ಲೇಖಕ: admin

ಬೆಂಗಳೂರು, ಫೆ.19 :  ಇತ್ತೀಚೆಗೆ ವಿಧಾನಸೌಧ ಮುಂಭಾಗ ನಡೆದ ಮಾನ್ಯ ಮುಖ್ಯಮಂತ್ರಿಯವರ ಜನಸ್ಪಂದನ ಕಾರ್ಯಕ್ರಮವು ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದ್ದು, ಸ್ವೀಕರಿಸಿದ ಅರ್ಜಿಗಳ ಸಕಾರಾತ್ಮಕ ವಿಲೇವಾರಿಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ಅವರು ಸೂಚಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜನಸ್ಫಂದನ ಕಾರ್ಯಕ್ರಮದ ಪರಾಮರ್ಶೆಗಾಗಿ, ಆಯೋಜನೆಯಲ್ಲಿ ಭಾಗಿಯಾದ ಅಧಿಕಾರಿಗಳ ಸಭೆ ನಡೆಸಿ ಈ ಸೂಚನೆ ನೀಡಿದರು. ಜನಸ್ಪಂದನ ಕಾರ್ಯಕ್ರಮದ ಯಶಸ್ಸಿನ ಕುರಿತು ಮಾನ್ಯ ಮುಖ್ಯಮಂತ್ರಿಯವರೂ ಮೆಚ್ಚುಗೆ ವ್ಯಕ್ತಪಡಿಸಿದ್ದು, ಅವರು ಇದಕ್ಕೆ ಸಾಂಸ್ಥಿಕ ರೂಪ ನೀಡಿ ಇನ್ನಷ್ಟು ವ್ಯವಸ್ಥಿತವಾಗಿ ಕಾರ್ಯಕ್ರಮ ನಡೆಸಬೇಕೆಂದು ಅಪೇಕ್ಷಿಸಿದ್ದಾರೆ ಎಂದರು. ವಿಭಾಗ ಮಟ್ಟದಲ್ಲಿ ಜನಸ್ಪಂದನ ಜನಸ್ಪಂದನ ಕಾರ್ಯಕ್ರಮವನ್ನು ವಿಭಾಗ ಮಟ್ಟದಲ್ಲಿ ನಡೆಸುವ ಕುರಿತೂ ಸಹ ಚಿಂತನೆ ನಡೆದಿದೆ. ಮೊದಲಿಗೆ ಕಲಬುರ್ಗಿಯಲ್ಲಿ ವಿಭಾಗಮಟ್ಟದ ಜನಸ್ಪಂದನ ನಡೆಸಲು ಉದ್ದೇಶಿಸಿದೆ. ವಿಭಾಗ ಮಟ್ಟದಲ್ಲಿ ಸಂಬಂಧಿಸಿದ ಜಿಲ್ಲಾಧಿಕಾರಿಗಳು ಖುದ್ದು ಭಾಗವಹಿಸಲು ಸೂಚಿಸಲಾಗುವುದು ಎಂದು ತಿಳಿಸಿದರು. 11 ದಿನದಲ್ಲಿ 4321 ಅರ್ಜಿ ವಿಲೇವಾರಿ ಮೊನ್ನೆ ಸ್ವೀಕರಿಸಲಾದ 14,685 ಅರ್ಜಿಗಳ ಪೈಕಿ 4321 ಅರ್ಜಿಗಳನ್ನು…

