ಮಡಿಕೇರಿ ಏ.24 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.24 ರಂದು ಗೆಲುವು ಸಾಧಿಸಿದ ತಂಡಗಳು. *ಮೈದಾನ 1* (ಲಾಲು ಮುದ್ದಯ್ಯ ಮೈದಾನ) ಕೋಳೆರ ಮತ್ತು ಗೀಜಿಗಂಡ ತಂಡಗಳ ನಡುವಿನ ಪಂದ್ಯದಲ್ಲಿ ಕೋಳೆರ 7 ವಿಕೆಟ್ ಗಳಿಂದ ಗೆಲುವು ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗೀಜಿಗಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 46 ರನ್ ಗಳನ್ನು ಗಳಿಸಿತು. ಕೋಳೆರ 5.1 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 47 ರನ್ ಗಳನ್ನು ಸೇರಿಸಿ ಜಯ ಕಂಡಿತು. ಪಾರುವಂಡ ಮತ್ತು ಮಂದೇಯಂಡ (ಮಾದಾಪುರ) ನಡುವಿನ ಪಂದ್ಯದಲ್ಲಿ ಪಾರುವಂಡ ತಂಡಕ್ಕೆ 8 ವಿಕೆಟ್ ಗಳ ಜಯ ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮಂದೇಯಂಡÀ 6 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 49 ರನ್ ಗಳನ್ನು ಸೇರಿಸಿತು. ಪಾರುವಂಡ 2.4…
ಲೇಖಕ: admin
ಮಡಿಕೇರಿ ಏ.24 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.24 ರಂದು ಗೆಲುವು ಸಾಧಿಸಿದ ಮಹಿಳಾ ತಂಡಗಳು. *ಮೈದಾನ 3* (ಮಹಿಳಾ ಕ್ರಿಕೆಟ್)ಸರಕಾರಿ ಪ್ರೌಢ ಶಾಲಾ ಮೈದಾನ ಮಾಚಿಮಂಡ ಮತ್ತು ಪಾಸುರ ತಂಡಗಳ ನಡುವಿನ ಪಂದ್ಯದಲ್ಲಿ ಪಾಸುರ 9 ವಿಕೆಟ್ ಗಳಿಂದ ಜಯ ಸಾಧಿಸಿತು. ಮಾಚಿಮಂಡ 5 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 35 ರನ್ ಗಳನ್ನು ಗಳಿಸಿತು. ಪಾಸುರ 3.3 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 36 ರನ್ ಗಳನ್ನು ಸೇರಿಸಿ ಗೆಲುವು ಕಂಡಿತು. ಮುಕ್ಕಾಟಿರ (ಹರಿಹರ) ಮತ್ತು ಮಾಚಮಾಡ ನಡುವಿನ ಹಣಾಹಣಿಯಲ್ಲಿ ಮುಕ್ಕಾಟಿರ 24 ರನ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಮುಕ್ಕಾಟಿರ 5 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 47 ರನ್ ಗಳನ್ನು ಸೇರಿಸಿತು. ಮಾಚಮಾಡ 5 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 23 ರನ್ ಗಳನ್ನು…
