ಮಡಿಕೇರಿ ಜ.30 NEWS DESK : ಸಂಪಾಜೆ ಸಹಿತ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಾಡಾನೆಗಳ ಹಿಂಡು ತೋಟಕ್ಕೆ ದಾಳಿಮಾಡಿ ಕೃಷಿ ನಾಶ ಪಡಿಸುತ್ತಿದ್ದು, ಶಾಶ್ವತ ಪರಿಹಾರ ಕಲ್ಪಿಸುವಂತೆ ಸಂಪಾಜೆ ಕಾಂಗ್ರೆಸ್ ನಿಯೋಗ ಅರಣ್ಯ ಸಚಿವರನ್ನು ಭೇಟಿ ನೀಡಿ ಮನವಿ ಮಾಡಿದೆ. ಕೆಪಿಸಿಸಿ ವಕ್ತಾರ ಟಿ.ಎಂ.ಶಾಹಿದ್ ತೆಕ್ಕಿಲ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿ ಮಾಡಿದ ಸಂಪಾಜೆಯ ಕಾಂಗ್ರೆಸ್ ನಾಯಕರು, ಆನೆ ಹಾವಳಿಯಿಂದ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಸಚಿವರ ಗಮನ ಸೆಳೆದರು. ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಶಾಲಾ ಮಕ್ಕಳು, ವಾಹನಸವಾರರು ಭಯದಲ್ಲಿ ತೇರಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ತಕ್ಷಣವೇ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಈ ಭಾಗದಲ್ಲಿ ಹೆಚ್ಚಾಗಿ ರಬ್ಬರ್, ಅಡಿಕೆ ಕೃಷಿ ಇದ್ದು, ನಷ್ಟ ಅನುಭವಿಸುತ್ತಿರುವ ಕೃಷಿಕರಿಗೆ ಪರಿಹಾರ ಧನ ಒದಗಿಸುವುದು, ದಕ್ಷಿಣ ಕನ್ನಡ ಜಿಲ್ಲೆಗೆ ಎಲಿಫೆಂಟ್ ಟಾಸ್ಕ್ ಫೋರ್ಸ್ ನೇಮಕ ಮಾಡುವುದು, ಸೋಲಾರ್ ಬೇಲಿ ನಿರ್ಮಾಣಕ್ಕೆ ಸಹಾಯಧನ ಹೆಚ್ಚಿಸುವುದು, ಸಂಪಾಜೆ ಗ್ರಾಮದ ಸ್ಮಶಾನ ಜಾಗದ…
ಲೇಖಕ: admin
ಚೆಯ್ಯಂಡಾಣೆ ಜ.30 NEWS DESK : ಇತಿಹಾಸ ಪ್ರಸಿದ್ಧ ಎಡಪಾಲ ಅಂಡತ್ ಮಾನಿ ಮಖಾಂ ಉರೂಸ್ ಸಮಾರಂಭವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರದ್ಧಾಭಕ್ತಿಯಿಂದ ನಡೆಯಿತು. ಎಡಪಾಲ ಪೊಯಾಪಳ್ಳಿ ಮುಸ್ಲಿಂ ಜಮಾಅತ್ ಅಧ್ಯಕ್ಷ ಕೆ.ಯು.