ಬೆಂಗಳೂರು ಫೆ.16 NEWS DESK : ಕರ್ನಾಟಕ ಬಜೆಟ್ : *ಕಂದಾಯ* 392. ಕಂದಾಯ ಇಲಾಖೆಯ ಭೂಮಿ, ಸರ್ವೆ ಮತ್ತು ನೋಂದಣಿ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಗಣಕೀಕರಣಗೊಳಿಸಿ, ಶಿಥಿಲಾವಸ್ಥೆಯಲ್ಲಿರುವ ದಾಖಲೆಗಳನ್ನು ಶಾಶ್ವತವಾಗಿ ಉಳಿಸಿ, ನಕಲಿ ದಾಖಲೆಗಳನ್ನು ಸೃಷ್ಟಿಸಲು ಅವಕಾಶವಿರದಂತೆ ಗಣಕೀಕೃತ ದಾಖಲೆಗಳನ್ನು ನಾಗರಿಕರು, ಸ್ವತಃ ಆನ್ ಲೈನ್ ನಲ್ಲಿ ಪಡೆದುಕೊಳ್ಳಲು ಅನುವಾಗುವಂತೆ ಭೂ ಸುರಕ್ಷಾ ಯೋಜನೆಯನ್ನು ಪ್ರಾಯೋಗಿಕವಾಗಿ ಆರಂಭಿಸಲಾಗುವುದು. 393. ಆಕಾರ್ಬಂದ್ ಮತ್ತು ಆರ್.ಟಿ.ಸಿ. ಯಲ್ಲಿನ ವಿಸ್ತೀರ್ಣವನ್ನು ಹೊಂದಾಣಿಕೆ ಮಾಡುವ ಮೂಲಕ ಹಿಡುವಳಿದಾರರಿಗೆ ತ್ವರಿತ ಸೇವೆ ಒದಗಿಸಲು ಆಕಾರ್ಬಂದ್ಗಳ ಗಣಕೀಕರಣ ಕಾರ್ಯವನ್ನು ಕೈಗೊಳ್ಳಲಾಗುವುದು. 394. ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಬಹು ಮಾಲೀಕತ್ವವುಳ್ಳ ಪಹಣಿಗಳನ್ನು ಅಳತೆಗೆ ಒಳಪಡಿಸುವ ಮೂಲಕ ಪ್ರತಿ ಹಿಡುವಳಿದಾರರಿಗೆ ಪೋಡಿ ಮಾಡಿ ಪ್ರತ್ಯೇಕ ಆರ್.ಟಿ.ಸಿ.ಯನ್ನು ವಿತರಿಸುವ ಅಭಿಯಾನವನ್ನು ಪ್ರಾರಂಭಿಸಲಾಗಿತ್ತು. ಬಾಕಿ ಉಳಿದಿರುವ ಗ್ರಾಮಗಳನ್ನು ಪೋಡಿ ಅಭಿಯಾನ 2.0 ರಡಿ ಪೋಡಿ ಮುಕ್ತ ಮಾಡಲು ಆದ್ಯತೆ ಮೇರೆಗೆ ಕ್ರಮ ವಹಿಸಲಾಗುವುದು. 395. ದರಖಾಸ್ತು ಪೋಡಿ ಅಭಿಯಾನದಡಿ ರೈತರ ಜಮೀನಿನ ದುರಸ್ತಿ…
ಲೇಖಕ: admin
ಮಡಿಕೇರಿ ಫೆ.16 NEWS DESK : ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಇತರರ ಬದುಕಿನಲ್ಲಿ ಬದಲಾವಣೆಗೆ ಕಾರಣರಾಗಬೇಕು. ಬದುಕಲೆಂದೇ ಸಂಘಟನೆಗಳಿಗೆ ಸೇರುವ ಬದಲಿಗೆ ಸಂಘಟನೆಗಳಿಗೆ ಸೇಪ೯ಡೆಯಾದ ಬಳಿಕ ಇತರರ ಬದುಕನ್ನು ಬದಲಾಯಿಸುವ ನಿಟ್ಟಿನಲ್ಲಿ ಪ್ರಯತ್ನ ಪಡಬೇಕು ಎಂದು ರೋಟರಿ ಜಿಲ್ಲೆ 3181 ನ ಗವನ೯ರ್ ಹೆಚ್.ಆರ್.ಕೇಶವ ಕರೆ ನೀಡಿದ್ದಾರೆ. ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಗೆ ಅಧಿಕೃತ ಭೇಟಿ ನೀಡಿದ ಸಂದಭ೯ ರೋಟರಿ ಸಭಾಂಗಣದಲ್ಲಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಹೆಚ್.ಆರ್.ಕೇಶವ್, ಸಮಾಜಕ್ಕೆ ನಾನಾ ರೀತಿಯ ಸೇವೆಗಳ ಮೂಲಕ ಒಳಿತನ್ನುಂಟು ಮಾಡಬೇಕೆಂಬ ಉದ್ದೇಶ ಹೊಂದಿರುವ ರೋಟರಿಯ ಧ್ಯೇಯಗಳೇ ಹೆಚ್ಚಿನ ಸಂಖ್ಯೆಯಲ್ಲಿ ಜನರು ರೋಟರಿ ಸದಸ್ಯರಾಗಲು ಪ್ರೇರಣೆಯಾಗಿದೆ ಎಂದು ಹೇಳಿದರು. ಸಂಘಟನೆಯೇ ಜೀವನವಲ್ಲ. ಆದರೆ ಇತರರ ಜೀವನದ ಮೇಲೆ ಉತ್ತಮ ಪರಿಣಾಮ ಬೀರಲು ಸಂಘಟನೆಗಳ ಮೂಲಕ ಸಾಧ್ಯವಿದೆ. ಇದನ್ನು ರೋಟರಿ ಸಂಸ್ಥೆಯ ಸದಸ್ಯರು ನಿರೂಪಿಸಿದ್ದಾರೆ ಎಂದು ಹೇಳಿದರು. ರೋಟರಿ ಸದಸ್ಯರು ಅಂತರರಾಷ್ಟ್ರೀಯ ರೋಟರಿಗೆ ನೀಡುವ ದೇಣಿಗೆಯು ಸಾವಿರಾರು ಸಮಾಜ ಸೇವಾ ಕಾಯ೯ಗಳಿಗೆ ಸಹಕಾರಿಯಾಗುತ್ತಿದೆ. ಲಕ್ಷಾಂತರ…
ನಾಪೋಕ್ಲು ಫೆ.16 NEWS DESK : ಹೊದ್ದೂರು ಗ್ರಾಮ ಪಂಚಾಯಿತಿಯ ವಾಟೆಕಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯುಷ್ಮಾನ್ ಇಲಾಖೆ ವತಿಯಿಂದ ಯೋಗ ತರಬೇತಿ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಯೋಗ ಗುರು ಕೌಶಿಕ್ , ವಿದ್ಯಾರ್ಥಿಗಳಿಗೆ ಯೋಗ ತರಬೇತಿಯನ್ನು ನೀಡಿ ಯೋಗದ ಮಹತ್ವ, ಉಪಯೋಗಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಕಾರ್ಯಕ್ರಮದಲ್ಲಿ ಆಡಳಿತ ವೈದ್ಯಾಧಿಕಾರಿಗಳು, ಪದಾಧಿಕಾರಿಗಳು, ಮಡಿಕೇರಿಯ ಜಿಲ್ಲಾ ಸರಕಾರಿ ಆಯುರ್ವೇದ ಆಸ್ಪತ್ರೆ, ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ಹಾಜರಿದ್ದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಫೆ.16 NEWS DESK : ಶ್ರೀ ಮಜಗದ್ಗುರು ಶಂಕರಾಚಾರ್ಯ ಮಹಾ ಸಂಸ್ಥಾನ, ಶ್ರೀ ಸಂಸ್ಥಾನ ಗೋಕರ್ಣ, ಶ್ರೀರಾಮಚಂದ್ರಪುರ ಮಠ, ಮುಳ್ಳೇರಿಯಾ ಮಂಡಲ ಅಂತರ್ಗತ ಕೊಡಗು, ಸುಳ್ಯ, ಗುತ್ತಿಗಾರು ಹಾಗೂ ಈಶ್ವರ ಮಂಗಲ ವಲಯಗಳ ಸಂಯುಕ್ತ ಆಶ್ರಯದಲ್ಲಿ ಜೇಡ್ಲದಲ್ಲಿನ ಗೋಪಾಲಕೃಷ್ಣ ದೇವಕಿ ಪಶು ಸಂಗೋಪನ ಕೇಂದ್ರದಲ್ಲಿ ಎರಡನೇ ವರ್ಷದ ಗೋ ಅಪ್ಪುಗೆ ಕಾರ್ಯಕ್ರಮ ನಡೆಯಿತು. ಗೋವುಗಳನ್ನು ಅಪ್ಪಿಕೊಳ್ಳುವ ಮೂಲಕ ವಿದ್ಯಾಥಿ೯ಗಳು ಹಸುವಿನ ಮಮತೆಯ ಮಹತ್ವ ಅರಿತರು. ಸಂಪಾಜೆ ಗ್ರಾ.ಪಂ ಅಧ್ಯಕ್ಷೆ ರಮಾದೇವಿ ಬಾಲಚಂದ್ರ ಕಳಗಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಕಣ್ಮರೆಯಾಗುತ್ತಿರುವ ಹಸು ಸಾಕಾಣಿಕೆ ಹಾಗೂ ಗೋಪ್ರೇಮ ಇನ್ನು ಮುಂದೆ ಹೊಸ ಪೀಳಿಗೆಯಲ್ಲಿ ಮತ್ತೊಮ್ಮೆ ಕಾಣಿಸುವಂತಾಗಬೇಕು. ಆ ಮೂಲಕ ಜನರು ಮತ್ತೊಮ್ಮೆ ನೈಸರ್ಗಿಕ ಕೃಷಿ ಚಟುವಟಿಕೆ ಹಾಗೂ ಇನ್ನಿತರ ದೇಶೀಯ ಸ್ವಾವಲಂಬನೆ ಕಡೆಗೆ ಚಿತ್ತಹರಿಸುವಂತಾಗಬೇಕೆಂದು ಆಶಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜೇಡ್ಲ ಗೋಶಾಲೆಯ ಅಧ್ಯಕ್ಷ ಡಾ.ರಾಜಾರಾಮ್ ಮಾತನಾಡಿ, ಪಾಶ್ಚಾತ್ಯ ದೇಶದಲ್ಲಿ ಈಗ ಗೋ ಅಪ್ಪುಗೆ ಹಲವು ಕಾಯಿಲೆಗಳಿಗೆ ಮದ್ದೆಂದು ಕಂಡುಹಿಡಿದು ಇದನ್ನೇ ಹೆಚ್ಚಾಗಿ…
ಬೆಂಗಳೂರು, ಫೆ 16 NEWS DESK : ಹಲವು ದಿನಗಳ ಬೇಡಿಕೆಯಂತೆ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಇನ್ನಷ್ಟು ದಕ್ಷತೆ ತರುವ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿರುವುದಕ್ಕೆ ವೈದ್ಯಕೀಯ ಶಿಕ್ಷಣ ಜೀವನೋಪಾಯ ಹಾಗೂ ಕೌಶಲ್ಯಾಭಿವೃಧಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅಭಿನಂದನೆ ಸಲ್ಲಿಸಿದ್ದಾರೆ. ಕೊಡಗು ವೈದ್ಯಕೀಯ ಸಂಸ್ಥೆಯಲ್ಲಿ ಅಪಾಯಕಾರಿ ಸಾಂಕ್ರಾಮಿಕ ರೋಗ, ಸೋಂಕುಗಳನ್ನು ಪತ್ತೆ ಹಚ್ಚಲು ವೈರಲ್ ರಿಸರ್ಚ್ ಮತ್ತು ಡಯಾಗ್ನಸ್ಟಿಕ್ ಲ್ಯಾಬರೋಟರಿ ನಿರ್ಮಾಣ, ಚಿತ್ರದುರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಅಗತ್ಯವಿರುವ ಹೊಸ ವೈದ್ಯಕೀಯ ಕಟ್ಟಡ, ವಿದ್ಯಾರ್ಥಿ ವಸತಿ ನಿಲಯ, ಸಿಬ್ಬಂದಿ, ವಸತಿ ಗೃಹ ನಿರ್ಮಾಣ ಕಾರ್ಯ ಪೂರ್ಣಗೊಳಿಸುತ್ತೇವೆ ಎಂದು ಹೇಳಿದ್ದಾರೆ. ವೈದ್ಯಕೀಯ ಶಿಕ್ಷಣ ಕ್ಷೇತ್ರವು ಸರ್ಕಾರಿ ವಲಯವೆಂದು ವ್ಯಾಪಕ ಬೆಳವಣಿಗೆ ಹೊಂದಿದ್ದು, ಇಲಾಖೆ ಕಾರ್ಯ ನಿರ್ವಹಣೆಯಲ್ಲಿ ಇನ್ನಷ್ಟು ದಕ್ಷತೆ ತರುವ ಕಾರಣಕ್ಕಾಗಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಿಸಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದಿದ್ದಾರೆ. ಪ್ರಸಕ್ತ ಸಾಲಿನ ಬಜೆಟ್ನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು…
ನಾಪೋಕ್ಲು ಫೆ.16 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕೊಡಗು ಜಿಲ್ಲಾ ಘಟಕದ ವತಿಯಿಂದ ಕೊಡಗು ಜಿಲ್ಲೆಯ ಪಾನಮುಕ್ತ ನವಜೀವನ ಸಮಿತಿ ಸದಸ್ಯರಿಗೆ ತರಬೇತಿ ಕಾರ್ಯಾಗಾರ ನಡೆಯಿತು. ನಗರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ನಡೆಯದ ಕಾರ್ಯಕ್ರಮವನ್ನು ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಉದ್ಘಾಟಿಸಿ, ನಮ್ಮ ಜೀವನದಲ್ಲಿ ಸೇವಾ ಮನೋಭಾವನೆಯನ್ನು ರೂಡಿಸಿಕೊಂಡರೆ ನಮ್ಮ ಜನ್ಮ ಸಾರ್ಥಕವಾಗಲೂ ಸಾಧ್ಯ. ಜೊತೆಗೆ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಪಾನಮುಕ್ತರನ್ನು ನಿರಂತರವಾಗಿ ಅನುಪಾಲನೆ ಮಾಡುವುದು ಒಂದು ಪುಣ್ಯದ ಕೆಲಸ ಎಂದರು. ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ಮಾತನಾಡಿ, ಮಗುವನ್ನು ತಾಯಿಯು ಕೈಹಿಡಿದು ಪೋಷಿಸಿದಂತೆ ನವ ಜೀವನ ಸಮಿತಿ ಸದಸ್ಯರನ್ನು ಪೋಷಣೆ ಮಾಡಿದಾಗ ಜನಜಾಗೃತಿ ಕಾರ್ಯಕ್ರಮ ಯಶಸ್ವಿಯಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಕೊಡಗು ಜಿಲ್ಲೆಯಲ್ಲಿ ಒಟ್ಟು ಇದುವರೆಗೆ 55 ಮದ್ಯವರ್ಜನ ಶಿಬಿರಗಳನ್ನ ಅತ್ಯುತ್ತಮವಾಗಿ ಆಯೋಜಿಸಲಾಗಿದೆ. ಶಿಬಿರಗಳಲ್ಲಿ…
