ಮಡಿಕೇರಿ NEWS DESK ಜ.5 : ಕೊಡವ ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸುವ ಪ್ರಕ್ರಿಯೆ ತ್ವರಿತವಾಗಿ ನಡೆಯಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಕೊಡವ ಭಾಷೆಗೆ ಭಾರತದ ಸಂವಿಧಾನದಡಿ ಭದ್ರತೆ ಒದಗಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕೆಂದು ಕೊಡವ ಭಾಷಿಕ ಸಮುದಾಯಗಳ ಕೂಟ ಒತ್ತಾಯಿಸಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಇಂದು ವಿರಾಜಪೇಟೆಯಲ್ಲಿ ಭೇಟಿಯಾದ ಕೊಡವ ಭಾಷಿಕ ಸಮುದಾಯಗಳ ಕೂಟದ ಅಧ್ಯಕ್ಷ ಡಾ.ಮೇಚಿರ ಸುಭಾಷ್ ನಾಣಯ್ಯ ನೇತೃತ್ವದ ನಿಯೋಗ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿತು. ಈ ಸಂದರ್ಭ ಮಾತನಾಡಿದ ಡಾ.ಮೇಚಿರ ಸುಭಾಷ್ ನಾಣಯ್ಯ ಅವರು ‘ಕೊಡವ ಭಾಷೆ’ ಮಾತನಾಡುವ 21 ಸಮುದಾಯಗಳ ತಾಯಿ ಭಾಷೆ ಕೊಡವ ಭಾಷೆಯಾಗಿದೆ. ಈ ಭಾಷೆಗೆ ಸುಮಾರು 2 ಸಾವಿರ ವರ್ಷಗಳ ಪ್ರಾಚೀನ ಇತಿಹಾಸವಿದ್ದು, ಕೊಡಗಿನ ಆಡುಭಾಷೆ ಮತ್ತು ವ್ಯವಹರಿಸುವ ಭಾಷೆಯಾಗಿ ಉಳಿದುಕೊಂಡಿದೆ ಎಂದರು. ಆದರೆ 2010 ರಲ್ಲಿ ಯುನೆಸ್ಕೋ ಸಂಸ್ಥೆ ಬಿಡುಗಡೆಗೊಳಿಸಿರುವ ಅಧಿಕೃತ ಮಾಹಿತಿಯ ಪ್ರಕಾರ ಭಾರತದ 99 ಭಾಷೆಗಳು ಅಳಿವಿನಂಚಿನಲ್ಲಿವೆ.…
ಲೇಖಕ: admin
ಮಡಿಕೇರಿ ಜ.5 NEWS DESK : 66/11 ಕೆ.ವಿ ವಿರಾಜಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ 33/11 ಕೆ.ವಿ ಸಿದ್ದಾಪುರ ವಿವಿ ಕೇಂದ್ರದಲ್ಲಿ ಜನವರಿ, 06 ರಂದು ಬೆಳಗ್ಗೆ 10 ರಿಂದ ಸಂಜೆ 5.30 ಗಂಟೆಯವರೆಗೆ 5ಎಂವಿಎ ಪರಿವರ್ತಕ ಅಳವಡಿಸುವ ಕಾಮಗಾರಿ ಕೈಗೊಂಡಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗುವುದರಿಂದ, ಸಿದ್ದಾಪುರ, ಕರಡಿಗೋಡು, ಅವರೆಗುಂದ, ಕೆಸವಿನಹಳ್ಳ, ಟೀಕ್ವುಡ್, ಆರೆಂಜ್ಕೌಂಟಿ, ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಮಡಿಕೇರಿ ಜ.5 NEWSDESK : ಕೊಡವ ಭಾಷೆಯನ್ನು ಭಾರತ ಸಂವಿಧಾನದ 8 ನೇ ಪರಿಚ್ಛೇದದಲ್ಲಿ ಸೇರ್ಪಡೆ ಮಾಡುವ ಕುರಿತು ಸರ್ಕಾರದಿಂದ ವರದಿ ಕೇಳಲಾಗಿದ್ದು, ಈ ಸಂಬಂಧ ಉಪ ಸಮಿತಿಗಳ ತಂಡವನ್ನು ರಚಿಸಿಕೊಂಡು ಕಾನೂನಾತ್ಮಕ ಮಾನದಂಡದನ್ವಯ ವರದಿ ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಸಲಹೆ ಮಾಡಿದ್ದಾರೆ. ಕೊಡವ ಭಾಷೆಯನ್ನು ಭಾರತ ಸಂವಿಧಾನದ 8ನೇ ಪರಿಚ್ಛೇದದಲ್ಲಿ ಸೇರ್ಪಡೆ ಕುರಿತು ವಿರಾಜಪೇಟೆಯ ಕೊಡವ ಸಮಾಜದ ಸಭಾಂಗಣದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಅವರು ಮಾತನಾಡಿದರು. ಕೊಡವ ಭಾಷೆಯನ್ನು ಭಾರತ ಸಂವಿಧಾನದ 8ನೇ ಪರಿಚ್ಛೇದದಲ್ಲಿ ಸೇರ್ಪಡೆ ಮಾಡಬೇಕೆಂದು ಹಲವು ದಶಕಗಳಿಂದ ಹೋರಾಟ ಮಾಡಿಕೊಂಡು ಬರಲಾಗಿದೆ. ಈಗಾಗಲೇ 2 ಸಲ ವರದಿ ಸಲ್ಲಿಸಲಾಗಿದೆ. ಹಾಗಾಗಿ ಕೊಡವ ಭಾಷೆ ಸಂವಿಧಾನದ 8ನೇ ಪರಿಚ್ಛೇದ ಸೇರ್ಪಡೆ ಪ್ರಕ್ರಿಯೆಯನ್ನು ಶಿಸ್ತುಬದ್ಧವಾಗಿ ನಿಯಮಾನುಸಾರದಂತೆ ನಡೆಸಬೇಕು. ಆ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸುವಂತೆ ಎ.ಎಸ್.ಪೊನ್ನಣ್ಣ ಅವರು ಮನವಿ ಮಾಡಿದರು. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಜೊತೆಗೆ ಕೊಡವ…
ಕುಶಾಲನಗರ, ಜ.5 NEWS DESK : ಸಮಾಜದಲ್ಲಿ ವೈಚಾರಿಕ ಪ್ರಜ್ಞೆ ಬೆಳೆಸುವುದರೊಂದಿಗೆ ಸಮಾಜದಲ್ಲಿ ಸರ್ವರಿಗೂ ಸಮ ಬಾಳು, ಸರ್ವರಿಗೂ ಸಮಪಾಲು ಸಿಗಬೇಕು ಎಂದು ಹಂಬಲಿಸಿದ ಕನ್ನಡದ ಮೇರು ಕವಿ ಕುವೆಂಪು ಎಂದು ಸಾಹಿತಿ, ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪುರಸ್ಕೃತರಾದ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ ಜೆ.ಸೋಮಣ್ಣ ತೊರೆನೂರಿನಲ್ಲಿ ಬಣ್ಣಿಸಿದರು. ಕುಶಾಲನಗರ ತಾಲ್ಲೂಕಿನ ತೊರೆನೂರು ಗ್ರಾಮದ ರೇವೇಗೌಡನಕೊಪ್ಪಲಿನ ಶನೇಶ್ವರ ದೇವಸ್ಥಾನದ ಆವರಣದಲ್ಲಿ “ಕಣಿವೆ ಕಟ್ಟೆ” ಕೊಡಗು ಬಳಗದ ವತಿಯಿಂದ ಭಾನುವಾರ ರಾಷ್ಟ್ರಕವಿ ಕುವೆಂಪು ಅವರ ವಿಶ್ವ ಮಾನವ ಸಂದೇಶದ ಮಹತ್ವ ಕುರಿತು ವಿಶೇಷ ಉಪನ್ಯಾಸ ನೀಡಿ, ಕುವೆಂಪು ಅವರು ವೈಚಾರಿಕತೆ ನೆಲಗಟ್ಟೆಯಲ್ಲಿ ತಮ್ಮ ಸಾಹಿತ್ಯ ರಚಿಸುವ ಮೂಲಕ ಜನರಲ್ಲಿ ವೈಚಾರಿಕತೆ ಬಗ್ಗೆ ಬೆಳಕು ಚೆಲ್ಲಿದ್ದಾರೆ ಎಂದರು. ಹುಟ್ಟುವ ಪ್ರತಿ ಮಗುವು ವಿಶ್ವಮಾನವನೇ! ಆ ನಂತರ ಆ ಮಗುವನ್ನು “ಜಾತಿ,ಮತ”ದ ಕಟ್ಟುಪಾಡುಗಳಿಂದ ಬಂಧಿಸಲಾಗುತ್ತದೆ. ಹಾಗಾಗ ಬಾರದು ಎಂದರು. ಯಾವುದೇ ವ್ಯಕ್ತಿ ಜಾತಿಯಿಂದ ಮುಖ್ಯನಾಗಬಾರದು, ನೈತಿಕ ವ್ಯಕ್ತಿತ್ವದಿಂದ ಮುಖ್ಯನಾಗಬೇಕು ಎಂಬ ಪರಿಕಲ್ಪನೆ…
