ಮಡಿಕೇರಿ ಜ.30 NEWS DESK : ಸಮಾಜದಲ್ಲಿ ಕ್ರೀಡಾಕೂಟಗಳಿಂದ ಸೌಹಾರ್ದತೆ ಬೆಳೆಯಲು ಸಹಕಾರಿಯಾಗಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅಭಿಪ್ರಾಯಪಟ್ಟರು. ಕೊಡಗು ಜಿಲ್ಲಾ ಹಿಂದೂ ಮಲಯಾಳಿ ಫುಟ್ಬಾಲ್ ಕಪ್ ಸೆಮಿಫೈನಲ್ ಪಂದ್ಯವನ್ನು ಉದ್ಘಾಟಿಸಿ ಶಾಸಕರು ಮಾತನಾಡಿದರು. ಕೊಡಗು ಜಿಲ್ಲೆಯಲ್ಲಿ ವಿವಿಧ ಜನಾಂಗ ಹಾಗೂ ಸಮಾಜ ಬಾಂಧವರ ನಡುವೆ ಕ್ರೀಡಾಕೂಟಗಳು ನಡೆಯುತ್ತಿದೆ. ಇದೇ ಮೊದಲ ಬಾರಿಗೆ ಕೊಡಗು ಜಿಲ್ಲೆಯಲ್ಲಿ ಹಿಂದೂ ಮಲಯಾಳಿ ಫುಟ್ಬಾಲ್ ಕಪ್ ನಡೆಯುತ್ತಿರುವುದು ಶ್ಲಾಘನೀಯ ಎಂದರು. ಸಮಾಜ ಬಾಂಧವರನ್ನು ಕ್ರೀಡೆಯ ಮುಖಾಂತರ ಒಂದುಗೂಡಿಸುವುದು ಒಳ್ಳೆಯ ವಿಷಯವಾಗಿದೆ ಎಂದ ಶಾಸಕರು, ಕೊಡಗು ಜಿಲ್ಲಾ ಹಿಂದೂ ಮಲಯಾಳಿ ಫುಟ್ಬಾಲ್ ಕಪ್ ಸಂಸ್ಥಾಪಕ ಮರಗೋಡುವಿನ ದರ್ಶನ್ ಸುಕುಮಾರ್ ಅವರನ್ನು ಅಭಿನಂದಿಸಿದರು. ಇದೇ ಸಂದರ್ಭ ಕೊಡಗು ಜಿಲ್ಲಾ ಹಿಂದೂ ಮಲಯಾಳಿ ಫುಟ್ಬಾಲ್ ಕಪ್ ಸಮಿತಿ ವತಿಯಿಂದ ಶಾಸಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಕೊಡಗು ಜಿಲ್ಲಾ ಹಿಂದೂ ಮಲಯಾಳಿ ಫುಟ್ಬಾಲ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ಸ್ಥಾಪಕ ದರ್ಶನ್ ಸುಕುಮಾರ್, ಕೊಡಗು ಜಿಲ್ಲಾ ಫುಟ್ಬಾಲ್…
ಲೇಖಕ: admin
ಮಡಿಕೇರಿ ಜ.30 NEWS DESK : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಹಾಗೂ ಸರ್ವೋದಯ ಸಮಿತಿ ವತಿಯಿಂದ ‘ಹುತಾತ್ಮರ ದಿನಾಚರಣೆ’ಯು ನಗರದಲ್ಲಿ ಮಂಗಳವಾರ ಶ್ರದ್ಧಾಭಕ್ತಿಯಿಂದ ಜರುಗಿತು. ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಖಜಾನೆಯಲ್ಲಿರಿಸಲಾಗಿದ್ದ ಮಹಾತ್ಮ ಗಾಂಧೀಜಿಯವರ ‘ಚಿತಾಭಸ್ಮ’ವನ್ನು ಹೊರತೆಗೆದು ಪುಷ್ಪಮಾಲೆಗಳಿಂದ ಶೃಂಗರಿಸಿ ಗೌರವ ಸಮರ್ಪಣೆ ಮಾಡಲಾಯಿತು. ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ಸದಸ್ಯರ ನೇತೃತ್ವದಲ್ಲಿ ಪೊಲೀಸ್ ವಾದ್ಯದೊಂದಿಗೆ ನಗರದ ಮಂಗೇರಿರ ಮುತ್ತಣ್ಣ ಹಾಗೂ ಜನರಲ್ ತಿಮ್ಮಯ್ಯ ವೃತ್ತದ ಮುಖ್ಯ ರಸ್ತೆ ಮೂಲಕ ಗಾಂಧೀಜಿಯವರ ಚಿತಾಭಸ್ಮವನ್ನು ಕೊಂಡೊಯ್ದು ಗಾಂಧಿ ಮಂಟಪ ಬಳಿ(ಗಾಂಧಿ ಮೈದಾನ) ಇರಿಸಿ ಗಾಂಧೀ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ನಮನ ಸಮರ್ಪಿಸಲಾಯಿತು. ಇದೇ ವೇಳೆ ಪೊಲೀಸ್ ಮೀಸಲು ಪಡೆಯ ಸಬ್ ಇನ್ಸ್ಪೆಕ್ಟರ್ ಹನುಮಂತ ಕೌಜಲಗಿ ಮತ್ತು ತಂಡದವರು ಮೂರು ಸುತ್ತುಗಳ ಕುಶಾಲತೋಪು ಹಾರಿಸುವ ಮೂಲಕ ರಾಷ್ಟ್ರಪಿತರಿಗೆ ಪೊಲೀಸ್ ಗೌರವಾರ್ಪಣೆ ಸಲ್ಲಿಸಲಾಯಿತು. ನಂತರ ಮೌನಾಚರಣೆ ನಡೆಯಿತು. ಪೊಲೀಸ್ ವಾದ್ಯವು ಸಿದ್ದೇಶ್ ಅವರ ನೇತೃತ್ವದಲ್ಲಿ ಪೊಲೀಸ್ ತಂಡದವರು ರಾಷ್ಟ್ರಗೀತೆ ಹಾಡಿ…
ವಿರಾಜಪೇಟೆ ಜ.30 NEWS DESK : ಕುಶಾಲನಗರದ ರೈತ ಸಹಕಾರ ಭವನದಲ್ಲಿ ನಡೆದ ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ವಿರಾಜಪೇಟೆಯ ರೋಟರಿ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಎನ್.ಸಿ.ಚಿರಂತ್ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಈ ಹಿಂದೆ ಹಲವಾರು ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನವನ್ನು ಪಡೆದುಕೊಂಡಿರುವ ಎನ್.ಸಿ.ಚಿರಂತ್, ಗಾಂಧಿನಗರದ ನಿವಾಸಿ ಎನ್.ಜೆ. ಚಂದ್ರಶೇಖರ್ ಹಾಗೂ ಎನ್.ಎಂ. ಹೇಮಾವತಿ ದಂಪತಿಯ ಪುತ್ರ.
ಮಡಿಕೇರಿ ಜ.30 NEWS DESK : ಕೆಎಸ್ಆರ್ಟಿಸಿ ಬಸ್ ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ ಸಂಭವಿಸಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಡ್ಡೆಹೊಸೂರಿನಲ್ಲಿ ನಡೆದಿದೆ. ಸಿದ್ದಾಪುರದ ಲಲಿತಾ (53) ಎಂಬವರು ಮೃತ ದುರ್ದೈವಿ. ಅತ್ತೂರು ಕಡೆಯಿಂದ ಗುಡ್ಡೆಹೊಸೂರಿಗೆ ಬರುತ್ತಿದ್ದ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಮಡಿಕೇರಿಯಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಡಿ ಸಿಲುಕಿದ ಪರಿಣಾಮ ಲಲಿತಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಕೂಟಿ ಚಲಾಯಿಸುತ್ತಿದ್ದ ಲಲಿತಾ ಅವರ ಸಹೋದರಿ ಪುತ್ರಿ ಸಿಂಚನಾ ಗಂಭೀರ ಗಾಯಗೊಂಡಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಡಿಕೇರಿ ಜ.30 NEWS DESK : ಬೈತೂರು ಉತ್ಸವ ಹಿನ್ನೆಲೆ ದಕ್ಷಿಣ ಕೊಡಗಿನ ವಿರಾಜಪೇಟೆಯಿಂದ ಕೇರಳದ ಬೈತೂರಪ್ಪ ದೇವಾಲಯಕ್ಕೆ ಇಬ್ಬರು ಕೊಡವ ಯುವಕರಾದ ಚೆಟ್ಟೋಳಿರ ಶರತ್ ಸೋಮಣ್ಣ, ಮುರುವಂಡ ಸವನ್ ಸೋಮಣ್ಣ, ಪಾದಯಾತ್ರೆ ನಡೆಸಿದರು. ವಿರಾಜಪೇಟೆಯಿಂದ ಮಂಗಳವಾರ ಬೆಳಗ್ಗೆಪಾದಯಾತ್ರೆ ಪ್ರಾರಂಭಿಸಿದ ಇವರು ವೀರಾಜಪೇಟೆ, ಪೆರುಂಬಾಡಿ, ಮಾಕುಟ್ಟ, ಕೂಟುಪೊಳೆ,ಹುಲಿಕಲ್ ಮೂಲಕ ಪಾದಯಾತ್ರೆ ನಡೆಸಿ ಮಧ್ಯಾಹ್ನ ಹೊತ್ತಿಗೆ ಸುಮಾರು 40 ಕಿ.ಮಿ. ಕ್ರಮಿಸಿ ದೇವಾಲಯಕ್ಕೆ ತಲುಪಿದರು. ನಂತರ ಮೂರು ದಿನ ಅಲ್ಲಿಯೇ ತಂಗಿ ಸ್ವಯಂ ಸೇವಕರಾಗಿ ಕಾರ್ಯ ನಿರ್ವಹಿಸಿ, ವೀರಾಜಪೇಟೆಗೆ ಹಿಂತಿರುಗಿದರು.
ಮಡಿಕೇರಿ ಜ.29 : 2023-24ನೇ ಸಾಲಿನ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ವಿರಾಜಪೇಟೆಯ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಯಲ್ಲಿ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿಯಾದ ಕ್ಷಮಾ ಕಾವೇರಮ್ಮ ಇಂಗ್ಲೀಷ್ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ಅಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ರಸಪ್ರಶ್ನೆ ಸ್ಪರ್ಧಾ ವಿಭಾಗದಲ್ಲಿ 9ನೇ ತರಗತಿಯ ವಿದ್ಯಾರ್ಥಿಗಳಾದ ಪಿ.ಎಸ್. ದೇವಯ್ಯ ಹಾಗೂ ಎಂ.ನಿಶಾನ್ ತಾಲೂಕು ಮಟ್ಟದಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಇವರಿಗೆ ಶಾಲಾ ಆಡಳಿತ ಮಂಡಳಿಯವರು ಹಾಗೂ ಬೋಧಕ ಬೋಧಕೇತರ ವೃಂದದವರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ. ಈ ಸಂದರ್ಭದಲ್ಲಿ ಪ್ರೌಢಶಾಲಾ ವಿಭಾಗದ ಸಂಯೋಜಕರಾದ ಚೈತ್ರ ಹಾಗೂ ಸಹ ಶಿಕ್ಷಕಿ ಬಿ.ಪಿ.ಉಷಾ ಉಪಸ್ಥಿತರಿದ್ದರು.
