ಲೇಖಕ: admin

ಕುಶಾಲನಗರ ಜು.13 NEWS DESK :  ಜೆಸಿಐ ಕುಶಾಲನಗರ ಕಾವೇರಿ ವತಿಯಿಂದ  ಲೋಕಲ್ ಗವರ್ನಿಂಗ್ ಬೋರ್ಡ್ ಹಾಗೂ ಸಾಮಾನ್ಯ ಸಭೆ ನಡೆಯಿತು.  2026-27ನೇ ಸಾಲಿನ ಅಸಿಸ್ಟೆಂಟ್ ಗವರ್ನರ್ ಆಗಿ ಆಯ್ಕೆಯಾಗಿರುವ ಜೆಸಿ ರಂಗಸ್ವಾಮಿ, ರೋಟರಿ  ಅಧ್ಯಕ್ಷ  ಸಿ.ಎ. ರುದ್ರೇಶ್ ಪಟೇಲ್ ಹಾಗೂ ನಿವೃತ್ತ ಮುಖ್ಯ ಶಿಕ್ಷಕ  ಟಿ.ಜಿ. ಪ್ರೇಮ್‌ಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಜೆಸಿಐ ವಲಯ-14ರ ಮಧ್ಯವಾರ್ಷಿಕ ಸಮ್ಮೇಳನದಲ್ಲಿ ಜೆಸಿಐ ಕುಶಾಲನಗರ ಕಾವೇರಿಗೆ ಲಭಿಸಿದ “ಔಟ್‌ಸ್ಟ್ಯಾಂಡಿಂಗ್ ಅಧ್ಯಕ್ಷ” ಪ್ರಶಸ್ತಿಯನ್ನು ಅಧ್ಯಕ್ಷ  ಶ್ರೀನಿವಾಸ್ ಬಿ. ಅವರಿಗೆ ಹಾಗೂ “ಔಟ್‌ಸ್ಟ್ಯಾಂಡಿಂಗ್ ಟ್ರೈನಿಂಗ್ ಎಲ್.ಒ.ಎಂ ಪ್ರಶಸ್ತಿಯ ಸಂಬಂಧ ಅಭಿನಂದಿಸಲಾಯಿತು. ಕುಶಾಲನಗರ  ಮಾಜಿ ಅಧ್ಯಕ್ಷರಾದ ಲೋಕೇಶ್ ಸಾಗರ್, ರಜನಿಕಾಂತ್ ಎಂ.ಜೆ., ಪ್ರಶಾಂತ್ ಕೆ.ಡಿ., ಜಗದೀಶ್ ಬಿ., ತೇಜ ದಿನೇಶ್, ಜೆಸಿಐ ಶನಿವಾರಸಂತೆ  ಅಧ್ಯಕ್ಷ ರವಿ ಸಿ. ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಕುಶಾಲನಗರ ಕಾವೇರಿ ಅಧ್ಯಕ್ಷ ಶ್ರೀನಿವಾಸ್ ಬಿ. ವಹಿಸಿದ್ದರು.

