ಚೆಯ್ಯಂಡಾಣೆ ಫೆ.1 : NEWS DESK : ಗ್ರಾಮೀಣ ಜನರಿಗೆ ವರವಾಗಿದ್ದ ಬಿಎಸ್ಎನ್ಎಲ್ ದೂರವಾಣಿ ಸಂಸ್ಥೆ ಇದೀಗ ಶಾಪವಾಗಿ ಪರಿಣಮಿಸಿದೆ. ಬಿಎಸ್ಎನ್ಎಲ್ ಕಚೇರಿಗಳು ನಿರ್ವಹಣೆ ಇಲ್ಲದೆ ನಿರ್ಲಕ್ಷಿಸಲ್ಪಡುತ್ತಿದ್ದು, ಟವರ್ಗಳು ಕೂಡ ನಿಷ್ಕ್ರಿಯಗೊಳ್ಳುತ್ತಿವೆ. ಚೆಯ್ಯಂಡಾಣೆಯಲ್ಲಿರುವ ಬಿಎಸ್ಎನ್ಎಲ್ ಟವರ್ ಇದಕ್ಕೆ ಸಾಕ್ಷಿಯಾಗಿದೆ. ಇಲ್ಲಿರುವ ಟವರ್ ನಲ್ಲಿ ಜನರೇಟರ್ ಕಾರ್ಯ ಸ್ಥಗಿತಗೊಳಿಸಿ ಹಲವು ದಿನಗಳೇ ಕಳೆದಿದೆ.ಇಲ್ಲಿ ಟವರ್, ಜನರೇಟರ್, ಸಿಬ್ಬಂದಿಗಳು ಎಲ್ಲವೂ ಮೂಕ ಪ್ರೇಕ್ಷಕರಂತೆ ನಿಂತಿವೆ. ಯಾವುದೇ ಸಿಬ್ಬಂದಿಗಳು ಇತ್ತ ತಿರುಗಿಯೂ ನೋಡುತ್ತಿಲ್ಲ. ಸುತ್ತಮುತ್ತಲ ಗ್ರಾಮಸ್ಥರ ದೂರವಾಣಿ ಕಾರ್ಯನಿರ್ವಹಿಸದೆ ತಿಂಗಳುಗಳೇ ಕಳೆದಿದೆ. ಮೊಬೈಲ್ ಗಳಂತೂ ನೆಟ್ ವರ್ಕ್ ಸಿಗದೆ ನಿಷ್ಕ್ರಿಯವಾಗುತ್ತಿವೆ. ಜನೋಪಕಾರಿ ಸಂಸ್ಥೆಯಾಗಿದ್ದ ಬಿಎಸ್ಎನ್ಎಲ್ ಈ ದುಸ್ಥಿತಿಗೆ ಬಂದು ತಲುಪಿರುವುದು ವಿಷಾದಕರವೆಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚೆಯ್ಯಂಡಾಣೆಯಲ್ಲಿ ಬಿಎಸ್ಎನ್ಎಲ್ ಕಚೇರಿ ಇಲ್ಲ, ಟವರ್ ನ ನೆಟ್ ವರ್ಕ್ ಮೇಲೆ ಅವಲಂಬಿತರಾಗಿದ್ದ ಸುತ್ತಮುತ್ತಲಿನ ಜನ ಇದೀಗ ಯಾವುದೇ ಸಂಪರ್ಕವಿಲ್ಲದೆ ಗೊಂದಲಕ್ಕೆ ಸಿಲುಕಿದ್ದಾರೆ. ತಕ್ಷಣ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸೂಕ್ತ ಕ್ರಮ ಕೈಗೊಂಡು ಬಿಎಸ್ಎನ್ಎಲ್ ವ್ಯವಸ್ಥೆಯನ್ನು…
ಲೇಖಕ: admin
