ಬೆಂಗಳೂರು ಜ.31 NEWS DESK : జిಲ್ಲಾ ಮಟ್ಟದ ಎಲ್ಲಾ ಇಲಾಖೆಗಳಲ್ಲಿ ಅನುಷ್ಠಾನವಾಗುವ ಯೋಜನೆಗಳ ಕ್ಷೇತ್ರಮಟ್ಟದ ಪ್ರಗತಿ ವೀಕ್ಷಣೆಗೆ ಪೂರಕವಾಗಿ ಅಭಿವೃದ್ಧಿ ಪಡಿಸಿರುವ “ಪ್ರಗತಿ ಮೊಬೈಲ್ ಅಪ್ಲಿಕೇಶನ್” ತಂತ್ರಾಂಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಪ್ರಗತಿ ಮೊಬೈಲ್ ಅಪ್ಲಿಕೇಶನ್ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನಗಳ ಪರಿಣಾಮಕಾರಿ ಮೇಲ್ವಿಚಾರಣೆಗೆ ಸಹಾಯ ಮಾಡುತ್ತದೆ ಮತ್ತು ಅಧಿಕಾರಿಗಳು ವೇಳಾಪಟ್ಟಿಯ ಪ್ರಕಾರ ಸಂಸ್ಥೆಗಳಿಗೆ ಭೇಟಿ ನೀಡುವುದರಿಂದ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಅವುಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ. ಯೋಜನೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಮತ್ತು ನಿಧಿಯ ಪರಿಣಾಮಕಾರಿ ಬಳಕೆಗೆ ನೆರವಾಗಲಿದೆ. ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿದಂತೆ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಲೇಖಕ: admin
ಮಡಿಕೇರಿ ಜ.31 NEWS DESK : ಕೊಡಗು ಜಿಲ್ಲಾ ಬಿಜೆಪಿಯ ಕಾರ್ಯಕಾರಿ ಸಮಿತಿ ಸಭೆ ಫೆ.2 ರಂದು ಮಡಿಕೇರಿಯ ಕಾವೇರಿ ಹಾಲ್ನಲ್ಲಿ ನಡೆಯಲಿದೆ ಎಂದು ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಭೀಮಯ್ಯ ತಿಳಿಸಿದ್ದಾರೆ. ಸಭೆಯಲ್ಲಿ ಮಾಜಿ ಸಚಿವರುಗಳಾದ ಆರ್.ಅಶೋಕ್, ಸುನಿಲ್ ಕುಮಾರ್, ಕೋಟ ಶ್ರೀನಿವಾಸ್ ಪೂಜಾರಿ ಸೇರಿದಂತೆ ಸಂಸದರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ವಿವಿಧ ಘಟಕಗಳ ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಇದೇ ಸಭೆಯಲ್ಲಿ ನೂತನ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರ ಪದಗ್ರಹಣ ಕಾರ್ಯಕ್ರಮವು ನಡೆಯಲಿದೆ ಎಂದರು.