Read More

ಕುಶಾಲನಗರ ಜು.13 NEWS DESK :  ಕುಶಾಲನಗರ ಇನ್ನರ್ ವೀಲ್ ಕ್ಲಬ್ ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಸೀತಾಲಕ್ಷ್ಮಿ ಆಯ್ಕೆಯಾಗಿದ್ದಾರೆ.  2026-27ನೇ ಅವಧಿಯ ನೂತನ ತಂಡದ ಪದಗ್ರಹಣ ಸಮಾರಂಭ ನಡೆಯಿತು. ಮಾಜಿ ಅಧ್ಯಕ್ಷರಾದ ಅಶ್ವಿನಿ ರೈ ಅವರು ಪ್ರಮಾಣವಚನ ಬೋಧಿಸಿದರು.  ನೂತನ ಸಾಲಿನ ಕಾರ್ಯದರ್ಶಿಯಾಗಿ ಶಾಲಿನಿ ನರೇಂದ್ರ, ಖಜಾಂಚಿ ಕುಸುಮ ನಟೇಶ ಮತ್ತು ಜಾಸ್ಮಿನ್ ಪ್ರಕಾಶ್, ಚಿತ್ರ ರಮೇಶ್ ಅಧಿಕಾರ ವಹಿಸಿಕೊಂಡರು.  ಡಿ ಚೆನ್ನಮ್ಮ ಶಾಲೆಯ ಮೂರು ವಿದ್ಯಾರ್ಥಿಗಳಿಗೆ ಹಾರ್ದಿಕ ಸಹಾಯದ ಜೊತೆಗೆ ಲೇಖನಿ ಸಾಮಾಗ್ರಿಗಳನ್ನು ವಿತರಿಸಲಾಯಿತು. ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಇನ್ನರ್ ವೀಲ್ ಲೋಪಮುದ್ರ ಪತ್ರಿಕೆಯನ್ನು ರೋಟರಿ ಅಧ್ಯಕ್ಷ ರುದ್ರೇಶ್ ಪಟೇಲ್ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷರು ಸಮಿತಿಯ ಸದಸ್ಯರು ಇದ್ದರು.

Read More

ಮಡಿಕೇರಿ ಜು.12 NEWS DESK : ಗಾನ ಕೋಗಿಲೆ ಎಸ್ .ಜಾನಕಿಯವರು ಕೊಡಗಿನಲ್ಲಿಯೂ ಕೆಲವು ದಿನಗಳನ್ನು ಕಳೆದಿದ್ದರು. ಕಾವೇರಿ ನದಿಯ ಉಗಮತಾಣ ತಲಕಾವೇರಿಗೆ ತೆರಳಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಲು ಜಾನಕಿ ಅವರು ಕೊಡಗಿಗೆ ಬಂದಿದ್ದರು. ಮಡಿಕೇರಿಯಲ್ಲಿ ರಾಷ್ಟ್ರೀಯ ಔಷಧಿ ವ್ಯಾಪಾರಸ್ಥರ ಸಂಘದ ಸಂಘಟನಾ ಕಾಯ೯ದಶಿ೯ ಎ.ಕೆ.ಜೀವನ್ ಅವರ  ತೋಟದ ಮನೆಯಲ್ಲಿ 2015 ರ ಏಪ್ರಿಲ್ ನಲ್ಲಿ  8 ದಿನಗಳನ್ನು ಕಳೆದಿದ್ದ ಎಸ್.ಜಾನಕಿ ಅವರು ಇಲ್ಲಿದ್ದಷ್ಟು ದಿನ ವಿವಿಧ ಹಾಡುಗಳನ್ನು ಹೇಳುತ್ತಿದ್ದರಂತೆ.  ಕೊಡಗಿನ   ಸುಂದರ ನಿಸಗ೯ದ ಮಡಿಲಲ್ಲಿ ಆ ಸರಸ್ವತಿಯ ಗಾನಾರಾಧನೆಯಲ್ಲಿ ತೊಡಗಿರುವುದು ನನ್ನ ಭಾಗ್ಯ ಎಂಬ ಅವರ ಹೇಳಿಕೆಯನ್ನು ಎಂದು ಜೀವನ್ ಸ್ಮರಿಸಿಕೊಂಡರು. ಕನ್ನಡ ನಾಡಿನ ಜೀವನದಿ.. ಕಾವೇರಿ   ಬಗ್ಗೆ ನಾನೇನೋ ಅನೇಕ  ಹಾಡು ಹೇಳಿದ್ದೆೇನೆ. ಅವೆಲ್ಲವೂ  ಬಹಳ ಜನಪ್ರಿಯವೂ ಆಯಿತು. ಆದರೆ, ಇಂಥ ಮಹಾಮಾತೆಯ ಬಗೆಗಿನ   ಹಾಡು ಹೇಳಿದ ಮೇಲೆ ಆ ಮಹಾಮಾತೆ ಕಾವೇರಿ ಸನ್ನಿಧಿಯನ್ನು  ದಶ೯ನ ಮಾಡದಿದ್ದರೆ ಹೇಗೆ ಎಂದು ತಲಕಾರೇರಿಗೆ ಭೇಟಿ…