ಮಡಿಕೇರಿ ಜ.31 NEWS DESK : ಕೊಡಗು ಜಿಲ್ಲಾ ಗೃಹರಕ್ಷಕದಳ ಮಡಿಕೇರಿ ಕಚೇರಿಯಲ್ಲಿ 2023-24ನೇ ಸಾಲಿಗೆ ಜಿಲ್ಲಾ ಗೃಹರಕ್ಷಕದಳ ಇಲಾಖೆಯಲ್ಲಿ ಪ್ರಸ್ತುತ ಖಾಲಿ ಇರುವ ಸ್ಥಾನಗಳಿಗೆ ಸ್ವಯಂ ಸೇವಕ ಗೃಹರಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೊಡಗು ಜಿಲ್ಲೆಯ ನಿವಾಸಿಯಾಗಿರುವ 19 ವರ್ಷ ಮೇಲ್ಪಟ್ಟ 40 ವರ್ಷದೊಳಗಿನ ಹಾಗೂ 10ನೇ ತರಗತಿ ತೇರ್ಗಡೆ ಹೊಂದಿರುವ ದೃಢಕಾಯರಾಗಿರುವ ಪುರುಷ/ ಮಹಿಳಾ ಅಭ್ಯರ್ಥಿಗಳು ಫೆ.15 ರವರೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಬಯಸುವ ಸದಸ್ಯರು ಜಿಲ್ಲಾ ಗೃಹರಕ್ಷಕದಳ ಕಚೇರಿ, ಡೈರಿಫಾರಂ ಮಡಿಕೇರಿ (ದೂ.ಸಂ. 08272-228427) ಮತ್ತು ಕೊಡಗು ಜಿಲ್ಲಾ ಗೃಹರಕ್ಷಕದಳದ ಸಹಾಯಕ ಬೋಧಕರಾದ ಅಕ್ಷಯ್ಕುಮಾರ್ ಡಿ. ಮೊ.ಸಂ.9844008820 ಹಾಗೂ ಗೃಹರಕ್ಷಕದಳದ ಘಟಕ ಕಚೇರಿಗಳ ಘಟಕಾಧಿಕಾರಿಗಳನ್ನು ಸಂಪರ್ಕಿಸಬಹುದು. ಘಟಕಾಧಿಕಾರಿಗಳ ವಿವರ : ಮಡಿಕೇರಿ ಘಟಕ ವೈ.ಎನ್.ಕವನ್ ಕುಮಾರ್ 9448204356, ಭಾಗಮಂಡಲ ಘಟಕ ಎನ್.ಪಿ.ಲೋಕನಾಥ 9108209941, ವಿರಾಜಪೇಟೆ ಘಟಕ ಮದಬ್ ಬೈರಾಗಿ 819756103, ಕುಶಾಲನಗರ ಘಟಕ ಬಿ.ಕೆ.ಪುಟ್ಟರಾಜು 9242116174, ಸೋಮವಾರಪೇಟೆ ಘಟಕ ಎಚ್.ಕೆ.ತ್ಯಾಗರಾಜು 9481431221, ಶಾಂತಳ್ಳಿ ಘಟಕ ಎಸ್.ಆರ್.ದೇವರಾಜು 9482729233,…
ಮಡಿಕೇರಿ ಜ.31 NEWS DESK : ಭಾರತದ ಮಹಾನ್ ಸ್ವಾತಂತ್ರ್ಯ ಯೋಧ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 127ನೇ ಜನ್ಮ ದಿನಾಚರಣೆ ಹಾಗೂ ನೇತಾಜಿ ಯುವಕ ಹಾಗೂ ಯುವತಿ ಮಂಡಲದ 32ನೇ ವಾರ್ಷಿಕೋತ್ಸವವು ತಾಳತ್ತಮನೆಯಲ್ಲಿ ಸಂಭ್ರಮದಿಂದ ಆಚರಿಯಲಾಯಿತು. ನೇತಾಜಿ ಯುವಕ ಹಾಗೂ ಯುವತಿ ಮಂಡಳಿ, ಮಡಿಕೇರಿ ನೆಹರು ಯುವ ಕೇಂದ್ರ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೊಡಗು ಮತ್ತು ಮಡಿಕೇರಿ ತಾಲೂಕು ಯುವ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ತಾಳತ್ತಮನೆಯ ಆಟದ ಮೈದಾನದಲ್ಲಿ ನಡೆದ ಕಾರ್ಯಕ್ರಮವನ್ನು ಛತ್ತೀಸ್ ಗಡ್ ಸಬ್ ಇನ್ಸ್ಪೆಕ್ಟರ್ ಬಿ.ಐ.ಕುಮಾರ್ (ಸಿಆರ್ಪಿಎಫ್) ಉದ್ಘಾಟಿಸಿದರು. ಮಹಿಳಾ ಆರೋಗ್ಯ ನಿವೃತ್ತ ಸಹಾಯಕಿ ಬೊಟ್ಟೋಳಂಡ ಕಾವೇರಮ್ಮ ನಾಣಯ್ಯ ನೇತಾಜಿ ಸುಭಾಷ್ ಚಂದ್ರ ಬೋಸ್ರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಕಾಟಕೇರಿಯ ಪ್ರಶಾಂತಿ ರೆಸಾರ್ಟ್ ಮಾಲಿಕರಾದ ಸವಿತ ಅಡಿಕೆರ ಸಂಘದ ಧ್ವಜಾರೋಹಣವನ್ನು ನೇರವೇರಿಸಿದರು. ಕಾರ್ಯಕ್ರಮದಲ್ಲಿ ಗ್ರಾ.ಪಂ ಸದಸ್ಯ ಹಾಗೂ ನೇತಾಜಿ ಯುವಕ ಮಂಡಲದ ಅಧ್ಯಕ್ಷ ಪಿ.ಕೆ.ಜೀವನ್, ಯುವತಿ…
ವಿರಾಜಪೇಟೆ ಜ.31 NEWS DESK : ಕರಡ ಶಾಖೆಯ “ಬ್ಯಾಂಕ್ ಆಫ್ ಬರೋಡ” ವತಿಯಿಂದ ವಿರಾಜಪೇಟೆಯ ಕಾವೇರಿ ಶಾಲೆಗೆ ಕ್ರೀಡಾ ಸಾಮಾಗ್ರಿಗಳನ್ನು ವಿತರಿಸಲಾಯಿತು. ಶಾಖೆಯ ಸೀನಿಯರ್ ಮ್ಯಾನೇಜರ್ ಸಿ.ವಿ.ಮಹೇಶ್ ವರ್ಮ ಕಾವೇರಿ ಶಾಲೆಗೆ ಕ್ರೀಡಾ ಸಾಮಾಗ್ರಿಗಳ ರೂಪದಲ್ಲಿ ರೂ.10,000 (ಹತ್ತು ಸಾವಿರ ) ರೂಪಾಯಿ ದೇಣಿಗೆಯನ್ನು ನೀಡಿದರು. ಈ ಸಂದರ್ಭ ಕಾವೇರಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ಎಸ್.ಸುದೇಶ್, ಕಾರ್ಯದರ್ಶಿ ಪಿ.ಎನ್.ವಿನೋದ್, ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಕೃತಜ್ಞತೆ ಸಲ್ಲಿಸಿದರು. ಕಾವೇರಿ ಶಾಲೆಯ ದೈಹಿಕ ಶಿಕ್ಷಕಿ ಮೋನಿಕ ಹಾಗೂ ರಾಜ್ಯಮಟ್ಟದ ಶೆಟ್ಟಲ್ ಬ್ಯಾಡ್ಮಿಂಟನ್ ಆಟಗಾರರು ಹಾಗೂ ಕ್ರೀಡಾ ನಾಯಕರುಗಳಾದ ಆಕರ್ಷ್ ಕೊಂಗಂಡ ಮತ್ತು ಎಂ.ಜಿ.ಅಯ್ಯಪ್ಪ ಹಾಜರಿದ್ದರು.
