ಮಡಿಕೇರಿ ಆ.10 NEWS DESK : ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮವು ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು 1 ರಿಂದ 19 ವರ್ಷದೊಳಗಿನ ಮಕ್ಕಳಿಗೆ ಆಲ್ಬೆಂಡಜೋಲ್ ಮಾತ್ರೆ ನೀಡುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮಕ್ಕಳಲ್ಲಿನ ಅಪೌಷ್ಟಿಕತೆ ಹಾಗೂ ರಕ್ತಹೀನತೆ ತಡೆಯುವಲ್ಲಿ ಆಲ್ಬೆಂಡಜೋಲ್ ಮಾತ್ರೆ ಸಹಕಾರಿಯಾಗಿದೆ. ಆ ನಿಟ್ಟಿನಲ್ಲಿ ಮಕ್ಕಳಿಗೆ ಮಾತ್ರೆ ಕೊಡಿಸಬೇಕು ಎಂದರು. ದೇಶದಾಧ್ಯಂತ ಆಗಸ್ಟ್ 10 ರಂದು “ರಾಷ್ಟ್ರೀಯ ಜಂತುಹುಳ ನಿವಾರಣಾ ಕಾರ್ಯಕ್ರಮ” ಹಾಗೂ ಆಗಸ್ಟ್ 17 ರಂದು ಮಾಪ್ ಆಪ್ ಡೇ ಕಾರ್ಯಕ್ರಮ ನಡೆಯುತ್ತಿದ್ದು, 1-19 ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಆಲ್ಬೆಂಡಜೋಲ್- 400 ಎಂಜಿ ಮಾತ್ರೆ ನೀಡಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ವಿವರಿಸಿದರು. ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮವು 10 ಫೆಬ್ರವರಿ 2015ರಲ್ಲಿ ಪ್ರಾರಂಭ ಮಾಡಲಾಗಿದ್ದು, ಮೊದಲಿಗೆ 11 ರಾಜ್ಯಗಳಲ್ಲಿ ಇದನ್ನು…
ಲೇಖಕ: admin
ಮಡಿಕೇರಿ ಆ.10 NEWS DESK : ಕನ್ನಡ ಮತ್ತು ಸಂಸ್ಕøತಿ ಇಲಾಖೆ ವ್ಯಾಪ್ತಿಯ ನಗರದ ಕರ್ನಾಟಕ ಸುವರ್ಣ ಸಮುಚ್ಚಯ ಭವನ, ಗಾಂಧಿ ಸ್ಮಾರಕ ಉದ್ಯನವನ ಹಾಗೂ ಕುಶಾಲನಗರದ ಕಲಾಭವನ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಎಂಜಿನಿಯರ್ಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ವಿವಿಧ ಕಾಮಗಾರಿಗಳ ಪ್ರಗತಿ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು. ಕುಶಾಲನಗರದ ಕಲಾಭವನದ ಕಟ್ಟಡ ಕಾಮಗಾರಿ ಪೂರ್ಣಗೊಂಡಿದೆ. ಧ್ವನಿವರ್ಧಕ, ಬೆಳಕು ವ್ಯವಸ್ಥೆ ಸೇರಿದಂತೆ ವಿವಿಧ ಕಾಮಗಾರಿ ಕೈಗೊಳ್ಳಲು ಹೆಚ್ಚುವರಿಯಾಗಿ 10 ಲಕ್ಷ ರೂ. ಬೇಕಾಗಿದ್ದು, ಇದನ್ನು ಬಿಡುಗಡೆಗೊಳಿಸಲಾಗುವುದು. ಆ ನಿಟ್ಟಿನಲ್ಲಿ ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಕೆಆರ್ಐಡಿಎಲ್ ಎಂಜಿನಿಯರ್ಗೆ ಸೂಚಿಸಿದರು. ಕೆಆರ್ಐಡಿಎಲ್ ಎಂಜಿನಿಯರ್ ರಘುನಂದನ್ ಅವರು ಆದಷ್ಟು ಶೀಘ್ರ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು. ನಗರದ ಮೈಸೂರು ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಸುವರ್ಣ ಸಮುಚ್ಚಯ ಭವನಕ್ಕೆ ಇನ್ನೂ ಒಂದು ಕೋಟಿಗೂ ಹೆಚ್ಚು ಹಣ ಬೇಕಿದ್ದು, ಒಂದುವರೆ ತಿಂಗಳಲ್ಲಿ…
ಸೋಮವಾರಪೇಟೆ NEWS DESK ಆ.10: ಸೋಮವಾರಪೇಟೆ ಮಲ್ಲಳ್ಳಿ ಜಲಪಾತ ವೀಕ್ಷಣೆಗೆ ತೆರಳುತ್ತಿದ್ದ ಪ್ರವಾಸಿಗರ ಮಿನಿಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮೊಗುಚಿಕೊಂಡಿರುವ ಘಟನೆ ತಾಲ್ಲೂಕಿನ ಕುಮಾರಳ್ಳಿ-ಬಾಚಳ್ಳಿ ರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಅದೃಷ್ಟವಶಾತ್ ಬಸ್ನಲ್ಲಿದ್ದ ನಾಲ್ವರು ಪುಟ್ಟ ಮಕ್ಕಳು ಸೇರಿದಂತೆ ಒಟ್ಟು 29 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 23 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಪ್ರವಾಸಿಗರು ಪ್ರವಾಸಕ್ಕಾಗಿ ಕೊಡಗಿಗೆ ಆಗಮಿಸಿ, ಮಲ್ಲಳ್ಳಿ ಜಲಪಾತ ವೀಕ್ಷಣೆಗೆ ತೆರಳುತ್ತಿದ್ದರು. ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಬಾಚಳ್ಳಿ ಗ್ರಾಮದ ಬಳಿ ಬಸ್ ಚಾಲಕ ಶಫಿ ಅವರ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ. ಅಪಘಾತ ಸಂಭವಿಸುತ್ತಿದ್ದAತೆ ಸ್ಥಳೀಯರು ಸ್ಥಳಕ್ಕೆ ಧಾವಿಸಿ, ಬಸ್ನಲ್ಲಿದ್ದ ಗಾಯಾಳುಗಳನ್ನು ಹೊರತೆಗೆದು ತಮ್ಮ ವಾಹನಗಳ ಮೂಲಕ ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು. ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಜಮೀರ್ ಅಹ್ಮದ್ ಹಾಗೂ ಶುಶ್ರೂಷಕರು ಗಾಯಾಳುಗಳಿಗೆ ತುರ್ತು ಚಿಕಿತ್ಸೆ ನೀಡಿದರು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದ 16 ಮಂದಿಯನ್ನು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ…
