ಮಡಿಕೇರಿ ಫೆ.2 NEWS DESK : ತೀವ್ರ ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಹಂತದಲ್ಲಿ ಆಂಬ್ಯುಲೆನ್ಸ್ ವಾಹನದಲ್ಲೆ ಮಗುವಿಗೆ ಜನ್ಮ ನೀಡಿದ ಪ್ರಕರಣ ಸೋಮವಾರಪೇಟೆಯ ಬಾಣಾವರದಲ್ಲಿ ನಡೆದಿದೆ. ಬಾಣಾವರದ ನಿವಾಸಿ ಬೇಬಿ ಎಂಬುವವರು ಹೆರಿಗೆ ನೋವಿನಿಂದ ಬಳಲುತ್ತಿದ್ದ ಸಂದರ್ಭ ಅವರನ್ನು 108 ಆಂಬ್ಯುಲೆನ್ಸ್ನಲ್ಲಿ, ಬಾಣಾವರದಿಂದ ಅಬ್ಬೂರುಕಟ್ಟೆಗೆ ಅರಣ್ಯದ ಹಾದಿಯಲ್ಲಿ ಕರೆದೊಯ್ಯಲಾಗುತಿತ್ತು. ಅರಣ್ಯ ಮಾರ್ಗದಲ್ಲಿ ಬೇಬಿ ಅವರ ಪರಿಸ್ಥಿತಿ ಆಂಬ್ಯುಲೆನ್ಸ್ನಲ್ಲ್ಲಿದ್ದ ಸ್ಟಾಪ್ ನರ್ಸ್ ಮಮತಾ ಹಾಗೂ ಅರುಣ್ ಕುಮಾರ್ ಅವರು ಗಮನಿಸಿ, ತಕ್ಷಣ ವಾಹನವನ್ನು ನಿಲ್ಲಿಸಲು ಸೂಚಿಸಿದರು. ಬಳಿಕ ಕಾಡಿನ ಹಾದಿಯ ನಡುವೆಯೇ ವಾಹನದಲ್ಲೆ ಸುರಕ್ಷಿತವಾಗಿ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾದರು. ತಾಯಿ ಹಾಗೂ ಮಗು ಆರೋಗ್ಯವಾಗಿದ್ದು, ಅವರನ್ನು ಸೋಮವಾರಪೇಟೆ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಲೇಖಕ: admin
ಮಡಿಕೇರಿ ಫೆ.2 NEWS DESK : ಲಾರಿ ಹರಿದು ರಸ್ತೆಯಲ್ಲಿ ಮಲಗಿದ್ದ ಮೂರು ಹಸುಗಳು ಸಾವಿಗೀಡಾದ ಘಟನೆ ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ. ಕುಶಾಲನಗರ-ಮಡಿಕೇರಿ ಹೆದ್ದಾರಿ ರಸ್ತೆಯ ಬೈಚನಹಳ್ಳಿ ಬಳಿ ರಸ್ತೆಯಲ್ಲಿ ಮಲಗಿದ್ದ ಹಸುಗಳ ಮೇಲೆ, ಮೈಸೂರು ಕಡೆಯಿಂದ ಮಡಿಕೇರಿ ಕಡೆಗೆ ಸಾಗುತ್ತಿದ್ದ ಲಾರಿ ಹರಿದು ದುರ್ಘಟನೆ ಸಂಭವಿಸಿದೆ. ಕುಶಾಲನಗರ ಸಂಚಾರಿ ಪೊಲೀಸ್ ಠಾಣಾಧಿಕಾರಿ ಚಂದ್ರಪ್ಪ, ಸಹಾಯಕ ಠಾಣಾಧಿಕಾರಿ ಹರೀಶ್ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಲಾರಿ ಚಾಲಕನನ್ನು ವಿಚಾರಣೆಗೆ ಒಳಪಡಿಸಿ, ಲಾರಿಯನ್ನು ವಶಪಡಿಸಿಕೊಂಡಿದ್ದಾರೆ.