ಮಡಿಕೇರಿ ಜ.31 NEWS DESK : ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಳುಗೋಡು ಯರವ ಸಮುದಾಯ ವಸತಿ ರಹಿತ ಕುಟುಂಬದವರ ಹಾಡಿಗೆ ಮಾನವ ಹಕ್ಕು ಆಯೋಗದ ಅಧ್ಯಕ್ಷ ಎಲ್.ನಾರಾಯಣಸ್ವಾಮಿ, ಸದಸ್ಯರಾದ ಎಸ್.ಕೆ.ವಂಟಿಗೋಡಿ ಮತ್ತು ಟಿ.ಶ್ಯಾಮ್ ಭಟ್ ಭೇಟಿ ನೀಡಿ ಕುಟುಂಬದವರ ಜೊತೆ ಸಂವಾದ ನಡೆಸಿದರು. ನಿವೇಶನ, ಮನೆ ಇಲ್ಲದಿರುವುದು, ಕುಡಿಯುವ ನೀರು, ವಿದ್ಯುತ್, ಸಾರಿಗೆ ಸಂಪರ್ಕ ಇಲ್ಲದಿರುವುದು, ಟಾರ್ಪಲ್ ಕಟ್ಟಿಕೊಂಡು ಜೀವನ ದೂಡುತ್ತಿರುವುದನ್ನು ಗಮನಿಸಿ ಬೇಸರ ವ್ಯಕ್ತಪಡಿಸಿದರು. ಹಾಡಿ ಜನರ ಜೊತೆ ಸಂವಾದ ನಡೆಸಿದ ಮಾನವ ಹಕ್ಕು ಆಯೋಗದ ಅಧ್ಯಕ್ಷ ಎಲ್.ನಾರಾಯಣಸ್ವಾಮಿ ಮಕ್ಕಳನ್ನು ಕಡ್ಡಾಯವಾಗಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡಿಸುವಂತೆ ಸಲಹೆ ನೀಡಿದರು. ಹತ್ತಿರದಲ್ಲಿಯೇ ಏಕಲವ್ಯ ಮಾದರಿ ವಸತಿ ಶಾಲೆ ಇದ್ದು, ಅಲ್ಲಿಗೆ ಸೇರ್ಪಡೆ ಮಾಡಬೇಕು. ಶಿಕ್ಷಣದಿಂದ ಯಾರೂ ಸಹ ವಂಚಿತರಾಗಬಾರದು. ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ಕಾಣಲು ಸಾಧ್ಯ. ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡುವಂತೆ ಅಧ್ಯಕ್ಷರು ಸಲಹೆ ಮಾಡಿದರು. `ಅಲ್ಲಿನ ಯರವ ಸಮುದಾಯದ ಶೋಭಾ ಅವರು ಜಿಲ್ಲೆಯ ವಿವಿಧ…
ಮಡಿಕೇರಿ ಜ.31 NEWS DESK : ವಿರಾಜಪೇಟೆ ಪಟ್ಟಣದ ತಹಶೀಲ್ದಾರರ ಕಚೇರಿಯಲ್ಲಿ ರಾಜ್ಯ ಮಾನವ ಹಕ್ಕು ಆಯೋಗದ ಅಧ್ಯಕ್ಷರು ಮತ್ತು ಸದಸ್ಯರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಅಹವಾಲು ಸ್ವೀಕರಿಸುವುದಕ್ಕೂ ಮೊದಲು ಮಾತನಾಡಿದ ಮಾನವ ಹಕ್ಕು ಆಯೋಗದ ಅಧ್ಯಕ್ಷರಾದ ಎಲ್.ನಾರಾಯಣಸ್ವಾಮಿ, ಬಾಳುಗೋಡು ಯರವ ಕುಟುಂಬದವರು ವಾಸ ಮಾಡುತ್ತಿರುವುದನ್ನು ಗಮನಿಸಿ ಒಂದು ರೀತಿ ವಿಚಲಿತನಾದೆ ಎಂದು ಬೇಸರ ವ್ಯಕ್ತಪಡಿಸಿದರು. ಭಾರತ ದೇಶ ಚಂದ್ರಯಾನ ಉಡಾವಣೆ ಮಾಡಿ ಯಶಸ್ಸುಗಳಿಸಿದೆ. ವಿಶ್ವದ ಜಿಡಿಪಿಯಲ್ಲಿ 10 ರೊಳಗಿನ ಸ್ಥಾನವನ್ನು ಹೊಂದಿದೆ ಎಂದು ಹೇಳಲಾಗುತ್ತದೆ. ಆದರೆ ವಾಸಕ್ಕೆ ಯೋಗ್ಯವಾದ ನಿವೇಶನ, ಮನೆ, ವಿದ್ಯುತ್ ಹಾಗೂ ಸಾರಿಗೆ ಸಂಪರ್ಕ ಹೊಂದದೆ ಇರುವ ಎಷ್ಟೋ ಕಡುಬಡ ಕುಟುಂಬಗಳಿದ್ದು, ಭಾರತ ವಿಕಾಸ ಹೊಂದಿದೆಯೇ ಎಂಬುದನ್ನು ಪ್ರತಿಯೊಬ್ಬರೂ ಅವಲೋಕನ ಮಾಡಬೇಕಿದೆ ಎಂದರು. ಆದಿವಾಸಿ ಜನರಿಗೆ ಬೇಕಿರುವ ನಿವೇಶನ, ಮನೆ, ದೀಪ, ಹತ್ತಿರದಲ್ಲಿ ಅಂಗನವಾಡಿ, ಶಾಲೆ, ಇಂತಹ ಕನಿಷ್ಠ ಮೂಲ ಸೌಲಭ್ಯ ಇಲ್ಲದಿರುವುದು ನಮ್ಮ ವ್ಯವಸ್ಥೆ ಯಾವ ಮಟ್ಟಕ್ಕೆ ಇದೆ ಎಂಬುದನ್ನು ಪ್ರತಿಯೊಬ್ಬರೂ ಆತ್ಮವಲೋಕನ ಮಾಡಬೇಕಿದೆ ಎಂದು…
ಮಡಿಕೇರಿ ಜ.31 NEWS DESK : ಭಾರತೀಯ ಸೇನೆಯ ಮದ್ರಾಸ್ ರೆಜಿಮೆಂಟ್ನಲ್ಲಿ ಸುಬೇದಾರ್ ಆಗಿ ಸೇವೆಸಲ್ಲಿಸುತ್ತಿದ್ದ ಕೊಡಗಿನ ಎ.ಎ.ಸುಧಾಕರ್ ಲೆಫ್ಟಿನೆಂಟ್ ಆಗಿ ಬಡ್ತಿ ಪಡೆದಿದ್ದಾರೆ. ಗುಜರಾತ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸುಧಾಕರ್ ಗಣರಾಜ್ಯೋತ್ಸವ ಸಂದರ್ಭದಲ್ಲಿ ಬಡ್ತಿ ಪಡೆದಿದ್ದಾರೆ. ಇವರು ಮೂಲತಃ ಕೊಡಗಿನ ಸೋಮವಾರಪೇಟೆ ತಾಲೂಕಿನ ಶಾಂತಳ್ಳಿ ಹೋಬಳಿಯ ಕುಮಾರಳ್ಳಿ-ಬಾಚಳ್ಳಿ ಗ್ರಾಮದ ನಿವಾಸಿ ಎ.ಡಿ.ಅಪ್ಪಯ್ಯ ಹಾಗೂ ದಿ.ಜಾನಕಿ ದಂಪತಿಯ ಪುತ್ರ.
ಮಡಿಕೇರಿ ಜ.31 NEWS DESK : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿಗೆ ಜಿಲ್ಲೆಯ ನಾಲ್ವರು ಪತ್ರಕರ್ತರು ಭಾಜನರಾಗಿದ್ದಾರೆ. ದಾವಣಗೆರೆಯಲ್ಲಿ ಫೆ. 3 ಮತ್ತು 4 ರಂದು ನಡೆಯಲಿರುವ 38 ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ. ಪ್ರತಿನಿಧಿ ಪತ್ರಿಕೆ ಜಿಲ್ಲಾ ವರದಿಗಾರ ಸಣ್ಣುವಂಡ ಕಿಶೋರ್ ನಾಚಪ್ಪ ಅವರ ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟಗೊಂಡಿದ್ದ ‘ಕಳತ್ಮಾಡಿನಲ್ಲಿ ಮದ್ಯ ಮಾರಾಟವಿಲ್ಲ’ ಎಂಬ ವರದಿಗೆ ಜಿ. ನಾರಾಯಣ ಸ್ವಾಮಿ ಅವರ ಅತ್ಯುತ್ತಮ ಗ್ರಾಮಾಂತರ ವರದಿಗೆ ಪ್ರಶಸ್ತಿ ಲಭಿಸಿದೆ. ಸಣ್ಣುವಂಡ ಶ್ರೀನಿವಾಸ್ ಚೆಂಗಪ್ಪ ಅತ್ಯುತ್ತಮ ಸೇನಾ ವರದಿಗೆ ರಿಪಬ್ಲಿಕ್ ಕನ್ನಡ ಟಿವಿ ಕೊಡಗು ವರದಿಗಾರ ಬಾಚರಣಿಯಂಡ ಅನು ಕಾರ್ಯಪ್ಪ, ಟಿವಿ ಮಾಧ್ಯಮಕ್ಕೆ ನೀಡುವ ರವಿ ಬೆಳಗೆರೆ ಪ್ರಶಸ್ತಿ ಟಿವಿ9 ನ ಪಂಜೇರೀರ ಜಗದೀಶ್ ಬೆಳ್ಯಪ್ಪ, ಕೆ. ಎನ್. ಸುಬ್ರಮಣ್ಯ ಪ್ರಶಸ್ತಿಗೆ ಸ್ಟಾರ್ ಆಫ್ ಮೈಸೂರು ವರದಿಗಾರ ಪಿ. ವಿ. ಅಕ್ಷಯ್ ಭಾಜನರಾಗಿದ್ದಾರೆ.