Read More

ಬೆಂಗಳೂರು ಫೆ.20 NEWS DESK :  ನಾವು ಅಧಿಕಾರಕ್ಕೆ ಬಂದ ಕೇವಲ 9 ತಿಂಗಳಲ್ಲಿ 77 ಸಾವಿರ ಕೋಟಿ ಹೂಡಿಕೆ ಬಂದಿರುವುದೇ ರಾಜ್ಯದ ಕಾನೂನು ಸುವ್ಯವಸ್ಥೆ ಸುಗಮ ಆಗಿರುವುದಕ್ಕೆ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಣೆ ನೀಡಿದರು. ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ಮೇಲೆ ನಡೆದ ಚರ್ಚೆಗೆ ಉತ್ತರ ನೀಡಿದರು. ಸರ್ಕಾರದ ಅಭಿವೃದ್ಧಿ ಮತ್ತು ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಜಾರಿ ಹಾಗೂ ಜನಪರ ಯೋಜನೆಗಳಿಗೆ ರಾಜ್ಯಪಾಲರು ಕನ್ನಡಿ ಹಿಡಿದಿದ್ದಾರೆ. ಆದರೆ ಪ್ರತಿ ಪಕ್ಷ ನಾಯಕರಾದ ಆರ್.ಅಶೋಕ್ ಅವರು ರಾಜ್ಯಪಾಲರು ಮಾತಾಡಿದ್ದನ್ನು ಬಿಟ್ಟು ಅವರು ಮಾತಾಡದ್ದನ್ನೆಲ್ಲಾ ಪ್ರಸ್ತಾಪಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಸುಳ್ಳು ಸುಳ್ಳೇ ಆರೋಪ ಮಾಡಿದ್ದಾರೆ. ನಾವು ಅಧಿಕಾರಕ್ಕೆ ಬಂದ 9 ತಿಂಗಳಲ್ಲಿ ರಾಜ್ಯಕ್ಕೆ 77 ಸಾವಿರ ಕೋಟಿ ಬಂಡವಾಳ ಹರಿದು ಬಂದಿದೆ. ಬಂಡವಾಳ ಹೂಡಿಕೆಗೂ , ಕಾನೂನು ಸುವ್ಯವಸ್ಥೆಗೂ ನೇರಾ ನೇರ ಸಂಬಂಧ ಇರುತ್ತದೆ. ಸರ್ಕಾರದ ಕಡಿಮೆ ಅವಧಿಯಲ್ಲೇ ಇಷ್ಟೊಂದು ಪ್ರಮಾಣದ ಹೂಡಿಕೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸುಗಮ…

Read More

ಬೆಂಗಳೂರು ಫೆ.20  NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರವೀಂದ್ರ ಕಲಾಕ್ಷೇತ್ರದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಹಾಗೂ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ಹೊಸ ಯೋಜನೆಗಳ ಚಾಲನೆ ಮತ್ತು ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿದರು. ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿಯಾಗಿ ಆಯೋಜಿಸಿದ್ದ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಗೋಸಾಯಿ ಮಹಾಸಂಸ್ಥಾನ ಮಠದ ಶ್ರೀ ಶ್ರೀ ಮಂಜುನಾಥ ಭಾರತಿ ಸ್ವಾಮೀಜಿ ವಹಿಸಿದ್ದರು. ಕನ್ಮಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ, ಮಾಜಿ ಸಚಿವ ಪಿಜಿಆರ್ ಸಿಂಧ್ಯಾ, ಶಾಸಕರಾದ ಶ್ರೀನಿವಾಸ್ ವಿ ಮಾನೆ ಸೇರಿ ಮರಾಠ ಸಮುದಾಯದ ಮುಖಂಡರುಗಳು ಉಪಸ್ಥಿತರಿದ್ದರು.

Read More

ಮಡಿಕೇರಿ ಫೆ.20 NEWS DESK :  ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಕಾರ್ಯಕ್ರಮವಾಗಿರುವ “ಸಂವಿಧಾನ ಜಾಗೃತಿ ಜಾಥಾ ” ಅಭಿಯಾನದ ಅಂಗವಾಗಿ ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಔಟಿಟiಟಿe ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದ ಅಂಗವಾಗಿ ಭಾರತ ಸಂವಿಧಾನದ ಕುರಿತಂತೆ ಪ್ರಶ್ನಾವಳಿಯ ಸರಣಿಯ ಎರಡನೇ ಹಂತದ ಪ್ರಶ್ನಾವಳಿಗಳನ್ನು ಸಿದ್ಧಪಡಿಸಲಾಗಿದೆ. ಆ ದಿಸೆಯಲ್ಲಿ ಸಂವಿಧಾನ ಜಾಗೃತಿ ಜಾಥ ಕುರಿತಾದ ಎರಡನೇ ಹಂತದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೇಲ್ಕಂಡ ಗೂಗಲ್ ಫಾರ್ಮ್ ನಲ್ಲಿ ಕೋರಿರುವ ಮಾಹಿತಿಯನ್ನು ಭರ್ತಿ ಮಾಡಿ ನೀಡಲಾಗಿರುವ ಬಹು ಆಯ್ಕೆ ಮಾದರಿಯ ಪ್ರಶ್ನಾವಳಿಗಳಿಗೆ ಉತ್ತರಿಸುವ ಮೂಲಕ ಕೊಡಗು ಜಿಲ್ಲಾ ಆಡಳಿತ ವತಿಯಿಂದ ಆಯೋಜಿಸಲಾಗಿರುವ ವಿಶೇಷ ಅಭಿಯಾನ ಕಾರ್ಯಕ್ರಮ ದಲ್ಲಿ ಜಿಲ್ಲೆಯಲ್ಲಿನ ಎಲ್ಲಾ ವಿದ್ಯಾರ್ಥಿಗಳು, ಸಾರ್ವಜನಿಕರು, ಸರ್ಕಾರಿ ನೌಕರರು, ವಿಶೇಷವಾಗಿ ಶಾಲಾ ಶಿಕ್ಷಕರು, ವಿವಿಧ ಸಂಘ-ಸಂಸ್ಥೆಗಳು, ಭಾಗಿಯಾಗಿ ಕಾರ್ಯಕ್ರಮ ಯಶಸ್ಸಿಗೆ ಕೈಜೋಡಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಭಾಗವಹಿಸುವವರು :: https://docs.google.com/forms/d/e/1FAIpQLSfgt_NhUOicIzuh3Z8Oo_8WIJnqMtDK8B9xRlFjT9nTHuJbJg/viewform?usp=sf_link

