ಮಡಿಕೇರಿ ಜ.29 NEWS DESK : ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ತುಳು ಭಾಷಿಕ ಆದಿ ದ್ರಾವಿಡ ಜಾತಿ ಬಾಂಧವರಿಗೆ 8 ವಿವಿಧ ರೀತಿಯ ‘ಪರಿಶಿಷ್ಟ ಜಾತಿ’ ಪ್ರಮಾಣ ಪತ್ರವನ್ನು ನೀಡಲಾಗುತ್ತಿದ್ದು, ಇದರಿಂದ ತೊಂದರೆ ಎದುರಾಗಿದೆ. ಆದ್ದರಿಂದ “ಆದಿ ದ್ರಾವಿಡ” ಎಂದು ಜಾತಿ ಪ್ರಮಾಣಪತ್ರ ನೀಡಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷ ಹೆಚ್.ಎಂ.ಸೋಮಪ್ಪ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಸೇರಿದಂತೆ ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿರುವ ‘ಆದಿ ದ್ರಾವಿಡ’ ಸಮೂಹ ಜಾತಿ ಪ್ರಮಾಣ ಪತ್ರದ ವಿಚಾರದಲ್ಲಿ ಗೊಂದಲಕ್ಕೆ ಸಿಲುಕಿದೆ. ಏಕರೂಪದ ‘ಆದಿ ದ್ರಾವಿಡ’ ಜಾತಿ ಪ್ರಮಾಣ ಪತ್ರವನ್ನು ನೀಡುವ ಮೂಲಕ ಸಮಸ್ಯೆ ಬಗೆಹರಿಸಲು ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿದರು. ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಆದಿ ದ್ರಾವಿಡ ಜಾತಿ ಬಾಂಧವರು ಸುಮಾರು 25 ಸಾವಿರ ಮಂದಿ ಇದ್ದಾರೆ. ಇವರಿಗೆ 8 ವಿವಿಧ ರೀತಿಯ ‘ಪರಿಶಿಷ್ಟ ಜಾತಿ’ ಪ್ರಮಾಣ ಪತ್ರವನ್ನು ನೀಡಲಾಗುತ್ತಿದೆ. ತಪ್ಪಾಗಿ…
ಲೇಖಕ: admin
ವಿರಾಜಪೇಟೆ ಜ.29 NEWS DESK : ಗಣರಾಜ್ಯೋತ್ಸವ ಪ್ರಯುಕ್ತ ಕೊಡಮಾಡುವ ರಾಷ್ಟ್ರಪತಿ ಪದಕಕ್ಕೆ ಬೆಂಗಳೂರಿನಲ್ಲಿ ಸಿಐಡಿ ವಿಭಾಗದಲ್ಲಿ ಡಿವೈಎಸ್ಪಿ ಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮೂಲತಃ ಕೊಡಗಿನವರಾದ ಬಿ.ಎಸ್.ಶ್ರೀನಿವಾಸ್ ರಾಜ್ ಭಜನರಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ಗಣರಾಜ್ಯೋತ್ಸವ ದಿನಾಚರಣೆಯಂದು ರಾಜ್ಯಪಾಲ ಥಾವರ್ ಚಂದ್ ಗೆಹಾಲೊಟ್ ಪದಕ ಪ್ರದಾನ ಮಾಡಿದರು. ಬಿ.ಎಸ್.ಶ್ರೀನಿವಾಸ್ ರಾಜ್ ಅನೇಕ ಪುರಸ್ಕಾರಗಳಿಗೆ ಭಾಜನರಾಗಿದ್ದು, ಇದೀಗ ರಾಷ್ಟ್ರಪತಿ ಪದಕ ಪಡೆಯುವುದರ ಮೂಲಕ ಹುಟ್ಟೂರು ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಇವರು ವಿರಾಜಪೇಟೆಯ ಬೇಟೋಳಿ ರಾಮನಗರದ ನಿವಾಸಿ ಹೆಚ್.ಕೆ.ಸಣ್ಣಯ್ಯ ಹಾಗೂ ದಿವಂಗತ ಲಕ್ಷ್ಮಮ್ಮ ದಂಪತಿಗಳ ಪುತ್ರರಾಗಿದ್ದಾರೆ.