ವಿರಾಜಪೇಟೆ ಜ.31 NEWS DESK : ಮುಳಿಯ ಜ್ಯುವೆಲ್ಲೆರ್ಸ್ ವತಿಯಿಂದ ನಡೆದ ದೇಶಭಕ್ತಿ ಗೀತೆಗಳ ನೃತ್ಯ ಸ್ಪರ್ಧೆಯಲ್ಲಿ ವಿರಾಜಪೇಟೆಯ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ಶ್ರಾವ್ಯ, ಶ್ರಾವಣಿ, ಶ್ರೇಯ, ತಷ್ಮ ತಂಗಮ್ಮ, ಗಹನ, ನೇಸರ, ಬಿಯಾಂಕಾ ರೈ, ದೃಶ್ಯ, ಧನ್ಯಶ್ರೀ, ಕೌಶಿ ಕಾವೇರಮ್ಮ, ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ಸಂಸ್ಥೆಯ ಶಿಕ್ಷಕರು ಹೇಮಾವತಿ ಕಾಂತ್ರಾಜ್ ಹಾಗೂ ಕುಮಾರಿ ಕಾವ್ಯಶ್ರೀ ಕಾಂತ್ರಾಜ್ ತರಬೇತಿ ನೀಡಿದರು.
ಮಡಿಕೇರಿ ಜ.31 NEWS DESK : ಪ್ರಧಾನಿ ಮೋದಿ ಅವರು ದಿನದ ಹದಿನೆಂಟು ಗಂಟೆ ದುಡಿಯುತ್ತಿದ್ದಾರೆ, ದೇಶ ಅಭಿವೃದ್ಧಿ ಹೊಂದುತ್ತಿದೆ ಎಂದು ಬಿಜೆಪಿ ಮಂದಿ ಹೇಳಿಕೊಳ್ಳುತ್ತಿದ್ದಾರೆ. ಆದರೆ ದೇಶದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಕಾಣುತ್ತಿಲ್ಲ, ಬದಲಿಗೆ ಪ್ರತಿಯೊಬ್ಬ ಪ್ರಜೆಯ ತಲೆಗೆ 4.50 ಲಕ್ಷ ರೂ. ಸಾಲದ ಹೊರೆಯನ್ನು ಹಾಕಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ. ಮಡಿಕೇರಿ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2014 ಮಾರ್ಚ್ ತಿಂಗಳವರೆಗೆ ದೇಶದ ಸಾಲ ರೂ.53.11 ಲಕ್ಷ ಕೋಟಿ ಇತ್ತು. ಆದರೆ ಈಗ ಈ ಮೊತ್ತ ರೂ.173 ಲಕ್ಷ ಕೋಟಿಯಾಗಿದೆ. ರೂ.25 ಲಕ್ಷ ಕೋಟಿಯಷ್ಟು ಆರ್ಬಿಐ ಸಾಲ ಸೇರಿ ಕಳೆದ ಹತ್ತು ವರ್ಷಗಳಲ್ಲಿ ಸಾಲದ ಮೊತ್ತ ಒಟ್ಟು 258 ಲಕ್ಷ ಕೋಟಿಯಾಗಿದೆ ಎಂದರು. ಕರ್ನಾಟಕ ರಾಜ್ಯ ತೆರಿಗೆ ವಸೂಲಿಯಲ್ಲಿ ಎರಡನೇ ಸ್ಥಾನದಲ್ಲಿದ್ದು, ವಾರ್ಷಿಕ ಕೇಂದ್ರಕ್ಕೆ 4 ಲಕ್ಷದ 81 ಸಾವಿರ ಕೋಟಿ ರೂ. ತೆರಿಗೆಯನ್ನು ಪಾವತಿಸುತ್ತಿದೆ. ನೀತಿ ಆಯೋಗದ ಪ್ರಕಾರ ಶೇ.40 ರಷ್ಟು ಹಣವನ್ನು ನಮ್ಮ…