Read More

ಮಡಿಕೇರಿ ಫೆ.19 NEWS DESK : ವನ್ಯಜೀವಿ ಸಂರಕ್ಷಣಾ ಕಾಯ್ದೆ 2003 ಅಧಿಸೂಚನೆಯ ಅಧಿನಿಯಮಗಳಿಗೆ ಸಂಬಂಧಿಸಿದಂತೆ ಮಧ್ಯಂತರ ಆದೇಶದಲ್ಲಿ ತಡೆಯಾಜ್ಞೆ ನೀಡಿರುವ ಹಿನ್ನೆಲೆ ಕೊಡಗಿನ ಜನ ಆತಂಕ ಪಡುವ ಅಗತ್ಯವಿಲ್ಲವೆಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 2003 ಅಧಿಸೂಚನೆಯ ಅಧಿನಿಯಮಗಳಿಗೆ ಸಂಬAಧಿಸಿದAತೆ ಜನವರಿ 1 ರಂದು ಕರ್ನಾಟಕ ಸರ್ಕಾರವು ವನ್ಯಜೀವಿಗಳ ವಸ್ತುಗಳು ಮತ್ತು ಟ್ರೋಫಿಯನ್ನು 3 ತಿಂಗಳ ಒಳಗೆ ಸರ್ಕಾರಕ್ಕೆ ಒಪ್ಪಿಸಲು ಅಧಿಸೂಚನೆ ಹೊರಡಿಸಿತ್ತು. ಈ ಆದೇಶದ ವಿರುದ್ಧ ರಂಜಿ ಪೂಣಚ್ಚ ಹಾಗೂ ಕುಟ್ಟಪ್ಪ ಎಂಬುವವರು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ದಾವೆಯನ್ನು ದಾಖಲಿಸಿದ್ದರು. ವಿಚಾರಣೆ ನಡೆಸಿದ ಉಚ್ಚ ನ್ಯಾಯಾಲಯ ಮಧ್ಯಂತರ ಆದೇಶದಲ್ಲಿ ತಡೆಯಾಜ್ಞೆಯನ್ನು ನೀಡಿ ಆದೇಶಿಸಿದೆ. ಆದ್ದರಿಂದ ಕೊಡಗಿನ ಜನ ಆತಂಕ ಪಡುವ ಅಗತ್ಯವಿಲ್ಲವೆಂದು ಪೊನ್ನಣ್ಣ ಸ್ಪಷ್ಟಪಡಿಸಿದ್ದಾರೆ.

