ವಿರಾಜಪೇಟೆ ಸೆ.2 NEWS DESK : ಅಮ್ಮತ್ತಿ ಒಂಟಿ ಅಂಗಡಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ವಲಯ ಮಟ್ಟದ ಪ್ರಾಥಮಿಕ ವಿಭಾಗದ ಕ್ರೀಡಾಕೂಟದ ಖೋ ಖೋ ವಿಭಾಗದಲ್ಲಿ ಕಾವೇರಿ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಬಾಲಕಿಯರ ವಿಭಾಗದಲ್ಲಿ ಪಾಲೇಯಂಡ ಶಾನ್ವಿ ಪೊನ್ನಪ್ಪ ಎಸ್, ಮಾಲೇಟ್ಟಿರ ಛಾಲ್ಸಿ ಜಿ,ನಡುಮನೆ ಮೋಕ್ಷಿತಾ, ಕಂಜಿತಂಡ ಲಿವ್ಯ ಸಿ, ಫಾತಿಮತ್ ಶಿಫಾ, ನೇಮಿರ ಶಿಷ್ಟ ಎ, ಜನನಿ ಎಸ್, ವೈಷ್ಣವಿ, ಶ್ರೇಯ ಎಂ.ಎಸ್, ತಾತಂಡ ಧನ್ವಿ ದೇಚಕ್ಕ ಟಿ, ಕಾಳೆಂಗಡ ದೃಶ್ಯ ಕಾವೇರಮ್ಮ, ನಫಿಸತ್ ಮಿಸ್ರಿಯ,ಶಜಾ ಫಾತಿಮಾ ಸ್ಪರ್ಧಿಸಿದ್ದಾರೆ. ಬಾಲಕರ ವಿಭಾಗದಲ್ಲಿ ಹಿತಾರ್ಥ್ ಪಿ. ಜಿ, ಯಶ್ವಿನ್ ಸುಬ್ಬಯ್ಯ ಬಿ. ಎಲ್, ತನಿಶ್ ನಾನಯ್ಯ ಕನೀಶ್ ಪುಟ್ಟಪ್ಪ ಮೊಹಮ್ಮದ್ ದಿ ಯಾನ್, ನಜ್ವಾನ್ ಇಸ್ಮಾಯಿಲ್, ಮೊಹಮ್ಮದ್ ಜಿಧಾನ್, ಐಚoಡ ತಲಿಶ್ ತಿಮ್ಮಣ್ಣ, ಕರ್ನಂದ ಸನತ್ , ಹೃದಯ ಪಿ.ಜೆ,ಚಂಗ ಚಂಡ ಪ್ರಣಾಮ್, ಪಿ.ಎಸ್ ಗೌರವ್ ಕೃಷ್ಣನ್ ಸ್ಪರ್ಧಿಸಿದ್ದಾರೆ. ವಿದ್ಯಾರ್ಥಿಗಳಿಗೆ ಶಾಲೆಯ ದೈಹಿಕ ಶಿಕ್ಷಕರುಗಳಾದ ಶ್ರೀಮತಿ ಮೋನಿಕಾ…
ಲೇಖಕ: admin
ವಿರಾಜಪೇಟೆ ಸೆ.2 NEWS DESK : ಅಮ್ಮತಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ವಲಯ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟದ ಅಥ್ಲೆಟಿಕ್ಸ್ ವಿಭಾಗದಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ. 400 ಮೀಟರ್ ಬಾಲಕರ ಓಟದ ಸ್ಪರ್ಧೆಯಲ್ಲಿ ಹಿತಾರ್ಥ್ ಪಿ.ಜಿ. ದ್ವಿತೀಯ ಸ್ಥಾನ ಹಾಗೂ ಐಚಂಡ ಯು. ತಲಿಶ್ ತಿಮ್ಮಣ್ಣ ತೃತೀಯ ಸ್ಥಾನ ಪಡೆದಿದ್ದಾರೆ. 600 ಮೀಟರ್ ಬಾಲಕಿಯರ ಓಟದ ಸ್ಪರ್ಧೆಯಲ್ಲಿ ಅಮ್ಮಂಡ ಗಿಯಾನ ಎ. ತೃತೀಯ ಸ್ಥಾನ ಗಳಿಸಿದ್ದಾರೆ. 