ಮಡಿಕೇರಿ ಜ.31 NEWS DESK : ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಈ ಹಿಂದಿನ ಚುನಾವಣೆಯಲ್ಲಿ ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲಾ ಭರವಸೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಯಶಸ್ವಿಯಾಗಿದೆ. ಅಭಿವೃದ್ಧಿ ಕಾರ್ಯಗಳ ಕುರಿತು ಬಹಿರಂಗ ಚರ್ಚೆ ನಡೆಸಲು ಕಾಂಗ್ರೆಸ್ಸಿಗರು ಸಮಯ ಮತ್ತು ಸ್ಥಳವನ್ನು ನಿಗಧಿ ಮಾಡಿದರೆ ನಾವು ಬರಲು ಸಿದ್ಧರಿದ್ದೇವೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಸಂಸದರನ್ನು ಟೀಕಿಸಿರುವುದು ಖಂಡನೀಯ, ಜನರ ಮುಂದೆ ವಾಸ್ತವಾಂಶವನ್ನು ಹೇಳಬೇಕಾಗಿದೆ. 2018ರಲ್ಲಿ ಜಿಲ್ಲೆಗೆ ರೈಲ್ವೆ ಯೋಜನೆ ತರುವುದಾಗಿ ಹೇಳಿದ್ದು ನಿಜ, ಯಾವುದೇ ರೈಲ್ವೆ ಯೋಜನೆಗೆ ಭೂ ಸ್ವಾಧೀನವನ್ನು ಹಾಗೂ ಶೇ.50 ಅನುದಾನ ರಾಜ್ಯ ಸರ್ಕಾರ ಮಾಡಿ ಕೊಡಬೇಕು 2013 ರಿಂದ 18ರವರೆಗೆ ಇದ್ದ ಸಿದ್ದರಾಮಯ್ಯನವರು ಉಚಿತವಾಗಿ ಭೂ ಸ್ವಾದೀನ ಹಾಗೂ ಶೇ.50 ಅನುದಾನ ನೀಡಲು ಸಾಧ್ಯವಿಲ್ಲ ಎಂಬುದಾಗಿ ತಿಳಿಸಿದರು. ಆದರೂ 2018ರಲ್ಲಿ ಲೈನ್ ಎಸ್ಟಿಮೇಟ್ ಮಾಡಿದ್ದು 1954 ಕೋಟಿ ಯೋಜನೆ ಆಗಿತ್ತು…
ಕುಶಾಲನಗರ ಜ.31 NEWS DESK : ಸ್ಮಾರ್ಟ್ ಬ್ರೈನ್ಸ್ ಅಬಾಕಸ್ ಅಕಾಡೆಮಿ ವತಿಯಿಂದ 9ನೇ ವರ್ಷದ ರಾಜ್ಯ ಮಟ್ಟದ ಅಬಾಕಸ್, ವೇದಿಕ್ ಮ್ಯಾಥ್ಸ್, ರೂಬಿಕ್ಸ್ ಕ್ಯೂಬ್, ಕ್ಯಾಲಿಗ್ರಫಿ ಮತ್ತು ಮಿಡ್ಬ್ರೇನ್ ಆಕ್ಟಿವೇಶನ್ ಸ್ಪರ್ಧೆ ಯು ರೈತ ಸಹಕಾರ ಭವನದ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವಯ್ಯ ಎಸ್.ಪಲ್ಲೇದ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಚಿಕ್ಕವಯಸ್ಸಿನಲ್ಲೇ ಸ್ಪರ್ಧಾತ್ಮಕಕ ಕಾರ್ಯಕ್ರಮಗಳಲ್ಲಿ ಭಾಗಹಿಸುವುದರಿಂದ ಸ್ಪರ್ಧಾ ಯುಗಕ್ಕೆ ಹೇಗೆ ತೆರೆದುಕೊಳ್ಳಬೇಕು ಎಂಬುದು ತಿಳಿಯುತ್ತದೆ. ಸ್ಪರ್ಧೆಗಳಲ್ಲಿ ಸೋಲು ಗೆಲುವಿಗಾಗಿ ಅಲ್ಲದೆ ಒಳ್ಳೆಯ ಅನುಭವಕ್ಕಾಗಿ ಭಾಗವಹಿಸಬೇಕು. ವಿಶೇಷವಾಗಿ ಸೋತಾಗ ನಮಗೆ ಸಿಗುವ ಅನುಭವ ಮತ್ತು ಜೀವನದ ಪಾಠ ಗೆದ್ದಾಗ ಸಿಗುವುದಿಲ್ಲ. ಅಲ್ಲದೇ, ಒಮ್ಮೆ ಸೋತವರು ಮತ್ತೊಮ್ಮೆ ಗೆಲ್ಲಲೇ ಬೇಕು. ಅದಕ್ಕೆ ನಿರಂತರ ಪರಿಶ್ರಮ ಬೇಕಾಗುತ್ತದೆ ಮಕ್ಕಳ ಪ್ರತಿಭೆಯ ಅನಾವರಣಕ್ಕೆ ಅಬಾಕಸ್ ಪೂರಕವಾಗಿದೆ ಇದರ ಸದುಪಯೋಗಪಡಿಸಿಕೊಂಡು ಪ್ರತಿಭಾನ್ವಿತರಾಗಿ ಮುಂದೆ ಬರಬೇಕೆಂದು ಕರೆ ನೀಡಿದರು. ಮೈಸೂರು ಸಣ್ಣ ನೀರಾವರಿ ಇಲಾಖೆಯ ಸಿವಿಲ್ ಸಹಾಯಕ ಇಂಜಿನಿಯರ್ ಶೈಜೆನ್ ಕೆ. ಪೀಟರ್ ಮಾತನಾಡಿ, ಅತಿಯಾದ ಬಳಕೆಯ…
ಮಡಿಕೇರಿ ಜ.31 NEWS DESK : ಮಡಿಕೇರಿ ತಾಲೂಕು ಜಾನಪದ ಪರಿಷತ್ ವತಿಯಿಂದ ರೋಟರಿ ಮಿಸ್ಟಿ ಹಿಲ್ಸ್, ಕೊಡಗು ಜಾನಪದ ಪರಿಷತ್ ಮತ್ತು ಕೊಡಗು ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಹಯೋಗದಲ್ಲಿ ಆಯೋಜಿತ ಮಹಾತ್ಮ ಗಾಂಧೀಜಿಗೆ ಗಾನನಮನ ಕಾಯ೯ಕ್ರಮ ನಗರದ ಗಾಂಧಿ ಭವನದಲ್ಲಿ ಅಥ೯ಪೂಣ೯ವಾಗಿ ಜರುಗಿತು. ಮಡಿಕೇರಿಯ 22 ಗಾಯಕ, ಗಾಯಕಿಯರು ಗಾನನಮನದಲ್ಲಿ ಪಾಲ್ಗೊಂಡು ಮಹಾತ್ಮ ಗಾಂಧೀಜಿಗೆ ಪ್ರಿಯವಾಗಿದ್ದ ದೇಶಭಕ್ತಿಗೀತೆ, ಕೀತ೯ನೆ, ಭಜನೆ, ತತ್ವಪದಗಳನ್ನು ಹಾಡಿದ್ದು, ವಿಶೇಷವಾಗಿತ್ತು. ಮಡಿಕೇರಿಯ ಶೃತಿ, ಲಯ ತಂಡದ ವೀಣಾ ಹೊಳ್ಳ, ಲಕ್ಷ್ಮಿ ಈಶ್ವರ ಭಟ್, ಮಮತಾಶಾಸ್ತ್ರಿ, ತನುಶ್ರೀ, ಸ್ವಾತಿ ಅರುಣ್, ಸವಿತಾ ಗುರುಪ್ರಸಾದ್, ಆರತಿ, ಸುಧಾ ಎಸ್ ಪ್ರಸಾದ್. ವಿಜಯ ವಿನಾಯಕ ಭಜನಾ ಮಂಡಳಿಯ ಗಾಯಕಿಯರಾದ ಅರವಿಂದ್ ಅಣ್ಣಪ್ಪ, ಮೀರಾ, ಶಾಂತಿ ಅಚ್ಚಯ್ಯ, ಪ್ರೇಮರಾಘವಯ್ಯ, ವಿಜಯಗೋಪಾಲಕೃಷ್ಣ ಭಟ್, ವೇದಾಶೆಟ್ಟಿ, , ಭಕ್ತಿಗೀತೆಗ, ಕೀತ೯ನೆಗಳನ್ನು ಹಾಡಿದರೆ, ಜಿ.,ಚಿದ್ವಿಲಾಸ್, ಸಂಧ್ಯಾ ಚಿದ್ವಿಲಾಸ್, ವಂದನಾ ಪೊನ್ನಪ್ಪ, ಚಿತ್ರಾ ನಂಜಪ್ಪ, ಎ.ಹೇಮಾನಿ , ಮಂಜುಳ ರಾಮಕೃಷ್ಣ ಭಟ್, ದೇಶಭಕ್ತಿ ಗೀತೆಗಳನ್ನು ಹಾಡಿದರು.…
ಮಡಿಕೇರಿ ಜ.31 NEWS DESK : ವಿರಾಜಪೇಟೆ ತಾಲ್ಲೂಕಿನ ಬಿಟ್ಟಂಗಾಲ ಬಳಿಯ ಬಾಳುಗೋಡು ಹಾಡಿಗೆ ಮಾನವ ಹಕ್ಕು ಆಯೋಗದ ಅಧ್ಯಕ್ಷ ಎಲ್.ನಾರಾಯಣಸ್ವಾಮಿ, ಸದಸ್ಯರಾದ ಎಸ್.ಕೆ.ಒಂಟಗೋಡಿ ಮತ್ತು ಟಿ.ಶ್ಯಾಮ್ ಭಟ್ ಭೇಟಿ ನೀಡಿ ಯರವ ಸಮುದಾಯದ ನಿರ್ಗತಿಕ ಕುಟುಂಬದವರ ಜೊತೆ ಸಂವಾದ ನಡೆಸಿದರು.