Read More

ಮಡಿಕೇರಿ ಫೆ.19 NEWS DESK : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕು ವ್ಯಾಪ್ತಿಯ ಗ್ರಾಮವೊಂದರಲ್ಲಿ ಅಪ್ರಾಪ್ತ ಯುವತಿಯ ಮೇಲೆ ಅತ್ಯಾಚಾರವೆಸಗಿ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಸಿಐಡಿ ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ದಲಿತರಿಗೆ ರಕ್ಷಣೆ ನೀಡುವಲ್ಲಿ ವಿಫಲರಾಗಿರುವ ರಾಜ್ಯ ಗೃಹ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಕರ್ನಾಟಕ ಅಹಿಂದ ಸಂಘಟನೆಗಳ ಒಕ್ಕೂಟ ಸೇರಿದಂತೆ ವಿವಿಧ ಸಂಘಟನೆಗಳು ಪೊನ್ನಂಪೇಟೆಯಲ್ಲಿ ಪ್ರತಿಭಟನೆ ನಡೆಸಿದವು. ಗೃಹ ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿ ನ್ಯಾಯಕ್ಕಾಗಿ ಒತ್ತಾಯಿಸಿದ ಪ್ರತಿಭಟನಾಕಾರರು ಪೊನ್ನಂಪೇಟೆ ಬಸ್ ನಿಲ್ದಾಣದಿಂದ ತಾಲ್ಲೂಕು ತಹಶೀಲ್ದಾರ್ ಕಚೇರಿವರೆಗೆ ಮೆರವಣಿಗೆ ನಡೆಸಿದರು. ತಹಶೀಲ್ದಾರ್ ಕಚೇರಿ ಎದುರು ಮಾತನಾಡಿದ ಅಹಿಂದ ಸಂಘಟನೆಗಳ ಒಕ್ಕೂಟದ ಮುಖಂಡ ಹರಿರಾಮ್ ಯುವತಿಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬAಧಿಸಿದAತೆ ಪ್ರಾಥಮಿಕ ಹಂತದಲ್ಲಿ ಪೊಲೀಸರು ಸೂಕ್ತ ರೀತಿಯಲ್ಲಿ ಸ್ಪಂದನೆ ನೀಡಿಲ್ಲ. ಆದ್ದರಿಂದ ಕರ್ತವ್ಯ ಲೋಪವೆಸಗಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ರಾಜ್ಯದಲ್ಲಿ ಕಾಂಗ್ರೆಸ್…

Read More

ಮಡಿಕೇರಿ ಫೆ.19 NEWS DESK : ವಾರ್ತಾ ಕಮ್ಯುನಿಕೇಶನ್ಸ್ ಪ್ರಸ್ತುತ ಪಡಿಸುವ ಪತ್ರಕರ್ತ ಅನಿಲ್ ಹೆಚ್‌.ಟಿ ಅವರು ಬರೆದಿರುವ “ಅಯೋಧ್ಯೆ” ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಫೆಬ್ರವರಿ 23ರಂದು ಸಂಜೆ 6 ಗಂಟೆಗೆ ಮಡಿಕೇರಿಯ ರೆಡ್ ಬ್ರಿಕ್ಸ್ ಸತ್ಕಾರ ಸಭಾಂಗಣದಲ್ಲಿ ನಡೆಯಲಿದೆ. ಹಿರಿಯ ಸಾಹಿತಿ ಗಜಾನನ ಶರ್ಮ ಅವರು ಪುಸ್ತಕವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಕ್ತಿ ದಿನ ಪತ್ರಿಕೆಯ ಸಂಪಾದಕ ಜಿ.ಚಿದ್ವಿಲಾಸ್ ಪಾಲ್ಗೊಳ್ಳಲಿದ್ದಾರೆ.  ಸರ್ವರೂ ಪಾಲ್ಗೊಳ್ಳುವಂತೆ ವಾರ್ತಾ ಕಮ್ಯುನಿಕೇಶನ್ ನ ಪ್ರಮುಖರಾದ ರೀನಾ ಅನಿಲ್ ಹೆಚ್. ಮನವಿ ಮಾಡಿದ್ದಾರೆ.

Read More

ಮಡಿಕೇರಿ ಫೆ.19 NEWS DESK : ರಾಮನಗರದಲ್ಲಿ ವಕೀಲರ ವಿರುದ್ಧ ಪೊಲೀಸರು ವಿನಾಕಾರಣ ಮೊಕದ್ದಮೆ ದಾಖಲಿಸಿದ್ದು, ಇದನ್ನು ತೀವ್ರವಾಗಿ ಖಂಡಿಸುವುದಾಗಿ ಮಡಿಕೇರಿ ವಕೀಲರ ಸಂಘ ತಿಳಿಸಿದೆ. ಕ್ಷುಲ್ಲಕ ವಿಚಾರಕ್ಕೆ ನಡೆದ ಘಟನೆಗೆ ಸಂಬಂಧಿಸಿದಂತೆ 40 ವಕೀಲರ ಮೇಲೆ ರಾಮನಗರ ಪೊಲೀಸರು ಮೊಕದ್ದಮೆ ದಾಖಲಿಸಿದ್ದಾರೆ. ಪೊಲೀಸರ ಈ ಕ್ರಮವನ್ನು ರಾಜ್ಯವ್ಯಾಪಿ ವಕೀಲರು ಖಂಡಿಸಿದ್ದಾರೆ. ರಾಮನಗರ ನ್ಯಾಯಾಲಯದ ಕಲಾಪಗಳನ್ನು ಅಲ್ಲಿನ ವಕೀಲರು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ. ರಾಮನಗರದ ವಕೀಲ ಸಮುದಾಯಕ್ಕೆ ಬೆಂಬಲ ವ್ಯಕ್ತಪಡಿಸಿ, ಪೊಲೀಸರ ನಿಲುವು ಖಂಡಿಸಿ ಮಡಿಕೇರಿ ವಕೀಲರ ಸಂಘ ನಿರ್ಣಯ ಕೈಗೊಂಡಿದೆ ಎಂದು ತಿಳಿಸಿರುವ ಮಡಿಕೇರಿ ವಕೀಲರ ಸಂಘದ ಉಪಾಧ್ಯಕ್ಷ ಎಂ.ಪಿ.ನಾಗರಾಜ್, ವಕೀಲರ ವಿರುದ್ಧದ ಮೊಕದ್ದಮೆಯನ್ನು ತಕ್ಷಣ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.

