ಲೇಖಕ: admin

ಬೆಂಗಳೂರು ಫೆ.16 NEWS DESK : ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು,  ದಶಕಗಳ ಕನಸು ನನಸಾಗಿದೆ. ದಾವಣಗೆರೆಯಲ್ಲಿ ಇದೇ ಫೆ.3 ಮತ್ತು 4 ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಭರವಸೆಯನ್ನು ಈಡೇರಿಸಿರುವುದಕ್ಕೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಧನ್ಯವಾದ ಸಲ್ಲಿಸಿದ್ದಾರೆ. ಮಂಡ್ಯ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿಯೂ ಉಚಿತ ಬಸ್ ಪಾಸ್ ಬಗ್ಗೆ ಕೆಯುಡಬ್ಲ್ಯುಜೆ ಮಂಡಿಸಿದ್ದ ಹಕ್ಕೊತ್ತಾಯ ಬಗ್ಗೆ ಮುಖ್ಯಮಂತ್ರಿಗಳು ಕೊಟ್ಟ ಮಾತಿನಂತೆ ನಡೆದುಕೊಂಡಿರುವುದನ್ನು ಕೆಯುಡಬ್ಲ್ಯುಜೆ ಸ್ಮರಿಸಿದ್ದು, ಅಭಿನಂದನೆ ಸಲ್ಲಿಸಿದೆ. ಬಸ್ ಪಾಸ್ ಬೇಡಿಕೆ ಈಡೇರಿಸಲು ಸ್ಪಂದಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಎಲ್ಲಾ ಹಂತದಲ್ಲಿಯೂ ಸಹಕಾರ ನೀಡಿದ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೂ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ವಿಶೇಷವಾಗಿ ಸ್ಮರಿಸಿ ಅಭಿನಂದಿಸಿದೆ. ಬಜೆಟ್ ನಲ್ಲಿ ಘೋಷಣೆ ಮಾಡಿರುವ ಬಸ್ ಪಾಸ್ ಯೋಜನೆಯನ್ನು…

Read More

ಬೆಂಗಳೂರು  ಫೆ.16  : ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಗುತ್ತಿಗೆ ಪದ್ದತಿ ರದ್ದುಪಡಿಸಿ ಸ್ಥಳೀಯ ಸಂಸ್ಥೆಗಳಿಂದಲೆ ನೇರವಾಗಿ ವೇತನ ಪಾವತಿಸಲು ಒಪ್ಪಿಗೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊರಗುತ್ತಿಗೆ ನೌಕರರ ಸಂಘ ಅಭಿನಂದಿಸಿದೆ. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಪೌರಚಾಲಕರು, ನೀರುಗಂಟಿಗಳು, ಬೀದಿ ದೀಪ ನಿರ್ವಾಹಕರು, ಲೋಡರ್ಸ್ ಕ್ಲೀನರ್ಸ್, ಯೂಜಿಡಿ ಕಾರ್ಮಿಕರು, ಸ್ಯಾನಿಟರಿ ಸೂಪರ್ ವೈಸರು ಸೇರಿದಂತೆ ಹತ್ತು ಸಾವಿರಕ್ಕು ಹೆಚ್ಚು ಮಂದಿ ದುಡಿಯುತ್ತಿದ್ದು.ಈ ನೌಕರರನ್ನು ನೇರಪಾವತಿಗೆ ತರುವಂತೆ ಕರ್ನಾಟಕ ರಾಜ್ಯ ನಗರಪಾಲಿಕೆ ನಗರಸಭೆ ಪುರಸಭೆ ಪಟ್ಟಣ ಪಂಚಾಯತಿ ಹೊರಗುತ್ತಿಗೆ ನೌಕರರ ಸಂಘ ಫೆ.13 ರಿಂದ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಂಡು ಫೆ.15 ರಂದು ಹೊರಗುತ್ತಿಗೆ ನೌಕರರ ನಡಿಗೆ ಮುಖ್ಯಮಂತ್ರಿಗಳ ಮನೆ ಕಡೆಗೆ ಎಂಬ ಕಾರ್ಯಕ್ರಮ ರೂಪಿಸಿತ್ತು. ಈ ಹಿನ್ನೆಲೆಯಲ್ಲಿ ಸಂಘದ ರಾಜ್ಯ ಅಧ್ಯಕ್ಷ ಎಂ.ಬಿ.ನಾಗಣ್ಣಗೌಡ ಸೇರಿದಂತೆ ರಾಜ್ಯ ಸಮಿತಿಯೊಂದಿಗೆ ಚರ್ಚಿಸಿದ ಮುಖ್ಯಮಂತ್ರಿಗಳು ಹೊರಗುತ್ತಿಗೆ ನೌಕರರಿಗೆ ನೇರಪಾವತಿ ಜಾರಿಗೊಳಿಸಲಾಗುವುದು.ಶೀಘ್ರವಾಗಿ ಸಂಪುಟದಲ್ಲಿ ಅನುಮೋದಿಸಲಾಗುವುದು ಹೋರಾಟವನ್ನು ಹಿಂಪಡೆಯುವಂತೆ ಸೂಚಿಸಿದ್ದರು. ಈ…

