ಲೇಖಕ: admin

ಮಡಿಕೇರಿ ಜ.29 NEWS DESK :  ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿ ನೊಂದವರಿಗೆ ಸೂಕ್ತ ನೆರವು ಒದಗಿಸುವ ನಿಟ್ಟಿನಲ್ಲಿ 1993ರ ಮಾನವ ಹಕ್ಕುಗಳ ಸಂರಕ್ಷಣಾ ಅಧಿನಿಯಮದ ಅಡಿಯಲ್ಲಿ ಸ್ಥಾಪಿತವಾಗಿರುವ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗವು ಫೆ.2 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದೆ. ಆ ನಿಟ್ಟಿನಲ್ಲಿ ಫೆ.2 ರಂದು ನಗರದಲ್ಲಿ ವಿಚಾರಣೆ ನಡೆಸಲಿದೆ. ವಿಚಾರಣೆ ಸಂದರ್ಭದಲ್ಲಿ ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಆಯೋಗದಲ್ಲಿ ನೋಂದಣಿಯಾಗಿರುವ ಪ್ರಕರಣಗಳನ್ನು ಇತ್ಯರ್ಥಪಡಿಸಿ, ವಿಲೇ ಮಾಡಲು ಕ್ರಮ ಜರುಗಿಸಲು ಉದ್ದೇಶಿಸಲಾಗಿದೆ. ದೂರುದಾರರು ಹಾಗೂ ಪ್ರತಿವಾದಿ ಪ್ರಾಧಿಕಾರಗಳು ಈ ಸೌಲಭ್ಯದ ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದೆ. ಮಾನವ ಹಕ್ಕು ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಾರ್ವಜನಿಕರಿಂದ ದೂರುಗಳು/ ಅಹವಾಲುಗಳನ್ನು ಸಹ ಸ್ವೀಕರಿಸಲು ಉದ್ದೇಶಿಸಲಾಗಿದೆ. ಸಾರ್ವಜನಿಕರು ಆಯಾಯ ಜಿಲ್ಲೆಗಳಲ್ಲಿ ಫೆ.2 ಆಯೋಗದ ಮಾನ್ಯ ಅಧ್ಯಕ್ಷರು ಹಾಗೂ ಸದಸ್ಯರುಗಳನ್ನು ಸಂಪರ್ಕಿಸಿ, ದೂರುಗಳನ್ನು ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Read More

ಮಡಿಕೇರಿ ಜ.29 NEWS DESK :  ಮರಗೋಡುವಿನ ಸರ್ಕಾರಿ ಹಿರಿಯ ಪ್ರಾಥಮಿಕ‌ ಶಾಲಾ ಮೈದಾನದಲ್ಲಿ ನಡೆದ ಲೀಗ್ ಮಾದರಿಯ ಕೊಡಗು ಜಿಲ್ಲಾ ಹಿಂದೂ ‌ ಮಲಯಾಳಿ ಫುಟ್ಬಾಲ್ ಕಪ್ ನಲ್ಲಿ ಹಿಂದೂ ಮಲಯಾಳಿ ಸಮಾಜ ಮರಗೋಡು ತಂಡ ಚಾಂಪಿಯನ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ರನ್ನರ್ಸ್ ಪ್ರಶಸ್ತಿಯನ್ನು ಚಾಲೆಂಜರ್ಸ್ ಎಫ್.ಸಿ ಚೆನ್ನಯ್ಯನಕೋಟೆ ತಂಡದ ಪಡೆದುಕೊಂಡಿತ್ತು. ಎರಡು ಬಲಿಷ್ಠ ತಂಡಗಳ ನಡುವೆ ನಡೆದ ಫೈನಲ್ ‌ಪಂದ್ಯದಲ್ಲಿ ಹಿಂದೂ ಮಲಯಾಳಿ ಸಮಾಜ‌ ಮರಗೋಡು ‌ತಂಡದ ನಾಯಕ ಅಜಿತ್ ಚೆಟ್ಟಳ್ಳಿ ಅವರ ಏಕೈಕ ಗೋಲಿನಿಂದ ಹಿಂದೂ‌ ಮಲಯಾಳಿ ‌ಸಮಾಜ ಮರಗೋಡು ‌ತಂಡ ಮಲಯಾಳಿ ‌ಫುಟ್ಬಾಲ್ ಕಪ್ ಪ್ರಶಸ್ತಿ ‌ಜಯಿಸಿತು. ಇದಕ್ಕೂ ‌ಮೊದಲು ನಡೆದ ಮೊದಲ ಸೆಮಿಫೈನಲ್ ಪಂದ್ಯವು ಶ್ರೀ‌ನಿಥಿ ಎಫ್.ಸಿ ಒಂಟಿಯಂಗಡಿ ‌ಹಾಗೂ ಚಾಲೆಂಜರ್ಸ್ ‌ಎಫ್.ಸಿ ಚೆನ್ನಯ್ಯನಕೋಟೆ ತಂಡಗಳ ನಡುವೆ ‌ನಡೆಯಿತು.ಅತ್ಯಂತ ‌ಕುತೂಹಲಕಾರಿ ಪಂದ್ಯದಲ್ಲಿ ಎರಡು ತಂಡವು ‌1-1 ಗೋಲುಗಳನ್ನು ‌ಬಾರಿಸಿ ಸಮಬಲ ಸಾಧಿಸಿತ್ತು.ಶ್ರೀನಿಥಿ ಎಫ್‌.ಸಿ‌‌ ತಂಡದ ಪರವಾಗಿ ಸತ್ಯ ಹಾಗೂ ಚಾಲೆಂಜರ್ಸ್ ಎಫ್.ಸಿ‌ ತಂಡದ ಪರವಾಗಿ ವಿಷ್ಣು…