ಮಡಿಕೇರಿ NEWS DESK ಏ.24 : ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಜಿಲ್ಲೆಯ ಹೋಂಸ್ಟೇ, ಹೊಟೇಲ್ ಮತ್ತು ಟ್ರಾವೆಲ್ಸ್ ಮಾಲೀಕರ ಸಂಘದ ಪದಾಧಿಕಾರಿಗಳ ಸಭೆ ನಡೆಸಿತು. ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಹಾಗೂ ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಅವರು ಪ್ರವಾಸಿಗರ ಸುರಕ್ಷತೆಯ ಕುರಿತು ಸಲಹೆ ಸೂಚನೆಗಳನ್ನು ನೀಡಿದರು. ಹೋಂಸ್ಟೇ, ಹೊಟೇಲ್ ಗಳ ನೋಂದಣಿ, ಪ್ರವಾಸಿಗರ ಸುರಕ್ಷತೆ, ಕಾರ್ಮಿಕರ ಗುಣ ನಡತೆ ಪರಿಶೀಲನೆ, ವಿದೇಶೀ ಪ್ರವಾಸಿಗರ ನೋಂದಣಿ ಮುಂತಾದ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆ ಹಾಗೂ ವಾರ್ತಾ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಕುಶಾಲನಗರ NEWS DESK : ಕುಶಾಲನಗರದಲ್ಲಿ ಆಯೋಜನೆ ಯಾಗುತ್ತಿರುವ ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ವಿರಾಜಪೇಟೆ ತಾಲ್ಲೂಕಿನ ಅರಮೇರಿಯ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ತೊರೆನೂರು ವಿರಕ್ತ ಮಠದಲ್ಲಿ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ಜರುಗಿದ ಸಮ್ಮೇಳನ ಸಮಿತಿಯ ಪದಾಧಿಕಾರಿಗಳು ಹಾಗೂ ಪ್ರಮುಖರ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಕಳೆದ ಅನೇಕ ದಶಕಗಳಿಂದ ಮಠದ ಪೀಠಾಧಿಪತಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಶಾಂತಮಲ್ಲಿಕಾರ್ಜುನ ಶ್ರೀಗಳು ದಕ್ಷಿಣ ಕೊಡಗಿನಲ್ಲಿ ಎಸ್ ಎಂ ಎಸ್ ವಿದ್ಯಾಸಂಸ್ಥೆ ಯನ್ನು ತೆರೆಯುವ ಮೂಲಕ ಶಿಕ್ಷಣ ಸೇವೆಯಲ್ಲಿ, ಹೊಂಬೆಳಕು ಎಂಬ ಮಾಸಿಕ ತತ್ವ ಚಿಂತನಾಗೊಷ್ಠಿಯ ಮೂಲಕ ಶರಣರ ಸಂದೇಶಗಳನ್ನು ಸಾರುತ್ತಾ ಕೊಡಗು ಜಿಲ್ಲೆಯ ಸರ್ವ ಜನ ಸಮುದಾಯದ ಭಕ್ತಿ ಹಾಗೂ ಶ್ರದ್ದೆಯ ಪ್ರತೀಕವಾಗಿದ್ದು ಸಮಾಜಕ್ಕೆ ಮಾರ್ಗದರ್ಶನ ನೀಡುತ್ತಿರುವ ಶ್ರೀಗಳ ಆಯ್ಕೆ ಸ್ವಾಗತಾರ್ಹ ಎಂದು ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಆಶಿಸಿದರು. ಜೂನ್ 23ರಂದು ಕುಶಾಲನಗರದ ರೈತ ಸಹಕಾರ ಭವನದಲ್ಲಿ ಅಯೋಜಿಸಿರುವ…
ಮಡಿಕೇರಿ NEWS DESK ಏ.24 : ಅಖಿಲ ಅಮ್ಮ ಕೊಡವ ಸಮಾಜದ ವತಿಯಿಂದ ಬಾನಂಡ ಕುಟುಂಬದ ಸಹಯೋಗದಲ್ಲಿ ಮೇ1 ರಿಂದ 3ರವರೆಗೆ “ಬಾನಂಡ ಕಪ್ ಕ್ರಿಕೆಟ್ ಪಂದ್ಯಾವಳಿ” ದಕ್ಷಿಣ ಕೊಡಗಿನ ಮಾಯಮುಡಿ ಶಾಲಾ ಮೈದಾನದಲ್ಲಿ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಅಖಿಲ ಅಮ್ಮಕೊಡವ ಸಮಾಜದ ಅಧ್ಯಕ್ಷ ಬಾನಂಡ ಪ್ರತ್ಯು, ದ್ವಿತೀಯ ಬಾರಿ ನಡೆಯುತ್ತಿರುವ ಅಮ್ಮ ಕೊಡವ ಸಮುದಾಯದ ಪಂದ್ಯಾವಳಿಯಲ್ಲಿ ಸುಮಾರು 24 ಅಮ್ಮಕೊಡವ ಕುಟುಂಬ ತಂಡಗಳು ಪ್ರಶಸ್ತಿಗಾಗಿ ಪೈಪೋಟಿ ನಡೆಯಲಿರುವುದಾಗಿ ಮಾಹಿತಿಯನ್ನಿತ್ತರು. ಪಂದ್ಯಾವಳಿಯ ಪಂದ್ಯಗಳು ಆರು ಓವರ್ಗಳಿಗೆ ಸೀಮಿತವಾಗಿ ನಡೆಯಲಿದೆಯಾದರೆ, ಅಂತಿಮ ಪಂದ್ಯ 8 ಓವರ್ಗಳದ್ದಾಗಿರುತ್ತದೆ. ಪಂದ್ಯಾವಳಿ ಉದ್ಘಾಟನೆಗೂ ಮುನ್ನ ಮೇ1 ರಂದು ಬೆಳಿಗ್ಗೆ 8 ಗಂಟೆಗೆ ಮಾಯಮುಡಿಯ ಶ್ರೀರಾಮಂದಿರದಿAದ ಅಮ್ಮ ಕೊಡವರ ಸಾಂಪ್ರದಾಯಿಕ ಹಾಗೂ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದೆ ಎಂದು ತಿಳಿಸಿದರು. ಜಿಲ್ಲಾ ವ್ಯಾಪ್ತಿಯಲ್ಲಿ ಅಮ್ಮ ಕೊಡವ ಸಮುದಾಯದ 32 ಕುಟುಂಬಗಳಿರುವುದಾಗಿ ಮಾಹಿತಿ ನೀಡಿದ ಅವರು, ಕಳೆದ ಬಾರಿ ಶಾಸಕ ಪೊನ್ನಣ್ಣ ಅವರು ಕ್ರೀಡಾಕೂಟಕ್ಕೆ 5 ಲಕ್ಷ…
ಮಡಿಕೇರಿ NEWS DESK ಏ.24 : ಗಾಳಿಬೀಡು ಚಾಂಪಿಯನ್ಸ್ ಕ್ಲಬ್ ಸೀಸನ್ 4ರ ವತಿಯಿಂದ ಕ್ರಿಕೆಟ್ ಪಂದ್ಯಾಟ ಮತ್ತು ವಿವಿಧ ಕ್ರೀಡಾಕೂಟಗಳನ್ನು ಏ.25 ಹಾಗೂ 26ರಂದು ಆಯೋಜಿಸಲಾಗಿದೆ ಎಂದು ಕ್ಲಬ್ ನ ಅಧ್ಯಕ್ಷ ಕಪಿಲ್ ಕುಮಾರ್ ದುಗ್ಗಳ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಎರಡು ದಿನಗಳ ಕಾಲ ನಡೆಯುವ ವಿವಿಧ ಕ್ರೀಡಾ ಸ್ಪರ್ಧೆಗಳ ಕುರಿತು ಮಾಹಿತಿ ನೀಡಿದರು. ಆಹ್ವಾನಿತ 6 ತಂಡಗಳಿoದ ಕ್ರಿಕೆಟ್ ಪಂದ್ಯಾಟ, ಪುರುಷ ಹಾಗೂ ಮಹಿಳೆಯರ ಮುಕ್ತ ಹಗ್ಗಜಗ್ಗಾಟ ಕ್ರೀಡೆಗಳು