ಚೆಯ್ಯಂಡಾಣೆ ಜ.30 NEWS DESK : ಸಂವಿಧಾನ ದಿನಾಚರಣೆಯ ಅಂಗವಾಗಿ ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲಾಡಳಿತದ ವತಿಯಿಂದ ಸಂವಿಧಾನದ ಮಹತ್ವದ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆಯೋಜಿಸಲಾದ ಸಂವಿಧಾನ ಜಾಗೃತಿ ಜಾಥಾದ ರಥವನ್ನು ಚೆಯ್ಯ0ಡಾಣೆಯಲ್ಲಿ ಸ್ವಾಗತಿಸಲಾಯಿತು. ಚೆಯ್ಯ0ಡಾಣೆ ಪಟ್ಟಣದಲ್ಲಿ ಗ್ರಾ.ಪಂ ಪದಾಧಿಕಾರಿಗಳು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಬಳಿಕ ಪಟ್ಟಣದ ಮುಖ್ಯಬೀದಿಗಳಲ್ಲಿ ವಿದ್ಯಾರ್ಥಿಗಳ ವಾದ್ಯಗೋಷ್ಠಿಗಳೊಂದಿಗೆ ತೆರಳಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ ಅಧ್ಯಕ್ಷತೆಯಲ್ಲಿ ಆಯೋಜಿಸಲಾದ ಸಭಾ ಕಾರ್ಯಕ್ರಮದಲ್ಲಿ ಶಿಕ್ಷಕಿ ಸತ್ಯಮ್ಮ ಸಂವಿಧಾನ ರಚನೆ ಮತ್ತು ಅದರ ಆಶಯಗಳ ಕುರಿತು ಮಾಹಿತಿ ನೀಡಿದರು. ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಸಹಾಯಕ ನಿರ್ದೇಶಕ ಬಾಲಕೃಷ್ಣ ರೈ ಸಂವಿಧಾನ ಜಾಥಾ ಕಾರ್ಯಕ್ರಮದ ಕುರಿತು ವಿವರಿಸಿದರು. ಬಳಿಕ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನದ ಮಹತ್ವದ ಕುರಿತು ಆಯೋಜಿಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಗಣ್ಯರು ಬಹುಮಾನ ವಿತರಿಸಿದರು. ಈ…
ಮಡಿಕೇರಿ ಜ.31 NEWS DESK : ದಕ್ಷಿಣದ ಕಾಶ್ಮೀರವೆಂದೇ ಖ್ಯಾತಿ ಗಳಿಸಿರುವ ಕಾವೇರಿನಾಡು ಕೊಡಗು ಜಿಲ್ಲೆಗೆ ಆಗಮಿಸುತ್ತಿರುವ ಪ್ರವಾಸಿಗರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಮೂರು ಪಟ್ಟು ಹೆಚ್ಚಾಗುತ್ತಲೇ ಇದೆ. ರಾಜ್ಯದ ಆಕರ್ಷಕ ಚಾರಣತಾಣ ಸೋಮವಾರಪೇಟೆ ಮತ್ತು ಸುಬ್ರಹ್ಮಣ್ಯ ಪುಷ್ಪಗಿರಿ ವಲಯದ ಕುಮಾರಪರ್ವತಕ್ಕೆ ಕಳೆದವಾರ ಮಿತಿ ಮೀರಿ ಪ್ರವಾಸಿಗರು ಆಗಮಿಸಿದ್ದಾರೆ. ಚಾರಣಿಗರ ಸಂಖ್ಯೆ ಹೆಚ್ಚಳವಾದ ಕುರಿತು ವಿಡಿಯೋ ವೈರಲ್ ಆಗಿ ಅರಣ್ಯ ಇಲಾಖೆಯನ್ನು ಎಚ್ಚೆತ್ತುಕೊಳ್ಳುವಂತೆ ಮಾಡಿದೆ. ಇದೇ ಕಾರಣದಿಂದ ಫೆ.1ರಿಂದ ಕುಮಾರಪರ್ವತಕ್ಕೆ ಪ್ರವೇಶಾವಕಾಶ ಬಂದ್ ಮಾಡಿ ಮುಂದಿನ ಅಕ್ಟೋಬರ್ನಿಂದ ಆನ್ಲೈನ್ ಬುಕಿಂಗ್ ಆರಂಭಿಸಲು ಅರಣ್ಯ ಅಧಿಕಾರಿಗಳು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಪ್ರತಿನಿತ್ಯ ಸುಬ್ರಮಣ್ಯ ಮತ್ತು ಪುಷ್ಪಗಿರಿ ವನ್ಯಜೀವಿ ವಲಯದ ಕಡೆಯಿಂದ ತೆರಳಲು ತಲಾ 300 ಮಂದಿ ಚಾರಣಿಗರಿಗೆ ಮಾತ್ರ ಅವಕಾಶ ಕಲ್ಪಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಜ.26ರಿಂದ ಸರಣಿ ರಜೆ ಇದ್ದುದರಿಂದ ಕುಕ್ಕೆ ಸುಬ್ರಮಣ್ಯ ವನ್ಯಜೀವಿ ಗೇಟ್ನಲ್ಲಿ ಸುಮಾರು 1200ಕ್ಕೂ ಅಧಿಕ ಚಾರಣಿಗರು ಟ್ರಕ್ಕಿಂಗ್ ಗೆ ಬಂದಿದ್ದರು. ಈ ಹಿನ್ನೆಲೆಯಲ್ಲಿ ತಪಾಸಣಾ ಗೇಟ್ನಲ್ಲಿ…
ಕುಶಾಲನಗರ ಜ.31 NEWS DESK : ನೈಸರ್ಗಿಕ ಸಂಪನ್ಮೂಲಗಳ ರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದು ಸೀಕೋ ಸಂಸ್ಥೆಯ ಮುಖ್ಯಸ್ಥರಾದ ಡಾ.ಹರೀಶ್ ಕುಮಾರ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಇಂಧನ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ವತಿಯಿಂದ ದೇಶದಾದ್ಯಂತ ವಿದ್ಯಾರ್ಥಿಗಳಿಗೆ ಮತ್ತು ಯುವ ಜನತೆಗೆ ಇಂಧನ ಉಳಿತಾಯ ಕುರಿತು ವಿವಿಧ ಜಾಗೃತಿ ಕಾರ್ಯಕ್ರಮ ಅಂಗವಾಗಿ ರಾಜ್ಯದಲ್ಲಿ ಇಂಡಿಯನ್ ಆಯಿಲ್ ಕಾರ್ಪೋರೇಷನ್ ಸಹಯೋಗದಲ್ಲಿ ಕುಶಾಲನಗರದ ಸರ್ಕಾರಿ ಪಾಲಿಟೆಕ್ನಿಕ್ ಮತ್ತು ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಯುವ ಜನತೆಯ ಜೊತೆಗೆ ಇಂಧನ ಉಳಿತಾಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ನೈಸರ್ಗಿಕ ಸಂಪನ್ಮೂಲಗಳ ದುರ್ಬಳಕೆಯಿಂದಾಗಿ ಮುಂದಿನ ಪೀಳಿಗೆಗೆ ಒಂದು ಹನಿ ಶುದ್ಧ ಗಾಳಿ, ಸ್ವಚ್ಛ ನೀರು ಸಿಗದಂತಹ ಪರಿಸರ ನಿರ್ಮಾಣವಾಗುತ್ತಿದೆ. ಕಳೆದ ಮೂರು ದಶಕಗಳಲ್ಲಿ ವಾಯು ಮಾಲಿನ್ಯ ಅತಿಯಾಗಿದೆ. ಆಮ್ಲಜನಕದ ಸಿಲಿಂಡರ್ ಬಳಸಿ ಉಸಿರಾಡುವ ದಿನಗಳು ಮಾರ್ಪಾಡಾಗುತ್ತಿದೆ. ಶುದ್ಧ ನೀರು ಹರಿಯುತ್ತಿರುವ ನದಿಗಳು ಕಣ್ಮರೆಯಾಗುತ್ತಿದೆ. ಜಾಗತಿಕ ತಾಪಮಾನದ ಏರಿಕೆಯಿಂದಾಗಿ ಅತಿವೃಷ್ಠಿ, ಅನಾವೃಷ್ಠಿ ಉಂಟಾಗುತ್ತಿವೆ. ಇಂಗಾಲದ ನಿಯಂತ್ರಣ ತಡೆಯುವಲ್ಲಿ ಪ್ರತಿಯೊಬ್ಬರೂ ಎಚ್ಚರವಹಿಸಬೇಕು.…