Read More

ಮಡಿಕೇರಿ ಜ.29 NEWS DESK : ಇಂದಿನ ಯುವಪೀಳಿಗೆಗೆ ಚಿತ್ರತಾರೆಯರು, ಕ್ರಿಕೆಟಿಗರು, ಭ್ರಷ್ಟ ರಾಜಕಾರಣಿಗಳೇ ಆದಶ೯ಪ್ರಾಯರಾಗುತ್ತಿದ್ದಾರೆಯೇ ವಿನಾ: ದೇಶಕ್ಕಾಗಿ ಹೋರಾಡುವ ಸೈನಿಕರನ್ನು ಯುವಜನಾಂಗ ಮರೆಯುತ್ತಿದೆ ಎಂದು ನಿವೃತ್ತ ಏರ್ ಮಾಷ೯ಲ್ ಕೆ.ಸಿ. ನಂದಕಾಯ೯ಪ್ಪ ವಿಷಾಧಿಸಿದ್ದಾರೆ. ಮಡಿಕೇರಿಯಲ್ಲಿನ ಫೀಲ್ಡ್ ಮಾಷ೯ಲ್ ಕೆ.ಸಿ.ಕಾಯ೯ಪ್ಪ ಅವರ ನಿವಾಸ ರೋಶನಾರದಲ್ಲಿರುವ ಕಾಯ೯ಪ್ಪ ಸಮಾಧಿ ಸ್ಥಳದಲ್ಲಿ ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಅವರ 125 ನೇ ಜನ್ಮದಿನಾಚರಣೆ  ಪ್ರಯುಕ್ತ  ಮಗ ನಂದ ಕಾಯ೯ಪ್ಪ ಮಾತನಾಡಿದರು. ಯುವಪೀಳಿಗೆಗೆ ಸೈನಿಕರ ದೇಶಸೇವೆಯನ್ನು ಪರಿಣಾಮಕಾರಿಯಾಗಿ ತಿಳಿಹೇಳುವ ಅನಿವಾಯ೯ತೆ ಹಿಂದೆಂದಿಗಿಂತ ಹೆಚ್ಚಾಗಿದೆ ಎಂದೂ ಅವರು ಸಲಹೆ ನೀಡಿದರು. ದೇಶಕ್ಕಾಗಿ ಹಗಲಿರುಳು ಹೋರಾಡುವ ಸೈನಿಕರು ಇಂದಿನ ಯುವಪೀಳಿಗೆಗೆ ಮಾದರಿಯಾಗಬೇಕು. ಆದಶ೯ವಾಗಬೇಕು. ಸ್ಪೂತಿ೯ಯಾಗಬೇಕೆಂದು ಅವರು ಕರೆ ನೀಡಿದರು. ತನ್ನ ತಂದೆಯ ಪುಣ್ಯ ಸ್ಮರಣೆಯನ್ನು ಕೊಡಗು ವಿದ್ಯಾಲಯ ಶಿಕ್ಷಣ ಸಂಸ್ಥೆಯು ಮಕ್ಕಳ ಸಮ್ಮುಖದಲ್ಲಿ ವಷ೯ಂಪ್ರತಿ ಆಚರಿಸುತ್ತಾ ಬರುತ್ತಿರುವುದು ಶ್ಲಾಘನೀಯ ಎಂದೂ ಕಾಯ೯ಪ್ಪ ಹೇಳಿದರು ಮಾದಾಪುರದ ಶ್ರೀಮತಿ ಡಿ.ಚೆನ್ನಮ್ಮ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ನಿವೖತ್ತ ಕನ೯ಲ್ ಬಿ.ಜಿ.ವಿ. ಕುಮಾರ್ ಮಾತನಾಡಿ, ದೇಶಕ್ಕಾಗಿ…