Read More

ಸುಂಟಿಕೊಪ್ಪ ಫೆ.16 : ಜೆಸಿಐ ವಲಯ 14ರ ವತಿಯಿಂದ ಸುಂಟಿಕೊಪ್ಪ ಜೆಸಿಐ ಸಂಸ್ಥೆಯ ಪ್ರಸಕ್ತ ಅಧ್ಯಕ್ಷರು ಸೇರಿದಂತೆ ಸದಸ್ಯರುಗಳಿಗೆ (ಪ್ರಗತಿ) ವಿಚಾರ ಸಂಕಿರಣ ತರಬೇತಿ ಕಾರ್ಯಾಗಾರ ನಡೆಯಿತು. ಕುಶಾಲನಗರದ ಸಿರಿ ಅಂಬಾರಿ ಸಭಾಂಗಣದಲ್ಲಿ ನಡೆದ ತರಬೇತಿ ಕಾರ್ಯಾಗಾರವನ್ನು ಜೆಸಿಐ ವಲಯ 14ರ ಅಧ್ಯಕ್ಷೆ ಆಶಾ ಜೈನ್ ಉದ್ಘಾಟಿಸಿದರು. ತರಬೇತುದಾರರಾದ ಜೆಸಿಐ ಪ್ರಮೋದ್ ಕುಮಾರ್, ಕುನಾಲ್ ಮಾನಿಕ್‍ಚಂದ್, ನವೀನ್ ಜೆಸಿಐ ಸಂಸ್ಥೆಯ ಉದ್ದೇಶವನ್ನು, ಸಮಾಜ ಸೇವೆ, ನಾಯಕತ್ವ ನಡುವಳಿಕೆಗಳ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸುಂಟಿಕೊಪ್ಪ ಜೇಸಿ ಅಧ್ಯಕ್ಷ ಸಂಪತ್ ಕುಮಾರ್, ಕಾರ್ಯಕ್ರಮ ನಿರ್ದೇಶಕರಾದ ಜೆಸಿ ಸತೀಶ್, ವಿಶೇಷ ಅತಿಥಿಗಳಾಗಿ ಜೆಸಿ ವಿಕಾಸ್ ಗೂಗ್ಲಿಯ, ಎಂ.ನವೀನ್, ಎಸ್.ಪ್ರಜ್ವಲ್, ನವೀನ್ ಕಾರ್ಯಪ್ಪ, ಯಶಸ್ವಿನಿ, ವಲಯ ಕಾರ್ಯದರ್ಶಿ ಮಾಯ, ಸುಂಟಿಕೊಪ್ಪ ಘಟಕದ ದೇವಿ ಪ್ರಸಾದ್, ಕಾಯರ್ ಮಾರ್, ಡೆನ್ನಿಸ್ ಡಿಸೋಜ, ಪೆಲ್ಸಿ ಡೆನ್ನಿಸ್, ಜಾಯಿದ್ ಆಹ್ಮದ್, ಮನು ಅಚ್ಚಮ್ಮಯ್ಯ, ಸರ್ವ ಸದಸ್ಯರು ಹಾಜರಿದ್ದರು.