ಮಡಿಕೇರಿ ಜ.29 NEWS DESK : ಕೊಡಗು ಜಿಲ್ಲಾ ದೈವ ಆರಾಧಕರು ಹಾಗೂ ದೈವ ನರ್ತಕರ ಸಂಘದ ಸಭೆ ನಗರದಲ್ಲಿ ನಡೆಯಿತು. ದೈವ ಆರಾಧಕರ ಕುಟುಂಬ ಸಮ್ಮಿಲನ ಕಾರ್ಯಕ್ರಮ ನಡೆಸಲು ಸಭೆ ನಿರ್ಧರಿಸಿತು. ಸಂಘದ ಅಧ್ಯಕ್ಷ ಸದಾಶಿವ ರೈ ಅವರ ಅಧ್ಯಕ್ಷತೆಯಲ್ಲಿ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ದೈವಾರಾಧನೆಯ ಕಟ್ಟುಪಾಡುಗಳ ಕುರಿತು ಚರ್ಚಿಸಲಾಯಿತು. ಕೊಡಗು ಜಿಲ್ಲೆಯಲ್ಲಿ ಕಳೆದ ಅನೇಕ ವರ್ಷಗಳಿಂದ ದೈವಾರಾಧನೆಯನ್ನು ಮಾಡಿಕೊಂಡು ಬರುತ್ತಿರುವ 90 ಕ್ಕೂ ಹೆಚ್ಚು ದೈವಸ್ಥಾನಗಳಿವೆ. ದೈವಾರಾಧಕರು ಹಾಗೂ ದೈವನರ್ತಕರನ್ನು ಒಂದೇ ವೇದಿಕೆಯಡಿ ಸಂಘಟಿಸಿ ದೈವಾರಾಧನೆಯ ಪದ್ಧತಿಯನ್ನು ಕ್ರಮಬದ್ಧವಾಗಿ ನಡೆಸಲು ತುಳುನಾಡಿನ ಜನಪದ ವಿದ್ವಾಂಸರಿಂದ ಮಾಹಿತಿ ನೀಡುವ ಪ್ರಯತ್ನ ಮಾಡಲಾಗುವುದು. ಇದಕ್ಕಾಗಿ ಜಿಲ್ಲೆಯ ಎಲ್ಲಾ ದೈವ ಆರಾಧಕರ ಹಾಗೂ ದೈವನರ್ತಕರ ಕುಟುಂಬ ಸಮ್ಮಿಲನ ಕಾರ್ಯಕ್ರಮವನ್ನು ಮಡಿಕೇರಿ ನಗರದಲ್ಲಿ ಆಯೋಜಿಸಲಾಗುವುದು ಎಂದು ಪ್ರಮುಖರು ತಿಳಿಸಿದರು. ಜಿಲ್ಲೆಯ ಎಲ್ಲಾ ದೈವ ಆರಾಧಕರು, ದೈವನರ್ತಕರು ಹಾಗೂ ಅವರ ಕುಟುಂಬದ ಎಲ್ಲಾ ಸದಸ್ಯರುಗಳನ್ನು ಆಹ್ವಾನಿಸುವುದು, ದೈವ ಆರಾಧನಾ ಕ್ಷೇತ್ರದ ವಿದ್ವಾಂಸರಿಂದ ಮಾಹಿತಿ…
ಮಡಿಕೇರಿ ಜ.29 NEWS DESK : ಮಡಿಕೇರಿ ತಾಲೂಕು ಜಾನಪದ ಪರಿಷತ್ ವತಿಯಿಂದ ಜ.30 ರಂದು ಮಹಾತ್ಮ ಗಾಂಧೀಜಿ ಸ್ಮರಣೆಯ ಗೀತನಮನ ಆಯೋಜಿಸಲಾಗಿದೆ ಎಂದು ಪರಿಷತ್ ಅಧ್ಯಕ್ಷ ಅನಿಲ್ ಎಚ್.