Read More

ಸುಂಟಿಕೊಪ್ಪ ಜ.29 : ಕೊಡಗರಹಳ್ಳಿಯ ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಅಭಿವೃದ್ಧಿಗಾಗಿ ದೇಣಿಗೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಶಾಲೆಯ ಸಭಾಂಗಣದಲ್ಲಿ ನಡೆದ 75ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ರಾಜ್ಯಮಟ್ಟದ ‘ಬಾಲವಿಜ್ಞಾನ’ ಸಮಾವೇಶದಲ್ಲಿ ಭಾಗವಹಿಸಿ ರಾಷ್ಟ್ರೀಯ ಮಟ್ಟದಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಪ್ರತಿನಿಧಿಸಲು ಆಯ್ಕೆಗೊಂಡಿರುವ ಬಾಲ ವಿಜ್ಞಾನಿ ಎ.ಎಸ್.ಶ್ರೀಶಾ ಮತ್ತು ಸಾಕ್ಷರತಾ ಇಲಾಖೆ ನಡೆಸಿದ ‘ಪ್ರಾಚ್ಯಪ್ರಜ್ಞೆ’ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಟಿ.ಎಸ್.ಫಾತಿಮತ್ ಸಹಲ ಅವರುಗಳನ್ನು ಸನ್ಮಾನಿಸಿ, ಗೌರವಿಸಲಾಯಿತು. ಈ ಸಂದರ್ಭ ಸುಂಟಿಕೊಪ್ಪ ನಾಡು ಪ್ರೌಢಶಾಲೆಗೆ ನೂತನ ಕಟ್ಟಡ ನಿರ್ಮಿಸಲು ರೂ.1,50,000 ದೇಣಿಗೆಯಾಗಿ 1980-81ನೇ ಸಾಲಿನ ವಿದ್ಯಾರ್ಥಿಗಳು ಡಾ. ಅಕ್ಕಪಂಡ ತಮ್ಮಯ್ಯ ಅವರ ನೇತೃತ್ವದಲ್ಲಿ ಕೆ.ಡಿ.ಪ್ರಕಾಶ್, ಪಿ.ಪಿ.ಸುಬ್ರಮಣಿ, ಎಫ್.ಬಿ.ಅಶೋಕ, ಕೆ.ಆರ್.ವಾಸು, ರಾಮಕೃಷ್ಣ, ಐ.ಎಸ್.ಗಣೇಶ, ವೀಣಾ ಅವರುಗಳು ಆಗಮಿಸಿ ಶಾಲಾ ಆಡಳಿತ ಮಂಡಳಿಗೆ ಹಸ್ತಾಂತರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಕೆ.ಎಸ್.ಮಂಜುನಾಥ್, ನೂತನ ಕಟ್ಟಡ ನಿರ್ಮಾಣಕ್ಕಾಗಿ…