ಬೆಂಗಳೂರು ಫೆ.16 NEWS DESK *ಅಲ್ಪಸಂಖ್ಯಾತರ ಕಲ್ಯಾಣ* 184. ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡುವ ಮೂಲಕ ಅವರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು; • 50 ಸಂಖ್ಯಾಬಲವುಳ್ಳ 50 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು. • 100 ಸಂಖ್ಯಾಬಲವುಳ್ಳ 100 ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲಾಗುವುದು. • 100 ಹೊಸ ಮೌಲಾನಾ ಆಜಾದ್ ಶಾಲೆಗಳನ್ನು ತೆರೆಯಲಾಗುವುದು. • ಸ್ವಂತ ಕಟ್ಟಡವನ್ನು ಹೊಂದಿರುವ 25 ಶಾಲೆಗಳಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಪ್ರಾರಂಭಿಸಲಾಗುವುದು. 185. ಸರ್ಕಾರಿ/ಖಾಸಗಿ ಕಾಲೇಜುಗಳಲ್ಲಿ ಬಿ.ಎಸ್ಸಿ. ನರ್ಸಿಂಗ್/ ಜಿ.ಎನ್.ಎಂ ನರ್ಸಿಂಗ್ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಶುಲ್ಕ ಭರಿಸುವ ಯೋಜನೆಯನ್ನು ಪುನಃ ಪ್ರಾರಂಭ ಮಾಡಲಾಗುವುದು. 186. ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಉದ್ಯಮಶೀಲರು ಸ್ಥಾಪಿಸುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಹೊಸ ಘಟಕಗಳನ್ನು ಸ್ಥಾಪಿಸಲು ಹಾಗೂ ಅಸ್ತಿತ್ವದಲ್ಲಿರುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಘಟಕಗಳ ಉನ್ನತೀಕರಣಕ್ಕೆ KSFC ಮೂಲಕ ಪಡೆಯುವ 10…