4×100 ಮೀಟರ್ ರಿಲೇ ಬಾಲಕಿಯರ ವಿಭಾಗದಲ್ಲಿ ನಡುಮನೆ ಮೋಕ್ಷಿತ ಎನ್.ಎಸ್., ಅಮ್ಮಂಡ ಗಿಯಾನ ಎ., ಮಾಲೆಟ್ಟಿರ ಚಾಲ್ಸಿ ಜಿ. ಹಾಗೂ ಪಾಲೇಯಂಡ ಶಾನ್ವಿ ಪೊನ್ನಮ್ಮ ಎಸ್. ಅವರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಇದೇ ರೀತಿ 4×100 ಮೀಟರ್ ರಿಲೇ ಬಾಲಕರ ವಿಭಾಗದಲ್ಲಿ ಕರ್ನಂದ ಸನತ್ ಮುತ್ತಣ್ಣ, ಹಿತಾರ್ಥ್ ಪಿ.ಜಿ., ಬಾರಿಕ್ ಯಶ್ವಿನ್ ಸುಬ್ಬಯ್ಯ ಎಲ್. ಹಾಗೂ ಅಮ್ಮಂಡ ತನಿಶ್ ನಾಣಯ್ಯ ಅವರ ತಂಡ ದ್ವಿತೀಯ…
ಮಡಿಕೇರಿ ಸೆ.2 NEWS DESK : ಅಮ್ಮತಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯಲ್ಲಿ ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರೌಢಶಾಲಾ ಖೋ ಖೋ ವಿಭಾಗದಲ್ಲಿ ಕಾವೇರಿ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಪುಗ್ಗೇರ ಗದಿನ್ ಬಿ. ಮೊಹಮ್ಮದ್ ಸಿನಾನ್ ಕೆ. ಎ, ಹುಮೈದ್ ಜೂಕಾಕೋ, ಮೊಹಮ್ಮದ್ ಅಬಿನಾಸ್ ಕೆ ಮುಜಮಿಲ್ ಎಂ.ಎಂ ಸುಮನ್ ರಾಜ್,ಅಕ್ಷಾನ್,ಯಶ್ವವಂತ್ ಬಿ. ಪಿ ಮೂಳಕಲ್ ದೈವಿಕ ಡಿ, ಚಾದಂಡ ಸೋಹನ್, ಕುಟ್ಟoಡ ಚಿರಾಗ್ ಚಂಗಪ್ಪ ಎಲ್, ಪೊಟ್ಟoಡ ಯಕ್ಷಿತ್ ಎಲ್, ಕೊಳ್ಳುವಾoಡ ಲವೀನ್ ಬೋಪಣ್ಣ. ಬಾಲಕಿಯರ ವಿಭಾಗದಲ್ಲಿ ಫಾತಿಮತ್ ಶಿಫಾ, ದಿಯಾ, ಹಂಸಿಕ, ಕಾಳೆಚಂಡ ದೇಚಮ್ಮ ಎಂ,ಪಟ್ಟಡ ದೇಚಮ್ಮ ಬಿ,ಹನ್ಸಿಕ,ನಿಯತಿ ರಾಜ ಪುರೋಹಿತ್, ಫಿದಾ ಫಾತಿಮಾ, ಕರ್ನoದ ಶತಕ ಕಾವೇರಮ್ಮ, ಕರ್ನಂದ ಕೃತಿಕ ಅಕ್ಕಮ ಕುಲ್ಲ ಚಂಡ ಭೂಮಿಕ ಭೋಜಮ್ಮ . ವಿದ್ಯಾರ್ಥಿಗಳಿಗೆ ಶಾಲೆಯ ದೈಹಿಕ ಶಿಕ್ಷಕರುಗಳಾದ ಮೋನಿಕಾ ಹಾಗೂ ಲಾವಣ್ಯ ತರಬೇತಿ ನೀಡಿದ್ದಾರೆ. ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ…
ಮಡಿಕೇರಿ ಸೆ.2 NEWS DESK : ಅಮ್ಮತೀಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ವಿದ್ಯಾರ್ಥಿಗಳು ವಿಜೇತರಾಗಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತಂಡದಲ್ಲಿ ಸ್ಪರ್ಧಿಸಿ ವಿಜೇತರಾದ ವಿದ್ಯಾರ್ಥಿಗಳು ಗುಡ್ಡoಡ ಮುತ್ತಮ್ಮ ಟಿ, ಚೊಯಮಂಡ ವರ್ಣ ಎಂ, ನೆಲಚಂಡ ಪೊನ್ನಮ್ಮ ಎನ್, ಬೋವ್ವೆರಿಯoಡ ಹನ್ಸಿಕಾ ಪೊನ್ನಪ್ಪ ಬಿ,ರಾನಿ ಯ ತಸ್ಲಿನ್, ಎ. ಅಮ್ಮಕಂಡ ಆಂಚಲ್ ತಂಗಮ್ಮ, ಹೋಲೀಕ ಪಿ, ಬೇರೇರಾ ಶಿಯಾನ ಮುತ್ತಣ್ಣ, ತಾತಂಡ ಗ್ರಂಥ ಕಾವೇರಪ್ಪ, ನಾಯಕಂಡ ಮಾನ್ಯ ತಂಗಮ್ಮ. ವಿದ್ಯಾರ್ಥಿಗಳಿಗೆ ಶಾಲೆಯ ದೈಹಿಕ ಶಿಕ್ಷಕರುಗಳಾದ ಮೋನಿಕಾ ಹಾಗೂ ಲಾವಣ್ಯ ರವರು ತರಬೇತಿಯನ್ನು ನೀಡಿರುತ್ತಾರೆ. ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಧೇ ಶ್ ಬಿ.ಎಸ್, ಕಾರ್ಯದರ್ಶಿಯರಾದ ವಿನೋದ್ ಪಿ.ಎನ್, ಮುಖ್ಯ ಶಿಕ್ಷಕಿಯಾದ ಪಾರ್ವತಿ ಪಿ. ಯು ಸಂಯೋಜಕಿಯಾದ ಅಮೃತ ಅರ್ಜುನ್ ಭೋದಕ ಬೋಧಕೇತರ ವೃಂದದವರು ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿ, ಮುಂದಿನ ಪಂದ್ಯಗಳಿಗೆ ಶುಭ ಹಾರೈಸಿರುತ್ತಾರೆ.
ಮಡಿಕೇರಿ ಸೆ.2 NEWS DESK : ತಾಲ್ಲೂಕು ಮಟ್ಟದ ಪ್ರಜಾಸೇವಾ ಆಂದೋಲನಾ ಸಭೆಯು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್, 05 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ. ಸಾರ್ವಜನಿಕರು ಪ್ರಜಾಸೇವಾ ಅಭಿಯಾನದ ಪ್ರಯೋಜನವನ್ನು ಪಡೆಯುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಅವರು ತಿಳಿಸಿದ್ದಾರೆ. ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಅವುಗಳಿಗೆ ಸಕಾಲದಲ್ಲಿ ಸೂಕ್ತ ಪರಿಹಾರ ನೀಡುವುದು ಸರ್ಕಾರದ ಆದ್ಯತೆ ಆಗಿದೆ. ಅದರಂತೆ, ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಹಾಗೂ ಶಾಸಕರ ಉಪಸ್ಥಿತಿಯಲ್ಲಿ ಪ್ರಜಾಸೇವೆ ಆಂದೋಲನ ಸಭೆ ನಡೆಯಲಿದೆ.