ಮಡಿಕೇರಿ ಜ.5 NEWS DESK : ನಮ್ಮೊಳಗಿನ ‘ದೌರ್ಬಲ್ಯ’ವನ್ನು ಬಳಸಿಕೊಂಡು, ಆಧುನಿಕ ಸಾಮಾಜಿಕ ಜಾಲತಾಣಗಳ ಮೂಲಕ ನಡೆಯುವ ‘ಸೈಬರ್ ಕ್ರೈಂ’, ‘ಡಿಜಿಟಲ್ ಅರೆಸ್ಟ್’ ಮೊದಲಾದ ಆರ್ಥಿಕ ವಂಚನೆ ಪ್ರಕರಣಗಳ ಬಗ್ಗೆ ಸದಾ ಜಾಗೃತರಾಗಿರಿ ಮತ್ತು ಇತರರಲ್ಲಿ ಅರಿವು ಮೂಡಿಸಿ ಎಂದು ಕೊಡಗು ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಕರೆ ನೀಡಿದ್ದಾರೆ. ನಗರದ ಪೊಲೀಸ್ ಮೈತ್ರಿ ಭವನದಲ್ಲಿ ನಡೆದ ಮಡಿಕೇರಿ ಉಪ ವಿಭಾಗದ ‘ಜನ ಸಂಪರ್ಕ’ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಸ್ತುತ ಸಾಮಾಜಿಕ ಜಾಲತಾಣಗಳ ಮೂಲಕ ಹಣಕಾಸಿನ ವಂಚನೆ ಪ್ರಕರಣಗಳು, ಪ್ರಮುಖವಾಗಿ ಹಿರಿಯರು, ನಿವೃತ್ತ ಉದ್ಯೋಗಿಗಳನ್ನೆ ಗುರಿಯಾಗಿಸಿಕೊಂಡು ನಡೆಯುತ್ತಿದೆ. ತಮ್ಮನ್ನು ಸಂಪರ್ಕಿಸುವ ವಂಚಕರು ಹಣವನ್ನು ದುಪ್ಪಟ್ಟು ಮಾಡಿಕೊಡುವ ಆಮಿಷವನ್ನೊಡ್ಡಿ, ಆರಂಭಿಕ ಹಂತದಲ್ಲಿ ಸಣ್ಣ ಮೊತ್ತವನ್ನು ನೀವು ಅದರಲ್ಲಿ ತೊಡಗಿಸಿದಲ್ಲಿ ಹೆಚ್ಚಿನ ಮೊತ್ತವನ್ನು ನೀಡುತ್ತಾರೆ. ನಂತರದ ದಿನಗಳಲ್ಲಿ ನಿಮ್ಮಲ್ಲಿ ವಿಶ್ವಾಸವನ್ನು ಮೂಡಿಸುವ ಮೂಲಕ ದೊಡ್ಡ ಮೊತ್ತದ ಹಣವನ್ನು ಹೂಡುವಂತೆ ಪ್ರೇರೇಪಿಸಿ ವಂಚಿಸುತ್ತಾರೆ ಎಂದು ಎಚ್ಚರಿಕೆಯ ಮಾತುಗಳನ್ನಾಡಿದರು. ನಿಮ್ಮಲ್ಲಿನ ದೌರ್ಬಲ್ಯಗಳನ್ನೆ ಬಳಸಿಕೊಂಡು…
ಮಡಿಕೇರಿ ಜ.5 NEWS DESK : ಕೊಡಗಿನ ಚಿತ್ರಶಿಲ್ಪ ಕಲಾವಿದ ಬಿ.ಕೆ.ಗಣೇಶ್ ರೈ ಅವರು ವಿನ್ಯಾಸಗೊಳಿಸಿರುವ ಶ್ರೀ ಓಂಕಾರೇಶ್ವರ ದೇವಾಲಯದ ಐತಿಹಾಸಿಕ ಚಿತ್ರಕಥಾ ಪುಸ್ತಕ ಇಂದು ಲೋಕಾರ್ಪಣೆಗೊಂಡಿತು. ಶ್ರೀಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಅರ್ಪಿಸಿದ ನಂತರ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು. ಶ್ರೀ ಓಂಕಾರೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಅಪ್ಪನೆರವಂಡ ಚುಮ್ಮಿ ದೇವಯ್ಯ ಅವರು ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಮೂಡಿಬಂದಿರುವ ಚಿತ್ರಕಥಾ ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಶುಭ ಹಾರೈಸಿದರು. ಮಡಿಕೇರಿ ಪುರಸಭೆಯ ಮಾಜಿ ಅಧ್ಯಕ್ಷ ಹಾಗೂ ಶ್ರೀ ಓಂಕಾರೇಶ್ವರ ದೇವಸ್ಥಾನ ಸಮಿತಿಯ ಮಾಜಿ ಅಧ್ಯಕ್ಷ ಕೊಂಗಂಡ ಎಸ್.ದೇವಯ್ಯ ಅವರು ಅತಿಥಿಗಳಾಗಿ ಪಾಲ್ಗೊಂಡು ಪ್ರಥಮ ಕೃತಿಯನ್ನು ಸ್ವೀಕರಿಸಿದರು. 