ಲೇಖಕ: admin

ಮಡಿಕೇರಿ ಜ.31 NEWS DESK : ಪ್ರಸಕ್ತ (2023-24) ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ‘ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಫೆ.15 ರವರೆಗೆ ಅವಧಿ ವಿಸ್ತರಿಸಲಾಗಿದೆ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ https://ssp.postmatric.karnataka.gov.in ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗೆ ಇಲಾಖಾ ವೆಬ್‍ಸೈಟ್ https://bcwd.karnataka.gov.in ನ್ನು ನೋಡಬಹುದು. ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ ಸಂಖ್ಯೆ 8050770005, ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಸಹಾಯವಾಣಿ ಇ-ಮೇಲ್:postmatrichelp@karnataka.gov.in ದೂ.ಸಂ.080-35254757 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ  ತಿಳಿಸಿದ್ದಾರೆ.

Read More

ಮಡಿಕೇರಿ ಜ.31 NEWS DESK :  ಕೊಡಗು ಜಿಲ್ಲೆ ಕೃಷಿ ಇಲಾಖೆಯ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ (ಎಟಿಎಂಎ) ಯೋಜನೆಯಡಿ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ 2 ಹುದ್ದೆಗಳಿಗೆ ಒಪ್ಪಂದದ ಆಧಾರದ ಮೇಲೆ 2023-24ನೇ ಸಾಲಿನ ಸೀಮಿತ ಅವಧಿಗೆ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸೋಮವಾರಪೇಟೆ ತಾಲ್ಲೂಕು ಹಾಗೂ ವಿರಾಜಪೇಟೆ ತಾಲ್ಲೂಕುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಷರತ್ತಿಗೆ ಒಳಪಟ್ಟು ಅರ್ಜಿಗಳನ್ನು ಆಹ್ವಾನಿಸಿದೆ. ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ವಿದ್ಯಾರ್ಹತೆ ಎಂ.ಎಸ್ಸಿ(ಕೃಷಿ/ ತೋಟಗಾರಿಕೆ/ಮೀನುಗಾರಿಗೆ/ ಅರಣ್ಯ/ ರೇಷ್ಮೆ). ಕನಿಷ್ಟ 2 ವರ್ಷ ಕೃಷಿ ವಿಸ್ತರಣಾ ಮತ್ತು ಸಂಬಂಧಿತ ಚಟುವಟಿಕೆಯಲ್ಲಿ ಅನುಭವ ಹಾಗೂ ಎಮ್‍ಎಸ್ ಆಫಿಸ್‍ನಲ್ಲ್ಲಿ ಪರಿಣಿತಿ ಹೊಂದಿರಬೇಕು. ಗರಿಷ್ಠ 45 ವರ್ಷದೊಳಗಿರಬೇಕು. ಮಾಸಿಕ ರೂ.30 ಸಾವಿರ ಗೌರವ ಧನ ನೀಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಹರಿರುವ ಆಭ್ಯರ್ಥಿಗಳು ಫೆಬ್ರವರಿ, 15 ರೊಳಗೆ ಕಚೇರಿ ವೇಳೆಯಲ್ಲಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ ಇಲ್ಲಿ ಅರ್ಜಿಗಳನ್ನು ಸಲ್ಲಿಸುವಂತೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಜಂಟಿ…

Read More

ಮಡಿಕೇರಿ ಜ.30 NEWS DESK :  2023-24 ಸಾಲಿನ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದ ಪ್ರಯುಕ್ತ ನಗರದ ಜಿಲ್ಲಾ ಸ್ಕೌಟ್ ಮತ್ತು ಗೈಡ್ಸ್ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆಯ ಸಹಯೋಗದೊಂದಿಗೆ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಆಚರಿಸಲಾಯಿತು. ಸ್ಕೌಟ್ ಗೈಡ್ ಭವನ ಸಭಾಂಗಣದಲ್ಲಿ ನಡೆದ “ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು ಹಾಗೂ ಜಿಲ್ಲಾ ಗೈಡ್ ಆಯುಕ್ತರಾದ ರಾಣಿ ಮಾಚಯ್ಯ ಉದ್ಘಾಟಿಸಿ ಹೆಣ್ಣು ಮಕ್ಕಳು ಹೆಚ್ಚಾಗಿ ವಿದ್ಯಾವಂತರಾಗಬೇಕು ಎಂದು ಕಿವಿಮಾತು ಹೇಳಿದರು. ಶಾಲಾ ಶಿಕ್ಷಣ ಇಲಾಖೆಯ ದೈಹಿಕ ಪರಿವೀಕ್ಷಕರಾದ ಸದಾಶಿವಯ್ಯ ಪಲ್ಲೆದ್ ಅವರು ಮಾತನಾಡಿ ಹೆಣ್ಣು ಮಕ್ಕಳು ವಿದ್ಯಾವಂತರಾಗಿ ಧೈರ್ಯವಂತರಾಗಿ ಇದ್ದರೆ ಒಂದು ಸಮಾಜವು ಉನ್ನತ ಮಟ್ಟಕ್ಕೆ ಹೋಗಲು ಯಾವುದೇ ಸಂಶಯವಿಲ್ಲ ಎಂದು ತಿಳಿಸಿದರು. ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿ ಮ್ಯಾಥ್ಯು ಅವರು ಮಾತನಾಡಿ ಈಗ…

Read More

ಮಡಿಕೇರಿ ಜ.30 NEWS DESK :  ಪೆರಾಜೆ ಗ್ರಾ.ಪಂ.ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್‍ಪೊನ್ನಣ್ಣ ಚಾಲನೆ ನೀಡಿದರು. ಕೆ.ಪೆರಾಜೆ, ಆಲೆಟ್ಟಿ-ಕಾಪುಮಲೆ-ಕುಂದಲ್ಪಾಡಿ-ಕುಂಬಳಚೇರಿ ವಿ.ಎಸ್.ಎಸ್.ಎನ್. ಸುಮಾರು 170 ಲಕ್ಷ ರೂ. ವೆಚ್ಚದ ಕಾಮಗಾರಿಗೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. ಸುಮಾರು 400 ಲಕ್ಷ ರೂ. ವೆಚ್ಚದ ಕೆ.ಪೆರಾಜೆ-ಆಲೆಟ್ಟಿ-ಕಾಪುಮಲೆ-ಕುಂದಲ್ಪಾಡಿ-ಕುಂಬಳಚೇರಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. 10 ಲಕ್ಷ ರೂ. ವೆಚ್ಚದ ಪೆರಾಜೆ ಗ್ರಾಮ ಪಂಚಾಯಿತಿ ಬಂಗಾರುಕೋಡಿ ರಸ್ತೆ ಯಾಪರೆ ಕುಟುಂಬಸ್ಥರ ರಸ್ತೆ ಹತ್ತಿರ ಕಾಲು ಸೇತುವೆ ಕಾಮಗಾರಿಗೆ ಚಾಲನೆ ಒಟ್ಟು 580 ಲಕ್ಷ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು.