ಬೆಂಗಳೂರು ಫೆ.16 NEWS DESK : *ತೋಟಗಾರಿಕೆ* 43. ತೋಟಗಾರಿಕೆಗೆ ಸಂಬಂಧಿಸಿದ ತಾಂತ್ರಿಕ ಸಲಹೆ, ಮಾರುಕಟ್ಟೆ ಸಂಪರ್ಕ, ಬೇಸಾಯ ಪರಿಕರಗಳು ಮತ್ತು ಉತ್ಪನ್ನಗಳನ್ನು ಒಂದೇ ಸೂರಿನಡಿ ಒದಗಿಸುವ ಉದ್ದೇಶದಿಂದ ಆಯ್ದ ಜಿಲ್ಲೆಗಳಲ್ಲಿ ಕಿಸಾನ್ ಮಾಲ್ಗಳನ್ನು ಸ್ಥಾಪಿಸಲಾಗುವುದು. 44. ರಾಜ್ಯದಲ್ಲಿ 40,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯುತ್ತಿರುವ ಪುಷ್ಪ ಬೆಳೆಗಳ ಮಾರಾಟ ಮತ್ತು ರಫ್ತನ್ನು ಉತ್ತೇಜಿಸಲು ಬೆಂಗಳೂರಿನಲ್ಲಿ ಸುಸಜ್ಜಿತವಾದ ಅಂತಾರಾಷ್ಟ್ರೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆಯನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು. 45. ತೋಟಗಾರಿಕೆ ಬೆಳೆಗಳ ಸಂಸ್ಕರಣೆ ಮತ್ತು ರಫ್ತಿನ ಪ್ರಮಾಣ ಹೆಚ್ಚಿಸಲು ಕೊಯ್ಲೋತರ ನಿರ್ವಹಣಾ ಕೇಂದ್ರ (Packhouse) ಹಾಗೂ ಮೌಲ್ಯವರ್ಧನ ಸಂಸ್ಕರಣಾ ಘಟಕಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು. 46. ರಾಜ್ಯದಲ್ಲಿ ಅಡಿಕೆ ಬೆಳೆಯಲ್ಲಿ ಕಂಡು ಬರುವ ಮಾರಕ ರೋಗಗಳನ್ನು ನಿಯಂತ್ರಿಸಲು ಪೂರಕವಾದ ಸಂಶೋಧನೆ ಹಾಗೂ ಸಸ್ಯ ಸಂರಕ್ಷಣೆ ಚಟುವಟಿಕೆಗಳನ್ನು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಕೈಗೊಳ್ಳಲಾಗುವುದು. 47. ತೋಟಗಾರಿಕೆ ಬೆಳೆಗಳಲ್ಲಿ ಹೆಚ್ಚು ಇಂಗಾಲವನ್ನು ಹಿಡಿದಿಟ್ಟುಕೊಳ್ಳುವ ಬೆಳೆಗಳನ್ನು ಗುರುತಿಸಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ Carbon Credit…
ಮಡಿಕೇರಿ ಫೆ.16 NEWS DESK : ಪೊನ್ನಂಪೇಟೆ ತಾಲೂಕು ಬಾಡಗರಕೇರಿಯ ಶ್ರೀ ಮೃತ್ಯುಂಜಯ ದೇವಾಲಯದಲ್ಲಿ ಫೆ.19 ರಿಂದ 29 ರವರೆಗೆ ವಾರ್ಷಿಕೋತ್ಸವ ನಡೆಯಲಿದೆ. ಪ್ರತಿ ದಿನ ಬೆಳಿಗ್ಗೆ 5 ಗಂಟೆಯಿಂದ ವಿಶೇಷ ಪೂಜೆಗಳು, ಅಭಿಷೇಕ, ಇರುಬೆಳಕು, ನಿತ್ಯ ಪೂಜೆ ತುಲಭಾರ ನಡೆಯಲಿದ್ದು, ಸಂಜೆ 7 ರ ನಂತರ ತುಚಂಬಲಿ, ಉತ್ಸವ ಮೂರ್ತಿಯ ಪ್ರದಕ್ಷಿಣೆ, ದರ್ಶನ ಜರಗಲಿದೆ. ವಾರ್ಷಿಕೋತ್ಸವದ ಕೊನೆಯ ದಿನವಾದ ಫೆ.29ರಂದು ವಿಶೇಷ ಪೂಜೆಗಳೊಂದಿಗೆ ಮಧ್ಯಾಹ್ನ 3 ಗಂಟೆಗೆ ಶಾಸ್ತ್ರೋತ್ತವಾಗಿ 12 ತೆಂಗಿನಕಾಯಿಗೆ ಗುಂಡು ಹೊಡೆಯುವ ಕಾರ್ಯಕ್ರಮ ನಡೆಯಲಿದೆ. ಸಂಜೆ 5 ಗಂಟೆಗೆ ಉತ್ಸವ ಮೂರ್ತಿಯ ದರ್ಶನ, ಅವಬ್ರತ್ ಸ್ಥಾನ, ರಾತ್ರಿ 8.30 ಗಂಟೆಗೆ ಊರಿನ ಎಲ್ಲಾ ಮಹಿಳೆಯರು ಸಾಂಪ್ರದಾಯಿಕ ಉಡುಗೆಯೊಂದಿಗೆ ಉತ್ಸವ ಮೂರ್ತಿಯನ್ನು ಸ್ವಾಗತಿಸುವ ಕಾರ್ಯಕ್ರಮ ಜರಗಲಿದೆ. ಸಂಜೆ 6 ಗಂಟೆಯಿಂದ ಶ್ರೀನಿವಾಸ ತಂಡದವರಿಂದ ಭಕ್ತಿಗೀತೆಗಳ ಕಾರ್ಯಕ್ರಮ, ವಿಶೇಷ ಅಲಂಕಾರ ಪೂಜೆ ಹಾಗೂ ಅನ್ನಸಂತರ್ಪಣೆ ನೆರವೇರಲಿದೆ. ಪ್ರತಿದಿನ ಭಕ್ತಾದಿಗಳಿಗೆ ಬೆಳಿಗ್ಗೆ ಮಧ್ಯಾಹ್ನ ಹಾಗೂ ರಾತ್ರಿ ತೀರ್ಥ ಪ್ರಸಾದ ಹಾಗೂ ಅನ್ನದಾನ…
ಬೆಂಗಳೂರು ಫೆ.16 NEWS DESK : ಸನ್ಮಾನ್ಯ ಸಭಾಧ್ಯಕ್ಷರೆ, 1. ನಾನು 2024-25ನೇ ಸಾಲಿನ ಆಯವ್ಯಯವನ್ನು ಸದನದ ಮುಂದೆ ಮಂಡಿಸುತ್ತಿದ್ದೇನೆ. 2. ಭಾರತ ದೇಶ ಗಣರಾಜ್ಯವಾಗಿ 75ನೇ ವರ್ಷಕ್ಕೆ ಕಾಲಿಟ್ಟಿದೆ. ಈ ಸುಸಂದರ್ಭದಲ್ಲಿ ನನ್ನ 1೫ನೇ ಆಯವ್ಯಯವನ್ನು ಮಂಡಿಸಲು ಹರ್ಷಿಸುತ್ತೇನೆ. 3. ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನದ ಆಶಯದಂತೆ ನ್ಯಾಯ, ಸಮಾನತೆ ಹಾಗೂ ಭ್ರಾತೃತ್ವದ ತಳಹದಿಯ ಮೇಲೆ ಕರ್ನಾಟಕ ಮಾದರಿ ಅಭಿವೃದ್ಧಿಯ ಹೊಸ ದೃಷ್ಟಾಂತವನ್ನು ರೂಪಿಸಲು ನಾವು ಹೆಜ್ಜೆಯಿಟ್ಟಿದ್ದೇವೆ. 4. ಸಾಮಾಜಿಕ ನ್ಯಾಯ ಎನ್ನುವುದು ನಮ್ಮ ನಂಬಿಕೆ ಮಾತ್ರವಲ್ಲ; ಅದು ಉದಾತ್ತ ಜೀವನ ದೃಷ್ಟಿಕೋನ. ಸಮ ಸಮಾಜ ನಿರ್ಮಾಣದಲ್ಲಿ ಬಸವಾದಿ ಶರಣರ ಕಾಯಕ ಮತ್ತು ದಾಸೋಹ ತತ್ವಗಳು ನಮಗೆ ಪ್ರೇರಣೆಯಾಗಿದೆ. ದುಡಿಮೆಯ ಒಂದು ಭಾಗವನ್ನು ದಾಸೋಹಕ್ಕೆ ಬಳಸಬೇಕೆಂಬ ಶರಣರ ಚಿಂತನೆ, ಸಮಾಜದಲ್ಲಿ ಸಂಪತ್ತಿನ ನ್ಯಾಯಯುತ ಹಂಚಿಕೆ ಮಾಡುವ ನಮ್ಮ ಆಶಯಕ್ಕೆ ಆಧಾರವಾಗಿದೆ. ಆಗದು ಎಂದು; ಕೈಲಾಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ ಮನಸೊಂದಿದ್ದರೆ ಮಾರ್ಗವು…






