ಮಡಿಕೇರಿ ಜ.26 NEWS DESK : ನಿವೇಶನ ರಹಿತರಿಗೆ ಆಶ್ರಯ ಯೋಜನೆಯಡಿ ಮನೆ ನಿರ್ಮಾಣ ಮಾಡಿಕೊಡಬೇಕು ಮತ್ತು ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿ ಮಡಿಕೇರಿ ನಗರಸಭಾ ಸದಸ್ಯ ಎಂ.ಕೆ.ಮನ್ಸೂರ್ ಆಲಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಮಡಿಕೇರಿಗೆ ಮುಖ್ಯಮಂತ್ರಿಗಳು ಆಗಮಿಸಿದ್ದ ಸಂದರ್ಭ ಭೇಟಿಯಾದ ಮನ್ಸೂರ್ ಆಲಿ, ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಸುಮಾರು 1800 ನಿವೇಶನ ರಹಿತರ ಅರ್ಜಿಗಳು ಬಾಕಿ ಉಳಿದಿವೆ ಎಂದರು. ಅರ್ಜಿ ಸಲ್ಲಿಸಿದವರು ಕಡುಬಡವರಾಗಿದ್ದು, ಇವರುಗಳಿಗೆ ನಗರಸಭಾ ವ್ಯಾಪ್ತಿಯಲ್ಲಿ ಜಾಗ ಮಂಜೂರು ಮಾಡಿ ಮನೆ ನಿರ್ಮಿಸಿಕೊಡಬೇಕು. ಅಲ್ಲದೆ ಪಡಿತರ ಚೀಟಿಯಲ್ಲಿ ತುಂಬಾ ಗೊಂದಲಗಳಿದ್ದು, ಸರ್ಕಾರದಿಂದ ತಕ್ಷಣ ಪಡಿತರ ತಿದ್ದುಪಡಿ ಮತ್ತು ಹೆಸರು ಸೇರ್ಪಡೆಗೆ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.
ಲೇಖಕ: admin
ಮಡಿಕೇರಿ ಜ.26 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ವತಿಯಿಂದ ನಗರದ ರಾಜಾಸೀಟು ಉದ್ಯಾನವನದಲ್ಲಿ ಏರ್ಪಡಿಸಿರುವ ಫಲಪುಷ್ಪ ಪ್ರದರ್ಶನವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಹಾಗೂ ಶಾಸಕ ಡಾ.ಮಂತರ್ ಗೌಡ ಅವರು ಶುಕ್ರವಾರ ಉದ್ಘಾಟಿಸಿದರು. ರಾಜಾಸೀಟು ಉದ್ಯಾನವನದಲ್ಲಿ ಪುಷ್ಪರಾಶಿಯಿಂದಲೇ ನಿರ್ಮಾಣವಾಗಿರುವ ಇಗ್ಗುತಪ್ಪ ದೇವಾಲಯ ಸೇರಿದಂತೆ ಹಲವು ಕಲಾ ಪ್ರಕಾರಗಳ ಫಲಪುಷ್ಪ ಪ್ರದರ್ಶನ ಆಕರ್ಷಣೀಯವಾಗಿದ್ದು, ನೋಡುಗರನ್ನು ಸೆಳೆಯುತ್ತಿವೆ ಎಂದು ಸಚಿವರು ಹೇಳಿದರು. ರಾಜಾಸೀಟನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಫಲಪುಷ್ಪ ಪ್ರದರ್ಶನ ವಿಭಿನ್ನ ಹಾಗೂ ವಿಶಿಷ್ಟವಾಗಿದ್ದು, ಪ್ರಕೃತಿ ಪ್ರಿಯರನ್ನು ತನ್ನೆಡೆಗೆ ಸೆಳೆಯುತ್ತಿದೆ ಎಂದರು. ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಶಾಸಕರ ಜೊತೆಗೂಡಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮಾಹಿತಿ ವಿನಿಮಯ ಮಾಡಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಚಿವರು ತಿಳಿಸಿದರು. ಶಾಸಕ ಡಾ|| ಮಂತರ್ ಗೌಡ ಮಾತನಾಡಿ ಬಣ್ಣ ಬಣ್ಣದ ಚಿತ್ತಾರದ ಹೂವುಗಳು ನೋಡುಗರನ್ನು ಚಕಿತಗೊಳಿಸುತ್ತಿದ್ದು, ರಾಜಾಸೀಟು ಉದ್ಯಾನವನದಲ್ಲಿ ನಿರಂತರವಾಗಿ ಪುಷ್ಪ…