Read More

ಸುಂಟಿಕೊಪ್ಪ,ಜ.29 NEWS DESK : ಗಣರಾಜ್ಯೋತ್ಸವದ ಪ್ರಯುಕ್ತ ಸುಂಟಿಕೊಪ್ಪ ಜೆಸಿಐ ವತಿಯಿಂದ ಶಾಲಾ ಮಕ್ಕಳಿಗೆ ದೇಶ ಭಕ್ತಿಗೀತೆ, ಭಾಷಣ ಹಾಗೂ ಪ್ರಬಂಧ ಸ್ಪರ್ಧೆಗಳನ್ನು ನಡೆಸಲಾಯಿತು. ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ದೇಶ ಭಕ್ತಿಗೀತೆ, ಭಾಷಣ ಹಾಗೂ ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿಜೇತ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ, ತೃತೀಯ ಸ್ಥಾನಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಈ ಸಂದರ್ಭ ಜೆಸಿಐ ಸಂಸ್ಥೆ ಅಧ್ಯಕ್ಷ ಸಂಪತ್ ಕುಮಾರ್, ಸದಸ್ಯರಾದ ಡೆನ್ನೀಸ್ ಡಿಸೋಜ, ಪಲ್ಸಿ ಡೆನ್ನೀಸ್, ಶಾಲಾ ಮುಖ್ಯೋಪದ್ಯಾರಾದ ಬಾಲಕೃಷ್ಣ, ಅದ್ಯಾಪಕರುಗಳು ಹಾಜರಿದ್ದರು.

Read More

ಸುಂಟಿಕೊಪ್ಪ NEWS DESK ಜ.28 : ಸುಂಟಿಕೊಪ್ಪ ಪಟ್ಟಣದಲ್ಲಿ ಶನಿವಾರ ತಡರಾತ್ರಿ ಸರಣಿ ಕಳ್ಳತನ ನಡೆದಿದ್ದು, ರೂ.1 ಲಕ್ಷಕ್ಕೂ ಅಧಿಕ ನಗದನ್ನು ಚೋರರು ಕದ್ದೊಯ್ದಿದ್ದಾರೆ. ಈ ಘಟನೆಯಿಂದ ವರ್ತಕರು ಹಾಗೂ ನಿವಾಸಿಗಳು ಆತಂಕಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಪಟ್ಟಣದ ಹೃದಯ ಭಾಗದಲ್ಲಿರುವ ಟೀನೇಜ್ ಸೆಲೆಕ್ಷನ್ಸ್ ಬಟ್ಟೆ ಅಂಗಡಿಯ ಮುಂಭಾಗದ ಬಾಗಿಲು ಮುರಿದು ಒಳನುಗ್ಗಿರುವ ಕಳ್ಳರು ರೂ.1 ಲಕ್ಷ ನಗದು, ಕೆಲವು ಬಟ್ಟೆಗಳು ಮತ್ತು ಕನ್ನಡಕಗಳನ್ನು ಕಳ್ಳತನ ಮಾಡಿದ್ದಾರೆ. ಇದಕ್ಕೂ ಮೊದಲು ಸುರೇಶ್ ಕುಶಾಲಪ್ಪ ಅವರಿಗೆ ಸೇರಿದ ಹೊಗೆ ನಿಯಂತ್ರಣ ಕೇಂದ್ರದಲ್ಲಿ ನಿಲ್ಲಿಸಿದ್ದ ಬೈಕನ್ನು ಚೋರರು ಕದ್ದೊಯ್ದಿದ್ದಾರೆ. ನಂತರ ಬಸ್ ನಿಲ್ದಾಣದಲ್ಲಿರುವ ಪೆಟ್ರೋಲ್ ಬಂಕ್‌ಗೆ ನುಗ್ಗಿ ಹಣ ಸಿಗದ ಇದ್ದಾಗ ಎರಡು ಪ್ಯಾಕೇಟ್ ವಾಹನದ ಆಯಿಲ್ ನ್ನು ತೆಗೆದುಕೊಂಡು ಹೋಗಿದ್ದಾರೆ. ಇಲ್ಲಿರುವ ಸಿಸಿ ಕ್ಯಾಮರಾದಲ್ಲಿ ಕಳ್ಳತನದ ದೃಶ್ಯ ಸೆರೆಯಾಗಿದ್ದು, ಇಬ್ಬರು ಮುಸುಕುಧಾರಿಗಳು ಇರುವುದು ಕಂಡು ಬಂದಿದೆ. ಪಕ್ಕದಲ್ಲಿದ್ದ ಹಾಲಿನ ಡೈರಿಯ ಬೀಗ ಮುರಿದು ಒಳನುಗ್ಗಿದ ಕಳ್ಳರು ರೂ.2 ಸಾವಿರವನ್ನು ಕದ್ದೊಯ್ದಿದ್ದಾರೆ. ರಾಮ ಮೆಡಿಕಲ್ಸ್ ನ…