Read More

ಮಡಿಕೇರಿ ಜ.30 NEWS DESK : ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಪೆರಾಜೆ ಗ್ರಾಮದ ಅನ್ನಪೂರ್ಣೇಶ್ವರಿ ಸಭಾಂಗಣದಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಯಿತು. ಜನಸ್ಪಂದನಾ ಕಾರ್ಯಕ್ರಮದಲ್ಲಿ ಗ್ರಾಮಿಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದಂತೆ ಕುಡಿಯುವ ನೀರು, ರಸ್ತೆ ಮತ್ತು ಸೇತುವೆ ನಿರ್ಮಾಣ, ವಿದ್ಯುತ್ ದೀಪ ಅಳವಡಿಸುವುದು ಮತ್ತಿತರ ಸಂಬಂಧ 24 ಅರ್ಜಿಗಳು ಸಲ್ಲಿಕೆಯಾದವು. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ 17 ಅರ್ಜಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಬಂಧಿಸಿದಂತೆ 5 ಅರ್ಜಿಗಳು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಸಂಬಂಧಿಸಿದಂತೆ 4 ಅರ್ಜಿಗಳು, ಸೆಸ್ಕ್, ಅರಣ್ಯ, ಕೆಎಸ್‍ಆರ್‍ಟಿಸಿ ವಿಭಾಗಕ್ಕೆ ತಲಾ 2 ಅರ್ಜಿಗಳು, ಪೊಲೀಸ್, ಆಹಾರ, ಉದ್ಯೋಗ ವಿನಿಮಯ, ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ತಲಾ 1 ಅರ್ಜಿಗಳು ಒಟ್ಟು 60 ಅರ್ಜಿಗಳು ಸಾರ್ವಜನಿಕರಿಂದ ಸಲ್ಲಿಕೆಯಾದವು. ಜನಸ್ಪಂದನಾ ಸಭೆಯ ಆರಂಭದಲ್ಲಿ ಮಾತನಾಡಿದ ಶಾಸಕ ಎ.ಎಸ್.ಪೊನ್ನಣ್ಣ ಅವರು ಸರ್ಕಾರ ಜನರ ಬಾಗಿಲಿಗೆ ಬಂದು…

Read More

ಮಡಿಕೇರಿ ಜ.30 NEWS DESK : ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಹಲವು ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು. ಸಭೆಯ ಆರಂಭದಲ್ಲಿ ಮಾಹಿತಿ ನೀಡಿದ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್, ಹೋಂ ಸ್ಟೇ ಮಾಲೀಕರು ಹಾಗೂ ಟ್ಯಾಕ್ಸಿ ಮಾಲಿಕರಿಗೆ ತರಬೇತಿ ಕಾರ್ಯಗಾರ ಏರ್ಪಡಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು. ಜಿಲ್ಲೆಯ ಪ್ರವಾಸಿ ಕೇಂದ್ರಗಳಲ್ಲಿ ಹೆದ್ದಾರಿ ಫಲಕ ಹಾಗೂ ಸೈನೇಜ್ ಬೋರ್ಡ್‍ಗಳನ್ನು ಅಳವಡಿಸಲು ಉದ್ದೇಶಿಸಲಾಗಿದ್ದು, ಆ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಲು ಮುಂದಾಗಲಾಗಿದೆ ಎಂದು ಅವರು ಸಭೆಯ ಗಮನಕ್ಕೆ ತಂದರು. ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿಯಮಾನುಸಾರ ಅಗತ್ಯ ಕ್ರಮವಹಿಸಬೇಕು. ಪ್ರವಾಸಿಗರಿಗೆ ಹೆಚ್ಚಿನ ಮಾಹಿತಿ ದೊರೆಯುವಂತಾಗಬೇಕು ಎಂದು ಸೂಚಿಸಿದರು. ಜಿಲ್ಲೆಯಲ್ಲಿ 4 ಸಾವಿರ ಹೋಂ ಸ್ಟೇಗಳಿದ್ದು, ಸುಮಾರು 1900 ರಷ್ಟು ಹೋಂ ಸ್ಟೇಗಳು ನೋಂದಣಿಯಾಗಿವೆ. ಉಳಿದ ಹೋಂ ಸ್ಟೇಗಳನ್ನು…