Read More

ವಿರಾಜಪೇಟೆ ಫೆ.15 NEWS DESK : ವಿರಾಜಪೇಟೆಯ “ಚೋಟಾ ಚಾಂಪ್ಸ್” ಗುರುಕುಲಂ ಮಾದರಿ ಶಾಲೆಯ ಶಾಲಾ ವಾರ್ಷಿಕೋತ್ಸವ “ಸಂಭ್ರಮ-2023-24” ವಿರಾಜಪೇಟೆ ಗೋಣಿಕೊಪ್ಪ ಮುಖ್ಯ ರಸ್ತೆಯಲ್ಲಿರುವ ರಾಜೇಶ್ವರಿ ಮಿನಿ ಕನ್ವೆನ್ಸನ್ ಹಾಲ್’ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಅಖಿಲ ಕೊಡವ ಸಮಾಜ ಯೂತ್ ವಿಂಗ್ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪೋಷಕರು ಮಕ್ಕಳಿಗೆ ಆಚಾರ ವಿಚಾರ, ಸಂಸ್ಕೃತಿ ಸಂಸ್ಕಾರವನ್ನು ಕಲಿಸುವಂತಾಗಬೇಕು. ಮಕ್ಕಳನ್ನು ರೀತಿಯ ದುಶ್ಚಟಗಳಿಂದ ದೂರವಿರುವಂತೆ ನೋಡಿಕೊಳ್ಳಬೇಕು. ಪುಟ್ಟ ಮಕ್ಕಳು ತಂದೆ ತಾಯಿ ಹಾಗೂ ತಮ್ಮ ಸುತ್ತಮುತ್ತ ಎನೇನು ನಡೆಯುತ್ತದೆಯೋ ಅದನ್ನೇ ಕಲಿತು ಅನುಸರಿಸುತ್ತಾರೆ. ಪುಟ್ಟ ಮಕ್ಕಳು ತನ್ನದೆಯಾದ ವಿಭಿನ್ನ ಕೌಶಲ್ಯಗಳನ್ನು ಹೊಂದಿರುತ್ತಾರೆ. ಅವರನ್ನು ನಾವು ಪ್ರೋತ್ಸಾಹಿಸಬೇಕು. ಮಕ್ಕಳ ಮನಸ್ಸು ಬಹಳ ಮೃದುವಾಗಿದ್ದು ನಾವು ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತಾಗ ಅವರ ಭವನೆಗಳನ್ನು ಅರಿತುಕೊಳ್ಳಲು ಸಾಧ್ಯ. ಹಾಗೇ ಮಾಡುವುದರಿಂದ ಅವರ ಸುಪ್ತ ಪ್ರತಿಭೆ ಹೊರಬರಲು ಸಾಧ್ಯವಾಗುತ್ತದೆ. ಅವರಲ್ಲಿ ಹುದುಗಿದ ಅನೇಕ ಪ್ರತಿಭೆಗಳು ಹೊರಬರುತ್ತವೆ. ಅದಕ್ಕೆ ಪೋಷಕರು ಕಾರಣ ಕರ್ತರಾಗಬೇಕು ಎಂದು…