ಮಡಿಕೇರಿ ಜ.29 : ಧಾರ್ಮಿಕವಾಗಿ ಪೂಜನೀಯ ಸ್ಥಾನ ಪಡೆದುಕೊಂಡಿರುವ ‘ಅಶ್ವತ್ಥ ವೃಕ್ಷ’ವೊಂದಕ್ಕೆ ಕಂಕಣಭಾಗ್ಯ ಕೂಡಿ ಬಂದಿದೆ. ಮಡಿಕೇರಿ ತಾಲ್ಲೂಕಿನ ಕಡಗದಾಳು ಗ್ರಾಮದಲ್ಲಿ ಬೆಳೆದು ನಿಂತಿರುವ ಅಶ್ವತ್ಥ ವೃಕ್ಷಕ್ಕೆ ವಿವಾಹವೆಂದರೆ, ವಧು ಯಾರೆನ್ನುವ ಪ್ರಶ್ನೆ ಸಾಮಾನ್ಯ. ಇಲ್ಲಿ ಅಶ್ವತ್ಥ ಮರದೊಂದಿಗೆ ವಿವಾಹವಾಗಲಿರುವ ವಧು ‘ನೆಲ್ಲಿ’!. ವಿವಾಹ ‘ಶೋಭ ಕೃತ್ ನಾಮ ಸಂವತ್ಸರದ ಮಕರ ಮಾಸ 21 ಕ್ಕೆ ಸಲ್ಲುವ ಫೆ.4 ರ ಪೂರ್ವಾಹ್ನ 9.50ರ ಮೀನ ಲಗ್ನ’ದ ಶುಭ ಮುಹೂರ್ತದಲ್ಲಿ ನೆರವೇರಲಿದೆ. ಗ್ರಾಮದ ಶ್ರೀ ಬೊಟ್ಲಪ್ಪ ಯುವ ಸಂಘ ವಿವಾಹದ ಪೂರ್ಣ ಜವಾಬ್ದಾರಿ ವಹಿಸಿಕೊಂಡಿದ್ದು, ವಿವಾಹ ಸಮಾರಂಭವನ್ನು ಅತ್ಯಂತ ಶ್ರದ್ಧೆಯಿಂದ ಅದ್ಧೂರಿಯಾಗಿ ಮಾಡಲು ರೂಪುರೇಷೆಗಳನ್ನು ಮಾಡಿಕೊಂಡಿದೆ. ಕಾರ್ಯಕ್ರಮದ ವಿಶೇಷ ಕರಪತ್ರವನ್ನು ಮುದ್ರಿಸಿದೆ. ಸೂಚಿತ ದಿನದಂದು ಹಿಂದು ಧಾರ್ಮಿಕ ವಿಧಿ ವಿಧಾನದಂತೆ ಸಾಂಗೋಪಸಾಂಗವಾಗಿ ವಿವಾಹ ನಡೆಯಲಿದ್ದು, ಇದರೊಂದಿಗೆ ಗಣಪತಿ ಹೋಮ, ನವಗ್ರಹ ಹೋಮ, ಅರ್ಚನೆ, ಪ್ರದಕ್ಷಿಣೆ ನಮಸ್ಕಾರ ಕಾರ್ಯಕ್ರಮಗಳನ್ನು ಆಯೋಜಿಸಿದೆ. ವಿಶೇಷ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದ ಶ್ರೀ ಬೊಟ್ಲಪ್ಪ ಯುವ ಸಂಘದ ಖಜಾಂಚಿ…
ಮಡಿಕೇರಿ ಜ.29 NEWS DESK : ಕೊಡಗು ಜಿಲ್ಲಾ ಕಿವುಡರ ಸಂಘದ ಆಡಳಿತ ಮಂಡಳಿಯ ಸಭೆಯು ಸಂಘದ ಅಧ್ಯಕ್ಷೆ ಗೌರಮ್ಮ ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ವಿರಾಜಪೇಟೆಯ ಪುರಭವನದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಂಘದ ಕಾರ್ಯ ಚಟುವಟಿಕೆಗಳನ್ನು ನಡೆಸುವ ಮೂಲಕ ಎಲ್ಲರಿಗೂ ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಚರ್ಚಿಸಲಾಯಿತು. ಗ್ರಾಮ ಪುನರ್ವಸತಿ ಕಾರ್ಯಕರ್ತೆ ಮತ್ತು ಸೌಭಾಗ್ಯ ವಿಕಲಚೇತನ ಸೇವಾ ಟ್ರಸ್ಟ್ನ ವಿಆರ್ಡಬ್ಲ್ಯು ಆಯಿಷಾ, ಕರ್ನಾಟಕ ರಾಜ್ಯ ಕಿವುಡರ ಕಲ್ಯಾಣ ಸಂಘದ ಉಪಾಧ್ಯಕ್ಷ ಎ.