ಮಡಿಕೇರಿ NEWS DESK ಜೂ.5 : ಕಾಡಾನೆ ದಾಳಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ತಿತಿಮತಿ ಸಮೀಪದ ಕೋಣನಕಟ್ಟೆ ಗ್ರಾಮದ ಕಾಫಿ ತೋಟವೊಂದರಲ್ಲಿ ನಡೆದಿದೆ. ಐಜಿಪಿ ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ (51) ಎಂಬುವವರೇ ಮೃತ ದುರ್ದೈವಿ. ಇಂದು ಬೆಳಿಗ್ಗೆ ಕೋಣನಕಟ್ಟೆಯಲ್ಲಿರುವ ಕಾಫಿ ತೋಟವನ್ನು ವೀಕ್ಷಿಸುತ್ತಿದ್ದ ಸಂದರ್ಭ ಕಾಡಾನೆ ಏಕಾಏಕಿ ದಾಳಿ ಮಾಡಿದೆ. ತೀವ್ರವಾಗಿ ಗಾಯಗೊಂಡ ಸಂಧ್ಯಾ ಅವರನ್ನು ಗೋಣಿಕೊಪ್ಪಲು ಆಸ್ಪತ್ರೆಗೆ ಕರೆ ತರುವ ಸಂದರ್ಭ ಮಾರ್ಗ ಮಧ್ಯೆ ಮೃತಪಟ್ಟರು ಎಂದು ತಿಳಿದು ಬಂದಿದೆ. ಕಾಡಾನೆ ದಾಳಿ ಸಂದರ್ಭ ತೋಟದಲ್ಲಿದ್ದ ಕೆಲವು ಕಾರ್ಮಿಕರು ಓಡಿ ಹೋಗಿ ಜೀವ ಉಳಿಸಿಕೊಂಡಿದ್ದಾರೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಕಾಡಾನೆಗಳ ಉಪಟಳ ಮಿತಿ ಮೀರಿರುವ ಕುರಿತು ಸ್ಥಳೀಯ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಲೇಖಕ: admin
ಮಡಿಕೇರಿ NEWS DESK ಜೂ.5 : ಬೆಂಗಳೂರಿನ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ, “ಶಕ್ತಿ” ದಿನ ಪತ್ರಿಕೆಯ ಸೇವೆಯನ್ನು ಪರಿಗಣಿಸಿ ಗೌರವಿಸುತ್ತಿದೆ. ಜೂ.6 ರಂದು ತುಮಕೂರುವಿನಲ್ಲಿ ನಡೆಯಲಿರುವ ಸಂಸ್ಥೆಯ ರಾಜ್ಯಮಟ್ಟದ ಸಮ್ಮೇಳನದಲ್ಲಿ, ಕೊಡಗು ಜಿಲ್ಲೆಯಲ್ಲಿ 7 ದಶಕಗಳಿಂದ ಕಾರ್ಯನಿರ್ವಹಿಸುತ್ತಿರುವ “ಶಕ್ತಿ” ದಿನ ಪತ್ರಿಕೆಯನ್ನು ಸನ್ಮಾನದ ಮೂಲಕ ಗೌರವಿಸಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷೆ ಉಮಾ ರೆಡ್ಡಿ ತಿಳಿಸಿದ್ದಾರೆ.