ಮಡಿಕೇರಿ ಜ.26 : ಸಂವಿಧಾನ ದಿನಾಚರಣೆ ಪ್ರಯುಕ್ತ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಜಾಗೃತಿ ಅಭಿಯಾನದ ಸ್ತಬ್ಧಚಿತ್ರಕ್ಕೆ ಚಾಲನೆ ನೀಡಿದರು. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಚಾಲನೆ ನೀಡಿ ಮಾತನಾಡಿದ ಸಂವಿಧಾನದ ಮಹತ್ವ ತಿಳಿಯುವ ನಿಟ್ಟಿನಲ್ಲಿ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು. ಜಿಲ್ಲೆಯ 103 ಗ್ರಾಮ ಪಂಚಾಯಿತಿಗಳಲ್ಲಿ 22 ದಿನಗಳ ಕಾಲ ಸಂವಿಧಾನ ಜಾಗೃತಿ ಜಾಥ ಅಭಿಯಾನ ನಡೆಯಲಿದ್ದು, ಶಾಲಾ-ಕಾಲೇಜುಗಳು ಸೇರಿದಂತೆ ಜಿಲ್ಲೆಯ ವಿವಿಧ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳು ಕೈಜೋಡಿಸುವಂತೆ ಕೋರಿದರು. ಗ್ರಾ.ಪಂ.ವ್ಯಾಪ್ತಿಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ಸಿಗೆ ಸಹಕರಿಸುವಂತೆ ಮನವಿ ಮಾಡಿದರು. ‘ಭಾರತ ಸಂವಿಧಾನ ಪೀಠಿಕೆ, ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪರಿಕಲ್ಪನೆ ಸಾಮಾಜಿಕ ನ್ಯಾಯ, ಆರ್ಥಿಕ, ಮತ್ತು ರಾಜಕೀಯ ಪರಿಕಲ್ಪನೆ, ಬಸವಣ್ಣನವರ ವಚನಗಳು, ಭಾರತದ ಸಂವಿಧಾನದಲ್ಲಿ ವಚನಗಳ ಪ್ರಸ್ತುತತೆ, ಜಿಲ್ಲೆಯ ಸ್ಥಳೀಯ ಐತಿಹಾಸಿಕ ವ್ಯಕ್ತಿಗಳು, ಸಾಹಿತ್ಯ ದಿಗ್ಗಜರು ಸೇರಿದಂತೆ ಪ್ರಮುಖ ವ್ಯಕ್ತಿಗಳು ಮತ್ತು ಸ್ಥಳೀಯ ಕಲೆ ಮತ್ತು…
ವಿರಾಜಪೇಟೆ ಜ.26 NEWS DESK : ವಿರಾಜಪೇಟೆಯ ಸಂತ ಅನ್ನಮ್ಮ ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ. ಫಾ. ಐಸಾಕ್ ರತ್ನಾಕರ್ ದ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು. ಗಣರಾಜ್ಯೋತ್ಸವದ ಸಂದೇಶ ನೀಡಿದ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ರೆ. ಫಾ. ಮದಲೈ ಮುತ್ತು ಮಾತನಾಡಿ, ನಮ್ಮ ಸಂವಿಧಾನವು ನಮ್ಮ ಹೆಮ್ಮೆಯಾಗಿದ್ದು, ಅದನ್ನು ವಿವಿಧ ರಾಷ್ಟ್ರಗಳ ಅಲಿಖಿತ ಸಂವಿಧಾನವನ್ನು ಪರಿಶೀಲಿಸಿ ರಚಿಸಲಾಗಿದೆ. ಭಾರತವು ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರವೂ ಆಗಿದೆ. ಸಂವಿಧಾನದ ಆಶಯವನ್ನು ಪ್ರತಿಯೊಬ್ಬರು ಗೌರವಿಸಬೇಕು. ವೈವಿಧ್ಯತೆಯಲ್ಲಿ ಏಕತೆಯನ್ನು ಮೂಡಿಸಬೇಕು ಎಂದರು. ಪ್ರಸ್ತುತದಲ್ಲಿ ಇರುವ ಜಾತೀಯತೆ, ಮತಾಂಧತೆ ಮುಂತಾದವು ಆತಂಕಕಾರಿಯಾಗಿದ್ದು, ನಾವೆಲ್ಲರೂ ಸಮಾನರು ಎಂಬ ತತ್ವ ಪಾಲಿಸಬೇಕಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಪದವಿ ಪ್ರಾಂಶುಪಾಲೆ ತೃಪ್ತಿ, ಮುಖ್ಯೋಪಾಧ್ಯಾಯರಾದ ಬೆನ್ನಿ ಜೋಸೆಫ್, ಸಿಸ್ಟರ್ ರೋಸಿ, ಸಿಸ್ಟರ್ ಐಡಾ, ಉಪನ್ಯಾಸಕರು ಶಿಕ್ಷಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು. ಶಿಕ್ಷಕ ಗಂಗಾಧರ್ ನಿರೂಪಿಸಿ, ಉಪನ್ಯಾಸಕಿ ಅಶ್ವಿನಿ ಸ್ವಾಗತಿಸಿ, ಶಿಕ್ಷಕಿ ದಿವ್ಯ ವಂದಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ…
ಮಡಿಕೇರಿ, ಜ.26 NEWS DESK : ಆನೆಗಳಿಗೆ ಮೇವು ಹಾಗೂ ನೀರನ್ನು ಕಾಡಿನಲ್ಲಿಯೇ ಒದಗಿಸಿಕೊಡಲು ಅರಣ್ಯ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ. ಇದರಿಂದಾಗಿ ಆನೆಗಳು ಹೊರಬರುವುದು ಕಡಿಮೆಯಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿ ರೈಲ್ವೆ ತಡೆಗೋಡೆ ನಿರ್ಮಾಣಕ್ಕೆ 600 ಕೋಟಿ ರೂ.ಗಳನ್ನು ಮೀಸಲಿಡಲಾಗಿತ್ತು. ಪೂರ್ಣವಾಗಿ ತಡೆಗೋಡೆ ನಿರ್ಮಾಣವಾದರೆ ಆನೆ ಮಾನವ ಸಂಘರ್ಷ ತಪ್ಪಿಸಬಹುದು. ತಡೆಗೋಡೆ ನಿರ್ಮಾಣವಾದರೆ ನಿಂತುಹೋಗಲಿದೆ ಎಂದರು. *ಜನರ ಸಮಸ್ಯೆಗಳಿಗೆ ನ್ಯಾಯ ಕೊಡಿಸುವುದು ಬಹಳ ಮುಖ್ಯ :: ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯನ್ನು . ಕರ್ನಾಟಕ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮದ ವತಿಯಿಂದ 12 ಕೋಟಿ ರೂ.ಗಳ ವೆಚ್ಚದಲ್ಲಿ ಕಚೇರಿ ಕೊಡಗಿನ ಸಂಪ್ರದಾಯದಂತೆ ನಿರ್ಮಾಣವಾಗಿದೆ . ಕಚೇರಿ ಮುಖ್ಯವಲ್ಲ ಜನರ ಸಮಸ್ಯೆಗಳಿಗೆ ನ್ಯಾಯ ಕೊಡಿಸುವುದು ಬಹಳ ಮುಖ್ಯ ಎಂದರು. ರಾಜ್ಯದಲ್ಲಿ ವಸತಿ ಗೃಹಗಳ ಕೊರತೆ ಇದ್ದು ಈ ನಿಟ್ಟಿನಲ್ಲಿ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ಗಮನ…
ಮಡಿಕೇರಿ ಜ.26 NEWS DESK : ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಹಿತರಕ್ಷಣಾ ವೇದಿಕೆ ವತಿಯಿಂದ ನಗರದ ಕುವೆಂಪು ಉದ್ಯಾನವನದಲ್ಲಿ 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ರವಿಗೌಡ ಕುವೆಂಪು ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಕೊಡಗು ವಿಷ್ಣು ಸೇನೆ ಜಿಲ್ಲಾಧ್ಯಕ್ಷ ರಫೀಕ್ ದಾದಾ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭವೇದಿಕೆ ಪ್ರಧಾನ ಕಾರ್ಯದರ್ಶಿ ಮೀನಾಜ್ ಪ್ರವೀಣ್, ಮಹಿಳಾ ತಾಲೂಕು ಉಪಾಧ್ಯಕ್ಷರಾದ ಕವಿತಾ ಪ್ರಸಾದ್, ಮಡಿಕೇರಿ ನಗರ ಕಾರ್ಯದರ್ಶಿ ಲಿಲ್ಲಿ ಗೌಡ, ನಗರ ಉಪಾಧ್ಯಕ್ಷ ಪುನೀತ್, ವೇದಿಕೆಯ ವಿದ್ಯಾರ್ಥಿ ಘಟಕದ ಸದಸ್ಯ ಹರ್ಷಿತ್, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ಮುನೀರ್ ಮಾಚರ್, ವಿಷ್ಣುಸೇನಾ ಸಮಿತಿಯ ಸದಸ್ಯರುಗಳಾದ ಆನ್ಸರ್, ನಾಗರಾಜ್, ಮಹಾದೇವ್, ಪ್ರವೀಣ್, ಲೋಬೋ ಹಾಗೂ ಹಲವು ಕಾರ್ಯಕರ್ತರು, ಸಾರ್ವಜನಿಕರು ಪಾಲ್ಗೊಂಡಿದ್ದರು.
ಮಡಿಕೇರಿ ಜ.26 NEWS DESK : ವಿರಾಜಪೇಟೆಯಲ್ಲಿ 75ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ತಾಲ್ಲೂಕು ಮೈದಾನದಲ್ಲಿ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಧ್ವಜಾರೋಹಣ ನೆರವೇರಿಸಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಮಹತ್ಮ ಗಾಂಧಿಜಿ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಮಡಿಕೇರಿ ಜ.26 NEWS DESK : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ವತಿಯಿಂದ ನಗರದ ರಾಜಾಸೀಟು ಉದ್ಯಾನವನದಲ್ಲಿ ಏರ್ಪಡಿಸಲಾಗಿರುವ ‘ಫಲಪುಷ್ಪ ಪ್ರದರ್ಶನ’ ಕಣ್ಮನ ಸೆಳೆಯುತ್ತಿದೆ. ಮೂರು ದಿನಗಳ ಕಾಲ ನಡೆಯುವ ‘ಫಲಪುಷ್ಪ ಪ್ರದರ್ಶನ’ಕ್ಕೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಉದ್ಘಾಟಿಸಿದರು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ತೋಟಗಾರಿಕೆ ಉಪನಿರ್ದೇಶಕರಾದ ಯೋಗೇಶ್ ಎಚ್.ಆರ್., ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಬಿ.ಎಸ್.ಮುತ್ತಪ್ಪ ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು. ಫಲಪುಷ್ಪ ಪ್ರದರ್ಶನದಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಫಿರಂಗಿ, ರಾಷ್ಟ್ರ ಧ್ವಜ ಹಾಗೂ ಸೈನಿಕನ ಕಲಾಕೃತಿ ವಿಶೇಷವಾಗಿ ಮೂಡಿಬರಲಿದ್ದು, ಇದರೊಂದಿಗೆ ಹೃದಯದ ಆಕಾರದಲ್ಲಿ ತ್ರಿವರ್ಣ ಧ್ವಜದ ಫೋಟೊ ಪಾಯಿಂಟ್, ಚಿಟ್ಟೆ, ಬಲೂನ್ ಹಾರುವ, ನೀರು ಹರಿಯುವ ರೀತಿ, ಬಾರ್ಬಿ ಡಾಲ್, ಸ್ಪೆಡರ್…