ನಡೆಯಲಿದೆ. ಅಲ್ಲದೆ ಪುರುಷರ ಗುಡ್ಡಗಾಡು ಓಟದ ಸ್ಪರ್ಧೆಯನ್ನು ಕೂಡ ಆಯೋಜಿಸಲಾಗಿದ್ದು, ಗಾಳಿಬೀಡು ಪ್ರೌಢ ಶಾಲಾ ಮೈದಾನದ ಬಳಿಯಿಂದ ಸ್ಪರ್ಧೆ ಆರಂಭಗೊಳ್ಳಲಿದೆ. ಗಾಳಿಬೀಡು ಗ್ರಾಮಸ್ಥರಿಗೆ ಸೀಮಿತವಾಗಿ ಕಾಳು ಎಕ್ಕುವುದು (4 ವರ್ಷದ ಒಳಗಿನ ಮಕ್ಕಳಿಗೆ), 100 ಮೀಟರ್ ಓಟ ಕಿರಿಯ ಬಾಲಕ /ಬಾಲಕಿಯರಿಗೆ (1ರಿಂದ 4ನೇ ತರಗತಿ), 100 ಮೀಟರ್ ಓಟ ಹಿರಿಯ ಬಾಲಕ /ಬಾಲಕಿಯರಿಗೆ (5 ರಿಂದ 7ನೇ ತರಗತಿ), 100 ಮೀಟರ್ ಓಟ ಪ್ರೌಢಶಾಲಾ…
ಸೋಮವಾರಪೇಟೆ ಏ.24 : ಇಲ್ಲಿಗೆ ಸಮೀಪದ ತಣ್ಣೀರುಹಳ್ಳ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ವೀರಭದ್ರ ಹಾಗೂ ಸಪರಿವಾರ ದೇವರುಗಳ ದೇವಾಲಯ ಪ್ರತಿಷ್ಠಾ ಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ವಿಧಿ, ವಿಧಾನಗಳೊಂದಿಗೆ ಶ್ರದ್ಧಾ,ಭಕ್ತಿಯಿಂದ ನೆರವೇರಿತು. 13 ವರ್ಷಗಳ ಹಿಂದೆ ದೇವಾಲಯ ನಿರ್ಮಾಣಕ್ಕೆ ಸಂಕಲ್ಪ ತೊಟ್ಟರೂ ಕಳೆದ 2,3 ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಬಸವೇಶ್ವರ ದೇವಾಲಯ ಸಮಿತಿಯು ಗ್ರಾಮಸ್ಥರು ಹಾಗೂ ದಾನಿಗಳ ನೆರವಿನಿಂದ ಸು 80 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನ ದೇವಾಲಯ ನಿರ್ಮಿಸಿ,ಲೋಕಾರ್ಪಣೆ ಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ನಾಲ್ಕು ದಿನಗಳಿಂದ ನಡೆದ ಧಾರ್ಮಿಕ ವಿಧಿ,ವಿಧಾನ ಗಳ ಮೂಲಕ ಲಿಂಗರೂಪಿ ಶ್ರೀ.ವೀರಭದ್ರ ಸ್ವಾಮಿ,ಗಣಪತಿ ಹಾಗೂ ಬಸವೇಶ್ವರ ದೇವರುಗಳ ಪ್ರತಿಷ್ಠಾಪನೆ ಹಾಗೂ ಬ್ರಹ್ಮಕಲಶೋತ್ಸವ ಇಂದು ವಿದ್ಯುಕ್ತವಾಗಿ ಅಂತ್ಯಗೊಂಡಿತು. ಮೂಡಿಗೆರೆಯ ವೇದವಿದ್ವಾನ್ ವೇದಮೂರ್ತಿ ಶಿವಪ್ರಸಾದ್ ಭಟ್ ಪುರೋಹಿತ್ವದ ಅರ್ಚಕರ ತಂಡ ದಿನಾಂಕ 21ರ ಮಂಗಳವಾರದಂದು ಸಾಮೂಹಿಕ ಪ್ರಾರ್ಥನೆ, ಭೂ ಶುಧಿ ಹೋಮದೊಂದಿಗೆ ಆರಂಭಗೊಂಡು 22 ರ ಬುಧವಾರದಂದು ನವಗ್ರಹ ಹೋಮ,ಶಾಂತಿ ಪ್ರಾಯಶ್ಚಿತ ಹೋಮ ಸೇರಿದಂತೆ ವಿವಿಧ, ಪೂಜೆಗಳು ನಡೆದವು.23 ರ ಗುರುವಾರ…