Read More

ಸುಂಟಿಕೊಪ್ಪ ಜ.30 NEWS DESK :  ಬೋಯಿಕೇರಿ ಗ್ರಾಮದ ಶ್ರೀ ಸಿದ್ಧಿ-ಬುದ್ಧಿ ವಿನಾಯಕ ದೇವಾಲಯದ 8ನೇ ವರ್ಷದ ವಾರ್ಷಿಕ ಪ್ರತಿಷ್ಠಾಪನಾ ಮಹೋತ್ಸವದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆಯಿತು. ದೇವಾಲಯದಲ್ಲಿ ಮುಂಜಾನೆಯಿಂದಲೇ ಸ್ಥಳ ಶುದ್ಧಿ, ಪುತ್ಸಾಹ ವಾಚನ, ನವ ಕಲಶ, 108 ತೆಂಗಿನ ಕಾಯಿ, ಗಣಪತಿ ಹೋಮ ಹಾಗೂ ಮಹಾಪೂಜೆಯ ನಂತರ ಮಹಾ ಮಂಗಳಾರತಿ ನೇರವೇರಿತು. ನಂತರ ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗ ಹಾಗೂ ಅನ್ನದಾನ ನೆರವೇರಿತು.

Read More

ಮಡಿಕೇರಿ ಜ.30 NEWS DESK : ಸುಂಟಿಕೊಪ್ಪ ಆಟೋ ಮಾಲೀಕರ ಹಾಗೂ ಚಾಲಕರ ಸಂಘದ ರಜತ ಮಹೋತ್ಸವ ಅಂಗವಾಗಿ ಏರ್ಪಡಿಸಲಾಗಿದ್ದ ಡ್ಯಾನ್ಸ್ ಮೇಳದಲ್ಲಿ ಮಡಿಕೇರಿಯ ಕಿಂಗ್ಸ್ ಆಫ್ ಕೂರ್ಗ್ ಪ್ರಥಮ ಸೇರಿದಂತೆ ಮೂರು ಬಹುಮಾನಗಳನ್ನು ತನ್ನದಾಗಿಸಿಕೊಂಡಿದೆ. ಸುಂಟಿಕೊಪ್ಪದ ವಾಹನ ಚಾಲಕರ ಸಂಘದ ಸಾರ್ವಜನಿಕ ವೇದಿಕೆಯಲ್ಲಿ ನಡೆದ ಸ್ಪರ್ಧೆಯಲ್ಲಿ ಸಾರ್ವಜನಿಕ ವಿಭಾಗದಲ್ಲಿ ಪ್ರಥಮ, ಕಾಲೇಜು ವಿಭಾಗದಲ್ಲಿ ಪ್ರಥಮ, ಹಾಗೂ ಪ್ರಾಥಮಿಕ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿ ಸಾಧನೆ ಮಾಡಿದೆ. ಇದರೊಂದಿಗೆ ಮುಳಿಯ ಜುವೆಲ್ಸ್ ಆನ್‌ಲೈನ್ ಮೂಲಕ ನಡೆಸಿದ ಮುಳಿಯ ರಾಷ್ಟ್ರ ಸಿಂಚನ ನೃತ್ಯ ಸ್ಪರ್ಧೆಯ ಗುಂಪು ಸ್ಪರ್ಧೆ ವಿಭಾಗದಲ್ಲಿಯೂ ದ್ವಿತೀಯ ಸ್ಥಾನ ಗಳಿಸಿದೆ. ಕಿಂಗ್ಸ್ ಆಫ್ ಕೂರ್ಗ್ ನ ನೃತ್ಯ ಸಂಯೋಜಕ ಮಹೇಶ್ ಹಾಗೂ ಕಿರಣ್ ಅವರುಗಳ ಮಾರ್ಗದರ್ಶನದಲ್ಲಿ ಸಂಸ್ಥೆಯ ಕಲಾವಿದರು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.