ಬೆಂಗಳೂರು ಜ.26 NEWS DESK : ಸಂವಿಧಾನವನ್ನು ನಾವು ರಕ್ಷಿಸಿದರೆ, ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ. ಸಂವಿಧಾನವನ್ನು ಅರಿಯುವ ಮೂಲಕ ಸಂವಿಧಾನವನ್ನು ಬಲಪಡಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ, ಮಹಾತ್ಮಾ ಗಾಂಧೀಜಿ ಹಾಗೂ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಗೌರವ ನಮನ ಸಲ್ಲಿಸಿದರು. ಬಳಿಕ ರಾಜ್ಯದ ಜನತೆಗೆ ಗಣರಾಜ್ಯೋತ್ಸವ ಜನತೆಗೆ ಶುಭಾಶಯಗಳನ್ನು ಕೋರಿದರು. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಭಾರತವು ತನ್ನನ್ನು ತಾನು ಆಳಿಕೊಳ್ಳಲು ರಚಿಸಿಕೊಂಡ ಸಂವಿಧಾನ ಜಾರಿಗೆ ಬಂದು 2024ರ ಜನವರಿ 26ಕ್ಕೆ 75 ವರ್ಷಗಳು ತುಂಬುತ್ತಿದೆ. ಭಾರತದ ಎಲ್ಲ ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು, ಚಿಂತನೆ, ಅಭಿವ್ಯಕ್ತಿ ನಂಬಿಕೆ ಮತ್ತು ಆರಾಧನೆಯ ಸ್ವಾತಂತ್ರ್ಯವನ್ನು, ಸ್ಥಾನಮಾನ ಮತ್ತು ಅವಕಾಶಗಳಲ್ಲಿ ಸಮಾನತೆಯನ್ನು ಖಾತರಿಪಡಿಸಿ, ಎಲ್ಲರ ನಡುವೆ ಭ್ರಾತೃತ್ವವನ್ನು ಉದ್ದೀಪನಗೊಳಿಸುವುದೇ ಸಂವಿಧಾನದ ಮೂಲ ಆಶಯವಾಗಿದೆ. ವಿಶ್ವಕ್ಕೆ ಮಾದರಿ ಸ್ವರೂಪದ ಇಂತಹದ್ದೊಂದು ಸಂವಿಧಾನವನ್ನು ನಮಗೆ ನೀಡಿದ ಡಾ.ಬಾಬಾ ಸಾಹೇಬ್…
ಮಡಿಕೇರಿ ಜ.26 NEWS DESK : ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ಕಚೇರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಶುಭಹಾರೈಸಿದರು. ಕರ್ನಾಟಕ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮದ ವತಿಯಿಂದ 12 ಕೋಟಿ ರೂ.ಗಳ ವೆಚ್ಚದಲ್ಲಿ ಕೊಡಗಿನ ಸಂಪ್ರದಾಯದಂತೆ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ನಿರ್ಮಾಣವಾಗಿದೆ. ಕಚೇರಿ ಎಷ್ಟು ದೊಡ್ಡದು ಮುಖ್ಯವಲ್ಲ ಜನರ ಸಮಸ್ಯೆಗಳಿಗೆ ನ್ಯಾಯ ಕೊಡಿಸುವುದು ಬಹಳ ಮುಖ್ಯ ಎಂದರು. ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವರಾದ ಬೋಸರಾಜು, ಗೃಹ ಸಚಿವರಾದ ಜಿ.ಪರಮೇಶ್ವರ್, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ರೇಷ್ಮೆ ಸಚಿವರಾದ ಕೆ.ವೆಂಕಟೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ಮಡಿಕೇರಿ ಶಾಸಕರಾದ ಮಂಥರ್ ಗೌಡ, ಕೆಪಿಸಿಸಿ ಸಾಮಾಜಿಕ ಸಂವಹನ ವಿಭಾಗದ ಅಧ್ಯಕ್ಷರಾದ ಮೆಹರೂಸ್ ಖಾನ್ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.