ಮಡಿಕೇರಿ NEWS DESK ಆ.10 : ಮಡಿಕೇರಿ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಗಾಂಧಿ ಸ್ಮಾರಕದ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಸಂಬಂಧಿಸಿದ ಇಲಾಖೆಗೆ ನಿರ್ದೇಶನ ನೀಡಬೇಕೆಂದು ಕೊಡಗು ಜಿಲ್ಲಾ ಸರ್ವೋದಯ ಸಮಿತಿ ಜಿಲ್ಲಾಡಳಿತವನ್ನು ಒತ್ತಾಯಿಸಿದೆ. ಸರ್ವೋದಯ ಸಮಿತಿಯ ಜಿಲ್ಲಾಧ್ಯಕ್ಷ ಅಂಬೆಕಲ್ ಕುಶಾಲಪ್ಪ ಅವರ ನೇತೃತ್ವದ ನಿಯೋಗ ಇಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರನ್ನು ಭೇಟಿ ಮಾಡಿ ಗಾಂಧಿ ಸ್ಮಾರಕಕ್ಕೆ ಸಂಬಂಧಿಸಿದಂತೆ ಮನವಿ ಪತ್ರ ಸಲ್ಲಿಸಿತು. ಜಿಲ್ಲಾ ಖಜಾನೆಯಲ್ಲಿರುವ ಗಾಂಧಿ ಚಿತಾಭಸ್ಮವನ್ನು ರಾಜ್ಘಾಟ್ ನಂತೆ ಸ್ಮಾರಕ ನಿರ್ಮಿಸಿ ಶಾಶ್ವತವಾಗಿಟ್ಟು ಗೌರವಿಸುವ ಉದ್ದೇಶದಿಂದ ಗಾಂಧಿ ಸ್ಮಾರಕ ನಿರ್ಮಾಣದ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಸರಕಾರವಿದ್ದಾಗ ಅಂದು ವಿಧಾನಸಭಾ ಅಧ್ಯಕ್ಷರಾಗಿದ್ದ ಕೆ.ಜಿ.ಬೋಪಯ್ಯ ಅವರು ಸರ್ವೋದಯ ಸಮಿತಿಯ ಮನವಿಗೆ ಸ್ಪಂದಿಸಿ ರೂ.50 ಲಕ್ಷ ಮಂಜೂರು ಮಾಡಿದ್ದರು. ಈ ಅನುದಾನದ ಮೂಲಕ ನಿರ್ಮಿತಿ ಕೇಂದ್ರದವರು ಸ್ಮಾರಕ ನಿರ್ಮಾಣ ಕಾರ್ಯ ಆರಂಭಿಸಿದರು. ಆದರೆ ಪ್ರಸ್ತುತ ಮುಂದುವರೆದ ಕಾಮಗಾರಿಗೆ ಅನುದಾನದ ಕೊರತೆಯಾಗಿದೆ. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ತಮ್ಮ ನಿಧಿಯಿಂದ…
ಮಡಿಕೇರಿ NEWS DESK ಆ.10 : ಮಡಿಕೇರಿ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಗಾಂಧಿ ಸ್ಮಾರಕದ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಸಂಬಂಧಿಸಿದ ಇಲಾಖೆಗೆ ನಿರ್ದೇಶನ ನೀಡಬೇಕೆಂದು ಕೊಡಗು ಜಿಲ್ಲಾ ಸರ್ವೋದಯ ಸಮಿತಿ ಜಿಲ್ಲಾಡಳಿತವನ್ನು ಒತ್ತಾಯಿಸಿದೆ. ಸರ್ವೋದಯ ಸಮಿತಿಯ ಜಿಲ್ಲಾಧ್ಯಕ್ಷ ಅಂಬೆಕಲ್ ಕುಶಾಲಪ್ಪ ಅವರ ನೇತೃತ್ವದ ನಿಯೋಗ ಇಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರನ್ನು ಭೇಟಿ ಮಾಡಿ ಗಾಂಧಿ ಸ್ಮಾರಕಕ್ಕೆ ಸಂಬಂಧಿಸಿದಂತೆ ಮನವಿ ಪತ್ರ ಸಲ್ಲಿಸಿತು. ಜಿಲ್ಲಾ ಖಜಾನೆಯಲ್ಲಿರುವ ಗಾಂಧಿ ಚಿತಾಭಸ್ಮವನ್ನು ರಾಜ್ಘಾಟ್ ನಂತೆ ಸ್ಮಾರಕ ನಿರ್ಮಿಸಿ ಶಾಶ್ವತವಾಗಿಟ್ಟು ಗೌರವಿಸುವ ಉದ್ದೇಶದಿಂದ ಗಾಂಧಿ ಸ್ಮಾರಕ ನಿರ್ಮಾಣದ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಸರಕಾರವಿದ್ದಾಗ ಅಂದು ವಿಧಾನಸಭಾ ಅಧ್ಯಕ್ಷರಾಗಿದ್ದ ಕೆ.