೆ ಖುದ್ದಾಗಿ ಭಾಗವಹಿಸಬೇಕು. ಬರುವಾಗ ಅಪೇಕ್ಷಿತ ವಧು, ವರರನ್ನು ಕರೆದುಕೊಂಡು ಬರಬೇಕೆಂದು ಸಂಘದ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ ಮೊ.ಸಂ 9379213818, 9739495381, 9449476171, 9449086589 ನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಮಡಿಕೇರಿ ಫೆ.3 NEWS DESK : ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸುಂಟಿಕೊಪ್ಪ ಬಳಿಯ ಏಳನೇ ಮೈಲಿನಲ್ಲಿ ನಡೆದಿದೆ. ಹುಣಸೂರಿನ ವ್ಯಕ್ತಿ ಸಂತೋಷ್ (30) ಮೃತ ದುರ್ದೈವಿ. ಕೆದಕಲ್ ನಿವಾಸಿ ಚೇತನ್ (35) ಗಂಭೀರಗಾಯಗೊಂಡಿದ್ದು, ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ನವದೆಹಲಿ ಫೆ.3 NEWS DESK : ಮಾಜಿ ಉಪ ಪ್ರಧಾನಿ ಎಲ್. ಕೆ.ಆಡ್ವಾಣಿಯವರಿಗೆ ಕೇಂದ್ರ ಸರ್ಕಾರ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ ಘೋಷಿಸಿದೆ. ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಒಬ್ಬರಾಗಿರುವ ಅಡ್ವಾಣಿ ಅವರು ಭಾರತದ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ. ತಳಮಟ್ಟದಿಂದ ಹಿಡಿದು ಉಪಪ್ರಧಾನಿಯವರೆಗೆ ಉತ್ತಮ ಸೇವೆ ಸಲ್ಲಿರುವ ಅವರು ಗೃಹ ಮಂತ್ರಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ.
ಹಂಪಿ ಫೆ.3 NEWS DESK : ಐತಿಹಾಸಿಕ ಹಂಪಿ ಉತ್ಸವವನ್ನು ವೈಭವದ ಕಲಾತ್ಮಕ ವೇದಿಕೆಯಲ್ಲಿ ನಗಾರಿ ಬಾರಿಸುವುದರ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ‘ದೇಶದ ಸಂವಿಧಾನ ಉಳಿದರೆ ಮಾತ್ರ ನಾವೆಲ್ಲರೂ ಉಳಿಯಲು ಸಾಧ್ಯ. ಬಡವರು, ಅಸಹಾಯಕರ ಹಕ್ಕುಗಳ ರಕ್ಷಣೆ ಸಾಧ್ಯ. ಸಹಿಷ್ಣುತೆ, ಸಹಬಾಳುವೆ ನಮ್ಮ ಧ್ಯೇಯವಾಗಬೇಕು. ದೇಶದ ಸಂಪತ್ತು ಸಮಾನವಾಗಿ ಹಂಚಿಕೆಯಾಗಬೇಕು. ನಮ್ಮ ಧರ್ಮದ ಬಗ್ಗೆ ಅಭಿಮಾನದ ಜತೆಗೆ ಉಳಿದೆಲ್ಲ ಧರ್ಮಗಳ ಬಗ್ಗೆ ಸಹಿಷ್ಣುತೆ ಇರಬೇಕು. ಹೀಗಾದಾಗ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ,’’ ಎಂದು ಪ್ರತಿಪಾದಿಸಿದರು. ‘‘ಇತಿಹಾಸ ಗೊತ್ತಿದ್ದವರು ಮಾತ್ರ ಇತಿಹಾಸ ಸೃಷ್ಟಿಸಲು ಸಾಧ್ಯ. ಇತಿಹಾಸದಿಂದ ಪಾಠ ಕಲಿಯಬೇಕು. ಜೀವನದ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಬಸವಾದಿ ಶರಣರ ವರ್ಗರಹಿತ, ಸಮ ಸಮಾಜ ಸೃಷ್ಟಿಸಿದರು. ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು. ದ್ವೇಷ ಮಾಡುವುದು ಮನುಷ್ಯತ್ವದ ಲಕ್ಷಣವಲ್ಲ. ಮನುಷ್ಯತ್ವದ ಸಮಾಜ ನಿರ್ಮಿಸಬೇಕು. ಸಮಾನತೆಯ ಸಮಾಜ ನಿರ್ಮಿಸಬೇಕು. ಹನ್ನೆರಡನೇ ಶತಮಾನದ ಶರಣರ ತತ್ವ, ಸಿದ್ಧಾಂತಗಳನ್ನು ಅಂಬೇಡ್ಕರ್ ಅವರ ಸಂವಿಧಾನದಲ್ಲಿ ಕಾಣಲು ಸಾಧ್ಯವಿದೆ’’ ಎಂದರು. ಹಂಪಿ ಗಾಯತ್ರಿ ಪೀಠದ…
ನಾಪೋಕ್ಲು ಫೆ.3 NEWS DESK : ಕುಂಡ್ಯೋಳಂಡ ಕೊಡವ ಕೌಟುಂಬಿಕ ಹಾಕಿ ಉತ್ಸವ-2024 ರ ಯಶಸ್ವಿಯಾಗಿ ಸಂಘಟಿಸಲು ಕುಂಡ್ಯೋಳಂಡ ಕುಟುಂಬಸ್ಥರಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಹಾಕಿ ಉತ್ಸವ ಸಮಿತಿ ಅಧ್ಯಕ್ಷ ರಮೇಶ್ ಮುದ್ದಯ್ಯ ಹೇಳಿದರು. ನಾಪೋಕ್ಲುವಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಮೈದಾನದ ಪೂರ್ವ ತಯಾರಿಗೆ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದರು. ಕೊಡವ ಹಾಕಿ ಅಕಾಡೆಮಿಯ ಅನುಮತಿ ಮೇರೆಗೆ ಕೊಡವ ಕೌಟುಂಬಿಕ ಹಾಕಿ ಉತ್ಸವ ಏಪ್ರಿಲ್ ತಿಂಗಳಲ್ಲಿ ಇಲ್ಲಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಗ್ಯಾಲರಿ ನಿರ್ಮಾಣ ,ಮೈದಾನ ಸಿದ್ಧತೆ ಸೇರಿದಂತೆ ವಿವಿಧ ಕಾರ್ಯಗಳನ್ನು ಕೈಗೆತ್ತಿಕೊಡಲಾಗುವುದು. ಅದಕ್ಕೂ ಮುನ್ನ ಮೈದಾನದ ಸಿದ್ಧತೆಗಾಗಿ ಭೂಮಿ ಪೂಜೆ ನೆರವೇರಿಸಿ ಯಾವುದೇ ವಿಘ್ನ ಗಳು ಬಾರದಂತೆ ಗುರು ಕಾರೋಣ ಹಾಗೂ ದೈವ ದೇವರುಗಳನ್ನು ಪ್ರಾರ್ಥಿಸಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು. ಕುಟುಂಬದ ಪಟ್ಟೆದಾರ ಎಸ್.ಸುಬ್ಬಯ್ಯ ಅವರು ವಿಶೇಷ ಪ್ರಾರ್ಥನೆ ಮಾಡಿ ಗುದ್ದಲಿಯಿಂದ ಮಣ್ಣನ್ನು ಅಗೆಯುವುದರ ಮೂಲಕ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ…