ಶಾಫಿ ಧ್ವಜಾರೋಹಣ ನೆರೆವೇರಿಸುವ ಮೂಲಕ ಉರೂಸ್ ಗೆ ಚಾಲನೆ ನೀಡಿದರು. ಸಭಾ ಕಾರ್ಯಕ್ರಮ :: ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ನಾಇಬ್ ಖಾಝಿ ಹಾಗೂ ಸಮಸ್ತ ಮುಶಾವರ ಸದಸ್ಯರಾದ ಅಬ್ದುಲ್ಲ ಫೈಝಿ ಉದ್ಘಾಟಿಸಿ ಮಾತನಾಡಿ, ಎಡಪಾಲ ಅಂಡತ್ ಮಾನಿ ದರ್ಗಾ ಕೊಡಗಿನಲ್ಲಿ ಮಾತ್ರವಲ್ಲದೆ ರಾಜ್ಯದ ನಾನಾ ಭಾಗದ ಹಾಗೂ ಕೇರಳದ ಹಲವಾರು ಜನರ ಮಾರಕ ರೋಗಗಳನ್ನು ಗುಣಪಡಿಸಿದ ಹಲವಾರು ಉದಾರಣೆಗಳನ್ನು ವಿವರಿಸಿ ಎಡಪಾಲ ಅಂಡತ್ ಮಾನಿ ದರ್ಗಾದ ಪುಣ್ಯ ಕಾರ್ಯವನ್ನು ಸ್ಮರಿಸಿದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಎಡಪಾಲ ಜಮಾಅತ್ ಮಾಜಿ ಅಧ್ಯಕ್ಷ ಬಷೀರ್, ಉರೂಸ್ ಸಮಾರಂಭದಿಂದ ಪರಸ್ಪರ ಬಾಂಧವ್ಯ ವೃದ್ಧಿಸುತ್ತದೆ. ಎಲ್ಲರು ಒಟ್ಟಾಗಿ ಭಾಗವಹಿಸುವ ಮೂಲಕ ಸೌಹಾರ್ದತೆಗೆ ಉರೂಸ್ ಸಾಕ್ಷಿಯಾಗುತ್ತಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೆ.ಯು.ಶಾಫಿ,…
ಕಡಂಗ ಜ.30 NEWS DESK : ಕಡಂಗ ವಿಜಯ ವಿದ್ಯಾ ಸಂಸ್ಥೆಯ ವಾರ್ಷಿಕೋತ್ಸವವು ಸಂಭ್ರಮದಿಂದ ನಡೆಯಿತು. ಶಾಲೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಅತಿಥಿ ಗಣ್ಯರು ಉದ್ಘಾಟಿಸಿ, ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿಜಯ ವಿದ್ಯಾ ಸಂಸ್ಥೆಯ ಅಧ್ಯಕ್ಷ ಬಲ್ಲ್ಯಾ0ಡ ಪಿ.ಬಿದ್ದಪ್ಪ, ಪ್ರೌಢಶಾಲಾ ವಿಭಾಗದಲ್ಲಿ ವಿದ್ಯಾರ್ಥಿಗಳ ಕೊರತೆಯಿಂದ ಮುಂದಿನ ವರ್ಷ ಶಾಲೆ ಮುಚ್ಚುವ ಹಂತದಲ್ಲಿದ್ದು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಶಾಲೆಗೆ ಹಾಜರಾಗಿ ಹಾಜರಾಗಬೇಕು ಮತ್ತು ಶಿಕ್ಷಣಕ್ಕೆ ಒತ್ತು ನೀಡಬೇಕೆಂದು ಕರೆ ನೀಡಿದರು. ನರಿಯ0ದಡ ಗ್ರಾ.ಪಂ ಅಧ್ಯಕ್ಷರಾದ ಕೌಶಿ ಕಾವೇರಮ್ಮ ಮಾತನಾಡಿ, ಕನ್ನಡ ಶಾಲೆಗಳಿಂದ ಕಲಿತಿರುವ ಪ್ರತಿಭಾವಂತ ವಿದ್ಯಾವಂತರು ಇಂದಿನ ಸಮಾಜದಲ್ಲಿ ಹಲವಾರು ಪ್ರಮುಖ ಹುದ್ದೆಗಳನ್ನು ನಿಭಾಯಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕನ್ನಡ ಮಾಧ್ಯಮ ಶಾಲೆಯಿಂದ ಕಲಿಯಲು ಎಲ್ಲರೂ ಪ್ರೇರಿತರಾಗಿ ಎಂದುರು. ನರಿಯ0ದಡ ಗ್ರಾ.ಪಂ ಉಪಾಧ್ಯಕ್ಷ ಕೋಡಿರ ವಿನೋದ್ ನಾಣಯ್ಯ ಮಾತನಾಡಿ, ಶಿಕ್ಷಣದೊಂದಿಗೆ ವಿದ್ಯಾರ್ಥಿಗಳು ಶಿಸ್ತು ಅಳವಡಿಸಿ ಸಂಸ್ಥೆಗೆ ಉನ್ನತ ಹೆಸರು ತರಬೇಕು ಹಾಗೂ ಜೀವನ ಪ್ರಮುಖ ಹಂತಗಳಲ್ಲಿ ವಿಜಯಶಾಲಿಗಳಾಗಬೇಕು ಎಂದು ನುಡಿದರು. ನರಿಯಂದಡ ಗ್ರಾ.ಪಂ…
ಮಡಿಕೇರಿ ಜ.30 NEWS DESK : ಸಂಸದ ಪ್ರತಾಪ್ ಸಿಂಹ ಅವರು ಧೈರ್ಯವಿದ್ದರೆ ಅಭಿವೃದ್ಧಿ ಕಾರ್ಯಗಳ ಕುರಿತು ಬಹಿರಂಗ ಚರ್ಚೆಗೆ ಬರಲಿ, ತಾವು ಸಂಸದರಾಗಿ ಆಯ್ಕೆಯಾದ ಆರಂಭದ 7 ತಿಂಗಳಿನಲ್ಲಿ ಕನಿಷ್ಠ 70 ಪೈಸೆಯನ್ನು ಕೇಂದ್ರ ಸರ್ಕಾರದಿಂದ ಕೊಡಗು ಜಿಲ್ಲೆಗೆ ತಂದಿದ್ದರೆ ಶ್ವೇತಪತ್ರ ಹೊರಡಿಸಲಿ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಸವಾಲು ಹಾಕಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ನಾಲ್ಕು ವರ್ಷಗಳಿಂದ ಕೊಡಗು ಜಿಲ್ಲೆಯ ಕಡೆ ತಲೆಹಾಕದ ಸಂಸದ ಪ್ರತಾಪ್ ಸಿಂಹ ಅವರು ಇದೀಗ ಚುನಾವಣೆಯ ಸಂದರ್ಭದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸುಳ್ಳು ಆರೋಪಗಳನ್ನ ಮಾಡಿ ಜನರ ಹಾದಿ ತಪ್ಪಿಸುವ ಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ತಮ್ಮ ಅವಧಿಯ ಆರಂಭದ ಏಳು ತಿಂಗಳಿನಲ್ಲಿ ಕನಿಷ್ಠ 70 ಪೈಸೆಯನ್ನು ಕೇಂದ್ರದಿಂದ ಕೊಡಗಿಗೆ ತಂದಿದ್ದರೆ ಸಂಸದರು ಶ್ವೇತಪತ್ರ ಹೊರಡಿಸಲಿ, ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾರ್ಯಗಳ ಕುರಿತು ಬಹಿರಂಗ ಚರ್ಚೆಗೆ ಬರಲಿ ಎಂದು ಒತ್ತಾಯಿಸಿದರು. ಜನರ ಹಾದಿ ತಪ್ಪಿಸುವ ಪ್ರಯತ್ನ…
ಮಡಿಕೇರಿ ಜ.30 NEWS DESK : ತಾಳತ್ತಮನೆಯ ಶ್ರೀ ದುರ್ಗಾಭಗವತಿ ದೇವಾಲಯದ ಮುಖ್ಯ ಪ್ರವೇಶ ದ್ವಾರದ ನಿರ್ಮಾಣದ ಕಾರ್ಯ ಭರದಿಂದ ಸಾಗಿದೆ.