ಗಣೇಶ್ ರಾವ್, ಮೈಸೂರು ಕಿವುಡರ ಕಲ್ಯಾಣ ಸಂಘದ ಅಧ್ಯಕ್ಷ ಮೂರ್ತಿ, ಕರ್ನಾಟಕ ಕಿವುಡರ ಕ್ರೀಡಾ ಒಕ್ಕೂಟದ ಜೆ.ವಿ.ಮಹೇಶ್ ವರ್ಮ, ಕೆಡಿಡಿಎ ಚೆರ್ಮೆನ್ ಜೋಸೆಫ್ ಸ್ಯಾಮ್, ಉಪಾಧ್ಯಕ್ಷ ಶಂಕರ ನಾರಾಯಣ, ಪ್ರಧಾನ ಕಾರ್ಯದರ್ಶಿ ರಂಜಿತ್, ಸಹ ಕಾರ್ಯದರ್ಶಿ ನಾಗೇಶ್, ಖಜಾಂಚಿ ಕೆ.ಎ.ಸುರೇಶ್, ಕ್ರೀಡಾ ಕಾರ್ಯದರ್ಶಿ ಎಂ.ಎ.ರಂಶದ್, ಸದಸ್ಯರಾದ ಬಿ.ಎ.ಚಾಯಾದೇವಿ, ಹೆಚ್.ಪಿ.ಪ್ರಭಾಕರ್, ಟಿ.ಎಸ್.ಸುನೀಲ್, ಹೆಚ್.ವಿ.ವೆಂಕಟೇಶ್, ಅಮಿನ್ ಪಾಷ, ಅಸ್ಲಂ, ತೇಜವರ್ಮ ಸೇರಿದಂತೆ ಇತರರು ಹಾಜರಿದ್ದರು. ಸಭೆಯಲ್ಲಿ ಸಂಘದ ಅಧ್ಯಕ್ಷೆ ಗೌರಮ್ಮ ಸೋಮಣ್ಣ…
ಮಡಿಕೇರಿ ಜ.29 : ಕೊಡಗು ಗೌಡ ಯುವ ವೇದಿಕೆ ವತಿಯಿಂದ ದ್ವಿತೀಯ ಆವೃತ್ತಿಯ ಗೌಡ ಕ್ರಿಕೆಟ್ ಟಿ-10 ಪ್ರೀಮಿಯರ್ ಲೀಗ್ ಪಂದ್ಯಾವಳಿ ಮತ್ತು ಗೌಡ ಜನಾಂಗದ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ‘ಗ್ರಾಮ ಪೈಪೋಟಿ’ ಸ್ಪರ್ಧಾ ಕಾರ್ಯಕ್ರಮವನ್ನು ಏಪ್ರಿಲ್ ತಿಂಗಳಿನಲ್ಲಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗುವುದು ಎಂದು ವೇದಿಕೆಯ ಕಾರ್ಯದರ್ಶಿ ಪುದಿಯನೆರವನ ರಿಷಿತ್ ಮಾದಯ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಏ.15 ರಿಂದ ಏ.28ರ ವರೆಗೆ ನಡೆಯಲಿದೆ. ಗ್ರಾಮ ಪೈಪೋಟಿ ಕಾರ್ಯಕ್ರಮ ಏ.26 ರಿಂದ 28 ರವರೆಗೆ ಸಂಜೆಯ ವೇಳೆ ನಡೆಯಲಿದೆ ಎಂದರು. ಅರೆಭಾಷಾ ಗೌಡ ಜನಾಂಗದ ಸಂಸ್ಕೃತಿಯನ್ನು ಪ್ರತ್ರಿಬಿಂಬಿಸುವ ಚಿಂತನೆಯಡಿ 10 ನಿಮಿಷಗಳ ‘ನೃತ್ಯ ರೂಪಕ’ದ ಗ್ರಾಮ ಪೈಪೋಟಿಯನ್ನು ರೂಪಿಸಲಾಗಿದೆ. ಈ ನೃತ್ಯ ರೂಪಕದಲ್ಲಿ ಅರೆಭಾಷೆಯ ಹಾಡಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು. ಗ್ರಾಮ ಪೈಪೋಟಿಯಲ್ಲಿ ಜಿಲ್ಲಾ ವ್ಯಾಪ್ತಿಯ ಗ್ರಾಮವಾರು ತಂಡಗಳು ಪಾಲ್ಗೊಳ್ಳಬಹುದಾಗಿದ್ದು, ಒಂದೇ ಗ್ರಾಮದ ಒಂದಕ್ಕಿಂತ ಹೆಚ್ಚಿನ…