ಜಿ.ಬೋಪಯ್ಯ ಅವರು ಸರ್ವೋದಯ ಸಮಿತಿಯ ಮನವಿಗೆ ಸ್ಪಂದಿಸಿ ರೂ.50 ಲಕ್ಷ ಮಂಜೂರು ಮಾಡಿದ್ದರು. ಈ ಅನುದಾನದ ಮೂಲಕ ನಿರ್ಮಿತಿ ಕೇಂದ್ರದವರು ಸ್ಮಾರಕ ನಿರ್ಮಾಣ ಕಾರ್ಯ ಆರಂಭಿಸಿದರು. ಆದರೆ ಪ್ರಸ್ತುತ ಮುಂದುವರೆದ ಕಾಮಗಾರಿಗೆ ಅನುದಾನದ ಕೊರತೆಯಾಗಿದೆ. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ತಮ್ಮ ನಿಧಿಯಿಂದ…
ಮಡಿಕೇರಿ NEWS DESK ಆ.10 : ಸರಕಾರಗಳು ಕಾರ್ಪೋರೇಟ್ ಸಂಸ್ಕೃತಿಯನ್ನು ಉತ್ತೇಜಿಸುವ ಮೂಲಕ ಜನ ಸಾಮಾನ್ಯರ ನೆಮ್ಮದಿಯ ಬದುಕಿನ ಮೇಲಿನ ಕಾಳಜಿಯನ್ನು ಕಳೆದುಕೊಳ್ಳುತ್ತಿವೆ ಎಂದು ಆರೋಪಿಸಿ ಕ್ವಿಟ್ ಇಂಡಿಯಾ ಚಳುವಳಿಯ ಸ್ಫೂರ್ತಿ ಮತ್ತು ನೆನಪಿನ ಹಿನ್ನೆಲೆಯಲ್ಲಿ ಕಾರ್ಮಿಕ ಸಂಘಟನೆಗಳು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿದವು. ಸಿಐಟಿಯು ಜಿಲ್ಲಾಧ್ಯಕ್ಷ ಎ.ಸಿ.ಸಾಬು ಹಾಗೂ ಪ್ರಧಾನ ಕಾರ್ಯದರ್ಶಿ ಪಿ.ಆರ್.ಭರತ್ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ನಗರದ ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಘೋಷಣೆಗಳ ಸಹಿತ ಪ್ರತಿಭಟನೆ ನಡೆಸಿದರು. ಪಿ.ಆರ್.ಭರತ್ ಮಾತನಾಡಿ, ಬ್ರಿಟಿಷ್ ಸಾಮ್ರಾಜ್ಯದ ಪತನಕ್ಕೆ ಭದ್ರ ಬುನಾದಿ ಹಾಕಿ ಕೊಟ್ಟ “ಕ್ವಿಟ್ ಇಂಡಿಯಾ ಚಳವಳಿ” 1942 ರ ಆ.9 ರಂದು ಆರಂಭಗೊಳ್ಳುವ ಮೂಲಕ ಬ್ರಿಟಿಷ್ ವಸಾಹತು ಶಾಹಿ ಆಡಳಿತದ ಬುಡವನ್ನು ಅಲುಗಾಡಿಸಿತ್ತು. ಅದರ ಪ್ರೇರಣೆಯಡಿ ಪ್ರಸ್ತುತ ವ್ಯವಸ್ಥೆಯಡಿ ವಸಾಹತುಶಾಹಿ ಕಾರ್ಪೋರೇಟ್ ಆಳ್ವಿಕೆಯನ್ನು ವಿರೋಧಿಸಿ ಮತ್ತು ಇವುಗಳಿಗೆ ಬೆಂಬಲವಾಗಿ ನಿಂತ ಸರಕಾರದ ಧೋರಣೆಗಳನ್ನು ಖಂಡಿಸಿ ದೇಶವ್ಯಾಪಿ ಜಿಲ್ಲಾ ಕೇಂದ್ರಗಳಲ್ಲಿ ಹೋರಾಟಗಳನ್ನು ರೂಪಿಸಿರುವುದಾಗಿ ತಿಳಿಸಿದರು. ಆಳುವ…