ಮಡಿಕೇರಿ ಫೆ.2 : ರಾಷ್ಟ್ರದ ಅಖಂಡತೆಗಾಗಿ ಶ್ರಮಿಸುವ ಚಿಂತನೆ ಮತ್ತು ವಿಭಜನೆಯ ಮನಸ್ಥಿತಿಗಳ ನಡುವೆ ಮುಂಬರುವ ಲೋಕಸಭಾ ಚುನಾವಣೆ ನಡೆಯಲಿದೆ ಎಂದು ಬಿಜೆಪಿ ಮುಖಂಡ ಹಾಗೂ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ನಗರದ ಕಾವೇರಿ ಹಾಲ್ ನಲ್ಲಿ ನಡೆದ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆ ಮತ್ತು ನೂತನ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನವಾಗಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ದೇಶ ವಿಭಜನೆಯ ಕುರಿತಾಗಿ ಮಾತನಾಡಿದ್ದಾರೆ. ಅದು ಕೇವಲ ಅವರೊಬ್ಬರ ಮಾತಲ್ಲ, ಬದಲಾಗಿ ಒಟ್ಟು ಕಾಂಗ್ರೆಸ್ ಮನಸ್ಥಿತಿಯದ್ದೆಂದು ಟೀಕಿಸಿದರು. ಇಡೀ ರಾಷ್ಟçವನ್ನು ಒಂದಾಗಿ ಬೆಸೆಯುವ ಬಿಜೆಪಿಯ ಉದಾತ್ತ ಚಿಂತನೆ ಮತ್ತು ವಿಭಜನೆಯ ಕಾಂಗ್ರೆಸ್ ಚಿಂತನೆಗಳು ಮುಂಬರುವ ಚುನಾವಣೆಯಲ್ಲಿ ಮುಖಾಮುಖಿಯಾಗಲಿದೆ. ಮಂಡ್ಯದ ಖಾಸಗಿ ಜಾಗದಲ್ಲಿ ಹನುಮ ಧ್ವಜ ಹಾರಿಸಿದ್ದನ್ನು ತೆರವುಗೊಳಿಸಿರುವ ಘಟನೆಯನ್ನು ಉಲ್ಲೇಖಿಸಿದ ಶ್ರೀನಿವಾಸ ಪೂಜಾರಿ ಅವರು, ಮುಂಬರುವ ಚುನಾವಣೆ ಹನುಮ ಭಕ್ತರ…
ಮಡಿಕೇರಿ ಫೆ.2 NEWS DESK : ಭಾರತವನ್ನು ಒಟ್ಟುಗೂಡಿಸುವುದು ಭಾರತೀಯ ಜನತಾ ಪಕ್ಷದ ನಿಲುವು, ಭಾರತವನ್ನು ತುಂಡು ಮಾಡುತ್ತೇವೆ ಎನ್ನುವುದು ಕಾಂಗ್ರೆಸ್ ಸಂಸ್ಕೃತಿ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೆಡೆ ರಾಹುಲ್ ಗಾಂಧಿಯವರು ಭಾರತ್ ಜೋಡೋ ಎನ್ನುತ್ತಾರೆ, ಮತ್ತೊಂದೆಡೆ ಡಿ.ಕೆ.