Read More

ಸೋಮವಾರಪೇಟೆ ಫೆ.15 NEWS DESK :  ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸಿ.ಸಿ. ಕ್ಯಾಮೆರಾ ಕಡ್ಡಾಯವಾಗಿ ಅಳವಡಿಸಬೇಕು. ಬಯೋ ಮೆಟ್ರಿಕ್ ಅಳವಡಿಸಿ, ಬೆಳಿಗ್ಗೆ 9-45ರೊಳಗೆ ಕಚೇರಿಗೆ ಆಗಮಿಸಿ ತಂಬ್ ನೀಡಬೇಕು ಎಂದು ಲೋಕಾಯುಕ್ತ ಉಪಅಧೀಕ್ಷಕ ಎಂ.ಎಸ್.ಪವನ್‍ಕುಮಾರ್ ಸೂಚಿಸಿದರು. ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಅಧಿಕಾರಿಗಳು ಇಲ್ಲಿನ ತಾಲ್ಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ನಡೆದ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ಸ್ವೀಕಾರ ಮತ್ತು ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಅವರು ಮಾತನಾಡಿದರು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳ ವಿಳಂಬ ಹಾಗು ಇನ್ನಿತರ ತೊಂದರೆ ನೀಡುತ್ತಿರುವ ಅಧಿಕಾರಿ ಅಥವಾ ಸಿಬ್ಬಂದಿ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ತಮ್ಮ ಸಮಸ್ಯೆಗೆ ಸಂಬಂಧಿಸಿದಂತೆ ಯಾವುದೇ ದೂರು ನೀಡುವಾಗಲೂ ಒಂದು ಹಿಂಬರಹ ಪಡೆದಲ್ಲಿ ಅರ್ಜಿದಾರರ ಸಮಸ್ಯೆ ತಿಳಿಯಬಹುದು ಎಂದರು. ಸಾರ್ವಜನಿಕರು ಯಾವುದೇ ಅಧಿಕಾರಿಗಳಿಂದ ಸಮಸ್ಯೆಗೊಳಪಟ್ಟಲ್ಲಿ ತಮ್ಮ ಸಮಸ್ಯೆಗೆ ಸಂಬಂಧಿಸಿದಂತೆ, ಅರ್ಜಿ ಭರ್ತಿ ಮಾಡಿ, ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ದೂರಿನೊಂದಿಗೆ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ.08272-295297 ನ್ನು ಸಂಪರ್ಕಿಸಬಹುದು…

Read More

ಮಡಿಕೇರಿ ಫೆ.15 NEWS DESK : ಜನರ ಬಳಿ ಇರುವ ಪಾರಂಪರಿಕ ಅರಣ್ಯ ವಸ್ತುಗಳನ್ನು ಏಪ್ರಿಲ್ ತಿಂಗಳೊಳಗೆ ಸರ್ಕಾರದ ಅಧೀನಕ್ಕೆ ಒಪ್ಪಿಸಬೇಕು ಎನ್ನುವ ಅರಣ್ಯ ಇಲಾಖೆಯ ಆದೇಶ ಆತಂಕವನ್ನು ಸೃಷ್ಟಿಸಿದ್ದು, ಸರ್ಕಾರ ಈ ವಿಚಾರದಲ್ಲಿ ದುಡುಕದೆ ಜನಪರ ನಿರ್ಧಾರವನ್ನು ಕೈಗೊಳ್ಳಬೇಕೆಂದು ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎಂ.ಚಂಗಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅರಣ್ಯ ಪ್ರಾಣಿಗಳ ಉತ್ಪನ್ನಗಳನ್ನು ಘೋಷಿಸಿಕೊಳ್ಳಬೇಕೆಂಬ ಕಾಯ್ದೆ 2003ರಲ್ಲಿ ಜಾರಿಯಾಗಿರುವ ವಿಚಾರ ಬಹುತೇಕರ ಗಮನಕ್ಕೆ ಬಂದಿರುವುದಿಲ್ಲ. ಈಗ ಏಕಾಏಕಿ ಪಾರಂಪರಿಕ ಅರಣ್ಯ ವಸ್ತುಗಳನ್ನು ಸರಕಾರಕ್ಕೆ ಹಿಂತಿರುಗಿಸಬೇಕೆಂದು ಆದೇಶಿಸಿರುವುದು ಸರಿಯಾದ ಕ್ರಮವಲ್ಲವೆಂದು ಅಭಿಪ್ರಾಯಪಟ್ಟಿದ್ದಾರೆ. ಸರಕಾರ ಜಿಲ್ಲೆಯ ಜನ ಹಾಗೂ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ, ಜನಪರ ನಿಲುವು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಕೊಡಗಿನ ಜನರು ತಮ್ಮದೇ ಆದ ರೀತಿಯಲ್ಲಿ ಹಬ್ಬ ಹರಿದಿನಗಳನ್ನು ತಲೆ- ತಲಾಂತರಗಳಿಂದ ಆಚರಿಸುತ್ತಾ ಬರುತ್ತಿದ್ದು, ಇಲ್ಲಿಯ ಆಚರಣೆಗಳು ವಿಶಿಷ್ಟ ರೀತಿಯದ್ದಾಗಿದೆ. ಪ್ರಮುಖವಾಗಿ ಮಾರ್ಚ್ ಮತ್ತು ಏಪ್ರಿಲ್ ತಿಂಗಳುಗಳಲ್ಲಿ ಆಚರಿಸುವ ಸುಗ್ಗಿ ಹಬ್ಬ ಪ್ರಕೃತಿಯೊಂದಿಗೆ ರೈತ ಹೊಂದಿರುವ ಅವಿನಾಭಾವ…