ಮಡಿಕೇರಿ NEWS DESK ಆ.10 : ಆಲೆಮಾಡ ಕುಟುಂಬದ ವತಿಯಿಂದ ಅ.10 ಮತ್ತು 11 ರಂದು ಪೊನ್ನಂಪೇಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಮೈದಾನದಲ್ಲಿ ದ್ವಿತೀಯ ವರ್ಷದ ಅಂತರ ಕೊಡವ ಕುಟುಂಬಗಳ “ಆಲೆಮಾಡ ತೋಕ್ ನಮ್ಮೆ-2026′ ನಡೆಯಲಿದೆ ಎಂದು ಆಯೋಜನಾ ಸಮಿತಿಯ ನಿರ್ದೇಶಕ ಆಲೆಮಾಡ ಕೀರ್ತನ್ ತಮ್ಮಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಸ್ಪರ್ಧೆಯ ಕುರಿತು ಮಾಹಿತಿ ನೀಡಿದ ಅವರು, 12 ಬೋರ್ ಶಾಟ್ ಗನ್ ಮತ್ತು .22 ರೈಫಲ್ ವಿಭಾಗಗಳಲ್ಲಿ ಸ್ಪರ್ಧಾ ಕಾರ್ಯಕ್ರಮ ನಡೆಯಲಿದೆ. ಸ್ಪರ್ಧೆಯಲ್ಲಿ ಇಬ್ಬರು ಸದಸ್ಯರನ್ನು ಒಳಗೊಂಡ ತಂಡಗಳ ಪಾಲ್ಗೊಳ್ಳುವಿಕೆಗೆ ಅವಕಾಶವನ್ನು ನೀಡಲಾಗಿದೆ. 18 ವರ್ಷ ಮೇಲ್ಪಟ್ಟ ಪುರುಷರು ಹಾಗೂ ಮಹಿಳೆಯರು ತಂಡದಲ್ಲಿ ಪಾಲ್ಗೊಳ್ಳಬಹುದು. ಯಾವುದೇ ಒಂದು ಕೊಡವ ಕುಟುಂಬದಿ0ದ ನಾಲ್ಕು ತಂಡಗಳು ಸ್ಪರ್ಧಿಸಬಹುದಾಗಿದೆ ಎಂದರು. ಪ್ರಸಕ್ತ ಸಾಲಿನ ಸ್ಪರ್ಧೆಯಲ್ಲಿ 350ಕ್ಕೂ ಹೆಚ್ಚಿನ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಹೊಂದಲಾಗಿದೆ, ಕಳೆೆದ ಸಾಲಿನಲ್ಲಿ ಪೊನ್ನಂಪೇಟೆಯಲ್ಲೆ ಪೆಮ್ಮಂಡ ಕುಟುಂಬದಿ0ದ ಆಯೋಜಿತ ತೋಕ್ ನಮ್ಮೆಯಲ್ಲಿ 248 ತಂಡಗಳು ಪಾಲ್ಗೊಂಡಿದ್ದವು. ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ತಂಡಗಳಿಗೆ ತಲಾ…
ಮಡಿಕೇರಿ NEWS DESK ಆ. 10 : ಜ್ಞಾನಗಂಗಾ ವಸತಿ ಶಾಲೆಯ INTERACT CLUBನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಇತ್ತೀಚೆಗೆ ನಡೆಯಿತು. ಅಧ್ಯಕ್ಷರಾಗಿ ಕಾನಿಷ್ಕ ಎ.ಸಿ., ಉಪಾಧ್ಯಕ್ಷರಾಗಿ ಮನನ್ ಎಂ., ಕಾರ್ಯದರ್ಶಿಯಾಗಿ ವಿಶ್ರುತ, ಸಹ ಕಾರ್ಯದರ್ಶಿಯಾಗಿ ಸುಚೇತ್, ಖಜಾಂಚಿಯಾಗಿ ಶಿಶಿರ್ ಭಟ್ ಹಾಗೂ ನಿರ್ದೇಶಕರು ಅಧಿಕಾರ ವಹಿಸಿಕೊಂಡರು. ಅಧಿಕಾರ ಬೋಧನೆ ಮಾಡಿ ಮಾತನಾಡಿದ ಮಿಸ್ಟಿ ಹಿಲ್ಸ್ನ ಮಾಜಿ ಅಧ್ಯಕ್ಷ ಜಗದೀಶ್ ಪ್ರಶಾಂತ್, ವಿದ್ಯಾರ್ಥಿಗಳಲ್ಲಿ ನಾಯಕತ್ವದ ಬೆಳವಣಿಗೆ ಮಾಡುವುದೇ ರೋಟರಿ ಸಂಸ್ಥೆಯ ಉದ್ದೇಶ ಎಂದು ಹೇಳಿದರು. ಇಂಟರಾಕ್ಟ್ ಸಂಸ್ಥೆಯನ್ನು ಸೇರುವ ಮೂಲಕ ವಿದ್ಯಾರ್ಥಿಗಳು ಜವಾಬ್ದಾರಿ ಹೆಚ್ಚಿಸಿಕೊಳ್ಳುತ್ತಾರೆ. ದೂರದೃಷ್ಟಿತ್ವ ಹೆಚ್ಚಿಸಿಕೊಳ್ಳುತ್ತಾರೆ ಮತ್ತು ಸಾಮಾಜಿಕ ಕಳಕಳಿ ವೃದ್ಧಿಯಾಗುತ್ತದೆ ಎಂದು ಹೇಳಿದರು. INTERACT CLUB ಅಧ್ಯಕ್ಷ ಬಿ.ಜಿ. ಅನಂತಶಯನ ಮಾತನಾಡಿ, ಶಾಲೆಯ ಜೊತೆಗಾರನೊಬ್ಬ ದುಃಖದಿಂದ ಕುಳಿತಿರುವಾಗ ಅವನ ಬೆನ್ನುತಟ್ಟಿ ಮಾತನಾಡಿಸುವುದು ಕೂಡ ಒಂದು ಸೇವೆಯೇ ಎಂದು ಹೇಳಿದರು. ಸೇವೆಯೊಂದಿಗೆ ಉತ್ತಮ ವ್ಯಕ್ತಿತ್ವ ಬೆಳೆಸಿಕೊಂಡು ಶಾಲೆ ಕುಟುಂಬ ಮತ್ತು ದೇಶಕ್ಕೆ ಗೌರವ ತರುವ ರೀತಿ ಬಾಳಬೇಕೆಂದು ಹೇಳಿದರು.…