ಸುರೇಶ್ ಅವರು ಭಾರತವನ್ನು ತುಂಡು ಮಾಡಬೇಕು ಎನ್ನುತ್ತಾರೆ. ಕಾಂಗ್ರೆಸ್ನ ಒಟ್ಟು ಸಂಸ್ಕೃತಿಯೇ ಅಂತಹದ್ದು, ನರೇಂದ್ರ ಮೋದಿ ಅಧಿಕಾರಿಕ್ಕೆ ಬರುವ ಮುಂಚೆ ಕೆಲವು ಭಯೋತ್ಪಾದಕರು ಭಾರತವನ್ನು ತುಂಡು ತುಂಡು ಮಾಡುವುದಾಗಿ ಹೇಳಿದ್ದರು. ಆ ಮಾದರಿಯ ಮಾತುಗಳನ್ನು ಹೇಳಿರುವುದು ಖಂಡನೀಯ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವಿಚಾರವಾಗಿ ಕಠಿಣವಾದ ಶಬ್ದಗಳಲ್ಲಿ ಖಂಡಿಸುತ್ತಾರೆ ಮತ್ತು ಅವರ ಮೇಲೆ ಕ್ರಮ ಕೈಗೊಳ್ಳುತ್ತಾರೆ ಎಂದುಕೊಂಡಿದ್ದೆ ಆದರೆ, ಅವರು ಅತ್ಯಂತ ಮೃದುವಾದ ಧೋರಣೆ ತೋರಿರುವುದು ಅತ್ಯಂತ ನೋವಿನ ಸಂಗತಿ ಎಂದು ಹೇಳಿದರು. ಅಪೂರ್ವವಾದ ಮಧ್ಯಂತರ ಬಜೆಟ್ :: ನಿರ್ಮಲ ಸೀತಾರಂ ಅವರು ಘೋಷಿಸಿದ ಮಧ್ಯಂತರ ಬಜೆಟ್…
ಮಡಿಕೇರಿ ಫೆ.2 NEWS DESK : ಕೊಡಗು ಜಿಲ್ಲಾ ಬಿಜೆಪಿಯ ನೂತನ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರಿಗೆ ಹಿಂದಿನ ಅಧ್ಯಕ್ಷ ರಾಬಿನ್ ದೇವಯ್ಯ ಅವರು ಪಕ್ಷದ ಧ್ವಜವನ್ನು ನೀಡುವ ಮೂಲಕ ಅಧಿಕಾರವನ್ನು ಪಕ್ಷದ ಮುಖಂಡರುಗಳ ಸಮ್ಮುಖದಲ್ಲಿ ಹಸ್ತಾಂತರಿಸಿದರು. ನಗರದ ಕಾವೇರಿ ಹಾಲ್ ನಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿದ ರವಿ ಕಾಳಪ್ಪ, ಬಹುದೊಡ್ಡ ಜವಾಬ್ದಾರಿಯನ್ನು ಪಕ್ಷದ ವರಿಷ್ಠರು ನನ್ನ ಹೆಗಲಿಗೆ ವಹಿಸಿದ್ದಾರೆ. ಜಿಲ್ಲಾಧ್ಯಕ್ಷ ಸ್ಥಾನಕ್ಕೆ 22 ಮಂದಿ ಆಕಾಂಕ್ಷಿಗಳಾಗಿದ್ದರು. ಅವರೆಲ್ಲರೂ ಅರ್ಹರೇ ಆಗಿದ್ದರೂ, ನಿಮ್ಮೆಲ್ಲರ ಒತ್ತಾಸೆಯಿಂದ ಅಧ್ಯಕ್ಷ ಸ್ಥಾನದ ಜವಾಬ್ದಾರಿ ನನಗೆ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಎಲ್ಲರನ್ನೂ ಒಳಗೊಂಡು ಕಾರ್ಯಕ್ರಮ ರೂಪಿಸಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರ ಜನಪರ ಕಾರ್ಯಕ್ರಮಗಳನ್ನು ಮತದಾರರ ಮನೆಮನೆಗೆ ತಲುಪಿಸಲು ಪ್ರಮುಖ ಅದ್ಯತೆ ನೀಡಲಾಗುವುದು ಎಂದು ಹೇಳಿದರು.