Read More

ಮಡಿಕೇರಿ ಫೆ.15 NEWS DESK : ಇತ್ತೀಚೆಗೆ ಬೆಂಗಳೂರಿನ ಭಾರತಯೀಯ ಕ್ರೀಡಾ ಪ್ರಾಧಿಕಾರ(ಸಾಯಿ)ದಲ್ಲಿ ನಡೆದ ಆಲ್ ಇಂಡಿಯಾ ಇಂಟರ್ ಸಾಯಿ ಹಾಕಿ ಪಂದ್ಯಾವಳಿ-2024 ರಲ್ಲಿ ಮಡಿಕೇರಿ ನಗರದ ಭಾರತೀಯ ಕ್ರೀಡಾ ಪ್ರಾಧಿಕಾರ(ಸಾಯಿ)ದ 19 ವಿದ್ಯಾರ್ಥಿನಿಯರು ಪಾಲ್ಗೊಂಡು ಚಿನ್ನದ ಪದಕ ಪಡೆದಿದ್ದಾರೆ. ಈ ವಿದ್ಯಾರ್ಥಿನಿಯರಿಗೆ ಅಭಿನಂದಿಸುವ ಕಾರ್ಯಕ್ರಮವು ಫೆ.19 ರಂದು ಸಂಜೆ 4.30 ಗಂಟೆಗೆ ನಗರದ ಭಾರತೀಯ ಕ್ರೀಡಾ ಪ್ರಾಧಿಕಾರದ(ಸಾಯಿ) ವಿದ್ಯಾರ್ಥಿ ನಿಲಯದಲ್ಲಿ ನಡೆಯಲಿದೆ ಎಂದು ಸಾಯಿ ಮೇಲ್ವಿಚಾರಕಿ ಮಿನಿ ಉಣ್ಣಿರಾಜ್ ತಿಳಿಸಿದ್ದಾರೆ.