ಮಡಿಕೇರಿ NEWS DESK ಜೂ. 5: ಇತ್ತೀಚೆಗೆ ಬಳ್ಳಾರಿಯ ಸಿರಿಗೇರಿಯಲ್ಲಿ ನಡೆದ ಸಮಾರಂಭದಲ್ಲಿ ‘ಶಕ್ತಿ’ ಸಲಹಾ ಸಂಪಾದಕ ಬಿ.ಜಿ. ಅನಂತಶಯನ ಅವರಿಗೆ ಪ್ರತಿಷ್ಠಿತ “ಪಿ. ಲಂಕೇಶ್ ಮಾಧ್ಯಮ ಪ್ರಶಸ್ತಿ” ಪ್ರದಾನ ಮಾಡಲಾಯಿತು. ಸಿರಿಗೇರಿ ಅನ್ನಪೂರ್ಣ ಪ್ರಕಾಶನದವರು ವರ್ಷಂಪ್ರತಿ ರಾಜ್ಯದ ಉತ್ತಮ ಸಣ್ಣ ಪತ್ರಿಕೆಯ ಸಂಪಾದಕರಿಗೆ ಕೊಡ ಮಾಡುವ ಪ್ರಶಸ್ತಿಯನ್ನು, ಕರ್ನಾಟಕ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ.ಜಿ. ಪ್ರದಾನ ಮಾಡಿದರು. ಈ ಸಂದರ್ಭ ಮಾತನಾಡಿದ ಅವರು, ಪತ್ರಿಕೆಗಳು ದಮನಿತರ, ಶೋಷಿತರ, ಅವಕಾಶ ವಂಚಿತರ ಪರವಾಗಿ ಹೆಚ್ಚು ಕೆಲಸ ಮಾಡಬೇಕೆಂದು ಬಯಸಿದರು. ದಿವಂಗತ ಪಿ. ಲಂಕೇಶ್ ಅವರು ಸಾಮಾಜಿಕ ಕಳಕಳಿ ಹೊಂದಿದ್ದು, ಹರಿತ ಬರಹಕ್ಕೆ ಜಾಹೀರಾತು ಇಲ್ಲದೆಯೇ ಪತ್ರಿಕೆಯನ್ನು ಹೊರತಂದುದು ಒಂದು ಮಾದರಿ ಎಂದರು. ಲಂಕೇಶ್ ಮಾಧ್ಯಮ ಪ್ರಶಸ್ತಿ ಏಳು ದಶಕ ಕಂಡ ‘ಶಕ್ತಿ’ ದಿನಪತ್ರಿಕೆಗೆ ಸಲ್ಲುತ್ತಿರುವದು ಹೆಮ್ಮೆಯ ವಿಚಾರ ಎಂದು ಶ್ಲಾಘಿಸಿದರು. ಮಾಧ್ಯಮಗಳಿಂದ ಸೈಬರ್ ಕ್ರೈಂ, ಮಹಿಳೆ-ಮಕ್ಕಳಿಗೆ, ಅವಿದ್ಯಾವಂತರಿಗೆ ಆಗುವ ಅನ್ಯಾಯಗಳನ್ನು ಹತ್ತಿಕ್ಕಲು ಕೈ ಜೋಡಿಸಬೇಕು ಎಂದು ಪಲ್ಲವಿ ಕರೆ ನೀಡಿದರು.…
ಮೈಸೂರು ಜೂ.4 NEWS DESK : ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 142ನೇ ಜಯಂತಿ ಅಂಗವಾಗಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಹಾಗೂ ರಾಜವಂಶಸ್ಥರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಮೈಸೂರು ನಗರದಲ್ಲಿ ಆಯೋಜಿಸಲಾದ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ರಾಜರ್ಷಿಗೆ ಗೌರವ ನಮನ ಸಲ್ಲಿಸಿದರು. ಬೆಳಿಗ್ಗೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಅವರು ನಾಡದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರಿಗೆ ವಿಶೇಷ ಪೂಜೆ ಸಲ್ಲಿಸಿ ರಾಜ್ಯದ ಸಮೃದ್ಧಿ, ಜನರ ಸುಖ-ಶಾಂತಿ ಹಾಗೂ ಅಭಿವೃದ್ಧಿಗಾಗಿ ಪ್ರಾರ್ಥಿಸಿದರು. ದೇವಾಲಯದ ವಿಶೇಷ ಅಧಿಕಾರಿ ಹಾಗೂ ಪ್ರಧಾನ ಅರ್ಚಕರ ಸಮ್ಮುಖದಲ್ಲಿ ನಡೆದ ಪೂಜಾ ಕಾರ್ಯಕ್ರಮದ ಬಳಿಕ, ದೇವಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ಅನ್ನಸಂತರ್ಪಣೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಯದುವೀರ್ ಒಡೆಯರ್ ಸ್ವತಃ ಭಕ್ತರಿಗೆ ಅನ್ನ ಬಡಿಸುವ ಮೂಲಕ ಸೇವಾ ಮನೋಭಾವವನ್ನು ವ್ಯಕ್ತಪಡಿಸಿದರು. ನಂತರ ನಗರದ ಹೃದಯಭಾಗದಲ್ಲಿರುವ ಕೆ.ಆರ್. ವೃತ್ತದಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆಗೆ ಪುಷ್ಪಾರ್ಚನೆ…
ಮಡಿಕೇರಿ ಜೂ.4 NEWS DESK : ಜಿಲ್ಲಾ ಪೊಲೀಸ್ ಘಟಕದಲ್ಲಿ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಹೆಡ್ ಕಾನ್ಸ್ಟೇಬಲ್ ಜಿ.ಪಿ.ಪುಟ್ಟರಾಜು ಅವರನ್ನು ಜಿಲ್ಲಾ ಪೊಲೀಸ್ ಇಲಾಖೆಯ ಪರವಾಗಿ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.