ಟಿ. ತಿಳಿಸಿದ್ದಾರೆ. ಸಂಜೆ 6 ಗಂಟೆಗೆ ನಗರದ ಫೀಲ್ಡ್ ಮಾಷ೯ಲ್ ಕಾಯ೯ಪ್ಪ ವೃತ್ತದ (ಸುದಶ೯ನ್ ಸಕ೯ಲ್ ) ಬಳಿಯಿರುವ ಗಾಂಧಿ ಭವನದಲ್ಲಿ ಕೊಡಗು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೊಡಗು ಜಿಲ್ಲಾ ಜಾನಪದ ಪರಿಷತ್ ಮತ್ತು ರೋಟರಿ ಮಿಸ್ಟಿ ಹಿಲ್ಸ್ ಸಹಯೋಗದಲ್ಲಿ ಆಯೋಜಿತ ಕಾಯ೯ಕ್ರಮದಲ್ಲಿ ಮಡಿಕೇರಿಯ ವಿವಿಧ ಗಾಯಕ, ಗಾಯಕಿಯರು ಗೀತೆಗಳ ಮೂಲಕ ಮಹಾತ್ಮನಿಗೆ ನಮನ ಸಲ್ಲಿಸಲಿದ್ದಾರೆ. ಸಭಾ ಕಾಯ೯ಕ್ರಮದಿಂದ ಹೊರತಾಗಿ ಹಾಡುಗಳಿಗೇ ಆದ್ಯತೆ ನೀಡುವ ಒಂದೂವರೆ ಗಂಟೆಯ ಕಾಯ೯ಕ್ರಮ ಇದಾಗಿದೆ ಎಂದೂ ಪ್ರಕಟಣೆಯಲ್ಲಿ ಮಡಿಕೇರಿ ತಾಲೂಕು ಜಾನಪದ ಪರಿಷತ್ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ.
ಮಡಿಕೇರಿ ಜ.29 NEWS DESK : ದಕ್ಷಿಣ ಕೊಡಗಿನ ಟೇಬಲ್ ಟೆನ್ನಿಸ್ ಆಟಗಾರರಿಗಾಗಿ ವಿರಾಜಪೇಟೆ ಅಕಾಡೆಮಿ ಆಫ್ ಟೇಬಲ್ ಟೆನ್ನಿಸ್ ಸಂಸ್ಥೆ ವತಿಯಿಂದ ನಡೆದ ಪಂದ್ಯಾವಳಿಯಲ್ಲಿ ವಿರಾಜಪೇಟೆಯ ಡೇರಿಕ್ ಡಿಸೋಜಾ ಪ್ರಥಮ ಮತ್ತು ಪೆÇನ್ನಂಪೇಟೆಯ ಈಶ್ವರ್ ದ್ವಿತೀಯ ಸ್ಥಾನ ಗಳಿಸಿದರು. ವಿರಾಜಪೇಟೆಯ ನಿಖಿಲ್ ರಾಮಮೂರ್ತಿ ಅವರು ಆಯೋಜಿಸಿದ್ದ ಪಂದ್ಯಾವಳಿಯಲ್ಲಿ 19 ಆಟಗಾರರು ಪಾಲ್ಗೊಂಡಿದ್ದರು. ಹಿರಿಯ ವಕೀಲ ಎಸ್.ಆರ್.ಜಗದೀಶ್ ಪಂದ್ಯ ಉದ್ಘಾಟಿಸಿದರು. ನಿಖಿಲ್ ರಾಮಮೂರ್ತಿ ಮಾತನಾಡಿ ದಕ್ಷಿಣ ಕೊಡಗಿನಲ್ಲಿ ಟೇಬಲ್ ಟೆನ್ನಿಸ್ ಪಂದ್ಯಾಟಕ್ಕೆ ಪ್ರೋತ್ಸಾಹ ನೀಡಲು ಮತ್ತು ಆಟಗಾರರಿಗೆ ಸೂಕ್ತ ಅವಕಾಶ ಕಲ್ಪಿಸಲು ಈ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಅನೇಕ ಯುವ ಆಟಗಾರರು ಮುಂದಿನ ದಿನಗಳಲ್ಲಿ ಇದರಿಂದ ಸ್ಪೂರ್ತಿ ಪಡೆಯುವಂತಾಗಲಿ ಎಂದರು. ವಿಜೇತರಿಗೆ ವಿರಾಜಪೇಟೆಯ ವಕೀಲರಾದ ಸಿಂಧೂರ ಎನ್.ಸ್ವಾಮಿ ಬಹುಮಾನ ವಿತರಿಸಿದರು.