Read More

ಮಡಿಕೇರಿ ಜು.13 NEWS DESK : ಕೊಡಗು ಜಿಲ್ಲೆಗೆ ನವ ಮಂಗಳೂರು ಬಂದರು ಸಂಸ್ಥೆಯಿಂದ ಶಾಶ್ವತವಾದ ಜನೋಪಯೋಗಿ ಯೋಜನೆಯನ್ನು ಜಾರಿಗೊಳಿಸಲು ಬದ್ದ ಎಂದು ಸಂಸ್ಥೆಯ ಅಧ್ಯಕ್ಷ ಸುಶೀಲ್ ಕುಮಾರ್ ಸಿಂಗ್ ಭರವಸೆ ನೀಡಿದ್ದಾರೆ. ಮಡಿಕೇರಿಗೆ ಭೇಟಿ ನೀಡಿದ್ದ ಸುಶೀಲ್ ಕುಮಾರ್ ಸಿಂಗ್ ಅವರನ್ನು ತಾಜ್ ವಿವಾಂತ ರೆಸಾಟ್೯ನಲ್ಲಿ ಭೇಟಿ ಮಾಡಿದ ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮಸ್೯ ಜಿಲ್ಲಾಧ್ಯಕ್ಷ ಬಿ.ಆರ್. ನಾಗೇಂದ್ರಪ್ರಸಾದ್  ನೇತೃತ್ವದ ನಿಯೋಗವು ವಿವಿಧ ಬೇಡಿಕೆಗಳ ಪ್ರಸ್ತಾವನೆ ಸಲ್ಲಿಸಿತು. ಜಿಲ್ಲಾ ಚೇಂಬರ್ ಆಫ್ ಕಾಮಸ್೯ನ ಗೌರವ ಸಲಹೆಗಾರ ಜಿ.ಚಿದ್ವಿಲಾಸ್ ಈ ಸಂದಭ೯ ಪ್ರಸ್ತಾವನೆ ಸಲ್ಲಿಸಿ, ಕೊಡಗು ಜಿಲ್ಲೆಯಿಂದ ಬಹುತೇಕ ಕಾಫಿ ವಹಿವಾಟು ನವ ಮಂಗಳೂರು ಬಂದರಿನ ಮೂಲಕ ಆಗುತ್ತಿದೆ. ನವಮಂಗಳೂರಿನ ಆಥಿ೯ಕ ಲಾಭಕ್ಕೂ ಕೊಡಗಿನಿಂದ ಸರಬರಾಜಾಗುತ್ತಿರುವ ಕಾಫಿ ಪರೋಕ್ಷವಾಗಿ ಕಾರಣವಾಗುತ್ತಿದೆ. ಈ ನಿಟ್ಟಿನಲ್ಲಿ ನವಮಂಗಳೂರು ಬಂದರು ಟ್ರಸ್ಟ್ ನಿಂದ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ನಿಧಿ ಬಳಸಿ ಕೊಡಗು ಜಿಲ್ಲೆಯಲ್ಲಿ ಜನರಿಗೆ ಪ್ರಯೋಜನವಾಗುವಂಥ ಶಾಶ್ವತ ಯೋಜನೆಯನ್ನು ಜಾರಿಗೊಳಿಸುವಂತೆ ಕೋರಿದರು. ಈ ಪ್ರಸ್ತಾವನೆಗೆ…