ನಾಪೋಕ್ಲು ಜ.30 NEWS DESK : ಸಂವಿಧಾನ ಜಾಗೃತಿ ಜಾಥಾವು ಎಮ್ಮೆಮಾಡು, ಬಲ್ಲಮಾವಟಿ, ಅಯ್ಯಂಗೆರಿ ಗ್ರಾ.ಪಂ ವ್ಯಾಪ್ತಿಯಲ್ಲಿ ಯಶಸ್ವಿಯಾಗಿ ನಡೆಯಿತು. ಕೆಪಿಎಸ್ ಶಾಲೆಯ ಶಿಕ್ಷಕಿ ಉ ಷಾರಾಣಿ ಸಂವಿಧಾನದ ರಚನೆ ಆಶಯಗಳ ಕುರಿತು ಮಾತನಾಡಿದರು. ಸಮಾಜ ಕಲ್ಯಾಣ ಇಲಾಖೆಯ ಬಾಲಕೃಷ್ಣ ರೈ ಮಾತನಾಡ, ಜಾಥದ ದ್ಯೇಯೋದ್ಧೇಶಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಪ್ರಮಾಣ ವಚನ ಸ್ವೀಕರಿಸಲಾಯಿತು. ಕಾರ್ಯಕ್ರಮ ಗ್ರಾ.ಪಂ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾ ಅರುಣ್ , ಸದಸ್ಯರಾದ ಕುಲ್ಲೇಟಿರ ಅರುಣ್ ಬೇಬ , ಮಾಚೇಟಿರ ಕುಸು ಕುಶಾಲಪ್ಪ, ಟಿ.ಎ.ಮಹಮ್ಮದ್ , ಯಶೋಧ ಕಟ್ಟಿ, ಗಂಗಮ್ಮ ,ಲಲಿತ, ಸಮಾಜ ಕಲ್ಯಾಣ ಇಲಾಖೆಯ ಬಾಲಕೃಷ್ಣ ರೈ, ಕೆಪಿಎಸ್ ಶಾಲೆಯ ಉಪ ಪ್ರಾಂಶುಪಾಲರಾದ ಎಂ.ಎಸ್. ಶಿವಣ್ಣ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು , ಆಶಾ ಕಾರ್ಯಕರ್ತೆ ಯರು, ವಿವಿಧ ಶಾಲೆಗಳ ಶಿಕ್ಷಕ ವೃಂದ ವಿದ್ಯಾರ್ಥಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು. ಇದಕ್ಕೂ ಮುನ್ನ ನಾಪೋಕ್ಲು ಬಸು ನಿಲ್ದಾಣದಲ್ಲಿ…
ಮಡಿಕೇರಿ ಜ.30 NEWS DESK : ಖಾಸಗಿ ಬಸ್ ನಿರ್ವಾಹಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿ ನಗರದ ಲಾಡ್ಜ್ ವೊಂದರಲ್ಲಿ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಆರ್ಜಿ ಗ್ರಾಮದ ನಿವಾಸಿ ಮೊಣ್ಣಪ್ಪ ಎಂಬುವವರೇ ಮೃತ ವ್ಯಕ್ತಿ. ಮಡಿಕೇರಿ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಿದ್ದಾಪುರ ಜ.30 NEWS DESK : ವಿದ್ಯಾರ್ಥಿಗಳು ಶಾಲೆಗೆ ತಪ್ಪದೆ ಹಾಜರಾಗುವ ಮೂಲಕ ಶಿಕ್ಷಣದೊಂದಿಗೆ ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಮೂಕೊಂಡ ವಿಜು ಸುಬ್ರಮಣಿ ಕರೆ ನೀಡಿದರು. ಚೆನ್ನಂಗಿ ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ 43 ವಿದ್ಯಾರ್ಥಿಗಳಿಗೆ ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವೈಯಕ್ತಿಕವಾಗಿ ಗುಣಮಟ್ಟದ ಶಾಲಾ ಬ್ಯಾಗ್ ಗಳನ್ನ ವಿತರಿಸಿ ಮಾತನಾಡಿ, ಕಾಡು ಪ್ರಾಣಿಗಳ ಹಾವಳಿ ನಡುವೆ ಶಿಕ್ಷಣ ಕಲಿಯುತ್ತಿರುವ ಶಾಲಾ ವಿದ್ಯಾರ್ಥಿಗಳು ಶಿಕ್ಷಕರುಗಳ ಮಾರ್ಗದರ್ಶನವನ್ನು ಮೈಗೂಡಿಸಿಕೊಂಡು ಶಿಕ್ಷಣದೊಂದಿಗೆ ಸಮಾಜದ ಮುಖ್ಯ ವಾಹಿನಿಗೆ ಬಂದಲ್ಲಿ ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗಲಿದೆ. ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಉನ್ನತ ಶಿಕ್ಷಣದೊಂದಿಗೆ ಮುಂದೆ ಬರಬೇಕೆಂದರು. ಚೆನ್ನಯ್ಯನ ಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೇಕೆರಿರಾ ಅರುಣ್ ಕುಮಾರ್ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚಾಗಿ ಕಲಿಯುತ್ತಿರುವ ಶಾಲೆಗೆ ದಾನಿಗಳು ಹಲವು ರೀತಿಯಲ್ಲಿ ಸಹಕಾರ ನೀಡುತ್ತಿರುವುದರೊಂದಿಗೆ ಇತ್ತೀಚೆಗೆ ನಡೆದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಹಕಾರ ನೀಡುವ ಭರವಸೆ ನೀಡಿದ ವಿಜು…