ಮಡಿಕೇರಿ NEWS DESK ಆ.9 : ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ವತಿಯಿಂದ 17ನೇ ವರ್ಷದ ‘ಕಕ್ಕಡ ನಮ್ಮೆ’ ಅರ್ಥವತ್ತಾಗಿ ನಡೆಯಿತು. ವಿರಾಜಪೇಟೆಯ ಅಖಿಲ ಕೊಡವ ಸಮಾಜದಲ್ಲಿ ಸಂಭ್ರಮದಿಂದ ನಡೆದ ‘ಕಕ್ಕಡ ನಮ್ಮೆ’ ಯಲ್ಲಿ ಪರಿಷತ್ ನ ಆಡಳಿತ ಮಂಡಳಿಯ ಪದಾಧಿಕಾರಿಗಳು ತಯಾರಿಸಿದ್ದ ‘ಕಕ್ಕಡ ಖಾದ್ಯ’ ಗಳೊಂದಿಗೆ ಭೋಜನ ಸವಿದು ಹಬ್ಬದ ಸಂಭ್ರಮವನ್ನು ಹಂಚಿಕೊಳ್ಳಲಾಯಿತು. ಇದಕ್ಕೂ ಮೊದಲು ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ನ ಅಧ್ಯಕ್ಷೆ ಐಚಂಡ ರಶ್ಮಿ ಮೇದಪ್ಪ ಅವರು ಅಳಿವಿನಂಚಿನಲ್ಲಿರುವ ಕೊಡವ ಭಾಷೆಯನ್ನು ಉಳಿಸಲು ಹೆಚ್ಚು ಅಧ್ಯಯನ ಪುಸ್ತಕಗಳು ರಚನೆಯಾಗಬೇಕು ಮತ್ತು ಕೊಡವರು ಕೊಡವ ಸಾಹಿತ್ಯದ ಬಗ್ಗೆ ಆಸಕ್ತಿ ತೋರಿ ಪುಸ್ತಕ ರಚನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಯಾವುದೇ ಭಾಷೆ ಬೆಳೆಯಬೇಕಾದರೆ ಆ ಭಾಷೆಯ ಸಾಹಿತ್ಯ ಹಾಗೂ ಅಧ್ಯಯನ ಕೃತಿಗಳ ಕೊಡುಗೆ ಮಹತ್ವದ್ದಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಕೊಡವ ಭಾಷೆಗೆ ಆದ್ಯತೆ ನೀಡುವ ಉದ್ದೇಶದಿಂದ ಕೊಡವ ಭಾಷೆಯ…
ಮಡಿಕೇರಿ NEWS DESK ಆ.9 : ನಗರದ ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಶ್ರೀ ಕೋಟೆ ಮಾರಿಯಮ್ಮ ಯುವಕ ಮಿತ್ರ ಮಂಡಳಿಯ 51 ನೇ ವರ್ಷದ ದಸರಾ ಉತ್ಸವ ಸಮಿತಿಯ ಅಧ್ಯಕ್ಷರಾಗಿ ಹೆಚ್.ಎಲ್.ಯೋಗೇಶ್ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಮುದ್ದುರಾಜು ಬಿ.ಎನ್, ಸಹ ಕಾರ್ಯದರ್ಶಿಯಾಗಿ ಅನಿಲ್ ಎಂ.ಆರ್, ಖಜಾಂಚಿಯಾಗಿ ಪ್ರದೀಪ್ ಹಾಗೂ ಜ್ಞಾನೇಶ್ ಸೂರ್ಯ ಆಯ್ಕೆಯಾದರು. ದೇವಾಲಯದ ಆವರಣದಲ್ಲಿ ಇಂದು ನಡೆದ ಸಮಿತಿಯ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.