ಮಡಿಕೇರಿ ಫೆ.3 NEWS DESK : ಕಡಂಗ ಕೊಕ್ಕಂಡಬಾಣೆ ದರ್ಗಾದಲ್ಲಿ ವಾರ್ಷಿಕವಾಗಿ ಆಚರಿಸಿಕೊಂಡು ಬರುತ್ತಿರುವ ಉರೂಸ್ ಸಮಾರಂಭಕ್ಕೆ ಚಾಲನೆ ದೊರೆಯಿತು. ನಮಾಜ್ ಬಳಿಕ ಮುಹ್ಯದ್ದೀನ್ ಜುಮಾ ಮಸೀದಿಯಿಂದ ಹೊರಟ ಬೃಹತ್ ಜಾಥವು ದಫ್ ಕಾರ್ಯಕ್ರಮದೊಂದಿಗೆ ಕೊಕ್ಕಂಡಬಾಣೆ ದರ್ಗಾ ಶರೀಫನ ಆವರಣದಲ್ಲಿ ಮುಕ್ತಾಯಗೊಳಿಸಿದರು. ಜಮಾಹತ್ ಖತೀಬಾರಾದ ಮೊಹಮ್ಮದ್ ರಫೀಕ್ ಲತೀಫಿ ವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾಗಿದ್ದು, ಧ್ವಜಾರೋಹಣವನ್ನು ಜಮಹತ್ ಅಧ್ಯಕ್ಷ ಅಬ್ದುಲ್ಲ ನೆರವೇರಿಸಿದರು. ಮಖಾಂ ಅಲಂಕಾರ ಸಮಾರಂಭದಲ್ಲಿ ಮುಖ್ಯೋಪಾಧ್ಯಾಯರಾದ ಶುಹೈಬ್ ಫೈಜಿ ಮಾತನಾಡಿ, ಐದು ದಿನಗಳ ಕಾಲ ನಡೆಯುವ ಧಾರ್ಮಿಕ ಕಾರ್ಯಕ್ರಮಗಳ ಬಗ್ಗೆ ವಿವರಣೆ ನೀಡಿದರು. ಸಮಾರಂಭದಲ್ಲಿ ಕಾರ್ಯದರ್ಶಿ ಅಬ್ದುಲ್ ರಹ್ಮಾನ್, ಸಹ ಕಾರ್ಯದರ್ಶಿ ಪಿ.ಎಚ್ ಸಮೀರ್, ಸಂಸ್ಥೆಯ ಉಪಾಧ್ಯಕ್ಷ ಸಲಾಂ, ಹ್ಯಾರಿಸ್, ಯುಸಫ್ ಉಸ್ತಾದ್, ಬದ್ರಿಯಾ ಜುಮಾ ಮಸೀದಿ, ಖತೀಬಾರಾದ ಇಸ್ಮಾಯಿಲ್ ಲತೀಫಿ, ಕೆ.ಇ.ಉಸ್ಮಾನ್ ,ಊರಿನ ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು. ವರದಿ : ನೌಫಲ್ ಕಡಂಗ
ಮಡಿಕೇರಿ ಫೆ.2 NEWS DESK : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಸಂಬಂಧ ಜಿಲ್ಲಾಧಿಕಾರಿ ವೆಂಕಟ್ ರಾಜಾ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಾರ್ಯಕ್ರಮ ಅನುಷ್ಠಾನದಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಬೇಕೆಂದು ನಿರ್ದೇಶನ ನೀಡಿದೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಗತಿ ಸಾಧಿಸಬೇಕು. ಪ್ರಗತಿ ಸಾಧಿಸದಿದ್ದಲ್ಲಿ ಅಧಿಕಾರಿಗಳೇ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಸಿದರು. ಖಜಾನೆಗೆ ಬಿಲ್ಲು ಸಲ್ಲಿಸಲು ಕೊನೆಯ ದಿನ ಹತ್ತಿರ ಬರುತ್ತಿದೆ. ಆದ್ದರಿಂದ ಎಲ್ಲಾ ಇಲಾಖೆ ಅಧಿಕಾರಿಗಳು ಎಚ್ಚರವಹಿಸಿ ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದರು. ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಪಶುಸಂಗೋಪನೆ, ವಿದ್ಯುತ್, ಸಹಕಾರ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪ್ರವಾಸೋದ್ಯಮ, ವೈದ್ಯಕೀಯ ಶಿಕ್ಷಣ, ಸಣ್ಣ ನೀರಾವರಿ, ವಸತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕೈಮಗ್ಗ ಜವಳಿ, ಕಾರ್ಮಿಕ, ಲೋಕೋಪಯೋಗಿ,…
ಮಡಿಕೇರಿ ಫೆ.2 : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಫೆ.9 ರಂದು ಮಡಿಕೇರಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮತ್ತು ಫೆ.14 ರಂದು ಸೋಮವಾರಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಆಯಾಯ ದಿನಗಳಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಮಡಿಕೇರಿ ಫೆ.2 : 10 ವರ್ಷಗಳಲ್ಲಿ ಕಾರ್ಯಗತ ಮಾಡಿರುವ ಪ್ರಮುಖ ಯೋಜನೆಗಳ “ರಿಪೋರ್ಟ್ ಕಾರ್ಡ್” ಅನ್ನು ಸಂಸದ ಪ್ರತಾಪ್ ಸಿಂಹ ಅವರು ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಮಲ್ಲೇಶ್ವರಂ ಕ್ಷೇತ್ರದ ಶಾಸಕರು ಹಾಗೂ ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಪ್ರಭಾರಿ ಡಾ.ಅಶ್ವತ್ಥ್ ನಾರಾಯಣ್ ಅವರಿಗೆ ಹಸ್ತಾಂತರಿಸಿದರು.