ಮಡಿಕೇರಿ ಜ.30 NEWS DESK : ಪ್ರಸಕ್ತ (2023-24) ಸಾಲಿನ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು ವರ್ಗದ ರೈತರಿಗೆ ಶೇ.90 ರ ರಿಯಾಯಿತಿಯಲ್ಲಿ ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ರೋಟೋವೇಟರ್, ಕಳೆ ಕೊಚ್ಚುವ ಯಂತ್ರಗಳು (ಪವರ್ ವೀಡರ್), ಪವರ್ ಸ್ಪ್ರೇಯರ್ಸ್, ಡೀಸೆಲ್ ಪಂಪ್ಸೆಟ್, ಪ್ಲೋರ್ ಮಿಲ್, ಮೊಟೋಕಾರ್ಟ್, ಮೋಟಾರ್ ಚಾಲಿತ ಸಣ್ಣ ಎಣ್ಣೆಗಾಣಗಳು ಮತ್ತು ಇತರೆ ಹೈಟೆಕ್ ಕೃಷಿ ಉಪಕರಣಗಳನ್ನು ವಿತರಿಸಲಾಗುತ್ತಿದೆ. ಆಸಕ್ತ ಮಡಿಕೇರಿ ತಾಲ್ಲೂಕು ವ್ಯಾಪ್ತಿಯ ರೈತರು ಪಹಣಿ (ಆರ್ಟಿಸಿ ), ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್, ಒಂದು ಭಾವಚಿತ್ರ, ರೂ.20 ರ ಛಾಪಾ ಕಾಗದದೊಂದಿಗೆ ಹೋಬಳಿಯಲ್ಲಿರುವ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸುವಂತೆ ಮಡಿಕೇರಿ ತಾಲ್ಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಮಡಿಕೇರಿ ಜ.30 NEWS DESK : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಖಾತರಿ ಯೋಜನೆಯಾದ “ಯುವನಿಧಿ” ಯೋಜನೆಯನ್ನು ಡಿ.26 ರಂದು ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ. 2023 ರಲ್ಲಿ ಪದವಿ/ ಡಿಪ್ಲೋಮಾ ಉತ್ತೀರ್ಣರಾಗಿ 6 ತಿಂಗಳಾದರೂ ಸರ್ಕಾರಿ/ಖಾಸಗಿ/ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮಒನ್, ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ http://sevasindhugs.karnataka.gov.in ಪೋರ್ಟಲ್ ಮೂಲಕ ಉಚಿತವಾಗಿ “ಯುವನಿಧಿ” ಯೋಜನೆಗೆ ಅರ್ಜಿ ಸಲ್ಲಿಸಬಹುದು. ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ.ಗಳು ಹಾಗೂ ಡಿಪ್ಲೋಮಾ ಪದವೀಧರರಿಗೆ 1,500 ರೂ.ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳವರೆಗೆ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 18005999918 / 9113935220 ಗೆ ಕರೆ ಮಾಡುವ ಮೂಲಕ ಅಥವಾ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಹಾಗೂ ಜಿಲ್ಲಾ ಉದ್ಯೋಗಾಧಿಕಾರಿ ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ…