ಮಡಿಕೇರಿ ಜ.29 : ಕಕ್ಕಬ್ಬೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಎಸ್ಡಿಎಂಸಿ ಅಧ್ಯಕ್ಷ ಕೆ.ಎ.ಕಾರ್ಯಪ್ಪ ಧ್ವಜಾರೋಹಣ ನೆರವೇರಿಸಿದರು. ಶಾಲಾ ಮಕ್ಕಳ ಸಾಂಸ್ಕøತಿಕ ಕಾರ್ಯಕ್ರಮ ಗಮನ ಸೆಳೆಯಿತು. ಪ್ರತಿವರ್ಷದಂತೆ ಈ ಬಾರಿಯು ವಿದ್ಯಾರ್ಥಿಗಳಿಗೆ ದತ್ತಿನಿಧಿ ವಿತರಿಸಲಾಯಿತು. ಅಕ್ಷರ ದಾಸೋಹದ ಮುಖ್ಯ ಅಡುಗೆಯವರಾಗಿ ಸುದೀರ್ಘ ಸೇವೆ ಸಲ್ಲಿಸಿ ವಯೋ ನಿವೃತ್ತಿಯಾದ ಚೋಂದಮ್ಮ ಅವರನ್ನು ಎಸ್ಡಿಎಂಸಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ದತ್ತಿನಿಧಿ ಹಾಗೂ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಹಾಗೂ ಶಿಕ್ಷಕರಿಗೆ ಮುಖ್ಯ ಅತಿಥಿಗಳು ಬಹುಮಾನ ವಿತರಿಸಿ, ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಕುಂಜಿಲ-ಕಕ್ಕಬ್ಬೆ ಗ್ರಾ.ಪಂ ಅಧ್ಯಕ್ಷರಾದ ಪಿ.ಶಿಲ್ಪ, ಗ್ರಾ.ಪಂ ಸದಸ್ಯರಾದ ಕಲಿಯಂಡ ಸಂಪನ್ ಅಯ್ಯಪ್ಪ, ಹೆಚ್.ಡಿ.ಇಂದಿರಾ, ಎಸ್ಡಿಎಂಸಿ ಸದಸ್ಯರು, ಪೋಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಪ್ರಭಾರ ಮುಖ್ಯ ಶಿಕ್ಷಕಿ ಮಾಲತಿ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಿಕ್ಷಕರಾದ ಎಂ.ಹೆಚ್.ರಜೀನಾ ನಿರೂಪಿಸಿದರು, ಅತಿಥಿ ಶಿಕ್ಷಕಿ ಜಲಜಾಕ್ಷಿ ವಂದಿಸಿದರು.
ಮಡಿಕೇರಿ ಜ.29 NEWS DESK : ಹೊಸತೋಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವವು ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಈ ಸಂದರ್ಭ ಸೋಮವಾರಪೇಟೆ ಲಯನ್ಸ್ ಸಂಸ್ಥೆಯ ಖಜಾಂಚಿ ಕೆ.ಡಿ.ವೀರಪ್ಪ ಹಾಗೂ ಲಯನ್ಸ್ ವಲಯ ಅಧ್ಯಕ್ಷ ಚೆಟ್ಟಿಮಾಡ ರೋಹಿತ್ ಅವರು ಶಾಲೆಗೆ ನಿರ್ಮಿಸಿಕೊಟ್ಟಿದ್ದ ಗೇಟ್ಅನ್ನು ಅತಿಥಿಗಳು ಉದ್ಘಾಟಿಸಿದರು.ಗೇಟ್ಅನ್ನು ಅತಿಥಿಗಳು ಉದ್ಘಾಟಿಸಿದರು. ಶಾಲೆಯ ಮುಖ್ಯೋಪಾಧ್ಯಾಯನಿ ಪವಿತ್ರ, ಎಸ್ಡಿಎಂಸಿ ಅಧ್ಯಕ್ಷರು, ಗ್ರಾಮಸ್ಥರು ಮತ್ತು ಲೈನ್ಸ್ ಸೋಮವಾರಪೇಟೆಯ ಅಧ್ಯಕ್ಷ ಮಹೇಶ್, ಕಾರ್ಯದರ್ಶಿ ಸಿ.ಕೆ.ಶಿವಕುಮಾರ್, ನಿಕಟಪೂರ್ವ ಅಧ್ಯಕ್ಷ ಸಿ.ಕೆ.ಮಲ್ಲಪ್ಪ ಹಾಜರಿದ್ದರು.