Read More

ಮಡಿಕೇರಿ ಜು.13 NEWS DESK : 2026-2027ನೇ ಸಾಲಿನ ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಹಾಗೂ  ತರಗತಿ ಪ್ರತಿನಿಧಿಗಳ ಚುನಾವಣೆ ನಡೆಯಿತು. ಪ್ರತಿ ತರಗತಿಯಿಂದ ತಲಾ ಇಬ್ಬರು ಪ್ರತಿನಿಧಿಗಳನ್ನು ಆಯ್ಕೆ ಮಾಡಲಾಯಿತು.  ಪ್ರಥಮ ಕಲಾ ವಿಭಾಗದಿಂದ ಅಭಿಜಿತ್ ಹೆಚ್.ಎನ್. ಮತ್ತು ನವ್ಯ ಹೆಚ್. ಜಿ.,ದ್ವಿತೀಯ ಕಲಾ ವಿಭಾಗದಿಂದ ವೇದಾಂತ್ ಪೂವಯ್ಯ ಎಂ. ಟಿ ಮತ್ತು ಪ್ರಜ್ಞಾ. ಪಿ.ಸಿ., ಪ್ರಥಮ ವಾಣಿಜ್ಯ ವಿಭಾಗದಿಂದ ದ್ವಿತೀಯ ವಾಣಿಜ್ಯ ವಿಭಾಗದಿಂದ  ಸಂಜು ಪಿ.ಟಿ ಮತ್ತು ಕಾವ್ಯ ವೈ.ಎಸ್. ಪ್ರಥಮ ವಿಜ್ಞಾನ ವಿಭಾಗದಿಂದ ಮೊಹಮ್ಮದ್ ಹಿಷನ್ ಕೆ.ಎಸ್ ಮತ್ತು ಫ್ಲೆವಿಯ ಅಗ್ನಿಸ್ ಸಿ.ಫ್. ದ್ವಿತೀಯ ವಿಜ್ಞಾನ ವಿಭಾಗದಿಂದ ರಕ್ಷಿತಾ ಎಂ.ಎ ನಂತರ ನಡೆದ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಚುನಾವಣೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಕಾವ್ಯ ವೈ.ಎಸ್.ದ್ವಿತೀಯ ವಾಣಿಜ್ಯ ವಿಭಾಗ, ಜಂಟಿ ಕಾರ್ಯದರ್ಶಿಗಳಾಗಿ ಸಂಜು ಪಿ. ಟಿ. ದ್ವಿತೀಯ ವಾಣಿಜ್ಯ ವಿಭಾಗ ಮತ್ತು ರಕ್ಷಿತಾ ಎಂ.ಎ.ದ್ವಿತೀಯ ವಿಜ್ಞಾನ ವಿಭಾಗ ಇವರು ಅವಿರೋಧವಾಗಿ ಆಯ್ಕೆಯಾದರು.…

Read More

ಮಡಿಕೇರಿ NEWS DESK ಜು.13 : ಭಾರತೀಯ ವಾಯುಪಡೆಯಿಂದ ಅಗ್ನಿಪತ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಪ್ರವೇಶ 02/2027ರ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಹತೆ: ಅಭ್ಯರ್ಥಿಗಳು ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ.50 ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ಅಥವಾ ಡಿಪ್ಲೋಮಾ ವಿಭಾಗದ ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಆಟೋಮೊಬೈಲ್, ಕಂಪ್ಯೂಟರ್ ಸೈನ್ಸ್, ಇನ್‍ಸ್ಟ್ರುಮೆಂಟ್ ಟೆಕ್ನಾಲಜಿ, ಇನ್ಪಾರ್ಮೇಶನ್ ಟೆಕ್ನಾಲಜಿಯಲ್ಲಿ ಶೇ.50 ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ಇಲ್ಲವೇ ಎರಡು ವರ್ಷದ ವೃತ್ತಿಪರ ಕೋರ್ಸ್‍ಗಳಲ್ಲಿ ಭೌತಶಾಸ್ತ್ರ ಮತ್ತು ಗಣಿತ ವಿಷಯಗಳನ್ನು ವ್ಯಾಸಂಗ ಮಾಡಿ ಶೇ.50 ರಷ್ಟು ಅಥವಾ ಯಾವುದೇ ಪಿಯುಸಿ ವಿಭಾಗದಲ್ಲಿ ಶೇ.50 ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ವಯೋಮಿತಿ : ಅಭ್ಯರ್ಥಿಯು 2005 ಜುಲೈ, 01 ರಿಂದ 2010 ರ ಜನವರಿ, 01 ರ ನಡುವೆ ಜನಿಸಿರಬೇಕು. (ಎರಡೂ ದಿನಾಂಕಗಳು ಸೇರಿದಂತೆ) ಅರ್ಜಿ ಶುಲ್ಕ ರೂ.550 ಗಳಾಗಿದೆ. ಆಸಕ್ತ ಅಭ್ಯರ್ಥಿಗಳು ಸಂಪೂರ್ಣ ವಿವರ ಮತ್ತು ಸೂಚನೆಗಳಿಗೆ ವೆಬ್‍ಸೈಟ್ https://iafrecruitment.edcil.co.in ನ ಮುಖಾಂತರ ಮಾಹಿತಿ ಪಡೆಯಬಹುದು.…

Read More

ಮಡಿಕೇರಿ NEWS DESK ಜು.13 : ಸರ್ಕಾರದ ವಿವಿಧ ಇಲಾಖೆಗಳ ಮೂಲಕ ಅಲ್ಪಸಂಖ್ಯಾತರ ಅಭಿವೃದ್ಧಿಗೆ ನಿಗದಿಯಾಗಿರುವ ಕಾರ್ಯಕ್ರಮಗಳ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಪ್ರಧಾನಮಂತ್ರಿ ಅವರ 15 ಅಂಶದ ಕಾರ್ಯಕ್ರಮಗಳ ಕುರಿತು ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶಿಕ್ಷಣ, ಆರೋಗ್ಯ, ಮೂಲ ಸೌಲಭ್ಯ ಸೇರಿದಂತೆ ವಿವಿಧ ಕಾರ್ಯಕ್ರಮವನ್ನು ಅರ್ಹರಿಗೆ ತಲುಪಿಸುವುದು ಅತ್ಯಗತ್ಯವಾಗಿದೆ. ಆ ನಿಟ್ಟಿನಲ್ಲಿ ಎಲ್ಲಾ ಇಲಾಖೆ ಅಧಿಕಾರಿಗಳು ಸಕಾಲದಲ್ಲಿ ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಅಲ್ಪಸಂಖ್ಯಾತರಿಗಾಗಿ ಅಂಗನವಾಡಿ, ಶಾಲೆ ಹಾಗೂ ವಿದ್ಯಾರ್ಥಿ ನಿಲಯಗಳ ಅಭಿವೃದ್ಧಿ ಜೊತೆಗೆ ಮೂಲ ಸೌಲಭ್ಯ ಕಲ್ಪಿಸಬೇಕು. ಜೊತೆಗೆ ನಿವೇಶನ ಇಲ್ಲದಿದ್ದಲ್ಲಿ ಕೂಡಲೇ ಮಾಹಿತಿಯ ಪ್ರಸ್ತಾವನೆ ಸಲ್ಲಿಸುವಂತೆ ಸೋಮಶೇಖರ್ ಅವರು ಸಂಬoಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. *ಎಮ್ಮೆಮಾಡು ಶಾಲೆಯಲ್ಲಿ ಸಮಸ್ಯೆ* ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿ ಸದಸ್ಯರಾದ ಹನೀಫ್ ಅವರು ಅಲ್ಪಸಂಖ್ಯಾತರ ಸ್ಥಿತಿಗತಿಯನ್ನು ಸುಧಾರಿಸುವ ನಿಟ್ಟಿನಲ್ಲಿ…