16ನೇ ಶತಮಾನದಲ್ಲಿ ಕೊಡಗನ್ನು ಆಳಿದ ಹಾಲೇರಿ ವಂಶದ ರಾಜ ಮನೆತನದ ಲಿಂಗರಾಜೇಂದ್ರ ಒಡೆಯರ್ 1820ರಲ್ಲಿ ನಿರ್ಮಿಸಿರುವ ಶ್ರೀಓಂಕಾರೇಶ್ವರ ದೇವಾಲಯದ ಐತಿಹಾಸಿಕ ಚಿತ್ರಕಥೆ ಕೊಡಗಿನ ಕಲಾವಿದ ಬಿ.ಕೆ.ಗಣೇಶ್ ರೈ ಅವರ ಪರಿಕಲ್ಪನೆಯಲ್ಲಿ ಡಿಜಿಟಲ್ ಗ್ರಾಫಿಕ್ಸ್ ಚಿತ್ರದೊಂದಿಗೆ ವಿನ್ಯಾಸಗೊಂಡಿದೆ. ಪುಸ್ತಕ ಲೋಕಾರ್ಪಣೆಗೊಂಡ ನಂತರ ಮಾತನಾಡಿದ ಬಿ.ಕೆ.ಗಣೇಶ್ ರೈ ಮಡಿಕೇರಿಯನ್ನು…
ವಿರಾಜಪೇಟೆ ಜ.5 NEWS DESK : ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜೀವಶಾಸ್ತ್ರ ಉಪನ್ಯಾಸಕಿಯಾಗಿ ಹಾಗೂ ಕಾಲೇಜಿನ ಪ್ರಾಂಶುಪಾಲೆಯಾಗಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಪ್ರಾಂಶುಪಾಲೆ ತಾತಂಡ ಜ್ಯೋತಿ ಪ್ರಕಾಶ್ ಅವರನ್ನು ಕಾಲೇಜಿನ ವತಿಯಿಂದ ಬೀಳ್ಕೊಡುಗೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಚಿಲ್ಲವಂಡ ಕಾವೇರಪ್ಪ, ಪ್ರಾಂಶುಪಾಲರ ಶಿಸ್ತು ಹಾಗೂ ಕರ್ತವ್ಯ ನಿಷ್ಠೆ ಸಂಸ್ಥೆಯ ಬೆಳವಣಿಗೆಗೆ ಭದ್ರ ಬುನಾದಿಯನ್ನು ಹಾಕಿದೆ. ಅವರ ಮಾರ್ಗದರ್ಶನದಲ್ಲಿ ಸಾವಿರಾರು ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ಕಂಡುಕೊಂಡಿದ್ದಾರೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಾಂಶುಪಾಲೆ ಜ್ಯೋತಿ ಪ್ರಕಾಶ್, ತಮ್ಮ ಸುದೀರ್ಘವಾದ ವೃತ್ತಿ ಜೀವನದ ಅನುಭವಗಳನ್ನು ಹಂಚಿಕೊಂಡು ಸಹೋದ್ಯೋಗಿಗಳ ಸಹಕಾರ ಹಾಗೂ ವಿದ್ಯಾರ್ಥಿಗಳ ಪ್ರೀತಿಯನ್ನು ಸ್ಮರಿಸಿ ಭಾವುಕರಾದರು. ಪ್ರಾಂಶುಪಾಲೆ ಜ್ಯೋತಿ ಅವರ ತಾಯಿ ನಾಮೇರ ಜಾನಕಿ ಕುಟ್ಟಪ್ಪ, ಕುಟುಂಬಸ್ಥರು, ಸಹ ಉಪನ್ಯಾಸಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪನ್ಯಾಸಕ ರೈಮಂಡ್ ಸ್ವಾಗತಿಸಿದರು, ಉಪನ್ಯಾಸಕಿ ಚೈತ್ರ ನಿರೂಪಿಸಿದರು, ಉಪನ್ಯಾಸಕಿ ಗಾಯತ್ರಿ…
ವಿರಾಜಪೇಟೆ ಜ.5 NEWS DESK : ವಿರಾಜಪೇಟೆ ಸಮೀಪದ ಬೇಟೋಳಿ ಗ್ರಾಮದ ಬಿ.ಬಿ.ರವಿನಂದನ್ ಬೋರ್ಕರ್ ಅವರು ಮೈಸೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಜರ್ನಲಿಸಂ ಹಾಗೂ ಮಾಸ್ ಕಮ್ಯುನಿಕೇಷನ್ ವಿಭಾಗದ ಪ್ರಾಧ್ಯಾಪಕಿ ಪ್ರೊ.ಸಪ್ನಾ ಎಂ.ಎಸ್. ಅವರ ಮಾರ್ಗದರ್ಶನದಲ್ಲಿ ಮಂಡಿಸಿದ integrity and Teaching Data Journalisam in Indian Universities: An empirical study of status,challenges and strategies ಎಂಬ ಮಹಾ ಪ್ರಬಂಧದಕ್ಕೆ ಬಿ.