ಮಡಿಕೇರಿ ಫೆ.3 NEWS DESK : ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ (ಜೀವನೋಪಾಯ ಸಂರಕ್ಷಣೆ ಮತ್ತು ವ್ಯಾಪಾರ ನಿಯಂತ್ರಣ) ನಿಯಮ-2019 ರಂತೆ ಹಾಗೂ ಸರ್ಕಾರದ ಆದೇಶದಂತೆ ಮಡಿಕೇರಿ ನಗರಸಭೆಗೆ ಸಂಬಂಧಿಸಿದಂತೆ ಸ್ಥಳೀಯ ಸಂಸ್ಥೆಯ ಮಟ್ಟದಲ್ಲಿ ಬೀದಿಬದಿ ವ್ಯಾಪಾರಿಗಳ ವ್ಯಾಜ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರಕ್ಕೆ ನಿವೃತ್ತ ನ್ಯಾಯಾಧೀಶರಾದ ಅಧ್ಯಕ್ಷರು, ಒಬ್ಬರು ಎ ಶ್ರೇಣಿಯ ರಾಜ್ಯ ನಿವೃತ್ತ ಅಧಿಕಾರಿ ಸದಸ್ಯರು ಹಾಗೂ ಒಬ್ಬರು ಬೀದಿ ಬದಿ ವ್ಯಾಪಾರ ಕ್ಷೇತ್ರದಲ್ಲಿ ಅನುಭವವುಳ್ಳ ಸಾಮಾಜಿಕ ಕಾರ್ಯಕರ್ತರಾದ ಸದಸ್ಯರು ಕುಂದುಕೊರತೆ ನಿವಾರಣಾ ಸಮಿತಿ ರಚಿಸಬೇಕಿದೆ. ಸಮಿತಿಯಲ್ಲಿ ಕಾರ್ಯನಿರ್ವಹಿಸಲು ಆಸಕ್ತಿ ಹೊಂದಿರುವ ಅರ್ಹ 65 ವರ್ಷದೊಳಗಿನ ವ್ಯಕ್ತಿಗಳು ತಮ್ಮ ಆಸಕ್ತಿ ವ್ಯಕ್ತಪಡಿಸಿ ಫೆ.15 ರೊಳಗೆ ಮನವಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ನಗರಸಭೆಯ ಡೇ-ನಲ್ಮ್ ಶಾಖೆಯನ್ನು ಸಂಪರ್ಕಿಸಬಹುದು ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.
ಮಡಿಕೇರಿ ಫೆ.3 NEWS DESK : ಪ್ರಸಕ್ತ(2023-24) ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ssp.postmatric.karnataka.gov.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ (ಆದಾಯ ಮಿತಿ 2.50 ಲಕ್ಷ), ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್ ಪ್ರತಿ(ಕಡ್ಡಾಯವಾಗಿ ಆಧಾರ್ ಸೀಡಿಂಗ್ ಮತ್ತು ಎನ್ಪಿಸಿಐ ಮ್ಯಾಪಿಂಗ್ ಮಾಡಿಸಿರತಕ್ಕದು), ಚಾಲ್ತಿಯಲ್ಲಿರುವ ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ (ಕಡ್ಡಾಯವಾಗಿ ಹಿಂದಿನ ವರ್ಷದ ಮಾಕ್ರ್ಸ್ ಕಾರ್ಡ್ ಪ್ರತಿ, ಇತ್ತೀಚಿನ ಭಾವಚಿತ್ರ, ಅಧ್ಯಯನ/ ಬೋನಾಫೈಡ್ ಪ್ರಮಾಣ ಪತ್ರ(ಮೆಟ್ರಿಕ್ ನಂತರದ ಕೋರ್ಸ್ಗಳಿಗೆ), ಶುಲ್ಕ ರಶೀದಿ(ಮೆಟ್ರಿಕ್ ನಂತರದ ಕೋರ್ಸ್ಗಳಿಗೆ), ತಂದೆ/ತಾಯಿ/ ಪೋಷಕರ ಆಧಾರ್ ಪ್ರತಿ. ಆದಾಯ ಮಿತಿ 2.50 ಲಕ್ಷಕ್ಕಿಂತ ಒಳಗಿರುವ ಸಿಇಟಿ ಮೂಲಕ ಎಂಬಿಬಿಎಸ್, ಬಿಡಿಎಸ್, ಬಿಇ, ಬಿಟೆಕ್, ಬಿಆರ್ಕೆ ಕೋರ್ಸ್ಗಳಿಗೆ ಆಯ್ಕೆಯಾಗುವ ವಿದ್ಯಾರ್ಥಿಗಳು ಮಾತ್ರ ಸರ್ಕಾರಿ,…