ಮಡಿಕೇರಿ ಜೂ.4 NEWS DESK : ಗೋಣಿಕೊಪ್ಪದಲ್ಲಿ ನಿರ್ಮಾಣ ಆಗುತ್ತಿರುವ ನೂತನ ಬಸ್ ನಿಲ್ದಾಣದ ಪೂರ್ಣಗೊಂಡ ಕಾಮಗಾರಿಯನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಪರಿಶೀಲಿಸಿದರು. ಸದ್ಯದಲ್ಲೇ ನೂತನ ಸುಸರ್ಜಿತ ಬಸ್ ನಿಲ್ದಾಣ ಸಾರ್ವಜನಿಕರ ಬಳಕೆಗೆ ಲಭ್ಯವಾಗಲಿದೆ ಎಂದು ಶಾಸಕರು ತಿಳಿಸಿದರು. ಈ ಸಂದರ್ಭ ಬ್ಲಾಕ್ ಅಧ್ಯಕ್ಷರಾದ ಮಿದೇರಿರ ನವೀನ್, ಪ್ರಧಾನ ಕಾರ್ಯದರ್ಶಿ ಎ.ಜೆ.ಬಾಬು, ಗೋಣಿಕೊಪ್ಪ ಪಂಚಾಯಿತಿ ಅಧ್ಯಕ್ಷರಾದ ಪ್ರಮೋದ್ ಗಣಪತಿ, ಉಪಾಧ್ಯಕ್ಷರಾದ ಮಂಜುಳಾ, ಪಕ್ಷದ ಮುಖಂಡರು ಅಣ್ಣಳ್ಳಮಾಡ ಹರೀಶ್ ಪೂವಯ್ಯ, ಮುನ್ನ, ಪ್ರವೀಣ್, ಪೊನ್ನಂಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರು ಮಲ್ಲಂಡ ಧ್ಯಾನ್ ದೇವಯ್ಯ, ಕುಟ್ಟ ವಲಯ ಯುವ ಕಾಂಗ್ರೆಸ್ ಅಧ್ಯಕ್ಷರು ಫಾರ್ದಿನ್, ಸಾಜಿ, ಪಿ ಡಿ ಓ ತಿಮ್ಮಯ್ಯ, ವಿಜಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ ಜೂ.4 NEWS DESK : ಮಕ್ಕಳ ವಿಶೇಷ ಪೊಲೀಸ್ ಘಟಕ ಮತ್ತು ಅಕ್ಕ ಪಡೆ ಸಿಬ್ಬಂದಿಗಳು ಕುಶಾಲನಗರದ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜು ಮತ್ತು ವಿವೇಕಾನಂದ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ, ಮಾದಕ ವಸ್ತುಗಳ ಬಳಕೆ – ದುಷ್ಪರಿಣಾಮಗಳು, ಅಪ್ರಾಪ್ತರ ವಾಹನ ಚಾಲನೆ ಇತ್ಯಾದಿಗಳ ಬಗ್ಗೆ ಕಾನೂನು ಅರಿವು ಮೂಡಿಸಿದರು.