ಮಡಿಕೇರಿ ಜ.29 NEWS DESK : ಮರಗೋಡುವಿನ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ಮೊದಲನೇ ವರ್ಷದ ಕೊಡಗು ಜಿಲ್ಲಾ ಹಿಂದೂ ಮಲಯಾಳಿ ಫುಟ್ಬಾಲ್ ಕಪ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಕೊಡಗು ಜಿಲ್ಲೆಯ ಹಿಂದೂ ಮಲಯಾಳಿ ಸಮಾಜದ ಏಳು ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ನಿವೃತ್ತ ಯೋಧ ಹಾಗೂ ಫುಟ್ಬಾಲ್ ಆಟಗಾರ ಶ್ರೀನಿವಾಸ್(ಸತ್ಯ), ಕೊಡಗು ಜಿಲ್ಲಾ ಹಿಂದೂ ಮಲಯಾಳಿ ಸಮಾಜದ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ,ವಿ.ಎಮ್ ವಿಜಯನ್, ಮರಗೋಡು ಭಾರತಿ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಹಾಗೂ ಉಪನ್ಯಾಸಕರಾಗಿದ್ದ ಶಾಜಿ ಪಿ.ಟಿ, ಉರಗ ತಜ್ಞ ಹಾಗೂ ಉರಗ ರಕ್ಷಕ ಗೋಣಿಕೊಪ್ಪಲಿನ ಎ.ಒನ್ ಟೂರ್ಸ್ ಅಂಡ್ ಟ್ರಾವೆಲ್ಸ್ ಮಾಲೀಕ ಶರತ್ ಕಾಂತ್ ಪಿ.ಎಸ್,ಟಿಂಬರ್ ಮರ್ಚೆಂಟ್ ಹಾಗೂ ಅಮ್ಮತ್ತಿ ಮಿಲನ್ಸ್ ಫುಟ್ಬಾಲ್ ಕ್ಲಬ್ ಅಧ್ಯಕ್ಷ ಎಂ.ಎಂ.ಲಿಜೇಶ್, ರಾಷ್ಟ್ರದ ಮಟ್ಟದ ಫುಟ್ಬಾಲ್ ಆಟಗಾರ ಅಮ್ಮತ್ತಿಯ ವಿಜೇಶ್ ಎಂ.ಎಂ(ವಿಜು) ಹಾಗೂ ರಾಷ್ಟ್ರೀಯ ಮಟ್ಟದ ಅಥ್ಲೀಟ್ ಮರಗೋಡುವಿನ ಎಂ.ಸಿ.ಮಿಲನ್ ಅವರನ್ನು ಅತಿಥಿಗಳು ಸನ್ಮಾನಿಸಿ ಗೌರವಿಸಿದರು.…
ಮಡಿಕೇರಿ ಜ.29 NEWS DESK : ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿ ಅಳವಡಿಸಲಾಗಿದ್ದ ಹನುಮ ಧ್ವಜವನ್ನು ತೆರವುಗೊಳಿಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದೂಗಳ ಭಾವನೆಗೆ ದಕ್ಕೆ ಉಂಟು ಮಾಡಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಕಾಂಗ್ರೆಸ್ ಸರ್ಕಾರ ಓಲೈಕೆ ರಾಜಕಾರಣ ಮಾಡುತ್ತಿದ್ದು, ಹಿಂದೂ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರAಜನ್, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ.ಸುನೀಲ್ ಸುಬ್ರಮಣಿ, ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಸಿ.ಸತೀಶ್, ಬಿಜೆಪಿ ಜಿಲ್ಲಾ ವಕ್ತಾರ ಮಹೇಶ್ ಜೈನಿ, ಮಾಜಿ ಅಧ್ಯಕ್ಷ ರಾಬಿನ್ ದೇವಯ್ಯ, ನಗರಾಧ್ಯಕ್ಷ ಮನು ಮಂಜುನಾಥ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಮಡಿಕೇರಿ ಜ.29 NEWS DESK : ಗೋಣಿಕೊಪ್ಪಲು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಕುಲ್ಲಚಂಡ ಪ್ರಮೋದ್ ಹಾಗೂ ಉಪಾಧ್ಯಕ್ಷರಾಗಿ ಮಂಜುಳಾ ಆಯ್ಕೆಯಾಗಿದ್ದಾರೆ.