Read More

ಮಡಿಕೇರಿ ಫೆ.15 NEWS DESK :  ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಎಫ್‍ಎಸ್‍ಟಿ, ಎಸ್‍ಎಸ್‍ಟಿ, ವಿಎಸ್‍ಟಿ ಸೇರಿದಂತೆ ವಿವಿಧ ತಂಡಗಳಿಗೆ ಚುನಾವಣಾ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣಾ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದ್ದಾರೆ. ನಗರದ ಜಿ.ಪಂ.ಸಭಾಂಗಣದಲ್ಲಿ ಲೋಕಸಭಾ ಚುನಾವಣೆ ಸಂಬಂಧ ಮಾದರಿ ನೀತಿ ಸಂಹಿತೆ ಪಾಲಿಸುವ ಬಗ್ಗೆ ನಡೆದ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲೋಕಸಭಾ ಚುನಾವಣೆ ಸಂಬಂಧಿಸಿದಂತೆ ವಿವಿಧ ತಂಡದ ಅಧಿಕಾರಿಗಳು ಚುನಾವಣೆಯನ್ನು ವ್ಯವಸ್ಥಿತವಾಗಿ ನಡೆಸಲು ಈಗಿನಿಂದಲೇ ಸಿದ್ಧ್ದತೆ ಮಾಡಿಕೊಳ್ಳಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ತಮ್ಮ ಕರ್ತವ್ಯ ವ್ಯಾಪ್ತಿಯಲ್ಲಿ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದರು. ಲೋಕಸಭಾ ಚುನಾವಣೆ ಘೋಷಣೆಯಾದ ಕೂಡಲೇ ಸರ್ಕಾರಿ ಕಟ್ಟಡಗಳು, ಸಾರ್ವಜನಿಕ ಸ್ಥಳಗಳು ಸೇರಿದಂತೆ ವಿವಿಧೆಡೆ ಅಳವಡಿಸಲಾಗಿರುವ ಜಾಹೀರಾತು, ಪ್ರಕಟಣೆ, ಬ್ಯಾನರ್‍ಗಳನ್ನು ತೆರವುಗೊಳಿಸಿ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ಚುನಾವಣಾ ಆಯೋಗದ ನಿರ್ದೇಶನವನ್ನು ಅಧಿಕಾರಿಗಳು ಪಾಲಿಸಬೇಕು. ಸಂಶಯಕ್ಕೆ ಅವಕಾಶ ಮಾಡಬಾರದು. ಮಾಹಿತಿ ತಿಳಿಯದಿದ್ದಲ್ಲಿ ಮೇಲಾಧಿಕಾರಿಗಳ…

Read More

ಮಡಿಕೇರಿ ಫೆ.15 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕಾಯಕ ಶರಣರ ಜಯಂತಿ, ಶ್ರೀ ಸಂತ ಸೇವಾಲಾಲ್ ಜಯಂತಿ ಹಾಗೂ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮವು ಫೆಬ್ರವರಿ, 16 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ. 

Read More

ಮಡಿಕೇರಿ ಫೆ.15 NEWS DESK : ಚಾಮಿಯಾಲ ಫೈಟರ್ಸ್ ಕ್ಲಬ್ ವತಿಯಿಂದ ಇದೇ ಪ್ರಥಮ ಬಾರಿಗೆ ಕೊಡವ ಮುಸ್ಲಿಂ ಕುಟುಂಬ ತಂಡಗಳ ನಡುವೆ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗುತ್ತಿದೆ. ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ತಂಡಗಳು ಮಾ.25ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಆಯೋಜಕ ಮುನೀರ್ ಚಾಮಿಯಾಲ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಏಪ್ರಿಲ್ 16 ರಿಂದ 21ರ ವರೆಗೆ ವಿರಾಜಪೇಟೆಯ ಚಾಮಿಯಾಲ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾವಳಿ-2024 ನ್ನು ನಡೆಸಲು ನಿರ್ಧರಿಸಲಾಗಿದೆ. ವಿಜೇತ ತಂಡಕ್ಕೆ ರೂ.1 ಲಕ್ಷ ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಬಹುಮಾನ ರೂ.50 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ, ತೃತೀಯ ಆಕರ್ಷಕ ಟ್ರೋಫಿ ಮತ್ತು ನಾಲ್ಕನೇ ವಿಜೇತ ತಂಡಕ್ಕೆ ಬಹುಮಾನ ನೀಡಲಾಗುವುದು ಎಂದು ಹೇಳಿದ್ದಾರೆ. ಭಾಗವಹಿಸುವ ತಂಡಗಳು ಮಾ.25 ರೊಳಗೆ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಹಾಗೂ ಹೆಸರು ನೋಂದಾವಣೆಗಾಗಿ 7411110041, 7349064834 ನ್ನು ಸಂಪರ್ಕಿಸಬಹುದಾಗಿದೆ ಎಂದು ಮುನೀರ್ ಚಾಮಿಯಾಲ ತಿಳಿಸಿದ್ದಾರೆ.

Read More