Read More

ಮಡಿಕೇರಿ ಫೆ.19 NEWS DESK : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ವತಿಯಿಂದ ಫೆ.26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯಲಿದ್ದು, ಉದ್ಯೋಗಾಕಾಂಕ್ಷಿಗಳು ಹೆಸರು ನೋಂದಣಿಗೆ ಶ್ರಮವಹಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಸಲಹೆ ಮಾಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಅವಕಾಶ’ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಮಟ್ಟದ ಯುವ ಸಮೃದ್ಧಿ ಸಮ್ಮೇಳನ, ಬೃಹತ್ ಉದ್ಯೋಗ ಮೇಳ ಸಂಬಂಧಿಸಿದಂತೆ ಶಾಲಾ ಕಾಲೇಜುಗಳು ಸೇರಿದಂತೆ ಎಲ್ಲೆಡೆ ಮಾಹಿತಿ ನೀಡುವಂತಾಗಬೇಕು ಎಂದು ಸೂಚಿಸಿದರು. ಬೃಹತ್ ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತಾಗಲು ಜಿಲ್ಲೆಯ ಎಲ್ಲಾ ವಿದ್ಯಾಸಂಸ್ಥೆಗಳಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಸೇರಿದಂತೆ ಎಲ್ಲಾ ವಿದ್ಯಾರ್ಹತೆ ಹೊಂದಿರುವವರ ಜೊತೆ ಸಮಾಲೋಚನೆ ಮತ್ತು ಪೂರ್ವ ಸಂದರ್ಶನ ಏರ್ಪಡಿಸುವಂತೆ…

Read More

ಕಡಂಗ ಫೆ.19 NEWS DESK : ಎಸ್.ಕೆ.ಎಸ್.ಎಸ್.ಎಫ್ ಕಡಂಗ ಶಾಖೆ ವತಿಯಿಂದ ಕಡಂಗದಲ್ಲಿ ಎಸ್.ಕೆ.ಎಸ್.ಎಸ್.ಎಫ್ ಸ್ಥಾಪಕ ದಿನವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಸಮಸ್ತ ಕೇಂದ್ರ ಮುಶಾವರ ಸದಸ್ಯ ಶೈಖುನಾ ಅಬ್ದುಲ್ಲಾ ಫೈಝಿ ಮಾಡಿದರು. ಕೊಡಗು ಜಿಲ್ಲಾ ಸಮಿತಿ ನೂತನ ಅಧ್ಯಕ್ಷ ಸುಹೈಬ್ ಫೈಝಿ ಸಂದೇಶವನ್ನು ನೀಡಿದರು. ಕಾರ್ಯಕ್ರಮದಲ್ಲಿ ಎಂ.ಜೆ.ಎಂ ಕಡಂಗ ಉಪಾಧ್ಯಾಕ್ಷ ಸಿ.ಎ.ಸಲಾಂ, ಎಸ್.ಕೆ.ಎಸ್.ಎಸ್.ಎಫ್ ಕಡಂಗ ಶಾಖೆ ಅಧ್ಯಕ್ಷ ಸಿ.ಇ.ಇಸ್ಹಾಕ್ , ಕಾರ್ಯದರ್ಶಿ ಇಕ್ಬಾಲ್, ಸದಸ್ಯರಾದ ಶಮೀರ್, ಶಿಹಾಬ್ ಹಾಗೂ ಎಂ.ಯು.ಎಂ ಮುಅಲ್ಲಿಂ ಹನೀಫ್ ಮುಸ್ಲಿಯಾರ್ ಹಾಗೂ ಸಮದ್ ಫೈಝಿ ಮತ್ತು ವಿದ್ಯಾರ್ಥಿಗಳು  ಹಾಜರಿದ್ದರು. ವರದಿ : ನೌಫಲ್ ಕಡಂಗ   

Read More