ಮಡಿಕೇರಿ ಸೆ.2 NEWS DESK : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿಯಲ್ಲಿ ಕರ್ನಾಟಕ ಆರ್ಥೋಪೆಡಿಕ್ ಅಸೋಸಿಯೇಷನ್ (KOA) ಹಾಗೂ ಸಂಸ್ಥೆಯ ಕೀಲು ಮತ್ತು ಮೂಳೆ ವಿಭಾಗದ ವತಿಯಿಂದ ಇದೇ ಮೊದಲ ಬಾರಿಗೆ ಮಧ್ಯವಾರ್ಷಿಕ ಸಮ್ಮೇಳನ ‘KOA-MYCON’ (Mid-Year Conference) ಅನ್ನು ಸೆಪ್ಟೆಂಬರ್ 5 ಮತ್ತು 6ರಂದು ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದೆ. ಈ ಬಾರಿಯ ಸಮ್ಮೇಳನವು ‘KNEE 360’ ಎಂಬ ಶೀರ್ಷಿಕೆಯಡಿ ನಡೆಯಲಿದ್ದು, ಮಂಡಿ ಚಿಪ್ಪು ಮತ್ತು ಕೀಲು ಸಮಸ್ಯೆಗಳ ಕುರಿತು ಸಮಗ್ರ ಅಧ್ಯಯನ ಹಾಗೂ ಚರ್ಚೆಗೆ ವೇದಿಕೆ ಕಲ್ಪಿಸಲಿದೆ. ಸಮ್ಮೇಳನದಲ್ಲಿ ಮಂಡಿ ಕೀಲುಗಳಿಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳು, ದಿನನಿತ್ಯದ ನಡಿಗೆ ಹಾಗೂ ಕಾರ್ಯಚಟುವಟಿಕೆಗಳಲ್ಲಿ ಎದುರಾಗುವ ತೊಂದರೆಗಳು, ಕ್ರೀಡಾಪಟುಗಳಲ್ಲಿ ಕಂಡುಬರುವ ಮಂಡಿ ಗಾಯಗಳು (Sports Injuries), ಸುಧಾರಿತ ಕೀಲು ಬದಲಿ ಶಸ್ತ್ರಚಿಕಿತ್ಸೆ (Arthroplasty), ಕೀಲು ತಪಾಸಣೆ ಮತ್ತು ಚಿಕಿತ್ಸಾ ವಿಧಾನಗಳು (Arthroscopy) ಸೇರಿದಂತೆ ನಾನಾ ಜಟಿಲ ಸಮಸ್ಯೆಗಳ ಕುರಿತು ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ತಜ್ಞ ವೈದ್ಯರು ಉಪನ್ಯಾಸ ನೀಡಲಿದ್ದಾರೆ. ಹಾಗೆಯೇ…
ಮಡಿಕೇರಿ, ಸೆ.2 NEWS DESK : ಸಂಸ್ಕೃತಿಯೊಂದಿಗೆ ಉತ್ತಮ ಸಂಸ್ಕಾರವನ್ನು ರೂಢಿಸಿಕೊಂಡಾಗ ಮಾತ್ರ ಉತ್ತಮ ಮನುಷ್ಯತ್ವ ರೂಪುಗೊಳ್ಳಲು ಸಾಧ್ಯ ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ ಹೇಳಿದರು. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ 19ನೇ ‘ಕೊಡವ ಪುಸ್ತಕ ಪತ್ತಾಯ’ವನ್ನು ಕೈಕೇರಿಯ ಸವಿತಾ ಸಮಾಜ ಕಟ್ಟಡದಲ್ಲಿ ಅನಾವರಣಗೊಳಿಸಿ ಅವರು ಮಾತನಾಡಿದರು. ವಿದ್ಯೆ ಮತ್ತು ಬುದ್ಧಿಯೊಂದಿಗೆ ಉತ್ತಮ ನಡೆ-ನುಡಿ ಹಾಗೂ ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು. ಸಮಾಜದಲ್ಲಿನ ಜಾತಿ ವ್ಯವಸ್ಥೆಯಿಂದ ದೂರ ಸರಿಯಲು ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಉತ್ತಮ ಪುಸ್ತಕಗಳನ್ನು ಓದುವ ಅಭ್ಯಾಸವನ್ನು ಪ್ರತಿಯೊಬ್ಬರೂ ರೂಢಿಸಿಕೊಳ್ಳಬೇಕು ಎಂದು ಹೇಳಿದರು. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ನೂತನ ಯೋಜನೆಯಾದ ‘ಕೊಡವ ಪುಸ್ತಕ ಪತ್ತಾಯ’ವನ್ನು ನಾಡಿನಾದ್ಯಂತ ಸಂಘ-ಸಂಸ್ಥೆಗಳು, ಸಮಾಜಗಳು, ದೇವನೆಲೆಗಳು ಹಾಗೂ ಐನ್ಮನೆಗಳಲ್ಲಿ ಸ್ಥಾಪಿಸಲಾಗುತ್ತಿದೆ. ಸಾರ್ವಜನಿಕರು ಈ ಯೋಜನೆಯ ಪ್ರಯೋಜನವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಸಂಘ-ಸಂಸ್ಥೆಗಳು, ಸಮಾಜಗಳು ಹಾಗೂ ಐನ್ಮನೆಗಳಿಗೆ ಅಕಾಡೆಮಿ ವತಿಯಿಂದ ನೀಡಲಾಗುತ್ತಿರುವ ದುಡಿ, ತಾಳ…
ಮಡಿಕೇರಿ ಸೆ.2 NEWS DESK : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಶಕ್ತಿ ಯೋಜನೆಗಳು ಮಹಿಳಾ ಸಬಲೀಕರಣದ ದಿಕ್ಕಿನಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಿದ್ದು, ಯಶಸ್ವಿಯಾಗಿ ಮೂರು ವರ್ಷಗಳ ಪಯಣವನ್ನು ಪೂರೈಸಿವೆ. ಆರ್ಥಿಕ ಸ್ವಾವಲಂಬನೆ ಹಾಗೂ ಸುರಕ್ಷಿತ ಮತ್ತು ಉಚಿತ ಸಂಚಾರಕ್ಕೆ ಅವಕಾಶ ಕಲ್ಪಿಸಿರುವ ಈ ಯೋಜನೆಗಳು ಮಹಿಳೆಯರ ಬದುಕಿನಲ್ಲಿ ಆಶಾಕಿರಣವಾಗಿವೆ. ಗೃಹಲಕ್ಷ್ಮಿ ಯೋಜನೆ: ಕುಟುಂಬದ ಯಜಮಾನಿಯಾಗಿರುವ ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಜಾರಿಗೊಳಿಸಲಾದ ಗೃಹಲಕ್ಷ್ಮಿ ಯೋಜನೆಯು ರಾಜ್ಯದ ಮಹಿಳೆಯರ ಸ್ವಾವಲಂಬನೆಗೆ ಉತ್ತೇಜನ ನೀಡುತ್ತಿದೆ. ಯೋಜನೆಯಿಂದ ದೊರೆಯುತ್ತಿರುವ ಆರ್ಥಿಕ ನೆರವನ್ನು ಫಲಾನುಭವಿ ಮಹಿಳೆಯರು ಮಕ್ಕಳ ಶಿಕ್ಷಣ, ಆರೋಗ್ಯ, ದಿನನಿತ್ಯದ ಕುಟುಂಬ ನಿರ್ವಹಣೆ ಸೇರಿದಂತೆ ವಿವಿಧ ಅಗತ್ಯ ವೆಚ್ಚಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಯು ಕೊಡಗು ಜಿಲ್ಲೆಯಲ್ಲಿಯೂ ಉತ್ತಮ ಸ್ಪಂದನೆ ಪಡೆದಿದ್ದು, ಜಿಲ್ಲೆಯ ಐದು ತಾಲೂಕುಗಳಲ್ಲಿ ಒಟ್ಟು 1,20,872 ಮಹಿಳೆಯರು ಯೋಜನೆಗೆ ಹೆಸರು ನೋಂದಾಯಿಸಿಕೊಂಡಿದ್ದು, ಮಡಿಕೇರಿ 31,549, ಸೋಮವಾರಪೇಟೆ 25,286, ಕುಶಾಲನಗರ 23,179, ವಿರಾಜಪೇಟೆ 21,691 ಮತ್ತು ಪೊನ್ನಂಪೇಟೆ ತಾಲ್ಲೂಕಿನಲ್ಲಿ…
ಮಡಿಕೇರಿ, NEWS DESK ಸೆ. 2: ಬ್ರೈನೋಬ್ರೈನ್ ಇಂಟರ್ನ್ಯಾಷನಲ್ ಸಂಸ್ಥೆಯ ವತಿಯಿಂದ ಇತ್ತೀಚೆಗೆ ಚೆನ್ನೈನ ಚೆನ್ನೈ ಟ್ರೇಡ್ ಸೆಂಟರ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 48ನೇ ರಾಷ್ಟ್ರ ಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ–2026ರಲ್ಲಿ ಮಡಿಕೇರಿಯ ಬ್ರೈನೋಬ್ರೈನ್ ಕೇಂದ್ರದ 34 ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ. ಸ್ಪರ್ಧೆಯಲ್ಲಿ ಮಡಿಕೇರಿ ಕೇಂದ್ರದ ವಿದ್ಯಾರ್ಥಿಗಳು