ಮಡಿಕೇರಿ ಜೂ.4 NEWS DESK : ಪೊನ್ನಂಪೇಟೆ 66/11 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ಫೀಡರ್ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಫ್1-ನಲ್ಲೂರು, ಎಫ್2-ಬಾಳೆಲೆ, ಎಫ್16-ದೇವನೂರು, ಎಫ್14-ಕಿರಗೂರು ಫೀಡರ್ನಲ್ಲಿ ಜೂ.5 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಾಗುವ ಗ್ರಾಮಗಳಾದ ಪೊನ್ನಂಪೇಟೆ, ಕಿರಗೂರು, ನಲ್ಲೂರು, ಬೆಸಗೂರು, ಪೊನ್ನಪ್ಪಸಂತೆ, ಬೀಳೂರು, ಕೊಟ್ಟಗೇರಿ, ಸುಳುಗೋಡು, ಬಾಳೆಲೆ, ನಿಟ್ಟೂರು, ರಾಜಾಪುರ, ಕಿಸ್ತೂರು, ಮಳಲುಕೋಟೆ, ಕಾರ್ಮಾಡು, ಜಾಗಲೆ, ಮತ್ತೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ವಿರಾಜಪೇಟೆ ಜೂ.4 NEWS DESK : ಸಮಾಜದಲ್ಲಿ ಸ್ವಯಂ ಸೇವೆ ಸಲ್ಲಿಸಲು ಎಲ್ಲಿಯೂ ಅಂತ್ಯವೆಂಬುದಿಲ್ಲ. ಅವಕಾಶ ಸಿಕ್ಕಾಗಲೆಲ್ಲ ತನ್ನಿಂದಾದ ಸೇವೆ ಸಲ್ಲಿಸುವುದು ಉತ್ತಮ ಸ್ವಯಂ ಸೇವಕನ ಲಕ್ಷಣ ಎಂದು ಲಾರ್ಡ್ಸ್ ಸಮೂಹ ಸಂಸ್ಥೆಗಳ ವ್ಯವಸ್ಥಾಪಕರಾದ ಬೆನೆಡಿಕ್ಟ್ ಆರ್ ಸಲ್ಡಾನ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆ ಕಾವೇರಿ ಕಾಲೇಜಿನ ಕೌಸ್ತುಭ ಸಭಾ ಭವನದಲ್ಲಿ ನಡೆದ ಕಾಲೇಜಿನ ಎನ್ ಎಸ್ ಎಸ್ ಘಟಕದ ಸಮಾರೋಪ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು, ಎನ್ಎಸ್ಎಸ್ ಎಂಬುವುದು ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವ ವಿಕಸನಕ್ಕೆ ಹಾಗೂ ಉತ್ತಮ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಸಮರ್ಪಕವಾದ ವೇದಿಕೆಯಾಗಿದ್ದು ಇದರ ಮೂಲಕ ವಿದ್ಯಾರ್ಥಿಗಳು ಸಹಕಾರ, ಪ್ರಕೃತಿ ರಕ್ಷಣೆ, ಸ್ವಚ್ಚತೆ, ನೈರ್ಮಲ್ಯದಂತಹ ವಿಚಾರಗಳನ್ನು ಅರಿತು ತಮ್ಮ ಮೂಲಕ ಸಮಾಜದಲ್ಲಿ ಈ ಗುಣಗಳನ್ನು ಪ್ರಚಾರ ಮಾಡುದರೊಂದಿಗೆ ಸಮಾಜದಲ್ಲಿ ಯಾವುದೇ ಸಂದರ್ಭದಲ್ಲಿಯೂ ಪ್ರತಿಫಲದ ಅಪೇಕ್ಷೆ ಇಲ್ಲದೆ ಸೇವೆ ಸಲ್ಲಿಸಲು ಸಿದ್ದರಿರಬೇಕು. ಕೇವಲ ನಾನೊಬ್ಬನೆ ಬೆಳೆದರೆ ಸಾಲದು. ನನ್ನೊಂದಿಗೆ ಇರುವ ಇತರರನ್ನು ಬೆಳೆಸಬೇಕೆಂಬ ಸಹಕಾರದ ಭಾವನೆಯನ್ನು ತಮ್ಮ ಜೀವನದಲ್ಲಿ…
ಮಡಿಕೇರಿ ಜೂ.4 NEWS DESK : ಸಮಾಜ ಸೇವಕರಾದ ನಿವೃತ್ತ ಪೊಲೀಸ್ ಕಾವೇರಪ್ಪನವರು ಎಫ್.ಎಂ.ಕೆ.ಎಂ.ಸಿ. ಕಾಲೇಜಿನ ವಿದ್ಯಾರ್ಥಿನಿಯ ಪ್ರಥಮ ವರ್ಷದ ಪ್ರವೇಶ ಶುಲ್ಕವನ್ನು ಭರಿಸಿ ವಿದ್ಯಾರ್ಥಿನಿಯ ಉಜ್ವಲ ಭವಿಷ್ಯಕ್ಕಾಗಿ ಶುಭವನ್ನು ಹಾರೈಸಿದರು.