Read More

ಮಡಿಕೇರಿ ಜ.28 NEWS DESK : ಕೊಡಗಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅಭಿವೃದ್ಧಿ ಯೋಜನೆಗಳಿಗೆ ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಂಕು ಸ್ಥಾಪನೆ ನೆರವೇರಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 7 ತಿಂಗಳಾಗಿದ್ದು, ಈ ಅವಧಿಯಲ್ಲಿ ಕನಿಷ್ಠ 7 ರೂ.ಗಳನ್ನು ಕೂಡ ಜಿಲ್ಲೆಗೆ ನೀಡಿಲ್ಲವೆಂದು ಮೈಸೂರು- ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಟೀಕಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಂಕುಸ್ಥಾಪನೆಗೊಂಡ ಯೋಜನೆಗಳಿಗೆ ಹಣವನ್ನು ಬಿಡುಗಡೆ ಮಾಡದ ಮುಖ್ಯಮಂತ್ರಿಗಳು, ಬಿಜೆಪಿ ವಿರುದ್ಧ ಮಾತನಾಡುತ್ತಿದ್ದಾರೆ. ಜಿಲ್ಲೆಗೆ ಬಂದ ಮುಖ್ಯಮಂತ್ರಿಗಳು ಹಲವಾರು ಯೋಜನೆಗಳಿಗೆ ಶಂಕು ಸ್ಥಾಪನೆ ನೆರವೇರಿಸಿದ್ದಾರೆ. ಸೋಜಿಗವೆಂದರೆ ಶಂಕುಸ್ಥಾಪನೆಗೊಂಡ ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ನಡೆದಿಲ್ಲ ಮತ್ತು  ಗುತ್ತಿಗೆದಾರರ ನೇಮಕವಾಗಿಲ್ಲ. ಇದು ಕೇವಲ ಚುನಾವಣಾ ಹಿನ್ನೆಲೆಯಲ್ಲಿ ಮಾಡಿದ ಶಂಕುಸ್ಥಾಪನೆಯಾಗಿದೆ. ಜಿಲ್ಲೆಯಲ್ಲಿ ನಡೆದ ಶಂಕುಸ್ಥಾಪನೆಗಳಲ್ಲಿ ಕಾಂಗ್ರೆಸ್ ಸರ್ಕಾರ ಅಗತ್ಯ ಅನುದಾನ ನೀಡಿ, ಆದೇಶ ಹೊರಡಿಸಿರುವ ಒಂದೇ ಒಂದು ಕಾಮಗಾರಿಯನ್ನು ಅವರು ದಾಖಲೆ ಸಹಿತ ನೀಡಲಿ ಎಂದು ಸವಾಲು ಹಾಕಿದರು. ಕೊಡಗಿನಲ್ಲಿ ಈ ಹಿಂದೆಯೇ ಕೇಂದ್ರ ಸರ್ಕಾರದ ‘ಅಮೃತ್’…