ಮಡಿಕೇರಿ ಫೆ.2 NEWS DESK : ಸಂವಿಧಾನ ದಿನಾಚರಣೆಯ ಪ್ರಯುಕ್ತ ಹೊಸ್ಕೇರಿ ಗ್ರಾ.ಪಂ ವತಿಯಿಂದ ಸಂವಿಧಾನ ಜಾಗೃತಿ ರಥಕ್ಕೆ ಭವ್ಯ ಸ್ವಾಗತ ನೀಡಲಾಯಿತು. ಗ್ರಾಮದ ಯುವಕರು ಉಮೇಶ್ ಹಾಗೂ ಹರೀಶ್ ಮುಂದಾಳತ್ವದಲ್ಲಿ ಬೈಕ್ ಜಾಥಾ ಹಾಗೂ ಸಂಜೀವಿನಿ ಒಕ್ಕೂಟದದಿಂದ ಕಳಶದೊಂದಿಗೆ ಸಾರ್ವಜನಿಕರು, ವಿದ್ಯಾರ್ಥಿಗಳು ಭವ್ಯ ಸ್ವಾಗತ ನೀಡಿದರು. ನಂತರ ಭಾರತಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಸಂವಿಧಾನ ಮಹತ್ವ ಕುರಿತು ಸಂಪನ್ಮೂಲ ವ್ಯಕ್ತಿ ಕೃಷ್ಣ ಮಾತನಾಡಿದರು. ಗ್ರಾ.ಪಂ ಅಧ್ಯಕ್ಷ ಬಡುವಂಡ್ರ ಕವಿತಾ ಮಾತನಾಡಿ ಸಂವಿಧಾನ ಜಾಥಾ ಮಹತ್ವದ ಕುರಿತು ಮಾಹಿತಿ ನೀಡಿದರು. ಸದಸ್ಯರಾದ ಜನಾರ್ಧನ, ಪಾರ್ವತಿ , ಅರೇಕಾಡು ಸಹಿಪ್ರ ಶಾಲೆ ಎಸ್. ಡಿ.ಎಂ. ಸಿ ಅಧ್ಯಕ್ಷ ಸಾಜಿದ, ಶಿಕ್ಷಕರಾದ ಮೀನಾಕ್ಷಿ, ಸುಷ್ಮಾ, ಅಶ್ರಫ್, ಕಾಲೇಜು ಪ್ರಾಂಶುಪಾಲ ಸುರೇಶ್ ನಾಯ್ಕ್ , ಮುಖೋಪಾಧ್ಯಾಯ ರವಿಕೃಷ್ಣಾ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಬಾಲಕೃಷ್ಣ ರೈ, ಪಿಡಿಒ ಅಬ್ದುಲ್ಲ, ಕಾರ್ಯದರ್ಶಿ ತೇಜಸ್ ಕುಮಾರ್, ಸಂಜೀವಿನಿ ಒಕ್ಕೂಟದ ಅಧ್ಯಕ್ಷ ಪವಿತ್ರ ಅಂಗನವಾಡಿ…