ಒಟ್ಟು 21 ಚಾಂಪಿಯನ್ ಟ್ರೋಫಿ, 9 ಚಿನ್ನದ ಪದಕ ಹಾಗೂ 4 ಬೆಳ್ಳಿಯ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳ ಕಠಿಣ ಪರಿಶ್ರಮ ಮತ್ತು ಸಾಧನೆಯ ಹೆಗ್ಗಳಿಕೆ ವಿದ್ಯಾರ್ಥಿಗಳು, ಪೋಷಕರು ಹಾಗೂ ತರಬೇತುದಾರರಿಗೆ ಸಲ್ಲಬೇಕು ಎಂದು ತಿಳಿಸಲಾಗಿದೆ. ಕೇವಲ ಮೂರು ನಿಮಿಷಗಳಲ್ಲಿ ವಿವಿಧ ರೀತಿಯ ಲೆಕ್ಕಗಳನ್ನು ಅತ್ಯಂತ ಚುರುಕಾಗಿ ಮಾಡುವ ಮೂಲಕ ಈ ಅದ್ಭುತ ಯಶಸ್ಸು ಸಾಧಿಸಿದ ಮಕ್ಕಳನ್ನು ಹಾಗೂ ಅವರನ್ನು ಸ್ಪರ್ಧೆಗಾಗಿ ಚೆನ್ನೈಗೆ ಕರೆತಂದ ಪೋಷಕರನ್ನು ತರಬೇತುದಾರರಾದ ಮಾಪಂಗಡ ಕವಿತಾ ಕರುಂಬಯ್ಯ ಅವರು ಅಭಿನಂದಿಸಿದರು. ಬ್ರೈನೋಬ್ರೈನ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಶ್ರೀ ಆನಂದ್ ಸುಬ್ರಮಣ್ಯಂ ಹಾಗೂ ತಾಂತ್ರಿಕ ನಿರ್ದೇಶಕ ಅರುಲ್ ಸುಬ್ರಮಣ್ಯಂ ಅವರು ಉಪಸ್ಥಿತರಿದ್ದು, ಮಡಿಕೇರಿ ಬ್ರೈನೋಬ್ರೈನ್ ಕೇಂದ್ರದ ಮಕ್ಕಳ…
ಮಡಿಕೇರಿ, NEWS DESK ಸೆ. 2: 2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಕೊಡಗು ಜಿಲ್ಲೆಯಲ್ಲಿ ಆರಂಭಗೊಂಡಿದ್ದು, ಜಿಲ್ಲೆಯ 525 ಹಳ್ಳಿಗಳ ವ್ಯಾಪ್ತಿಯ ಒಟ್ಟು 2,60,798 ತಾಕುಗಳಲ್ಲಿ ಬೆಳೆ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. ಈ ಬಾರಿ ರೈತರು ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆಗಳ ವಿವರಗಳನ್ನು ಸ್ವತಃ ದಾಖಲಿಸಲು ಸರ್ಕಾರ ಅವಕಾಶ ಕಲ್ಪಿಸಿದ್ದು, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚಂದ್ರಶೇಖರ್ ಅವರು ರೈತರು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. ರೈತರು ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆಗಳ ವಿವರ ದಾಖಲಿಸಲು ಅಗತ್ಯವಿರುವ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಅನ್ನು ಗೂಗಲ್ ಪ್ಲೇ ಸ್ಟೋರ್ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು. ಆ್ಯಪ್ ಬಳಕೆಗೆ ಸಂಬಂಧಿಸಿದಂತೆ ರೈತರಿಗೆ ಮಾರ್ಗದರ್ಶನ ನೀಡಲು ಪ್ರತಿ ಗ್ರಾಮದಲ್ಲಿ ನುರಿತ ಖಾಸಗಿ ನಿವಾಸಿಗಳನ್ನು ನೇಮಿಸಲಾಗಿದೆ. ತಮ್ಮ ಗ್ರಾಮದ ನಿಯೋಜಿತ ಖಾಸಗಿ ನಿವಾಸಿಗಳ ವಿವರಗಳನ್ನು ಸಂಬಂಧಪಟ್ಟ ಕೃಷಿ ಅಥವಾ ಕಂದಾಯ ಇಲಾಖೆಯ ಕಚೇರಿಗಳಿಂದ ಪಡೆಯಬಹುದು ಎಂದು ತಿಳಿಸಿದ್ದಾರೆ. ಎಫ್ಐಡಿ ಸಂಖ್ಯೆ ಕಡ್ಡಾಯ ಬೆಳೆ…