Read More

ಮಡಿಕೇರಿ ಜ.28 NEWS DESK : ಭಾರತೀಯ ಸೇನೆಯ ಪ್ರಥಮ ಮಹಾದಂಡ ನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರಂತೆ ಯುವಜನರು ಭಾರತೀಯ ಸೇನಾ ಕ್ಷೇತ್ರದಲ್ಲಿ ತೊಡಗಿಸಿಕೊಂಡು, ಜಿಲ್ಲೆ ಹಾಗೂ ರಾಜ್ಯಕ್ಕೆ ಒಳ್ಳೆಯ ಹೆಸರು ತರುವಂತಾಗಬೇಕು ಎಂದು ಏರ್ ಮಾರ್ಷಲ್ ನಿವೃತ್ತ ಕೆ.ಸಿ.ಕಾರ್ಯಪ್ಪ ಅವರು ಕರೆ ನೀಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ 125 ನೇ ಜನ್ಮ ದಿನಾಚರಣೆ ಪ್ರಯುಕ್ತ ಭಾನುವಾರ ನಗರದಲ್ಲಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಪ್ರತಿಮೆಗೆ ಗೌರವ ನಮನ ಸಲ್ಲಿಸಿ ಅವರು ಮಾತನಾಡಿದರು. ಶಿಸ್ತು, ಶ್ರದ್ಧೆ ಮತ್ತು ಸಮಯಪ್ರಜ್ಞೆಗೆ ಹೆಸರಾಗಿದ್ದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರು ರಾಷ್ಟçದ ರಕ್ಷಣಾ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಆ ದಿಸೆಯಲ್ಲಿ ಪ್ರತಿಯೊಬ್ಬರಲ್ಲಿಯೂ ರಾಷ್ಟ್ರ ಮೊದಲು ಎಂಬುದು ಮೊಳಗಬೇಕು ಎಂದು ತಿಳಿಸಿದರು. ಯುವ ಜನರು ದೇಶವನ್ನು ಪ್ರೀತಿಸಬೇಕು. ರಾಷ್ಟç ಮೊದಲು, ನಂತರ ಉಳಿದವು ಎಂಬುದು ಪ್ರತಿಯೊಬ್ಬರಲ್ಲಿಯೂ ಇರಬೇಕು. ಈ…

Read More

ಮಡಿಕೇರಿ ಜ.28 : ಕರ್ನಾಟಕ ಟ್ಯಾಕ್ಸಿ ಡ್ರೈವರ್ಸ್ ಆರ್ಗನೈಸೇಷನ್ ನ ಸೋಮವಾರಪೇಟೆ ತಾಲ್ಲೂಕು ಸಮಿತಿ ಗಣರಾಜ್ಯೋತ್ಸವ ಪ್ರಯುಕ್ತ ಸೋಮವಾರಪೇಟೆಯಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಮಡಿಕೇರಿಯ ನಾಟ್ಯಕಲಾ ಡ್ಯಾನ್ಸ್ ಸ್ಟುಡಿಯೋಗೆ ಜೂನಿಯರ್ಸ್ ವಿಭಾಗದಲ್ಲಿ ಪ್ರಥಮ ಹಾಗೂ ಸೀನಿಯರ್ಸ್ ವಿಭಾಗದಲ್ಲಿ ತೃತೀಯ ಬಹುಮಾನ ದೊರೆತ್ತಿದೆ. ಜೂನಿಯರ್ಸ್ ವಿಭಾಗದಲ್ಲಿ ಮೊನಾಲಿ, ಸಿಂಚನ, ಸಾನ್ವಿಕ, ದಿಶಾ, ಲಹರಿ, ವಿಶಾಕ್, ಆಧ್ಯಾಶ್ರೀ, ಲವಿಶ್, ದಿಯಾ, ಲೀಶ, ಗ್ರಂಥ, ಧೃತಿ ಹಾಗೂ ಸೀನಿಯರ್ಸ್ ವಿಭಾಗದಲ್ಲಿ ಯಾನ ಶೆಟ್ಟಿ, ಆರಾಧ್ಯ, ಆಧ್ಯ ದೇಚಮ್ಮ, ಶಿವ ಕುಮಾರ್, ಕೀರ್ತನ್, ವೆನಿಷಾ, ಪ್ರಜ್ಞಾ, ತೇಜಸ್, ಜಾನ್ವಿ ಬೋಜಮ್ಮ, ತಶ್ಮಿತ, ವರ್ಣಿಕ, ಜನನಿ, ಆರ್ಯನ್, ರೋಷನ್, ಐಶ್ವರ್ಯ, ಅಭಿನವ್ ಭಾಗವಹಿಸಿದ್ದರು. ನಾಟ್ಯಕಲಾ ಡ್ಯಾನ್ಸ್ ಸ್ಟುಡಿಯೋದ ನೃತ್ಯ ಸಂಯೋಜಕ ಅಭಿಷೇಕ್ ಮಡಿಕೇರಿ ಅವರ ನಿರ್ದೇಶನದಲ್ಲಿ ನೃತ್ಯ ಮೂಡಿ ಬಂತು.

Read More