Read More

ಹಾರಂಗಿ NEWS DESK ಜು.13 : ಕೊಡಗು ಜಿಲ್ಲೆಯ ಕುಶಾಲನಗರ ಹುದುಗೂರು ಬಳಿ ಹಾರಂಗಿ ಅಣೆಕಟ್ಟೆ ಆವರಣಕ್ಕೆ ಕಾಡಾನೆ ಲಗ್ಗೆ ಮಾಡಿ ಅಲ್ಲಿನ ಗೇಟ್ ಗಳಿಗೆ ಹಾನಿ ಮಾಡಿದ ಘಟನೆ ನಡೆದಿದೆ. ಮೀಸಲು ಅರಣ್ಯದಿಂದ ಹಾರಂಗಿ ಅಣೆಕಟ್ಟು ಉತ್ತರ ದಿಕ್ಕಿನ ದ್ವಾರದ  ಗೇಟ್ ಮೂಲಕ ಬಂದಿರುವ ಕಾಡಾನೆ ಅಲ್ಲಿರುವ ಆವರಣ ಗೋಡೆಯ ಪಿಲ್ಲರ್, ಕಬ್ಬಿಣದ ಗೇಟ್ಗಳನ್ನು ಹಾನಿ ಮಾಡಿದ ದೃಶ್ಯ ಆ ಭಾಗದಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಗಳಲ್ಲಿ ದಾಖಲಾಗಿದೆ. ಸೋಮವಾರ ಮುಂಜಾನೆ 4 ಗಂಟೆಗೆ ಈ ಘಟನೆ ನಡೆದಿದ್ದು ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಆನೆಯನ್ನು ಕಾಡಿಗೆ ಅಟ್ಟುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಅಣೆಕಟ್ಟು ವಿಭಾಗದ ಕಾರ್ಯಪಾಲಕ ಅಭಿಯಂತರ ಪುಟ್ಟಸ್ವಾಮಿ ತಿಳಿಸಿದ್ದಾರೆ.

Read More

ಮಡಿಕೇರಿ NEWS DESK ಜು.13 : ಕೊಡಗಿನ ಕೂಡಿಗೆಯ ಸೈನಿಕ ಶಾಲೆ ದೇಶದಲ್ಲೇ ಅತ್ಯಂತ ವೇಗವಾಗಿ ಪ್ರಗತಿಯನ್ನು ಕಾಣುತ್ತಿರುವ ಸೈನಿಕ ಶಾಲೆಗಳಲ್ಲಿ ಒಂದಾಗಿದೆ ಎಂದು ಶಾಲೆಯ ಪ್ರಾಂಶುಪಾಲ ಕರ್ನಲ್ ಅಮರ್ ಜೀತ್ ಸಿಂಗ್ ತಿಳಿಸಿದ್ದಾರೆ. ಸೈನಿಕ ಶಾಲೆಯ ಕುವೆಂಪು ವಿವಿಧೋದ್ದೇಶ ಸಭಾಂಗಣದಲ್ಲಿ ನಡೆದ 7ನೇ ಹಳೇ ವಿದ್ಯಾರ್ಥಿಗಳ ಸಮಾವೇಶ “ಕೋಡಾಕ್”ನಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶಾಲೆಯು ಚಾರಿತ್ರ್ಯ ನಿರ್ಮಾಣ, ಶೈಕ್ಷಣಿಕ ಶ್ರೇಷ್ಠತೆ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಬದ್ಧವಾಗಿದೆ. ಭಾರತೀಯ ನೌಕಾಪಡೆಯ ಸ್ಕ್ವಾಡ್ರನ್ ಲೀಡರ್ ದೀಪಕ್ ನಾಯಕ್ ಅವರು ಪ್ರಸಕ್ತ ಸಾಲಿನ ಸೆಪ್ಟೆಂಬರ್‌ನಲ್ಲಿ ಆಡಳಿತಾಧಿಕಾರಿಯಾಗಿ ಶಾಲೆಗೆ ಸೇರ್ಪಡೆಯಾಗುವ ವಿಚಾರವನ್ನು ಹಂಚಿಕೊoಡರಲ್ಲದೆ, ಶಾಲೆಯೊಂದಿಗಿನ ಹಳೇ ವಿದ್ಯಾರ್ಥಿಗಳ ಸಂಬoಧವನ್ನು ಶ್ಲಾಘಿಸಿದರು. ಕೋಡಾಕ್ ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಶಫೀವುಲ್ಲಾರವರು ದೀಪ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಂಸ್ಥೆಯೊoದಿಗಿನ ಬಾಂಧವ್ಯವನ್ನು ಬಲಪಡಿಸಲು ಮತ್ತು ಶಾಲೆಯ ಬೆಳವಣಿಗೆಗೆ ಹಳೆ ವಿದ್ಯಾರ್ಥಿಗಳ ಸಂಘ ಕೈಗೊಂಡಿರುವ ವಿವಿಧ ಕಾರ್ಯಗಳ ಕುರಿತು ವಿವರಿಸಿದರು. *ಬಹುಮಾನ ವಿತರಣೆ* ಈ ಸಂದರ್ಭ ಕರ್ನಲ್ ಅಮರ್ ಜೀತ್ ಸಿಂಗ್…