ಮಡಿಕೇರಿ NEWS DESK ಏ.24 : ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ಸ್ಥಳೀಯ ಸಂಸ್ಥೆಗಳಾದ ಜಿ.ಪಂ, ತಾ.ಪಂ ಮತ್ತು ಗ್ರಾ.ಪಂ ಚುನಾವಣೆಯನ್ನು ನಡೆಸದೆ ಪ್ರಜಾಪ್ರಭುತ್ವ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ನಗರದಲ್ಲಿ ಪ್ರತಿಭಟನೆ ನಡೆಸಿತು. ಮಡಿಕೇರಿ ತಾ.ಪಂ ಕಚೇರಿ ಎದುರು ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ತಕ್ಷಣ ಚುನಾವಣೆ ನಡೆಸುವಂತೆ ಆಗ್ರಹಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಮಾತನಾಡಿ ಚುನಾವಣೆ ನಡೆಸದ ಕಾಂಗ್ರೆಸ್ ಸರಕಾರ ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವುದರಿಂದ ಜಿ.ಪಂ, ತಾ.ಪಂ ಮತ್ತು ಗ್ರಾ.ಪಂ ಕ್ಷೇತ್ರಗಳಿಗೆ ಅನುದಾನ ಸಮರ್ಪಕವಾಗಿ ಹಂಚಿಕೆಯಾಗದೆ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲವೆಂದು ಆರೋಪಿಸಿದರು. ಹೊರಗಿನಿಂದ ಬಂದ ಅಧಿಕಾರಿಗಳಿಗೆ ಸ್ಥಳೀಯ ಸಮಸ್ಯೆಗಳ ಬಗ್ಗೆ ಮಾಹಿತಿ ಇರುವುದಿಲ್ಲ, ಸ್ಥಳೀಯ ಜನಪ್ರತಿನಿಧಿಗಳು ಅಧಿಕಾರದಲ್ಲಿದ್ದರೆ ಅಭಿವೃದ್ಧಿ ಕಾರ್ಯಗಳು ಸುಗಮವಾಗಿ ನಡೆಯುತ್ತದೆ. ಆದ್ದರಿಂದ ಸರಕಾರ ಶೀಘ್ರ ಚುನಾವಣೆಯನ್ನು ನಡೆಸಿ ಜನರಿಗೆ ಅಧಿಕಾರವನ್ನು ನೀಡಬೇಕೆಂದು…
ಮಡಿಕೇರಿ NEWS DESK ಏ.24 : ದಕ್ಷಿಣ ಕೊಡಗಿನ ಕುಟ್ಟ ಗ್ರಾಮದ ಹೋಂಸ್ಟೇಯೊoದರಲ್ಲಿ ವಿದೇಶಿ ಮಹಿಳೆಯ ಮೇಲೆ ನಡೆದಿದೆ ಎನ್ನಲಾಗಿರುವ ಲೈಂಗಿಕ ಕಿರುಕುಳ ಪ್ರಕರಣ ಅತ್ಯಂತ ವಿಷಾದಕರ. ಈ ಪ್ರಕರಣ ಎಚ್ಚರಿಕೆಯ ಗಂಟೆಯಾಗಿದ್ದು, ಸರಕಾರ ತಕ್ಷಣ ಪ್ರವಾಸೋದ್ಯಮ ನಿಯಮವನ್ನು ರೂಪಿಸಿ ಪ್ರವಾಸಿಗರ ಸುರಕ್ಷತೆಯ ಬಗ್ಗೆ ಆದ್ಯತೆ ನೀಡಬೇಕೆಂದು ಕೂರ್ಗ್ ಹೋಂಸ್ಟೇ ಅಸೋಸಿಯೇಷನ್ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸೋಸಿಯೇಷನ್ ನ ಅಧ್ಯಕ್ಷರಾದ ಮೋಂತಿ ಗಣೇಶ್ ಕುಟ್ಟ ಹೋಂಸ್ಟೇ ಪ್ರಕರಣಕ್ಕೆ ಸಂಬoಧಿಸಿದoತೆ ಹೋಂಸ್ಟೇಯ ಪರವಾನಗಿಯನ್ನು ಜಿಲ್ಲಾಧಿಕಾರಿಗಳು ರದ್ದು ಮಾಡಿರುವುದು ಸರಿಯಾದ ಕ್ರಮವಲ್ಲ. ಪ್ರಕರಣ ತನಿಖೆಯ ಹಂತದಲ್ಲಿದ್ದು, ಆರೋಪ ಸಾಬೀತಾಗುವಲ್ಲಿಯವರೆಗೆ ಪರವಾನಗಿಯನ್ನು ಅಮಾನತಿನಲ್ಲಿಡಬಹುದಾಗಿತ್ತು ಎಂದು ಅಭಿಪ್ರಾಯಪಟ್ಟರು. ಹೋಂಸ್ಟೇ ಮಾಲೀಕರು ಅಸೋಸಿಯೇಷನ್ ನ ಸದಸ್ಯರಾಗಿದ್ದು, ಇವರ ವಿರುದ್ಧದ ಆರೋಪದ ಕುರಿತು ಸಮಗ್ರ ತನಿಖೆಯಾಗಲಿ, ಹೋಂಸ್ಟೇಯಲ್ಲಿರುವ ಸಿಸಿ ಕ್ಯಾಮರಾದ ದೃಶ್ಯಗಳನ್ನು ಮತ್ತು ವೈಫೈ ವ್ಯವಸ್ಥೆಗಳನ್ನು ತನಿಖೆಗೆ ಒಳಪಡಿಸಲಿ ಎಂದು ಒತ್ತಾಯಿಸಿದರು. ಹೋಂಸ್ಟೇ ಪರಿಕಲ್ಪನೆಯಿಂದ ಕೊಡಗಿನಲ್ಲಿ ಪ್ರವಾಸೋದ್ಯಮ ಹೆಚ್ಚು ಅಭಿವೃದ್ಧಿ ಹೊಂದುತ್ತಿದ್ದು, ಪ್ರತಿಯೊಂದು ಕ್ಷೇತ್ರದ ವ್ಯಕ್ತಿಗೂ ಇದರಿಂದ ಲಾಭವಾಗುತ್ತಿದೆ…
ಮಡಿಕೇರಿ ಏ.23 NEWS DESK : ಭಾರತದ ಪ್ರಮುಖ ಕೃಷಿ ಪರಿಹಾರ ಒದಗಿಸುವ ಸಂಸ್ಥೆಯಾದ ಕೋರಮಂಡಲ್ ಇಂಟರ್ನ್ಯಾಷನಲ್ ಲಿಮಿಟೆಡ್ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಅರ್ಜಿ ಗ್ರಾಮದಲ್ಲಿ ತನ್ನ 1200ನೇ ‘ನಮ್ಮ ಗ್ರೋಮೋರ್’ ರಿಟೇಲ್ ಮಳಿಗೆಯನ್ನು ಇಂದು ಉದ್ಘಾಟಿಸಿದೆ. ಇದು ರಾಜ್ಯದಲ್ಲಿ ಸಂಸ್ಥೆಯ 270ನೇ ಮಳಿಗೆಯಾಗಿದೆ. ಗ್ರಾಮೀಣ ಮಾರುಕಟ್ಟೆಯಲ್ಲಿ ತನ್ನ ಅಸ್ತಿತ್ವವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸಂಸ್ಥೆಯು ಈ ಮಳಿಗೆಯನ್ನು ಆರಂಭಿಸಿದ್ದು, ಕೃಷಿ ಸಮುದಾಯದೊಂದಿಗೆ ನೇರ ಸಂಪರ್ಕವನ್ನು ಬಲಪಡಿಸುವ ಸಂಸ್ಥೆಯ ಪಯಣದಲ್ಲಿ ಇದು ಮಹತ್ವದ ಮೈಲಿಗಲ್ಲಾಗಿದೆ. ಈ ಮಳಿಗೆಯನ್ನು ಕುಟ್ಟಪ್ಪ ಕಾಫಿ ಸಂಸ್ಥೆಯ ಸಂಸ್ಥಾಪಕರಾದ, ಇಂಡಿಯನ್ ವ್ಯಾನಿಲ್ಲಾ ಇನಿಶಿಯೇಟಿವ್ನ ಸಹ-ಸಂಸ್ಥಾಪಕ ಐ.ಕೆ. ಅನಿಲ್ ಉದ್ಘಾಟಿಸಿದರು. ಕೋರಮಂಡಲ್ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ಎಸ್. ಶಂಕರಸುಬ್ರಮಣಿಯನ್ ಮತ್ತು ಸಂಸ್ಥೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ವಿಶಿಷ್ಟ ಕಾಫಿ ಮಳಿಗೆಯಾಗಿ ಆರಂಭಗೊಂಡಿರುವ ಈ ಕೇಂದ್ರವನ್ನು ಅರ್ಜಿ ಮತ್ತು ಸುತ್ತಮುತ್ತಲಿನ ಗ್ರಾಮಗಳು ಸೇರಿದಂತೆ ವಿರಾಜಪೇಟೆ ತಾಲ್ಲೂಕಿನ ಪ್ರಮುಖ ಕಾಫಿ ಬೆಳೆಯುವ ಪ್ರದೇಶಗಳಿಗೆ ಹಾಗೂ ಕೊಡಗು ಜಿಲ್ಲೆಯ ಪ್ರಮುಖ…