Read More

ಮಡಿಕೇರಿ ಜ.30 NEWS DESK : ಪೊನ್ನಂಪೇಟೆ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಣ್ಣೀರ ಹರೀಶ್ ಹಾಗೂ ಉಪಾಧ್ಯಕ್ಷರಾಗಿ ಆಲೀರ ರಶೀದ್ ಆಯ್ಕೆಯಾಗಿದ್ದಾರೆ. ಒಟ್ಟು 20 ಸದಸ್ಯ ಬಲದ ಗ್ರಾ.ಪಂ ಯಲ್ಲಿ 11 ಬಿಜೆಪಿ ಬೆಂಬಲಿತ, 8 ಕಾಂಗ್ರೆಸ್ ಬೆಂಬಲಿತ ಮತ್ತು ಒಬ್ಬರು ಸ್ವತಂತ್ರ ಸದಸ್ಯರಿದ್ದಾರೆ. ಇಂದು ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೆ ನಡೆದಾಗ ಬಿಜೆಪಿ ಬೆಂಬಲಿತ 3 ರಿಂದ 4 ಸದಸ್ಯರು ಅಡ್ಡ ಮತದಾನ ಮಾಡಿದ ಪರಿಣಾಮ ಕಾಂಗ್ರೆಸ್ ಬೆಂಬಲಿತರಿಗೆ ಜಯವಾಗಿದೆ. ಅಣ್ಣೀರ ಹರೀಶ್ 12 ಮತಗಳನ್ನು ಗಳಿಸಿದರೆ, ಒಂದು ಮತ ತಿರಸ್ಕೃತವಾದ ಕಾರಣ ಆಲೀರ ರಶೀದ್ 11 ಮತಗಳನ್ನು ಪಡೆದರು. ಈ ರಾಜಕೀಯ ಬೆಳವಣಿಗೆ ಬಿಜೆಪಿ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

Read More

ಮಡಿಕೇರಿ ಜ.30  NEWS DESK :  ವಿರಾಜಪೇಟೆ ಬಳಿಯ ಬೋಟೋಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಡಿಗೆರೆ-ಕೆದಮುಳ್ಳೂರು ಸಂಪರ್ಕ ರಸ್ತೆ ಪ.ಜಾತಿ-ಪಂಗಡದ 2.5 ಲಕ್ಷ ಅನುದಾನದಲ್ಲಿ ಅಭಿವೃದ್ಧಿಗೊಂಡಿದ್ದು, ನೂತನ ಕಾಂಕ್ರಿಟ್ ರಸ್ತೆಯನ್ನು ಗ್ರಾ.ಪಂ ಅದ್ಯಕ್ಷ ಎ.ಎಂ.ಬೋಪಣ್ಣ ಉದ್ಘಾಟಿಸಿದರು. ನಂತರ ಮಾತನಾಡಿದ ಬೋಪಣ್ಣ ಅವರು, ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿ ಆಗಬೇಕು. ಮುಂದಿನ ಅನುದಾನದಲ್ಲಿ ಇನ್ನು ಉಳಿದಿರುವ ರಸ್ತೆಗಳನ್ನು ಹಂತ ಹಂತವಾಗಿ ಅಭಿವೃದ್ಧಿ ಕಾಮಗಾರಿ ನಡೆಸುವುದಾಗಿ ತಿಳಿಸಿದರಲ್ಲದೆ ಗ್ರಾಮದ ಜನರಿಗೆ ಕುಡಿಯುವ ನೀರಿನ ಸೌಲಭ್ಯಯನ್ನು ನೀಡಲಾಗುವುದು ಎಂದರು. ಕಾಂಕ್ರಿಟ್ ರಸ್ತೆ ಉದ್ಘಾಟನೆ ಸಂದರ್ಭ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ಮಣಿ, ಪಂಚಾಯಿತಿ ಸದಸ್ಯರಾದ ಎಂ.ಎಂ.ರಜಾಕ್, ವಸಂತಕಟ್ಟಿ, ಲತಾ ಹಾಗೂ ಗ್ರಾಮಸ್ಥರು ಹಾಜರಿದ್ದರು.

Read More