ಬಿ.ರವಿನಂದನ್ ಬೋರ್ಕರ್ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಡಾ.ಬಿ. ಬಿ.ರವಿನಂದನ್ ಬೋರ್ಕರ್ ರವರು ಬೆಂಗಳೂರಿನ ಸೆಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಜರ್ನಲಿಸಂ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಪ್ರಸ್ತುತ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ. ಇವರು ವಿರಾಜಪೇಟೆ ಬೇಟೋಳಿ ಗ್ರಾಮದ ನಿವೃತ್ತ ಸೈನಿಕರಾದ ಬಿ.ಎನ್. ಬಾಲಕೃಷ್ಣ ಬೋರ್ಕರ್ ಹಾಗೂ ಸುಲೋಚನ ಬೋರ್ಕರ್ ದಂಪತಿಗಳ ಪುತ್ರ.
ಮಡಿಕೇರಿ ಜ.5 NEWS DESK : ಕರ್ನಾಟಕದ ರಾಜ್ಯ ಸರ್ಕಾರವು ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿ ಜಾರಿಗೊಳಿಸಿರುವ ‘ಅಕ್ಕಪಡೆ’ ವಿಶೇಷ ಯೋಜನೆಯನ್ನು ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದು ಮಣಿ ಉದ್ಘಾಟಿಸಿದರು. ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಪಿ.ದಿನೇಶ್ ಕುಮಾರ್, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ, ಗೃಹರಕ್ಷಕರು, ಸೇಂಟ್ ಜೋಸೆಫ್ ಶಾಲೆಯ ವಿದ್ಯಾರ್ಥಿಗಳು ಹಾಜರಿದ್ದರು.
ಮೈಸೂರು ಜ.5 NEWS DESK : ಮಾಜಿ ಸಿಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆ ಮುರಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ ಎಂದು ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಾಜಿ ಸಿಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಮುರಿಯಲಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ. ಅರಸು ರವರು ಮೈಸೂರಿನವರೇ ಆಗಿರುವುದು ಸಂತೋಷದ ಸಂಗತಿ. ತಾಲ್ಲೂಕು ಬೋರ್ಡ್ ಸದಸ್ಯನಾದ ನಂತರದ ನನ್ನ ರಾಜಕೀಯ ಜೀವನದಲ್ಲಿ ಸಚಿವನಾಗುವ ಮತ್ತು ಮುಖ್ಯಮಂತ್ರಿಯಾಗುವ ನಿರೀಕ್ಷೆಯಿರಲಿಲ್ಲ. 13 ಚುನಾವಣೆಗಳನ್ನೂ ಎದುರಿಸಿ 8ಕ್ಕೂ ಹೆಚ್ಚು ಬಾರಿ ಗೆಲುವು ಸಾಧಿಸಿದ್ದೇನೆ ಎಂದರು. :: ದಾಖಲೆಗಳು ಮುರಿಯಲೆಂದೇ ನಿರ್ಮಾಣವಾಗುತ್ತವೆ :: ಕಡಿಮೆ ಜನಸಂಖ್ಯೆಯ ಅರಸು ಸಮುದಾಯದವರಾಗಿದ್ದ ದೇವರಾಜ ಅರಸು ಅವರು ಜನಪ್ರಿಯ ನಾಯಕರಾಗಿದ್ದರು. ಅಂತಹ ಮಹಾನ್ ನಾಯಕನಿಗೂ ಮತ್ತು…