Read More

ಮಡಿಕೇರಿ NEWS DESK ಜು.13 : ದೇಶ ಸೇವೆ ಮಾಡಿ ತವರಿಗೆ ಮರಳಿದ ಅರೆಸೇನಾ ಪಡೆಯ ನಿವೃತ್ತ ಯೋಧರನ್ನು ಕಡೆಗಣಿಸುವುದು ಸರಿಯಲ್ಲ ಎಂದು ಕೊಡಗು ಜಿಲ್ಲಾ ಅರೆಸೇನಾ ಪಡೆ ನಿವೃತ್ತ ಯೋಧರ ಒಕ್ಕೂಟ ಬೇಸರ ವ್ಯಕ್ತಪಡಿಸಿದೆ. ಮಡಿಕೇರಿ ಕೊಡವ ಸಮಾಜದ ಸಭಾಂಗಣದಲ್ಲಿ ನಡೆದ ಕೊಡಗು ಜಿಲ್ಲಾ ಅರೆಸೇನಾ ಪಡೆ ನಿವೃತ್ತ ಯೋಧರ ಒಕ್ಕೂಟದ 14ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಒಕ್ಕೂಟದ ಜಿಲ್ಲಾಧ್ಯಕ್ಷ ಎಂ.ಜಿ.ಯತೀಶ್ ಅವರು ಅರೆಸೇನಾ ಪಡೆಯ ನಿವೃತ್ತ ಯೋಧರಿಗೆ ನಿವೇಶನ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ನೀಡಲು ಆಡಳಿತ ವ್ಯವಸ್ಥೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ದೇಶ ಸೇವೆ ಮಾಡಿದ ನಿವೃತ್ತ ಯೋಧರಿಗೆ ನ್ಯಾಯಯುತವಾಗಿ ಸಿಗಬೇಕಾದ ಭೂಮಿಯನ್ನು ಹಂಚಿಕೆ ಮಾಡದೆ ತೊಂದರೆ ನೀಡುತ್ತಿರುವುದು ವಿಪರ್ಯಾಸ. ಅರೆಸೇನಾಪಡೆಯ ಯೋಧರ ಸ್ಮಾರಕ ಭವನ, ಕ್ಯಾಂಟೀನ್ ವ್ಯವಸ್ಥೆ ಮತ್ತು ಕಚೇರಿಗಾಗಿ ಸ್ವಂತ ನಿವೇಶನದ ಅಗತ್ಯವಿದ್ದು, ಸರಕಾರ ಯಾವುದೇ ತಕರಾರಿಲ್ಲದೆ ಜಾಗ ಮಂಜೂರಾತಿ ಮಾಡಬೇಕೆಂದು ಮನವಿ ಮಾಡಿದರು. ನಿವೃತ್ತ ಯೋಧರಿಗೆ ಕೇಂದ್ರ ಸರಕಾರದ…

Read More